ಕುಂದಾಪುರ: ಯುವಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವಕೇಂದ್ರ ಉಡುಪಿ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ, ರೋಟರಿ ಕ್ಲಬ್ ಕುಂದಾಪುರ, ಕೆ.ಎಸ್.ಎಸ್. ಪ್ರೌಢಶಾಲೆ ಹಕ್ಲಾಡಿ ಹಾಗೂ ಸ್ಪಂದನ ಯುವಕ ಮಂಡಲ ಗುಜ್ಜಾಡಿ ಇವರ ಜಂಟಿ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಸಂಗವಾಗಿ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮ ಬುಧವಾರ ಹಕ್ಲಾಡಿಯ ಕೆ.ಎಸ್.ಎಸ್. ಪ್ರೌಢಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಂಗೇಶ ಶೆಣೈ ಉದ್ಘಾಟಿಸಿದರು. ಕಿಶೋರ ಕುಮಾರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕುಂದಾಫುರ ರೋಟರಿ ಕ್ಲಬ್ನ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಕಾರ್ಯದರ್ಶಿ ಸಂತೋಷ ಕೋಣಿ, ಉಡುಪಿ ನೆಹರು ಯುವಕೇಂದ್ರದ ಜಿಲ್ಲಾ ಸಲಹೆಗಾರ ನರಸಿಂಹ ಗಾಣಿಗ, ಗುಜ್ಜಾಡಿ ಸ್ಪಂದನ ಯುವಕ ಮಂಡಲದ ಅಧ್ಯಕ್ಷ ರಾಘವೇಂದ್ರ ಮೊದಲಾದವರು ಉಪಸ್ಥಿತರಿದ್ದರು. ವಸುಧಾ ಎಸ್.ಎಸ್. ಸ್ವಾಗತಿಸಿದರು. ಸುಜಾತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಯೋಗೇಶ ಹೆಬ್ಬಾರ್ ವಂದಿಸಿದರು.
Author: ನ್ಯೂಸ್ ಬ್ಯೂರೋ
ಗಂಗೊಳ್ಳಿ: ಸ್ವಾಮಿ ವಿವೇಕಾನಂದರು ಬಿಟ್ಟು ಹೋದ ಆದರ್ಶಗಳು, ಚಿಂತನೆಗಳಿಂದ ವಿಶ್ವದಲ್ಲಿಯೇ ಓರ್ವ ಮಹಾನ್ ಪುರುಷರಾಗಿ ಗುರುತಿಸಲ್ಪಡುತ್ತಿದ್ದಾರೆ. ಹಿಂದು ಧರ್ಮವನ್ನು ಜಗತ್ತಿಗೇ ಸಾರುವ ಕೈಂಕರ್ಯವನ್ನು ಮಾಡುತ್ತಿದ್ದ ವಿವೇಕಾನಂದರಿಗೆ ಹಿಂದು ಧರ್ಮದ ಬಗ್ಗೆ ಅಪಾರ ಪ್ರೀತಿ ಕಾಳಜಿ ಇದ್ದಿತ್ತು. ಹಿಂದು ಧರ್ಮದ ಉನ್ನತಿಗಾಗಿ ವಿಶ್ವದೆಲ್ಲೆಡೆ ಸಂಚಾರ ಮಾಡಿದ ನಮ್ಮ ದೇಶದ ಸ್ವಾಮೀ ವಿವೇಕಾನಂದರ ಜನ್ಮ ದಿನವನ್ನು ಆಚರಿಸಿ ಅವರಿಗೆ ಗೌರವ ಸಲ್ಲಿಸಬೇಕಾಗಿರುವುದು ಈ ದೇಶದ ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಾಗಿದೆ ಎಂದು ವಿಶ್ವ ಹಿಂದೂ ಪರಿಷತ್ನ ಉಡುಪಿ ಜಿಲ್ಲಾಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ ಹೇಳಿದರು. ಅವರು ಗಂಗೊಳ್ಳಿಯ ಶ್ರೀ ವೀರೇಶ್ವರ ದೇವಸ್ಥಾನದ ವಠಾರದಲ್ಲಿ ಕ್ರಾಂತಿ ವೀರರ ಅಭಿಮಾನಿ ಬಳಗದ ಆಶ್ರಯದಲ್ಲಿ ಜರಗಿದ ಸ್ವಾಮಿ ವಿವೇಕಾನಂದರ 153ನೇ ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದರು. ಸ್ವಾಮಿ ವಿವೇಕಾನಂದ ಆದರ್ಶ ಚಿಂತನೆಗಳು ನಮ್ಮ ಯುವ ಜನಾಂಗಕ್ಕೆ ಮಾದರಿಯಾಗಬೇಕು. ಅತಿ ಚಿಕ್ಕ ವಯಸ್ಸಿನಲ್ಲಿ ಇವರು ಚಿಕಾಗೋದಲ್ಲಿ ಮಾಡಿದ ಭಾಷಣ ಇಂದಿಗೂ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿದೆ. ಎಲ್ಲರಲ್ಲೂ ಸಹೋದರ ಸಹೋದರಿಯರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅತಿಥಿ ಉಪನ್ಯಾಸಕರು ಹಲವು ವರ್ಷಗಳಿಂದ ಕಡಿಮೆ ಸಂಬಳದಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಆ ಸಂಬಳವನ್ನೂ ಮೂರು ತಿಂಗಳಿನಿಂದ ನೀಡದೆ ಸತಾಯಿಸುತ್ತಿರುವುದಲ್ಲದೇ ನಮ್ಮ ಬೇಡಿಕೆಗಳಿಗೂ ಸರಕಾರ ಕಿವಿಗೊಡುತ್ತಿಲ್ಲ. ಇದು ಹೀಗೆಯೇ ಮುಂದುವರಿದರೆ ತರಗತಿ ಪಾಠಗಳನ್ನು ನಿಲ್ಲಿಸಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಉಡುಪಿ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ರಂಜಿತ್ಕುಮಾರ್ ಶೆಟ್ಟಿ ವಕ್ವಾಡಿ ಹೇಳಿದರು. ಕುಂದಾಪುರ ಮಿನಿ ವಿಧಾನಸೌಧದ ಎದುರು ಅತಿಥಿ ಉಪನ್ಯಾಸಕರ ಬಾಕಿ ಇರುವ ಸಂಬಳ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಹಾಗೂ ಕುಂದಾಪುರ ತಾಲೂಕು ಅತಿಥಿ ಉಪನ್ಯಾಸಕರ ಸಂಘದ ನೇತೃತ್ವದಲ್ಲಿ ಹಮ್ಮಿಕೊಂಡ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದರು. (ಕುಂದಾಪ್ರ ಡಾಟ್ ಕಾಂ ಸುದ್ದಿ) ಅತಿಥಿ ಉಪನ್ಯಾಸಕರುಗಳು ಹಲವಾರು ವರ್ಷಗಳಿಂದ ಸೇವೆಯಲ್ಲಿದ್ದರೂ ಅವರನ್ನು ಸೇವಾ ಭದ್ರತೆ ಕಾಡುತ್ತಿದೆ. ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಿ ತಿಂಗಳಿಗೆ ಇಪ್ಪತ್ತೈದು ಸಾವಿರ ವೇತನ ನಿಗದಿಪಡಿಸಬೇಕು ಹಾಗೂ ಖಾಯಂಗೊಳಿಸುವವರೆಗೆ ಅವರ ಸೇವಾ ಅವಧಿಯನ್ನು ಒಂದು ವರ್ಷಕ್ಕೆ ವಿಸ್ತರಿಸಿ ಕ್ಲಪ್ತ…
ಕೊಲ್ಲೂರು: ದಕ್ಷಿಣ ಭಾರತದ ಖ್ಯಾತ ಚಲನಚಿತ್ರ ನಟ ಶರತ್ ಕುಮಾರ್ ಹಾಗೂ ಅವರ ಪತ್ನಿ ರಾಧಿಕಾ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು ವ್ಯವಸ್ಥಾಪನಾ ಸಮಿತಿ ಅದ್ಯಕ್ಷರಾದ ಕೃಷ್ಣಪ್ರಸಾದ್ ಅಡ್ಯಂತಾಯ ಹಾಗೂ ಕಾರ್ಯನಿರ್ವಹಣಾಧಿಕಾರಿ ಟಿ.ಆರ್. ಉಮ ಬರಮಾಡಿಕೊಂಡು ದೇವಳದ ವತಿಯಿಂದ ಗೌರವಿಸಿದರು ಈ ಸಂದರ್ಭದಲ್ಲಿ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಹೆಚ್, ಕೃಷ್ಣಮೂರ್ತಿ , ಅಧೀಕ್ಷಕ ಕೆ, ರಾಮಕೃಷ್ಣ ಅಡಿಗ ಉಪಸ್ಥಿತರಿದ್ದರು.
ಗಂಗೊಳ್ಳಿ: ಕಳೆದ ಹಲವು ತಿಂಗಳಿನಿಂದ ಕಾಡುತ್ತಿರುವ ಮತ್ಸ್ಯಕ್ಷಾಮವನ್ನು ನಿವಾರಿಸುವಂತೆ ಹಾಗೂ ಹೇರಳ ಮತ್ಸ್ಯಸಂಪತ್ತಿಗಾಗಿ ಪ್ರಾರ್ಥಿಸಿ ಇಂದು ಗಂಗೊಳ್ಳಿಯ ಬಂದರು ಪ್ರದೇಶದಲ್ಲಿ ಮೀನುಗಾರ ಮಹಿಳಾ ಕಾರ್ಮಿಕರು ವಿಶೇಷ ಸಮುದ್ರ ಪೂಜೆ ಹಾಗೂ ಗಂಗಾ ಪೂಜೆ ನೆರವೇರಿಸಿದರು. ಕಳೆದ ಹಲವು ತಿಂಗಳಿನಿಂದ ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಮೀನುಗಾರಿಕೆ ಇಲ್ಲದೆ ಸ್ತಬ್ಧಗೊಂಡಿದೆ. ದೋಣಿಗಳು, ಬೋಟುಗಳು ದಡ ಸೇರಿರುವುದರಿಂದ ಮೀನುಗಾರರು ಮೀನುಗಾರಿಕೆ ಇಲ್ಲದೆ ಜೀವನ ಸಾಗಿಸಲು ಕಷ್ಟಪಡುತ್ತಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಹೇರಳ ಮತ್ಸ್ಯ ಸಂಪತ್ತು ದೊರೆಯುವಂತಾಗಲಿ ಆ ಮೂಲಕ ಮೀನುಗಾರರ ಜೀವನ ಉತ್ತಮವಾಗಲಿ ಎಂದು ಮಹಿಳಾ ಮೀನುಗಾರರು ಶ್ರೀದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಬೈಂದೂರು: ರಂಗಭೂಮಿ (ರಿ.) ಉಡುಪಿ ಇವರ ಆಶ್ರಯದಲ್ಲಿ ಜರುಗಿದ 36ನೇ ರಾಜ್ಯಮಟ್ಟದ ನಾಟಕ ಸ್ಪರ್ಧೆಯಲ್ಲಿ ಲಾವಣ್ಯ (ರಿ.) ಬೈಂದೂರು ತಂಡವು ರಾಜೇಂದ್ರ ಕಾರಂತ ಬೆಂಗಳೂರು ಇವರು ರಚಿಸಿದ ಮುದ್ದಣ್ಣನ ಪ್ರಮೋಷನ್ ಪ್ರಸಂಗ ನಾಟಕವನ್ನು ಪ್ರದರ್ಶಿಸಿ ತೃತೀಯ ಬಹುಮಾನವನ್ನುಗಳಿಸಿದೆ. ಇತ್ತೀಚೆಗೆ ನಡೆದ ಬಹುಮಾನ ವಿತರಣಾ ಸಮಾರಂಭದಲ್ಲಿ ಕಲಾವಿದರು ಪ್ರಶಸ್ತಿಯನ್ನು ಸ್ವೀಕರಿಸಿದರು.
ಬೈಂದೂರು: ಕೇವಲ ಬಾಹ್ಯ ಮೆರಗನ್ನು ನೀಡುವ, ಮಾನಸಿಕ ಸಂತೋಷವನ್ನು ನೀಡದ ಸಂಸ್ಕೃತಿ ಪಾಶ್ಚಾತ್ಯ ದೇಶಗಳಲ್ಲಿ ಬೆಳೆದು ಬಂದಿದೆ. ಭಾರತೀಯ ಸಂಸ್ಕೃತಿಯಲ್ಲಿನ ಸಭ್ಯತೆ, ಮನಸ್ಸನ್ನು ಸಂಸ್ಕರಿಸುವ ಚಿಕಿತ್ಸಕ ಗುಣವನ್ನು ಅಲ್ಲಿ ಕಾಣಲು ಸಾಧ್ಯವಿಲ್ಲ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಡಾ. ಸಯ್ಯದ್ ಜಮಿರುಲ್ಲಾ ಷರೀಫ್ ಹೇಳಿದರು ಇಲ್ಲಿನ ಶಾರದಾ ವೇದಿಕೆಯಲ್ಲಿ ಸುರಭಿ ರಿ. ಬೈಂದೂರು ಇದರ 16ನೇ ವರ್ಷದ ಸಂಭ್ರಮ ’ಸುರಭಿ ಜೈಸಿರಿ’ಯಲ್ಲಿ ಅವರು ಸಮಾರೋಪ ನುಡಿಗಳನ್ನಾಡಿ ಮನಸ್ಸನ್ನು ತಿದ್ದುವ, ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯವ ಸಂಸ್ಕೃತಿಗೆ ಹತ್ತಾರು ಮುಖಗಳಿವೆ. ಅದು ಕಲೆ, ಸಾಹಿತ್ಯ, ಸಂಗೀತ, ನೃತ್ಯದ ರೂಪದಲ್ಲಿ ಪ್ರಕಟಗೊಳ್ಳುತ್ತದೆ. ಈ ಒಂದಾದರೂ ಪ್ರಕಾರದಲ್ಲಿ ತೊಡಗಿಸಿಕೊಂಡು ನನ್ನನ್ನು ನಾವು ಸಂಸ್ಕರಿಸಿಕೊಳ್ಳುವುದರೊಂದಿಗೆ ಸಂಸ್ಕೃತಿಯ ಉಳಿವಿಗೂ ಕಾರಣರಾಗಬೇಕಿದೆ ಎಂದರು. ಯಡ್ತರೆ ಗ್ರಾ.ಪಂ ಅಧ್ಯಕ್ಷ ನಾಗರಾಜ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಗಣೇಶ್ ಕೊರಗ, ಸುರಭಿಯ ನಿರ್ದೇಶಕ ಸುಧಾಕರ ಪಿ., ವ್ಯವಸ್ಥಾಪಕ ಕೃಷ್ಣಮೂರ್ತಿ ಉಡುಪ ಉಪಸ್ಥಿತರಿದ್ದರು. ವಿಶ್ವಮಾನ್ಯ ಕನ್ನಡಿಗ…
ಕುಂದಾಪುರ: ಮುಂಬರುವ ತಾಪಂ. ಜಿಪಂ ಚುನಾವಣೆಗೆ ಬಿಜೆಪಿ ಈಗಾಗಲೇ ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಜಿಪಂ.ನಲ್ಲಿ ಪುನ: ಅಧಿಕಾರಕ್ಕೇರುವ ಪ್ರಯತ್ನ ಪಕ್ಷದಲ್ಲಿ ನಡೆಯುತ್ತಿದೆ. ಈಗಾಗಲೇ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಕ್ಷೇತ್ರ ಮಟ್ಟದಿಂದ ಶಿಫಾರಸ್ಸುಗೊಂಡ ಅಭ್ಯರ್ಥಿಗಳ ಪಟ್ಟಿಯನ್ನು ಜಿಲ್ಲಾ ಮಟ್ಟದ ಸಮಿತಿ ಪರಿಶೀಲನೆ ನಡೆಸಿ ರಾಜ್ಯ ಸಮಿತಿಗೆ ಕಳುಹಿಸಿಕೊಡಲಿದೆ. ಹೀಗಾಗಿ ಚುನಾವಣೆಗೆ ಬಿಜೆಪಿ ಸಕಲ ಸಿದ್ಧತೆ ನಡೆಸುತ್ತಿದ್ದು ಯಾವುದೇ ಗೊಂದಲಗಳಿಗೆ ಅವಕಾಶ ನೀಡದಂತೆ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಮುಖ್ಯಮಂತ್ರಿ, ಸಂಸದ ಬಿ.ಎಸ್.ಯಡಿಯೂರಪ್ಪ, ವಿಧಾನ ಪರಿಷತ್ ಸದಸ್ಯ ಬಿ.ಜೆ.ಪುಟ್ಟಸ್ವಾಮಿ ಮತ್ತು ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರ ಅನುದಾನದಲ್ಲಿ ಸುಮಾರು 7.5ಲಕ್ಷ ರೂ. ವೆಚ್ಚದ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಜ್ಜಾಡಿ ಗ್ರಾಮ ಪಂಚಾಯತ್ನ ಕೊಡಪಾಡಿ ಮುಖ್ಯರಸ್ತೆಯಿಂದ ಶ್ರೀ ಗುಹೇಶ್ವರ ದೇವಸ್ಥಾನದವರೆಗಿನ ರಸ್ತೆಯ ಮರು ಡಾಂಬರೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ…
ಬೈಂದೂರು: ಜೇನು ಸಾಕಾಣಿಕೆ ಕೃಷಿಯ ಅವಿಭಾಜ್ಯ ಅಂಗ. ದೈನಿಂದಿನ ಬಿಡುವಿನ ಸಮಯದಲ್ಲಿ ಜೇನು ಕೃಷಿ ಮಾಡಿದರೆ ಕುಟುಂಬದ ಆರ್ಥಿಕ ವ್ಯವಸ್ಥೆಯೂ ಕೂಡಾ ಹೆಚ್ಚುತ್ತದೆ. ಅಲ್ಲದೇ ಮಹಿಳೆಯರೂ ಕೂಡಾ ಇದರಲ್ಲಿ ತೊಡಗಿಸಿಕೊಳ್ಳಬಹುದು ಎಂದು ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಕೆ.ಪಿ. ಚಿದಂಬರ್ ಹೇಳಿದರು. ಗೋಳಿಹೊಳೆ ಗ್ರಾಪಂ ವ್ಯಾಪ್ತಿಯ ಶ್ರೀ ಮಹಿಷಾಸುರ ಮರ್ಧಿನಿ ಸಭಾಭವನದಲ್ಲಿ ತಾಲೂಕು ಪಂಚಾಯತ್ ಕುಂದಾಪುರ, ತೋಟಗಾರಿಕೆ ಇಲಾಖೆ ಮತ್ತು ರಾಜ್ಯ ವಲಯ ಯೋಜನೆಯ ಜಂಟಿ ಆಶ್ರಯದಲ್ಲಿ ನಡೆದ ರೈತರಿಗೆ ಜೇನುಕೃಷಿ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಜೇನುಹುಳುಗಳು ಆಹಾರಕ್ಕಾಗಿ (ಮಕರಂದ) ಹೂವುಗಳನ್ನು ಅರಸುತ್ತಾ ಸುಮಾರು 3-4ಕಿ.ಮಿ ವರೆಗೆ ಸಾಗುತ್ತದೆ. ಪ್ರತಿದಿನ ಬೆಳಗ್ಗೆ 6ರ ಸಮಯದಲ್ಲಿ ಕೆಲಸ ಪ್ರಾರಂಭಿಸುವ ಇವುಗಳಿಗೆ ವಿಶ್ರಾಂತಿ ಎಂಬುದಿಲ್ಲ. ಪರಾಗಸ್ಪರ್ಷವನ್ನು ಜೇನುಹುಳುಗಳಂತೆ ಇತರೇ ಹುಳುಗಳಿಂದ ಸಾಧ್ಯವಾಗದು. ಪರಾಗ ಸ್ಪರ್ಷವಾಗದ ಹೂವುಗಳು ಬಿದ್ದುಹೋಗುತ್ತವೆ. ಇದು ಅಧ್ಬುತ ಶಕ್ತಿ, ಶಿಸ್ತು ಮತ್ತು ಸಮಯಪಾಲನೆಯ ಗುಣಗಳನ್ನು ಅಳವಡಿಸಿಕೊಂಡಿದೆ. ತನ್ನ ಕಾಯಕದ ಹೊರತಾಗಿ ಬೇರೆನೂ ಯೋಚಿಸದೆ ಕೆಲಸ ಪರಿಪೂರ್ಣಮಾಡಿ ಮುಗಿಸುವ ಹಾಗೂ ಮನುಷ್ಯರಿಗೂ…
ದೃಶ್ಯ ಕಾವ್ಯ ತಂಡ ಪ್ರಥಮ – ಭಾಷ್ ಲಲಿತಾಕಲಾ ಸಂಘ ತಂಡ ದ್ವಿತೀಯ ಮುಂಬಯಿ: ಕರ್ನಾಟಕ ಸಂಘ ಮುಂಬಯಿ ಸಂಸ್ಥೆಯು ಆಯೋಜಿಸಿದ್ದ 20ನೇ ಅಖಿಲ ಭಾರತ ಕುವೆಂಪು ಸ್ಮಾರಕ ಕನ್ನಡ ಏಕಾಂಕ ನಾಟಕ ಸ್ಪರ್ಧೆಯು ತೆರೆ ಕಂಡಿದ್ದು ಸ್ಪರ್ಧೆಯಲ್ಲಿ ಭಾಗವಹಿಸಿ ‘ಸೂರ್ಯಾಸ್ತದಿಂದ ಸೂರ್ಯೋದಯದ ವರೆಗೆ’ ನಾಟಕ ಪ್ರದರ್ಶಿಸಿದ ದೃಶ್ಯ ಕಾವ್ಯ ತಂಡ ಬೆಂಗಳೂರು ಪ್ರಥಮ ಸ್ಥಾನ ಗಳಿಸಿತು. ‘ಪದ್ಮಪಾಣಿ’ ನಾಟಕ ಪ್ರದರ್ಶಿಸಿದ ಭಾಷ್ ಲಲಿತಾಕಲಾ ಸಂಘ ಬೆಂಗಳೂರು (ಸಮನ್ವಯ) ತಂಡವು ದ್ವಿತೀಯ ಸ್ಥಾನ ಮತ್ತು ‘ಅರಗಿನ ಬೆಟ್ಟ’ ನಾಟಕ ಪ್ರದರ್ಶಿಸಿದ ಭೂಮಿಕಾ ಹಾರಾಡಿ (ಉಡುಪಿ) ತಂಡವು ತೃತಿಯ ಬಹುಮಾನ ತನ್ನದಾಗಿಸಿತು. ಕಳೆದ ಮಾಟುಂಗ ಪಶ್ಚಿಮದಲ್ಲಿನ ಸಂಘದ ಡಾ| ಎಂ.ವಿಶ್ವೇಶ್ವರಯ್ಯ ಸಭಾಗೃಹದಲ್ಲಿ ಚಂದನವಾಹಿನಿ ಕಾರ್ಯಕ್ರಮ ನಿರ್ಮಾಪಕ, ನಾಡಿನ ಪ್ರಸಿದ್ಧ ಕವಿ ಶ್ರೀಸುಬ್ಬು ಹೊಲೆಯಾರ್ ಅಧ್ಯಕ್ಷತೆಯಲ್ಲಿ ನಾಟಕೋತ್ಸವ ಸ್ಪರ್ಧಾ ಸಮಾರೋಪದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಹೆಸರಾಂತ ರಂಗ ನಿರ್ದೇಶಕ ವಸಂತ ಬನ್ನಾಡಿ ಮತ್ತು ಸಂಘದ ಗೌರವ ಕೋಶಾಧಿಕಾರಿ ಬಿ.ಜಿ ನಾಯಕ್ ವಿಜೇತ ತಂಡಗಳಿಗೆ ಬಹುಮಾನ…
