Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಕೊಲ್ಲೂರಿನ ಜನತೆಯ ಸಂಘಟಿತ ಒಗ್ಗೂಡುವಿಕೆಯಿಂದ ಕೊಲ್ಲೂರು ಅಷ್ಟಪವಿತ್ರ ನಾಗಮಂಡಲೋತ್ಸವ ಅತ್ಯಂತ ಯಶಸ್ವಿಯಾಗಿ ಜರಗಿದೆ. ರಮೇಶ ಗಾಣಿಗರ ಸಾರ್ವಜನಿಕ ಸೇವೆಯ ಪ್ರತಿರೂಪವಾಗಿ ಈ ನಾಗಮಂಡಲೋತ್ಸವ ಅದ್ದೂರಿಯಾಗಿ, ನಿರ್ವಿಘ್ನವಾಗಿ ಯಶಸ್ಸುಗೊಂಡಿದೆ. ಇದರ ಯಶಸ್ಸಿನಿಂದ ಕೊಲ್ಲೂರು ಅಭಿವೃದ್ಧಿಗೆ, ಕೊಲ್ಲೂರಿನಲ್ಲಿ ಜನತೆಯ ಒಗ್ಗಟ್ಟಿಗೆ ಇದು ದಿಕ್ಸೂಚಿಯಾಗಲಿ ಎಂದು ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಹೇಳಿದರು. ಕೊಲ್ಲೂರು ಶ್ರೀಮತಿ ನಯನಾ ರಮೇಶ ಗಾಣಿಗ ಮತ್ತು ಮಕ್ಕಳು ನಂಬಿರುವ ಮೂಲ ನಾಗಬನದಲ್ಲಿ ಮಾ.೧೦ರಂದು ನಡೆದ ಅಷ್ಟಪವಿತ್ರ ನಾಗಮಂಡಲದ ಯಶಸ್ಸಿಗೆ ದುಡಿದ ಸ್ವಯಂಸೇವಕರ ’ಉಪಕಾರ ಸ್ಮರಣೆ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಷ್ಟಪವಿತ್ರ ನಾಗಮಂಡಲದ ಯಶಸ್ಸಿಗೆ ದುಡಿದ ಸಾವಿರಾರು ಸ್ವಯಂಸೇವಕರ ಸೇವೆಯನ್ನು ಸ್ಮರಿಸಿ ಕೃತಜ್ಞತೆ ಸಲ್ಲಿಸಲಾಯಿತು. ಎಲ್ಲ ಸ್ವಯಂಸೇವಕರ ಪರವಾಗಿ ಕೃತಜ್ಞತಾ ಪತ್ರವನ್ನು ಕೊಲ್ಲೂರು ಗ್ರಾಮ ಪಂಚಾಯತ್‌ಗೆ ಹಸ್ತಾಂತರಿಸಲಾಯಿತು. ಸಭೆಯಲ್ಲಿ ಶುಭಶಂಸನೆಗೈದ ವೇ.ಮೂ.ಕೃಷ್ಣ ಭಟ್ ನೂಜಾಡಿ, ಇಂಥಹ ಮಹತ್ಕಾರ್ಯದಲ್ಲಿ ಪಾಲ್ಗೊಳ್ಳಲು ಯೋಗ ಬೇಕು. ನಾನು ಈ ಬಾರಿ ಮೂರು ನಾಗಮಂಡಲ ಪೌರೋಹಿತ್ಯ ಮಾಡಿದ್ದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧನೆಗೈದ ಹೆಗ್ಗಳಿಕೆ ಉಡುಪಿ ಜಿಲ್ಲೆಗಿದೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವ ಮೂಲಕ ಉತ್ತಮ ಫಲಿತಾಂಶ ಪಡೆಯುವಲ್ಲಿ ನಮ್ಮ ಶಿಕ್ಷಕರ ಶ್ರಮ ಶ್ಲಾಘನೀಯವಾದುದು. ಈ ಭಾರಿಯು ಉಡುಪಿ ಜಿಲ್ಲೆಯ ವಿದಾರ್ಥಿಗಳು ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಲಿದ್ದಾರೆ ಎಂದು ಬೈಂದೂರು ಕ್ಷೇತ್ರದ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯನ್ನು ಲೋಪಾರ್ಪಣೆಗೊಳಿಸಿದ ಬಳಿಕ ಮಾತನಾಡಿ ಶಿಕ್ಷಣಾಧಿಕಾರಿಗಳ ಕಛೇರಿಯ ಮೂಲಕ ಶಿಕ್ಷಕರಿಗೆ ಸರಕಾರದಿಂದ ಆಗಬೇಕಾದ ಕೆಲಸವನ್ನು ತ್ವರಿತ ಗತಿಯಲ್ಲಿ ಮಾಡಿಕೊಡುವ ಕೆಲಸವಾಗಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ರೂಪಿಸುವ ಶಿಕ್ಷಕರಿಗೆ ಉತ್ತಮ ಸವಲತ್ತು ಸೌಲಭ್ಯ ಸಿಗುವಂತಾಗಬೇಕು. ಬೈಂದೂರಿನಲ್ಲಿ ಗುರುಭವನ ನಿರ್ಮಾಣದ ಮನವಿಯನ್ನು ಪುನರ್‌ಪರಿಶೀಲಿಸಿ ಶೀಘ್ರವೇ ಜಾಗ ಗುರುತಿಸುವ ಪ್ರಕ್ರಿಯೆ ನಡೆಸಲಾಗುವುದು ಎಂದರು. ಬೈಂದೂರು ತಾಲೂಕು ರಚನೆಗೆ ಪೂರಕವಾಗಿ ಇನ್ನು ಇಪ್ಪತ್ತು ಸರಕಾರಿ ಕಛೇರಿಗಳು ಬೈಂದೂರು ಭಾಗದಲ್ಲಿ ಆಗಬೇಕಾಗಿದೆ. ಎಪ್ರಿಲ್ ಅಂತ್ಯದೊಳಗೆ ಎಲ್ಲಾ ಸರಕಾರಿ ಕಛೇರಿಗಳು ಬೈಂದೂರು ತಾಲೂಕಿನಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಗ್ರಾಮದ ಸಮಸ್ಯೆಗಳ ನಿವಾರಣೆ, ಮೂಲ ಸೌಕರ್ಯಗಳನ್ನು ಒದಗಿಸುವಂತೆ ಒಂದಷ್ಟು ಚರ್ಚೆಗಳು, ಬೇಡಿಕೆಗಳು ಶುಕ್ರವಾರ ಗುಜ್ಜಾಡಿಯ ರಾಮಮಂದಿರದಲ್ಲಿ ನಡೆದ ಗುಜ್ಜಾಡಿ ಗ್ರಾ.ಪಂ.ನ 2ನೇ ಸುತ್ತಿನ ಗ್ರಾಮಸಭೆಯಲ್ಲಿ ಕೇಳಿಬಂದವು. ಗ್ರಾ.ಪಂ. ಅಧ್ಯಕ್ಷ ಹರೀಶ್‌ ಮೇಸ್ತ ಅವರ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮಸಭೆಯಲ್ಲಿ ಗ್ರಾಮಸ್ಥರು ತಮ್ಮ ಗ್ರಾಮದ ಕೆಲವು ನ್ಯೂನತೆಗಳು ಹಾಗೂ ಸಮಸ್ಯೆಗಳನ್ನು ನಿವಾರಿಸಲು ಬೇಡಿಕೆಗಳನ್ನು ಇಟ್ಟರು. ಕಳೆದ ಹಲವಾರು ಸಭೆಗಳಲ್ಲಿ ಅಧಿಕಾರಿಗಳ ಗೈರು ಹಾಜರಿಯನ್ನು ಕಂಡಿದ್ದ ಈ ಗ್ರಾಮಸಭೆಯಲ್ಲಿ ಇಂದು ಹೆಚ್ಚಿನ ಅಧಿಕಾರಿಗಳು ಭಾಗವಹಿಸಿದ್ದರು. ಗುಜ್ಜಾಡಿಯಲ್ಲಿ ಶ್ಮಶಾನ ನಿರ್ಮಾಣವಾಗಬೇಕು ಎಂದು ಗ್ರಾಮಸ್ಥರೊಬ್ಬರು ಬೇಡಿಕೆಯನ್ನಿಟ್ಟರು. ಜನತಾ ಕಾಲನಿಯ ನಿವಾಸಿಗಳ ಕುಡಿಯುವ ನೀರಿಗಾಗಿ ನಿರ್ಮಿಸಲಾಗಿದ್ದ ಬಾವಿಯಿಂದ ಇತರ‌ರು ವಾಣಿಜ್ಯ ಕೆಲಸಗಳಿಗೆ ಉಪಯೋಗಿಸಲು ಕೊಂಡೊಯ್ಯುವು ದರಲ್ಲಿ ಪರಿಸರವನ್ನು ಗಲೀಜು ಮಾಡಲಾಗುತ್ತಿದೆ ಎಂದು ಗ್ರಾಮಸ್ಥರು ಆಗ್ರಹಿಸಿದರು. ನಾಯಕವಾಡಿ -ಗುಜ್ಜಾಡಿ ರಾಮಂದಿರದ ರಸ್ತೆಯಲ್ಲಿ ಅಪಘಾತ ವಲಯದಲ್ಲಿ ದಾರಿದೀಪ ಅಳವಡಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು. ಈ ಸಂದರ್ಭ ಮಾತನಾಡಿದ ಜಿ.ಪಂ. ಸದಸ್ಯೆ ಶೋಭಾ ಜಿ. ಪುತ್ರನ್‌ ಅವರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸರಕಾರಿ ನಿವೇಶನ ಸ್ಥಳ ಜನತಾ ಕಾಲೋನಿಯಲ್ಲಿ ಭೂಮಿ ಪಡೆದುಕೊಂಡು ಇನ್ನು ಮನೆ ಕಟ್ಟದೆ ಸ್ಥಳ ಖಾಲಿ ಬಿಟ್ಟು ಅಥವಾ ಇತರರಿಗೆ ವಹಿಸಿಕೊಟ್ಟ ಪ್ರಕರಣ ಇದೆ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ಪರಿಶೀಲನೆ ನಡೆಸಿ ವಾಸ ಇರುವವರಿಗೆ ಭೂಮಿಯನ್ನು ಹಸ್ತಾಂತರಿಸಲು ಕ್ರಮವಹಿಸಬೇಕು. ಭೂಮಿ ನೀಡಿದ ಎರಡು ವರ್ಷದೊಳಗೆ ಮನೆ ಕಟ್ಟಿಕೊಳ್ಳಬೇಕು ಎಂಬ ಷರತ್ತು ಇದೆ. ಅದನ್ನು ಮೀರಿ ಇತರರಿಗೆ ವಹಿಸಿಕೊಟ್ಟಿಲ್ಲ. ಅವರಿಗೆ ಹಸ್ತಾಂತರಿಸಬೇಕು ಎಂದು ಶಿರೂರಿನ ನಿವೇಶನ ರಹಿತರ ಹೋರಾಟ ಸಮಿತಿಯ ಮುಖಂಡ ಶೋಯೆಬ್ ಅರೆಹೊಳೆ ಹೇಳಿದರು.  ಶಿರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವೇಶನ ರಹಿತ ಹಾಗೂ 94ಸಿ ಅರ್ಜಿದಾರರ ಬೃಹತ್ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕೋಣಿ ಮಾತನಾಡುತ್ತಾ ಶಿರೂರು ಗ್ರಾಮದ ಮೊದೀನತಾರ ಮತ್ತು ನ್ಯೂಕಾಲಿನಿಯಲ್ಲಿ ಸರಕಾರಿ ಜಾಗದ ನಿವಾಸಿಗಳಿಗೆ ಹಕ್ಕು ಪತ್ರ ಮಂಜೂರು ಮಾಡಬೇಕು ಎಂದು ಸರಕಾರವನ್ನು ಆಗ್ರಹಿಸಿದರು. ಏಪ್ರಿಲ್ 18 ರಂದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸೌಹಾರ್ದ ಸಹಕಾರಿಗಳ ಅಭಿವೃದ್ಧಿಗೆ ಪೂರಕವಾಗುವ ಹಾಗೂ ಪ್ರತಿನಿಧಿಗಳ ದಕ್ಷತೆ ಹೆಚ್ಚಿಸುವ, ಸೌಹಾರ್ದ ಸಹಕಾರಿಗಳಲ್ಲಿ ವೃತ್ತಿಪರತೆ, ಶಾಖಾವಾರು ಲಾಭದಾಯಕವಾಗಿ ಕಾರ್ಯನಿರ್ವಹಣೆ, ಬದಲಾಗುತ್ತಿರುವ ಜಗತ್ತಿನಲ್ಲಿ ನಗದು ರಹಿತ ವ್ಯವಹಾರದ ತಂತ್ರಜ್ಞಾನದ ತಿಳುವಳಿಕೆಯ ಕೌಶಲ್ಯ ವೃದ್ಧಿ ವಿಷಯಗಳ ಕುರಿತಾದ ಕಾರ್ಯಾಗಾರವು ಅತ್ಯವಶ್ಯಕವಾಗಿದೆ ಎಂದು ಸಹಕಾರಿ ಧುರೀಣ ರಾಜು ಪೂಜಾರಿ ಹೇಳಿದರು. ಅವರು ಕುಂದಾಪುರ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಲಿ. ಕಚೇರಿಯಲ್ಲಿ ನಡೆದ ಜಿಲ್ಲಾ ಸೌಹಾರ್ದ ಸಹಕಾರಿಗಳ ತರಬೇತಿ ಕಾರ್ಯಗಾರದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸೌಹಾರ್ದ ಸಮಯುಕ್ತ ಸಹಕಾರಿ ನಿ. ಬೆಂಗಳೂರಿನ ನಿರ್ದೇಶಕ ಬಿ. ಭಾಸ್ಕರ ಕಾಮತ್, ಸಂಪನ್ಮೂಲ ವ್ಯಕ್ತಿ, ಶಿವಮೊಗ್ಗದ ಸನ್ಮತಿ ಪ್ರತಿಷ್ಠಾನದ ಬಿ. ಎ. ಮಹದೇವಪ್ಪ, ಗಂಗೊಳ್ಳಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಆನಂದ ಬಿಲ್ಲವ, ಕುಂದಾಪುರ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ (ನಿ)ಯ ಉಪಾಧ್ಯಕ್ಷ ಸುಧಾಕರ ಖಾರ್ವಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಇನ್ನಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ನಮ್ಮ ದೇಶದಲ್ಲಿ ನಾವು ಸುರಕ್ಷಿತವಾಗಿವಾಗಿರಬೇಕಿದ್ದರೆ ನಮ್ಮ ದೇಶದ ಗಡಿಯನ್ನು ಕಾಯುತ್ತಿರುವ ಯೋಧರು ಮುಖ್ಯ ಕಾರಣ. ಕೊರೆವ ಚಳಿ, ಮೈಸುಡುವ ಬಿಸಿಲನ್ನು ಲೆಕ್ಕಿಸದೆ ದೇಶದ ಗಡಿಯಲ್ಲಿ ನಿಂತು ತಮ್ಮ ಕರ್ತವ್ಯವನ್ನು ನಿಭಾಯಿಸುತ್ತಿರುವ ಯೋಧರನ್ನು ನಾವು ಪ್ರತಿನಿತ್ಯ ಸ್ಮರಿಸಿಕೊಳ್ಳಬೇಕು. ದೇಶದ ಆಂತರಿಕ ಹಾಗೂ ಹೊರಗಿನ ದೇಶವಿರೋಧಿ ಶಕ್ತಿಯನ್ನು ದಮನಿಸುತ್ತಾ ದೇಶವನ್ನು ಕಾಯುವ ನಮ್ಮ ದೇಶದ ಯೋಧರ ಕಾರ್ಯ ಪ್ರಶಂಸನೀಯ. ಇತ್ತೀಚಿಗೆ ಭಯೋತ್ಪಾದನಾ ದಾಳಿಯಲ್ಲಿ ಹುತಾತ್ಮರಾದ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಅವರ ದೇಶ ಸೇವೆಯನ್ನು ಇಡೀ ವಿಶ್ವವೇ ಕೊಂಡಾಡುತ್ತಿದೆ ಎಂದು ಉಡುಪಿ ಜಿಲ್ಲಾ ಹಿಂದು ಜಾಗರಣ ವೇದಿಕೆ ಸಂಚಾಲಕ ಅರವಿಂದ ಕೋಟೇಶ್ವರ ಹೇಳಿದರು. ಅವರು ಗಂಗೊಳ್ಳಿಯ ಸ್ಫೂರ್ತಿ ಮಹಿಳಾ ಘಟಕದ ಆಶ್ರಯದಲ್ಲಿ ಗಂಗೊಳ್ಳಿ ದೊಡ್ಡಹಿತ್ಲು ವಠಾರದಲ್ಲಿ ಜರಗಿದ ಸಂದೀಪ್ ಉನ್ನಿಕೃಷ್ಣನ್ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದರು. ಭಾರತೀಯ ಸಂಸ್ಕೃತಿ ಸಂಸ್ಕಾರವನ್ನು ಉಳಿಸಲು ಮಾತೆಯರು ಮುಂದಾಗಬೇಕು. ಹೆಣ್ಣು ಮಕ್ಕಳಿಗೆ ಬಾಲ್ಯದಲ್ಲಿ ನಮ್ಮ ಹಿಂದು ಸಂಸ್ಕೃತಿ, ಆಚಾರ ವಿಚಾರಗಳನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಲಿಯುಗದಲ್ಲಿ ಭಜನೆಗೆ ಬಹಳ ಮಹತ್ವವಿದೆ. ಭಜನೆ,ಸಂಕೀರ್ತನೆ ದೇವರ ಸೇವೆಯ ಒಂದು ಭಾಗ.ಕನ್ನಡದ ದಾಸರ ಪದಗಳು ಅರ್ಥಗರ್ಭಿತವಾಗಿದ್ದು ಆಡು ಬಾಷೆಯ ಮಾದರಿಯಲ್ಲಿ ಸರ್ವರಿಗೂ ಅರ್ಥವಾಗುವ ರೀತಿಯಲ್ಲಿ ಸರಳವಾಗಿ ರಚಿಸಲಾಗಿದೆ. ವೇದಗಳಲ್ಲಿ ಉಲ್ಲೇಖವಾಗಿರುವ ಜೀವನ ಸಂದೇಶವನ್ನು ಈ ಪದ್ಯಗಳಲ್ಲಿ ಕಾಣಬಹುದು. ಇಂತಹ ಭಜನೆಗಳನ್ನು ಹಾಡುವುದರಿಂದ ದೇವರ ಸೇವೆಯ ಜೊತೆಯಲ್ಲಿ ಜೀವನ ಪಾವನವಾಗುತ್ತದೆ, ಇದರಲ್ಲಿ ಬಣ್ಣಿಸಿರುವ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕಾಶೀ ಮಠಾಧೀಶರಾದ ಪರಮಪೂಜ್ಯ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ತೆಕ್ಕಟ್ಟೆಯಲ್ಲಿ ಶ್ರೀ ಸುಧೀಂದ್ರ ಸಭಾಭವನ ಮತ್ತು ಶ್ರೀ ಸುಧೀಂದ್ರ ತೀರ್ಥ ಭಜನಾ ಮಂದಿರವನ್ನು ಉದ್ಘಾಟಿಸಿ ಆಶೀರ್ವಚಿಸಿದರು. ದಾಸರ ಭಜನೆಯಲ್ಲಿ ತಿಳಿಸಿದಂತೆ ಮಾನವರು ಅಹಂಕಾರವನ್ನು ತೊಡೆದು ಹಾಕಬೇಕು. ಇಲ್ಲವಾದಲ್ಲಿ ಸರ್ವನಾಶಕ್ಕೆ ನಾಂದಿಯಾಗುತ್ತದೆ. ಇಂದಿನ ಕಾಲಘಟ್ಟದಲ್ಲಿ ಜೀವನೋಪಾಯ ಅತ್ಯಂತ ಜಟಿಲವಾಗಿದೆ. ಇಂತಹ ಸಮಯದಲ್ಲಿ ಸಮಾಜ ಬಾಂಧವರು ಭಜನೆಯ ಮೂಲಕ ನೆಮ್ಮದಿಯನ್ನು ಕಂಡುಕೊಳ್ಳಬೇಕು ಎಂದರು. ಇದಕ್ಕೂ ಮೊದಲು ಸ್ವಾಮೀಜಿಯವರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು. ಮುಂದೆ ಪುರಮೆರವಣಿಗೆಯ ಮೂಲಕ ಮಂದಿರದಲ್ಲಿ ಸ್ಥಾಪಿಸಲಿರುವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಲಾಲ ಸಮುದಾಯ ಈ ನೆಲದ ನಾಗರಿಕತೆಯ ಹುಟ್ಟಿನೊಂದಿಗೆ ಜನ್ಮ ತಾಳಿದ ಶ್ರೇಷ್ಠ ಸಮುದಾಯ. ಕುಂಬಾರ, ಮೂಲ್ಯ, ಹಾಂಡ, ಗುನುಗ ಹೀಗೆ ಬೇರೆ ಬೇರೆ ಹೆಸರುಗಳಿಂದ ಈ ನಾಡಿನ ಮೂಲೆ ಮೂಲೆಯಲ್ಲೂ ಸಾಕಷ್ಟು ಸಂಖ್ಯೆಯಲ್ಲಿರುವ ಕುಂಬಾರ ಸಮುದಾಯ ಇಂದು ಬಲಿಷ್ಠ ಸಂಘಟನೆಯಲ್ಲಿ ಒಗ್ಗೂಡುತ್ತಿವೆ. ಈ ಕುಂಬಾರ ಸಮುದಾಯಕ್ಕೆ ಮುಂಬರುವ ಚುನಾವಣೆಯಲ್ಲಿ ರಾಜಕೀಯ ಸ್ಥಾನಮಾನ ಕೊಡುವ ಕೆಲಸವನ್ನು ಎಲ್ಲ ರಾಜಕೀಯ ಪಕ್ಷಗಳು ಮಾಡಬೇಕು ಎಂದು ಕರಾವಳಿ ಕುಲಾಲಧಿ ಕುಂಬಾರರ ಯುವ ವೇದಿಕೆಯ ಸ್ಥಾಪಕಾಧ್ಯಕ್ಷ ಡಾ| ಅಣ್ಣಯ್ಯ ಕುಲಾಲ್‌ ಅವರು ಹೇಳಿದರು. ಅವರು ಕರಾವಳಿ ಕುಲಾಲ ಕುಂಬಾರರ ಯುವ ವೇದಿಕೆ ಕುಂದಾಪುರ ಕುಂಬಾರರ ಯುವ ವೇದಿಕೆ ಹೆಂಗವಳ್ಳಿ ಘಟಕದ ಉದ್ಘಾಟನಾ ಸಮಾರಂಭದಲ್ಲಿ ದಿಕ್ಸೂಚಿ ಭಾಷಣ ಮಾಡಿ ಅಭಿಮತ ವ್ಯಕ್ತಪಡಿಸಿದರು. ಕುಂಬಾರ ಸಮುದಾಯದ ಸಂಘಟನೆಗೆ ಕರಾವಳಿ ಕುಲಾಲ ಕುಂಬಾರ ಯುವ ವೇದಿಕೆ ರಾಜ್ಯಕ್ಕೆ ಮಾದರಿಯಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳು ಮುಂಚೂಣಿಯಲ್ಲಿವೆ. ಕುಂದಾಪುರ, ಕಾರ್ಕಳ, ಕಾಪು, ಸುರತ್ಕಲ್‌, ಕುಳಾಯಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಾರಾಹಿ ಎಡದಂಡೆ ಕಾಲುವೆಯಲ್ಲಿ ನೀರಿನ ಒತ್ತಡ ಹೆಚ್ಚಿದ ಕಾರಣ ಎಡದಂಡೆಯ 26ನೇ ಕಿಲೋ ಮೀಟರ್‌ನಲ್ಲಿ ಕೊಯ್ಕಡಿ ಕೆಳಹೆಬ್ಟಾಗಿಲು ಎಂಬಲ್ಲಿ ನಾಲೆಯ ಕೆಳಭಾಗದ ಟರ್ಫ್‌ ಒಡೆದು ನೂರಾರು ಎಕರೆ ಕೃಷಿ ಭೂಮಿಗೆ ನೀರು ನುಗ್ಗಿದೆ. ಈ ಪ್ರದೇಶದಲ್ಲಿ ಕಾಲುವೆಯಲ್ಲಿ ನೀರಿನ ಹರಿವು ಹೆಚ್ಚಾಗಿರುವುದರಿಂದ ಕಾಲುವೆ ಅಡಿಭಾಗ ಕುಸಿಯಿತು. ರಭಸದಿಂದ ಹರಿಯುತ್ತಿದ್ದ ನೀರು ಕಾಲುವೆಯ ಅಡಿಯಿಂದ ತಿರುವು ಪಡೆದು ಸಮೀಪದ ನೈಸರ್ಗಿಕ ತೋಡುಗಳ ಮೂಲಕ ಹರಿದು ಕೃಷಿಭೂಮಿಗೆ ನುಗ್ಗಿದೆ. ಪರಿಸರದ ನೂರಾರು ಎಕರೆ ಪ್ರದೇಶದ ಜಮೀನುಗಳಲ್ಲಿ ಅಪಾರ ಪ್ರಮಾಣದಲ್ಲಿ ನೀರು ತುಂಬಿ ನಿಂತಿದೆ. ಕೆಳಹೆಬ್ಟಾಗಿಲು ಮನೆಯ ಕೊಯ್ಕಡಿ ಬೇಬಿ ಶೆಟ್ಟಿ ಅವರ ಮನೆಗೂ ನೀರು ನುಗ್ಗಿದೆ. ಕಳೆದ ನಾಲ್ಕು ದಿನಗಳಿಂದ ಸಣ್ಣ ಪ್ರಮಾಣದಲ್ಲಿ ನೀರು ಹರಿಯುತ್ತಿರುವ ಬಗ್ಗೆ ವಾರಾಹಿ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಇದುವರೆಗೆ ಯಾವುದೇ ಅಧಿಕಾರಿಗಳು ಸ್ಥಳಕ್ಕೆ ಬಂದಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಮೊಳಹಳ್ಳಿ ಗ್ರಾಮ ಪಂಚಾಯತ್‌ ಅಧ್ಯಕ್ಷ ಉದಯ ಕುಲಾಲ್‌, ಜಿಲ್ಲಾ ಪಂಚಾಯತ್‌…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡಬಿದಿರೆ: ಆಳ್ವಾಸ್ ಸ್ನಾತ್ತಕೋತ್ತರ ಪತ್ರಿಕೋದ್ಯಮ ವಿಭಾಗದ ಅಂತಿಮ ಎಂಸಿಜೆ ವಿದ್ಯಾರ್ಥಿನಿ ಶ್ರೀಗೌರಿ ಎಸ್ ಜೋಶಿ ‘ಯುವ ಚೇತನಾ ಪ್ರಶಸ್ತಿ-2017’ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಬೆಂಗಳೂರು ಮೂಲದ ‘ಯೂತ್ ಫಾರ್ ಸೇವಾ’ ಎನ್.ಜಿ.ಓ ಸಂಘಟನೆ ‘ಬದಲಾವಣೆಯ ಸೈನಿಕರು’ ಎಂಬ ಧ್ಯೇಯ ವಾಕ್ಯದಡಿಯಲ್ಲಿ ಸ್ಪರ್ಧೆಯನ್ನು ಏರ್ಪಡಿಸಿತ್ತು. ಧನಾತ್ಮಕ ಪತ್ರಿಕೋದ್ಯಮ, ಪರಿಣಾಮಕಾರಿ ಬರಹ, ಕ್ರಿಯಾತ್ಮಕ ಬರಹ ವಿಭಾಗದಲ್ಲಿ ನಡೆದ ವಿವಿಧ ಸ್ಪರ್ಧೆಯಲ್ಲಿ, ಧನಾತ್ಮಕ ಪತ್ರಿಕೋದ್ಯಮ ವಿಭಾಗದಿಂದ ಇವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮೊದಲ ಹಂತದ ದೂರವಾಣಿ ಸಂದರ್ಶನದ ನಂತರ ಮುಖಾಮುಖಿ ಸಂದರ್ಶನ ಹಾಗೂ ಸ್ಕೈಪ್ ಸಂದರ್ಶನದ ಸಾಮಾರ್ಥ್ಯದ ಆಧಾರದ ಮೇಲೆ  ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಫ್ರಶಸ್ತಿಗೆ ದಕ್ಷಿಣ ಭಾರತದಿಂದ 30 ವಿದ್ಯಾರ್ಥಿಗಳನ್ನು ಆಯ್ಕೆಮಾಡಲಾಗಿದ್ದು, ಕೊನೆಯ ಹಂತದ ಪರೀಕ್ಷೆಯಲ್ಲಿ ತೇರ್ಗಡೆಯಾದವರು ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮಾರ್ಚ 26ರಂದು ನವದೆಹಲಿಯಲ್ಲಿ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುವುದು. ಶ್ರೀಗೌರಿ ಅವರನ್ನು ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ, ಟ್ರಸ್ಟಿ ವಿವೇಕ್ ಆಳ್ವ, ವಿಭಾಗದ ಮುಖ್ಯಸ್ಥೆ ಡಾ…

Read More