ಕುಂದಾಪ್ರ ಡಾಟ್ ಕಾಂ ಸುದ್ದಿ, ಕುಂದಾಪುರ: ವಂಡ್ಸೆ ಗ್ರಾಮ ಪಂಚಾಯತನ ವಂಡ್ಸೆಯಿಂದ ಅಡಿಕೆಕೊಡ್ಲು ಸಂಭಾರ್ತಿ, ನೂಜಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಸೇತುವೆಯು ನಿರ್ಮಾಣವಾಗಿ ಈ ಭಾಗದ ಜನರ ಬಹುದಿನದ ಕನಸು ನನಸಾಗಿದೆ. ಸುಮಾರು ೨೦೦ ಕ್ಕೂ ಅಧಿಕ ಕುಟು೦ಬವು ಈ ಮಾರ್ಗವನ್ನು ನೆಚ್ಚಿಕೊಂಡಿದೆ. ರಸ್ತೆ ರಚನೆಯಾಗಿ ೪-೫ ವರ್ಷ ಕಳೆದರೂ ಸೇತುವೆಯ ರಚನೆ ಬಾಕಿ ಇದ್ದಿದ್ದರಿಂದ ಈ ಭಾಗದ ಜನರು ೪-೫ ಕೀ.ಮೀ. ಸುತ್ತು ಹಾಕಿ ನೂಜಾಡಿಯಿಂದ ವಂಡ್ಸೆಗೆ ಬರಬೇಕಾಗಿತ್ತು. ಈದಿಗ ಸೇತುವೆ ರಚನೆಯಿಂದ ಈ ಭಾಗದ ಜನರಿಗೆ ಅದರಲ್ಲೂ ಶಾಲಾ ಮಕ್ಕಳಿಗೆ ಅನೂಕೂಲವಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣು ತನ್ನ ಧನಾತ್ಮಕ ಚಿಂತನೆಗಳಿಂದ ಕೂಡಿದ ಕ್ರೀಯಾತ್ಮಕ ಕಾರ್ಯಗಳ ಮೂಲಕ ಎಲ್ಲಾ ಕ್ಷೇತ್ರಗಳಲ್ಲಿಯೂ ಸಮಾನತೆ ಸಾಧಿಸುತ್ತಿದ್ದಾಳೆ ಎಂದು ಕಂಡ್ಲೂರಿನ ಆಯುರ್ವೇದ ವೈದ್ಯೆ ಡಾ. ಸೋನಿ ಹೇಳಿದರು. ಇಲ್ಲಿನ ರೋಟರಿ ಭವನದಲ್ಲಿ ನಡೆದ ಇನ್ನರ್ವೀಲ್ ಕ್ಲಬ್ನ ಪದಗ್ರಹಣ ಸಮಾರಂಭದಲ್ಲಿ ಮುಖ್ಯಅತಿಥಿಯಾಗಿ ಅವರು ಮಾತನಾಡಿದರು. ಮಹಿಳೆಗೆ ಸಮಾಜವಾಗಲಿ ಪುರುಷರಾಗಲೀ ಶತ್ರುಗಳಲ್ಲ. ಹೆಣ್ಣಿಗೆ ಹೆಣ್ಣೆ ಶತ್ರುಗಳಾಗುತ್ತಿದ್ದಾರೆ. ಆ ನೆಲೆಯಲ್ಲಿ ಪರಸ್ಪರ ಗೆಳೆತನದಿಂದ ಕೂಡಿ ಬಾಳುವ ಒಂದು ಸೂರಿನಂತಿರುವ ಇನ್ನರ್ವೀಲ್ ಕ್ಲಬ್ಬಿನಲ್ಲಿ ಎಲ್ಲಾ ಸಹೋದರಿಯರು ಸಂಘಟಿತರಾಗಿ ಊರಿಗೆ ಹಾಗೂ ಸಮಾಜಕ್ಕೆ ಮಾದರಿಯಾಗುವಂತಹ ಕೆಲಸಗಳನ್ನು ಮಾಡುವಂತಾದಾಗ ಮಾತ್ರ ಶತ್ರುತ್ವ ಮರೆಯಾಗಿ ಕತ್ತಲೆಯ ಒಳಗಿರುವ ಜ್ಞಾನ, ಭರವಸೆಗಳೆಂಬ ಬೆಳಕಿನ ಬೀಜದಂತೆ ಭವಿಷ್ಯದ ಬಾಳು ಬೆಳಗುತ್ತದೆ ಎಂದರು. ದೇಶದಾಂದ್ಯಂತ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರಗಳು ಹೆಚ್ಚಾಗುತ್ತಿರುವುದು ನೋವಿನ ಸಂಗತಿಯಾಗಿದ್ದು, ಸ್ತ್ರೀ ಇನ್ನೂ ಕೂಡಾ ಸ್ವತಂತ್ರಳಾಗಿಲ್ಲ ಎನ್ನುವುದನ್ನು ನಿರೂಪಿಸುತ್ತಿದೆ. ಈ ದುಶ್ಕೃತ್ಯಗಳಿಂದ ಸ್ತ್ರೀ ಸಮಾಜ ಮುಕ್ತಿ ಕಾಣದೇ ಇನ್ನೂ ಸವಾಲಾಗಿಯೇ ಉಳಿದಿದ್ದು,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾರಂಭದಿಂದಲೂ ಸಾಮಾಜಿಕ ಅರಣ್ಯೀಕರಣ ಮತ್ತು ಜಲಸಂವರ್ಧನಾ ಕಾರ್ಯಕ್ರಮಗಳಿಗೆ ಒತ್ತು ನೀಡಲಾಗುತ್ತಿದ್ದು, ಎಲ್ಲೆಡೆಗಳಲ್ಲಿಯೂ ವನಸಂವರ್ಧನೆ ಆಗಬೇಕೆಂಬ ದೃಷ್ಟಿಕೋನದಿಂದ ವಿಶೇಷವಾಗಿ ದೇವಾಲಯಗಳ ಪರಿಸರದಲ್ಲಿ ದೇವರಕಾಡು, ಸರಕಾರಿ ಭೂಮಿಗಳಲ್ಲಿ ಪ್ರಗತಿವನ, ಶಾಲಾ ಪರಿಸರಗಳಲ್ಲಿ ಶಾಲಾ ವನ, ಔಷಧಿ ವನ, ನವಗ್ರಹ ವನ ಮೊದಲಾದ ಕಾರ್ಯಕ್ರಮಗಳಿಗೆ ಪ್ರೇರಣೆ ನೀಡುತ್ತಿರುವುದು ಪ್ರಶಂಶನೀಯ ಎಂದು ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೈಂದೂರು ವಂಡ್ಸೆ ವಲಯ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಅತ್ರಾಡಿ ಮತ್ತು ದೇವಲ್ಕುಂದ, ಅರಣ್ಯ ಇಲಾಖೆ ಮಾವಿನಗುಳಿ ಮತ್ತು ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಇವರ ಜಂಟಿ ಆಶ್ರಯದಲ್ಲಿ ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದ ವಠಾರದಲ್ಲಿ ಜರಗಿದ ತಾಲೂಕು ಮಟ್ಟದ ಅರಣ್ಯ ಸಂವರ್ಧನ ಅಭಿಯಾನ ಉದ್ಘಾಟಿಸಿ ಮಾತನಾಡಿದರು. ಗಿಡಗಳನ್ನು ನಾಟಿ ಮಾಡಿದರೆ ಸಾಲದು ಅವುಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು. ಇಂಗುಗುಂಡಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿಕ್ಷಣ ಸಂಸ್ಥೆ ಪರಿಣಾಮಕಾರಿಯಾಗಿ ಹೊಣೆ ನಿರ್ವಹಿಸಲು ಕರ್ತವ್ಯಶೀಲ ಶಿಕ್ಷಕರ, ಪ್ರೋತ್ಸಾಹಕ ಪಾಲಕರ, ಹಳೆವಿದ್ಯಾರ್ಥಿಗಳ, ಹೊಣೆಗಾರರಾದ ಜನಪ್ರತಿನಿಧಿಗಳ ಮತ್ತು ಶಿಕ್ಷಣ ಪ್ರೇಮಿ ಸಾರ್ವಜನಿಕರ ಬೆಂಬಲ ಬೇಕು. ಇವರೆಲ್ಲರ ಸಹಕಾರವಿದ್ದಲ್ಲಿ ಯಶಸ್ಸು ಸಾಧ್ಯ ಎಂದು ಭಗವದ್ಗೀತಾ ಸಪ್ತಾಹ ಆಚರಣಾ ಸಮಿತಿಯ ಎಚ್. ನಾಗೇಶ್ ರಾವ್ ಹೇಳಿದರು. ಹೇರಂಜಾಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಹಳೆವಿದ್ಯಾರ್ಥಿಗಳ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಯಾವುದೇ ಸಂಸ್ಥೆಯನ್ನು ಆರಂಭಿಸುವ ಸ್ಥಾಪಕ ವ್ಯಕ್ತಿಯ ತ್ಯಾಗ, ಪರಿಶ್ರಮ ಹಾಗೂ ನಿಷ್ಠೆಯಿಂದ ಕೂಡಿದ ಪ್ರಾಮಾಣಿಕ ಸೇವೆಯಿಂದ ಮಾತ್ರ ಅದು ಅಭಿವೃದ್ಧಿ ಕಾಣಲು ಸಾಧ್ಯ. ಆತನ ದೂರದೃಷ್ಠಿತ್ವದ ಮುಖಂಡತ್ವದಲ್ಲಿ ಸಮಾನ ಮನಸ್ಕ ಸಹಚರರು ಆತನನ್ನು ಹಿಂಬಲಿಸುತ್ತಾರೆ. ಈ ವ್ಯವಸ್ಥೆಯಿಂದ ಸಂಸ್ಥೆ ಬೆಳೆಯಲು ಸಹಕಾರಿಯಾಗುತ್ತದೆ ಎಂದರು. ನಂತರ ಗ್ರಾಮವಿಕಾಸ ಸಮಿತಿ ಮಂಡಲ ಪ್ರಮುಖ್, ಗ್ರಾಪಂ ಸದಸ್ಯ ಪರಂಜ್ಯೋತಿ ಐತಾಳ್ ಮಾತನಾಡಿ, ಪೋಷಕರಲ್ಲಿ ಮನೆಮಾಡಿರುವ ಆಂಗ್ಲ ಮಾಧ್ಯಮ ಶಿಕ್ಷಣದ ವ್ಯಾಮೋಹದಿಂದ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳು ಸೊರಗುತ್ತಿವೆ. ಇದನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣಕ್ಕೆ ಮೃತದೇಹವನ್ನು ಕೂಡಲೇ ಪೋಸ್ಟ್ ಮಾರ್ಟಮ್ ಮಾಡದೇ, ಆಸ್ಪತ್ರೆಯ ಶೈತ್ಯಾಗಾರ ಘಟಕದಲ್ಲಿ ಇರಿಸಲಾಗಿತ್ತು. ಆದರೆ ಶವಾಗಾರದಲ್ಲಿ ಶೈತ್ಯಾಗಾರ ದುರಸ್ತಿಯಲ್ಲಿಲ್ಲದ್ದರಿಂದ ಮೃತದೇಹ ಕೆಡುವ ಸ್ಥಿತಿಗೆ ತಲುಪಿದೆ ಎಂದು ಮೃತರ ಸಂಬಂಧಿಗಳು ಆಸ್ಪತ್ರೆಗೆ ಮುತ್ತಿಗೆ ಹಾಕಿ ಸಿಬ್ಬಂಧಿಗಳನ್ನು ತರಾಟೆಗೆ ತೆಗೆದುಕೊಂಡ ಪ್ರಕರಣ ನಡೆದಿದೆ. ಹೊಸಾಡು ವಿದ್ಯಾನಗರ ನಿವಾಸಿ ಸಯ್ಯದ್ ಅಬ್ಬಾಸ್ (65) ಎಂಬುವವರು ತಮ್ಮ ಮನೆಯ ಸಮೀಪದ ಗೇರು ಹಾಡಿಯಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದರು. ಒಂದು ದಿನ ಹುಡುಕಾಡಿದ ಬಳಿಕ ಅವರ ಮೃತದೇಹ ಪತ್ತೆಯಾಗಿದ್ದು ಪೋಸ್ಟ್ಮಾರ್ಟಮ್ ಮಾಡಲು ಬೈಂದೂರು ಸರಕಾರಿ ಆಸ್ಪತ್ರೆಗೆ ಭಾನುವಾರ ರಾತ್ರಿ ಕೊಂಡೊಯ್ಯಲಾಗಿತ್ತು. ರಾತ್ರಿ ಡ್ಯೂಟಿ ಡಾಕ್ಟರ್ ಇಲ್ಲದೇ ಇದ್ದದ್ದರಿಂದ ಶೈತ್ಯಾಗಾರ ಘಟಕದಲ್ಲಿ ಶವವನ್ನಿರಿಸಲಾಗಿತ್ತು. ಬೆಳಿಗ್ಗೆ ಪೋಸ್ಟ್ ಮಾರ್ಟಮ್ ಮಾಡಲು ಮೊದಲು ಮೃತರ ಸಂಬಂಧಿಗಳು ಶವವನ್ನು ನೋಡುವ ವೇಳೆ ಹುಳಗಳು ಹರಿದಾಡುತ್ತಿದ್ದವು. ಇಷ್ಟಾದರೂ ಇಂದು ಪೋಸ್ಟ್ ಮಾರ್ಟಮ್ ಮಾಡಲು ಡ್ಯೂಟಿ ಡಾಕ್ಟರ್ ಇಲ್ಲ. ಆಸ್ಪತ್ರೆ ಸಿಬ್ಬಂಧಿಗಳ ಅಜಾಗರೋಕತೆ ಅವ್ಯವಸ್ಥೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ವಿದ್ಯಾರ್ಥಿ ಕಲಾವಿದರು ಅಭಿನಯಿಸಿದ್ದ `ಧಾಂ ಧೂಂ ಸುಂಟರಗಾಳಿ’ ನಾಟಕವನ್ನು ಸಾರ್ವಜನಿಕರು, ವಿದ್ಯಾರ್ಥಿಗಳು ಸೇರಿ ಕಳೆದ ಐದು ದಿನಗಳಲ್ಲಿ ಸುಮಾರು 10 ಸಾವಿರ ಮಂದಿ ವೀಕ್ಷಿಸಿದ್ದಾರೆ. ಜಗದ್ವಿಖ್ಯಾತ ನಾಟಕಕಾರ ಶೇಕ್ಸ್ಪಿಯರ್ನ `ಟೆಂಪೆಸ್ಟ್”ಆಧಾರಿತ ಈ ನಾಟಕವನ್ನು ವೈದೇಹಿ ರಚಿಸಿದ್ದು, ಖ್ಯಾತ ರಂಗಕರ್ಮಿ ಜೀವನ್ ರಾಂ ಸುಳ್ಯ ನಿರ್ದೇಶನದಲ್ಲಿ ನಾಟಕವನ್ನು ಆಳ್ವಾಸ್ ನುಡಿಸಿರಿ ವೇದಿಕೆಯಲ್ಲಿ ಪ್ರದರ್ಶಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬಹ್ಮಾವರ: ರಾಜಕಾರಣದಲ್ಲಿರುವವರು ದಿನ ನಿತ್ಯ ಹಣ ನೀಡುತ್ತಾರೆ ಎಂದರೆ ಆ ಹಣದ ಮೂಲ ಯಾವುದು ಎನ್ನುವ ಪ್ರಶ್ನೆ ಮಾಡುವ ಮನೋಭಾವವನ್ನು ಜನತೆ ಮಾಡದಿದ್ದರೆ ಆಗ ಉತ್ತಮ ಜನಪ್ರತಿನಿಧಿಯ ಆಯ್ಕೆ ಸಾಧ್ಯವಿಲ್ಲ. ನೇರ ನಿಷ್ಠುರವಾಗಿ ಬರೆಯುವ ಪತ್ರಕರ್ತರು ಇದ್ದರು ಕೂಡ ಇಂದು ಜನಪರ ಸುದ್ದಿ ಕಳುಹಿಸಿದರು ಕೂಡ ಡೆಸ್ಕ್ನಲ್ಲಿ ಬದಲಾವಣೆಯಾಗಿ ಪ್ರಕಟಗೊಳ್ಳುವ ಸಾಧ್ಯತೆಗಳಿವೆ. ಆದ್ದರಿಂದ ಪತ್ರಕರ್ತರ ಜೊತೆಗೆ ಜನತೆಯು ಕೂಡ ಬದಲಾವಣೆ ಬಯಸಿದ್ದಲ್ಲಿ ಮಾತ್ರ ವ್ಯವಸ್ಥೆ ಸರಿಯಾಗಲಿದೆ ಎಂದು ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು. ಅವರು ಬ್ರಹ್ಮಾವರ ಬಂಟರ ಭವನದಲ್ಲಿ ಬ್ರಹ್ಮಾವರ ಪ್ರೆಸ್ ಕ್ಲಬ್ ವತಿಯಿಂದ ನೀಡಲಾಗುವ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭದ ಅಂಗವಾಗಿ ಆಯೋಜಿಸಲಾದ ಪತ್ರಿಕೋದ್ಯಮ ರಾಜಕೀಯ ಕಾನೂನು ವಿಷಯಾಧಾರಿತ ಪತ್ರಿಕೋದ್ಯಮ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪತ್ರಕರ್ತ, ನ್ಯಾಯವಾದಿ ಸುಧೀರ್ ಕುಮಾರ್ ಮುರೊಳ್ಳಿ ಮಾತನಾಡಿ, ಬ್ರಹ್ಮಾವರ ಪ್ರೆಸ್ ಕ್ಲಬ್ ಸದಸ್ಯರು ರಾಜ್ಯ ಕಂಡ ಅಪ್ರತಿಮ ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ, ಕುಂದಾಪುರ: ಪುರಾಣ ಪ್ರಸಿದ್ಧ ಮರವಂತೆ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದದಲ್ಲಿ ಕರ್ಕಾಟಕ ಅಮಾವಾಸ್ಯೆಯ ಜಾತ್ರಾ ಮಹೋತ್ಸವವು ಸಕಲ ಧಾರ್ಮಿಕ ಪೂಜಾ ಕಾರ್ಯಕ್ರಮಗಳೊಂದಿಗೆ ನೆರವೇರಿತು. ವಿವಿಧ ಭಾಗಗಳಿಂದ ಭಕ್ತರು ಸಹಸ್ರಾರು ಸಂಖ್ಯೆಯಲ್ಲಿ ನಸುಕಿನಲ್ಲಿಯೇ ದೇಗುಲಕ್ಕೆ ಬಂದು ಸಮುದ್ರ ಹಾಗೂ ಸೌರ್ಪಣಿಕಾ ನದಿಯಲ್ಲಿ ಸ್ನಾನ ಮಾಡಿ ಶ್ರೀ ದೇವರ ದರ್ಶನ ಪಡೆದು ಹರಕೆಗಳನ್ನು ಸಲ್ಲಿಸಿದರು. ಭೂಮಾತೆಯನ್ನು ದುಷ್ಟ ರಕ್ಕಸರಿಂದ ರಕ್ಷಿಸಿದ ಶ್ರೀ ವರಾಹ ಸ್ವಾಮಿಯು ಲೋಕಕ್ಕೆ ಕಲ್ಯಾಣ ವನ್ನು ಉಂಟುಮಾಡಿ ಸಕಲ ಜೀವರಾಶಿಗಳನ್ನು ಕಾಯುವವನು. ಆದರಿಂದ ಸಂಪ್ರದಾಯದಂತೆ ವಿವಾಹಿತ ನವಜೋಡಿಗಳು ದೇವಸ್ಥಾನಕ್ಕೆ ಬಂದು ವಿಶೇಷ ಪೂಜೆಗಳನ್ನು ಸಲ್ಲಿಸಿದ್ದರು. ಶ್ರೀ ದೇವರು ಪ್ರಕೃತಿ ವಿಕೋಪದಿಂದ ಹಾಗೂ ಕಷ್ಟಕಾರ್ಪಣಗಳಿಂದ ರಕ್ಷಿಸಿ ಪೊರೆಯುವ ಮಹಿಮಾ ನ್ವಿತನೂ, ಅಭಯದಾತನೂ ಆಗಿ ಭಕ್ತ ಕೋಟಿ ಜನರನ್ನು ಕಾಯುತ್ತಿರುವ ದೇವರಲ್ಲಿ ಕರಾವಳಿಯ ಭಾಗದ ಮೀನುಗಾರರು ಮೀನುಗಾರಿಕೆಯಲ್ಲಿ ಸಮೃದ್ಧಿಯನ್ನು ಕರುಣಿಸು ಎಂದು ಪ್ರಾರ್ಥನೆಗೈದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರ್ಕಾಟಕ ಅಮಾವಾಸ್ಯೆ ಪ್ರಯುಕ್ತ ಪ್ರಕೃತಿಯ ಭವ್ಯ ಸೊಬಗು ಹೊದ್ದು ಕಂಗೋಳಿಸುವ ಪಡುವರಿಯ ಸೋಮೇಶ್ವರನ ಸನ್ನಿಧಿಯಲ್ಲಿ ಸಮುದ್ರ ಸ್ನಾನ ಹಾಗೂ ವಾರ್ಷಿಕ ಜಾತ್ರೆ ಮಹೋತ್ಸವವು ಸಂಭ್ರಮ-ಸಡಗರದಿಂದ ನಡೆಯಿತು. ನಸುಕಿನಿಂದಲೇ ಆಸುಪಾಸಿನ ಊರುಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಮರವಂತೆಗೆ ಆಗಮಿಸಿ ಇಲ್ಲಿನ ಸೋಮೇಶ್ವರದ ಸಮುದ್ರದಲ್ಲಿ ಮಿಂದ ಭಕ್ತರು ದೇವಳದ ಎದುರಿನ ಕೆರೆಯಲ್ಲಿ ಸ್ನಾನಗೈದು ಪುನೀತರಾದರು. ಕರ್ಕಾಟಕ ಅಮಾವಾಸ್ಯೆ ಜಾತ್ರೆಯ ಸಂಪ್ರದಾಯದಂತೆ ನವವಧುವರರು, ಕೃಷಿಕರು ಭಾರೀ ಸಂಖ್ಯೆಯಲ್ಲಿ ಆಗಮಿಸಿ ಶ್ರೀವರಾಹ ಸ್ವಾಮಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು. ಕ್ಷೇತ್ರದ ಭಕ್ತರು ಈ ಸಂದರ್ಭದಲ್ಲಿ ವರ್ಷದ ಹರಕೆಯನ್ನು ಒಪ್ಪಿಸಿದರು. ಭಕ್ತರು ಶ್ರೀ ದೇವರ ದರ್ಶನ, ಪೂಜೆ-ಪುನಸ್ಕಾರದಲ್ಲಿ ಸುಸೂತ್ರವಾಗಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ದೇವಸ್ಥಾನದ ಆಡಳಿತ ಮಂಡಳಿಯು ವ್ಯವಸ್ಥೆ ಮಾಡಿತ್ತು. ಶ್ರೀದೇವರ ದರ್ಶನ ಪಡೆಯುವುದಕ್ಕಾಗಿ ಭಕ್ತಾದಿಗಳು ದೇವಸ್ಥಾನದಿಂದ ಸರತಿ ಸಾಲಿನಲ್ಲಿ ನಿಂತಿದ್ದ ದೃಶ್ಯ ಕಂಡುಬಂದಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನ ೨೦೧೭-೧೮ನೇ ಸಾಲಿನ ಎನ್ಎಸ್ಎಸ್ ಘಟಕವನ್ನು ಪುತ್ತಿಗೆಪದವಿನಲ್ಲಿರುವ ಆಳ್ವಾಸ್ ಪ್ರಾಥಮಿಕ ಶಾಲೆಯ ಸಭಾಭವನದಲ್ಲಿ ಉದ್ಘಾಟಿಸಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಎನ್ಎಸ್ಎಸ್ ಘಟಕವನ್ನು ಉದ್ಘಾಟಿಸಿ, ಶಿಕ್ಷಣ ಎನ್ನುವುದು ವಿದ್ಯಾರ್ಥಿಗಳಲ್ಲಿರುವ ಅಮೂಲ್ಯ ಅಸ್ತ್ರ. ಸಮಾಜಮುಖಿಯಾಗಿ ಅದನ್ನು ಬಳಸಿದಾಗ, ಅದು ಸದುಪಯೋಗವಾಗುತ್ತದೆ. ರಾಷ್ಟ್ರೀಯ ಸೇವಾ ಯೋಜನೆಯಿಂದ ಸಮಾಜಮುಖಿ ಚಿಂತನೆ ಬೆಳೆಯುತ್ತದೆ. ವಿದ್ಯಾರ್ಥಿಗಳು ಸಮನಸ್ಸು ಹಾಗೂ ಶಿಸ್ತಿನ ಜೀವನ ನಡೆಸಿದರೆ, ಅವರನ್ನು ಉತ್ತಮ ವಿದ್ಯಾರ್ಥಿಗಳನ್ನಾಗಿ ರೂಪಿಸುತ್ತದೆ ಎಂದುಅಭಿಪ್ರಾಯಪಟ್ಟರು. ಗುರುವಾರ ಉದ್ಘಾಟಿಸಿ ಮಾತನಾಡಿದರು. ಆಳ್ವಾಸ್ ಪ.ಪೂ ಕಾಲೇಜಿನ ಪ್ರಾಂಶುಪಾಲ ಪ್ರೊ.ರಮೇಶ್ ಶೆಟ್ಟಿ ಎಚ್ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಆಳ್ವಾಸ್ ಪಿಯು ಕಾಲೇಜಿನಲ್ಲಿ ೧೨,೭೭೦ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಆದರೆ ಎನ್ಎಸ್ಎಸ್ ಘಟಕಕ್ಕೆ ಆಯ್ಕೆಯಾಗಿರುವ ೨೦೦ ಮಂದಿ ವಿದ್ಯಾರ್ಥಿಗಳು ಅದೃಷ್ಟವಂತರು. ಸೇವಾಮನೋಭಾವನೆ, ರಾಷ್ಟ್ರೀಯತೆಯನ್ನು ಎನ್ಎಸ್ಎಸ್ ಬೆಳೆಸುತ್ತದೆ ಎಂದರು. ಆಳ್ವಾಸ್ ಪಿಯು ಕಾಲೇಜಿನ ಆಡಳಿತಾಧಿಕಾರಿ ಅಭಿನಂದನ್ ಶೆಟ್ಟಿ, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ.ಡಿ,…
