ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಲಾವಿದರು ತಮ್ಮಲ್ಲಿನ ಪ್ರತಿಭೆಯನ್ನು ಪ್ರದರ್ಶಿಸುವುದರೊಂದಿಗೆ ಹೊಸ ಪ್ರತಿಭೆಗಳಿಗೂ ಪ್ರೋತ್ಸಾಹಿಸುವುದು ಬಹುಮುಖ್ಯ. ತಾವು ಬೆಳೆಯುವುದರೊಂದಿಗೆ ತಮ್ಮೊಂದಿಗೆ ಇರುವವರನ್ನು ಗುರುತಿಸಿ ಅವರ ಬೆನ್ನು ತಟ್ಟುವ ಕೆಲಸ ಮಾಡಿದರೆ ಅವರೂ ಬೆಳೆಯುತ್ತಾರೆ ಎಂದು ಕೆಎಸ್ಆರ್ಟಿಸಿ ಅಧ್ಯಕ್ಷ, ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಮಯ್ಯಾಡಿ ಧರ್ಮಸ್ಥಳ ಮಂಜುನಾಥೇಶ್ವರ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಆಯೋಜಿಸಲಾಗಿದ್ದ ಸವಿ ಸವಿ ನೆನಪು ಕಲಾ ಸಂಸ್ಥೆಯ ಸಾವಿರ ಸಂಭ್ರಮ ಕಾರ್ಯಕ್ರಮದಲ್ಲಿ ಗಾನ ಯಕ್ಷಗಾನ ನಾಟ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಮುಖ್ಯೋಪಧ್ಯಾಯ ಬಿ. ಹನುಮಂತ ಹಾಗೂ ಭಜನಾ ಕೀರ್ತನಕಾರ ರಾಜು ದೇವಾಡಿಗ ಚಪ್ಪರಮನೆ ಬಿಜೂರು ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಕೆಡಿಪಿ ಸದಸ್ಯ ಎಸ್. ರಾಜು ಪೂಜಾರಿ, ಕನ್ನಡ ಸಾಹಿತ್ಯ ಪರಿಷತ್ ಬೈಂದೂರು ಹೊಬಳಿ ಅಧ್ಯಕ್ಷ ಗಣಪತಿ ಹೋಬಳಿದಾರ್, ಶಿರೂರು ಗ್ರಾಪಂ ಸದಸ್ಯ ರಘುರಾಮ ಪೂಜಾರಿ, ಉದ್ಯಮಿ ರಾಮ ಪೂಜಾರಿ, ಕುಂದಾಪುರ ಕಾರ್ಪೊರೇಷನ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾರತೀಯ ವೈದ್ಯಕೀಯ ಸಂಘ ಕುಂದಾಪುರ ಘಟಕದ ಅಧ್ಯಕ್ಷರಾಗಿ ಕುಂದಾಪುರದ ಶ್ರೀ ಮಾತಾ ಆಸ್ಪತ್ರೆಯ ವ್ಯದ್ಯಕೀಯ ನಿರ್ದೇಶಕರಾದ ಡಾ. ಸತೀಶ ಪೂಜಾರಿ ಆಯ್ಕೆಯಾಗಿದ್ದಾರೆ. ಕಳೆದ 18 ವರ್ಷಗಳಿಂದ ಕುಂದಾಪುರದಲ್ಲಿ ಕಿವಿ, ಮೂಗು, ಗಂಟಲು ತಜ್ಞರಾಗಿ ಕಾರ್ಯನಿರ್ವಹಿಸುತ್ತಿರುವ ಇವರು ದಕ್ಷಿಣ ಭಾರತದ ಗಾನ ಕೋಗಿಲೆ ಡಾ||ಎಸ್.ಜಾನಕಿ ಹಾಗೂ ದಕ್ಷಿಣ ಭಾರತದ ಮೇರು ಗಾಯಕಿ ವಾಣಿಜಯರಾಂರಂತಹ ಮೇರು ಗಾಯಕಿಯರನ್ನು ಕುಂದಾಪುರಕ್ಕೆ ಕರೆಯಿಸಿ ಅಭಿನಂದಿಸಿ ಸಂಗೀತ ಕಾರ್ಯಕ್ರಮ ಆಂಯೋಜಿಸಿದ ಹೆಗ್ಗಳಿಕೆಗೆ ಪಾತ್ರರಾಗಿರುವರಲ್ಲದೇ ಆರ್ಯಭಟ ಪ್ರಶಸ್ತಿ ವಿಜೇತ ಗಾಯಕ ರಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಜೀವನ, ದಾರಿ, ಕನಸುಗಳನ್ನು ನನಸು ಮಾಡಿಕೊಳ್ಳಲು ಸರಿಯಾದ ಮಾರ್ಗದರ್ಶನದ ಅಗತ್ಯತೆ ಇದೆ. ಶಾಲಾ ಕಾಲೇಜುಗಳಲ್ಲಿ ಪಾಠ ಪ್ರವಚನಗಳ ನಡುವೆ ಇಂತಹ ತರಬೇತಿ ಮಾರ್ಗದರ್ಶನ ನೀಡುವುದು ಅಸಾಧ್ಯ. ವಿದ್ಯಾರ್ಥಿವೇತನಕ್ಕಿಂತ ಮಾಹಿತಿ ತರಬೇತಿ ಶಿಬಿರಗಳಿಂದ ಹೆಚ್ಚಿನ ಲಾಭ ವಿದ್ಯಾರ್ಥಿಗಳಿಗೆ ದೊರೆಯುತ್ತದೆ. ಜ್ಞಾನವನ್ನು ವಿಸ್ತರಿಸಿಕೊಂಡು ಸಮಾಜದಲ್ಲಿ ಸತ್ಪ್ರಜೆಗಳಾಗಿ ಬಾಳಲು ಅವಶ್ಯವಿರುವ ಮಾಹಿತಿ ತರಬೇತಿ ಪಡೆದುಕೊಳ್ಳಬೇಕು. ಉತ್ತಮ ಜನರ ಸಹವಾಸ ಗೆಳೆತನ ಬೆಳೆಸಿಕೊಂಡರೆ ಮಾತ್ರ ನಮ್ಮ ಜೀವನ ಉತ್ತಮವಾಗಲು ಸಾಧ್ಯ ಎಂದು ಗಂಗೊಳ್ಳಿಯ ಜಿಎಸ್ವಿಎಸ್ ಅಸೋಸಿಯೇಶನ್ ಕಾರ್ಯದರ್ಶಿ ಎಚ್.ಗಣೇಶ ಕಾಮತ್ ಹೇಳಿದರು. ಅವರು ಗಂಗೊಳ್ಳಿಯ ನಿನಾದ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ಜ್ಞಾನಗಂಗಾ ಹಾಗೂ ಗಂಗಾಮೃತ ಯೋಜನೆಯ ಭಾಗವಾಗಿ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಜ್ಞಾನಾಮೃತ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಶುಕ್ರವಾರ ಉದ್ಘಾಟಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿನ ಸಂಗೀತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದೊಂದಿಗೆ ಕುಸುಮಾ ಫೌಂಡೇಶನ್ ಆಯೋಜಿಸಲಾಗುತ್ತಿರುವ ವಿನೂತನ ಕಾರ್ಯಕ್ರಮ ‘ಗಾನಕುಸುಮ – 2017’ ಸಂಗೀತ ಸ್ವರ್ಧೆ ಮೂರನೇ ಆವೃತ್ತಿಯ ನೊಂದಾವಣಿಗೆ ಪ್ರತಿ ವರ್ಷದಂತೆ ಅರ್ಜಿ ಆಹ್ವಾನಿಸಲಾಗಿದ್ದು, ಕುಂದಾಪುರ ತಾಲೂಕು ಮಟ್ಟದ ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ. ಸಂಗೀತದ ಬಗೆಗೆ ಸಾಮಾನ್ಯ ಜ್ಞಾನ, ಅಭಿರುಚಿ ಹಾಗೂ ಆಸಕ್ತಿ ಇರುವ 20ರ (1.1.1997) ವಯೋಮಾನದೊಳಗಿನ ವಿದ್ಯಾರ್ಥಿಗಳು ಸ್ವರ್ಧೆಯಲ್ಲಿ ಭಾಗವಹಿಸಬಹುದಾಗಿದ್ದು ಭಾವಗೀತೆ, ಭಕ್ತಿಗೀತೆ, ದೇಶಭಕ್ತಿಗೀತೆ ಹಾಗೂ ಉತ್ತಮ ಅಭಿರುಚಿಯ ಚಿತ್ರಗೀತೆಗಳನ್ನು ಹಾಡಲು ಅವಕಾಶವಿದೆ. ಮೂರು ಹಂತಗಳಲ್ಲಿ ಸ್ವರ್ಧೆ ನಡೆಯಲಿದ್ದು ಒಟ್ಟು ಸ್ವರ್ಧಿಗಳಲ್ಲಿ 12 ಸೆಮಿಪೈನಲ್’ನಲ್ಲಿ ಫೈನಲ್ ಹಂತಕ್ಕೆ ಆಯ್ಕೆ ಮಾಡಲಾಗುತ್ತದೆ. ಫೈನಲ್ನಲ್ಲಿ ಆಯ್ಕೆಯಾದ ಓರ್ವರನ್ನು ‘ಗಾನಕುಸುಮ 2017’ ಎಂದು ಘೋಷಿಸಲಾಗುವುದು ಮತ್ತು ಫೈನಲ್ ಹಂತ ಪ್ರವೇಶಿಸಿದ 8 ಮಂದಿಗೆ ಕುಸುಮಾಂಜಲಿ 2017 ಕಾರ್ಯಕ್ರಮದಲ್ಲಿ ವೃತ್ತಿಪರ ಕಲಾವಿದರೊಂದಿಗೆ ಹಾಡಲು ಅವಕಾಶ ನೀಡಲಾಗುತ್ತದೆ. ನವೆಂಬರ್ 27ನೇ ತಾರೀಕಿನ ಒಳಗಾಗಿ ಶಾಲಾ ಕಾಲೇಜಿನ ಮೂಲಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸತ್ಸಂಗ ಬದುಕಿನ ವಿಕಸನಕ್ಕೆ ದಾರಿದೀಪವಾಗಿದೆ. ಸಮಾಜವಿಂದು ಉತ್ತಮ ಚಿಂತನೆಗಳಿಂದ ವಿಮುಖರಾಗುತ್ತಿರುವುದರಿಂದ ನಾನಾ ಸಂಕಷ್ಟಗಳಿಗೆ ಗುರಿಯಾಗುತ್ತಿದೆ. ಶಾಂತಿ ನೆಮ್ಮದಿ ತೃಪ್ತ ಭಾವವೇ ನಮ್ಮನ್ನು ಉನ್ನತಿಯೆಡೆಗೆ ಕೊಂಡೊಯ್ಯುವ ಶಕ್ತಿಯಾಗಿದೆ. ಇಂತಹ ಶಕ್ತಿ ಹರಿಕಥೆ, ಸತ್ಸಂಗಗಳಿಂದ ನಮಗೆ ಲಭಿಸುತ್ತದೆ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಖ್ಯಾತ ಹರಿದಾಸರಾದ ಬಿ. ಸಿ. ರಾವ್ ಶಿವಪುರ ಹೇಳಿದರು. ಅವರು ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಗೊಂಬೆಮನೆಯಲ್ಲಿ ನವೆಂಬರ್ ತಿಂಗಳ ಕಾರ್ಯಕ್ರಮದ ಅಂಗವಾಗಿ ಕೋಟೇಶ್ವರದ ಹರಿಹರ ಸೇವಾ ಬಳಗದ ಸಹಕಾರದೊಂದಿಗೆ ಆಯೋಜಿಸಿದ ಹರಿಕಥೆ ಸತ್ಸಂಗ ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದರು. ಕುಂದಾಪುರದ ಪ್ರಸಿದ್ಧ ವೈದ್ಯರಾದ ಡಾ. ಎಸ್, ಎನ್.ಪಡಿಯಾರ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ಆಯೋಜಕರಾದ ಕೋಣಿ ನರಸಿಂಹ ಪೂಜಾರಿ, ಶ್ರೀಮತಿ ಲಕ್ಷ್ಮೀ ನರಸಿಂಹ ಪೂಜಾರಿ ಅವರನ್ನು ಅಕಾಡೆಮಿ ವತಿಯಿಂದ ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ನಿವೃತ್ತ ಅಧ್ಯಾಪಕರಾದ ಹರಿಶ್ಚಂದ್ರ ಹೆಬ್ಬಾರ್, ಕೋಟೇಶ್ವರ ಹರಿಹರ ಸೇವಾ ಬಳಗದ ಅಧ್ಯಕ್ಷ ಎನ್. ಮೋಹನ್ ಆಚಾರ್ಯ, ಗೊಂಬೆಯಾಟದ…
ಕುಂದಾಪ್ರ ಡಾಟ್ ಕಾಂ ವರದಿ. ಉಡುಪಿ: ವಿಶ್ವ ಹಿಂದು ಪರಿಷತ್(ವಿಎಚ್ಪಿ) ವತಿಯಿಂದ ಉಡುಪಿಯಲ್ಲಿ ನ.24ರಿಂದ 26ರ ತನಕ ಕಲ್ಸಂಕದ ರಾಯಲ್ ಗಾರ್ಡನ್ನಲ್ಲಿ ನಡೆಯಲಿರುವ ಸಂತ ಸಮಾವೇಶದಲ್ಲಿ 2 ಸಾವಿರಕ್ಕೂ ಅಧಿಕ ಸಾಧು ಸಂತರು, 1 ಸಾವಿರ ಗಣ್ಯ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಹಿಂದೂ ಧರ್ಮ, ಸಮಾಜ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದರ ಜತೆಗೆ ಮಕ್ಕಳಿಗೆ ಪರಿಚಯಿಸಿ ಯುವಜನರನ್ನು ತೊಡಗಿಸುವ ಮಹೋನ್ನತ ಗುರಿ ಹೊಂದಿರುವ ಧರ್ಮ ಸಂಸದ್ ಈಗ ಪ್ರಾಚೀನ ಪರಂಪರೆಯ ಜತೆಗೆ ಆಧುನಿಕತೆಗೂ ತೆರೆದುಕೊಂಡಿದ್ದು, ಸಕಲ ಸಿದ್ಧತೆಗಳು ಭರದಿಂದ ಸಾಗಿದೆ. [quote bgcolor=”#ffffff” arrow=”yes” align=”right”] ಬೈಂದೂರು ಪ್ರಖಂಡದಿಂದ 10,000 ಮಂದಿ ಭಾಗಿಯಾಗುವ ನಿರೀಕ್ಷೆ: ನ.26ರಂದು ಜರುಗುವ ವಿಶ್ವ ಹಿಂದು ಸಮಾಜೋತ್ಸವಕ್ಕೆ ಬೈಂದೂರು ಪ್ರಖಂಡದಿಂದ ಹತ್ತು ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಪ್ರಖಂಡದ ಪ್ರತಿ ಗ್ರಾಮಗಳಿಗೂ ತೆರಳಿ ನ.24ರಿಂದ 26ರ ತನಕ ಧರ್ಮ ಸಂಸದ್ ಹಾಗೂ ಹಿಂದೂ ಸಮಾಜೋತ್ಸವದ ಬಗ್ಗೆ ಮಾಹಿತಿ ತಲುಪಿಸಲಾಗಿದೆ. ಧರ್ಮ ಜಾಗೃತಿಗಾಗಿ ಅತ್ಯಧಿಕ ಹಿಂದೂ ಭಾಂದವರು ಹಾಗೂ ಹಿಂದೂ ಕಾರ್ಯಕರ್ತರು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ ಇವರ ಆಶ್ರಯದಲ್ಲಿ ಗಂಗೊಳ್ಳಿ ಯು. ಶೇಷಗಿರಿ ಶೆಣೈ ಸ್ಮರಣಾರ್ಥ ಕುಂದಪ್ರಭ ಕುಂದಾಪುರ ಇವರ ಸಹಭಾಗಿತ್ವದೊಂದಿಗೆ ಆಯೋಜಿಸಿದ ನಾಲ್ಕನೆಯ ಉಡುಪಿ ಜಿಲ್ಲಾ ಕಾಲೇಜು ವಿದ್ಯಾರ್ಥಿಗಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ರೋಹನ್ ನಾಯಕ್ ಆಯ್ಕೆಯಾಗಿದ್ದಾರೆ. ವಿಶೇಷವೆಂದರೆ ರೋಹನ್ ಹುಟ್ಟು ಅಂಧ. ಕಣ್ಣಿಲ್ಲದಿದ್ದರೂ ಸದಾ ಕ್ರಿಯಾಶೀಲ, ಕುತೂಹಲ ಸ್ವಭಾವದ ನಗುಮೊಗದ, ಉಪನ್ಯಾಸಕರ ಅಚ್ಚುಮೆಚ್ಚಿನ ವಿದ್ಯಾರ್ಥಿ. ಕುಂದಾಪುರ ತಾಲೂಕಿನ ತ್ರಾಸಿ ಗ್ರಾಮದ ಉದ್ಯಮಿ ನಾಗರಮಠ ರಘುನಂದನ್ ನಾಯಕ್ ದಂಪತಿಯ ಹಿರಿಯ ಪುತ್ರನಾಗಿರುವ ಈತನ ಮಾತೃ ಭಾಷೆ ಕೊಂಕಣಿ. ಕೆ.ಜಿ. ತರಗತಿಯಿಂದ ೭ ನೇ ತರಗತಿಯವರೆಗೆ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ, ಅನಂತರ ೮ ರಿಂದ ೧೦ ರವರೆಗೆ ಮಂಗಳೂರಿನ ಖomಚಿಟಿ & ಅಚಿಣheಡಿiಚಿಟಿ ಐobo Sಛಿhooಟ ಈoಡಿ ಖಿhe ಃಟiಟಿಜನಲ್ಲಿ ವ್ಯಾಸಂಗ ಮಾಡಿರುವ ಈತ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದ ಪಿ.ಯು. ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ರಿಕ್ಷಾ ಚಾಲಕರ ಮತ್ತು ಮಾಲಕರ ಆಶ್ರಯದಲ್ಲಿ ಶ್ರೀ ಕುಂದೇಶ್ವರ ದೇವಸ್ಥಾನ ದೀಪೋತ್ಸವ ನಿಮಿತ್ತ ನಡೆದ ಕಾರ್ಯಕ್ರಮದಲ್ಲಿ ವಿಶೇಷ ಚೇತನರಿಗೆ ಸಹಾಯಧನ, ವಿದ್ಯಾರ್ಥಿ ವೇತನ, ಶಾಲಾ ಚಿಣ್ಣರಿಗೆ ಸ್ಕೂಲ್ ಬ್ಯಾಗ್, ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ವಿದ್ಯಾರ್ಥಿ ನೀರಜ್ಗೆ ಸಹಾಯಧನ ವಿತರಣೆ ಮಾಡಲಾಯಿತು. ರಾಮಕ್ಷತ್ರಿಯ ಮಂಡಳಿ ಅಧ್ಯಕ್ಷ ಕೆ.ಅಜಯ ಹವ್ದಾರ್ ಉದ್ಘಾಟಿಸಿದರು. ಯುವ ಉದ್ಯಮಿ ಅಭಿನಂದನ್ ಎ.ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವಕೀಲ ಕೆ.ಪ್ರದೀಪ್ ಕುಮಾರ್ ಶೆಟ್ಟಿ, ರಿಕ್ಷಾ ಚಾಲಕರು ಮತ್ತು ಮಾಲಕರ ಸಂಘ ಅಧ್ಯಕ್ಷ ವಿಠಲ ಖಾರ್ವಿ ಇದ್ದರು. ಕಾರ್ಗಿಲ್ ಯುದ್ಧ ಹಾಗೂ ೨೦೧೫ರಲ್ಲಿ ಇಂಡೋ ಮಾಯನ್ಮಾರ್ ಸರ್ಜಿಕಲ್ ದಾಳಿ ನೇತೃತ್ವ ವಹಿಸಿದ ಕುಂದಾಪುರ ಯೋಧ ಕಿಶನ್ ಕುಮಾರ್ ಡಿ.ಕೆ. ಅವರ ಸನ್ಮಾನಿಸಲಾಯಿತು. ವೆಂಕಟೇಶ್ ಸನ್ಮಾನ ಪತ್ರ ವಾಚಿಸಿದರು.ಕಾರ್ಯದರ್ಶಿ ನಾಗರಾಜ್ ಖಾರ್ವಿ ವರದಿ ಮಂಡಿಸಿದರು. ದೀಪಾ ವೆಂಕಟೇಶ್ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ಸ್ವಪ್ನಾ ಪ್ರಕಾಶ್ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ಸನ್ನಿಧಿಗೆ ಶ್ರೀಲಂಕಾ ಪ್ರಧಾನಿ ರೆನಿಲ್ ವಿಕ್ರಮ ಸಿಂಘೆ ಪತ್ನಿ ಡಾ. ಮೈತ್ರಿ ಹಾಗೂ ಕುಟುಂಬ ಸಮೇತರಾಗಿ ಭೇಟಿಕೊಟ್ಟು ವಿಶೇಷ ಪೂಜೆ ಸಲ್ಲಿಸಿದರು. ಶ್ರೀಲಂಕಾದಿಂದ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಅಲ್ಲಿಂದ ಮಂಗಳೂರು ಮೂಲಕ ಅರೆಶಿರೂರಿಗೆ ಹೆಲಿಕಾಪ್ಟರ್ ನಲ್ಲಿ ಬಂದಿಳಿದರು. ಪ್ರಧಾನಿ ವಿಕ್ರಮಸಿಂಘೆಯವರನ್ನು ಕೊಲ್ಲೂರು ಆಡಳಿತ ಮಂಡಳಿ ಅದ್ಧೂರಿಯಾಗಿ ಸ್ವಾಗತಿಸಿತು. ದೇವಸ್ಥಾನದ ಮುಂಭಾಗದಲ್ಲಿ ಕಾಲು ತೊಳೆದು ದೇವಸ್ಥಾನ ಮುಖ್ಯದ್ವಾರದ ಮೂಲಕ ಬಲಗಾಲಿಟ್ಟು ಪ್ರವೇಶಿಸಿದರು. ಮಂತ್ರ ಪಠಣೆ ಮೂಲಕ ದೇವಾಲಯದ ಪ್ರಮುಖ ಅರ್ಚಕರು ಪ್ರಧಾನಿ ಮತ್ತು ಪತ್ನಿಯನ್ನು ಒಳಗೆ ಕರೆಸಿಕೊಂಡರು. ಗರುಡಗಂಭಕ್ಕೆ ನಮಸ್ಕರಿಸಿ ಮೂಕಾಂಬಿಕೆಯ ದರ್ಶನ ಮಾಡಿದ ಪ್ರಧಾನಿ, ಚಂಡಿಕಾ ಹೋಮ ಸೇರಿದಂತೆ ದೇವಸ್ಥಾನದ ಪ್ರಾಂಗಣದಲ್ಲಿರುವ ಎಲ್ಲಾ ಗುಡಿಗಳಿಗೆ ಭೇಟಿಕೊಟ್ಟು ಅರ್ಚನೆ ಸಲ್ಲಿಕೆ ಮಾಡಿದರು. ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು, ಅರ್ಚಕರು ಹಾಗೂ ಕಾರ್ಯನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು. ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಕೊಲ್ಲೂರು ಪರಿಸರದಲ್ಲಿ ವಿಶೇಷ ಭದ್ರತೆ ಒದಗಿಸಲಾಗಿತ್ತು. ದೇವಸ್ಥಾನಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಆಟ ಮತ್ತು ಪಾಠ ಕಲಿಕೆಯ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಸುದೃಡವಾದ ದೇಹದಲ್ಲಿ ಸ್ವಸ್ಥವಾದ ಮನಸ್ಸು ಸದಾ ನೆಲೆಯೂರಿರುತ್ತದೆ. ಯಾವ ಶಾಲಾ ಸಂಸ್ಥೆಯು ವಿದ್ಯಾರ್ಥಿಗಳ ಕಲಿಕೆಗಳಲ್ಲಿ ಕ್ರೀಡೆಗೆ ಪ್ರಾಶಸ್ತ್ಯವನ್ನು ಕೊಡುತ್ತದೆಯೊ ಆ ಸಂಸ್ಥೆಯು ಮಕ್ಕಳ ಸರ್ವಾಂಗೀಣ ಪ್ರಗತಿಗೆ ಗುರುತರವಾದ ಲಕ್ಷ್ಯವನ್ನು ಇಟ್ಟಿದೆ ಎಂದು ತಿಳಿಯಬೇಕು. ಕ್ರೀಡಾ ಜಗತ್ತಿನಲ್ಲಿ ಅನೇಕ ಕ್ರೀಡಾ ಪಟುಗಳು ತಮ್ಮ ಪ್ರತಿಭೆಗಳ ಮೂಲಕ ವಿಶವಿಖ್ಯಾತರಾಗಿದ್ದಾರೆ. ಕ್ರೀಡೆಯು ದೈಹಿಕ ಶ್ರಮದ ಜೊತೆಗೆ ಆಂತರಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಅಲ್ಲದೇ ವಿದ್ಯಾರ್ಥಿಗಳು ನಿರಂತರವಾಗಿ ಕಲಿಕೆಯಲ್ಲಿ ತೊಡಗಿಕೊಳ್ಳಲು ಕ್ರೀಡೆ ಪ್ರಮುಖ ಕಾರಕ ಅಂಶಗಳಾಗಿದೆ. ಕ್ರೀಡೆಯ ಮೂಲಕವೇ ನಮ್ಮ ಪ್ರತಿಭೆಗಳನ್ನು ಹಾಗೂ ಜೀವನವನ್ನು ನಡೆಸಲು ಸಾಧ್ಯವಿದೆ. ಇದು ವ್ಯಕ್ತಿಗಳಲ್ಲಿ ಶಿಸ್ತು, ಸಂಯಮ, ಸಹಬಾಳ್ವೆ, ನಾಯಕತ್ವ , ಐಕ್ಯತೆ ಮತ್ತು ಕ್ರೀಡಾ ಸ್ಪೂರ್ತಿಯನ್ನು ಬೆಳೆಸುತ್ತದೆ ಎಂದು ಕುಂದಾಪುರ ತಾಲೂಕಿನ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್. ಪ್ರಭಾಕರನ್, ಐ.ಎಫ್.ಎಸ್ ನುಡಿದರು. ಅವರು ಗುರುಕುಲ ವಿದ್ಯಾಸಂಸ್ಥೆಯ 12ನೇ ವಾರ್ಷಿಕ ಕ್ರೀಡಾಕೂಟದ ಉದ್ಘಾಟಕರಾಗಿ ಆಗಮಿಸಿ,…
