ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕನ್ನಡ ಚಿತ್ರರಂಗದಲ್ಲಿ ಕೌತುಕವನ್ನು ಹುಟ್ಟುಹಾಕಿರುವ ಬಹುನಿರೀಕ್ಷಿತ ‘ಕತ್ತಲೆಕೋಣೆ’ ಚಿತ್ರದ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮ ಫೆ.18ರ ಸಂಜೆ 4:30ಕ್ಕೆ ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ. ಆಡಿಯೋ ಬಿಡುಗಡೆ ಕಾರ್ಯಕ್ರಮವನ್ನು ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್ ಈಶ್ವರಪ್ಪ ಉದ್ಘಾಟನೆ ಮಾಡಲಿದ್ದಾರೆ. ಹಿರಿಯ ಪತ್ರಕರ್ತ ಡಾ. ಶಶಿಧರ್ ಭಟ್, ಸಂಗೀತಕಾರರಾದ ಬಿ.ಕೆ ಸುಮಿತ್ರ, ವಿ. ಮನೋಹರ್, ಡಾ. ಜಯಲಕ್ಷ್ಮಿ ಆಡಿಯೋ ಬಿಡಗಡೆ ಮಾಡಲಿದ್ದಾರೆ. ಖ್ಯಾತ ನಿರ್ದೇಶಕ ಸಿಂಪಲ್ ಸುನಿ ಟೀಸರ್ ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಕತ್ತಲೆಕೋಣೆ ಚಿತ್ರದ ನಟ, ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ, ನಿರ್ಮಾಪಕ ಪುರುಷೋತ್ತಮ್ ಅಮೀನ್, ಸಹ ನಿರ್ಮಾಪಕ ಎಂ.ಎನ್. ಶ್ರೀನಿವಾಸ್ ಮೂರ್ತಿ ಶಿವಮೊಗ್ಗ, ಕಾರ್ಯಕಾರಿ ನಿರ್ಮಾಪಕ ರಾಘವೇಂದ್ರ ಎ. ಶೆಟ್ಟಿ, ರಾಜ್ಯ ಪ್ರಶಸ್ತಿ ಪುರಸ್ಕೃತ ನಿರ್ಮಾಪಕ ರಾಜೀವ ಕೊಠಾರಿ, ಉದ್ಯಮಿ ರಾಜೇಂದ್ರ ಶೆಟ್ಟಿ, ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಂಕರ್ ಸುಗದೆ, ವಕೀಲರಾದ ರವಿಕಿರಣ್ ಮುರ್ಡೇಶ್ವರ್, ಮಂಜುನಾಥ ಸಾಲಿಯಾನ್ ತ್ರಾಸಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ವರದಿ. ಅಮಾಸೆಬೈಲು ಸಂಪೂರ್ಣ ಸೋಲಾರ್ ಅವಳಸಿಕೊಂಡ ರಾಜ್ಯದ ಮೊದಲ ಗ್ರಾಮವಾದರೆ, ಮರವಂತೆ ಗ್ರಾಮ ಪಂಚಾಯಿತಿ ಕಚೇರಿಗೆ ಪರಿಪೂರ್ಣ ಸೋಲಾರ್ ಅಳವಡಿಸಿಕೊಂಡ ರಾಜ್ಯದ ನಾಲ್ಕನೇ ಹಾಗೂ ದ.ಕ, ಉಡುಪಿ ಜಿಲ್ಲೆ ಪ್ರಥಮ ಗ್ರಾಮ ಪಂಚಾಯಿತಿ! ದಕ ಸಂಸದ ನಳಿನ್ ಕುಮಾರ್ಕಟೀಲ್ ದತ್ತು ಪಡೆದು ಅಭಿವೃದ್ಧಿ ಪಡಿಸುತ್ತಿರುವ ಬೆಳ್ಪ ಗ್ರಾಮ ಪಂಚಾಯಿತಿ ಸಂಪೂರ್ಣ ಸೋಲಾರ್ ಅಳವಡಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಮರವಂತೆ ಗ್ರಾಮ ಒಂದು ಹೆಜ್ಜೆ ಮುಂದಕ್ಕೆ ಹೋಗಿ ಕಚೇರಿಗೆ ಸಂಪೂರ್ಣ ಸೋಲಾರ್ ಅಳವಡಿಸಿಕೊಂಡಿದೆ. ಸೋಲಾರ್ ಹೊಷ ವರ್ಷದ ಹೊಸ ಕೊಡುಗೆ. ಮರವಂತೆಗ್ರಾಮ ಪಂಚಾಯಿತಿದಾನಿ ಡಾ.ದಯಾನಂದ ಪೈ ಕೊಡುಗೆ ಮೂಲಕ ಕಚೇರಿ, ಹಾಗೂ ಸುವರ್ಣ ಸೌಧ ಸಭಾಭವನನಿರ್ಮಿಸಿಕೊಂಡಿದೆ.ಕಟ್ಟಡಮಾಡಿನ ಮೇಲೆ ಸೋಲಾರ್ ಪ್ಲೇಟ್ಗಳ ಅಳವಡಿಸಿಕೊಂಡಿದೆ.ಸೋಲಾರ್ರೂಪ್ಟಾಪ್ಹೆಸರಲ್ಲಿ೧೦ ವೋಲ್ಟ್ ಕೆವಿ ನಾಲ್ಕು ಪ್ಲೇಟ್ ಅಳವಡಿಸಿ ೨೫೦ ವ್ಯಾಟ್ಪೀರ್ (ಡಬ್ಲ್ಯೂಪಿ) ಶಕ್ತಿ ಪಡೆಯಲಾಗುತ್ತದೆ.ಕಚೇರಿ ಫ್ಯಾನ್, ಲೈಟ್ಕಂಪ್ಯೂಟರ್ ಸಿಸ್ಟಮ್ ಎಲ್ಲವೂ ಸೋಲಾರ್ ಮೂಲಕ ನಡೆಯುತ್ತದೆ.ಕಚೇರಿಗೆಕತ್ತಲೆಂಬುದೇಇಲ್ಲಾ! ಮರವಂತೆಗ್ರಾಮ ಪಂಚಾಯಿತಿ ೧೪ನೇ ಹಣಕಾಸುಯೋಜನೆಯಲ್ಲಿ ಸೋಲಾರ್ ಸಿಸ್ಟಮ್ ಅಳವಡಿಸಿದ್ದು, ಅದಕ್ಕೆ ೧,೪,೮೦೦ ಲಕ್ಷಖರ್ಚು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಪಂ ಆಸ್ತಿ ಪರಬಾರೆ.. ಇಒ ಕರ್ತವ್ಯ ಲೋಪ.. ಆಡಳಿತ ಪಕ್ಷ ಸದಸ್ಯರ ನಡುವೆಯೇ ಪರ,ವಿರೋಧ. ಅಜೆಂಡದಲ್ಲಿ ಕಾಣೆಯಾದ ಲೋಕಾಯುಕ್ತ ತನಿಖೆ ಸರ್ವಾನುಮತ ನಿರ್ಣಯ. ಮಂಡಿಸಿದ ನಿರ್ಣಯ ಅಂಗೀಕರಿಸದಿದ್ದರೆ ಬಾವಿಗಿಳಿದ ಪ್ರತಿಭಟನೆ, ಒಂದೇ ವಿಷಯ ಹಿಡಿದುಕೊಂಡ ಬೇರೆ ವಿಷಯ ಚರ್ಚೆಗೆ ಅವಕಾಶ ಕೊಡದಿದ್ದರೆ ಪ್ರತಭಟನೆ ಮಾಡುವವರ ವಿರುದ್ಧವೇ ಪ್ರತಿಭಟನೆ ಎಚ್ಚರಿಕೆ! ಕುಂದಾಪುರ ತಾಲೂಕು ಪಂಚಾಯಿತಿ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ಕಂಡುಬಂದ ಪ್ರಮುಖ ವಿಷಯ. ಕಳೆದ ಸಾಮಾನ್ಯ ಸಭೆಯಲ್ಲಿ ಹೊಟೇಲ್ ಒಂದರ ಬಾಡಿಗೆ ಹಾಗೂ ಜಾಗದ ಒತ್ತುವರಿ ಬಗ್ಗೆ ಲೋಕಾಯುಕ್ತ ತನಿಖೆಗೆ ಸರ್ವಾನುಮತದ ನಿರ್ಣಯ ಮಾಡಲಾಗಿತ್ತು. ಆದರೆ ಅಜೆಂಡಾದಲ್ಲಿ ವಿಷಯವೇ ಇಲ್ಲ. ತಾಪಂ ಆಸ್ತಿ ಪರಬಾರೆ ಮಾಡಲು ಹೊಟೇಲ್ ಜೊತೆ ಅಧಿಕಾರಿಗಳು ಶ್ಯಾಮೀಲಾಗಿದ್ದಾರೆ. ಒತ್ತುವರಿ ಜಾಗ ಹಿಂದಕ್ಕೆ ಪಡೆಯಬೇಕು. ಹೊಟೇಲ್ ಬಾಡಿಗೆ ಸ್ಥಳ ಒತ್ತುವರಿ ಬಗ್ಗೆ ಲೋಕಾಯುಕ್ತ ತನಿಖೆ ನಡೆಸುವಂತೆ ಸ್ಥಾಯಿ ಸಮಿತಿ ಅಧ್ಯಕ್ಷ ಮಹೇಂದ್ರ ಪೂಜಾರಿ ಒತ್ತಾಯಿಸಿದರು. ಹೊಟೇಲ್ ಜಾಗ ಒತ್ತುವರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಊಟಬಲ್ಲವನಿಗೆರೋಗವಿಲ್ಲ, ಮಾತು ಬಲ್ಲವನಿಗೆ ಜಗಳವಿಲ್ಲಾ ಎನ್ನೋದುಗಾದೆ ಮಾತು.ಪ್ರಸಕ್ತಯೋಗ ಬಲ್ಲವನಿಗೆರೋಗಇಲ್ಲಾಎಂದು ಬದಲಾಯಿಸುವಕಾಲ ಬಂದಿದೆ.ಯೋಗ ನಮ್ಮ ಪರಂಪರೆಯಅತ್ಯಾಮೂಲ್ಯಕೊಡುಗೆಯಾಗಿದ್ದು, ಗುರುತಿಸುವಲ್ಲಿ ನಾವು ಎಡವುತ್ತಿದ್ದೇವೆಎಂದುಕಾರ್ತಿಕೇಯ ಸ್ಕ್ಯಾನಿಂಗ್ ಸೆಂಟರ್ವೈದ್ಯಾಧಿಕಾರಿ ಡಾ. ಬಿ.ವಿ.ಉಡುಪ ಅಭಿಪ್ರಾಯಪಟ್ಟರು. ಕುಂದಾಪುರಯೋಗಬಂಧುಆಶ್ರಯದಲ್ಲಿಪರಿಜಾತಾ ಹೊಟೇಲ್ ಪದ್ಮಾವತಿಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಸನ್ಮಾನಕಾರ್ಯಕ್ರಮಅಧ್ಯಕ್ಷತೆ ವಹಿಸಿ ಮಾತನಾಡಿದರು. ಯೋಗ ಸ್ಪರ್ಧೆಯಲ್ಲಿ ಪಾಲ್ಗೊಂಡುಜಿಲ್ಲೆ ಹಾಗೂ ಕುಂದಾಪುರತಾಲೂಕುಹೆಸರು ವಿಶ್ವಮಟ್ಟಕ್ಕೆ ಏರಿಸಿದ ಕುಶ ಪೂಜಾರಿ ಸಾಧನೆ ಶ್ಲಾಘನೀಯಎಂದಅವರು, ಆರಂಭದಲ್ಲೇ ಪ್ರತಿಭೆಗಳ ಗುರುತಿಸಿ ಪ್ರೋತ್ಸಾಹಿಸಿದರೆ, ಯೋಗಕ್ಷೇತ್ರದಲ್ಲಿಇನ್ನಷ್ಟು ಪ್ರತಿಭೆಗಳು ಹೊರ ಬರಲು ಸಾಧ್ಯಎಂದರು. ಅಂತಾರಾಷ್ಟ್ರೀಯಯೋಗ ಸ್ಪರ್ಧೆಯಲ್ಲಿತೃತೀಯ ಸ್ಥಾನ ಪಡೆದ ಕುಶ ಪೂಜಾರಿಮರವಂತೆಅವರಕುಂದಾಪುರಯೋಗ ಬಂದು ಪರವಾಗಿ ಸನ್ಮಾನಿಸಲಾಯಿತು. ಯೋಗಗುರು ಬಿ.ಎಂ.ಲಮಾಣಿ ಹಾಗೂ ಕುಶ ಪೂಜಾರಿ, ಮಾತೃಶ್ರೀ ಲೀಲಾವತಿ ಆರ್.ಪೂಜಾರಿ ಅವರನ್ನು ಅಭಿನಂದಿಸಲಾಯಿತು. ಪಾರಿಜಾತಾ ಹೊಟೇಲ್ ಮಾಲಕg ಮಚಂದ್ರ ಭಟ್ ನೀಡಿದ ೧೦ ಸಾವಿರ ನಗದು ಪುರಸ್ಕಾರಹಸ್ತಾಂತರಿಸಲಾಯಿತು. ಆಧ್ಯಾತ್ಮ ಪತ್ರಿಕೆ ಸಂಪಾದಕ ಸತೀಶ್ ಶೆಟ್ಟಿ, ಹಿರಿಯ ವರದಿಗಾರ ಶ್ರೀಪತಿ ಹೆಗಡೆ ಹಕ್ಲಾಡಿ, ಯೋಗಬಂಧು ಸಂಜೀವಣ್ಣ, ಸಂತೋಷ್ ಹಾಗೂ ಇನ್ನಿತರರು ಇದ್ದರು. ಪೂರ್ವಿಚಾತ್ರ ಪ್ರಾರ್ಥಿಸಿದರು.ಶ್ರೀ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾವನಾತ್ಮಕ ನೆಲೆಗಳಸ್ಪೂರ್ತಿ ಮತ್ತು ಕಲ್ಪನೆಗಳಿಂದ ಕವಿತೆಗಳು ಹುಟ್ಟುತ್ತವೆ. ಕಾವ್ಯ ಮನಸ್ಸಿನ ಒಳಗಿನಿಂದ ಬರಬೇಕು. ಅದಕ್ಕೊಂದು ಸೌಂದರ್ಯ, ಲವಲವಿಕೆ ಜೀವನ ಪ್ರೀತಿ ಉತ್ಸಾಹವಿದೆ ಎಂದು ಲೇಖಕಿ ಮತ್ತು ಕವಯತ್ರಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಅಭಿಪ್ರಾಯಪಟ್ಟರು. ಅವರು ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಡಾ.ಹೆಚ್. ಶಾಂತಾರಾಮ್ ಸಾಹಿತ್ಯ ಮತ್ತು ಸಂಸ್ಕೃತಿ ವೇದಿಕೆಯ ಆಶ್ರಯದಲ್ಲಿ ನಡೆದ ಕವಿಗೋಷ್ಠಿಯ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕಾವ್ಯ ಹುಟ್ಟುವುದಕ್ಕೆ ಪ್ರೇರಣೆಯೊಂದಿಗೆ ಆಸ್ವಾದಿಸುವ ಸೌಂದರ್ಯವೂ ಬೇಕು. ಅದಕ್ಕೆ ಸ್ಪಂದಿಸಿದಾಗ ಅಭೂತಪೂರ್ವವಾದ ಚೆಂದದ ಕವನಕೂಂದು ಜೀವಂತಿಕೆ ಬರುತ್ತದೆ. ಅದಕ್ಕೆ ಯಾವುದೇ ಕಟ್ಟುಪಾಡುಗಳಿಲ್ಲ. ಕವನಕ್ಕೆ ಅಂತಃಸ್ಸತ್ವ , ಉತ್ಸಾಹ ಮಾನವೀಯ ನೆಲೆಗಳ ಧ್ವನಿ ಇರಬೇಕು. ದ್ರಾವಣವನ್ನು ಬೇರೆ ಬೇರೆ ಪಾತ್ರೆಯಲ್ಲಿ ನೋಡುವಾಗ ಬೇರೆಯದೇ ಆಕೃತಿ ಪಡೆಯುವಂತೆ ಕವಿಯ ಮನಸಿನಾಳದ ರಚನೆಯಲ್ಲಿ ನಿಸರ್ಗ ವ್ಯಕ್ತಿ, ವಸ್ತು –ವಿಷಯಗಳು ಕವಿಯ ಅನುಭವಕ್ಕೆಪೂರಕವಾಗಿಬೇರೆಬೇರೆಆಕೃತಿಯನ್ನುಭಾವವನ್ನುಅರ್ಥವನ್ನುಪಡೆದುಕೊಳ್ಳುತ್ತದೆ. ಕಾವ್ಯದಧ್ವನಿಹೆಚ್ಚಿರುತ್ತದೆ. ಕಾವ್ಯಮೈಮರೆಯಲುಹೇಳುತ್ತದೆ. ಕಾವ್ಯಸಾಹಿತ್ಯದಲ್ಲಿಲಯ, ತಾಳ, ನಾದ, ಸ್ವರ, ಸಂಗೀತ,ಪ್ರೀತಿಎಲ್ಲವನ್ನೂಏಕಕಾಲದಲ್ಲಿಸೆರೆಹಿಡಿಯುವಸಾಮರ್ಥ್ಯವಿದೆಎಂದುಉದಾಹರಣೆಸಹಿತಹೇಳಿದರು. ಕಾರ್ಯಕ್ರಮದಅಧ್ಯಕ್ಷತೆಯನ್ನುಕಾಲೇಜಿನಪ್ರಾಂಶುಪಾಲರಾದಡಾ.ಎನ್.ಪಿ.ನಾರಾಯಣಶೆಟ್ಟಿವಹಿಸಿದ್ದರು. ಕವಿಗೋಷ್ಠಿಯನ್ನು ವಿದ್ಯಾರ್ಥಿಗಳಾದ ಸವಿತಾ, ಪ್ರಜ್ವಲ್ಶೆಟ್ಟಿಗಾರ್, ಶ್ರಿರಾಜ್ಆಚಾರ್ಯ, ವಿನಯಾ, ರಶ್ಮಿತಾ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಜಗತ್ತಿನ ಇತರ ರಾಷ್ಟ್ರಗಳಿಗೆ ಹೋಲಿಸಿದರೆ ನಮ್ಮ ದೇಶ ಸಂಪದ್ಭರಿತ ದೇಶ. ಅತಿ ಹೆಚ್ಚು ಯುವಶಕ್ತಿಯನ್ನು ಹೊಂದಿರುವ ಅತೀ ಶ್ರೇಷ್ಠ ರಾಷ್ಟ್ರವಾಗಿರುವ ನಮ್ಮ ದೇಶದ ಸಂಸ್ಕೃತಿ ಅತ್ಯಂತ ಶ್ರೇಷ್ಠವಾಗಿದೆ. ಅನೇಕ ವಿಶಿಷ್ಟತೆಗಳನ್ನು ಹೊಂದಿರುವ ನಮ್ಮ ದೇಶದಲ್ಲಿ ಸ್ವಾಮಿ ವಿವೇಕಾನಂದರ ಸದೃಢ ವಿಚಾರಧಾರೆಗಳು ಆದರ್ಶಪ್ರಾಯ ವಿಚಾರಗಳು ಯುವಜನರಿಗೆ ಸ್ಫೂರ್ತಿ ನೀಡುತ್ತಿದೆ. ವಿವೇಕಾನಂದರ ಆದರ್ಶಗಳು ಯುವಜನತೆಯನ್ನು ಸೆಳೆಯುತ್ತಿದೆ ಎಂದು ಯುವ ಧಾರ್ಮಿಕ ಚಿಂತಕಿ ವಿಜೇತ ಶೆಟ್ಟಿ ಉಡುಪಿ ಹೇಳಿದರು. ಅವರು ಕ್ರಾಂತಿವೀರರ ಅಭಿಮಾನಿ ಬಳಗದ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ೪ನೇ ವರ್ಷದ ಕಾರ್ಯಕ್ರಮದ ಅಂಗವಾಗಿ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಗುರುವಾರ ಜರಗಿದ ವಿವೇಕ ಸ್ಮರಣೆ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದರು. ನಮ್ಮ ದೇಶದ ಪ್ರತಿಯೊಬ್ಬರಲ್ಲೂ ದೇಶಪ್ರೇಮ ಗಟ್ಟಿಯಾಗಿದೆ ಆದರೆ ಅದನ್ನು ಪ್ರಚುರಪಡಿಸಲು ಹಿಂದೇಟು ಹಾಕುತ್ತಿದ್ದಾರೆ. ದೇಶದಲ್ಲಿ ತಾಂಡವಾಡುತ್ತಿರುವ ಭ್ರಷ್ಟಾಚಾರ, ಭಯೋತ್ಪಾದನೆ ಮುಂತಾದವುಗಳು ಅಭಿವೃದ್ಧಿ ಮೇಲೆ ಬಹಳಷ್ಟು ಪರಿಣಾಮ ಬೀರುತ್ತಿದೆ. ಪ್ರೀತಿ, ವಿಶ್ವಾಸ ಹಾಗೂ ಮನುಷ್ಯತ್ವದ ಸದೃಢ ವಿಚಾರಗಳಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ರಾಜ್ಯ ಮಟ್ಟದ ಉತ್ತಮ ಅಂಗನಾಡಿ ಕಾರ್ಯಕರ್ತೆ ಪ್ರಶಸ್ತಿ ವಿಜೇತ ಗಂಗೊಳ್ಳಿ ದಾಕುಹಿತ್ಲು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಫಿಲೋಮಿನಾ ಫೆರ್ನಾಂಡಿಸ್ ಅವರನ್ನು ಗಂಗೊಳ್ಳಿಯ ರಥಬೀದಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ಜರಗಿದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್, ಪಂಚಾಯತ್ ಸದಸ್ಯ ಸುರೇಂದ್ರ ಖಾರ್ವಿ, ಗ್ರಾಮ ಪಂಚಾಯತ್ ಸದಸ್ಯರಾದ ಯೂನಿಸ್ ಸಾಹೇಬ್, ಸಾಯಿರಾ ಬಾನು, ಸುಶೀಲ ಶೇರುಗಾರ್, ಶಾಲೆಯ ಎಸ್ಡಿಎಂಸಿ ಅಧ್ಯಕ್ಷೆ ಪುಷ್ಪಾ, ರೋಟರಿ ಕ್ಲಬ್ ಕುಂದಾಪುರ ದಕ್ಷಿಣ ಅಧ್ಯಕ್ಷ ಶ್ರೀನಾಥ ರಾವ್, ಶಾಲೆಯ ಹಳೆ ವಿದ್ಯಾರ್ಥಿ ಶಿವಾನಂದ ಪೂಜಾರಿ, ತಾಲೂಕು ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ದುರ್ಗರಾಜ್ ಪೂಜಾರಿ, ಶ್ರೀರಾಮ್ ಎಜುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ನ ಸದಸ್ಯರಾದ ಗೀತಾ ಸುನೇತ್ರ ಬಿಲ್ಲವ, ಶಾರದಾ ಗೋವಿಂದ ಪೂಜಾರಿ, ಸಿಆರ್ಪಿ ತಿಲೋತ್ತಮ, ಸಹಶಿಕ್ಷಕಿ ಪ್ರೇಮಲತಾ, ಗೌರವ ಶಿಕ್ಷಕಿ ವಿನಯಾ ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಾಜ್ಯದಲ್ಲಿ ಮುಖ್ಯಮಂತ್ರಿಗಳು ಅಧಿಕಾರಕ್ಕೆ ಬಂದ ಸಂದರ್ಭದಲ್ಲೇ ಸ್ವಚ್ಚ ಹಾಗೂ ಪಾರದರ್ಶಕ ಆಡಳಿತವನ್ನು ಜಾರಿಗೆ ತರುವ ಘೋಷಿಸಿದ್ದು, ಅಧಿಕಾರಿಗಳು ತೊಡಗಿಸಿಕೊಳ್ಳುವಿಕೆಯಿಂದ ಇದು ಯಶಸ್ವಿಯಾಗಲಿದೆ. ಭೂಮಿಯಲ್ಲಿ ಬದುಕುವ ಯಾರೊಬ್ಬರೂ ತಮ್ಮ ಹಕ್ಕಿನಿಂದ ವಂಚಿತರಾಗಬಾರದು. ಅಧಿಕಾರಿಗಳು ಉದಾಸಿನ ಮಾಡುವ ಪ್ರವೃತ್ತಿ ಬಿಡಿ, ಸರಕಾರದ ಆದೇಶದಂತೆ ಕೆಲಸ ಮಾಡಿ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು. ಅವರು ನೂತನ ಬೈಂದೂರು ತಾಲೂಕು ಲೋಕಾರ್ಪಣೆ ಮಾಡಿ ಮಾತನಾಡಿ ರಾಜ್ಯದಲ್ಲಿ ಅಕ್ರಮ ಸಕ್ರಮ, ಡೀಮ್ಡ್ ಫಾರೆಸ್ಟ್, ಕುಮ್ಕಿ ಭೂಮಿ ಸಮಸ್ಯೆಯನ್ನು ಸರಳೀಕರಿಸುವ ಪ್ರಯತ್ನ ಮಾಡಲಾಗಿದ್ದು, ಭೂಮಿಯ ಹಕ್ಕಿನಿಂದ ವಂಚತರಿಗೆ ಭೂಮಿ ನೀಡಲು ಸರಕಾರ ಬದ್ಧವಾಗಿದೆ ಎಂದರು. ರಾಜ್ಯದಲ್ಲಿ ನೂತನ ತಾಲೂಕು ರಚನೆಗೆ ಚಾಲನೆ ನೀಡಿದ ಬಳಿಕ ಉದ್ಘಾಟಿಸಲಾಗುತ್ತಿರುವ ಮೊದಲ ತಾಲೂಕು ಬೈಂದೂರು ಆಗಿದೆ ಎಂದ ಅವರು ಶಾಸಕರ ಬೇಡಿಕೆಯಂತೆ ಮಿನಿವಿಧಾನಸೌಧ ಮಂಜೂರು ಮಾಡಿಸುವ ಭರವಸೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಮಾತನಾಡಿ ಬೈಂದೂರು ನಾಗಕರಿಕರ ಬಹುಕಾಲದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಭಾಗದ ನಾಗರಿಕರ ಬಹುಕಾಲದ ಬೇಡಿಕೆ ನನಸಾಗುತ್ತಿದ್ದು ಫೆ.14ರಿಂದ ಬೈಂದೂರು ನೂತನ ತಾಲೂಕಾಗಿ ಕಾರ್ಯಾರಂಭಗೊಳ್ಳಲಿದೆ. ರಾಜ್ಯ ಸರಕಾರ ಬಜೆಟ್ನಲ್ಲಿ ಘೋಷಿಸಿದಂತೆ ನೂತನ ತಾಲೂಕು ರಚನೆ ಪ್ರಕ್ರಿಯೆ ಪೂರ್ಣಗೊಳಿಸಿ ಅಂತಿಮ ಅಧಿಸೂಚನೆ ಹೊರಡಿಸಿದ್ದು ನೂತನ ಬೈಂದೂರು ತಾಲೂಕು ರಚನೆಗೆ ಸಿದ್ಧತೆಗಳು ನಡೆದಿವೆ. ಫೆಬ್ರವರಿ 14ರಂದು ತಾಲೂಕು ಕೇಂದ್ರ ಅಧಿಕೃತವಾಗಿ ಕಾರ್ಯಾರಂಭಗೊಳ್ಳಲಿದ್ದು, ನಾಗರಿಕರಲ್ಲಿ ಸಂತಸ ಮೂಡಿಸಿದೆ. ಬಹುಕಾಲದ ಬೇಡಿಕೆ ನನಸು: ತಾಲೂಕು ರಚಿಸಬೇಕೆಂಬ ಆಗ್ರಹ ಎಪ್ಪತ್ತರ ದಶಕದಲ್ಲಿ ಕೇಳಿಬಂದಿದ್ದವು. ಈ ನಿಟ್ಟಿನಲ್ಲಿ ರಚನೆಗೊಂಡ ವಾಸುದೇವ ರಾವ್ ಆಯೋಗ ಹಾಗೂ ಟಿ.ಎಂ ಹುಂಡೇಕರ ಆಯೋಗ, ಗದ್ದಿಗೌಡರ್ ಸಮಿತಿ, ಎಂ.ಬಿ. ಪ್ರಕಾಶ್ ರಾವ್ ಸಮಿತಿ ಮುಂತಾದವುಗಳು ಬೈಂದೂರು ತಾಲೂಕು ರಚನೆಯ ಅಗತ್ಯತೆಯನ್ನು ಪುಷ್ಠಿಕರಿಸಿದ್ದವು. ಈ ಭಾಗದ ನಾಗರಿಕರು ನಿರಂತರವಾಗಿ ತಾಲೂಕು ರಚನೆಯ ಬಗ್ಗೆ ಮನವಿ ಸಲ್ಲಿಸುತ್ತಾ, ಹೋರಾಡುತ್ತಾ ಬಂದವರು. ಬೈಂದೂರು ತಾಲೂಕು ರಚನಾ ಹೋರಾಟ ಸಮಿತಿಯ ಅಧ್ಯಕ್ಷರಾದ ಬಿ. ಜಗನ್ನಾಥ ಶೆಟ್ಟಿ ಅವರು ತಾಲೂಕು ರಚನೆಯ ಹಂತ ಹಂತವನ್ನೂ ಮನಗಂಡವರು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ವಿವಿಧ ಶಿವ ದೇವಾಲಯಗಳಲ್ಲಿ ಶಿವರಾತ್ರಿ ಆಚರಣೆಗೆ ಭಕ್ತಿ ಭಾವದಿಂದ ನಡೆಯಿತು. ಸಹಸ್ರಾರು ಭಕ್ತರು ದೇವಾಲಯಗಳಿಗೆ ಭೇಟಿ ನೀಡಿ ಭಕ್ತಿಪೂರ್ವಕವಾಗಿ ಶ್ರೀ ದೇವರಿಗೆ ನವಿಸಿ ಶಿವಸ್ತುತಿ, ಶಿವನಾಮ ಪಾರಾಯಣದಿಂದ ಪುನಿತರಾದರು. ಶಿವರಾತ್ರಿ ಉಪವಾಸವನ್ನು ಕೈಗೊಂಡು ಕೃತಾರ್ಥರಾದರು. ಶಿವರಾತ್ರಿಯ ಅಂಗವಾಗಿ ಬೈಂದೂರು ವಣಕೊಡ್ಲುವಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಿವಲಿಂಗವನ್ನು ಮುಟ್ಟಿ ಪೂಜಿಸುವ ಅಪೂರ್ವ ಅವಕಾಶವಿದ್ದರೇ ಗುಜ್ಜಾಡಿಯ ಗುಹೇಶ್ವರ ದೇವಾಲಯದಲ್ಲಿ ಗುಹೆಯ ಒಳಗೆ ದೇವರ ದರ್ಶನ ಪಡೆಯವ ಅವಕಾಶ ಭಕ್ತರದ್ದಾಗಿತ್ತು. ಐತಿಹಾಸಿಕ ಹಾಗೂ ಐತಿಹ್ಯವಿರುವ ಶಿವಾಲಯಗಳಿಗೆ ಭಕ್ತ ದಂಡು ಹರಿದು ಬಂದಿತ್ತು. ವಣಕೊಡ್ಲುವಿನಲ್ಲಿ ಶಿವರಾತ್ರಿಯಂದು ಮಾತ್ರ ಸ್ವರ್ಶಪೂಜೆ ಮಾಡುವ ಸರತಿ ಸಾಲಿನಲ್ಲಿ ನಿಂತ ಬಳಿಕ ದರ್ಶನ ಪಡೆಯುವಂತಾಯಿತು. ಕುಂದಾಪ್ರ ಡಾಟ್ ಕಾಂ ಸುದ್ದಿ. ಪಂಚ ಶಂಕರನಾರಾಯಣ ಕ್ಷೇತ್ರಗಳಾದ ಬೆಳ್ವೆ ಶ್ರೀ ಶಂಕರನಾರಾಯಣ, ಆವರ್ಸೆ ಶ್ರೀ ಶಂಕರನಾರಾಯಣ, ಮಾಂಡವಿ ಶ್ರೀ ಶಂಕರನಾರಾಯಣ, ಶ್ರೀ ಕ್ರೋಢ ಶಂಕರನಾರಾಯಣ, ಶ್ರೀ ಹೊಳೆ ಶಂಕರನಾರಾಯಣ ದೇವಾಲಯಗಳು, ಆಜ್ರಿ ಶ್ರೀ ತ್ರೈಂಬಕೇಶ್ವರ ದೇವಾಲಯ, ಬೈಂದೂರು…
