Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿಕಲತೆಯಿಂದ ಕುಗ್ಗಿದರೆ ಸಮಾಜ ನಮ್ಮನ್ನು ಮತ್ತಷ್ಟು ಕುಗ್ಗಿಸುತ್ತದೆ. ನ್ಯೂನ್ಯತೆ ಮೆಟ್ಟಿನ ನಿಂತು ಸಾಧನೆ ಮಾಡುವ ಛಲವಿಲದ್ದರೆ ಸಾಧನೆಯ ಉತ್ತಂಗಕ್ಕೆ ಏರುವ ಮೂಲಕ ಸಮಾಜ ಕೂಡಾ ನಮ್ಮ ಗುರುತಿಸುತ್ತದೆ. ನ್ಯೂನ್ಯತೆಯನ್ನು ಮೆಟ್ಟಿನಿಲ್ಲುವ ಛಲವಿದ್ದರೆ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ನೇರಂಬಳ್ಳಿ ರಾಘವೇಂದ್ರ ರಾವ್ ಹೇಳಿದರು. ಅವರು ಕುಂದಾಪುರ ಭಂಡಾರ್‌ಕಾರ್ರ‍್ಸ್ ಆರ್ಟ್ಸ್ ಮತ್ತು ಸಾಯನ್ಸ್ ಕಾಲೇಜ್ ಹಳೆ ವಿದ್ಯಾರ್ಥಿ ಸಂಘ ವಾರ್ಷಿಕೋತ್ಸವ ನಿಮಿತ್ತ ಕಾಲೇಜ್ ಮಾಧವ ಮಂಟಪದಲ್ಲಿ ಆಯೋಜಿಸಿದ ಅಂತರ್ ಕಾಲೇಜ್ ಪ್ರತಿಭಾ ಸ್ಪರ್ಧೆ ಉದ್ಘಾಟಿಸಿ ಮಾತನಾಡುತ್ತಿದ್ದರು. ಸರಕಾರದ ಸಹಾಯ ಮಾಡುವುದೆಂದು ಕುಳಿತುಕೊಳ್ಳದೇ ನಮ್ಮಿಂದ ಸಮಾಜಕ್ಕೆ ಸಾಧ್ಯವಾದಷ್ಟು ಸಹಕಾರ ನೀಡಬೇಕು. ಹಳೆ ವಿದ್ಯಾರ್ಥಿಗಳು ಕಾಲೇಜ್ ನೆರವಿಗೆ ಬರುವ ಮೂಲಕ ಅಭಿವೃದ್ಧಿಯಲ್ಲಿ ಕೈ ಜೋಡಿಸಬೇಕು ಎಂದು ಕರೆ ನೀಡಿದ ಅವರು ಕಾಲೇಜ್ ಉಚಿತ ಭೋಜನ ನಿಧಿಗೆ ಅರ್ಥಿಕ ನೆರವು ನೀಡುವುದಾಗಿ ಘೋಷಿಸಿದರು. ಭಂಡಾರ್‌ಕಾರ‍್ಸ್ ಆಡಳಿತ ಮಂಡಳಿ ಅಧ್ಯಕ್ಷ ಡಾ. ಎಚ್. ಶಾಂತಾರಾಮ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೊಲೆಗೆ ಒಂದು ಕೋಟಿ ರೂಪಾಯಿ ಸುಫಾರಿ ನೀಡುವುದಾಗಿ ಪರೋಕ್ಷವಾಗಿ ಹೇಳಿಕೆಕೊಟ್ಟ ಆರ್ ಎಸ್ ಎಸ್ ಮುಖಂಡ ಚಂದ್ರಾವತ್ ಬಂಧನವಾಗದಿರುವುದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿಯಾಗಿದೆ. ಇಂತಹವರನ್ನು ಪ್ರಧಾನಿಗಳು ರಕ್ಷಿಸುತ್ತಿದ್ದಾರೆ. ದೇಶದ ಐಕ್ಯತೆ, ಸಮಗ್ರತೆಗೆ ಕೆಡುಕುಂಟು ಮಾಡುತ್ತಿರುವವರೆ ದೇಶದ ಚುಕ್ಕಾಣಿಯಂತೆ ಹಿಡಿದರೆ ದೇಶವಾಸಿಗಳ ಪರಿಸ್ಥಿತಿ ಏನಾಗಬಹುದು ಎಂಬುವುದು ಸೂಚನೆ ದಿನದಿಂದ ದಿನಕ್ಕೆ ಗೋಚರಿಸುತ್ತಿದೆ. ಇಂತಹ ಕೊಲೆಗಡುಕ ಸಂಸ್ಕೃತಿ ಯನ್ನು ಎಲ್ಲರೂ ವಿರೋಧಿಸಬೇಕಾಗಿದೆ ಎಂದು ಕುಂದಾಪುರ ಸಿಪಿಎಂ ಮುಖಂಡ ಕಾಂ.ಹೆಚ್ ನರಸಿಂಹ ಹೇಳಿದರು. ಅವರು ಕುಂದಾಪುರ ಶಾಸ್ತ್ರೀವೃತ್ತದಲ್ಲಿ ಭಾರತ ಕಮ್ಯೂನಿಷ್ಟ್ ಪಕ್ಷ ಕುಂದಾಪುರದ ನೇತೃತ್ವದಲ್ಲಿ ಪಿಣರಾಯಿ ವಿಜಯನ್ ಕೊಲೆಗೆ ಸುಫಾರಿ ನೀಡುವುದಾಗಿ ಹೇಳಿದ ಆರ್ ಎಸ್ ಎಸ್ ಮುಖಂಡನ ಹೇಳಿಕೆಯನ್ನು ಖಂಡಿಸಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡುತ್ತಿದ್ದರು. ಸಿಪಿಎಂ ಕುಂದಾಪುರ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಮಾತನಾಡಿ ಕೇರಳವು ದೇಶದಲ್ಲೇ ಕೋಮು ಸೌಹಾರ್ದತೆಗೆ ಹೆಸರಾದ ರಾಜ್ಯವಾಗಿದೆ. ಈ ಸೌಹಾರ್ದತೆಗೆ ಸಿಪಿಎಂ ಪಕ್ಷದ ತ್ಯಾಗದಿಂದಾಗಿ ನೆಲೆಗೊಂಡಿದೆ. ಇಂತಹ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿವಮೊಗ್ಗ ಬೈಂದೂರು ಸಂಸದ ಬಿ. ಎಸ್. ಯಡಿಯೂರಪ್ಪರ ಅವರನ್ನು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಬಿ.ಎಂ ಸುಕುಮಾರ ಶೆಟ್ಟಿ ನೇತೃತ್ವದ ತಂಡ ಭೇಟಿ ಮಾಡಿ ಮರವಂತೆ ಕಡಲ್ಕೊರೆತ, ಬೈಂದೂರು ಮೇಲ್ಸೆತುವೆ ಹಾಗೂ ಕೆರಾಡಿ ದತ್ತುಗ್ರಾಮಕ್ಕೆ ಅನುದಾನ ಬಿಡುಗಡೆ ಮುಂತಾದ ವಿಷಯಗಳ ಬಗೆಗೆ ಮನವಿ ಸಲ್ಲಿಸಿತು. ಮರವಂತೆಯಲ್ಲಿ ಕಡಲ್ಕೊರೆತದಿಂದ ರಸ್ತೆ ಹಾಗೂ ಮನೆಗಳನ್ನು ಕಳೆದುಕೊಳ್ಳುವ ಹಂತಕ್ಕೆ ಬಂದಿದ್ದು ಕಡಲ್ಕೊರೆತಕ್ಕೆ ಸೂಕ್ತ ವ್ಯವಸ್ಥೆ ಮಾರ್ಗೋಪಾಯಗಳನ್ನು ಕಂಡುಕೊಳ್ಳುವುದು. ಬೈಂದೂರು ವೃತ್ತದಲ್ಲಿ ಅಂಡರ್ ಪಾಸ್ ಮಾಡಲು ರಾಷ್ಟೀಯ ಹೆದ್ದಾರಿಯವರು ಯೋಚಿಸಿದ್ದು ಸದರಿ ಯೋಜನೆಯನ್ನು ಕೈಬಿಟ್ಟು ಮೇಲ್ಸೆತುವೆ ಒಪ್ಪಿಗೆ ನೀಡುವಂತೆ ಶೀಪಾರಸ್ಸು ಮಾಡುವುದು ಹಾಗೂ ಕೆರಾಡಿ ದತ್ತು ಗ್ರಾಮಕ್ಕೆ ವಾರಾಹಿ ಯೋಜನೆಯಡಿ ಅನುದಾನ ಬಿಡುಗಡೆ ಮಾಡಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಒತ್ತಾಯಿಸಲಾಯಿತು. ಮನವಿಗೆ ಸ್ಪಂದಿಸಿದ ಸಂಸದ ಬಿ.ಎಸ್. ಯಡಿಯೂರಪ್ಪ ಕ್ಷೇತ್ರದ ಅಭಿವೃದ್ಧಿಗೆ ಬದ್ಧನಾಗಿದ್ದು ಕಡಲ್ಕೋರೆತ, ಅಂಡರ್ ಪಾಸ್ ಸಮಸ್ಯೆಗಳ ಬಗೆಗೆ ಇಲಾಖಾಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕ್ರೀಯಾಶೀಲ ಚಿಂತನೆಯೊಂದಿಗೆ ತನ್ನದೇ ವೈಶಿಷ್ಟ್ಯವನ್ನು ಹೊಂದಿರುವ ಮಾತಾ ಮೊಂಟೆಸ್ಟೋರಿಯ ಈ ವರ್ಷದ ಕ್ರೀಡೋತ್ಸವ ಕೋಡಿಯ ದ್ವೀಪ ಸ್ತಂಭದ ಬಳಿ ಕಡಲ ತೀರದಲ್ಲಿ ಜರುಗಿತು. ಕ್ರೀಡೋತ್ಸವವನ್ನು ಉದ್ದೇಶಿಸಿ ಮಾತನಾಡಿದ ಸಂಸ್ಥೆಯ ವ್ಯವಸ್ಥಾಪಕರಾದ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಅವರು ಕಳೆದ ೭ ವರ್ಷಗಳಿಂದ ಸಂಸ್ಥೆಯು ಶಿಕ್ಷಣ ಕ್ಷೇತ್ರದಲ್ಲಿ ತೋರಿದ ಬದ್ಧತೆ ಹಾಗೂ ಅದರ ಉಪಯೋಗವನ್ನು ಪಡೆದ ವಿದ್ಯಾರ್ಥಿಗಳ ಬೌದ್ಧಿಕ ಮಟ್ಟದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಮಕ್ಕಳನ್ನು ಕೇವಲ ಪುಸ್ತಕದೊಂದಿಗೆ ಏಕತಾನತೆಗೆ ಒಳಪಡಿಸದೆ ಅವರ ದೈಹಿಕ ಮಾನಸಿಕ ಧೃಢತೆಗೆ ಕ್ರೀಡಾ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡುತ್ತಿರುವ ಪೋಷಕರು ಅಭಿನಂದನಾರ್ಹರು ಎಂದು ನುಡಿದರು. ವಿವಿಧ ವಯೋಮಿತಿಯಲ್ಲಿ ನಡೆದ ಕ್ರೀಡಾ ಸ್ಪರ್ಧೆಯಲ್ಲಿ ಉತ್ಸಾಹದಿಂದ ಭಾಗವಹಿಸಿದ ಪುಟಾಣಿಗಳು ಆನಂದಕ್ಕೆ ಪಾರವೇ ಇರಲಿಲ್ಲ. ಸಂಸ್ಥೆಯಲ್ಲಿ ವಿದ್ಯಾರ್ಜನೆಗೈದ ಹಿರಿಯ ವಿದ್ಯಾರ್ಥಿಗಳಿಗೂ ವಿಶೇಷವಾಗಿ ಕ್ರೀಡಾ ಕೂಟವನ್ನು ಏರ್ಪಡಿಸಲಾಗಿತ್ತು. ಪೋಷಕರಿಗಾಗಿ ಹಮ್ಮಿಕೊಂಡ ಕ್ರೀಡಾ ಚಟುವಟಿಕೆಗಳು ವಿಶೇಷವಾಗಿ ತಂದೆ ತಾಯಿಯರ ಮೂರು ಕಾಲಿನ ಓಟ ಮುದ್ದು ಮಕ್ಕಳ ಮನಸ್ಸಿಗೆ ಇನ್ನಷ್ಟು ಆಹ್ಲಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಪರಿವರ್ತನ ಪುನರ್ ವಸತಿ ಕೇಂದ್ರ ಮತ್ತು ಮನಸ್ಮಿತಾ ಫೌಂಡೇಶನ್, ಕೋಟ ಇವರ ಆಶ್ರಯದಲ್ಲಿ ಕೋಟದ ಪರಿವರ್ತನ ಪುನರ್ ವಸತಿ ಕೇಂದ್ರದಲ್ಲಿ ೧೭ನೇ ಉಚಿತ ಮಾನಸಿಕ ಆರೋಗ್ಯ ತಪಾಸಣೆ ಮತ್ತು ಔಷಧ ವಿತರಣೆ ಶಿಬಿರ ನಡೆಯಿತು. ಕೋಟ ಸಿ.ಎ ಬ್ಯಾಂಕ್‌ನ ಅಧ್ಯಕ್ಷರಾದ ತಿಮ್ಮ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿ, ಮಾನಸಿಕ ರೋಗವು ಒಂದು ಸಾಮಾಜಿಕ ಕಳಂಕವೆಂದು ಭಾವಿಸದೆ ಮನೋ ವೈದ್ಯರ ಚಿಕಿತ್ಸೆಯನ್ನು ಪಡೆಯುವ ಪ್ರವೃತ್ತಿ ಇಂದು ಜನರಲ್ಲಿ ಹೆಚ್ಚುತ್ತಿದೆ ಹಾಗೂ ಅವರಿಗೂ ಮತ್ತು ಅವರ ಕುಟುಂಬದವರಿಗೂ ಮಾನಸಿಕ ನೆಮ್ಮದಿ ಸಿಗುವಂತಾಗುತ್ತಿದೆ ಎಂದು ಹೇಳಿದರು. ಮುಖ್ಯ ಅಥಿತಿಗಳಾಗಿ ಭಾಗವಹಿಸಿದ ಶ್ರೀಮತಿ ದೇವಕಿ .ಕೆ. ಶೆಟ್ಟಿ (ಅಧ್ಯಕ್ಷರು ಲಯನೆಸ್ ಕ್ಲಬ್ ಬ್ರಹ್ಮಾವರ ಬಾರ್ಕೂರು) ಇವರು ಮಾತನಾಡಿ ಮಾನಸಿಕ ಸಮಸ್ಯೆಗಳನ್ನು ಮುಚ್ಚಿಡದೆ ಆದಷ್ಟು ಶ್ರೀಘ್ರದಲ್ಲಿ ವೈದ್ಯರಿಗೆ ತೋರಿಸಿ ಚಿಕಿತ್ಸೆ ಪಡೆದುಕೊಳ್ಳುವುದು ಉತ್ತಮ ಎಂದು ಅಭಿಪ್ರಾಯ ಪಟ್ಟರು. ಶ್ರೀಮತಿ ಶಕುಂತಲಾ ಶೆಟ್ಟಿ (ನಿವೃತ್ತ ನರ್ಸಿಂಗ್ ಸೂಪರಿಂಟೆಂಡೆಂಟ್) ಇವರು ಈ ಪರಿಸರದ ಜನರು ಶಿಬಿರದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಾವುಂದದ ಸರಕಾರಿ ಪದವಿಪೂರ್ವ ಕಾಲೇಜಿನ ಬಳಿ ನಿರ್ಮಿಸಲು ಉದ್ದೇಶಿಸಿರುವ ಹೆದ್ದಾರಿ ಅಂಡರ್ ಪಾಸ್‌ನಿಂದ ಅನುಕೂಲಕ್ಕಿಂತ ಅನನುಕೂಲವೇ ಅಧಿಕ ಎಂದು ವಾದಿಸುತ್ತಿರುವ ಸಾರ್ವಜನಿಕರು ಸ್ಥಳದಲ್ಲಿ ಪ್ರತಿಭಟನೆ ನಡೆಸಿ ಕುಂದಾಪುರ ಉಪವಿಭಾಗಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ಈ ಹಿಂದೆ ಸಮೀಪದ ಪದ್ಮಾವತಿ ದೇವಸ್ಥಾನದಲ್ಲಿ ನಡೆದ ಸಾರ್ವಜನಿಕರ ಸಭೆಯಲ್ಲಿ ಈ ಸ್ಥಳದಲ್ಲಿ ಅಂಡರ್ ಪಾಸ್ ನಿರ್ಮಿಸುವುದರಿಂದ ದೇವಾಲಯಕ್ಕೆ ಬಂದು ಹೋಗುವ ಭಕ್ತರಿಗೆ, ಅನ್ಯ ಸಂಚಾರಿಗಳಿಗೆ ತೀವ್ರ ತೊಂದರೆಯಾಗಲಿದೆ. ಇಲ್ಲಿ ಯಾವುದೇ ಸ್ಥಳೀಯ ರಸ್ತೆ ಹೆದ್ದಾರಿಗೆ ಸೇರುತ್ತಿಲ್ಲ. ಇಲ್ಲಿ ಅಂಡರ್ ಪಾಸ್ ನಿರ್ಮಿಸಿದರೆ ಜನ ಮತ್ತು ವಾಹನ ಸಂಚಾರಕ್ಕೆ ತೊಂದರೆಯಾಗುತ್ತದೆ. ಅದರ ಬದಲಾಗಿ ಹೆದ್ದಾರಿ ಇಕ್ಕಡೆಗಳ ಬಡಾಕೆರೆ-ಮರವಂತೆ ಸ್ಥಳೀಯ ರಸ್ತೆಗಳ ಕೂಡುಸ್ಥಳದಲ್ಲಿ ಅಥವಾ ಅರೆಹೊಳೆ ಕ್ರಾಸ್‌ನಲ್ಲಿ ಅದನ್ನು ನಿರ್ಮಿಸಿದರೆ ಜನೋಪಕಾರಿಯಾಗುವುದು ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಈ ಸಭೆಯಲ್ಲಿ ತಾಲೂಕು ಪಂಚಾಯತ್ ಸದಸ್ಯರಾದ ಶ್ಯಾಮಲಾ ಕುಂದರ್, ಜಗದೀಶ ಪೂಜಾರಿ, ಮಹೇಂದ್ರಕುಮಾರ್, ಗ್ರಾಮ ಪಂಚಾಯತ್ ಅಧ್ಯಕ್ಷ ನರಸಿಂಹ ದೇವಾಡಿಗ, ಉಪಾಧ್ಯಕ್ಷೆ ಜಯಂತಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಯಡ್ತರೆ ಗ್ರಾಮ ಪಂಚಾಯತ್ ಆಯೋಜಿಸಿದ ಪ್ಲಾಸ್ಟಿಕ್ ನಿಷೇಧ, ಕಸ ವಿಲೇವಾರಿಗಳ ಬಗ್ಗೆ ಸಾಮಾಜಿಕ ಜಾಗೃತಿ ಮೂಡಿಸುವ ಜಾಥಾಕ್ಕೆ ಸ್ಥಳೀಯ ಬಿಇಒ ಪ್ರಕಾಶ್ ಚಾಲನೆ ನೀಡಿದರು. ರತ್ತೂಬಾ ಪ್ರೌಢಶಾಲೆ, ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಪ್ಲಾಸ್ಟಿಕ್ ತ್ಯಾಜ್ಯ ನಿಷೇಧದ ಕುರಿತು ಘೋಷಣೆಗಳನ್ನು ಕೂಗುತ್ತಾ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಗ್ರಾಪಂ ಸದಸ್ಯರು, ಪಿಡಿಒ ರುಕ್ಕನ ಗೌಡ ಜಾಥಾದ ನೇತೃತ್ವವಹಿಸಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಹೈಕಾಡಿ ಬಳಿ ಚಲಿಸುತ್ತಿದ್ದ ಬಸ್ಸಿನಿಂದ ಕೆಳಕ್ಕೆ ಬಿದ್ದ ಮಹಿಳೆಯೋರ್ವವರು ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ಹಾಲಾಡಿ ಗ್ರಾಮದ ಕಾಸಾಡಿ ನಿವಾಸಿ ನಾಗರಾಜ ದಾಮ್ಲೆ ಎಂಬುವವರ ಪತ್ನಿ ಸರೋಜಾ ಯಾನೆ ರೋಹಿಣಿ(೪೨) ಮೃತ ದುರ್ದೈವಿ. ಮಗ ಮೋಹಿತ್‌ನಲ್ಲಿ ಚಿಕಿತ್ಸೆಗೆ ಕರೆದುಕೊಂಡು ಬಂದಿದ್ದ ಸರೋಜಾ, ಹಾಲಾಡಿಯಲ್ಲಿ ಬಸ್ಸು ಹತ್ತಿ ಮುಂದಿನ ಬಾಗಿಲಿನ ಬಳಿ ನಿಂತಿದ್ದರು. ಹೈಕಾಡಿ ಬಳಿ ಬಸ್ಸು ರಸ್ತೆಯಲ್ಲಿದ್ದ ಹೊಂಡವನ್ನು ಜೀಕಿ ಮುಂದಕ್ಕೆ ಸಾಗಿದ್ದರಿಂದ ನಿಯಂತ್ರಣ ಕೊಳೆದುಕೊಂಡ ಮಹಿಳೆ ಬಸ್ಸಿಂದ ಕೆಳಕ್ಕೆ ಬಿದ್ದಿದ್ದು ಚರಂಡಿಗೆ ತಲೆ ಅಪ್ಪಳಿಸಿ ಸಾವನ್ನಪ್ಪಿದ್ದಾರೆ. ಬಸ್ಸಿನಲ್ಲಿ ಕುಳಿತುಕೊಂಡಿದ್ದ ಮಗನ ಕಣ್ಣೆದುರೇ ತಾಯಿ ಕೆಳಕ್ಕೆ ಬಿದ್ದು ಸಾವನ್ನಪ್ಪಿದ್ದು ಇತರ ಪ್ರಯಾಣಿಕರಿಗೂ ಆಘಾತವನ್ನುಂಟುಮಾಡಿತ್ತು. ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರಾವಳಿಯ ವಿಶಿಷ್ಟ, ವಿಶೇಷ ಪರಂಪರೆ ಗೊಂಬೆಯಾಟ ರಂಗಭೂಮಿಯ ಹರಿಕಾರ, ಸೂತ್ರಕ್ರೀಡೆಯ ಗಾರುಡಿಗ ಕೊಗ್ಗ ದೇವಣ್ಣ ಕಾಮತ್‌ರ ಹೆಸರಿನಲ್ಲಿ ಕೊಡ ಮಾಡುವ ೨೦೧೬-೧೭ರ ಸಾಲಿನ ಪ್ರಶಸ್ತಿಯನ್ನು ನಾಡಿನ ಯಕ್ಷಗಾನ ಕ್ಷೇತ್ರದ ಖ್ಯಾತ ಕಲಾವಿದ, ಏಕವ್ಯಕ್ತಿ ಪ್ರದರ್ಶನದ ರೂವಾರಿ ಮಂಟಪ ಪ್ರಭಾಕರ ಉಪಾಧ್ಯರಿಗೆ ನೀಡಲು ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಬಳಗ ಆಯ್ಕೆ ಮಾಡಿದೆ. ಮಂಟಪ ಪ್ರಭಾಕರ ಉಪಾಧ್ಯರು ಯಕ್ಷಗಾನ ಕ್ಷೇತ್ರದಲ್ಲಿ ಸಾಧಿಸಿದ ಗಣನೀಯ ಸೇವೆ, ಅದರಲ್ಲೂ ಏಕವ್ಯಕ್ತಿ ಪ್ರದರ್ಶನದ ನೂತನ ಕಲ್ಪನೆಗೆ ಜೀವ ತುಂಬಿ ದೇಶ-ವಿದೇಶಗಳಲ್ಲಿ ನಿರಂತರ ತನ್ನ ಛಾಪನ್ನು ಮೂಡಿಸಿ ಅಸಂಖ್ಯಾತ ಅಭಿಮಾನಿಗಳ ಹೃನ್ಮನಗಳನ್ನು ತಣಿಸಿರುವ ನೆಲೆಯಲ್ಲಿ ಪ್ರಶಸ್ತಿ ಸಮಿತಿ ಇವರ ಹೆಸರನ್ನು ಅಂತಿಮಗೊಳಿಸಿದೆ. ಹಾಗೇ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಎರಡನೇ ವಾರ್ಷಿಕೋತ್ಸವ ಎಪ್ರಿಲ್ ೧೬ ನೇ ತಾರೀಕಿನಂದು ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ನಡೆಯಲಿದ್ದು ಈ ಸಂದರ್ಭದಲ್ಲಿ ಭಾಗವಹಿಸುವ ಗಣ್ಯರಿಂದ ಈ ಪ್ರಶಸ್ತಿ ಪ್ರದಾನ ಸಮಾರಂಭ ಅದ್ದೂರಿಯಾಗಿ ನಡೆಯಲಿದೆ ಎಂದು ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಪ್ರಕಟಣೆಯಲ್ಲಿ…

Read More

ಕುಂದಾಪ್ರ ಡಾಟ್ ಕಾಂ ವಿಡಿಯೋ ನೋಡಿ ಎಸ್ಪಿ ರವಿ ಚನ್ನಣ್ಣನವರ್ ನಟ ಕಿಚ್ಚ ಸುದೀಪ್ ಹಾಗೂ ಕನ್ನಡಿಗರ ಬಗ್ಗೆ ಏನಂದ್ರು ಗೊತ್ತಾ?  

Read More