ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಾಂಸ್ಕೃತಿಕ ಶೈಕ್ಷಣಿಕವಾಗಿ ಹಾಗೂ ಹಲವಾರು ಕಾರ್ಯಕ್ರಮವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳುವ ಮೂಲಕ ರಾಜ್ಯ ಯುವ ಪ್ರಶಸ್ತಿಯನ್ನು ಪಡೆದ ಹೆಮ್ಮೆಯ ಸಂಸ್ಥೆಯಾಗಿ ಮೂಡಿ ಬಂದಿದೆ ಎಂದು ಇಂಜಿನಿಯರ್ ಕೆ.ರವೀಂದ್ರ ಕಾವೇರಿ ಹೇಳಿದರು. ಅವರು ಶ್ರೀ ಮೈಲಾರೇಶ್ವರ ಯುವಕ ಮಂಡಲ (ರಿ) ಇದರ 40 ರ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಬೈಂದೂರು ಉದ್ಯಮಿ ಬಿ.ವೆಂಕಟರಮಣ ಬಿಜೂರು, ಕೋಟೇಶ್ವರ ಶ್ರೀ ರಾಮಕ್ಷತ್ರೀಯ ಕ್ಷೇತ್ರ ಸಮಿತಿಯ ಮಾಜಿ ಅಧ್ಯಕ್ಷರಾದ ವಿಶ್ವನಾಥ ಬರಗೆರೆ, ಕೊಲ್ಲುರು ಉದ್ಯಮಿ ಮಂಜುನಾಥ ಶೇರೆಗಾರ, ಗುತ್ತಿಗೆದಾರರಾದ ರಮಾನಾಥ ನಾಯ್ಕ್, ರಮೇಶ ರಾವ್ ಪಡುಕೇರಿ, ಅಂಕಣಕಾರ ಕೋ ಶಿವಾನಂದ ಕಾರಂತ, ಬೈಂದೂರು ರಾಮಕ್ಷತ್ರಿಯ ಸಂಘದ ಆಡಳಿತ ಸದಸ್ಯರಾದ ವಸಂತಿ ನಾರಾಯಣ ಮದ್ದೋಡಿ, ಸಂಸ್ಥೆಯ ಗೌರವ ಅಧ್ಯಕ್ಷರಾದ ಕೆ.ಪಿ.ಶಿವಪ್ರಸಾದ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕ್ರತರಾದ ಮಾಲತಿ ಡಿ.ಕೆ, ಹೊಸನಗರ ತಾಲೂಕಿನ ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆದ ಆಶಾ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಒಳಚರಂಡಿ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಹಾಗೂ ಯೋಜನೆಯ ಕಾಮಗಾರಿಯ ನಿರ್ವಹಣೆ, ಗುಣಮಟ್ಟದ ಬಗ್ಗೆ ಪುರಸಭೆ ಮತ್ತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಜಲಮಂಡಳಿಯ ಅಧಿಕಾರಿಗಳು ಹಾಗೂ ಸಾರ್ವಜನಿಕ ಸಭೆಯನ್ನು ಹತ್ತು ದಿನದೊಳಗೆ ಕರೆಯಬೇಕೆಂದು ಮನವಿ ಮಾಡಿದ್ದರೂ ತನಕ ಸಭೆ ಕರೆಯದೇ ಮನವಿಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಈ ತಿಂಗಳ ಅಂತ್ಯದ ಒಳಗೆ ಸಭೆಯನ್ನು ಕರೆಯದೇ ಇದ್ದಲ್ಲಿ ಮಾ. ೩ರಂದು ಪುರಸಭೆಯ ಎದುರು ಪ್ರತಿಭಟನಾ ಸಭೆ ನಡೆಸಲಾಗುವುದು ಎಂದು ಕುಂದಾಪುರದ ಪ್ರಜಾ ಜಾಗೃತಿ ವೇದಿಕೆ ಅಧ್ಯಕ್ಷ ರಾಮಕೃಷ್ಣ ಹೇರ್ಳೆ ತಿಳಿಸಿದ್ದಾರೆ. ಈ ಕುರಿತು ಕುಂದಾಪುರ ಪುರಸಭೆಯ ಅಧ್ಯಕ್ಷರಿಗೆ ಸಮಿತಿಯ ಕಾರ್ಯದರ್ಶಿ ಬಿ. ಕಿಶೋರ್ ಕುಮಾರ್ ಅವರನ್ನೊಳಗೊಂಡು ಸಮಿತಿಯ ಸದಸ್ಯರು ಸದಸ್ಯರು ಮನವಿಯನ್ನು ಸಲ್ಲಿಸಿದರು.
ಕಲಾಸಂಸ್ಥೆಗಳಿಂದ ಕಲೆಯ ಅಳಿವಿನ ಆತಂಕ ದೂರ: ದೀಪಾ ರವಿಶಂಕರ್ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಲೆಯನ್ನು ಒಂದು ಪೀಳಿಗೆಯಿಂದ ಇನ್ನೊಂದು ಪೀಳಿಗೆಗೆ ವರ್ಗಾಯಿಸುವ ಕೆಲಸ ಬಹುಮುಖ್ಯವಾದುದು. ನಮ್ಮ ಸಂಸ್ಕೃತಿ ಹಾಗೂ ಕಲಾ ಪ್ರಕಾರವನ್ನು ಮುಂದಿನ ಜನಾಂಗ ಕಲಿಯಲಾರವು ಎಂಬ ಆತಂಕ ದೂರವಾಗಿಸುವ ಮಾಧ್ಯಮವಾಗಿ ಕಲಾ ಸಂಸ್ಥೆಗಳ ಕಾರ್ಯನಿರ್ವಹಿಸುತ್ತವೆ ಎಂದು ಲೇಖಕಿ, ನಟಿ ದೀಪಾ ರವಿಶಂಕರ್ ಬೆಂಗಳೂರು ಹೇಳಿದರು ಅವರು ಇಲ್ಲಿನ ಶಾರದಾ ವೇದಿಕೆಯಲ್ಲಿ ಸುರಭಿ ರಿ. ಬೈಂದೂರು ಸಂಸ್ಥೆಯ ೧೭ನೇ ವರ್ಷದ ಸಂಭ್ರಮದೊಂದಿಗೆ ಆಯೋಜಿಸಿದ ಮೂರು ದಿನಗಳ ಕಾರ್ಯಕ್ರಮ ಸುರಭಿ ಜೈಸಿರಿ ಉದ್ಘಾಟಿಸಿ ಮಾತನಾಡಿದರು. ಭಾರತೀಯರ ಮೇಲೆ ಹಲವು ಪರಕೀಯ ದಾಳಿಗಳು ನಡೆದ ಬಳಿಕವೂ ಪ್ರದರ್ಶನ ಕಲೆಗಳ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಭಾರತೀಯ ಕಲೆಗಳನ್ನು ಇಂದಿಗೂ ತಮ್ಮ ಅಸ್ತಿತ್ವವನ್ನು ಕಾಯ್ದುಕೊಳ್ಳುವಂತಹ ಗಟ್ಟಿ ಬೇರನ್ನು ಹೊಂದಿದೆ. ಇಂದಿನ ಪೀಳಿಗೆ ಕಲೆಯನ್ನು ಮುಂದುವರಿಸುತ್ತಾರೋ ಬಿಡುತ್ತಾರೋ ಎಂಬುದಕ್ಕಿಂತ ಅವುಗಳು ಅವರ ಮನಸ್ಸಿನೊಳಕ್ಕೆ ಹೊಕ್ಕು ಕೂರುತ್ತದೆ. ಕಲೆಯನ್ನು ಕಲಿಸುವ ಕಾರ್ಯ ನಿರಂತರವಾಗಿ ನಡೆಸುವುದು ಬಹುಮುಖ್ಯವಾದುದು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗಂಗೊಳ್ಳಿ ಮೇಲ್ಗಂಗೊಳ್ಳಿಯ ಶ್ರೀ ಬಸವೇಶ್ವರ ದೇವಸ್ಥಾನದ ಪ್ರಾಯೋಜಿತ ಓಂ ಶ್ರೀ ಮಾತೃ ಮಂಡಳಿ ನೇತೃತ್ವದಲ್ಲಿ ಶಿವ ಪಾರ್ವತಿ ಕಲ್ಯಾಣೋತ್ಸವ ಕಾರ್ಯಕ್ರಮ ಸಂಜೆ ಗೋಧೂಳಿ ಲಗ್ನ ಸುಮೂರ್ಹತದಲ್ಲಿ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಜರಗಿತು. ಶಿವ ಪಾರ್ವತಿಯ ವಿಗ್ರಹವನ್ನು ನಾಯಕವಾಡಿಯ ಶ್ರೀ ಸಂಗಮೇಶ್ವರ ದೇವಸ್ಥಾನದ ಬಳಿಯಿಂದ ವೈಭವೋಪಿತ ಪುರಮೆರವಣಿಗೆಯಲ್ಲಿ ತರಲಾಯಿತು. ವೇದಮೂರ್ತಿ ಶ್ರೀಪತಿ ಭಟ್ ಮಂಕಿ ನೇತೃತ್ವದಲ್ಲಿ ಪುರೋಹಿತರು ಕಲ್ಯಾಣೋತ್ಸವದ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ವಧು ನಿರೀಕ್ಷಣೆ, ಅರಶಿನ ಕುಂಕುಮ ಸಮರ್ಪಣೆ, ಧಾರೆಮಣಿ ಕಟ್ಟುವಿಕೆ, ಶಿವನಿಗೆ ಮಧುಪರ್ಕ ಸಮರ್ಪಣೆ, ಮಾಲಾಧಾರಣೆ, ಕನ್ಯಾದಾನ, ಕಂಕಣ ಮಾಂಗಲ್ಯ ಸೂತ್ರ ಧಾರಣೆ, ಚಿನ್ನಾಭರಣಾಧಿ ಕಪ್ಪ ಕಾಣಿಕೆಗಳ ಸಮರ್ಪಣೆ, ಪ್ರಸನ್ನ ಪೂಜೆ, ಅಷ್ಟಾವಧಾನ ಸೇವೆಗಳ ಮೂಲಕ ಕಲ್ಯಾಣೋತ್ಸವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಭಕ್ತಿ ಶ್ರದ್ಧಾಪೂರ್ವಕ ನೆರವೇರಿಸಲಾಯಿತು. ಓಂ ಶ್ರೀ ಮಾತೃ ಮಂಡಳಿಯ ಅಧ್ಯಕ್ಷೆ ಸುಶೀಲ ಸಿ., ಗೌರವಾಧ್ಯಕ್ಷೆ ಪದ್ಮಾವತಿ, ಪ್ರಧಾನ ಕಾರ್ಯದರ್ಶಿ ಪ್ರೇಮ, ಕಾರ್ಯದರ್ಶಿ ಜ್ಯೋತಿ, ದೇವಸ್ಥಾನದ ಮೊಕ್ತೇಸರ ಈಶ್ವರ ಜಿ., ತಾಪಂ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನರ್ಸರಿ, ಪೂರ್ವ ಪ್ರಾಥಮಿಕ ಶಾಲೆಗಳು ಮಕ್ಕಳ ಮನಸ್ಸನ್ನು ಅರಳಿಸುವ ತಾಣವಾಗಬೇಕು. ಶಿಕ್ಷಣದ ಜಗತ್ತು ತೆರೆದುಕೊಳ್ಳುವ ಮೊದಲು ಮಗುವಿನ ಮನಸ್ಸು ತೆರೆದುಕೊಳ್ಳಬೇಕು. ಅಂತಹ ಪರಿಸರವನ್ನು ಸೃಷ್ಟಿಸಿರುವ ಇಂತಹ ಶಾಲೆಗಳು ಅಭಿನಂದನೆಗೆ ಅರ್ಹ ಎಂದು ಶಿಕ್ಷಣ ತಜ್ಞ ಶ್ರೀಪತಿ ಹೇರ್ಳೆ ಹೇಳಿದರು. ಅವರು ಕೋಟೇಶ್ವರದ ಕೆನರಾ ಕಿಡ್ಸ್ ಶಾಲೆಯ ವಠಾರದಲ್ಲಿ ನಡೆದ ಕ್ಯಾನ್ ಕಿಡ್ಸ್ ಡೇ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಶಿಕ್ಷಣ ಸಂಸ್ಥೆಯ ಸಂಚಾಲಕಿ ವಿನಂತಿ ಸುಬ್ರಹ್ಮಣ್ಯ ಶೆಟ್ಟಿ ಸ್ವಾಗತಿಸಿದರು. ಶಾಲಾ ಶಿಕ್ಷಣ ನಿರ್ದೇಶಕಿ ರಜನಿ ಉಪಾಧ್ಯ ವರದಿ ವಾಚಿಸಿದರು. ಸವಿತಾ ಆರ್ ಐತಾಳ್ ಉಪಸ್ಥಿತರಿದ್ದರು. ಶಿಕ್ಷಕಿ ಸುಜಾತಾ ಶೆಟ್ಟಿ ವಂದಿಸಿದರು.ಕಾರ್ಯಕ್ರಮದ ಅನಂತರ ಮುದ್ದು ಮಕ್ಕಳ ನೃತ್ಯ ಪ್ರದರ್ಶನ ಪ್ರೇಕ್ಷಕರ ಮನಸೂರೆಗೊಂಡಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಿ.ಎಸ್.ಬಿ ಸಮಾಜದವರು ಪ್ರತಿಯೊಂದು ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ. ಗುರುಗಳ ಅನುಗ್ರಹ, ಹಿರಿಯರ ಅವಿರತ ಶ್ರಮ ನಮಗೆ ಬೆನ್ನೆಲುಬಾಗಿದೆ. ಕ್ರಿಕೆಟ್ ಪಂದ್ಯಾಟದ ಆಯೋಜನೆಯಿಂದ ಇತರ ಊರುಗಳ ಸಮಾಜ ಬಾಂಧವರ ಪರಿಚಯದಿಂದ ಯುವ ಸಮುದಾಯದ ತಂಡ ರೂಪುಗೊಳ್ಳುತ್ತದೆ. ಆ ಮೂಲಕ ಸಮಾಜದ ಧಾರ್ಮಿಕ ಕಾರ್ಯಕ್ರಮಗಳಿಗೆ ಸ್ವಯಂ ಸೇವಕರನ್ನು ಒಗ್ಗೂಡಿಸುವ ಕಾರ್ಯ ನಡೆಯಬೇಕಿದೆ ಎಂದು ಸಿದ್ದಾಪುರ ಸಂಯುಕ್ತ ಜಿ.ಎಸ್.ಬಿ ಸಮಾಜದ ಆಧ್ಯಕ್ಷ ಗೋಪಿನಾಥ ಕಾಮತ್ ಆಶಿಸಿದರು. ಅವರು ಬಸ್ರೂರಿನ ಸರಕಾರಿ ಪ್ರೌಡಶಾಲೆಯ ಮೈದಾನದಲ್ಲಿ ಬಸ್ರೂರು ಜಿ.ಎಸ್.ಬಿ ಸಭಾ ಆಶ್ರಯದಲ್ಲಿ ಹಾಗೂ ಚಿತ್ತಾರ ಕ್ಯಾಶ್ಯೂ ವಂಡಾರು ಇವರ ಪ್ರಾಯೋಜಕತ್ವದಲ್ಲಿ ಜಿ.ಎಸ್.ಬಿ ಸಮಾಜ ಬಾಂಧವರಿಗೆ ಸೀಮಿತ ಓವರುಗಳ 30 ಗಜಗಳ ಕ್ರಿಕೆಟ್ ಪಂದ್ಯಾಟ “ಆಮ್ಗೆಲೆ ಟ್ರೋಫಿ-2017″ರ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಹರಿಓಂ ಎಸ್ವಿಎಸ್ ಗಂಗೊಳ್ಳಿ ತಂಡ ವಿಜೇತ ತಂಡವಾಗಿ ಪ್ರಥಮ ಬಹುಮಾನವಾದ ರೂ 11,777 ಹಾಗೂ ಶಾಶ್ವತ ಫಲಕ, ದ್ವಿತೀಯ ಸ್ಥಾನವನ್ನು ಕೊಂಕಣ್ ಎಕ್ಸ್ಪ್ರೆಸ್ ಕೋಟೇಶ್ವರ ರೂ 7,777 ಹಾಗೂ ಶಾಶ್ವತ ಫಲಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಸಂಘ ಸಂಸ್ಥೆಗಳು ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿರಬೇಕು. ಪರಿಸರದ ಜನರಿಗೆ ಅನುಕೂಲವಾಗುವಂತಹ ಕಾರ್ಯಕ್ರಮಗಳನ್ನು ರೂಪಿಸುವುದರ ಮೂಲಕ ಜನರ ಅಭಿವೃದ್ಧಿಗೆ ಸಹಕಾರ ನೀಡಬೇಕು. ಸಮಾಜದ ಕಟ್ಟಕಡೆಯ ಜನರನ್ನು ಗುರುತಿಸುವ ಮತ್ತು ಅವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವಲ್ಲಿ ಸಂಘ ಸಂಸ್ಥೆಗಳು ಶ್ರಮಿಸಬೇಕು ಎಂದು ಕುಂದಾಪುರ ತಾಲೂಕು ಪಂಚಾಯತ್ ಅಧಿಕಾರಿ ಕೆ.ರಾಮಚಂದ್ರ ಮಯ್ಯ ಹೇಳಿದರು. ಅವರು ಕೊಡಪಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ಜರಗಿದ ಕೊಡಪಾಡಿಯ ಸವ್ಯಸಾಚಿ ಯುವಕ ಮಂಡಲದ ೧೬ನೇ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾದ ಪತ್ರಕರ್ತ ಬಿ.ರಾಘವೇಂದ್ರ ಪೈ, ಉಡುಪಿ ಸವಿತಾ ಸಮಾಜದ ಸಂಘಟನಾ ಕಾರ್ಯದರ್ಶಿ ಮಂಜುನಾಥ ಸಾಲಿಯಾನ್, ಗಂಗೊಳ್ಳಿಯ ಉದ್ಯಮಿ ಜಿ.ವಿಠಲ ಭಾಸ್ಕರ ಶೆಣೈ ಶುಭಾಶಂಸನೆಗೈದರು. ಇದೇ ಸಂದರ್ಭ ನಿವೃತ್ತ ಮುಖ್ಯೋಪಾಧ್ಯಾಯ ನಾರಾಯಣ ಬೈಂದೂರು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯಿನಿ ವೀಣಾ, ತಾಯಿ ಮಾರಿಕಾಂಬಾ ಮಹಿಳಾ ಮಂಡಳಿ ಅಧ್ಯಕ್ಷೆ ಕವಿತಾ ಗಾಣಿಗ, ಶಾಲೆಯ ಎಸ್ಡಿಎಂಸಿ ಅಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜ್ ಶಿಕ್ಷಕ-ರಕ್ಷಕ ಸಂಘದ ಉದ್ಘಾಟನೆ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕುಂದಾಪುರ ಸರಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಸುಬ್ರಹ್ಮಣ್ಯ ಜೋಶಿ ಉದ್ಘಾಟಿಸಿ, ವ್ಯವಹಾರ ಮುಖಿಯಾದ ಜಗತ್ತಿನಲ್ಲಿ ಬದುಕುತ್ತಿರುವ ನಮ್ಮ ಮಕ್ಕಳು ಜ್ಞಾನಮುಖಿಯಾಗಬೇಕು, ಶೈಕ್ಷಣಿಕ ತ್ರಿಕೋಣದ ಮೂರು ಅಂಶಗಳು ವಿದ್ಯಾರ್ಥಿ, ರಕ್ಷಕ ಮತ್ತು ಶಿಕ್ಷಕ. ವಿದ್ಯಾಥಿಗಳು ಶಿಕ್ಷಣ ಸಂಸ್ಥೆಯಲ್ಲಿ ಕಲಿಯುವ ಸಮಯಕ್ಕಿಂತ ಹೆಚ್ಚಿನ ಸಮಯವನ್ನು ರಕ್ಷಕರೊಂದಿಗೆ ಕಳೆಯುತ್ತಿರುವ ಸ್ಥಿತಿಯಲ್ಲಿ ಅವರಲ್ಲಿ ಒಳ್ಳೆಯ ಬುದ್ಧಿ ಮತ್ತು ಸದಾಚಾರಗಳನ್ನು ಬೆಳೆಸಬೇಕು ಎಂದು ಹೇಳಿದರು. ಕಾಲೇಜಿನ ಸಂಚಾಲಕ ಬಿ. ಎಮ್. ಸುಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ರಾಮಕೃಷ್ಣ ಅಡಿಗ ಉಪಸ್ಥಿತರಿದ್ದರು. ಪ್ರಾಚಾರ್ಯರಾದ ಪ್ರೊ. ದೋಮ ಚಂದ್ರಶೇಖರ್ ಪ್ರಸ್ತಾವಿಕ ಮಾತನಾಡಿದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಸುಧಾಕರ್ ಪಾರಂಪಳ್ಳಿ ಸ್ವಾಗತಿಸಿದರು. ಕಾಲೇಜ್ ಕನ್ನಡ ವಿಭಾಗ ಮುಖ್ಯಸ್ಥರಾದ ಚೇತನ್ ಶೆಟ್ಟಿ ಕೋವಾಡಿ ನಿರೂಪಿಸಿದರು. ವಾಣಿಜ್ಯ ಉಪನ್ಯಾಸಕರಾದ ಶ್ರೀ ಸತೀಶ್ ಶೆಟ್ಟಿ ಹೆಸ್ಕತ್ತೂರು ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಾವುಂದ ಗ್ರಾಮದ ಕಂತಿಹೊಂಡ ಎಂಬಲ್ಲಿನ 10 ಎಕ್ರೆ ಪ್ರದೇಶದಲ್ಲಿ ಹೆದ್ದಾರಿ ವಿಸ್ತರಣೆ ಕಾಮಗಾರಿ ಗುತ್ತಿಗೆದಾರ ಸಂಸ್ಥೆ ಐಆರ್ಬಿ ಇನ್ಫ್ರಾಸ್ಟ್ರಕ್ಚರ್ ಡೆವಲಪರ್ಸ್ ಸ್ಥಾಪಿಸಿರುವ ಮಿಕ್ಸಿಂಗ್ ಪ್ಲಾಂಟ್ನಿಂದ ಪರಿಸರದ ನಿವಾಸಿಗಳಿಗೆ ಆಗುತ್ತಿರುವ ತೊಂದರೆಯ ವಿರುದ್ಧ ಬುಧವಾರ ಪ್ರತಿಭಟನೆ ನಡೆಯಿತು. ಸಂಸ್ಥೆ ಈ ನಿವೇಶನದಲ್ಲಿ ಸಾಮಗ್ರಿ ದಾಸ್ತಾನು ಮಾಡಲಾಗುವುದೆಂದು ತಿಳಿಸಿ, ಆ ಉದ್ದೇಶಕ್ಕೆ ಗ್ರಾಮ ಪಂಚಾಯಿತಿಯ ಅನುಮತಿ ಪಡೆದಿತ್ತು. ಆದರೆ ಅಲ್ಲಿ ಬೃಹತ್ ಯಂತ್ರ್ರಗಳನ್ನು ಸ್ಥಾಪಿಸಿಕೊಂಡು ಜಲ್ಲಿ ಪುಡಿ ಮಾಡಲಾಗುತ್ತಿದೆ. ಜಲ್ಲಿ ಮತ್ತು ಟಾರು ಬೆರೆಸಲಾಗುತ್ತಿದೆ. ಜಲ್ಲಿಪುಡಿ ಮತ್ತು ಜಲ್ಲಿ ಬೆರೆಸಿ ವೆಟ್ ಮಿಕ್ಷ್ಚರ್ ತಯಾರಿಸಲಾಗುತ್ತಿದೆ. ಇಲ್ಲಿ ಸೃಷ್ಟಿಯಾಗುವ ಜಲ್ಲಿ, ಸಿಮೆಂಟಿನ ಧೂರು ಇಡೀ ಪರಿಸರವನ್ನು ವ್ಯಾಪಿಸಿ, ಮನೆಗಳಿಗೆ ಪ್ರವೇಶಿಸುತ್ತದೆ. ಉಸಿರಾಟದೊಂದಿಗೆ ಜನರ ದೇಹ ಪ್ರವೇಶಿಸುವ ಈ ಧೂಳಿನಿಂದ ಹಲವರಲ್ಲಿ ಕೆಮ್ಮು, ಉಬ್ಬಸ ಕಾಣಿಸಿಕೊಂಡಿದೆ. ಸಾಮಗ್ರಿಗಳ ಅವಿರತ ಸಾಗಾಟಕ್ಕಾಗಿ ಸಂಸ್ಥೆ ಬಳಸಿಕೊಳ್ಳುತ್ತಿರುವ ಅರೆಹೊಳೆ-ಉಳ್ಳೂರು ರಸ್ತೆ ಸಂಪೂರ್ಣ ಕೆಟ್ಟುಹೋಗಿದ್ದು, ಸಣ್ಣ ವಾಹನ, ಜನ ಸಂಚಾರ ಸಂಕಷ್ಟಕ್ಕೆ ಸಿಲುಕಿದೆ. ಈ ಹಿನ್ನೆಲೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ವಾಣಿಜ್ಯಶಾಸ್ತ್ರ ಮತ್ತು ವ್ಯವಹಾರ ಅಧ್ಯಯನ ವಿಭಾಗ ಆಯೋಜಿಸಿದ್ದ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ವ್ಯವಹಾರ ಅಧ್ಯಯನ ಉತ್ಸವ ಸ್ಪರ್ಧಾ- 17 ಯಶಸ್ವಿಯಾಗಿ ಜರುಗಿತು. ಬಸ್ರೂರಿನ ಶ್ರೀ ಶಾರದಾ ಕಾಲೇಜಿನ ಪ್ರಾಂಶುಪಾಲ ಪ್ರೊ. ರಾಧಾಕೃಷ್ಣ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಸಾಧಿಸಬೇಕಾದರೆ ಸಾಕಷ್ಟು ಸ್ಪರ್ಧೆಯನ್ನು ಎದುರಿಸಬೇಕಾಗಿದೆ. ಈ ಸ್ಪರ್ಧೆಯನ್ನು ಎದುರಿಸುವ ನಿಟ್ಟಿನಲ್ಲಿ ಸಾಕಷ್ಟು ವಿದ್ಯಾರ್ಹತೆ, ಕೌಶಲದ ಜೊತೆಗೆ ಪ್ರಸ್ತುತ ಜಗತ್ತಿನ ಕುರಿತು ಜ್ನಾನ ಸಂಪಾದನೆಯು ಅತ್ಯಂತ ಅತ್ಯಗತ್ಯವಾಗಿರುತ್ತದೆ. ಈ ದಿಶೆಯಲ್ಲಿಕಠಿಣ ಪರಿಶ್ರಮ, ಚುರುಕುತನ, ಆಸಕ್ತಿ ಮತ್ತು ಆತ್ಮವಿಶ್ವಾಸಗಳನ್ನು ನಮ್ಮದಾಗಿಸಿಕೊಂಡು ಯಶಸ್ಸು ಸಾಧಿಸಬೇಕು ಎಂದು ಹೇಳಿದರು. ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಇದರ ಆಡಳಿತಾಧಿಕಾರಿಗಳಾದ ಡಾ.ಹೆಚ್.ಶಾಂತಾರಾಮ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ. ನಾರಾಯಣ ಶೆಟ್ಟಿ ವಹಿಸಿದ್ದರು. ಈ ಸಂದರ್ಭದಲ್ಲಿಕುಂದಾಪುರಕೆರಿಯರ್ಕೋಚಿಂಗ್ಕೇಂದ್ರದರಾಜೇಶ್ ಶೆಟ್ಟಿಅವರುಸಿಎ-ಸಿಪಿಟಿ ಮತ್ತು ಅಯ್ಪಿಸಿಸಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಗೌರವಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು…
