Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಕುಂದಾಪುರದ ನೆಹರೂ ಮೈದಾನದಲ್ಲಿ ಯಕ್ಷಗಾನ ಪ್ರದರ್ಶನ ಅವಕಾಶ ಮಾಡಿಕೊಡಬೇಕೆಂದು ಯಕ್ಷಗಾನ ಅಭಿಮಾನಿಗಳು, ಸಮಾನ ಮನಸ್ಕ ಸಂಘ-ಸಂಸ್ಥೆ ಹೋರಾಟಕ್ಕೆ ಅಣಿಯಾಗುತ್ತಿವೆ. ಒಂದೆಡೆ ಯಕ್ಷಗಾನ ಅಭಿಮಾನಿ ರಾಮಕೃಷ್ಣ ಹೇರ್ಳೆ ನೇತೃತ್ವದಲ್ಲಿ ಪತ್ರ ಚಳವಳಿ ಆರಂಭಿಸಿದ್ದರೇ, ಮತ್ತೊಂದೆಡೆ ಕುಂದಾಪುರದಲ್ಲಿ ಯಕ್ಷಾಭಿಮಾನಿಗಳ ಸಮಾವೇಶ ನ.೧೩ ಜರುಗಲಿದೆ. ತಾಲೂಕು ಆಡಳಿತ ಹಿಂದಿನಂತೆ ಯಕ್ಷಗಾನ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡದಿದ್ದರೆ ಹೋರಾಟದ ಮಾರ್ಗವನ್ನು ಹಿಡಿಯಬೇಕಾಗುತ್ತದೆ ಎಂಬ ಸಂದೇಶವನ್ನು ಈಗಾಗಲೇ ಯಕ್ಷಾಭಿಮಾನಿಗಳು ರವಾನಿಸಿದ್ದಾರೆ. 6 ತಿಂಗಳು ಕಳೆದರೂ ತಕರಾರು ಪತ್ರಕ್ಕೆ ಉತ್ತರವಿಲ್ಲ. ಕುಂದಾಪುರ ತಹಸೀಲ್ದಾರ್ ಅವರಿಗೆ ಅರ್ಜಿ ಸಮಿತಿ ತಗಾದೆ ಪತ್ರ ಬಂದು ಆರು ತಿಂಗಳು ಕಳೆದರೂ, ತಹಸೀಲ್ದಾರ್ ವಿವರಣೆ ನೀಡಿ ಉತ್ತರಿಸದ ಬಗ್ಗೆ ಯಕ್ಷಗಾನ ಅಭಿಮಾನಿಗಳು ಬೇಸರ ವ್ಯಕ್ತ ಪಡಿಸಿದ್ದು, ಗಾಯತ್ರಿ ನಾಯ್ಕ್ ವರ್ಗಾವಣೆ ನಂತರ ಅವರ ಸ್ಥಾನಕ್ಕೆ ಜಿ.ಎಂ.ಬೋರ್ಕರ್ ಬಂದು ಎರಡು ತಿಂಗಳು ಕಳೆದರೂ ಅರ್ಜಿಯನ್ನೇ ನೋಡದಿರಲಿಲ್ಲ. ಪರಿಶೀಲಿಸಿ, ಉತ್ತರ ಬರೆಯುತ್ತೇನೆ ಎನ್ನುವ ಮೂಲಕ ವಿಳಂಬ ನೀತಿ ಅನುಸರಿಸುತ್ತಿದ್ದಾರೆ. ಯಕ್ಷಗಾನ ತಿರುಗಾಟ ಆರಂಭವಾಗಿದ್ದು,…

Read More

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಇಲ್ಲಿನ ಚಿತ್ತೂರು ಗ್ರಾ.ಪಂ ವ್ಯಾಪ್ತಿಯ ವಂಡ್ಸೆ ನಂದ್ರೊಳ್ಳಿ ರಸ್ತೆ ಬಳಿಯ ನ್ಯಾಗಲ ಮನೆ ಕಿಂಡಿ ಅಣೆಕಟ್ಟಿಗೆ ಹಾಕಲಾದ ಫೈಬರ್ ಹಲಗೆಯ ಬದಿ ಒಡೆದು ನೀರು ಹರಿದು ಹೋಗುತ್ತಿದ್ದು, ಕೃಷಿಕಾರ್ಯಕ್ಕಾಗಿ ನಿಲ್ಲಿಸಲಾಗಿದ್ದ ನೀರು ಪೋಲಾಗುತ್ತಿದೆ. ಕಳೆದ ವರ್ಷ ಈ ಕಾಮಾಗಾರಿಯನ್ನು ಆರಂಭಿಸಲಾಗಿತ್ತು. ಈಗ ಈ ಕಿಂಡಿ ಅಣೆಕಟ್ಟಿನ ಕಾಮಗಾರಿ ಪೂರ್ಣಗೊಂಡಿದ್ದು, ಕಳೆದ ಮಂಗಳವಾರದಂದು ಈ ಅಣೆಕಟ್ಟಿನ ಕಿಂಡಿಗೆ ಪೈಬರ್‌ನ ಹಲಗೆಗಳನ್ನು ಅಳವಡಿಸಲಾಗಿತ್ತು. ಆದರೆ ಫೈಬರ್ ಹಲಗೆ ಹಾಕಿದ ಮೂರೇ ದಿನದಲ್ಲಿ ಫೈಬರ್‌ನ ಒಂದು ಭಾಗ ಒಡೆದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಕಾಮಗಾರಿಗೆ ಐದು ವರ್ಷಗಳ ಕಾಲ ನಿರ್ವಹಣೆ ಹೊಣೆಯಿದ್ದು, ಐದು ವರ್ಷಗಳ ಕಾಲ ಏನೆ ಸಮಸ್ಯೆ ಬಂದರೂ ಅದರ ನಿರ್ವಹಣೆ ನಮ್ಮದಾಗಿರುತ್ತದೆ. ಈಗ ಅಳವಡಿಸಲಾದ ಫೈಬರ್ ಹಲಗೆ ಪ್ರಾಯೋಗಿಕವಾಗಿ ಅಳವಡಿಸಲಾಗಿದ್ದು, ಇದರ ಸಾಮರ್ಧ್ಯವನ್ನು ಅರಿಯುವ ಉದ್ದೇಶವನ್ನು ಹೊಂದಿ ಅಳವಡಿಸಲಾಗಿದೆ. ಇದು ಯಶಸ್ವಿಯಾಗದ ಹಿನ್ನೆಲೆ ಇದಕ್ಕೆ ಬೇರೆ ಸದೃಡ ಹಲಗೆಯನ್ನು ಅಳವಡಿಸುತ್ತೇವೆ. – ಕಾಮಗಾರಿ ನಡೆಸಿದ ಗುತ್ತಿಗೆದಾರ

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ದ್ವಿತೀಯ ಇಬಿಎಸಿ ತರಗತಿಯ ವಿದ್ಯಾರ್ಥಿ ನಾಗೇಂದ್ರ ಮೊಗವೀರ ಅವರು ಚಿಕ್ಕಬಳ್ಳಾಪುರದಲ್ಲಿ ನಡೆದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯಮಟ್ಟದ ತ್ರೋಬಾಲ್‌ನಲ್ಲಿ ಜಯಗಳಿಸುವ ಮುಖೇನ ತೆಲಂಗಾಣದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ತ್ರೋಬಾಲ್ ಪಂದ್ಯಾಟದಲ್ಲಿ ಭಾಗವಹಿಸಲು ಕರ್ನಾಟಕದ ಪರವಾಗಿ ಆಯ್ಕೆಯಾಗಿದ್ದಾರೆ. ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಶೆಟ್ಟಿ ಅವರು ಮಾರ್ಗದರ್ಶನ ನೀಡಿದ್ದರು.ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು,ಉಪನ್ಯಾಸಕ ಮತ್ತು ಸಿಬ್ಬಂದಿವರ್ಗ ಇಬ್ಬರ ಸಾಧನೆಯನ್ನು ಅಭಿನಂದಿಸಿದೆ. ವರದಿ : ನರೇಂದ್ರ ಎಸ್ ಗಂಗೊಳ್ಳಿ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಯಚೂರಿನಲ್ಲಿ ನಡೆಯುತ್ತಿದ್ದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿದ ಆರೋಪ ಎದುರಿಸುತ್ತಿರುವ ಫ್ರೌಡಶಾಲಾ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕುಂದಾಪುರ ವಿವಿಧ ಕಾಲೇಜಿನ ಎಬಿವಿಪಿ ಮುಂದಾಳುಗಳು ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಶಿಕ್ಷಣ ಸಚಿವರಾಗಿದ್ದುಕೊಂಡೇ ಇಂತಹ ಕೃತ್ಯಗಳಲ್ಲಿ ತೊಡಗಿಕೊಂಡಿರುವುದು ಆಘಾತಕಾರಿಯಾಗಿದ್ದು ಕೂಡಲೇ ನೈತಿಕ ಹೊಣೆ ಹೊತ್ತು ಅವರು ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದರು. ಕುಂದಾಪುರ ತಹಶೀಲ್ದಾರ್ ಜಿ.ಎಂ.ಬೋರ್ಕರ್ ಮನವಿ ಸ್ವೀಕರಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗಂಗೊಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಗ್ರಾಹಕರ ಹಲವು ವರ್ಷಗಳ ಬೇಡಿಕೆಯಾಗಿದ್ದ ಗಂಗೊಳ್ಳಿ ಉಪ ವಿದ್ಯುತ್ ಕೇಂದ್ರಕ್ಕೆ ಆರಂಭಕ್ಕೆ ಕೆಲವೊಂದು ಸಮಸ್ಯೆಗಳು ಎದುರಾಗಿದ್ದು, ಅದನ್ನು ಸರಿಪಡಿಸಿ ವಿದ್ಯುತ್ ಕೇಂದ್ರದ ಕಾರ್ಯಾಚರಣೆಗೆ ಆರಂಭಿಸಲಾಗಿದೆ. ಅತಿ ಹೆಚ್ಚು ಆದಾಯ ಬರುತ್ತಿರುವ ಗಂಗೊಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದ ಗ್ರಾಹಕರಿಗೆ ವಿದ್ಯುತ್ ಸರಬರಾಜಿನಲ್ಲಿ ಅಡಚಣೆಯುಂಟಾಗದೆ ಉತ್ತಮ ರೀತಿಯಲ್ಲಿ ವಿದ್ಯುತ್ ವಿತರಣೆ ಮಾಡಬೇಕು ಎಂದು ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು. ಅವರು ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೇಲ್‌ಗಂಗೊಳ್ಳಿ ಬಳಿ ನಿರ್ಮಾಣಗೊಂಡಿರುವ ಗಂಗೊಳ್ಳಿ ೩೩/೧೧ ಕೆ.ವಿ. ವಿದ್ಯುತ್ ವಿತರಣಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು. ಗಂಗೊಳ್ಳಿ ವಿದ್ಯುತ್ ವಿತರಣಾ ಕೇಂದ್ರ ಕಾರ್ಯಾರಂಭ ಮಾಡಲು ಬಹಳಷ್ಟು ಪ್ರಯತ್ನಗಳು ನಡೆದಿದೆ. ಎಲ್ಲರ ಪ್ರಯತ್ನದ ಫಲವಾಗಿ ಗಂಗೊಳ್ಳಿ ವಿದ್ಯುತ್ ವಿತರಣಾ ಕೇಂದ್ರ ಜನರ ಸೇವೆಗೆ ಲಭ್ಯವಾಗಿದ್ದು, ಅಧಿಕಾರಿಗಳು ಈ ಕೇಂದ್ರವನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಿ ಜನರಿಗೆ ಅನುಕೂಲ ಕಲ್ಪಿಸಬೇಕು ಎಂದು ಹೇಳಿದರು. ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ…

Read More

ಸುನಿಲ್ ಹೆಚ್. ಜಿ ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಕರಾವಳಿಯ ಸಮೃದ್ಧ ಕಲೆ ಯಕ್ಷಗಾನ ವಿಶ್ವಮಾನ್ಯವಾಗಿರುವ ಹೊತ್ತಿನಲ್ಲಿ ಕಲೆಯ ಬೇರು ನೆಲೆಯೂರಿರುವು ಕುಂದಾಪುರದ ನೆಲದಲ್ಲಿಯೇ ಯಕ್ಷಗಾನ ಪ್ರದರ್ಶನಕ್ಕೆ ಅವಕಾಶ ದೊರೆಯದ ಸ್ಥಿತಿ ಬಂದೊದಗಿದ್ದು ಬಡಗುತಿಟ್ಟು ಯಕ್ಷಗಾನದ ಹೆಬ್ಬಾಗಿಲನ್ನೇ ಮುಚ್ಚುವ ಹುನ್ನಾರ ನಡೆದಿದೆ. ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ, ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆ ಕಾರಣದಿಂದ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ತೊಂದರೆಯಾವುದೆಂಬ ನೆವವನ್ನಿಟ್ಟುಕೊಂಡು ಕುಂದಾಪುರದ ನೆಹರೂ ಮೈದಾನದಲ್ಲಿ ನಡೆಯುತ್ತಿದ್ದ ನೂರಾರು ವರ್ಷಗಳ ಇತಿಹಾಸವುಳ್ಳ ಯಕ್ಷಗಾನ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವುದು ಯಕ್ಷಗಾನ ಸಂಘಟಕರು, ಕಲಾವಿದರು, ಅಭಿಮಾನಿಗಳು ಹಾಗೂ ಅದನ್ನೇ ನಂಬಿ ಬದುಕು ಸವೆಸುತ್ತಿದ್ದ ಸಣ್ಣಪುಟ್ಟ ವ್ಯಾಪಾರಸ್ಥರನ್ನು ಕಂಗೆಡಿಸಿದೆ. ಇಷ್ಟರಲ್ಲಾಗಲೇ ನೆಹರೂ ಮೈದಾನದಲ್ಲಿ ರಂಗುರಂಗಿನ ರಂಗ ಮಂಟಪ ಕಾಣಬೇಕಿತ್ತು. ಒಂದೇ ಒಂದು ಆಟ ನೋಡಲು ಮರೆಯದಿರಿ ಎಂಬ ಪ್ರಚಾರದ ಸದ್ದು ಕೇಳಬೇಕಿತ್ತು. ರಾಗ, ಚಂಡೆ, ಮದ್ದಳೆ, ತಾಳಗಳ ಹಿಮ್ಮೇಳಕ್ಕೆ, ಮೊಮ್ಮೇಳದ ಒಡ್ಡೋಲಗ ನಡೆಬೇಕಿತ್ತು. ಆದರೆ ಅನುಮತಿಯ ನಿರಾಕರಣೆ ಎಲ್ಲವನ್ನೂ ಕಳೆಗುಂದಿಸಿದೆ. ಯಕ್ಷಗಾನ ಪ್ರದರ್ಶನಕ್ಕೆ ಅಣಿಯಾದವರು ಮಾತ್ರ…

Read More

ಕಟ್‌ಬೇಲ್ತೂರಿನಲ್ಲಿ ಹಿರಿಯರೆಡೆಗೆ ಸಾಹಿತ್ಯದ ನಡಿಗೆ ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ, ಕಲೆ ಮತ್ತು ಜನಜೀವನದ ಅರಿವು ಮತ್ತು ಅಭಿಮಾನದಿಂದ ಮಾತ್ರ ನಾಡು ನುಡಿ ಸಂಸ್ಕೃತಿ ಉಳಿದು ಬೆಳೆಯಲು ಸಾಧ್ಯ. ಈ ನಿಟ್ಟಿನಲ್ಲಿ ಮುಂದಿನ ತಲೆಮಾರು ಹೆಮ್ಮೆಪಡುವಂತಹ ಪರಂಪರೆಯನ್ನು ರೂಪಿಸುವ ಹೊಣೆ ಎಲ್ಲ ಕನ್ನಡಿಗರ ಮೇಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಕುಂದಾಪುರ ತಾಲೂಕು ಅಧ್ಯಕ್ಷ ಡಾ. ಸುಬ್ರಹ್ಮಣ್ಯ ಭಟ್ ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಹಾಗೂ ತಾಲೂಕು ಘಟಕ, ಗೀತಾನಂದ ಫೌಂಡೇಶನ್ ಮಣೂರು ಪಡುಕೆರೆ ಇವರ ಸಹಯೋಗದೊಂದಿಗೆ ಜಿಲ್ಲೆಯಲ್ಲಿ ನವೆಂಬರ್ ತಿಂಗಳುಪೂರ್ತಿ ನಡೆಯುವ ತಿಂಗಳ ಸಡಗರದ ಅಂಗವಾಗಿ ಕಸಾಪ ವಂಡ್ಸೆ ಹೋಬಳಿ ಘಟಕ ಆಶ್ರಯದಲ್ಲಿ ಕಟ್‌ಬೇಲ್ತೂರು ಶ್ರೀ ಭದ್ರಮಹಾಕಾಳಿ ದೈವಸ್ಥಾನದಲ್ಲಿ ಗುರುವಾರ ಸಂಜೆ ಜರುಗಿದ ಹಿರಿಯರೆಡೆಗೆ ಸಾಹಿತ್ಯದ ನಡಿಗೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದ ಆಶಯಕ್ಕನುಗುಣವಾಗಿ ಹವ್ಯಾಸಿ ಯಕ್ಷಗಾನ ಕಲಾವಿದ ಹಾಗೂ ಶನಿಕಥಾ ದಾಸರಾದ ಕಟ್‌ಬೇಲ್ತೂರು ಶಂಕರ ಪೂಜಾರಿ ಅವರನ್ನು ಈ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಜಡ್ಕಲ್ ಗ್ರಾಮದ ಮೆಕ್ಕೆ ನಿವಾಸಿ ಭಾಸ್ಕರ ಪೂಜಾರಿ (38) ಎಂಬುವವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಭಾಸ್ಕರ್ ಪೂಜಾರಿ ಮದುವೆಯಾಗಿ ಹನ್ನೆರಡು ವರ್ಷವಾಗಿದ್ದು ಇಬ್ಬರು ಮಕ್ಕಳಿದ್ದರು. ಕಳೆದ ಐದಾರು ವರ್ಷಗಳಿಂದ ದಂಪತಿಗಳು ಬೇರೆಯಾಗಿ ವಾಸಿಸುತ್ತಿದ್ದರು. ತನ್ನ ಸಾವಿಗೆ ತಾನೇ ಕಾರಣ ಎಂದು ಮೃತ ಭಾಸ್ಕರ್ ಪೂಜಾರಿ ಡೆತ್‌ನೋಟ್‌ನಲ್ಲಿ ಬರೆದಿಟ್ಟಿದ್ದರೂ, ಕೌಟುಂಬಿಕ ಸ್ಥಿತಿಯ ಬಗ್ಗೆಗಿದ್ದ ಅಸಮಧಾನವೇ ಸಾವಿಗೆ ದವಡೆ ತಂದು ನಿಲ್ಲಿಸಿತ್ತು ಎಂದು ಸ್ಥಳೀಯರು ಮಾತನಾಡಿಕೊಳ್ಳುತ್ತಿದ್ದಾರೆ. ಬರೆಯಲು ಬಾರದ ವ್ಯಕ್ತಿ ಡೆತ್‌ನೋಟ್ ಬರೆದಿಡಲು ಹೇಗೆ ಸಾಧ್ಯ. ಇದೊಂದು ಕೊಲೆಯೇ ಆಗಿರಬಹುದು ಎಂಬ ಶಂಕೆಯೂ ವ್ಯಕ್ತವಾಗಿದೆ. ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಕೆ ಕೈಗೆತ್ತಿಕೊಂಡಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಾಮಾಜಿಕ ಜಾಲತಾಣ ಫೇಸ್ಬುಕ್‌ನಲ್ಲಿ ಭಾರತದ ಸಂವಿಧಾನಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಕುರಿತಾಗಿ ಅವಹೇಳಕಾರಿಯಾಗಿ ಸ್ಟೇಟಸ್ ಬರೆದುಕೊಂಡಿದ್ದ ಈರ್ವರು ಯುವಕರ ವಿರುದ್ದ ಕುಂದಾಪುರ, ಗಂಗೊಳ್ಳಿ, ಶಂಕರನಾರಾಯಣ ಸೇರಿದಂತೆ ಇತರೆ ಠಾಣೆಗಳಲ್ಲಿ ದೂರು ನೀಡಿದ್ದಾರೆ. ರಂಜಿತ್ ರಂಜು ಶೆಟ್ಟಿ ಹಾಗೂ ವಿಕ್ರಮ್ ಎಂ. ಕುಂದಾಪುರ ಎಂಬ ಯುವಕರು ಫೇಸ್ಬುಕ್‌ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಾರೆ ಎಂದು ಆರೋಪಿಸಿರುವ ದಲಿತ ಸಂಘಟನೆಯ ಪ್ರಮುಖರು ಠಾಣೆಯಲ್ಲಿ ದೂರು ನೀಡಿದ್ದು ಆಪಾದಿತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಸಹಾಯಕರ ಹಾಗೂ ಅಶಕ್ತರ ನೆರವಿಗಾಗಿ ಬಡಗಿನ ಸುಪ್ರಸಿದ್ಧ ಕಲಾವಿದರ ಕೂಡುವಿಕೆಯೊಂದಿಗೆ ಮಳೆಗಾಲದ ಕೊನೆಯ ಯಕ್ಷಗಾನ ಪ್ರದರ್ಶನ ಕಾರ್ಯಕ್ರಮದ ಸಮಾರಂಭ ತ್ರಾಸಿ ಆಣ್ಣಪ್ಪಯ್ಯ ಸಭಾಭವನದಲ್ಲಿ ಜರಗಿತು. ಬಿಜೆಪಿ ಮುಖಂಡ ಸುಕುಮಾರ್ ಶೆಟ್ಟಿ ಅಧ್ಯಕ್ಚತೆ ವಹಿಸಿ ಮಾತನಾಡಿ ಅಸಹಾಯಕರ ಹಾಗೂ ಅಶಕ್ತರ ನೆರವಾಗುವ ನಿಟ್ಟಿನಲ್ಲಿ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ತ್ರಾಸಿ ರವಿಶೆಟ್ಟಿಗಾರ್ ಬಳಗದವರ ಸಮಾಜ ಸೇವೆಯನ್ನು ಅಭಿನಂದಿಸಿದರು. ತಾ.ಪಂ. ಸದಸ್ಯ ರಾಜು ದೇವಾಡಿಗ ಮಾತನಾಡಿ ತಮ್ಮ ತಮ್ಮ ಪ್ರದೇಶಗಳಲ್ಲಿ ಸಕ್ರಿಯಾರಾಗಿರುವ ಸಂಘಟನೆಗಳಿಂದ ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿಂದ ಬಡ ಜನರಿಗೆ ನೆರವಾಗುವ ಮೂಲಕ ದೇಶದ ಪ್ರಗತಿಗೆ ಕಾರಣೀಭೂತರಾಗುತ್ತಿದ್ದಾರೆ ಎಂದು ಸಂಘದ ಕಾರ‍್ಯವನ್ನು ಶ್ಲಾಘಿಸಿದರು. ಈ ಸಂದರ್ಭದಲ್ಲಿ ಹೇರೂರು ಯಕ್ಷಗಾನ ಮೇಳದ ಭಾಗವತ ಗಾನಕೋಗಿಲೆ ಎಂದು ಪ್ರಸಿದ್ಧಿ ಪಡೆದಿರುವ ರಾಘವೇಂದ್ರ ಆಚಾರ್ಯ ಅವರನ್ನು ಗೌರವಿಸಿ ಸಮ್ಮಾನಿಸಲಾಯಿತು. ತ್ರಾಸಿ ಗ್ರಾಮ ಪಂ. ಸದಸ್ಯ ಸುಧಾಕರ ಆಚಾರ್ಯ, ಹೊಸಾಡು ಗ್ರಾಮ ಪಂ.ಅಧ್ಯಕ್ಷ ಚಂದ್ರ ಪೂಜಾರಿ, ನಾರಾಯಣ ಕೆ., ರವಿಶೆಟ್ಟಿಗಾರ್, ಕೇಶವ ಶೆಟ್ಟಿಗಾರ್ ಉಪಸ್ಥಿತರಿದ್ದರು.…

Read More