ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಊಟಬಲ್ಲವನಿಗೆರೋಗವಿಲ್ಲ, ಮಾತು ಬಲ್ಲವನಿಗೆ ಜಗಳವಿಲ್ಲಾ ಎನ್ನೋದುಗಾದೆ ಮಾತು.ಪ್ರಸಕ್ತಯೋಗ ಬಲ್ಲವನಿಗೆರೋಗಇಲ್ಲಾಎಂದು ಬದಲಾಯಿಸುವಕಾಲ ಬಂದಿದೆ.ಯೋಗ ನಮ್ಮ ಪರಂಪರೆಯಅತ್ಯಾಮೂಲ್ಯಕೊಡುಗೆಯಾಗಿದ್ದು, ಗುರುತಿಸುವಲ್ಲಿ ನಾವು ಎಡವುತ್ತಿದ್ದೇವೆಎಂದುಕಾರ್ತಿಕೇಯ ಸ್ಕ್ಯಾನಿಂಗ್ ಸೆಂಟರ್ವೈದ್ಯಾಧಿಕಾರಿ ಡಾ. ಬಿ.ವಿ.ಉಡುಪ ಅಭಿಪ್ರಾಯಪಟ್ಟರು. ಕುಂದಾಪುರಯೋಗಬಂಧುಆಶ್ರಯದಲ್ಲಿಪರಿಜಾತಾ ಹೊಟೇಲ್ ಪದ್ಮಾವತಿಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಸನ್ಮಾನಕಾರ್ಯಕ್ರಮಅಧ್ಯಕ್ಷತೆ ವಹಿಸಿ ಮಾತನಾಡಿದರು. ಯೋಗ ಸ್ಪರ್ಧೆಯಲ್ಲಿ ಪಾಲ್ಗೊಂಡುಜಿಲ್ಲೆ ಹಾಗೂ ಕುಂದಾಪುರತಾಲೂಕುಹೆಸರು ವಿಶ್ವಮಟ್ಟಕ್ಕೆ ಏರಿಸಿದ ಕುಶ ಪೂಜಾರಿ ಸಾಧನೆ ಶ್ಲಾಘನೀಯಎಂದಅವರು, ಆರಂಭದಲ್ಲೇ ಪ್ರತಿಭೆಗಳ ಗುರುತಿಸಿ ಪ್ರೋತ್ಸಾಹಿಸಿದರೆ, ಯೋಗಕ್ಷೇತ್ರದಲ್ಲಿಇನ್ನಷ್ಟು ಪ್ರತಿಭೆಗಳು ಹೊರ ಬರಲು ಸಾಧ್ಯಎಂದರು. ಅಂತಾರಾಷ್ಟ್ರೀಯಯೋಗ ಸ್ಪರ್ಧೆಯಲ್ಲಿತೃತೀಯ ಸ್ಥಾನ ಪಡೆದ ಕುಶ ಪೂಜಾರಿಮರವಂತೆಅವರಕುಂದಾಪುರಯೋಗ ಬಂದು ಪರವಾಗಿ ಸನ್ಮಾನಿಸಲಾಯಿತು. ಯೋಗಗುರು ಬಿ.ಎಂ.ಲಮಾಣಿ ಹಾಗೂ ಕುಶ ಪೂಜಾರಿ, ಮಾತೃಶ್ರೀ ಲೀಲಾವತಿ ಆರ್.ಪೂಜಾರಿ ಅವರನ್ನು ಅಭಿನಂದಿಸಲಾಯಿತು. ಪಾರಿಜಾತಾ ಹೊಟೇಲ್ ಮಾಲಕg ಮಚಂದ್ರ ಭಟ್ ನೀಡಿದ ೧೦ ಸಾವಿರ ನಗದು ಪುರಸ್ಕಾರಹಸ್ತಾಂತರಿಸಲಾಯಿತು. ಆಧ್ಯಾತ್ಮ ಪತ್ರಿಕೆ ಸಂಪಾದಕ ಸತೀಶ್ ಶೆಟ್ಟಿ, ಹಿರಿಯ ವರದಿಗಾರ ಶ್ರೀಪತಿ ಹೆಗಡೆ ಹಕ್ಲಾಡಿ, ಯೋಗಬಂಧು ಸಂಜೀವಣ್ಣ, ಸಂತೋಷ್ ಹಾಗೂ ಇನ್ನಿತರರು ಇದ್ದರು. ಪೂರ್ವಿಚಾತ್ರ ಪ್ರಾರ್ಥಿಸಿದರು.ಶ್ರೀ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾವನಾತ್ಮಕ ನೆಲೆಗಳಸ್ಪೂರ್ತಿ ಮತ್ತು ಕಲ್ಪನೆಗಳಿಂದ ಕವಿತೆಗಳು ಹುಟ್ಟುತ್ತವೆ. ಕಾವ್ಯ ಮನಸ್ಸಿನ ಒಳಗಿನಿಂದ ಬರಬೇಕು. ಅದಕ್ಕೊಂದು ಸೌಂದರ್ಯ, ಲವಲವಿಕೆ ಜೀವನ ಪ್ರೀತಿ ಉತ್ಸಾಹವಿದೆ ಎಂದು ಲೇಖಕಿ ಮತ್ತು ಕವಯತ್ರಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಅಭಿಪ್ರಾಯಪಟ್ಟರು. ಅವರು ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಡಾ.ಹೆಚ್. ಶಾಂತಾರಾಮ್ ಸಾಹಿತ್ಯ ಮತ್ತು ಸಂಸ್ಕೃತಿ ವೇದಿಕೆಯ ಆಶ್ರಯದಲ್ಲಿ ನಡೆದ ಕವಿಗೋಷ್ಠಿಯ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕಾವ್ಯ ಹುಟ್ಟುವುದಕ್ಕೆ ಪ್ರೇರಣೆಯೊಂದಿಗೆ ಆಸ್ವಾದಿಸುವ ಸೌಂದರ್ಯವೂ ಬೇಕು. ಅದಕ್ಕೆ ಸ್ಪಂದಿಸಿದಾಗ ಅಭೂತಪೂರ್ವವಾದ ಚೆಂದದ ಕವನಕೂಂದು ಜೀವಂತಿಕೆ ಬರುತ್ತದೆ. ಅದಕ್ಕೆ ಯಾವುದೇ ಕಟ್ಟುಪಾಡುಗಳಿಲ್ಲ. ಕವನಕ್ಕೆ ಅಂತಃಸ್ಸತ್ವ , ಉತ್ಸಾಹ ಮಾನವೀಯ ನೆಲೆಗಳ ಧ್ವನಿ ಇರಬೇಕು. ದ್ರಾವಣವನ್ನು ಬೇರೆ ಬೇರೆ ಪಾತ್ರೆಯಲ್ಲಿ ನೋಡುವಾಗ ಬೇರೆಯದೇ ಆಕೃತಿ ಪಡೆಯುವಂತೆ ಕವಿಯ ಮನಸಿನಾಳದ ರಚನೆಯಲ್ಲಿ ನಿಸರ್ಗ ವ್ಯಕ್ತಿ, ವಸ್ತು –ವಿಷಯಗಳು ಕವಿಯ ಅನುಭವಕ್ಕೆಪೂರಕವಾಗಿಬೇರೆಬೇರೆಆಕೃತಿಯನ್ನುಭಾವವನ್ನುಅರ್ಥವನ್ನುಪಡೆದುಕೊಳ್ಳುತ್ತದೆ. ಕಾವ್ಯದಧ್ವನಿಹೆಚ್ಚಿರುತ್ತದೆ. ಕಾವ್ಯಮೈಮರೆಯಲುಹೇಳುತ್ತದೆ. ಕಾವ್ಯಸಾಹಿತ್ಯದಲ್ಲಿಲಯ, ತಾಳ, ನಾದ, ಸ್ವರ, ಸಂಗೀತ,ಪ್ರೀತಿಎಲ್ಲವನ್ನೂಏಕಕಾಲದಲ್ಲಿಸೆರೆಹಿಡಿಯುವಸಾಮರ್ಥ್ಯವಿದೆಎಂದುಉದಾಹರಣೆಸಹಿತಹೇಳಿದರು. ಕಾರ್ಯಕ್ರಮದಅಧ್ಯಕ್ಷತೆಯನ್ನುಕಾಲೇಜಿನಪ್ರಾಂಶುಪಾಲರಾದಡಾ.ಎನ್.ಪಿ.ನಾರಾಯಣಶೆಟ್ಟಿವಹಿಸಿದ್ದರು. ಕವಿಗೋಷ್ಠಿಯನ್ನು ವಿದ್ಯಾರ್ಥಿಗಳಾದ ಸವಿತಾ, ಪ್ರಜ್ವಲ್ಶೆಟ್ಟಿಗಾರ್, ಶ್ರಿರಾಜ್ಆಚಾರ್ಯ, ವಿನಯಾ, ರಶ್ಮಿತಾ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಜಗತ್ತಿನ ಇತರ ರಾಷ್ಟ್ರಗಳಿಗೆ ಹೋಲಿಸಿದರೆ ನಮ್ಮ ದೇಶ ಸಂಪದ್ಭರಿತ ದೇಶ. ಅತಿ ಹೆಚ್ಚು ಯುವಶಕ್ತಿಯನ್ನು ಹೊಂದಿರುವ ಅತೀ ಶ್ರೇಷ್ಠ ರಾಷ್ಟ್ರವಾಗಿರುವ ನಮ್ಮ ದೇಶದ ಸಂಸ್ಕೃತಿ ಅತ್ಯಂತ ಶ್ರೇಷ್ಠವಾಗಿದೆ. ಅನೇಕ ವಿಶಿಷ್ಟತೆಗಳನ್ನು ಹೊಂದಿರುವ ನಮ್ಮ ದೇಶದಲ್ಲಿ ಸ್ವಾಮಿ ವಿವೇಕಾನಂದರ ಸದೃಢ ವಿಚಾರಧಾರೆಗಳು ಆದರ್ಶಪ್ರಾಯ ವಿಚಾರಗಳು ಯುವಜನರಿಗೆ ಸ್ಫೂರ್ತಿ ನೀಡುತ್ತಿದೆ. ವಿವೇಕಾನಂದರ ಆದರ್ಶಗಳು ಯುವಜನತೆಯನ್ನು ಸೆಳೆಯುತ್ತಿದೆ ಎಂದು ಯುವ ಧಾರ್ಮಿಕ ಚಿಂತಕಿ ವಿಜೇತ ಶೆಟ್ಟಿ ಉಡುಪಿ ಹೇಳಿದರು. ಅವರು ಕ್ರಾಂತಿವೀರರ ಅಭಿಮಾನಿ ಬಳಗದ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ೪ನೇ ವರ್ಷದ ಕಾರ್ಯಕ್ರಮದ ಅಂಗವಾಗಿ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಗುರುವಾರ ಜರಗಿದ ವಿವೇಕ ಸ್ಮರಣೆ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದರು. ನಮ್ಮ ದೇಶದ ಪ್ರತಿಯೊಬ್ಬರಲ್ಲೂ ದೇಶಪ್ರೇಮ ಗಟ್ಟಿಯಾಗಿದೆ ಆದರೆ ಅದನ್ನು ಪ್ರಚುರಪಡಿಸಲು ಹಿಂದೇಟು ಹಾಕುತ್ತಿದ್ದಾರೆ. ದೇಶದಲ್ಲಿ ತಾಂಡವಾಡುತ್ತಿರುವ ಭ್ರಷ್ಟಾಚಾರ, ಭಯೋತ್ಪಾದನೆ ಮುಂತಾದವುಗಳು ಅಭಿವೃದ್ಧಿ ಮೇಲೆ ಬಹಳಷ್ಟು ಪರಿಣಾಮ ಬೀರುತ್ತಿದೆ. ಪ್ರೀತಿ, ವಿಶ್ವಾಸ ಹಾಗೂ ಮನುಷ್ಯತ್ವದ ಸದೃಢ ವಿಚಾರಗಳಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ರಾಜ್ಯ ಮಟ್ಟದ ಉತ್ತಮ ಅಂಗನಾಡಿ ಕಾರ್ಯಕರ್ತೆ ಪ್ರಶಸ್ತಿ ವಿಜೇತ ಗಂಗೊಳ್ಳಿ ದಾಕುಹಿತ್ಲು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಫಿಲೋಮಿನಾ ಫೆರ್ನಾಂಡಿಸ್ ಅವರನ್ನು ಗಂಗೊಳ್ಳಿಯ ರಥಬೀದಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ಜರಗಿದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್, ಪಂಚಾಯತ್ ಸದಸ್ಯ ಸುರೇಂದ್ರ ಖಾರ್ವಿ, ಗ್ರಾಮ ಪಂಚಾಯತ್ ಸದಸ್ಯರಾದ ಯೂನಿಸ್ ಸಾಹೇಬ್, ಸಾಯಿರಾ ಬಾನು, ಸುಶೀಲ ಶೇರುಗಾರ್, ಶಾಲೆಯ ಎಸ್ಡಿಎಂಸಿ ಅಧ್ಯಕ್ಷೆ ಪುಷ್ಪಾ, ರೋಟರಿ ಕ್ಲಬ್ ಕುಂದಾಪುರ ದಕ್ಷಿಣ ಅಧ್ಯಕ್ಷ ಶ್ರೀನಾಥ ರಾವ್, ಶಾಲೆಯ ಹಳೆ ವಿದ್ಯಾರ್ಥಿ ಶಿವಾನಂದ ಪೂಜಾರಿ, ತಾಲೂಕು ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ದುರ್ಗರಾಜ್ ಪೂಜಾರಿ, ಶ್ರೀರಾಮ್ ಎಜುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ನ ಸದಸ್ಯರಾದ ಗೀತಾ ಸುನೇತ್ರ ಬಿಲ್ಲವ, ಶಾರದಾ ಗೋವಿಂದ ಪೂಜಾರಿ, ಸಿಆರ್ಪಿ ತಿಲೋತ್ತಮ, ಸಹಶಿಕ್ಷಕಿ ಪ್ರೇಮಲತಾ, ಗೌರವ ಶಿಕ್ಷಕಿ ವಿನಯಾ ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಾಜ್ಯದಲ್ಲಿ ಮುಖ್ಯಮಂತ್ರಿಗಳು ಅಧಿಕಾರಕ್ಕೆ ಬಂದ ಸಂದರ್ಭದಲ್ಲೇ ಸ್ವಚ್ಚ ಹಾಗೂ ಪಾರದರ್ಶಕ ಆಡಳಿತವನ್ನು ಜಾರಿಗೆ ತರುವ ಘೋಷಿಸಿದ್ದು, ಅಧಿಕಾರಿಗಳು ತೊಡಗಿಸಿಕೊಳ್ಳುವಿಕೆಯಿಂದ ಇದು ಯಶಸ್ವಿಯಾಗಲಿದೆ. ಭೂಮಿಯಲ್ಲಿ ಬದುಕುವ ಯಾರೊಬ್ಬರೂ ತಮ್ಮ ಹಕ್ಕಿನಿಂದ ವಂಚಿತರಾಗಬಾರದು. ಅಧಿಕಾರಿಗಳು ಉದಾಸಿನ ಮಾಡುವ ಪ್ರವೃತ್ತಿ ಬಿಡಿ, ಸರಕಾರದ ಆದೇಶದಂತೆ ಕೆಲಸ ಮಾಡಿ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು. ಅವರು ನೂತನ ಬೈಂದೂರು ತಾಲೂಕು ಲೋಕಾರ್ಪಣೆ ಮಾಡಿ ಮಾತನಾಡಿ ರಾಜ್ಯದಲ್ಲಿ ಅಕ್ರಮ ಸಕ್ರಮ, ಡೀಮ್ಡ್ ಫಾರೆಸ್ಟ್, ಕುಮ್ಕಿ ಭೂಮಿ ಸಮಸ್ಯೆಯನ್ನು ಸರಳೀಕರಿಸುವ ಪ್ರಯತ್ನ ಮಾಡಲಾಗಿದ್ದು, ಭೂಮಿಯ ಹಕ್ಕಿನಿಂದ ವಂಚತರಿಗೆ ಭೂಮಿ ನೀಡಲು ಸರಕಾರ ಬದ್ಧವಾಗಿದೆ ಎಂದರು. ರಾಜ್ಯದಲ್ಲಿ ನೂತನ ತಾಲೂಕು ರಚನೆಗೆ ಚಾಲನೆ ನೀಡಿದ ಬಳಿಕ ಉದ್ಘಾಟಿಸಲಾಗುತ್ತಿರುವ ಮೊದಲ ತಾಲೂಕು ಬೈಂದೂರು ಆಗಿದೆ ಎಂದ ಅವರು ಶಾಸಕರ ಬೇಡಿಕೆಯಂತೆ ಮಿನಿವಿಧಾನಸೌಧ ಮಂಜೂರು ಮಾಡಿಸುವ ಭರವಸೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಮಾತನಾಡಿ ಬೈಂದೂರು ನಾಗಕರಿಕರ ಬಹುಕಾಲದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಭಾಗದ ನಾಗರಿಕರ ಬಹುಕಾಲದ ಬೇಡಿಕೆ ನನಸಾಗುತ್ತಿದ್ದು ಫೆ.14ರಿಂದ ಬೈಂದೂರು ನೂತನ ತಾಲೂಕಾಗಿ ಕಾರ್ಯಾರಂಭಗೊಳ್ಳಲಿದೆ. ರಾಜ್ಯ ಸರಕಾರ ಬಜೆಟ್ನಲ್ಲಿ ಘೋಷಿಸಿದಂತೆ ನೂತನ ತಾಲೂಕು ರಚನೆ ಪ್ರಕ್ರಿಯೆ ಪೂರ್ಣಗೊಳಿಸಿ ಅಂತಿಮ ಅಧಿಸೂಚನೆ ಹೊರಡಿಸಿದ್ದು ನೂತನ ಬೈಂದೂರು ತಾಲೂಕು ರಚನೆಗೆ ಸಿದ್ಧತೆಗಳು ನಡೆದಿವೆ. ಫೆಬ್ರವರಿ 14ರಂದು ತಾಲೂಕು ಕೇಂದ್ರ ಅಧಿಕೃತವಾಗಿ ಕಾರ್ಯಾರಂಭಗೊಳ್ಳಲಿದ್ದು, ನಾಗರಿಕರಲ್ಲಿ ಸಂತಸ ಮೂಡಿಸಿದೆ. ಬಹುಕಾಲದ ಬೇಡಿಕೆ ನನಸು: ತಾಲೂಕು ರಚಿಸಬೇಕೆಂಬ ಆಗ್ರಹ ಎಪ್ಪತ್ತರ ದಶಕದಲ್ಲಿ ಕೇಳಿಬಂದಿದ್ದವು. ಈ ನಿಟ್ಟಿನಲ್ಲಿ ರಚನೆಗೊಂಡ ವಾಸುದೇವ ರಾವ್ ಆಯೋಗ ಹಾಗೂ ಟಿ.ಎಂ ಹುಂಡೇಕರ ಆಯೋಗ, ಗದ್ದಿಗೌಡರ್ ಸಮಿತಿ, ಎಂ.ಬಿ. ಪ್ರಕಾಶ್ ರಾವ್ ಸಮಿತಿ ಮುಂತಾದವುಗಳು ಬೈಂದೂರು ತಾಲೂಕು ರಚನೆಯ ಅಗತ್ಯತೆಯನ್ನು ಪುಷ್ಠಿಕರಿಸಿದ್ದವು. ಈ ಭಾಗದ ನಾಗರಿಕರು ನಿರಂತರವಾಗಿ ತಾಲೂಕು ರಚನೆಯ ಬಗ್ಗೆ ಮನವಿ ಸಲ್ಲಿಸುತ್ತಾ, ಹೋರಾಡುತ್ತಾ ಬಂದವರು. ಬೈಂದೂರು ತಾಲೂಕು ರಚನಾ ಹೋರಾಟ ಸಮಿತಿಯ ಅಧ್ಯಕ್ಷರಾದ ಬಿ. ಜಗನ್ನಾಥ ಶೆಟ್ಟಿ ಅವರು ತಾಲೂಕು ರಚನೆಯ ಹಂತ ಹಂತವನ್ನೂ ಮನಗಂಡವರು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ವಿವಿಧ ಶಿವ ದೇವಾಲಯಗಳಲ್ಲಿ ಶಿವರಾತ್ರಿ ಆಚರಣೆಗೆ ಭಕ್ತಿ ಭಾವದಿಂದ ನಡೆಯಿತು. ಸಹಸ್ರಾರು ಭಕ್ತರು ದೇವಾಲಯಗಳಿಗೆ ಭೇಟಿ ನೀಡಿ ಭಕ್ತಿಪೂರ್ವಕವಾಗಿ ಶ್ರೀ ದೇವರಿಗೆ ನವಿಸಿ ಶಿವಸ್ತುತಿ, ಶಿವನಾಮ ಪಾರಾಯಣದಿಂದ ಪುನಿತರಾದರು. ಶಿವರಾತ್ರಿ ಉಪವಾಸವನ್ನು ಕೈಗೊಂಡು ಕೃತಾರ್ಥರಾದರು. ಶಿವರಾತ್ರಿಯ ಅಂಗವಾಗಿ ಬೈಂದೂರು ವಣಕೊಡ್ಲುವಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಿವಲಿಂಗವನ್ನು ಮುಟ್ಟಿ ಪೂಜಿಸುವ ಅಪೂರ್ವ ಅವಕಾಶವಿದ್ದರೇ ಗುಜ್ಜಾಡಿಯ ಗುಹೇಶ್ವರ ದೇವಾಲಯದಲ್ಲಿ ಗುಹೆಯ ಒಳಗೆ ದೇವರ ದರ್ಶನ ಪಡೆಯವ ಅವಕಾಶ ಭಕ್ತರದ್ದಾಗಿತ್ತು. ಐತಿಹಾಸಿಕ ಹಾಗೂ ಐತಿಹ್ಯವಿರುವ ಶಿವಾಲಯಗಳಿಗೆ ಭಕ್ತ ದಂಡು ಹರಿದು ಬಂದಿತ್ತು. ವಣಕೊಡ್ಲುವಿನಲ್ಲಿ ಶಿವರಾತ್ರಿಯಂದು ಮಾತ್ರ ಸ್ವರ್ಶಪೂಜೆ ಮಾಡುವ ಸರತಿ ಸಾಲಿನಲ್ಲಿ ನಿಂತ ಬಳಿಕ ದರ್ಶನ ಪಡೆಯುವಂತಾಯಿತು. ಕುಂದಾಪ್ರ ಡಾಟ್ ಕಾಂ ಸುದ್ದಿ. ಪಂಚ ಶಂಕರನಾರಾಯಣ ಕ್ಷೇತ್ರಗಳಾದ ಬೆಳ್ವೆ ಶ್ರೀ ಶಂಕರನಾರಾಯಣ, ಆವರ್ಸೆ ಶ್ರೀ ಶಂಕರನಾರಾಯಣ, ಮಾಂಡವಿ ಶ್ರೀ ಶಂಕರನಾರಾಯಣ, ಶ್ರೀ ಕ್ರೋಢ ಶಂಕರನಾರಾಯಣ, ಶ್ರೀ ಹೊಳೆ ಶಂಕರನಾರಾಯಣ ದೇವಾಲಯಗಳು, ಆಜ್ರಿ ಶ್ರೀ ತ್ರೈಂಬಕೇಶ್ವರ ದೇವಾಲಯ, ಬೈಂದೂರು…
ಸುನಿಲ್ ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಒಬ್ಬರು ಮಾತ್ರ ಅಂಬೆಗಾಲಿಟ್ಟು ನಡೆಯಬಹುದಾದ ಹಾದಿ, ಅದರ ಅಂತ್ಯದಲ್ಲೇ ಒಂದಿಷ್ಟು ಮಂದಿ ಕುಳಿತುಕೊಳ್ಳಬಹುದಾದ ಜಾಗ. ಅಲ್ಲಿಂದ ಬಲಕ್ಕೆ ಸಾಗಿದರೆ ಎದಿರುಗೊಳ್ಳುವ ಶಿವಲಿಂಗ. ಶಿವರಾತ್ರಿಯಂದು ಗುಹಾಂತರನಾದ ಈಶ್ವರನ್ನು ಕಾಣುವ ಕೊಡಪಾಡಿಯ ಗುಹೇಶ್ವರ ದೇವಾಲಯದಲ್ಲೊಂದು ಅಪೂರ್ವ ಅವಕಾಶವಿದೆ. ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದ ಕೊಡಪಾಡಿಯಲ್ಲಿನ ಈ ಐತಿಹಾಸಿಕ ಗುಹೇಶ್ವರ ದೇವಾಲಯದಲ್ಲಿ ಶಿವನ ಮೂಲ ಸಾನಿಧ್ಯಕ್ಕೊಂದು ಮೆರಗಿದೆ. ೨೦ ಅಡಿ ಉದ್ದದ ಕಲ್ಲಿನ ಪೊಟರೆಯ ಅಂತ್ಯದಲ್ಲಿ ಉದ್ಘವಿಸಿರುವ ಈ ಶಿವಲಿಂಗದಲ್ಲೊಂದು ಬೆರಗಿದೆ. ಈಶ್ವರನೊಂದಿಗೆ ಸ್ಕಂದ ದೇವರ ಉದ್ಭವ ಸನ್ನಿಧಿಯೂ ಇದೆ. ಕುಂದಾಪ್ರ ಡಾಟ್ ಕಾಂ ವರದಿ ದೇವರ ದರ್ಶನಕ್ಕೆ ಸಹಸ್ರ ಜನ: ಶಿವರಾತ್ರಿ ದಿನದಂದು ಮಾತ್ರ ಗುಹೆಯೊಳಗಿನ ಶ್ರೀ ಗುಹೇಶ್ವರನ ದರ್ಶನ ಭಾಗ್ಯವಿರುವುದರಿಂದ ಕರಾವಳಿ ನಾನಾ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ. ಭೇದ ಭಾವವಿಲ್ಲದೇ ಸರತಿ ಸಾಲಿನಲ್ಲಿ ನಿಂತು ಒಬ್ಬೊಬ್ಬರಾಗಿಯೇ ಗುಹೆಯೊಳಕ್ಕೆ ಪ್ರವೇಶಿಸಿ ದೇವರಿಗೆ ನಮಿಸುತ್ತಾರೆ. ವರ್ಷಕ್ಕೊಮ್ಮೆ ಒದಗಿ ಬರುವ ಅವಕಾಶದಿಂದ ಪುನೀತರಾಗುತ್ತಾರೆ. ಕುಂದಾಪ್ರ…
ಕುಂದಾಪ್ರ ಡಾಟ್ ಕಾಂ ಲೇಖನ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಶಿವದೇವಾಲಯಗಳಲ್ಲಿ ಶಿವಲಿಂಗ ಸ್ಪರ್ಶಪೂಜೆಯ ಏಕೈಕ ಶಿವದೇಗುಲ ಎಂಬ ಪ್ರಸಿದ್ಧಿಗೆ ಪಾತ್ರವಾದ ಬೈಂದೂರಿನ ಗಂಗಾನಾಡು ಗ್ರಾಮದ ವಣಕೊಡ್ಲುವಿನ ಪುರಾತನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ ಜರುತ್ತಲಿದೆ. ಮಹಾಶಿವರಾತ್ರಿ ಮಹೋತ್ಸವದ ಅಂಗವಾಗಿ ಮಾರ್ಚ್ 7ರಂದು ಬೆಳಿಗ್ಗೆ 8 ಗಂಟೆಯಿಂದಲೇ ಭಕ್ತಾದಿಗಳಿಗೆ ಶ್ರೀ ಮಹಾಲಿಂಗೇಶ್ವರ ದೇವರ ದರ್ಶನ ಮತ್ತು ಸ್ಪರ್ಶಪೂಜೆ ಆರಂಭಗೊಂಡಿದ್ದು ರಾತ್ರಿ 10 ಗಂಟೆಗೆ ದೇವರ ಸುತ್ತು ಉತ್ಸವ, ಕಟ್ಟೆಪೂಜೆ ಹಾಗೂ ಪ್ರಸಾದ ವಿತರಣೆ, ಮಾರ್ಚ್ 8ರಂದು ಶುದ್ಧಕಳಶ, ಕಲಾವೃದ್ಧಿಹೋಮ, ಕಲಶಾಭಿಷೇಕ, ಮಹಾಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ, ಯಕ್ಷಗಾನ ಬಯಲಾಟ ಮುಂತಾದ ಕಾರ್ಯಕ್ರಮಗಳು ನಡೆಯಲಿವೆ. ಕುಂದಾಪ್ರ ಡಾಟ್ ಕಾಂ ಲೇಖನ ಹಲವು ಗಣ್ಯ ಮಹನೀಯರು ಮಹಾಶಿವರಾತ್ರಿ ಮಹೋತ್ಸವದಲ್ಲಿ ಭಾಗವಹಿಸಿದ್ದಾಗಿ ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ. ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಅಣ್ಣಪ್ಪ ಶೆಟ್ಟಿ ಯಡ್ತರೆ, ಡಾ. ಮಿಥುನ್ ಶೆಟ್ಟಿ, ಡಾ. ತಿಲಕ್ ಶೆಟ್ಟಿ ಮೊದಲಾದವರು ಭಕ್ತರಿಗೆ ದೇವರ ದರ್ಶನಕ್ಕೆ ಅನುವು ಮಾಡಿಕೊಟ್ಟರು. ಬೈಂದೂರು ಪೋಲಿಸರು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮುದ್ರವೇ ದೇವರು ಎಂಬ ನಂಬಿಕೆ ಹಾಗೂ ವಿಶ್ವಾಸದೊಂದಿಗೆ ನಿತ್ಯ ಹೋರಾಟ ನಡೆಸುವ ಮೀನುಗಾರರ ಅಗತ್ಯತೆಗಳನ್ನು ಪೂರೈಸುವುದು ಸರಕಾರ ಹಾಗೂ ಜನಪ್ರತಿನಿಧಿಗಳ ಕರ್ತವ್ಯವಾಗಿದ್ದು, ಮೀನುಗಾರಿಕೆಗೆ ತೊಡಕಾಗುತ್ತಿರವ ಸೀಮೆಎಣ್ಣೆ ಕೊರತೆ ಹಾಗೂ ಇನ್ನಿತರ ಸಮಸ್ಯೆಗಳ ಬಗ್ಗೆ ಕ್ಷೇತ್ರದ ಸಂಸದರ ಮೂಲಕ ಕೇಂದ್ರ ಸರಕಾರದ ಗಮನಕ್ಕೆ ತರಲಾಗುವುದು ಎಂದು ಶಿಕಾರಿಪುರ ಕ್ಷೇತ್ರದ ಶಾಸಕ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಬಿ. ವೈ ರಾಘವೇಂದ್ರ ಹೇಳಿದರು. ಅವರು ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಬೆಳ್ಳಿಹಬ್ಬದ ಪ್ರಯುಕ್ತ ಕೊಡೇರಿ ಬಂದರು ಬಳಿ ಆಯೋಜಿಸಲಾಗಿದ್ದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘ ಮೀನುಗಾರರ ಧ್ವನಿಯಾಗಿ, ಶಕ್ತಿಯಾಗಿ ೨೫ ವರ್ಷಗಳನ್ನು ಪೂರೈಸಿದೆ. ಸಂಘದ ಕಾರ್ಯವ್ಯಾಪ್ತಿಯನ್ನು ಒಂದು ಕ್ಷೇತ್ರಕ್ಕಷ್ಟೇ ಸೀಮಿತಗೊಳಿಸದೇ ರಾಜ್ಯದ ಮೀನುಗಾರರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆಯ ವಿಚಾರ ಎಂದವರು ಶ್ಲಾಫಿಸಿದರು. ಜೀವರಕ್ಷಕ ಪ್ರಶಸ್ತಿ ವಿತರಿಸಿದ ಬೈಂದೂರು ಕ್ಷೇತ್ರದ ಶಾಸಕ, ಕೆಎಸ್ಆರ್ಟಿಸಿ ಅಧ್ಯಕ್ಷ…
