Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರಾವಳಿಯಲ್ಲಿ ಆರಂಭಗೊಂಡಿರುವ ಮುಂಗಾರು ಮಳೆಗೆ ಹೆದ್ದಾರಿ ಕಾಮಗಾರಿಗಾಗಿ ಅವ್ಶೆಜ್ಞಾನಿಕವಾಗಿ ಕೊರೆದಿರುವ ಒತ್ತಿನೆಣೆ ಗುಡ್ಡವು ಸತತವಾಗಿ ಕುಸಿಯುತ್ತಿದೆ. ಗುಡ್ಡ ಕುಸಿತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ದಿನವೂ ವ್ಯತ್ಯಯಗೊಳ್ಳುತ್ತಿದೆ. ದೊಂಬೆ ಹಾಗೂ ಮದ್ದೋಡಿ ಮಾರ್ಗದಲ್ಲಿ ಬದಲಿ ವವಸ್ಥೆ ಕಲ್ಪಿಸಿದರೂ, ಅಲ್ಲಿನ ರಸ್ತೆ ಕಿರಿದಾಗಿರುವುದರಿಂದ ಘನ ವಾಹನಗಳ ಸಂಚಾರಕ್ಕೆ ತೊಡಕುಂಟುಮಾಡಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ: ಒತ್ತಿನೆಣೆ ಗುಡ್ಡ ಕುಸಿತ ಸ್ಥಳಕ್ಕೆ ಜಿಲ್ಲಾಧಿಕಾರಿ ಪ್ರಿಯಾಂಕ್ ಮೇರಿ ಪ್ರಾನ್ಸಿಸ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚತುಷ್ಪತ ಹೆದ್ದಾರಿಯ ಅಸಮರ್ಪಕ ಕಾಮಗಾರಿಯಿಂದಾಗಿ ಸಾರ್ವಜನಿಕರು ತೀವ್ರ ತೊಂದರೆ ಎದುರಿಸುವ ಬಗ್ಗೆ ಗುತ್ತಿಗೆದಾರ ಕಂಪನಿ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚತುಷ್ಪತ ಹೆದ್ದಾರಿ ಕಾಮಗಾರಿಗಾಗಿ ಒತ್ತಿನೆಣೆ ಗುಡ್ಡ ಇಬ್ಬಾಗ ಮಾಡುವಾಗ ಸಂಬಂಧಿತ ಗುತ್ತಿಗೆದಾರ ಕಂಪೆನೆ ಮುಂಜಾಗೃತ ಕ್ರಮ ಕೈಗೊಳ್ಳದ ಹಿನ್ನೆಯಲ್ಲಿ ಗುಡ್ಡ ಕುಸಿದು ಹೆದ್ದಾರಿ ಸಂಚಾರಕ್ಕೆ ತೊಡಕ್ಕಾಗಿದೆ, ಈ ಬಗ್ಗೆ ಈಗಾಗಲೇ ಸಂಬಂಧಿತ ಕಂಪೆನಿಯ ವಿರುದ್ಧ ಕ್ರಿಮಿನಲ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಶಿಕ್ಷಣ ಕ್ಷೇತ್ರ ವಿಶಾಲವಾಗಿದ್ದು ಶಿಕ್ಷಣದ ಅರ್ಥವನ್ನು ಇಂದಿನ ಮಕ್ಕಳು ತಿಳಿದುಕೊಂಡು ತಮ್ಮ ಗುರಿಯನ್ನು ಅರಿತುಕೊಳ್ಳಬೇಕು. ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮುಖ್ಯವಲ್ಲ. ಎಳೆಯ ವಿದ್ಯಾರ್ಥಿಗಳು ತಮ್ಮ ಗುರಿಯನ್ನು ನಿರ್ಧರಿಸಿಕೊಂಡು ತಮ್ಮ ಮುಂದಿನ ಸಾಧನೆಗಳ ಬಗ್ಗೆ ಸಿದ್ಧತೆ ನಡೆಸಿಕೊಳ್ಳಬೇಕು. ವಿದ್ಯಾರ್ಥಿಗಳಲ್ಲಿ ಸಾಮಾನ್ಯಜ್ಞಾನ ಬೆಳೆದು ಬರಬೇಕು. ಶಿಕ್ಷಣದಿಂದ ವಿದ್ಯಾರ್ಥಿಗಳ ಸರ್ವಾಂಗೀಣ ವ್ಯಕ್ತಿತ್ವ ಹೊರಹೊಮ್ಮಬೇಕು. ಸೀಮಿತ ಪರೀಕ್ಷೆಗಳಿಂದ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಿಲ್ಲ. ಎಂದು ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜ್ಯುಕೇಶನ್‌ನ ಆಡಳಿತಾಧಿಕಾರಿ ಡಾ.ಎಚ್.ಶಾಂತಾರಾಮ ಹೇಳಿದರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜಿಎಸ್‌ವಿಎಸ್ ಅಸೋಸಿಯೇಶನ್ ಆಶ್ರಯದಲ್ಲಿ ಜರಗಿದ ಸರಸ್ವತಿ ವಿದ್ಯಾಲಯ ಸಮೂಹ ವಿದ್ಯಾಸಂಸ್ಥೆಗಳ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು. ಮಕ್ಕಳ ಹವ್ಯಾಸ ಆಸಕ್ತಿಯನ್ನು ಗಮನಿಸದೆ ಪೋಷಕರು ಆರ್ಥಿಕ ವ್ಯಾಮೋಹದಿಂದ ಮಕ್ಕಳ ಭವಿಷ್ಯವನ್ನು ರೂಪಿಸುತ್ತಿದ್ದಾರೆ. ವಿದ್ಯಾರ್ಥಿಗಳ ಮೇಲೆ ಹಾಕುವ ಒತ್ತಾಯ ಒತ್ತಡದಿಂದ ವಿದ್ಯಾರ್ಥಿಗಳ ಬೆಳವಣಿಗೆ ಕುಂಠಿತವಾಗುವ ಸಾಧ್ಯತೆಗಳಿವೆ. ಆದ್ದರಿಂದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಒತ್ತಿನಣೆ ಗುಡ್ಡ ಕುಸಿತ ಮುಂದುವರಿದಿದ್ದು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯಗೊಂಡಿತ್ತು, ಏಕಮುಖ ಸಂಚಾರ, ದೊಂಬೆ ಹಾಗೂ ಮದ್ದೋಡಿ ಮಾರ್ಗದಲ್ಲಿ ಬದಲಿ ವವಸ್ಥೆ ಕಲ್ಪಿಸಿದರೂ, ಅಲ್ಲಿನ ರಸ್ತೆ ಕಿರಿದಾಗಿರುವುದರಿಂದ ಘನ ವಾಹನಗಳ ಸಂಚಾರಕ್ಕೆ ತೊಡಕ್ಕಾಗಿತ್ತು. ಹೆದ್ದಾರಿ ಬಂದ್ ಹಿನ್ನೆಲೆಯಲ್ಲಿ ದೊಂಬೆ ಕರಾವಳಿ ಮಾರ್ಗವಾಗಿ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು, ಕರಾವಳಿ ಪಡಿಯಾರಹಿತ್ಲು ವೀರಮಹಾಸತಿ ದೇವಳದ ಬಳಿ ಸರಕು ತುಂಬಿದ ಲಾರಿಯೊಂದು ರಸ್ತೆಯ ಇಕ್ಕೆಲದಲ್ಲಿ ಕುಸಿದ ಹಿನ್ನೆಲೆಯಲ್ಲಿ ಆ ಮಾರ್ಗದಲ್ಲಿಯೂ ಸುಮಾರು ಒಂದು ತಾಸು ಸಂಚಾರ ವ್ಯತ್ಯಯಗೊಂಡು ವಾಹನ ಸವಾರರು ಪರದಾಡುವಂತಾಯಿತು. ಸುರಕ್ಷತೆಗೆ ಶಾಸಕರ ಸೂಚನೆ: ವತ್ತಿನಣೆಯಲ್ಲಿನ ಸಂಭಾವ್ಯ ಅಪಾಯದ ಹಿನ್ನೆಲೆಯಲ್ಲಿ ಸಮರ್ಪಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಶಾಸಕ ಕೆ. ಗೋಪಾಲ ಪೂಜಾರಿ ಜಿಲ್ಲಾಧಿಕಾರಿ ಮತ್ತು ಇತರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸೋಮವಾರ ಇಲ್ಲಿಗೆ ಭೇಟಿನೀಡಿದ ಅವರು ವಾಹನ ಸಂಚಾರ ನಿಯಂತ್ರಣಕ್ಕೆ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ನಿಯುಕ್ತಿಗೊಳಿಸಬೇಕು. ಆತಂಕ ದೂರಾಗುವ ವರೆಗೆ ಅಗ್ನಿಶಾಮಕ ವಾಹನ ಮತ್ತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಮರವಂತೆ ಬೀಚ್ ಬಳಿ ರಾಷ್ಟ್ರೀಯ ಹೆದ್ದಾರಿ ಚಥುಷ್ಪತ ಕಾಮಗಾರಿಗಾಗಿ ನೂತವಾಗಿ ನಿರ್ಮಿಸಲಾಗಿದ್ದ ಸೇತುವೆ ಬಳಿಯ ರಸ್ತೆ ಕುಸಿದ ಘಟನೆ ನಡೆದಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿದ್ದ ಮಳೆಗೆ ರಸ್ತೆಯ ಒಂದು ಭಾಗ ಕುಸಿದಿದ್ದು ಅಪಾಯಕಾರಿಯಾಗಿ ಪರಿಣಮಿಸಿತ್ತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸತತ ಮಳೆಯಿಂದಾಗಿ ಚತುಷ್ಪಥ ಕಾಮಗಾರಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಪಕ್ಕದ ಒತ್ತಿನಣೆ ಗುಡ್ಡ ಜರಿದು ಹೆದ್ದಾರಿ ತಡೆಯುಂಟಾದ ಪ್ರದೇಶಕ್ಕೆ ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಅವರು ಭೇಟಿ ನೀಡಿ ವೀಕ್ಷಿಸಿದರು. ಇಲಾಖೆ ಹಾಗೂ ಗುತ್ತಿಗೆ ಪಡೆದ ಕಂಪೆನಿಯ ಅಭಿಯಂತರರಿಗೆ ಸತತವಾಗಿ ಮುನ್ನೆಚ್ಚರಿಕೆ ನೀಡಿದ್ದರೂ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಯೋಜನಾ ನಿರ್ದೇಶಕರು ಹಾಗೂ ಅರಣ್ಯ ಇಲಾಖೆಯ ಡಿಎಫ್‌ಓ ಅವರಿಗೆ ಕರೆಮಾಡಿದ ಶಾಸಕರು, ಕಳೆದ ಆರು ತಿಂಗಳುಗಳಿಂದ ಕಾಮಗಾರಿಯಿಂದ ಎದುರಾಗಬಹುದಾದ ಅಪಾಯದ ಮನ್ಸೂಚನ್ನೆಯನ್ನು ನೀಡಲಾಗಿತ್ತು. ಆದಾಗ್ಯೂ ಯಾರೋಬ್ಬರೂ ಈ ಬಗ್ಗೆ ಗಮನ ಹರಿಸದೇ ನಿರ್ಲಕ್ಷ್ಯ ಧೋರಣೆ ತಳೆದಿದ್ದೀರಿ. ಪ್ರತಿನಿತ್ಯ ಸಾವಿರಾರು ವಾಹನಗಳು ತಿರುಗಾಡುವ ಹೆದ್ದಾರಿಯಲ್ಲಿ ಗುಡ್ಡ ಕುಸಿತದಿಂದ ಆಗುವ ಅನಾಹುತಗಳಿಗೆ ಹೊಣೆ ಯಾರು ಎಂದು ಪ್ರಶ್ನಿಸಿದರು. ನಿಮ್ಮ ನಿರ್ಲಕ್ಷ್ಯ ಅಮಾಯಕರ ಸಮಯ ಹಾಗೂ ಬದುಕಿನೊಂದಿಗೆ ಚಲ್ಲಾಟವಾಡುವಂತಿರಬಾರದು. ಕೂಡಲೇ ಎಲ್ಲರೂ ಸ್ಥಳ ಪರಿಶೀಲನೆ ನಡೆಸಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನೆನ್ನೆಯಿಂದ ಸುರಿಯುತ್ತಿದ್ದ ಭಾರಿ ಮಳೆಗೆ ಸಮೀಪದ ಒತ್ತಿನಣೆ ಗುಡ್ಡ ಮತ್ತೆ ಕುಸಿದಿದ್ದ ರಾಷ್ಟ್ರೀಯ ಹೆದ್ದಾರಿ 66 ಸಂಪೂರ್ಣ ಬ್ಲಾಕ್ ಆಗಿದೆ. ಶನಿವಾರ ರಾತ್ರಿ ಸುಮಾರು 2 ಗಂಟೆಯ ವೇಳೆಗೆ ಗುಡ್ಡ ಜರಿದಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳು ಸುಮಾರು ಒಂದೂವರೆ ಕಿ.ಮೀ ತನಕ ಸಾಲುಗಟ್ಟಿ ನಿಂತಿವೆ. ಬೆಳಿಗ್ಗೆಯಿಂದಲೇ ಮಣ್ಣು ತೆರವು ಕಾರ್ಯಾಚರಣೆ ಆರಂಭಗೊಂಡಿದ್ದರೂ, ಭಾರಿ ಮಳೆಯಿಂದಾಗಿ ಅಡ್ಡಿಯುಂಟಾಗುತ್ತಿದೆ. ರಸ್ತೆಯಲ್ಲಿಯೇ ಗುಡ್ಡದ ನೀರು ಹರಿದು ಬರುತ್ತಿದ್ದು ಕಾರ್ಯಾಚರಣೆಗೆ ತೊಡಕು ಉಂಟು ಮಾಡುತ್ತಿದೆ. ಬೈಂದೂರು ದೊಂಬೆ ಮೂಲಕ ಹಾಗೂ ಶಿರೂರು ಪೇಟೆಯಿಂದ ಮದ್ದೋಡಿ ರಸ್ತೆಯಲ್ಲಿ ಲಘು ವಾಹನಗಳಿಗೆ ಏಕಮುಖ ಸಂಚಾರದ ವ್ಯವಸ್ಥೆ ಮಾಡಲಾಗಿದ್ದರೂ ರಸ್ತೆ ಕಿರಿದಾಗಿರುವುದರಿಂದ ಸಂಚಾರ ದಟ್ಟಣೆ ಹೆಚ್ಚಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಎರಡು ದಿನಗಳ ಹಿಂದಷ್ಟೇ ಕುಸಿದಿತ್ತು: ಮೊದಲ ಮಳೆಗೆ ಗುಡ್ಡ ಕುಸಿತ ಆರಂಭವಾಗಿದ್ದು ಎರಡು ದಿನಗಳ ಹಿಂದಷ್ಟೇ ಹೆದ್ದಾರಿ ಬ್ಲಾಕ್ ಆಗಿತ್ತು. ಸತತವಾಗಿ ಮಣ್ಣು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಐಆರ್‌ಬಿ ಕಂಪೆನಿಯ ಮೇಲೆಯೂ ಕೇಸ್ ದಾಖಲಿಸಲಾಗಿತ್ತು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೆದ್ದಾರಿ ಕಾಮಗಾರಿ; ಸರಕಾರಿ ಆಸ್ಪತ್ರೆ ಅವಾಂತರ, ಹೊಸ ಸರಕಾರಿ ಬಸ್ಸು ಹಾಕಿಸಲು, ಬಸ್ಸು ನಿಲಗಡೆ ಮಾಡಲು ಒತ್ತಾಯ, ಶಿಕ್ಷಣ ಇಲಾಖೆಯೊಂದಿಗೆ ಮುಂದುವರಿದ ಗೊಂದಲ, ಸರಕಾರಿ ಕಾರ್ಯಕ್ರಮಗಳಲ್ಲಿ ಸಂಘ ಸಂಸ್ಥೆಗಳು ಸಹಯೋಗದ ಬಗೆಗೆ ಚರ್ಚೆ, ಕಂದಾಯ ಇಲಾಖೆ, ಆಧಾರ್ ಕಾರ್ಡ್ ರೇಷನ್ ಕಾಡ್ ಗೊಂದಲ, ಮರಳು ಅಲಭ್ಯತೆ, ಎಂಡೋಸಲ್ಪಾನ್ ಪೀಡಿತರಿಗೆ ನೀಡುತ್ತಿರುವ ಪರಿಹಾರದಲ್ಲಿ ತಾರತಮ್ಮ, ಅಧ್ಯಕ್ಷರು ಹಾಗೂ ಅವರದೇ ಪಕ್ಷದ ಸದಸ್ಯರ ನಡುವಿನ ಮಾತಿನ ಚಕಮಕಿ ಇವೇ ಮುಂತಾದ ಚರ್ಚೆ, ಗೊಂದಲ, ವಿವಾದ, ವಾದ ಪ್ರತಿವಾದಗಳಿಗೆ ಕುಂದಾಪುರ ತಾಲೂಕು ಪಂಚಾಯತ್ ಸಮಾನ್ಯ ಸಭೆ ಸಾಕ್ಷಿಯಾಯಿತು. ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಆರಂಭವಾಗುತ್ತಿದ್ದಂತೆ ತಾಲೂಕು ಪಂಚಾಯತ್‌ಗೆ ನಾಮನಿರ್ದೇಶಿತ ಸದಸ್ಯರನ್ನಾಗಿ ಹದಿಮೂರು ಗ್ರಾಮ ಪಂಚಾಯತ್ ಅಧ್ಯಕ್ಷರನ್ನು ಆಯ್ಕೆಮಾಡಿರುವ ಬಗೆಗೆ ಸದಸ್ಯೆ ಜ್ಯೋತಿ ಪುತ್ರನ್ ಅವರು ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ಕೆಲವು ಸದಸ್ಯರುಗಳು ಧ್ವನಿಗೂಡಿಸಿದಾಗ ಕಾರ್ಯನಿರ್ವಹಣಾಧಿಕಾರಿಗಳು ಮರು ಆಯ್ಕೆಗೆ ಸಲಹೆ ನೀಡಿದರು. ಬಸ್ ಸೌಲಭ್ಯ ಬೇಕು: ಉಪ್ಪುಂದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟೇಶ್ವರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಛಿದ್ರಗೊಂಡ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವರ ಶವ ಪತ್ತೆಯಾಗಿದೆ. ಕೋಟೇಶ್ವರದ ಕಾಮತ್ ಪೆಟ್ರೋಲ್ ಬಂಕ್ ಬಳಿ ಬೆಳಿಗ್ಗೆ ಛಿದ್ರಗೊಂಡು ಗುರುತು ಹಿಡಿಯದ ಸ್ಥಿತಿಯಲ್ಲಿ ಬಿದ್ದಿದ್ದ ಶವವನ್ನು ಕಂಡ ಸ್ಥಳೀಯರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ವ್ಯಕ್ತಿಯ ಕೈಯಲ್ಲಿದ್ದ ಕೆಂಪು ಬಣ್ಣದ ನೂಲು ಹೊರತು ಪಡಿಸಿ ಬೇರಾವುದೇ ಗುರುತು ಸಿಗದ ರೀತಿಯಲ್ಲಿ ಅಪಘಾತ ನಡೆದಿದೆ. ರಾತ್ರಿ ವೇಳೆ ಸಂದರ್ಭದಲ್ಲಿ ಯಾವುದೋ ವಾಹನ ಹರಿದು ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕುಂದಾಪುರದ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಗುರುತು ಪತ್ತೆಗೆ ಕೋರಿದ್ದಾರೆ. ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ಮೇ ತಿಂಗಳು ಮುಗಿಯುತ್ತಿದಂತೆ ಯಕ್ಷಗಾನ ಮೇಳಗಳಿಗೆ ಒಂದು ವಿರಾಮ. ಗೆಜ್ಜೆಗಳನ್ನೆಲ್ಲ ಕಟ್ಟಿ ಪೆಟ್ಟಿಗೆಯಲಿಟ್ಟು ಅಟ್ಟ ಸೇರಿಸಿಬಿಡುತ್ತವೆ. ಸತತ ಆರು ತಿಂಗಳಿಂದ ದುಡಿದು ದಣಿದ ದೇಹಕ್ಕೆ ವಿಶ್ರಾಂತಿ. ಜೂನ್ ಆರಂಭ ಕೆಲವರು ತಮ್ಮಲ್ಲಿಯೆ ಒಂದು ತಂಡಕಟ್ಟಿಕೊಂಡು ಮುಂಬೈ, ಬೆಂಗಳೂರು, ಹೈದರಾಬಾದ್ ನಂತಹ ಕರಾವಳಿಯ ಜನರು ಹೆಚ್ಚು ಇರುವ ಕಡೆ ಪ್ರದರ್ಶನ ನೀಡುತ್ತಾರೆ. ಅಲ್ಲಿ ವೃತ್ತಿಜೀವನದ ಒತ್ತಡದೊಂದಿಗೆ ತಮ್ಮ ಇಷ್ಟದ ಯಕ್ಷಗಾನವನ್ನು ನೋಡುವಲ್ಲಿ ಬಹುತೇಕ ಕರಾವಳಿಗರು ಹಾತೊರೆಯುತ್ತಾರೆ. ಪೌರಾಣಿಕ, ಸಾಮಾಜಿಕ ಎರಡು ರೀತಿಯ ಪ್ರಸಂಗಗಳನ್ನು ಜನರು ಇಷ್ಟಪಡುತ್ತಾರೆ. ಈ ಬಾರಿ ಮೇ ತಿಂಗಳ ಕೊನೆಯಿಂದಲೇ ಕಲಾಕ್ಷೇತ್ರದಲ್ಲಿ ಚಂಡೆ ಮದ್ದಳೆಯ ಕಲರವ ಸದ್ದು ಪ್ರಾರಂಭವಾಗಿದೆ. ಇದೇ ಶನಿವಾರ ಜೂನ್ 10 ರಂದು ರಾತ್ರಿ ಪೌರಾಣಿಕ ಪ್ರೀಯರ ನೆಚ್ಚಿನ ಅದ್ದೂರಿ ತ್ರಿವಳಿ ಅಖ್ಯಾನಗಳ “ಯಕ್ಷ ಸಂಕ್ರಾಂತಿ”ಗೆ ಕಲಾಕ್ಷೇತ್ರ ಅಣಿಯಾಗುತ್ತಿದೆ . ಕಲಾಧರ ಬಳಗ ಜಲವಳ್ಳಿ ಮತ್ತು ಅತಿಥಿ ದಿಗ್ಗಜರ ಸಮಾಗಮದಲ್ಲಿ ನಾಗರಾಜ್ ಶೆಟ್ಟಿ ನೈಕಂಬ್ಳಿ ಸಂಯೋಜನೆಯಲ್ಲಿ “ರಾಮ ನಿರ್ಯಾಣ -…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಶೇಡಿಮನೆ ಗ್ರಾಮದ ಯುವತಿಗೆ ನಿರಂತರ ಕಿರುಕುಳ ನೀಡಿರುವ ಪ್ರಕರಣದಲ್ಲಿ ಭಾಗಿಯಾಗಿರುವ ಮೂವರು ಆರೋಪಿಗಳ ವಿರುದ್ಧ ಪೋಸ್ಕೋ ಪ್ರಕರಣ ದಾಖಲಾಗಿದ್ದು, ಮೂವರ ಪೂಕಿ ಓರ್ವ ವಿನಯ ಶೆಟ್ಟಿ ಎಂಬುವವನನ್ನು ಬಂಧಿಸಿರುವ ಪೊಲೀಸರು, ಕುಂದಾಪುರ ನ್ಯಾಯಾಲಯಕ್ಕೆ ಬುಧವಾರ ಹಾಜರುಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸಹೋದರನ ಜತೆ ಬೇಕರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವಿನಯ್್ ಶೆಟ್ಟಿಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆತನನ್ನು ಬಂಧಿಸಿ ಕರೆತಂದಿದ್ದಾರೆ. ಆತನಿಗೆ 15 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದೆ. ಉಳಿದ ಇಬ್ಬರು ಆರೋಪಿಗಳ ಬಂಧನಕ್ಕಾಗಿ ನಮ್ಮ ವಿಶೇಷ ತಂಡ ನಿರಂತರ ಕಾರ್ಯಾಚರಣೆ ನಡೆಸುತ್ತಿದೆ. ಕಿರುಕುಳದಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾಳೆ. ► ಶೇಡಿಮನೆ: ಕಿರುಕುಳಕ್ಕೆ ಹೆದರಿ ಯುವತಿ ಆತ್ಮಹತ್ಯೆಗೆ ಯತ್ನ, ಆಸ್ಪತ್ರೆಗೆ ದಾಖಲು  – http://kundapraa.com/?p=23381 

Read More