Author: ನ್ಯೂಸ್ ಬ್ಯೂರೋ

ಬೈಂದೂರು: ಬುಲೆಟ್ ಬೈಕ್ ಹಾಗೂ ಯಮಾಹಾ ಎಫ್‌ಝೆಡ್ ಬೈಕ್‌ಗಳೆರಡು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎರಡೂ ಬೈಕುಗಳ ಸವಾರರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕಿರಿಮಂಜೇಶ್ವರ ಬಸ್ ನಿಲ್ದಾಣ ಸಮೀಪ ಸಂಜೆ  ವೇಳೆ ನಡೆದಿದೆ. ಬುಲೆಟ್ ಸವಾರ ಶಿರೂರಿನ ಗೋಪಾಲ ಮೇಸ್ತ(58) ಹಾಗೂ ಎಫ್‌ಝೆಡ್ ಬೈಕ್ ಸವಾರ ಕಿರಿಮಂಜೇಶ್ವರದ ಕುದ್ರುಕೋಡು ನಿವಾಸಿ ರಿತೇಶ್ ಶೆಟ್ಟಿ(27) ಎಂಬುವರೇ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರು. ಗೋಪಾಲ ಮೇಸ್ತ ತನ್ನ ಬುಲೆಟ್ ನಲ್ಲಿ ಬೈಂದೂರು ಕಡೆಗೆ ಪ್ರಯಾಣಿಸುತ್ತಿದ್ದಾಗ ಮನೆ ಕಡೆಯಿಂದ ಪೇಟೆಗೆ ಬರುತ್ತಿದ್ದ ನಿತಿನ್ ಶೆಟ್ಟಿ ಬೈಕ್ ಪರಸ್ಪರ ಮುಖಾಮುಖಿ ಡಿಕ್ಕಿಯಾಗಿದೆ ಎನ್ನಲಾಗಿದೆ. ಗೋಪಾಲ ಮೇಸ್ತ ಎಂಬುವರ ದವಡೆ ಒಡೆದು ಹೋಗಿದ್ದು, ಕಿಬ್ಬೊಟ್ಟೆಗೆ ಗಂಭೀರ ಗಾಯಗಳಾಗಿದ್ದು ತೀವ್ರ ರಕ್ತಸ್ರಾವವಾಗಿದ್ದು, ನಿತಿನ್ ಶೆಟ್ಟಿ ತಲೆಗೆ ಗಂಭೀರ ಗಾಯಗಳಾಗಿವೆ. ತಕ್ಷಣ ಅವರೀರ್ವರನ್ನು ಕುಂದಾಪುರದ ಚಿನ್ಮಯೀ ಆಸ್ಪತ್ರೆಗೆ ಕರೆತರಲಾಗಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಣಿಪಾಲಕ್ಕೆ ಸಾಗಿಸಲಾಗಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಂಭೀರ ಗಾಯಗೊಂಡಿದ್ದ ಗೋಪಾಲ ಮೇಸ್ತ ಅಪಘಾತದಲ್ಲಿ ಆಸ್ಪತ್ರೆಯಲ್ಲಿ ಮೃತಪಟ್ಟ ಕುರಿತು ಕುಂದಾಪ್ರ…

Read More

ಕುಂದಾಪುರ: ಜನರ ಜೀವ ಉಳಿಸಲು ರಕ್ತದ ತುಂಬಾ ಅವಶ್ಯಕತೆ ಇದ್ದು, ತುರ್ತು ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆ ಇದ್ದಾಗ ಸರಿಯಾದ ಸಮಯದಲ್ಲಿ ರಕ್ತ ದೊರೆಯದಿದ್ದಲ್ಲಿ ಪ್ರಾಣಕ್ಕೆ ಅಪಾಯ. ಹೀಗಾಗಿ ರಕ್ತನಿಧಿ ಕೇಂದ್ರಗಳಲ್ಲಿ ರಕ್ತದ ಕೊರತೆಯಾದಂತೆ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಹೀಗಾಗಿ ಎಲ್ಲರೂ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಜನರ ಪ್ರಾಣ ಉಳಿಸುವ ಮಹತ್ಕಾರ್ಯಕ್ಕೆ ಮುಂದಾಗಬೇಕು ಎಂದು ಕೆನರಾ ಬ್ಯಾಂಕಿನ ಮಂಗಳೂರು ವೃತ್ತ ಕಾರ್ಯಾಲಯದ ವಿಭಾಗೀಯ ಪ್ರಬಂಧಕ ವಸಂತ ಶೆಟ್ಟಿ ಹೇಳಿದರು. ಅವರು ಕೆನರಾ ಬ್ಯಾಂಕ್ ನೇರಳಕಟ್ಟೆ ಮತ್ತು ರಕ್ತನಿಧಿ ಕೇಂದ್ರ ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ನಿಸರ್ಗ ಫ್ರೆಂಡ್ಸ್ ಕ್ಲಬ್ ನೇರಳಕಟ್ಟೆ ಸಹಯೋಗದೊಂದಿಗೆ ನೇರಳಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಆಯೋಜಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು. ಬ್ಯಾಂಕಿನ ಎಜಿಎಂ ಐ.ಸಿ.ಶೆಟ್ಟಿ, ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಕುಂದಾಪುರ ಶಾಖೆಯ ಚೇರ್‌ಮೆನ್ ಎಸ್. ಜಯಕರ ಶೆಟ್ಟಿ, ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಕುಂದಾಪುರ ಶಾಖೆಯ ಸಂಚಾಲಕ ಮುತ್ತಯ್ಯ ಶೆಟ್ಟಿ, ಕರ್ಕುಂಜೆ ಗ್ರಾಮ ಪಂಚಾಯತ್…

Read More

ಕುಂದಾಪುರ: ಡೀಸೆಲ್ ಸಾಗಿಸುತ್ತಿದ್ದ ಟ್ಯಾಂಕರ್ ಒಂದಕ್ಕೆ ಇನ್ಸುಲೇಟರ್ ಮೀನಿನ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಟ್ಯಾಂಕರ್ ಚಾಲಕ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾದ ಘಟನೆ ಶನಿವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ತ್ರಾಸಿ ಬೀಚಿನಲ್ಲಿ ನಡೆದಿದೆ. ಟ್ಯಾಂಕರ್ ಚಾಲಕ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಕಲ್ಲುಗುಡ್ಡೆ ನಿವಾಸಿ ದಿವಾಕರ(೩೦) ವರ್ಷ ಎಂಬಾತನೇ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸೇರಿದಾತ. ಮಂಗಳೂರಿನಿಂದ ಡೀಸೆಲ್ ತುಂಬಿಸಿಕೊಂಡ ಟ್ಯಾಂಕರ್ ಗಂಗಾವತಿ ಕಡೆಗೆ ಪ್ರಯಾಣಿಸುತ್ತಿತ್ತು. ರಾತ್ರಿ ಸುಮಾರಿಗೆ ತ್ರಾಸಿ ಬೀಚ್ ಸಮೀಪ ಸಂಚರಿಸುತ್ತಿದ್ದ ವೇಳೆ ಹೆದ್ದಾರಿಯಲ್ಲಿ ಶುಕ್ರವಾರದಿಂದ ರಸ್ತೆಯ ಮೇಲೆಯೇ ಕೆಟ್ಟು ನಿಂತ ಲಾರಿಯೊಂದನ್ನು ಕಂಡ ಟ್ಯಾಂಕರ್ ಚಾಲಕ ದಿವಾಕರ ಹೆದ್ದಾರಿಯಲ್ಲಿ ಬಲಕ್ಕೆ ತೆಗೆದುಕೊಂಡಿದ್ದಾರೆ. ಇದೇ ಸಂದರ್ಭ ಎದುರಿನಿಂದ ಬರುತ್ತಿದ್ದ ಇನ್ಸುಲೇಟರ್ ಮೀನಿನ ಲಾರಿಯ ನಡುವಿನ ಭಾಗ ಡಿಕ್ಕಿಯಾಗಿದೆ. ಅಪಘಾತದಲ್ಲಿ ಟ್ಯಾಂಕರ್ ಚಾಲಕ ಲಾರಿಯೆಡೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದು, ಗಂಗೊಳ್ಳಿಯ ಹೆಲ್ಪ್ ಲೈನ್ ಕಾರ್ಯಕರ್ತರು ಹಾಗೂ ಸ್ಥಳೀಯರ ಸಹಕಾರದೊಂದಿಗೆ ಗಂಗೊಳ್ಳಿ ಪೊಲೀಸರು ಸುಮಾರು ಒಂದೂವರೆ ತಾಸುಗಳ ಕಾಲ ಹೆಣಗಾಡಿದರು. ನಂತರ…

Read More

ಕುಂದಾಪುರ: ರೋಟರಿ ಕ್ಲಬ್ ಸಿದ್ದಾಪುರ-ಹೊಸಂಗಡಿಯ ಆತಿಥ್ಯದಲ್ಲಿ ಸಿದ್ದಾಪುರದ ರೋಟರಿ ಹಾಲ್‌ನಲ್ಲಿ ನಡೆದ ರೋಟರಿ ವಲಯ ಸಾಂಸ್ಕೃತಿಕ ಸ್ಪರ್ಧೆ ರಂಗತರಂಗದಲ್ಲಿ ರೋಟರಿ ಕ್ಲಬ್ ಕುಂದಾಪುರ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡು ವಲಯ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಚಾಂಪಿಯನ್ ಶೀಪ್ ಅವಾರ್ಡ್‌ನ್ನು ಪಡೆದುಕೊಂಡಿದೆ. ಅನೆಟ್ಸ್ ವಿಭಾಗದಲ್ಲಿ ಗಾಯನ ಸ್ಪರ್ಧೆಯಲ್ಲಿ ಲಾವಣ್ಯ ಲಕ್ಷ್ಮೀ ಪ್ರಥಮ, ರೋಟೆರಿಯನ್ ವಿಭಾಗದಲ್ಲಿ ಗಾಯನ ಸ್ಪರ್ಧೆಯಲ್ಲಿ ರವಿರಾಜ್ ಶೆಟ್ಟಿ ಪ್ರಥಮ, ಯುಗಳ ಗೀತೆಯಲ್ಲಿ ಬಿ.ಕಿಶೋರ್‌ಕುಮಾರ್ ಕುಂದಾಪುರ ಮತ್ತು ಶ್ರಾವ್ಯ ಆರ್. ರಾವ್ ದ್ವಿತೀಯ, ಸೋಲೋ ಡ್ಯಾನ್ಸ್‌ನಲ್ಲಿ ಚೈತನ್ಯ ಲಕ್ಷ್ಮೀ ಪ್ರಥಮ, ಗ್ರೂಫ್ ಡ್ಯಾನ್ಸ್‌ನಲ್ಲಿ ರೋಟರಿ ಕ್ಲಬ್ ಕುಂದಾಪುರ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಕಿರುಪ್ರಹಸನ ವಿಭಾಗದಲ್ಲಿ ರೋಟರಿ ವಲಯ೧ರ ಜೋನಲ್ ಲೆಫ್ಟಿನೆಂಟ್ ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ ನಿರ್ದೇಶನದ ಹುಚ್ಚು ಮನಸ್ಸಿನ ಹತ್ತು ಮುಖಗಳು ಪ್ರಹಸನ ಜನಮೆಚ್ಚುಗೆಯ ಅತ್ಯುತ್ತಮ ಪ್ರದರ್ಶನ ಕಂಡು ಪ್ರಥಮ ಸ್ಥಾನವನ್ನು ಪಡೆಯಿತು. ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಚಾಂಪಿಯನ್ ಅವಾರ್ಡ್ ಪಡೆದುಕೊಂಡರು. ಕುಂದಾಪುರದ ಕಾರ್ತಿಕ್ ಸ್ಕ್ಯಾನಿಂಗ್ ಸೆಂಟರ್‌ನ ನಿರ್ದೇಶಕ…

Read More

ಕುಂದಾಪುರದ ಯುವ ಸಾಹಿತಿ ಸಂದೀಪ್ ಶೆಟ್ಟಿ ಹೆಗ್ಗದ್ದೆ ಅವರ ಪರಿಕಲ್ಪನೆಯಲ್ಲಿ ಕುಂದಾಪುರ ಕನ್ನಡದ ಹಾಡುಗಳ ಆಲ್ಬಂ ತಯಾರಾಗುತ್ತಿದ್ದು ಅದರ ಶಿರ್ಷಿಕೆ ಬಿಡುಗಡೆ ಕಾರ್ಯಕ್ರಮ ನ. 25ರಂದು ನಡೆಯಲಿದೆ. ಬೆಂಗಳೂರಿನ ಗುತ್ತಹಳ್ಳಿಯಲ್ಲಿರುವ ಸಿರಿಸೌಂದರ್ಯ ಮಾಸ ಪತ್ರಿಕೆಯ ಕಛೇರಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಖ್ಯಾತ ಸಂಗೀತ ನಿರ್ದೇಶಕ ವಿ. ಮನೋಹರ್ ‘ಗಂಡ್ ಹಡಿ ಗಂಡ್’ ಹಾಡಿನ ಶೀರ್ಷಿಕೆ ಬಿಡುಗಡೆಗೊಳಿಸಲಿದ್ದಾರೆ. ಸಂದೀಪ್ ಶೆಟ್ಟಿ ಅವರ ಪರಿಕಲ್ಪನೆ, ಸಾಹಿತ್ಯ ಹಾಗೂ ಅವರದ್ದೇ ಕಂಠದಲ್ಲಿ ಮೂಡಿಬರುತ್ತಿರುವ ‘ಗಂಡ್ ಹಡಿ ಗಂಡ್’ಗೆ ಜಸ್ಟಿನ್ ಥಾಮಸ್ ಸಂಗೀತ ನೀಡುತ್ತಿದ್ದರೇ, ಅಭಿನಯ್ ಶೆಟ್ಟಿಯ ವಿನ್ಯಾಸ ಸಂದೀಪ್ ಕಲ್ಪನೆಗೆ ರೂಪ ನೀಡಲಿದೆ.

Read More

ಕುಂದಾಪುರ: ವೃತ್ತಿ-ಪ್ರವೃತ್ತಿಗಳಲ್ಲಿ ಸೋಲ-ಗೆಲುವನ್ನು ಸಮಾನವಾಗಿ ಸ್ವೀಕರಿಸಬಲ್ಲ ಮನೋಭಾವದ ಭವಿಷ್ಯದ ಬೆಳವಣಿಗೆಯೇ ಪೂರಕವಾಗುವುದಲ್ಲದೇ ಬದುಕಿನಲ್ಲಿ ಗೆಲ್ಲುವ ಸಾಮರ್ಥ್ಯವನ್ನು ಸೃಷ್ಟಿಸುತ್ತದೆ ಎಂದು ಅಂತರಾಷ್ಟ್ರೀಯ ತರಬೇತಿದಾರ ಸದಾನಂದ ನಾವಡ ಹೇಳಿದರು. ಅವರು ಕುಂದಾಪುರದ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ಕ್ರೀಡೋತ್ಸವದಲ್ಲಿ ಕ್ರೀಡಾಜ್ಯೋತಿಯನ್ನು ಬೆಳಗಿಸಿ ಮಾತನಾಡಿದರು. ಪಠ್ಯ ವಿಷಯಗಳಿಂದ ಹೊರತಾದ ಸೃಜನಶೀಲ ಪ್ರವೃತ್ವವನ್ನು ರೂಡಿಸಿಕೊಂಡ ಯಶಸ್ವೀ ವ್ಯಕ್ತಿಗಳ ಬದುಕು ವಿದ್ಯಾರ್ಥಿಗಳಿಗೆ ಆದರ್ಶವಾಗಬೇಕಿದೆ ಎಂದರು. ಕಾಲೇಜಿನ ಆಡಳಿತ ಮಂಡಳಿ ಕಾರ್ಯದರ್ಶಿ ರಾಧಾಕೃಷ್ಣ ಶೆಣೈ, ಕೋಶಾಧಿಕಾರಿ ಕೋಡಿ ಶ್ರೀನಿವಾಸ ಶೆಣೈ, ಆಡಳಿತಾಧಿಕಾರಿ ಪಿ. ಶ್ರೀಪತಿ ಹೇರ್ಳೆ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಗಣೇಶ ನಾಯಕ್, ಪ್ರೌಢಶಾಲಾ ವಿಭಾಗದ ಪ್ರಾಂಶುಪಾಲರಾದ ರೂಪಾ ಶೆಣೈ, ಪ್ರಾಥಮಿಕ ಶಾಲಾ ಮುಖ್ಯಸ್ಥರಾದ ಜಯಶೀಲಾ ನಾಯಕ್ ಉಪಸ್ಥಿತರಿದ್ದರು. ಕ್ಯಾರೋಲಿನ್ ಸ್ವಾಗತಿಸಿ, ನೀಲೇಶ್ ಪ್ರಭು ಅಭ್ಯಾಗತರನ್ನು ಪರಿಚಯಿಸಿದರು. ಸಹನಾ ಭಟ್ ವಂದಿಸಿದರು. ನಿಶ್ಮಾ ಕಾರ್ಯಕ್ರಮ ನಿರ್ವಹಿಸಿದರು.

Read More

ಬೈಂದೂರು: ಕೃಷಿಯಿಂದ ಏನೂ ಪ್ರಯೋಜನವಾಗದು. ಕೃಷಿ ಅನುತ್ಪಾದಕ ಕ್ಷೇತ್ರವೆಂದು ಸಾರಾಸಗಟಾಗಿ ತಿರಸ್ಕರಿಸಿ ಇತ್ತೀಚಿನ ದಿನಗಳಲ್ಲಿ ಕೃಷಿ ಮಾಡಲು ಯಾರೂ ಮುಂದೆ ಬರುತ್ತಿಲ್ಲ. ಈ ಕ್ಷೇತ್ರದಲ್ಲಿ ಯಾಕೆ ಹೀಗಾಗಿದೆ ಎಂದು ಕೃಷಿಪತ್ತಿನ ಸಹಕಾರಿಗಳು ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಂದೊದಗಿದೆ ಎಂದು ಉಡುಪಿ ತೆಂಕನಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ಸಹಪ್ರಾಧ್ಯಾಪಕ ಡಾ. ಗೋಪಾಲಕೃಷ್ಣ ಎಂ. ಗಾಂವ್ಕರ್ ಹೇಳಿದರು. ನಾಗೂರು ಶ್ರೀಕೃಷ್ಣಲಲಿತ ಕಲಾಮಂದಿರದಲ್ಲಿ, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಪ್ರಾಯೋಜಿಸಿದ ರೈತಶಕ್ತಿ, ರೈತ ಸೇವಾ ಒಕ್ಕೂಟ ಉಪ್ಪುಂದ ಹಾಗೂ ಜಿಲ್ಲಾ ಸಹಕಾರಿ ಯೂನಿಯನ್ ಇವರ ಸಹಭಾಗಿತ್ವದಲ್ಲಿ ನಡೆದ 62ನೇ ಸಹಕಾರಿ ಸಪ್ತಾಹ ಹಾಗೂ ಸಹಕಾರಿ ಮಾರುಕಟ್ಟೆ ಸಂಸ್ಕರಣ ಮತ್ತು ಮೌಲ್ಯವರ್ಧನೆ ಕುರಿತ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ದಿಕ್ಸೂಚಿ ಭಾಷಣದಲ್ಲಿ ಮಾತನಾಡಿದರು. ಕೃಷಿ ಇಲ್ಲದೇ ಜಗತ್ತಿನ ಯಾವುದೇ ಮೂಲೆಯಲ್ಲಿ ಯಾರೂ ಬದುಕಲು ಸಾಧ್ಯವಿಲ್ಲ. ಅತೀ ದೊಡ್ಡಪ್ರಮಾಣದಲ್ಲಿ ಜನಸಂಖ್ಯೆ ಬೆಳೆಯುತ್ತಿದೆ, ಹಾಗಾಗಿ ಅಷ್ಟೇ ದೊಡ್ಡಪ್ರಮಾಣದಲ್ಲಿ ಆಹಾರ ಉತ್ಪಾದನೆ ಕೃಷಿಯಿಂದ ಮಾತ್ರ ಸಾಧ್ಯ. ನಮ್ಮ ಆಹಾರವನ್ನು ನಮಗೆ…

Read More

ಕುಂದಾಪುರ: ಗ್ರಾಮೀಣ ಪ್ರದೇಶಗಳ ಜನರ ಹಿತ ಕಾಪಾಡಿಕೊಳ್ಳುವುದರೊಂದಿಗೆ ಆಧುನಿಕ ತಂತ್ರಜ್ಞಾನದ ಮೂಲಕ ಹಳ್ಳಿ ಜನರಿಗೆ ಕೆನರಾ ಬ್ಯಾಂಕ್ ಉತ್ತಮ ಸೇವೆ ನೀಡಲು ಬದ್ಧವಾಗಿದೆ. ಬ್ಯಾಂಕ್ ಸ್ಥಾಪನೆಯ ಉದ್ದೇಶಗಳನ್ನು ಹಾಗೂ ಸಂಸ್ಥಾಪಕರ ಆಶಯಗಳನ್ನು ಮುಂದಿಟ್ಟುಕೊಂಡು ಬ್ಯಾಂಕ್ ಮುನ್ನಡೆಯುತ್ತಿದೆ. ಬ್ಯಾಂಕಿನ ಎಲ್ಲಾ ಚಟುವಟಿಕೆಗಳಿಗೆ ಸ್ಫೂರ್ತಿಯಾಗಿರುವ ಅಮ್ಮೆಂಬಳ ಸುಬ್ಬರಾವ್ ಅವರ ದೂರದರ್ಶಿತ್ವವೇ ಬ್ಯಾಂಕಿನ ಪ್ರಗತಿಗೆ ಕಾರಣವಾಗಿದೆ ಎಂದು ಕೆನರಾ ಬ್ಯಾಂಕಿನ ಮಂಗಳೂರು ವೃತ್ತ ಕಾರ್ಯಾಲಯದ ವಿಭಾಗೀಯ ಪ್ರಬಂಧಕ ವಸಂತ ಶೆಟ್ಟಿ ಹೇಳಿದರು. ಅವರು ಗುರುವಾರ ಕೆನರಾ ಬ್ಯಾಂಕ್ ನೇರಳಕಟ್ಟೆ ಶಾಖೆಯ ಆಶ್ರಯದಲ್ಲಿ ಜರಗಿದ ಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ ಬ್ಯಾಂಕಿನ ಸಂಸ್ಥಾಪಕ ಅಮ್ಮೆಂಬಳ ಸುಬ್ಬರಾವ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಇದೇ ಸಂದರ್ಭ ಹಿರಿಯ ಗ್ರಾಹಕರಾದ ಮಾಧವ ನಾಯಕ್ ನೇರಳಕಟ್ಟೆ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು ಮತ್ತು ಅರ್ಹ ಫಲಾನುಭವಿಗಳಿಗೆ ಸಾಲಪತ್ರ ವಿತರಿಸಲಾಯಿತು. ಬ್ಯಾಂಕಿನ ಎಜಿಎಂ ಐ.ಸಿ.ಶೆಟ್ಟಿ, ಕರ್ಕುಂಜೆ ಗ್ರಾಮ ಪಂಚಾಯತ್ ಅಧ್ಯಕ್ಷ ರವಿದಾಸ, ಉದ್ಯಮಿಗಳಾದ ಅಶೋಕಕುಮಾರ್ ಶೆಟ್ಟಿ, ಗೋಪಾಲ ಶೆಟ್ಟಿ, ನಾರಾಯಣ ನಾಯಕ್, ಬ್ಯಾಂಕಿನ ಗ್ರಾಹಕರು,…

Read More

ಬೈಂದೂರು: ಶನಿವಾರ ಮಧ್ಯಾಹ್ನದ ವೇಳೆಗೆ ಬೈಂದೂರಿನ ಹೊಸ ಬಸ್ ನಿಲ್ದಾಣದ ಬಳಿ ಹಾಗೂ ನಾಕಟ್ಟೆಯ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಬೈಂದೂರಿನ ಶಿಕ್ಷಕ ಹಾಗೂ ಹೋಟೆಲ್ ನೌಕರರೋರ್ವರು ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ. ಘಟನೆಯ ವಿವರ: ನಾವುಂದದ ಗೋಪಾಲ ಪೂಜಾರಿ(೪೦) ಎಂಬುವವರು ಬೈಂದೂರು ತಹಶೀಲ್ದಾರರ ಕಛೇರಿ ರಸ್ತೆಯಿಂದ ಹೊಸ ಬಸ್ ನಿಲ್ದಾಣದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಶಿರೂರು ಕಡೆಯಿಂದ ಬೈಕಿನಲ್ಲಿ ಬರುತ್ತಿದ್ದ ವೇಳೆ ಶಿರೂರು ಬದಿಯಿಂದ ಬರುತ್ತಿದ್ದ ಕಂಟೆನರ್ ಲಾರಿಯೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸಿರಸಿ ಮೂಲದವರಾದ ಗೋಪಾಲ ಪೂಜಾರಿ ಹೋಟೆಲೊಂದರಲ್ಲಿ ಉದ್ಯೋಗ ಮಾಡಿಕೊಂಡಿದ್ದು ಇತ್ತಿಚಿಗೆ ನಾವುಂದದ ತನ್ನ ಹೆಂಡತಿಯ ಮನೆಗೆ ಬಂದಿದ್ದರೆನ್ನಲಾಗಿದೆ. ಕೆಲಸದ ನಿಮಿತ್ತ ಬೈಂದೂರಿಗೆ ಬಂದು ನಾವುಂದಕ್ಕೆ ಮರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. (ಕುಂದಾಪ್ರ ಡಾಟ್ ಕಾಂ ಸುದ್ದಿ) ಈ ಅಪಘಾತ ನಡೆದ ಸ್ವಲ್ಪ ಹೊತ್ತಿನಲ್ಲೇ ಪಡುವರಿಯ ಜನಾರ್ಧನ ಆಚಾರ್ಯ(45) ಎಂಬುವವರು ಬೈಂದೂರು ಸಮೀಪದ ನಾಕಟ್ಟೆಯ…

Read More

ನೀವು ವಾಟ್ಸಾಪ್ ಬಳಕೆ ಮಾಡ್ತಾ ಇರೋರಾಗಿದ್ದರೆ ನಾವು ಹೇಳುವ ವಿಷಯ ನಿಮಗೆ ಉಪಯೋಗವಾಗುತ್ತದೆ. ವಾಟ್ಸಾಪ್ ಬಳಕೆ ಮಾಡುವ ನೀವು ಎಂದಿಗೂ ವಿಳಾಸ, ದೂರವಾಣಿ ಸಂಖ್ಯೆ, ಇಮೇಲ್, ಬ್ಯಾಂಕ್ ವಿವರಗಳು, ಕ್ರೆಡಿಟ್ ಕಾರ್ಡ್ ಮಾಹಿತಿಗಳನ್ನು ಹಂಚಿಕೊಳ್ಳಬೇಡಿ. ಪಾಸ್ ವರ್ಡ್ ಸಹಾಯದಿಂದ ನಿಮ್ಮ ಅಪ್ಲಿಕೇಷನ್ ಭದ್ರಪಡಿಸಿಕೊಳ್ಳಬಹುದು. ವಾಟ್ಸಾಪ್ ಈ ಸೌಲಭ್ಯ ನೀಡಿಲ್ಲ. ಆದರೆ ಬೇರೆ ಅಪ್ಲಿಕೇಷನ್ ನಿಂದ ಡೌನ್ ಲೋಡ್ ಮಾಡಿಕೊಂಡು ಪಾಸ್ ವರ್ಡ್ ಹಾಕಿಕೊಳ್ಳಿ. ಮೊಬೈಲ್ ಕಳೆದಾಗ ನಿಮ್ಮ ಮಾತುಕತೆಯ ಗೌಪ್ಯತೆಯನ್ನು ಇದು ಕಾಪಾಡುತ್ತದೆ. (ಕುಂದಾಪ್ರ ಡಾಟ್ ಕಾಂ) ನೀವು ಆನ್ಲೈನ್ ನಲ್ಲಿ ಇದ್ದೀರಾ ಅಥವಾ ಆಪ್ಲೈನ್ ನಲ್ಲಿ ಇದ್ದೀರಾ ಎಂಬುದು ಬೇರೆಯವರಿಗೆ ತಿಳಿಯಬಾರದೆಂದು ನೀವು ಬಯಸಿದರೆ ಆ ಅಪ್ಲಿಕೇಶನ್ ನಿಷ್ಕ್ರಿಯಗೊಳಿಸಬಹುದು. ಆಂಡ್ರಾಯ್ಡ್, ಬ್ಲಾಕ್ ಬೆರ್ರಿ, ಐಒಎಸ್ ಸೇರಿದಂತೆ ವಿಂಡೋಸ್ ಫೋನ್ ನಲ್ಲಿ ಈ ಸೌಲಭ್ಯವಿದೆ. ವಾಟ್ಸಾಪ್ ನಲ್ಲಿ ಹಾಕಿದ ಪ್ರೊಪೈಲ್ ಫೋಟೋವನ್ನು ಯಾರು ಬೇಕಾದರೂ ಡೌನ್ ಲೋಡ್ ಮಾಡಬಹುದು. ಹಾಗಾಗಿ ಪ್ರೊಫೈಲ್ ಫೋಟೋ ಗೌಪ್ಯತೆಯನ್ನು ನೀವು ಕಾಪಾಡಿಕೊಳ್ಳಿ. contacts Only ಎಂಬುದನ್ನು…

Read More