Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮೀಪದ ಒತ್ತಿನಣೆ ಗುಡ್ಡ ಜರಿದು ರಾಷ್ಟ್ರೀಯ ಹೆದ್ದಾರಿ 66 ಸಂಪೂರ್ಣ ಬ್ಲಾಕ್ ಆಗಿರುವ ಘಟನೆ ನಡೆದಿದೆ. ಮಂಗಳವಾರ ರಾತ್ರಿ ಸುಮಾರು 11 ಗಂಟೆಯ ವೇಳೆಗೆ ಗುಡ್ಡ ಜರಿದಿದ್ದು ಯಾವುದೇ ಹಾನಿ ಸಂಭವಿಸಿಲ್ಲ. ರಾತ್ರಿ ಸುರಿದ ಭಾರಿ ಮಳೆಗೆ ಗುಡ್ಡ ಜರಿದಿದ್ದು ಸುಮಾರು ಒಂದು ಕಿ.ಮೀ. ತನಕ ಎರಡೂ ಬದಿಗಳಲ್ಲಿ ವಾಹನಗಳು ಬ್ಲಾಕ್ ಆಗಿದ್ದವು. ಜೆಸಿಬಿ ಮೂಲಕ ಕುಸಿದಿರುವ ಮಣ್ಣು ತೆರವು ಕಾರ್ಯಾಚರಣೆ ನಡೆಸಿ ಬೆಳಿಗ್ಗೆ 8 ಗಂಟೆಯ ಹೊತ್ತಿಗೆ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಒತ್ತಿನಣೆಯಲ್ಲಿ ಹೆದ್ದಾರಿ ಕಾಮಗಾರಿ ಸಲುವಾಗಿ ಗುಡ್ಡವನ್ನು ಆಳವಾಗಿ ಕಡಿದು ರಸ್ತೆ ನಿರ್ಮಿಸಲಾಗಿತ್ತು. ಗುಡ್ಡದ ತಳಭಾದಲ್ಲಿ ಜೇಡಿ ಮಣಿರುವುದರಿಂದ ಅದು ಕುಸಿಯುವ ಮನ್ಸೂಚನೆಯನ್ನೂ ಸ್ಥಳೀಯರು ಹಾಗೂ ಜನಪ್ರತಿನಿಧಿಗಳು ಆಗಾಗ್ಗೆ ನೀಡಿದ್ದರು. ಆದಾಗ್ಯೂ ಎಚ್ಚೆತ್ತುಕೊಳ್ಳದ ಕಾಮಗಾರಿ ಹೊಣೆಹೊತ್ತ ಇಂಜಿನಿಯರ್‌ಗಳು ತಟಸ್ಥ ನಿಲುವು ಅನುಸರಿಸಿದ್ದರು. ಮಳೆಗಾಲ ಆರಂಭಗೊಳ್ಳುತ್ತಿದ್ದಂತೆ ಕುಸಿಯುವ ಮೂನ್ಸೂಚನೆ ಸಿಕ್ಕ  ಕೂಡಲೇ ಅಧಿಕಾರಿಗಳು ಪಕ್ಕದಲ್ಲಿಯೇ ತರಾತುರಿಯಲ್ಲಿ ಕೆಲವು ದಿನಗಳ ಹಿಂದಷ್ಟೇ ರಸ್ತೆ ನಿರ್ಮಿಸಿದ್ದರು. ಇದೀಗ ಆ ರಸ್ತೆಯಲ್ಲಿ ಬಿದ್ದರುವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ವಕ್ವಾಡಿ ಗುರುಕುಲ ಶಿಕ್ಷಣ ಸಂಸ್ಥೆಯಲ್ಲಿವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆ ಕುರಿತು ಅರಿವು ಮೂಡಿಸಲು, ಮಕ್ಕಳು ತಾವೇ ತಂದ ಗಿಡಗಳನ್ನು ಶಾಲಾ ಪರಿಸರದಲ್ಲಿ ನೆಟ್ಟು ಆನಂದಿಸಿದರು. ಬಾಂಡ್ಯ ಎಜ್ಯುಕೇಶನ್ ಟ್ರಸ್ಟಿನ ಜಂಟಿ ಕಾರ‍್ಯನಿರ್ವಹಕ ನಿರ್ದೇಶಕರುಗಳಾದ ಸುಭಾಶ್ಚಂದ್ರ ಶೆಟ್ಟಿ ಮತ್ತು ಅನುಪಮ ಎಸ್ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲರಾದ ಶಾಯಿಜು ಕೆ. ಆರ್. ನಾಯರ್, ಉಪಪ್ರಾಂಶುಪಾಲೆ ಸುನಂದ ಪಾಟೀಲ್ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಜನರು ಕಾಲಕಾಲಕ್ಕೆ ಕಣ್ಣಿನ ತಪಾಸಣೆಯನ್ನು ಮಾಡಿಕೊಳ್ಳುತ್ತಿರಬೇಕು. ಕಣ್ಣಿನ ಬಗ್ಗೆ ಅಸಡ್ಡೆ ತೋರದೆ ಕಣ್ಣಿನ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಕಣ್ಣಿನ ದೋಷದ ಬಗ್ಗೆ ಅಗತ್ಯ ಚಿಕಿತ್ಸೆ ಪಡೆದುಕೊಂಡು ಸ್ವಸ್ಥ ಸಮಾಜ ನಿರ್ಮಿಸಲು ಜನರು ಮುಂದಾಗಬೇಕು ಎಂದರು ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್ ಹೇಳಿದರು. ಗಂಗೊಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜರಗಿದ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ತಾಲೂಕು ಪಂಚಾಯತ್ ಸದಸ್ಯ ಸುರೇಂದ್ರ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೋಟ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಲಯನ್ಸ್ ಕಣ್ಣಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ರೂಪಶ್ರೀ, ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಎಂ.ಜಿ.ರಾಘವೇಂದ್ರ ಭಂಡಾರ್‌ಕಾರ್, ಕಾರ್ಯದರ್ಶಿ ನಾರಾಯಣ ನಾಯ್ಕ್, ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಬಿ.ಸದಾನಂದ ಶೆಣೈ, ನಾಗಮ್ಮ ಮತ್ತಿತರರು ಉಪಸ್ಥಿತರಿದ್ದರು. ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಪ್ರಜ್ವಲಾ ಸ್ವಾಗತಿಸಿದರು. ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಶ್ವೇತಾ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಿರಿಯ ಮಹಿಳಾ ಆರೋಗ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಿಶ್ವ ಪರಿಸರ ದಿನದ ಅಂಗವಾಗಿ ಪಡುವರಿ ಗ್ರಾಮ ಪಂಚಾಯತ್ ಆಶ್ರಯದಲ್ಲಿ ಗ್ರಾಮ ಪಂಚಾಯತ್ ಸಮೀಪದ ಸ.ಹಿ.ಪ್ರಾ.ಶಾಲೆ ಕೋಟೆಬಾಗಿಲು ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮ ಆಚರಿಸಲಾಯಿತು. ಪಡುವರಿ ಗ್ರಾ ಪಂ ಅಧ್ಯಕ್ಷೆ ದೀಪಾ ಶೆಟ್ಟಿ ಹಾಗೂ ಉಪಾಧ್ಯಕ್ಷ ಸದಾಶಿವ ಡಿ ಪಡುವರಿ ಹಾಗೂ ಗೀಡಗಳನ್ನು ನೆಟ್ಟರು. ಕೋಟೆಬಾಗಿಲು ಶಾಲೆ ಮುಖ್ಯೋಪಾಧ್ಯಾಯ ಸುರೇಶ, ಗ್ರಾ ಪಂ ಅಭಿವೃದ್ಧಿ ಅಧಿಕಾರಿ ಗಣೇಶ್ ಹೆಬ್ಬಾರ್, ದ್ವೀತಿಯ ದರ್ಜೆ ಲೆಕ್ಕ ಪರಿಶೋದಕ ಸಹಾಯಕಿ ಜಯಲಕ್ಷ್ಮೀ ಸಿ ವಿ, ಗ್ರಾ ಪಂ ಸಿಬ್ಬಂದಿಗಳು ಹಾಗೂ ಶಾಲಾ ಮಕ್ಕಳು ಹಾಜರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಿಲ್ಲೆಯಲ್ಲಿ ಆಕ್ರಮ-ಸಕ್ರಮಕ್ಕಾಗಿ ಅರ್ಜಿ ಸಲ್ಲಿಸಿರುವ ಎಷ್ಟೋ ಅರ್ಜಿಗಳನ್ನು ಇದೇ ರೀತಿಯ ಕುಂಟು ನೆವಗಳನ್ನು ಹೇಳಿ ತಡೆ ಹಿಡಿಯಲಾಗುತ್ತಿದೆ. ಬರಗಾಲವಿದೆ ಎನ್ನುವ ಕಾರಣವನ್ನು ನೀಡಿ ಬಿತ್ತನೆಯ ಬೀಜಗಳನ್ನು ನೀಡುವಲ್ಲಿಯೂ ಕೊರತೆಯನ್ನು ಕಾಣುವಂತಾಗಿದೆ. ಕೋಟೇಶ್ವರದಲ್ಲಿ ಹೆದ್ದಾರಿಯ ಬದಿಯಲ್ಲಿ ವಿಶಾಲವಾದ ಬೀಜ ಉತ್ಪಾದನ ಪ್ರದೇಶಗಳಿದ್ದರೂ, ಅದರ ಸಮರ್ಪಕ ಬಳಕೆಯಾಗಿಲ್ಲ. ಈ ಉದ್ದೇಶಕ್ಕಾಗಿ ಮೀಸಲಿರಿಸಿದ ಪ್ರದೇಶಗಳಲ್ಲಿ ಒಂದಷ್ಟು ಎಕ್ರೆ ಪ್ರದೇಶಗಳನ್ನು ಬೇರೆ ಉದ್ದೇಶಗಳಿಗಾಗಿ ನೀಡಲಾಗಿದೆ ಎಂದು ಹೇಳಿದ ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಕೆ.ಪ್ರತಾಪ್‌ಚಂದ್ರ ಶೆಟ್ಟಿ ಹೇಳಿದರು. ಇಲ್ಲಿನ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ರೈತ ಸಂಘದ ಪದಾಧಿಕಾರಿಗಳ ಹಾಗೂ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತೋಟಗಾರಿಕೆ ಹಾಗೂ ಕೃಷಿ ಇಲಾಖೆಯಲ್ಲಿ ಸರ್ಕಾರಿ ಸವಲತ್ತುಗಳನ್ನು ನೀಡಲು ಸ್ವಷ್ಟವಾದ ಮಾನದಂಡಗಳನ್ನು ಅನುಸರಿಸದೆ ಇದ್ದ ಕಾರಣದಿಂದಾಗಿ ಸರ್ಕಾರ ಉದ್ದೇಶದಂತೆ ಯೋಜನೆಗಳು ಫಲಾನುಭವಿಗಳಿಗೆ ದೊರಕುತ್ತಿಲ್ಲ. ಕಟಾವು ಮುಗಿದ ಬಳಿಕ ಭತ್ತದ ಬೀಜಗಳ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಲು ಬಂದಿದ್ದ ಗರ್ಭಿಣಿಯನ್ನು ನಡುರಾತ್ರಿಯೇ ಆಸ್ಪತ್ರೆಯಿಂದ ಹೊರಕಳುಹಿಸಿದ ಅಮಾನವೀಯ ಘಟನೆ ಕುಂದಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ. ಕೋಡಿ ಹಳೆ ಅಳಿವೆ ನಿವಾಸಿ ಆಶಾ (29) ಎಂಬುವವರಿಗೆ ಸರಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಲು ನಿರಾಕರಿಸಿದ್ದು ಬಳಿಕ ಕುಂದಾಪುರದ ಖಾಸಗಿ ಆಸ್ಪತ್ರೆಯೊಂದಿರಲ್ಲಿ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ. ಕುಂದಾಪ್ರ ಡಾಟ್ ಕಾಂ. ಆಗಿದ್ದೇನು? ಗರ್ಭಿಣಿಯಾಗಿದ್ದ ಆಶಾ ಅವರಿಗೆ ಶನಿವಾರ ತಡರಾತ್ರಿ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ಅವರ ತಾಯಿ ಹಾಗೂ ಚಿಕ್ಕಮ್ಮ ಆಟೋದಲ್ಲಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆಸ್ಪತ್ರೆಯಲ್ಲಿ ಪರೀಕ್ಷೆಗೆ ಕರೆದೊಯ್ದ ದಾದಿಯರು ಈಗ ಹೆರಿಗೆ ಆಗುವುದಿಲ್ಲ. ವೈದ್ಯರು ಕೂಡ ರಜೆಯಲ್ಲಿದ್ದಾರೆ ಎಂದು ಸಬೂಬು ಹೇಳಿದ್ದಾರೆ. ಗರ್ಭೀಣಿ ಹೊಟ್ಟೆ ನೋವಿನಿಂದ ಕೂಗಾಡುತ್ತಿದ್ದಾಗ ವೈದ್ಯರಿಗೆ ಕರೆ ಮಾಡಿದರೂ ತಾನು ರಜೆಯಲ್ಲಿದ್ದೇನೆ ಬದಲಿ ವೈದ್ಯರೂ ಇಲ್ಲ ಎಂದು ಹೇಳಿದ್ದಾರೆ. ಬಳಿಕ ಅದೇ ಸ್ಥಿತಿಯಲ್ಲಿ ಉಡುಪಿಯ ಆಸ್ಪತ್ರೆಗೆ ದಾಖಲಿಸಿ ಎಂದು ಹೇಳಿ ಅವರನ್ನು ಹೊರಕಳುಹಿಸಿದ್ದಾರೆ. ಆಶಾ ಅವರ ಚಿಕ್ಕಮ್ಮ 108ಕ್ಕೆ ಕರೆ ಮಾಡಿದರೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಠಿಣ ಪರಿಶ್ರಮ ಸಾಧಿಸಬೇಕೆಂಬ ಛಲ ನಮ್ಮಲ್ಲಿ ಆತ್ಮ ವಿಶ್ವಾಸವನ್ನು ನೆಲೆಗೊಳಿಸಿ ಉನ್ನತಿಯೆಡೆಗೆ ಕೊಂಡೊಯ್ಯುವ ಜೊತೆಗೆ ಯಶಸ್ಸನ್ನು ನೀಡುತ್ತದೆ ಎಂದು ಕುಂದಾಪುರ ಉಪವಿಭಾಗಾಧಿಕಾರಿ ಶಿಲ್ಪಾ ನಾಗ್ ಹೇಳಿದರು. ಅವರು ರೋಟರಿ ಕ್ಲಬ್ ಕುಂದಾಪುರದ ಆಶ್ರಯದಲ್ಲಿ ನಡೆದ ಕುಟುಂಬ ಸಂಮಿಲನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ೨೦೧೬-೧೭ರ ಸಾಲಿನಲ್ಲಿ ಅತ್ಯುತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳನ್ನು ಅಭಿನಂಧಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ೬೨೫ರಲ್ಲಿ ೬೨೨(ಶೇ.೯೯.೫೨) ಅಂಕ ಪಡೆದು ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ, ಉಡುಪಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ವಂಡ್ಸೆ ಸರಕಾರಿ ಫ್ರೌಡಶಾಲೆಯ ಚಿನ್ಮಯಿ, ಬೈಂದೂರು ಸರಕಾರಿ ಫ್ರೌಡಶಾಲೆಯ ಮಂಜೇಶ್, ಉಪ್ಪುಂದ ಸರಕಾರಿ ಫ್ರೌಡಶಾಲೆಯ ರಂಜಿತಾ ಅವರನ್ನು ಸನ್ಮಾನಿಸಲಾಯಿತು. ಪಿಯುಸಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ರೋಟರಿ ಕುಟುಂಬದ ಸದಸ್ಯರಾದ ಮೇಘನಾ ನಾಯರ್, ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಅರ್ಹತಾ ಪರೀಕ್ಷೆಯಲ್ಲಿ ೯ನೇ ರ‍್ಯಾಂಕ್ ಪಡೆದ ಚೈತನ್ಯ ಲಕ್ಷ್ಮೀ ಅವರನ್ನು ಗೌರವಿಸಲಾಯಿತು. ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಉದಯಕುಮಾರ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಸರಕಾರಿ ಶಾಲೆಗಳಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕಾರ್ಯ ನಡೆಯಬೇಕು. ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಕಡಿಮೆಯಾಗುತ್ತಿರುವ ಮತ್ತು ಆಂಗ್ಲ ಮಾಧ್ಯಮ ಶಾಲೆಗಳತ್ತ ಪೋಷಕರು ಹೆಚ್ಚಿನ ಒಲವು ತೋರಿಸುತ್ತಿರುವ ಹಿನ್ನಲೆಯಲ್ಲಿ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಆಂಗ್ಲ ಭಾಷೆ ಬೋಧನೆಗೆ ಸರಕಾರ ಅನುಮತಿ ನೀಡಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಇಮ್ಮಡಿಗೊಳ್ಳುವ ಸಾಧ್ಯತೆ ಇದೆ ಎಂದು ಬೈಂದೂರು ಶಾಸಕ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಕೆ.ಗೋಪಾಲ ಪೂಜಾರಿ ಹೇಳಿದರು. ಅವರು ಗುಜ್ಜಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ಜರಗಿದ ಶಾಲಾ ವಾಹನ ಹಸ್ತಾಂತರ ಸಮಾರಂಭದಲ್ಲಿ ಐಶ್ವರ್ಯ ಡಿ.ಮೇಸ್ತ ಅವರು ಶಾಲೆಗೆ ಕೊಡುಗೆಯಾಗಿ ನೀಡಿದ ನೂತನ ಶಾಲಾ ವಾಹನವನ್ನು ಉದ್ಘಾಟಿಸಿ ಮಾತನಾಡಿದರು. ಶತಮಾನದ ಹೊಸ್ತಿಲಲ್ಲಿರುವ ಗುಜ್ಜಾಡಿ ಶಾಲೆಯು ಕಟ್ಟಡ ನವೀಕರಣವನ್ನು ದಾನಿಗಳ ಸಹಕಾರದಿಂದ ಮಾಡಿಕೊಂಡಿದ್ದು, ಇದೀಗ ಶಾಲೆಯ ಮಕ್ಕಳ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆಯ ಗಾಂಧಿಪಥ-ಗ್ರಾಮಪಥ ಯೋಜನೆಯಡಿಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಅಂದಾಜು 22.01 ಕೋಟಿ ರೂಪಾಯಿ ವೆಚ್ಚದಲ್ಲಿ 13 ಕಾಮಗಾರಿಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಎಸ್‌ಇಪಿ ಯೋಜನೆಯಡಿಯಲ್ಲಿ 1 ಕೋಟಿ ರೂಪಾಯಿ ಅನುದಾನ ಕ್ಷೇತ್ರಕ್ಕೆ ಮಂಜೂರಾಗಿದ್ದು ಇದರ ಸದ್ಭಳಿಕೆಯನ್ನು ಮಾಡಲಾಗುವುದು ಎಂದು ಬೈಂದೂರು ಕ್ಷೇತ್ರದ ಶಾಸಕ ಹಾಗೂ ರಾಜ್ಯ ರಸ್ತೆ ಸಾರಿಗೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ಗೋಪಾಲ ಪೂಜಾರಿ ಹೇಳಿದರು. ಹೊಸಾಡು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಬಾವಿ ಸೇತುವೆಗೆ ಕಾಯಕಲ್ಪ: ವೈಯಕ್ತಿಕ ಬಾವಿ ನಿರ್ಮಾಣಕ್ಕಾಗಿ ಹಾಗೂ ರಸ್ತೆ ಅಭಿವೃದ್ಧಿಗಾಗಿ ಕರ್ನಾಟಕ ನೀರಾವರಿ ಅಭಿವೃದ್ಧಿ ನಿಗಮದ ವರಾಹಿ ಯೋಜನೆಯಡಿಯಲ್ಲಿ ತಲಾ 4.5 ಕೋಟಿ ಅನುದಾನವನ್ನು ಕಾಯ್ದಿಡಲಾಗಿದೆ. ವಂಡ್ಸೆಯ ಮೋರ್ಟ್ ಸೇತುವೆ, ಕಟ್‌ಬೇಲ್ತೂರು ಬಾಳಿಕೆರೆ ರಸ್ತೆ ಸೇರಿದಂತೆ ಕ್ಷೇತ್ರದ ಜನರ ಅಗತ್ಯತೆಗಳಿಗೆ ಆದ್ಯತೆ ನೀಡಿ ಲೋಕೋಪಯೋಗಿ ಇಲಾಖೆಯ ವಿವಿಧ ಅನುದಾನಗಳನ್ನು ಜೋಡಿಸಿಕೊಂಡು ಕ್ಷೇತ್ರ ವ್ಯಾಪ್ತಿಯಲ್ಲಿ ಅಂದಾಜು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಹಳ್ಳಿಯ ಪ್ರದೇಶಗಳಲ್ಲಿ ರೈತರು ಹಿಂದಿನಿಂದಲೂ ನಡೆದುಬಂದ ಸಂಪ್ರದಾಯದಂತೆ ಕೃಷಿ ಹಾಗೂ ತೋಟಗಾರಿಕೆ ಮಾಡುತ್ತಿದ್ದಾರೆ. ಆದರೆ ಇಂದಿನ ಆಧುನಿಕ ಪದ್ದತಿಯ ಬಗ್ಗೆ ತಿಳುವಳಿಕೆ ಕಡಿಮೆ ಹಾಗೂ ಸಮರ್ಪಕ ಮಾಹಿತಿ ಕೊರತೆಯಿಂದಾಗಿ ಕೃಷಿಯಲ್ಲಿ ಸ್ವಲ್ಪಮಟ್ಟಿನ ನಷ್ಟ ಅನುಭವಿಸುತ್ತಿದ್ದಾರೆ. ಕೃಷಿ ಸಂಬಂಧಿತ ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಕೃಷಿಯ ಕುರಿತಾದ ಸಮಗ್ರ ಮಾಹಿತಿ, ಸರಕಾರದ ಯೋಜನೆಗಳನ್ನು ರೈತರಿಗೆ ಮನವರಿಕೆ ಮಾಡುವುದರ ಮೂಲಕ ಅವರಿಗೆ ಸ್ಪಂದಿಸಬೇಕು ಎಂದು ಕಾಲ್ತೋಡು ಗ್ರಾಪಂ ಅಧ್ಯಕ್ಷ ಬಿ. ಅಣ್ಣಪ್ಪ ಶೆಟ್ಟಿ ಭಟ್ನಾಡಿ ಹೇಳಿದರು. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಪ್ರಾಯೋಜಿತ ರೈತ ಶಕ್ತಿ, ರೈತ ಸೇವಾ ಒಕ್ಕೂಟ, ಉಪ್ಪುಂದ ಇವರ ಸಹಯೋಗದೊಂದಿಗೆ ಶನಿವಾರ ಕಾಲ್ತೋಡು ಅಂಬೇಡ್ಕರ ಭವನದಲ್ಲಿ ನಡೆದ ಅಡಿಕೆ, ತೆಂಗು, ಕಾಳುಮೆಣಸು ಬೇಸಾಯ ಕ್ರಮ ಹಾಗೂ ತೋಟಗಾರಿಕಾ ಮತ್ತು ಕೃಷಿ ಇಲಾಖೆಯಿಂದ ಸಿಗುವ ಸರಕಾರಿ ಸೌಲಭ್ಯಗಳ ಮಾಹಿತಿ ಶಿಬಿರ ಉದ್ಘಾಟಿಸಿ ಮಾತನಾಡಿದರು. ಮಣ್ಣಿನ ಫಲವತ್ತತೆಯ ಅರಿವು, ನೀರಿನ ಸಂರಕ್ಷಣೆ ಮತ್ತು ಸಮರ್ಪಕ ಬಳಕೆ…

Read More