Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬೈಂದೂರು ವಿಧಾನಸಭಾ ಕ್ಷೇತ್ರದ ವಿವಿಧ ಇಲಾಖೆಗಳ 430ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದರು. ಬೈಂದೂರು ಕ್ಷೇತ್ರದ ಶಾಸಕ ಕೆ. ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಯು.ಟಿ ಖಾದರ್, ಯುವಜನ ಕ್ರೀಡಾ ಸಬಲೀಕರಣ ಹಾಗೂ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಚಂದ್ರ ಶೆಟ್ಟಿ, ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಮೆಸ್ಕಾಂ ನಿರ್ದೇಶಕ ಸಂಪಿಗೇಡಿ ಸಂಜೀವ ಶೆಟ್ಟಿ, ಮೀನುಗಾರ ಮುಖಂಡ ಮದನ್ ಕುಮಾರ್ ಉಪ್ಪುಂದ, ಜಿಲ್ಲಾ ಕೆಡಿಪಿ ಸದಸ್ಯ ಎಸ್. ರಾಜು ಪೂಜಾರಿ ಸೇರಿದಂತೆ ಇನ್ನತರ ಗಣ್ಯರು ವೇದಿಕೆಯಲ್ಲಿದ್ದರು. ಶಾಸಕ ಕೆ. ಗೋಪಾಲ ಪೂಜಾರಿ ಅವರು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪತ್ರಕರ್ತ ಕೆ. ಸಿ ರಾಜೇಶ್ ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಭಗವಂತನನ್ನು ಅನನ್ಯ ಭಕ್ತಿಯಿಂದ ಸೇವೆ ಮಾಡಿದರೆ ಅವನು ನಮ್ಮ ಯೋಗ ಕ್ಷೇಮ ನೋಡಿಕೊಳ್ಳುತ್ತಾನೆ. ಜೀವನದಲ್ಲಿ ಯಶಸ್ಸು ಸಾಧಿಸಬೇಕಾದರೆ ದೇವರ ಅನುಗ್ರಹ ಮತ್ತು ಪ್ರಾಮಾಣಿಕ ಪ್ರಯತ್ನ ಎರಡೂ ಇರಬೇಕು. ಯೋಗ ಮತ್ತು ಕ್ಷೇಮ ನಮಗೆ ಎರಡು ಕಣ್ಣುಗಳಿದ್ದಂತೆ. ಯೋಗ ಕ್ಷೇಮ ಎರಡೂ ನಮಗೆ ದೊರೆತರೆ ನಮ್ಮ ಜೀವನ ಸಾರ್ಥಕವಾಗುತ್ತದೆ. ವಿದ್ಯಾರ್ಥಿಗಳಲ್ಲಿ ನೀತಿ, ನಿಯಮದ ಜೊತೆಗೆ ಆರೋಗ್ಯ ಕೂಡ ಉತ್ತಮವಾಗಬೇಕು. ಶ್ರೀ ದೇವರ ಅನುಗ್ರಹದಿಂದ ಕಳೆದ ೧೪ ವರ್ಷಗಳ ಹಿಂದೆ ಪ್ರಾರಂಭಿಸಿದ ಚಿಣ್ಣರ ಸಂತರ್ಪಣೆಯನ್ನು ಶ್ರೀ ಕೃಷ್ಣನ ಪ್ರಸಾದ ರೂಪದಲ್ಲಿ ಮಕ್ಕಳಿಗೆ ನೀಡುತ್ತಾ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿದೆ ೨೦೧೮ನೇ ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಪೀಠವನ್ನಲಂಕರಿಸಲಿರುವ ಶ್ರೀ ಪಲಿಮಾರು ಮಠಾಧೀಶ ಶ್ರೀಮದ್ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರು ಹೇಳಿದರು. ಪರ್ಯಾಯ ಪೂರ್ವ ಸಂಚಾರ ಪ್ರಯುಕ್ತ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಗೆ ಗುರುವಾರ ಭೇಟಿ ನೀಡಿದ ಅವರು ಆಶೀರ್ವಚನ ನೀಡಿ ಮಾತನಾಡಿದರು. ಗಂಗೊಳ್ಳಿಯ ಸರಸ್ವತಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ತಲ್ಲೂರು ರಾಷ್ಟೀಯ ಹೆದ್ದಾರಿ ೬೬ರಲ್ಲಿ ನಡೆದ ಖಾಸಗಿ ಬಸ್ ಹಾಗೂ ಬೈಕ್ ನಡುವಿನ ಅಪಘಾತದಲ್ಲಿ ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ಗುಲ್ವಾಡಿ ಕೌಜೂರು ನಿವಾಸಿ ರಾಘವೇಂದ್ರ ಆಚಾರ್ ಮೃತ ದುರ್ದೈವಿ. ಇಂದು ಬೆಳಿಗ್ಗೆ ರವೀಂದ್ರ ಆಚಾರ್ ಕೆಲಸಕ್ಕೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಖಾಸಗಿ ಬಸ್ ಢಿಕ್ಕಿಯಾಗಿತ್ತು. ಅಫಘಾತದ ರಭಸಕ್ಕೆ ಗಂಭೀರ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು. ಸ್ಥಳಕ್ಕೆ ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯ ಪಿಎಸ್‌ಐ ಸುಬ್ಬಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜಿ.ಎಸ್. ಆಚಾರ್ ಅವರಂತಹ ಧುರೀಣರ ಗರಡಿಯಲ್ಲಿ ಪಳಗಿ ರಾಜಕೀಯದ ಕ್ಷೇತ್ರದಲ್ಲಷ್ಟೇ ಅಲ್ಲದೇ, ಸಹಕಾರ ಕ್ಷೇತ್ರದಲ್ಲಿ ಎರಡು ದಶಕಗಳ ಕಾಲ ತೊಡಗಿಸಿಕೊಂಡು ವಿವಿಧ ಸಹಕಾರಿ ಸಂಘಗಳ ಬೆಳವಣಿಗೆ ನಿರಂತರವಾಗಿ ಶ್ರಮಿಸಿರುವ ಎಸ್. ರಾಜು ಪೂಜಾರಿ ಅವರಿಗೆ ರಾಜ್ಯದ ಉತ್ತಮ ಸಹಕಾರಿ ಪ್ರಶಸ್ತಿ ದೊರೆತಿರುವುದು ಅವರ ಕಾರ್ಯತತ್ಪರತೆಗೆ ದೊರೆತ ಪ್ರತಿಫಲ ಎಂದು ಬೈಂದೂರು ಕ್ಷೇತ್ರದ ಶಾಸಕ ಕೆ. ಗೋಪಾಲ ಪೂಜಾರಿ ಅವರು ಹೇಳಿದರು. ಅವರು ಇಲ್ಲಿನ ಹಳ್ಳಿಹೊಸೂರು ಶಾಲಾ ಆವರಣದಲ್ಲಿ ಇತ್ತಿಚಿಗೆ ಚಂದನ ಹಾಲಂಬೇರು ಮೂಡನಗದ್ದೆ ಭಾಗದ ನಾಗರಿಕರು ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ರಾಜ್ಯ ಉತ್ತಮ ಸಹಕಾರಿ ಪ್ರಶಸ್ತಿ ಪುರಸ್ಕೃತ ಸಹಕಾರಿ ಧುರೀಣ ಎಸ್. ರಾಜು ಪೂಜಾರಿ ಹಾಗೂ ರತಿ ರಾಜು ಪೂಜಾರಿ ದಂಪತಿಯನ್ನು ಅಭಿನಂದಿಸಿ ಬಳಿಕ ಮಾತನಾಡಿದರು. ಸಾಮಾಜಿಕ ರಂಗಕ್ಕೆ ಪಾದಾರ್ಪಣೆ ಮಾಡಿದ ಬಳಿಕ ಏಳು ಬೀಳುಗಳು ಸಾಮಾನ್ಯ. ಆದರೆ ಎಂಥಹ ಸಂದರ್ಭದಲ್ಲಿಯೂ ಜನಸಾಮಾನ್ಯರೊಂದಿಗೆ ಬೆರೆತು ಅವರ ಕಷ್ಟ ಸುಖಗಳಿಗೆ ಸ್ಪಂದಿಸುವವರು ನಿಜವಾದ ಜನನಾಯಕರೆನಿಸಿಕೊಳ್ಳುತ್ತಾರೆ ಎಂದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಾಜ್ಯದಲ್ಲಿ ಕಾಂಗ್ರೇಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಹಿಂದೂಗಳ ಮಾರಣ ಹೋಮ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಮುಂದಿನ ದಿನಗಳಲ್ಲಿ ಜನರೆ ಕಾಂಗ್ರೇಸ್ ಪಕ್ಷಕ್ಕೆ ಸರಿಯಾದ ಪಾಠ ಕಲಿಸುತ್ತಾರೆ ಎಂದು ಬೈಂದೂರು ಬಿಜೆಪಿ ಮುಖಂಡ ದೀಪಕ್ ಕುಮಾರ್ ಶೆಟ್ಟಿ ಹೇಳಿದರು. ಅವರು ಮಂಗಳೂರಿನ ಕಾಟಿಪಳದಲ್ಲಿ ಹತ್ಯೆಯಾದ ದೀಪಕ್ ರಾವ್ ಕೊಲೆ ಖಂಡಿಸಿ ಬೈಂದೂರು ಮಂಡಲ ಬಿಜೆಪಿ ಹಾಗೂ ಹಿಂದೂ ಸಂಘಟನೆಯ ನೇತೃತ್ವದಲ್ಲಿ ಬಂದೂರು ಬೈಪಾಸ್ ಬಳಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಜಿ.ಪಂ ಸದಸ್ಯರಾದ ಬಾಬು ಶೆಟ್ಟಿ ತಗ್ಗರ್ಸೆ, ಶಂಕರ ಪೂಜಾರಿ, ಸುರೇಶ್ ಬಟ್ವಾಡಿ, ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು, ಸುಖಾನಂದ ಶೆಟ್ಟಿ, ಸದಾಶಿವ ಡಿ. ಪಡುವರಿ, ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ ಉಪ್ಪುಂದ, ಪ್ರಧಾನ ಕಾರ್ಯದರ್ಶಿ ರವಿ ಗಾಣಿಗ ಕೆಂಚನೂರು, ಹಿಂದೂಳಿದ ಮೋರ್ಚಾದ ಅಧ್ಯಕ್ಷ ಗಣೇಶ ಪೂಜಾರಿ, ವಿಶ್ವ ಹಿಂದೂ ಪರಿಷತ್…

Read More

ಬೈಂದೂರು ಕ್ಷೆತ್ರದಲ್ಲಿ ಮುಖ್ಯಮಂತ್ರಿ ಸ್ವಾಗತಕ್ಕೆ ಭರದ ಸಿದ್ಧತೆ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ರಾಜ್ಯ ಸರಕಾರದ ಸಾಧನಾ ಸಮಾವೇಶದಲ್ಲಿ ಭಾಗವಹಿಸಲು ಜ.8ರ ಸೋಮವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆಗಮಿಸಲಿದ್ದು, ವಿವಿಧ ಇಲಾಖೆಗಳ 490.97 ಕೋಟಿ ರೂ. ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಬೈಂದೂರು ಕ್ಷೇತ್ರದ ಶಾಸಕ ಕೆ. ಗೋಪಾಲ ಪೂಜಾರಿ ಅವರು ಹೇಳಿದರು. ಬೈಂದೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಆಗಮನದ ಹಿನ್ನೆಲೆಯಲ್ಲಿ ಬೈಂದೂರು ಗಾಂಧಿ ಮೈದಾನದಲ್ಲಿ ಸರ್ವ ತಯಾರಿಗಳ ನಡೆಯುತ್ತಿದ್ದು ಅಂದು ಸುಮಾರು 35,000 ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಬೈಂದೂರು ಕ್ಷೇತ್ರದ ಕರಾವಳಿ ಭಾಗಕ್ಕೆ ಮೊದಲ ಭಾರಿಗೆ ಮುಖ್ಯಂತ್ರಿಗಳು ಆಗಮಿಸುತ್ತಿರುವುದರಿಂದ ಪಕ್ಷದ ಕಾರ್ಯಕರ್ತರು ಅವರನ್ನು ಅದ್ಧೂರಿಯಾಗಿ ಸ್ವಾಗತಿಸಿಕೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಮೂರು ಪ್ರಮುಖ ಬೇಡಿಕೆಗಳನ್ನು ಸಲ್ಲಿಸಲಾಗುತ್ತಿದೆ. ಸಾಲಮನ್ನಕ್ಕೆ ಪೂರ್ವಭಾವಿಯಾಗಿ ಪೂರ್ಣ ಸಾಲ ಕಟ್ಟಿದವರಿಗೆ ಸಾಲಮನ್ನ ಮಾಡಬೇಕು ಹಾಗೂ ಸ್ವಸಹಾಯ ಗುಂಪುಗಳಿಗೆ ನೀಡುತ್ತಿರುವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಕಳೆದ ನಾಲ್ಕೂವರೆ ವರ್ಷಗಳಿಂದ ನಿರಂತರವಾಗಿ ಶ್ರಮಿಸುತ್ತಿದ್ದು ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಫಲಾನುಭವಿಗಳಿಗೆ ಈವರೆಗೆ ಸುಮಾರು 2,000 ಕೋಟಿ ಅನುದಾನ ರಾಜ್ಯ ಸರಕಾರದಿಂದ ಬಿಡುಗಡೆಗೊಂಡಿದ್ದು, ಈ ಪೈಕಿ ಬಹುಪಾಲು ಕಾಮಗಾರಿಗಳು ಪೂರ್ಣಗೊಂಡಿವೆ, ಇನ್ನಿತರ ಕಾಮಗಾರಿಗಳು ಪ್ರಗತಿಯ ಹಂತದಲ್ಲಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ, ಕೆ.ಎಸ್.ಆರ್.ಟಿ.ಸಿ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಹೇಳಿದರು. ಬೈಂದೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ ಕ್ಷೇತ್ರದಲ್ಲಿ ನಡೆದ ಅಭಿವೃದ್ಧಿ ಕಾಮಗಾರಿಗಳ ಇಲಾಖಾವಾರು ವಿವರ ಬಿಡುಗಡೆ ಮಾಡಿದರು. ಲೋಕೋಪಯೋಗಿ ಇಲಾಖೆಯಿಂದ 178.22 ಕೋಟಿ, ಸಣ್ಣ ನೀರಾವರಿ ಇಲಾಖೆ 50.34 ಕೋಟಿ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಗ್ರಾಮೀಣಾಭಿವೃದ್ದಿ ಇಲಾಖೆ 45.11 ಕೋಟಿ, ವರಾಹಿ ನಿರಾವರಿ ನಿಗಮ 41.98 ಕೋಟಿ, ಕರಾವಳಿ ಪ್ರಾಧಿಕಾರ 1.45 ಕೋಟಿ, ಬಂದರು ಮತ್ತು ಮೀನುಗಾರಿಕಾ ಇಲಾಖೆ 241.45 ಕೋಟಿ, ಸಮಾಜ ಕಲ್ಯಾಣ ಇಲಾಖೆ 8.12 ಕೋಟಿ, ಸಮಗ್ರ ಗಿರಿಜನ ಅಭಿವೃದ್ದಿ ಇಲಾಖೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೇಂದ್ರ ಸರ್ಕಾರ ರಾಜ್ಯಕ್ಕೆ ಹಲವಾರು ಯೋಜನೆ, ಅನುದಾನ ನೀಡಿದ್ದರೂ ಸಂಬಂಧಪಟ್ಟ ಸಂಸದರು, ಕೇಂದ್ರ ಸರ್ಕಾರ ಅಧಿಕಾರಿಗಳ ಗಮನಕ್ಕೂ ತಾರದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಲಾನ್ಯಾಸ ಮಾಡುತ್ತಿದ್ದಾರೆ. ಕೇಂದ್ರದ ಯೋಜನೆಗಳ ಇಂಪ್ಲಿಮೆಂಟ್ ಮಾಡುವ ಕೆಲಸ ರಾಜ್ಯ ಸರ್ಕಾರ ಮಾಡದೆ, ತನ್ನದೇ ಯೋಜನೆ ಎಂದು ಪ್ರತಿಬಿಂಬಿಸುತ್ತಿದೆ. ಕೇಂದ್ರ ಸರ್ಕಾರದ ಅನುದಾನ, ಯೋಜನೆಗಳ ಕೂಸಿಗೆ ರಾಜ್ಯ ಸರ್ಕಾರ ನಾಮಕರಣ ಮಾಡುತ್ತಿದೆ ಎಂದು ಸಂಸದ ಬಿ.ಎಸ್.ಯಡಿಯೂರಪ್ಪ ಆಪ್ತ ಕಾರ‍್ಯದರ್ಶಿ ಪುರುಷೋತ್ತಮ ರಾಜ್ಯ ಸರ್ಕಾರದ ಕಾರ್ಯವೈಖರಿಯನ್ನು ತರಾಟೆಗೆ ತೆಗೆದುಕೊಂಡವರು. ಕುಂದಾಪುರದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಸದ ಬಿ. ಎಸ್. ಯಡಿಯೂರಪ್ಪ ಬೈಂದೂರು ಕ್ಷೇತ್ರ ಅಭಿವೃದ್ಧಿಗೆ ಸಾಕಷ್ಟು ಅನುದಾನ ತಂದಿದ್ದು, ಆ ಯೋಜನೆಗಳ ಶಿಲಾನ್ಯಾಸಕ್ಕೆ ಎಲ್ಲಾ ನಿಯಮ ಗಾಳಿಗೆ ತೂರಿ, ತಮ್ಮದೇ ಸಾಧನೆ ಎಂದು ಕಾಂಗ್ರೆಸ್ ಹೇಳಿಕೊಳ್ಳುತ್ತಿದ್ದು, ಇದು ಗೌರವ ತರುವ ಸಂಗತಿಯಲ್ಲ. ಕೇಂದ್ರ ಸರ್ಕಾರದಯೋಜನೆ ಹಾಗೂ ಅನುದಾನದ ಕಾರ‍್ಯಕ್ರಮಗಳಿಗೆ ಸಂದರನ್ನೂ ಕರೆಯುವ ಸೌಜನ್ಯ ತೋರಿಸಬೇಕು ಎಂದರು. ಕುಂದಾಪ್ರ ಡಾಟ್ ಕಾಂ ಸುದ್ದಿ. ಬಿ.ಎಸ್.ಯಡಿಯೂರಪ್ಪ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರ ೨೦೧೩ರ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದ ೧೬೫ ಆಶ್ವಾಸನೆಗಳಲ್ಲಿ ಸಂಪೂರ್ಣವಾಗಿ ೧೬೫ನ್ನು ಈಗಾಗಲೇ ಈಡೇರಿಸಿದೆ. ಮತ್ತು ಜನಪರವಾದ ಹಾಗೂ ಭ್ರಷ್ಟಾಚಾರ ರಹಿತವಾದ ಆಡಳಿತ ನೀಡಿದೆ. ಆ ಮೂಲಕ ಕರ್ನಾಟಕದಲ್ಲಿ ಮತ್ತೊಮ್ಮೆ ಸಿದ್ದಾರಾಮಯ್ಯನವರ ಸರಕಾರ ಅಧಿಕಾರಕ್ಕೆ ಬರುವುದು ಖಚಿತಗೊಂಡಿದೆ ಎಂದು ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ, ಕುಂದಾಪುರ ವಿಧಾನಸಭಾ ಕ್ಷೇತ್ರದ ’ಮನೆ ಮನೆಗೆ ಕಾಂಗ್ರೆಸ್’ ಉಸ್ತುವಾರಿ ಜಿ.ಎ.ಬಾವ ಹೇಳಿದ್ದಾರೆ. ಅವರು ಕುಂದಾಪುರ ಆರ್.ಎನ್.ಶೆಟ್ಟಿ ಸಭಾಂಗಣದಲ್ಲಿ ನಡೆದ ಪುರಸಭಾ ಮಟ್ಟದ ’ಮನೆ ಮನೆಗೆ ಕಾಂಗ್ರೆಸ್’ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಸದಾ ರೇಪ್, ಕೊಲೆ, ಲೂಟಿ, ಬ್ಲೂಫಿಲ್ಮ್, ಜೈಲುವಾಸ, ಭಿನ್ನಮತ, ಡಿನೋಡಿಫಿಕೇಶನ್, ರೆಸಾರ್ಟ್ ರಾಜಕಾರಣ ಮುಂತಾದ ಹಗರಣಗಳಲ್ಲೇ ಕಾಲ ಕಳೆದಿತ್ತು. ಆದರೆ ಸಿದ್ಧಾರಾಮಯ್ಯನವರ ಅಧಿಕಾರಾವಧಿಯಲ್ಲಿ ಕಾಂಗ್ರೆಸ್ ಸರಕಾರ ಅನ್ನಭಾಗ್ಯ, ಕೃಷಿಭಾಗ್ಯ, ಕ್ಷೀರಧಾರೆ, ಕ್ಷೀರಭಾಗ್ಯ, ಮೈತ್ರಿ, ವಿದ್ಯಾಸಿರಿ, ರಾಜೀವ್ ಆರೋಗ್ಯಭ್ಯಾಗ್ಯ, ಶುದ್ಧನೀರು, ಋಣಮುಕ್ತ, ವಸತಿಭಾಗ್ಯ, ಸೌರಭಾಗ್ಯ, ಶಾದಿಭಾಗ್ಯ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಭಾರತದಲ್ಲಿರುವ ಪ್ರಸಕ್ತ ಶಿಕ್ಷಣ ಪದ್ಧತಿಯೂ ಭಾರತೀಯ ಸಂಸ್ಕೃತಿ ಧಾರ್ಮಿಕತೆಯ ಬೆಳವಣಿಗೆಗೆ ಸ್ವಲ್ಪವೂ ಪೂರಕವಾಗಿಲ್ಲ. ಈ ಶಿಕ್ಷಣ ವಿದೇಶಿ ಶೂಟು ಬೂಟು ಸಂಸ್ಕೃತಿಯೊಂದಿಗೆ ಹಣ ಸಂಗ್ರಹಕ್ಕೆ ಮಾತ್ರ ಪೂರಕವಾಗಿದೆ ಅದಕ್ಕಾಗಿ ಭಾರತೀಯ ಶಿಕ್ಷಣ ಪದ್ಧತಿ ಆಮೂಲಾಗ್ರ ಬದಲಾವಣೆ ಆಗಬೇಕು. ಧಾರ್ಮಿಕ ಭೋದನೆಯ ಶಿಕ್ಷಣವನ್ನು ಶಿಕ್ಷಣ ಪದ್ಧತಿಯಲ್ಲಿ ಜೋಡಿಸುವ ಕಾರ್ಯ ಆಗಬೇಕು ಎಂದು ಹಾಲಾಡಿ ಪಂಚಾಂಗ ಕರ್ತು ವಿದ್ವಾನ್ ವಾಸುದೇವ ಜೋಯೀಸ್ ಹೇಳಿದರು, ನಾಗೂರು ಓಡೆಯರಮಠ ಗೋಪಾಲಕೃಷ್ಣ ಕಲಾಮಂದಿರದಲ್ಲಿ ಇತ್ತೀಚೆಗೆ ನಡೆದ ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ಉಪ್ಪುಂದ ವಲಯ ಇವರ ೨೩ನೇಯ ವಾರ್ಷಿಕ ಅಧಿವೇಶನದ ಸಮಾರೋಪ ಸಮಾರಂಭದಲ್ಲಿ ವಿಶೇಷ ಉಪನ್ಯಾಸ ನೀಡುತ್ತಾ ಪ್ರತಿ ಸಮಾಜಕ್ಕೂ ಸಂಘಟನೆಯ ಅಗತ್ಯವಿದೆ, ವ್ಯಕ್ತಿಗಳ ಮನಸ್ಸು ಮನಸ್ಸು ಒಂದಾಗಿ ಸಂಘಟನೆ ಮಾಡಬೇಕು, ಸಂಘಟನೆಯ ಸದುದ್ಧೇಶ, ಸತ್ಯ ಪ್ರಾಮಾಣೀಕತೆ ಜೊತೆಯಲ್ಲಿ ಧಾರ್ಮಿಕ ಶಿಕ್ಷಣ ನೋಡುವುದರೊಂದಿಗೆ ಪ್ರತಿ ಸಂಘಟನೆ ಯಶಸ್ವಿಯಾಗಲಿದೆ ಎಂದು ಹೇಳಿದರು. ಉಪ್ಪುಂದ ವಲಯದ ಅಧ್ಯಕ್ಷ ಮಂಜುನಾಥ ಉಡುಪ ಸಮಾರಂಭದ ಅರ್ಧಯಕ್ಷತೆ ವಹಿಸಿದ್ದರು.…

Read More