ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ದಕ್ಷಿಣಕನ್ನಡ ಜಿಲ್ಲಾ ಹಾಲು ಉತ್ಪಾದಕರ ಸಂಘದ ಅದ್ಯಕ್ಷರಾದ ರಾಜೀವ ಶೆಟ್ಟಿ ಮಾತನಾಡಿ, ಮೊದಲು ಜೀವನವೆಂಬ ಪರೀಕ್ಷೆಯಲ್ಲಿ ಪಾಸಾಗುವುದರೊಂದಿಗೆ ಮಾನವೀಯರಾಗಬೇಕು. ಇಂದಿನ ಗ್ರಾಮೀಣ ಭಾರತದ ಕನಸು ನನಸಾಗಬೇಕಿದ್ದರೆ ವಿದ್ಯಾವಂತರೆನಿಸಿಕೊಂಡವರು ಗ್ರಾಮೀಣ ಭಾಗದ ಅಭಿವೃದ್ಧಿಗೆ ಶ್ರಮಿಸಬೇಕು. ತಮ್ಮ ಜ್ಞಾನದ ನೆಲೆಗಳನ್ನು ಬಳಸಿಕೊಂಡು ಉತ್ತಮ ಮಾನವ ಸಂಪನ್ಮೂಲಗಳಾಗಿ ದೇಶಕ್ಕೆ ಆಸ್ತಿಯಾಗಬೇಕು.ಇದಕ್ಕೆಲ್ಲ ಇಚ್ಛಾಶಕ್ತಿ. ನಿಶ್ಚಿತ ಗುರಿಸಾಧನೆ ಸಾಧಿಸುವ ಛಲ ಮತ್ತು ಒಳ್ಳೆಯ ಸಂಸ್ಕಾರಗನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ದೇಶಕ್ಕೆ ಸಮಾಜಕ್ಕೆ ಕೊಡುಗೆಯಾಗಿರಬೇಕು. ಸಮಾಜದ ಒಳಿತಿಗಾಗಿ ಶ್ರಮಿಸಬೇಕು ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅದ್ಯಕ್ಷರಾದ ಡಾ.ಹೆಚ್.ಶಾಂತಾರಾಮ್ ವಹಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ಮತ್ತು ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ಅರುಣಾಚಲ ಮಯ್ಯ ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ವಕ್ವಾಡಿ ಗುರುಕುಲ ಪಬ್ಲಿಕ್ ಶಾಲೆಯಲ್ಲಿ ಯುಕೆಜಿ ಮಕ್ಕಳ ಪದವಿ ಪ್ರದಾನ ಸಮಾರಂಭ ಮಂಗಳವಾರ ಜರುಗಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಡಾ.ರಶ್ಮಿ ಕುಂದಾಪುರ ಪ್ರೊಫೆಸರ್.ಕೆ.ಎಸ್ ಹೆಗ್ಡೆ ಮೆಡಿಕಲ್ ಅಕಾಡೆಮಿ ಮಂಗಳೂರು ಇವರು ಆಗಮಿಸಿದ್ದರು. ಈ ಚಿಕ್ಕ ವಯಸ್ಸಿನಲ್ಲಿ ಮಕ್ಕಳು ಭಯವಿಲ್ಲದೇ ಎಲ್ಲರ ಮುಂದೆ ಬಂದು ತಮ್ಮ ವಿದ್ಯಾರ್ಥಿ ಜೀವನದ ಅನುಭವ ಹಂಚಿಕೊಳ್ಳುವುದು ನಿಜಕ್ಕೂ ಪ್ರಶಂಸನೀಯ. ಅದರಲ್ಲೂ ಅವರ ನಿಷ್ಕಲ್ಮಶ ನಗು ನಮ್ಮನ್ನು ಮೂಕವಿಸ್ಮಿತರನ್ನಾಗಿಸಿದೆ. ಅದೇ ರೀತಿ 5 ವರ್ಷದೊಳಗಿನ ಮಕ್ಕಳಿಗೆ ಬೇಕಿರುವುದು ಕೇವಲ ನಮ್ಮ ಪ್ರೀತಿ ಅದನ್ನು ಮಕ್ಕಳು ತಮ್ಮ ಮನೆಯ ಸದಸ್ಯರಿಂದ ಪಡೆಯಬಹುದು ಆದರೆ ಮಕ್ಕಳು ಶಾಲೆಗೆ ಬಂದಾಗ ಸಮಾಜದ ಜೊತೆ ಹೇಗೆ ಬೆರೆಯಬೇಕು ಎಂಬುವುದನ್ನು ಕಲಿಯುವುದರ ಜೊತೆಗೆ ವಿವಿಧ ಚಟುವಟಿಕೆಗಳಲ್ಲಿ ತಮ್ಮ ಸಾಮರ್ಥ್ಯವನ್ನು ಹೊರ ಹಾಕಲು ಶಾಲೆ ಅವರಿಗೆ ವೇದಿಕೆಯನ್ನು ರೂಪಿಸುತ್ತದೆ. ನಂತರ 5ರಿಂದ 10 ವರ್ಷದ ಮಕ್ಕಳಿಗೆ ಪ್ರೀತಿಯ ಜೊತೆಗೆ ಶಿಸ್ತುಬದ್ದ ಜೀವನದ ಕುರಿತು ಸಮರ್ಪಕ ರೀತಿಯಲ್ಲಿ ಮಾಹಿತಿಕೊಟ್ಟಾಗ ಮುಂದೆ ಮಕ್ಕಳು…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ದಲಿತರ ಅಭಿವೃದ್ಧಿಯ ಸ್ಲೋಗನ್ ಅಡಿಯಲ್ಲಿ ಸಾಕಷ್ಟು ಸಂಘಟನೆಗಳು ಇದ್ದರೂ ದಲಿತರೂ ಇನ್ನೂ ಮುಖ್ಯವಾಹಿನಿಗೆ ಯಾಕೆ ಬರಲಾಗುತ್ತಿಲ್ಲ ಎನ್ನುವುದನ್ನು ಪ್ರತಿಯೊಬ್ಬ ದಲಿತನೂ ಅರಿತುಕೊಳ್ಳಬೇಕಾಗಿದೆ. ನಾಯಕರ ಹಿಂದೆ ಹೋಗುವ ಸಂಪ್ರದಾಯವನ್ನು ಬಿಟ್ಟು, ಸಮಗ್ರ ಶಿಕ್ಷಣವನ್ನು ಮೈಗೂಡಿಸಿಕೊಂಡು ತನ್ನ ಸ್ವಂತ ಕಾಲ ಮೇಲೆ ನಿಲ್ಲುವ ಜೀವನ ಶಿಕ್ಷಣವನ್ನು ಪಡೆದುಕೊಂಡಾಗ ದಲಿತರು ತಮ್ಮನ್ನು ತಾವು ಮುಖ್ಯವಾಹಿನಿಯತ್ತ ಸಾಗಲು ಸಾಧ್ಯ ಎಂದು ಕಾಳಾವರ ದಲಿತ ಜಾಗೃತಿ ಸಮಿತಿ ಅಧ್ಯಕ್ಷ ಮೋಹನಚಂದ್ರ ಕಾಳಾವರ ಹೇಳಿದ್ದಾರೆ. ಕಾಳಾವರದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ದಲಿತ ಜಾಗೃತ ಸಮಿತಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಂಬೇಡ್ಕರ್ ಭಾವಚಿತ್ರಕ್ಕೆ ಮೇಣದ ಬತ್ತಿ ಬೆಳಗಿಸಿ ಮಾನಾಡಿದ ಉಪನ್ಯಾಸಕ ಪತ್ರಕರ್ತ ಸುಧಾಕರ ವಕ್ವಾಡಿ, ಅಂಬೇಡ್ಕರ್ ಹಾಕಿಕೊಟ್ಟ ಮಾರ್ಗದಲ್ಲಿ ನಾವು ಸಾಗುವುದಕ್ಕೆ ಮೊದಲು ಅಂಬೇಡ್ಕರವರನ್ನು ಅರ್ಥ ಮಾಡಿಕೊಳ್ಳಬೇಕು. ಶಿಕ್ಷಣ, ಸಂಘಟನೆ ಮತ್ತು ಹೋರಾಟ ಈ ಮೂರು ಪ್ರಮುಖ ಅಂಶಗಳಾದರೆ ಅಂಬೇಡ್ಕರ್ ಅವರ ಪಂಚ ಸೂತ್ರಗಳನ್ನು ದಲಿತ ನಾಯಕರು ದಲಿತರಿಗೆ ತಿಳಿಸಿ ಹೇಳಬೇಕು. ಸಂವಿಧಾನಬದ್ಧವಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಪಡುವರಿ ಗ್ರಾಪಂನ 2017-18ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ ಕೋಟೆಬಾಗಿಲು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಭವನದಲ್ಲಿ ಮಾರ್ಗದರ್ಶಿ ಅಧಿಕಾರಿ ಪ್ರಕಾಶ್ ಉಪಸ್ಥಿತಿಯಲ್ಲಿ ನಡೆಯಿತು. ಗ್ರಾಪಂ ಅಧ್ಯಕ್ಷೆ ದೀಪಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಸದಾಶಿವ ಪಡುವರಿ ಗ್ರಾಮಸಭೆಯ ಮಹತ್ವ ಹಾಗೂ ಗ್ರಾಮದ ಅಭಿವೃದ್ಧಿಯ ಸಾಧನೆ ಮತ್ತು ಮುಂದಿನ ದಿನಗಳಲ್ಲಿ ಕೈಗೊಂಡಿರುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಈಪಂ ಸದಸ್ಯ ಸುರೇಶ್ ಬಟ್ವಾಡಿ, ತಾಪಂ ಸದಸ್ಯೆ ಗಿರಿಜಾ ಖಾರ್ವಿ, ಗ್ರಾಪಂ ಸದಸ್ಯರು ಉಪಸ್ಥಿತರಿದ್ದರು. ಈ ಸಂದರ್ಭ ಶೇ.25ರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ವಿಶೇಷ ಸವಲತ್ತು ವಿತರಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ:ದೇಶದ ಅತಿ ದೊಡ್ಡ ತರಬೇತಿ ಸೊಸೈಟಿ ಎಂಬ ಹೆಗ್ಗಳಿಕೆಯಿರುವ ಇಂಡಿಯನ್ ಸೊಸೈಟಿ ಆಫ್ ಟ್ರೈನಿಂಗ್ ಎಂಡ್ ಡೆವಲಪ್ಮೆಂಟ್ನ 53 ನೇ ಶಾಖೆಯು (ಮಂಗಳೂರು-ಉಡುಪಿ) ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉದ್ಘಾಟನೆಗೊಂಡಿತು . ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಐಎಸ್ಟಿಡಿ ಬೆಂಗಳೂರು ಶಾಖೆಯ ಅಧ್ಯಕ್ಷೆ ಡಾ.ಮೀರಾ ವೆಂಕಟ್ ಭಾಗವಹಿಸಿ, ಆಳ್ವಾಸ್ನಲ್ಲಿ ಐಎಸ್ಟಿಡಿ ಶಾಖೆ ಪ್ರಾರಂಭವಾಗುವುದರ ಬಗ್ಗೆ ಹರ್ಷ ವ್ಯಕ್ತಪಡಿಸಿದರು. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ ಟಿ.ಸಿ ಸುಜಿತ್ ಮಾತನಾಡಿ , ವಿದ್ಯಾರ್ಥಿಗಳು ಮಾನವ ಸಂಬಂಧಗಳನ್ನು ಬಲಪಡಿಸುವತ್ತ ವಿಶೇಷ ಗಮನ ಹರಿಸಬೇಕೆಂದರು.ಐಎಸ್ಟಿಡಿ ಸಲಹೆಗಾರ ವರಹಸ್ವಾಮಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ ವಿವೇಕ್ ಆಳ್ವ ಶುಭ ಹಾರೈಸಿದರು. ಮಂಗಳೂರು – ಉಡುಪಿ ಶಾಖೆಯ ಅಧ್ಯಕ್ಷ, ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ಡೀನ್ ಪೆÇ್ರ. ಪಿ ರಾಮಕೃಷ್ಣ ಚಡಗ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗುರುದತ್ತ ಸೋಮಯಾಜಿ ಕಾರ್ಯಕ್ರಮ ನಿರೂಪಿಸಿದರು. ಧರ್ಮಾನಂದ್ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ವಟುಗಳಿಗೆ ಉಪನಯನ ದೀಕ್ಷೆ ಅತ್ಯಂತ ಪವಿತ್ರ ಕಾರ್ಯವಾಗಿದೆ.ಈ ದೀಕ್ಷೆ ಪಡೆದ ವಟುಗಳು ಜೀವನ ಧರ್ಮಗಳ ಮೌಲ್ಯವನ್ನು ಅರಿತು ನಡೆಯಬೇಕು.ಆಚಾರ-ವಿಚಾರಗಳನ್ನು ಸರಿಯಾಗಿ ಪಾಲಿಸಬೇಕು ಎಂದು ಕುಂದಾಪುರ ವ್ಯಾಸರಾಜ ಮಠದ ಪುರೋಹಿತ ವಿಜಯ ಪೇಜತ್ತಾಯ ಹೇಳಿದರು. ಅವರು ಭಾನುವಾರ ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದ ಆಶ್ರಯದಲ್ಲಿ ಕುಂದಾಪುರ ವ್ಯಾಸರಾಜ ಮಠದಲ್ಲಿ ನಡೆದ ಸಮಾಜದ ವಟುಗಳಿಗೆ ಸಾಮೂಹಿಕ ಉಪನಯನ,ಸಾಮೂಹಿಕ ಸತ್ಯನಾರಾಯಣ ಪೂಜೆ,ಶ್ರೀ ರಾಮ ನವಮಿ ಆಚರಣೆಯ ಸಂದರ್ಭದಲ್ಲಿ ಧಾರ್ಮಿಕ ಸಂದೇಶ ನೀಡಿ ಮಾತನಾಡಿದರು. ಶ್ರೀ ರಾಮ ಒಬ್ಬ ಆದರ್ಶ ಪುರುಷ.ಶ್ರೀ ರಾಮ ತನಗೆ ಬಂದ ಕಷ್ಟವನ್ನು ನಗುಮೊಗದಿಂದ ಸ್ವೀಕರಿಸಿ,ನಂಬಿದ ಮೌಲ್ಯಗಳನ್ನು ಕಾಯ್ದುಕೊಂಡು ಬಂದವ.ಶ್ರೀ ರಾಮ ನವಮಿ ಆಚರಣೆಯ ಮೂಲಕ ಅವನ ಆದರ್ಶವನ್ನು ಪಾಲಿಸಬೇಕು ಎಂದರು.ಸಮಾಜದ ೩೬ ವಟುಗಳಿಗೆ ಉಪನಯನ ಮಾಡಲಾಯಿತು.ಇದೇ ಸಂದರ್ಭದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆಯ ಪ್ರಸಾದವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದ ಅಧ್ಯಕ್ಷ ಕೆ.ಕೊಗ್ಗ ಗಾಣಿಗ,ಪ್ರಧಾನ ಕಾರ್ಯದರ್ಶಿ ಕೆ.ಭಾಸ್ಕರ್,ಕೋಶಾಧಿಕಾರಿ ಪರಮೇಶ್ವರ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಉಪ್ಪಿನಕುದ್ರು ಗೊಂಬೆ ಯಾಟ ಅಕಾಡೆಮಿಯ ಗೊಂಬೆಮನೆಯಲ್ಲಿ ಪ್ರತಿಭೆ ನಿಮ್ಮದು ವೇದಿಕೆ ನಮ್ಮದು ನಿರಂತರ ಸರಣಿ ಕಾರ್ಯಕ್ರಮದಡಿ ಕುಮಾರಿ ಕೃತಿಕಾ ಶೆಣೈ ಕುಂದಾಪುರ ಇವರ ಸುಗಮ ಸಂಗೀತ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಇತ್ತೀಚೆಗೆ ಜರಗಿತು. ಸಭಾ ಕಾರ್ಯಕ್ರಮದಲ್ಲಿ ಅಕಾಡೆಮಿಯ ಅಧ್ಯಕ್ಷರಾದ ಭಾಸ್ಕರ್ ಕೊಗ್ಗ ಕಾಮತ್, ತಲ್ಲೂರು ಸುರೇಶ್, ಸಂತೋಷ್ ಕೋಣಿ, ವಸಂತಿ ಆರ್. ಪಂಡಿತ್, ವಸುಮತಿ ಪುರಾಣಿಕ್, ರಜನಿ ಪ್ರಭುರವರು ಉಪಸ್ಥಿತರಿದ್ದರು. ಕೃತಿಕಾ ಶೆಣೈ ಇವರನ್ನು ಅಕಾಡೆಮಿಯ ವತಿಯಿಂದ ಸನ್ಮಾನಿಸಲಾಯಿತು. ಉಪ್ಪಿನಕುದ್ರು ದಿನೇಶ್ ದೇವಾಡಿಗ ಹಾಗೂ ತಂಡದವರಿಂದ ಭಜನಾ ಕಾರ್ಯಕ್ರಮ ನೆರವೇರಿತು. ತದನಂತರ ಕೃತಿಕಾ ಶೆಣೈ ಯವರ ಸುಮಧುರ ಸಂಗೀತ ನೆರೆದ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿತು. ಶಿಕ್ಷಕ ನಾಗೇಶ್ ಶ್ಯಾನುಭಾಗ್ ಕಾರ್ಯಕ್ರಮ ನಿರೂಪಿಸಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಸೈಂಟ್ ಮೇರಿಸ್ ಸಿರಿಯನ್ ಕಾಲೇಜು ಬ್ರಹ್ಮಾವರ ಮತ್ತು ಯು ಚಾನೆಲ್ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಬ್ರಹ್ಮಾವರದಲ್ಲಿ ಜರಗಿದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಬಸ್ರೂರು ಶ್ರೀ ಶಾರದಾ ಕಾಲೇಜಿನ ತೃತೀಯ ಬಿ.ಕಾಂ ವಿದ್ಯಾರ್ಥಿನಿ ಶ್ರುತಿ ಬಿ. ಗಂಗೊಳ್ಳಿ ಅತ್ಯುತ್ತಮ ನಿರೂಪಕಿಯಾಗಿ ಆಯ್ಕೆಯಾಗಿ ಪ್ರಥಮ ಪ್ರಶಸ್ತಿ ಪಡೆದುಕೊಂಡಿದ್ದಾಳೆ. ಈಕೆ ಗಂಗೊಳ್ಳಿಯ ಗೀತಾ ಮತ್ತು ಬಿ.ಗಣೇಶ ಖಾರ್ವಿ ದಂಪತಿ ಪುತ್ರಿ.
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕುಂದಾಪುರ ಬಾರ್ ಅಸೋಸೀಯೇಶನ್ ನೂತನ ಪದಾಧಿಕಾರಿಗಳ ಆಯ್ಕೆಯ ಚುನಾವಣೆಯಲ್ಲಿ ಎ.ನಿರಂಜನ ಹೆಗ್ಡೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಶಾಜಿ ಅಬ್ರಾಹಂ, ಪ್ರಧಾನ ಕಾರ್ಯದರ್ಶಿಯಾಗಿ ಎಚ್.ಪ್ರಮೋದ್ ಹಂದೆ, ಜತೆ ಕಾರ್ಯದರ್ಶಿಯಾಗಿ ಪಿಂಕಿ ಕರ್ವೆಲ್ಲೊ ಹಾಗೂ ಕೋಶಾಧಿಕಾರಿಯಾಗಿ ರಾಘವೇಂದ್ರ ಉಪ್ಪುಂದ ಆಯ್ಕೆಯಾಗಿದ್ದಾರೆ. ಬಾರ್ ಅಸೋಸೀಯೇಶ್ನ್ ಮಾಜಿ ಅಧ್ಯಕ್ಷರಾದ ಜಿ.ಸಂತೋಷ್ಕುಮಾರ ಶೆಟ್ಟಿ ಚುನಾವಣಾಧಿಕಾರಿಯಾಗಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕುಂದಾಪುರ ಮುಖ್ಯ ರಸ್ತೆಯಲ್ಲಿರುವ ಸರಕಾರಿ ಪದವಿಪೂರ್ವ ಕಾಲೇಜನ್ನು ಮೇಲ್ದರ್ಜೆಗೇರಿಸಿ ಪ್ರಥಮ ದರ್ಜೆ ಕಾಲೇಜ್ ಆಗಿಸುವಂತೆ ಒತ್ತಾಯಿಸಿ ಕುಂದಾಪುರ ಹೋರಾಟ ಸಮಿತಿ ವತಿಯಿಂದ ಶಿಕ್ಷಣ ಸಚಿವರಿಗೆ ಇಂಟಕ್ ಅಧ್ಯಕ್ಷ ರಾಕೇಶ್ ಮಲ್ಲಿಯವರ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಹೋರಾಟ ಸಮಿತಿಯ ಮುಖಂಡರಾದ ದಿನೇಶ್ ಬೆಟ್ಟ, ಲಕ್ಷ್ಮಣ ಮೊಗವೀರ, ಚಂದ್ರ ಪೂಜಾರಿ, ಧರ್ಮೇಂದ್ರ, ವಿನಾಯಕ, ಅಕಿಲೇಶ್, ನಿಶಾಂತ್ ಮುಂತಾದವರು ಉಪಸ್ಥಿತರಿದ್ದರು.
