Author: ನ್ಯೂಸ್ ಬ್ಯೂರೋ

ಕುಂದಾಪುರ: ಸಂತ್ ಪಿಯುಸ್ ದೇವಾಲಯ ಪಿಯುಸ್ ನಗರ್ ಇದರ ತೆರಾಲಿ ಹಬ್ಬ ಹಾಗೂ ಭಾರತಿಯ ಕೆಥೋಲಿಕ ಯುವ ಸಂಚಾಲನ ಪಿಯುಸ್ ನಗರ ಇದರ 46ನೇ ವಾರ್ಷಿಕೋತ್ಸವ ಸಮಾರಂಭ ಪಿಯುಸ್ ನಗರ ಇಗರ್ಜಿ ವಠಾರದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಪಿಯುಸ್ ನಗರ ಇಗರ್ಜಿಯ ಧರ್ಮ ಗುರುಗಳಾದ ಜೋನ್ ಆಲ್ಪ್ರೆಡ್ ಒರ್ಬೊಜ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕುಂದಾಪುರ ವಲಯದ ವಿಗಾರ್‌ವಾರ್ ಅನಿಲ್ ಡಿಸೋಜ,ಸಾಸ್ತಾನ ಇಗರ್ಜಿಯ ಧರ್ಮಗುರುಗಳಾದ ಜೋನ್ ವಾಲ್ಟರ್ ಮೆಂಡೊನ್ಸಾ,ತಾಲೂಕು ಪಂಚಾಯತ್ ಸದಸ್ಸರಾದ ಮಂಜು ಬಿಲ್ಲವ, ಬಿಲಾಲ್ ಜುಮ್ಮಾ ಮಸ್ಜಿದ್ ಎಮ್.ಕೋಡಿ ಇದರ ಅಧ್ಯಕ್ಷರಾದ ಮಹಮದ್ ಅಲಿ ಸಾಹೇಬ್ ,ಸೆಂಟ್ ಆನ್ಸ್ ಕಾನ್ವೆಂಟ್ ಇದರ ಸುಫಿರಿಯರ್ ಸಿಸ್ಟರ್ ಲೋರೆನ್ಸಾ ,ಹಂಗಳೂರು ಗ್ರಾಮ ಪಂಚಾಯತ್ ಉಪಾಧ್ಯಾಕ್ಷರಾದ ಸ್ಟಿವನ್ ಡಿ’ಕೋಸ್ತಾ,ಪಾಲನಾ ಮಂಡಳಿ ಉಪಾಧ್ಯಾಕ್ಷರಾದ ವಿಲ್ಪ್ರೆಡ್ ಡಿ’ಸೋಜಾ ,ಪಾಲನಾ ಮಂಡಳಿ ಕಾರ್ಯದರ್ಶಿ ಲೀನಾ ತಾವ್ರೊ ಸಂಸ್ಧೆಯ ಸಲಹೆಗಾರರಾದ ಜೇಮ್ಸ್ ಡಿ’ಮೆಲ್ಲೊ ವೇದಿಕೆಯಲ್ಲಿ ಉಪಸ್ದಿತರಿದ್ದರು . ಇದೇ ಸಂದರ್ಭದಲ್ಲಿ ಸಮಾಜಸೇವಕ ಮಂಗಳೂರು ಫಾದರ್ ಮುಲ್ಲರ‍್ಸ್ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಡೇವಿಡ್.ವಿ…

Read More

ಬೈಂದೂರು: ಶಿರೂರು ಅಸೋಶಿಯೇಶನ್ ಇವರ ಸಹಭಾಗಿತ್ವದಲ್ಲಿ ಮಂಗಳೂರು ಅತ್ತಾವರದ ಕೆಎಂಸಿ ಆಸ್ಪತ್ರೆ ವೈದ್ಯಕೀಯ ತಂಡದವರಿಂದ ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜು ವಠಾರದಲ್ಲಿ ಉಚಿತ ವೈದ್ಯಕೀಯ ಶಿಬಿರ ನಡೆಯಿತು. ಕೆ.ಎಂ.ಸಿ.ಯ ಕಾರ್ಯನಿರ್ವಾಹಣಾ ಅಧಿಕಾರಿ ಹರ್ಬರ್ಟ ಮೆರಿಯೋ ಪಿರಿಯರ್ ರೋಗಿಗಳ ಹೆಸರು ನೊಂದಣಿ ಮಾಡುವುದರ ಮೂಲಕ ಶಿಬಿರ ಉದ್ಘಾಟಿಸಿದರು. ಶಿಬಿರದಲ್ಲಿ ಕಿವಿ, ಮೂಗು, ಗಂಟಲು, ಕಣ್ಣಿನ ತಪಾಸಣೆ, ಮಕ್ಕಳ ವಿಭಾಗ, ಎಲುಬು, ಸ್ತ್ರೀರೋಗ ಹಾಗೂ ದ್ವನಿ, ಶ್ರವಣ ವಿಭಾಗಗಳಲ್ಲಿ ತಜ್ಞ ವೈದ್ಯರಿಂದ ತಪಾಸಣೆ ನಡೆಸಲಾಯಿತು. ಸಾಮಾನ್ಯ ರೋಗ ತಪಾಸಣಾ ವಿಭಾಗ ಸೇರಿ ಒಟ್ಟಿಗೆ ೫೬೮ ರೋಗಿಗಳನ್ನು ಪರೀಕ್ಷಿಸಿ ಸೂಕ್ತ ಸಲಹೆ ನೀಡಲಾಯಿತು. ಅಗತ್ಯವಿರುವ ರೋಗಿಗಳಿಗೆ ಹೆಚ್ಚಿನ ಚಿಕಿತ್ಸೆಗಾಗಿ ಹಸಿರು ಕಾರ್ಡ ನೀಡಲಾಯಿತು. ಶಿರೂರು ಅಸೋಸಿಯೇಶನ್ ಸದಸ್ಯ ಸೈಯ್ಯದ್ ಮಹ್ಮದ್ ಷಾ ಶಿರೂರು ಗ್ರಾಪಂ ಅಧ್ಯಕ್ಷೆ ದಿಲ್‌ಶಾದ್ ಬೇಗಂ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶಿರೂರು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ, ಉಪಪ್ರಾಂಶುಪಾಲ, ಸಿಬ್ಬಂದಿವರ್ಗ ಹಾಗೂ ಸ್ವಯಂಸೇವಕರಾಗಿ ಕರ್ತವ್ಯ ನಿರ್ವಹಿಸಿದ ವಿಧ್ಯಾರ್ಥಿಗಳ ಸಹಕಾರವನ್ನು ಶ್ಲಾಘಿಸಲಾಯಿತು. ಶಿರೂರು…

Read More

ಕುಂದಾಪುರ: ರಬ್ಬರ್‌ಗೆ ಆಮದು ಸುಂಕ ಏರಿಕೆ ಮಾಡಿ ಬೆಂಬಲ ಬೆಳೆ ನಿಗದಿಪಡಿಸುವಂತೆ ಒತ್ತಾಯಿಸಿ ತಾಲೂಕು ರಬ್ಬರ್ ಬೆಳೆಗಾರರ ಸಂಘ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿತು. ಕೋಟೇಶ್ವರದ ಯುವ ಮೆರಿಡಿಯನ್ ವಠಾರದಲ್ಲಿ ಬಿ ಎಸ್ ವೈ ಅವರನ್ನು ಭೇಟಿ ಮಾಡಿದ ತಾಲೂಕು ರಬ್ಬರ್ ಬೆಳೆಗಾರರ ನಿಯೋಗ ಮನವಿ ಸಲ್ಲಿಸಿತ್ತು. ಈ ಸಂದರ್ಭ ರಬ್ಬರ್ ಬೆಳೆಗಾರರ ಸಂಘದ ಅಧ್ಯಕ್ಷ ಬಾಂಡ್ಯ ಸುಭಾಶ್ಚಂದ್ರ ಶೆಟ್ಟಿ ಮಾತನಾಡಿ, ಕಳೆದ ೨ ವರ್ಷದ ಹಿಂದಿದ್ದ ಕಿಲೋಗೆ ರೂ.240ರಷ್ಟಿದ್ದ ಧಾರಣೆ ಕುಸಿದಿದ್ದು ರೂ. ೧೦೦ ಕ್ಕಿಂತಲೂ ಕಡಿಮೆ ಆಗಿದೆ. ಇದರಿಂದ ಬೆಳೆಗಾರರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ತಾಲೂಕಿನಲ್ಲಿ 6 ಸಾವಿರ ಬೆಳೆಗಾರರಿದ್ದು ಕಳೆದ 7-8 ವರ್ಷದಿಂದ ರಬ್ಬರ್ ಬೆಳೆ ಧಾರಣೆ ಕುಸಿತದಿಂದಾಗಿ ಬದುಕು ಕಳೆದುಕೊಳ್ಳುವ ಹಂತಕ್ಕೆ ತಲುಪಿದ್ದಾರೆ. ರಬ್ಬರ್ ಮರಗಳಿಗೆ ರೋಗಭಾದೆ ಒಕ್ಕರಿಸುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ರೈತರು ಪ್ರತಿ ಎಕರೆಗೆ ರೂ 2.50ಲಕ್ಷ ಸಾಲ ಮಾಡಿ ರಬ್ಬರ್ ಬೆಳೆಸಿದ್ದು ಸಾಲ ತೀರಿಸಲಾಗದೆ ಸಂಕಷ್ಟಕ್ಕೆ…

Read More

ಗಂಗೊಳ್ಳಿ: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೀನುಗಾರರು ಎದುರಿಸುತ್ತಿರುವ ಎಲ್ಲಾ ಸಮಸ್ಯೆಗಳ ಬಗ್ಗೆ ನಿಯೋಗದೊಂದಿಗೆ ಮುಖ್ಯಮಂತ್ರಿಯವರ ಗಮನಕ್ಕೆ ತಂದು ಪರಿಹರಿಸಲು ಪ್ರಯತ್ನಿಸುವುದಾಗಿ ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು. ಅವರು ಇತ್ತೀಚಿಗೆ ಮರವಂತೆಯ ಶ್ರೀ ವರಾಹಸ್ವಾಮಿ ದೇವಸ್ಥಾನದ ವಠಾರದಲ್ಲಿ ಗಂಗೊಳ್ಳಿ ಆಳಸಮುದ್ರ ಮೀನುಗಾರರ ಸಂಘವನ್ನು ಉದ್ಘಾಟಿಸಿ ಮಾತನಾಡಿದರು. ಸಂಘದ ಅಧ್ಯಕ್ಷ ಲೋಕೇಶ ಖಾರ್ವಿ ಗಂಗೊಳ್ಳಿ ಅವರು ಆಳಸಮುದ್ರ ಮೀನುಗಾರರು ಮೀನುಗಾರಿಕೆ ಸಂದರ್ಭ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾತನಾಡಿದರು. ಪ್ರಾಸ್ತಾವಿಕ ಮಾತುಗಳನ್ನಾಡಿದ ಸಂಘದ ಉಪಾಧ್ಯಕ್ಷ ದುರ್ಗರಾಜ್ ಪೂಜಾರಿ ಅವರು ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಮೀನುಗಾರರು ಹಾಗೂ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಗಮನಸೆಳೆದು ಇದನ್ನು ಪರಿಹಸರಿಬೇಕೆಂದು ಒತ್ತಾಯಿಸಿದರು. ಉಪಾಧ್ಯಕ್ಷ ಮಂಜುನಾಥ ವಿಠಲವಾಡಿ, ಮಾಧವ ಖಾರ್ವಿ, ರಾಮ ಶಿರೂರು, ಕೋಶಾಧಿಕಾರಿ ನಾರಾಯಣ ಖಾರ್ವಿ ಹಾಗೂ ಸದಸ್ಯರು ಉಪಸ್ಥಿತರಿದ್ದರು. ಕಾರ್ಯದರ್ಶಿ ರಾಮದಾಸ ಖಾರ್ವಿ ಸ್ವಾಗತಿಸಿ ವಂದಿಸಿದರು.

Read More

ಕೊಲ್ಲೂರು: ಯುವಕಾರ್ಯ ಮತ್ತು ಕ್ರೀಡಾ ಸಚಿವಾಲಯ, ಉಡುಪಿ ಜಿಲ್ಲಾ ಪಂಚಾಯತ್, ನೆಹರು ಯುವ ಕೇಂದ್ರ ಉಡುಪಿ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ, ಪ್ರೇರಣಾ ಯುವ ವೇದಿಕೆ ನೈಕಂಳ್ಳಿ ಚಿತ್ತೂರು ಇವರ ಜಂಟಿ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಯುವ ಸಪ್ತಾಹದ ಅಂಗವಾಗಿ ಗ್ರಾಮೀಣ ಕ್ರೀಡಾ ಕೂಟ ಇತ್ತೀಚಿಗೆ ಚಿತ್ತೂರಿನಲ್ಲಿ ನಡೆಯಿತು. ಚಿತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ ಮಡಿವಾಳ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಪ್ರೇರಣಾ ಯುವ ವೇದಿಕೆಯ ಅಧ್ಯಕ್ಷ ಚಂದ್ರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯತ್ ಸದಸ್ಯ ಉದಯ ಪಿ.ಪೂಜಾರಿ, ಅರ್ಚಕ ಗಣೇಶ ಉಡುಪ, ಎಸ್‌ಡಿಎಂಸಿ ಸಮನ್ವಯ ಸಮಿತಿ ಜಿಲ್ಲಾಧ್ಯಕ್ಷ ಅಬ್ದುಲ್ ಸಲಾಂ ಚಿತ್ತೂರು, ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ನರಸಿಂಹ ಗಾಣಿಗ ಕಟ್‌ಬೇಲ್ತೂರು, ಮಹಾವಿಷ್ಣು ಯುವಕ ಮಂಡಲದ ಅಧ್ಯಕ್ಷ ರವೀಶ ಡಿ.ಎಂ. ಮೊದಲಾದವರು ಉಪಸ್ಥಿತರಿದ್ದರು. ನಾಗರಾಜ ಶೆಟ್ಟಿ ಸ್ವಾಗತಿಸಿದರು. ಉದಯ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ದಿನೇಶ ಶೆಟ್ಟಿ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ. ಕುಂದಾಪುರ: ರಾಜ್ಯ ಚುನಾವಣಾ ಆಯೋಗ ಸ್ಥಳೀಯಾಡಳಿತ ಚುನಾವಣೆ ವೇಳಾ ಪಟ್ಟಿ ಪ್ರಕಸಿದ್ದು, ಕುಂದಾಪುರದಲ್ಲಿ ಫೆ.20 ಶನಿವಾರ ಬೆಳಗ್ಗೆ 7 ರಿಂದ ಸಂಜೆ 5ರ ತನಕ ಮತದಾನ ನಡೆಯಲಿದೆ ಎಂದು ಕುಂದಾಪುರ ತಹಸೀಲ್ದಾರ್ ಗಾಯತ್ರಿ ಎನ್.ನಾಯ್ಕ್ ತಿಳಿಸಿದ್ದಾರೆ. ರಜಾದಿನ ಹೊರತುಪಡಿಸಿ ಫೆ.1 ರಿಂದ ಫೆ.8 ವರೆಗೆ ಬೆಳಗ್ಗೆ 11 ರಿಂದ ಮಧ್ಯಾಹ್ನ 3ರ ವರೆಗೆ ನಾಮಪತ್ರ ಸ್ವೀಕರಿಸಲಾಗುತ್ತದೆ. ಫೆ.9 ನಾಮಪತ್ರ್ರ ಪರಿಶೀಲನೆ ಮಾಡಲಾಗುತ್ತದೆ. ಫೆ.11 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 3ರ ವರೆಗೆ ನಾಮ ಪತ್ರ ಹಿಂದಕ್ಕೆ ಪಡೆಯಲು ಅವಕಾಶ ಮಾಡಿಕೊಡಲಾಗಿದೆ. 23 ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕುಂದಾಪ್ರ ಡಾಟ್ ಕಾಂ ಸುದ್ದಿ) ಜಿ.ಪಂ ಚುನಾವಣಾಧಿಕಾರಿ ಕಚೇರಿ ವಿವರ: ಶಿರೂರು, ಬೈಂದೂರು, ಕಂಬದಕೋಣೆ, ತ್ರಾಸಿ, ವಂಡ್ಸೆ, ಕಾವ್ರಾಡಿ, ಕೋಟೇಶ್ವರ, ಬೀಜಾಡಿ, ಸಿದ್ದಾಪುರ ಮತ್ತು ಹಾಲಾಡಿ ಜಿಪಂ ಕ್ಷೇತ್ರಕ್ಕೆ ಸಹಾಯಕ ಆಯುಕ್ತರು ಚುನಾವಣಾಧಿಕಾರಿಯಾಗಿದ್ದು, ಮಿನ ವಿಧಾನ ಸೌಧ ಕಚೇರಿಯಲ್ಲಿ…

Read More

ದಿಲೀಪ್ ಕುಮಾರ್ ಶೆಟ್ಟಿ. ಊರ ಬದಿ ಹಬ್ಬ ಅಂದ್ರೆ ಹಾಂಗೆ, ಗಡ್ಜು-ಗಮ್ಮತ್ತು. ಅಂತೂ ಗೆಂಡದ ಹಬ್ಬ ಗಮ್ಮತಂಗೆ ಪೂರೈಸಿ ಶಾಲಿಗೆ ಹ್ವಾಪು ದಾರೆಗೆ, ಹಬ್ಬದ ರಾತ್ರಿ ಆಟಕ್ಕೆ ಹ್ವಾಪು plan ಮಾಡ್ಕಂತಾ ಶಾಲೀ ತಲುಪ್ತ್. ರಾತ್ರಿಗೆ ಒಂದು ಒಳ್ಳೆ ಆಟ ಕಾಂಬು ಕನಸಿನಗೆ, ಶಾಲಿ ಎಷ್ಟೋತಿಗ್ ಮುಗಿತ್ತ್ ಅಂದೇಳಿ ಕಾಯ್ತಾ ಕೂಕಂತ್. ಇನ್ನೆನ್ last bell ಹೊಡಿತ್, ಚೀಲ ಹಿಡ್ಕಂಡ್ ಓಡುಕ್ ಶುರು ಮಾಡ್ತ್. ಇವತ್ತ್ ಬೇಗ ಗುಡ್ಡೆಗ್ ಆಡ್ಕಂಡ್, ಬೇಗೆ ಮೈಗೆ ನೀರ್ ಹೈಕಂಡ್, ಅಜ್ಜಯ್ಯಂಗೆ ಗೊತ್ತಯ್ದೆ ಅಮ್ಮನ ಹತ್ರ separate ಆಯಿ ದುಡ್ಡ್ ಕೆಂಡ್, ಅಜ್ಜಯ್ಯನ ಹತ್ತಿರ, ಅಮ್ಮನ ಹತ್ರ ದುಡ್ಡ್ ಕೆಂಡದ್ದ್ ಗೊತ್ತಯ್ದೆ ಇದ್ದ ಹಾಂಗೆ ಇನ್ನೊಂದ್ ಸಲ ಕೆಂಡ್, ಹ್ಯಾಂಗಾರೂ ಮಾಡಿ ಒಂದ್ 20 ರೂಪಾಯಿ ಒಟ್ಟ್ ಮಾಡ್ಕಂಡ್ ಗಮ್ಮತ್ ಮಾಡ್ಕ್ ಅಂದೇಳಿ plan ಶುರು ಮಾಡ್ದಿ. ಮನಿಗ್ ಬಂದ್ ಅಮ್ಮನ ಹತ್ರ “ಅಮ್ಮ, ನಾನ್ ಗೆದ್ದಿಗ್ ಬತ್ತಿ, ಕಳೆ ಹುಲ್ಲ್ ಹೊತ್ಕಬತ್ತಿ ಅಕ್ಕಾ??, ನೀನ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಿಂದೆ ಪ್ರತಿ ಮನೆಯಲ್ಲಿಯೂ ಆಯುರ್ವೇದ ಪದ್ಧತಿ ಬಳಕೆಯಲ್ಲಿತ್ತು. ಸಣ್ಣ ಪುಟ್ಟ ಕಾಯಿಲೆಯಿಂದ ಹಿಡಿದು ಎಲ್ಲದಕ್ಕೂ ಗಿಡಮೂಲಿಕೆಗಳಿಂದ ಔಷಧಿ ತಯಾರಿ ನೀಡುವ ಕ್ರಮವಿತ್ತು. ಆಧುನಿಕರಾದಂತೆ ವೈದ್ಯಕೀಯ ಕ್ಷೇತ್ರದಲ್ಲಿಯೂ ಸಾಕಷ್ಟು ಬದಲಾವಣೆಗಳಾಗಿದ್ದರೂ ಆಯುರ್ವೇದ ಹಾಗೂ ಯುನಾನಿ ಪದ್ದತಿ ಇಂದಿಗೂ ತನ್ನ ಮಹತ್ವನ್ನು ಉಳಿಸಿಕೊಂಡಿದೆ ಎಂದು ಕುಂದಾಪುರ ಡಿಎಸ್ಪಿ ಮಂಜುನಾಥ ಶೆಟ್ಟಿ ಹೇಳಿದರು. ಬೆಂಗಳೂರು ಆಯುರ್ವೇದ ಹಾಗೂ ಯುನಾನಿ ವೈದ್ಯ ಮಂಡಳಿ ಸುವರ್ಣ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡ ಧನ್ವಂತರಿ ಆಯುರ್ ಜ್ಯೋತಿ ರಥಯಾತ್ರೆಯನ್ನು ಕುಂದಾಪುರ ತಾಲೂಕು ವೈದ್ಯ ಮಂಡಳಿಯು ಕುಂದಾಪುರ ತಾಲೂಕು ಪಂಚಾಯತ್ ಆವರಣಕ್ಕೆ ಬರಮಾಡಿಕೊಂಡ ಬಳಿಕ ನಡೆದ ಕಾರ್ಯಕ್ರಮದಲ್ಲಿ ಆಯುರ್ ಜ್ಯೋತಿ ಬೆಳಗಿ ಮಾತನಾಡಿದರು. ತಾ.ಪಂ ಅಧ್ಯಕ್ಷ ಭಾಸ್ಕರ್ ಬಿಲ್ಲವ, ಉಡುಪಿ ಜಿಲ್ಲಾ ಆಯುಷ್ ಅಧಿಕಾರಿ ಡಾ. ಅಲಕಾನಂದ ರಾವ್, ಲಯನ್ಸ್ ಕ್ಲಬ್ ಕುಂದಾಪುರ ಅಧ್ಯಕ್ಷ ಅಶೋಕ್ ಬೆಟ್ಟಿನ್, ಪತ್ರಕರ್ತ ಕೆ. ಜಿ. ವೈದ್ಯ ಉಪಸ್ಥಿತರಿದ್ದರು. ಆಯುರ್ವೇದ ಹಾಗೂ ಯುನಾನಿ ವೈದ್ಯ ಮಂಡಳಿ ಸದಸ್ಯ ಡಾ. ಎಂ.…

Read More

ಕುಂದಾಪರ: ಜೆಸಿ ಕುಂದಾಪುರ ಸಿಟಿ ಇದರ ಪದಪ್ರದಾನ ಸಮರಂಭ ಕೋಕ್ಯರೀಸ್ ಓಪನ್ ಏರ್ ಬೀಚ್ ವೇದಿಕೆಯಲ್ಲಿ ನಡೆಯಿತು. ವಲಯ 15ರ ವಲಯ ಅಧ್ಯಕ್ಷರಾದ ಸಂದೀಪ್ ಕುಮಾರ್ ನೂತನ ಸದ್ಯಸರಿಗೆ ಪ್ರಮಾಣ ವಚನ ನೀಡಿದರು ವೇದಿಕೆಯಲ್ಲಿ ಪೂರ್ವ ವಲಯಧ್ಯ ವೈ ಸುಕುಮಾರ್, ಉದ್ಯಮಿ ವಿಠ್ಠಲ್ ಶೆಟ್ಟಿ, ವಲಯ ಉಪಾಧ್ಯಕ್ಷ ನಿತಿನ್  ಅವಭ್ರತ, ಕಾರ್ಯಕ್ರಮ ಸಂಘಟಕರಾದ ನಾಗೇಂದ್ರ ಪೈ, ಶೇಷಾದ್ರಿ ಉಪಾಧ್ಯಾಯ, ಜೂನಿಯರ್ ಜೆ ಸಿ ಅಧ್ಯಕ್ಷ ಸನತ್ ಶೆಟ್, ಸ್ವಪ್ನಿಲ್ ತಂಗಪನ್, ಜೆಸಿರೆಟ್ ಅಧ್ಯಕ್ಷೆ ಸುನೀತಾ ಶ್ರೀಧರ್, ಪುಷ್ಪ ಶೆಟ್  ಉಪಸ್ಥಿತಿತರಿದ್ದರು. ಚಾಪ್ಟರ್ ಅಧ್ಯಕ್ಶರದ ಚಂದ್ರಕಾಂತ ಸ್ವಾಗತಿಸಿದರು, ಬಿಂದು ತಂಕಪನ್, ಕೆ ಕಾರ್ತಿಕೇಯ ಮಧ್ಯಸ್ತ, ನಾಗೇಶ್ ನವದ , ವಿಜಯ ಭಂಡಾರಿ ,ರಾಘವೇಂದ್ರ ನಾವಡ, ರಾಘವೇಂದ್ರ ಭಟ್ ಅತಿಥಿಗಳನ್ನು ಪರಿಚಯಿಸಿದರು, ನೂತನ ಅಧ್ಯಕ್ಷ ಮಂಜುನಾಥ ಕಾಮತ ಅಧ್ಯಕ್ಷತೆ ವಹಿಸಿದರು. ಕಾರ್ಯದರ್ಶಿ ಗೌತಮ್ ನಾವಡ ಸ್ವಾಗತಿಸಿದರು.

Read More

ಕುಂದಾಪುರ: ರಾಷ್ಟ್ರೀಯ ಯುವ ಸಾಪ್ತಾಹದ ಅಂಗವಾಗಿ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿಗಳಿಂದ ಸ್ವಾಮಿ ವಿವೇಕಾನಂದರ ಸಂದೇಶ ಜಾಥಾ ಜರುಗಿತು. ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಎನ್.ಪಿ. ನಾರಾಯಣ ಶೆಟ್ಟಿ ಹಾಗೂ ಪದವಿಪೂರ್ವ ಕಾಲೇಜಿನ ಪ್ರಾಶುಪಾಲ ಜಿ.ಎಂ ಗೊಂಡ ಅವರ ನೇತೃತ್ವದಲ್ಲಿ ಸಾವಿರಾರು ವಿಧ್ಯಾರ್ಥಿಗಳು ಜಾಥಾದಲ್ಲಿ ಭಾವಹಿಸಿದ್ದರು. ಕಾಲೇಜು ಆವರಣದಿಂದ ಹೊರಟ ಜಾಥಾ ಕುಂದಾಪುರ ಮಾಸ್ತಿ ಕಟ್ಟೆಯವರೆಗೆ ಸಾಗಿ ಪುರಸಭೆ ರಸ್ತೆ ಮೂಲಕ ಮತ್ತೆ ಸ್ವಸ್ಥಾನಕ್ಕೆ ತೆರಳುವ ಮೂಲಕ ಸಮಾಪನಗೊಂಡಿತು.

Read More