Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ, ಪದವಿಪೂರ್ವ ಶಿಕ್ಷಣ ಇಲಾಖೆ ಬೆಂಗಳೂರು ಹಾಗೂ ಎಸ್. ಎಸ್. ಪದವಿಪೂರ್ವ ಕಾಲೇಜು, ವಿಜಯಪುರ ಜಂಟಿ ಆಶ್ರಯದಲ್ಲಿ ವಿಜಯಪುರದಲ್ಲಿ ನಡೆದ ರಾಜ್ಯ ಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆ ಜನಪದ ಗಾಯನ ವಿಭಾಗದಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೇಘನಾ ಎ. ಅವರು ಪ್ರಥಮ ಸ್ಥಾನಗಳಿಸಿದ್ದಾರೆ. ವಿಜೇತ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ ಮತ್ತು ಪ್ರಾಧ್ಯಾಪಕ ವೃಂದ ಅಭಿನಂದಿಸಿರುತ್ತಾರೆ. ಮೇಘನಾ ಶಿಕ್ಷಕರಾದ ರಾಮದಾಸ್ ಮತ್ತು ಸುಮನಾ ದಂಪತಿಯವರ ಪುತಿಯಾಗಿರುತ್ತಾರೆ.

Read More

ಸಮಾಜ ಕಲ್ಯಾಣ ಸಚಿವ ಆಂಜನೇಯ ವಾಸ್ತವ್ಯಕ್ಕೆ ಸಕಲ ಸಿದ್ಧತೆ. ಸ್ಥಳದಲ್ಲೇ ಬೀಡು ಬಿಟ್ಟ ಅಧಿಕಾರಿಗಳು ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುಗ್ರಾಮ ಮುರೂರು ರಾಜ್ಯ ಸಮಾಜ ಕಲ್ಯಾಣ ಸಚಿವ ಆಂಜನೇಯ ಅವರ ವಾಸ್ತವ್ಯದ ಕಾರಣದಿಂದಾಗಿ ಸುದ್ದಿಯಾಗುತ್ತಿದೆ. ಆದರೆ ನೂರಾರು ವರ್ಷಗಳಿಂದ ವಾಸವಿರುವ ಇಲ್ಲಿನ ಮೂಲ ನಿವಾಸಿಗಳ ಬದುಕು ಹಾಗೂ ಮೂಲ ಸೌಕರ್ಯಗಳ ಸ್ಥಿತಿಗತಿ ಒಂದಿಷ್ಟು ಬದಲಾಗಿಲ್ಲ. ಭದ್ರವಿಲ್ಲದ ಸೂರು, ಸೋರುವ ಮಾಡು, ಶೌಚವಿಲ್ಲದ ಮನೆ, ಆಧುನಿಕ ತಂತ್ರಜ್ಞಾನದ ಬಾತ್‌ರೂಮ್! ವಿದ್ಯುತ್ ಎಲ್ಲದ ಮನೆ, ಕರೆಂಟಿದ್ದರೂ ತಪ್ಪದ ಗೋಳು, ಇದರೊಟ್ಟಿಗೆ ಹಕ್ಕುಪತ್ರ ಇಲ್ಲದ ಒಂದೆರಡು ಮನೆ, ಕೂಲಿ ಹೊಟ್ಟೆಪಾಡಿನ ದಾರಿ, ಕಣ್ಣು ಚಾ, ಸಾಸುವೆ ಬೇಕಿದ್ದರೂ ನಾಲ್ಕಾರು ಕಿ.ಮೀ ನಡೆಯುವ ಅನಿವಾರ್ಯತೆ. ಇದು ಮೂರೂರು ಕೊರಗ ಕಾಲನಿ ಯಥಾವತ್ ಚಿತ್ರಣ. ಮೂಲ ನಿವಾಸಿಗಳ ಸಂಪಕಷ್ಟದ ಬದುಕಿನ ಸಂಪೂರ್ಣ ಚಿತ್ರಣವೂ ಹೌದು. [quote font_size=”14″ bgcolor=”#ffffff” bcolor=”#dd3333″ arrow=”yes” align=”right”] ಜಿಲ್ಲೆಯಲ್ಲಿ ಮೂಲನಿವಾಸಿಗಳ ಸ್ಥಿತಿಗತಿ ಏನು? ಜಿಲ್ಲೆಯಲ್ಲಿ 276 ಮೂಲನಿವಾಸಿಗಳು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಾಜ್ಯ ಸರ್ಕಾರ ಕೃಷಿಕರಿಗೆ ಶೂನ್ಯ ಬಡ್ಡಿದರದಲ್ಲಿ ೩ ಲಕ್ಷ ರೂ. ಹಾಗೂ ಶೇ. ೩ ಬಡ್ಡಿದರದಲ್ಲಿ ೩ ರಿಂದ ೧೦ ಲಕ್ಷ ರೂ. ಸಾಲ, ಸಬ್ಸಿಡಿ ದರದಲ್ಲಿ ಕೃಷಿ ಯಂತ್ರೋಪಕರಣ, ಪ್ರತಿ ಲೀ. ಹಾಲಿಗೆ ೫ ರೂ. ಪ್ರೋತ್ಸಾಹ ಧನ ಸೇರಿದಂತೆ ಕೃಷಿಕರ ಕಲ್ಯಾಣಕ್ಕಾಗಿ ಹತ್ತಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಕೃಷಿಕರು ಇದರ ಸದುಪಯೋಗ ಪಡೆದು, ಕೃಷಿಗೆ ಹೆಚ್ಚಿನ ಒತ್ತನ್ನು ನೀಡುವ ಮೂಲಕ ಕೃಷಿಯನ್ನು ಲಾಭದಾಯಕ ಉದ್ಯಮವಾಗಿ ಪರಿವರ್ತಿಸಬೇಕು ಎಂದು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕೃಷಿ ಉತ್ಸವ ವ್ಯವಸ್ಥಾಪನಾ ಸಮಿತಿ ಕುಂದಾಪುರ, ಆರ್ .ಕೆ ಸಂಜೀವ ರಾವ್ ಜನ್ಮ ಶತಾಬ್ದಿ ಸಂಸ್ಮರಣಾ ಸಮಿತಿ, ಸಂದೀಪನ್ ಆಂಗ್ಲ ಮಾಧ್ಯಮ ಶಾಲೆ ಕಂಬದಕೋಣೆ, ಪ್ರಗತಿ ಬಂಧು ಸ್ವಸಹಾಯ ಒಕ್ಕೂಟ ಇವರ ಸಂಯುಕ್ತ ಆಶ್ರಯದಲಿ, ಡಾ. ಡಿ. ವೀರೇಂದ್ರ ಹಗ್ಡೆಯವರ ಮಾರ್ಗದರ್ಶನದಲ್ಲಿ ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಶಬರಿಮಲೆ ಯಾತ್ರೆಗೆ ತಮಿಳುನಾಡಿನಿಂದ ಕಾಲ್ನಡಿಗೆಯಲ್ಲಿ ಹೊರಟಿದ್ದ ಅಯ್ಯಪ್ಪಸ್ವಾಮಿ ವೃತಧಾರಿಯೋರ್ವರಿಗೆ ಬೀದಿ ನಾಯಿಯೊಂದು ಸಾಥ್ ನೀಡಿದ್ದು 600ಕಿ.ಮೀ ಅವರೊಂದಿಗೆ ತೆರಳಿ ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಗಿದೆ. ವೃತಧಾರಿ ಪ್ರವಾಸದಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಾಲಯದಿಂದ ಉಡುಪಿ ಮಾರ್ಗವಾಗಿ ಶಬರಿಮಲೆ ಯಾತ್ರೆಗೆ ಕಾಲ್ನಡಿಗೆ ಮೂಲಕ ಪಾದಯಾತ್ರೆಯಲ್ಲಿ ತೆರಳುತ್ತಿದ್ದ ನವೀನ್ ಅವರನ್ನು ನಾಯಿ ಹಿಂಬಾಲಿಸುತ್ತಿದ್ದಾಗ ಈ ಮಾಹಿತಿ ತಿಳಿದಿದೆ. ಕೇರಳದ ಕೋಳಿಕೋಡ್ ಮೂಲದವರಾಗಿರುವ ನವೀನ್ ಡಿಸೆಂಬರ್ ೭ರಂದು ಯಾತ್ರೆ ಆರಂಭಿಸಿದ್ದಾರೆ. ಆರಂಭದಲ್ಲಿ ಹಲವು ಬೀದಿ ನಾಯಿಗಳಂತೆ ಇದು ಹಿಂಬಾಲಿಸುತ್ತಿರಬೇಕು ಎಂದುಕೊಂಡು ಅದನ್ನ ಓಡಿಸಲು ಹಲವು ಬಾರಿ ಪ್ರಯತ್ನಿಸಿದ್ದಾರೆ. ಆದರೆ ಅವರು ಅನೇಕ ಸಲ ಪ್ರಯತ್ನಿಸಿದರೂ ಅದು ಹೋಗಿಲ್ಲ. ಕುಂದಾಪ್ರ ಡಾಟ್ ಕಾಂ ಸುದ್ದಿ. 600 ಕಿಲೋ ಮೀಟರ್ ಪಾದಯಾತ್ರೆಯಲ್ಲಿ ಅವರು 17 ದಿನಗಳ ಕಾಲ ಕಾಲ್ನಡಿಗೆ ಮುಗಿಸಿದ್ದು, ಶಬರಿಮಲೆಯಿಂದ ಹಿಂತಿರುಗುತ್ತಿದ್ದಾಗ ಸಹ ಶ್ವಾನ ಇವರನ್ನ ಹಿಂಬಾಲಿಸಿದೆ. ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಇವರ ಪಕ್ಕದಲ್ಲೇ ಕುಳಿತುಕೊಂಡಿದೆ. ಕೇರಳ ರಾಜ್ಯ ವಿದ್ಯುತ್ ಮಂಡಳಿ ಉದ್ಯೋಗಿಯಾಗಿರುವ ನವೀನ್, ಈ ಶ್ವಾನದ ಬಗ್ಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರಾಕೃತಿಕ ಸೌಂದರ್ಯದಿಂದ ಕಂಗೊಳಿಸುವ ತಾಲೂಕಿನ ಕೆರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿಸ್ಮಯಕಾರಿ ಮೂಡುಗಲ್ಲು ಶ್ರೀ ಕೇಶವನಾಥೇಶ್ವರ ದೇವಳದಲ್ಲಿ ಎಳ್ಳು ಅಮವಾಸ್ಯೆಯ ಪ್ರಯುಕ್ತ ಜಾತ್ರಾ ಮಹೋತ್ಸವ ಸಂಭ್ರಮದಿಂದ ಜರುಗಿದವು. ದಟ್ಟ ಕಾನನದ ನಡುವೆ ಸುಮಾರು ಐವತ್ತು ಅಡಿಗಳಷ್ಟು ದೂರದ ಕಡುಗಲ್ಲು ಗುಹೆಯಲ್ಲಿನ ಶ್ರೀ ಕೇಶವನಾಥ ಕ್ಷೇತ್ರದಲ್ಲಿ ಎಳ್ಳು ಅಮಾವಾಸ್ಯೆಯಂದು ದೇವರಿಗೆ ವಿಶೇಷ ಪೂಜೆ, ಬೆಳಿಗ್ಗೆಯಿಂದ ಸಂಜೆಯತನಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.  ನೂರಾರು ಭಕ್ತರು ದೇವರ ದರ್ಶನ ಪಡೆದು ಪುನೀತರಾದರು. ಮಧ್ಯಾಹ್ನ ಭಕ್ತರಿಗೆ ಪ್ರಸಾದ ವಿತರಣೆ ನಡೆಯಿತು. ಕೆರಾಡಿಯ ಶಶಿಧರ ಮಿತ್ರವೃಂದ ನೇತೃತ್ವದಲ್ಲಿ ದೇವಳಕ್ಕೆ ಆಗಮಿಸುವ ಭಕ್ತಾದಿಗಳಿಗಾಗಿ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿತ್ತು. ದೇವಳದ ಅರ್ಚಕ ರಾಘವೇಂದ್ರ ಕುಂಜತ್ತಾಯ ಹಾಗೂ ಶಶಿಧರ ಮಿತ್ರವೃಂದದ ಸಂಚಾಲಕ ದಿವ್ಯಾಧರ ಶೆಟ್ಟಿ ಕೆರಾಡಿ ಮತ್ತವರ ತಂಡದಿಂದ ಸಕಲ ವ್ಯವಸ್ಥೆ ಮಾಡಲಾಗಿತ್ತು. ► ಮೂಡುಗಲ್ಲು: ವಿಸ್ಮಯಕಾರಿ ಗುಹಾಂತರ ಕೇಶವನಾಥ ದೇವಾಲಯ – http://kundapraa.com/?p=1522 ► ಬೆಳ್ಕಲ್ ಗೋವಿಂದ ತೀರ್ಥದಲ್ಲಿ ಎಳ್ಳಮಾವಾಸ್ಯೆ ಸಂಭ್ರಮ. ಅಸಂಖ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಮದೂರು ಸಮೀಪದ ಬೆಳ್ಕಲ್ ಗೋವಿಂದ ತೀರ್ಥಕ್ಷೇತ್ರದಲ್ಲಿ ಎಳ್ಳು ಅಮಾವಾಸ್ಯೆಯ ಪ್ರಯುಕ್ತ ಸಾವಿರಾರು ಭಕ್ತರಿಂದ ಪವಿತ್ರ ತೀರ್ಥಸ್ನಾನ ನಡೆಯಿತು. ವರ್ಷಕ್ಕೊಮ್ಮೆ ಸಾವಿರಾರು ಭಕ್ತರು ಕಠಿಣ ಹಾದಿಯನ್ನು ಕ್ರಮಿಸಿ ಎತ್ತರದಿಂದ ಬೀಳುವ ನೀರಿಗೆ ತಲೆಯೊಡ್ಡಿ ಗೋವಿಂದನ ನಾಮಸ್ಮರಣೆಗೈಯುತ್ತಾ ನೀರಿಗೆ ಮೈಯೊಡ್ಡಿ ಪುನೀತರಾಗುತ್ತಾರೆ. ಸುಮಾರು ಎರಡೂವರೆ ಸಾವಿರ ಫೀಟ್ ಎತ್ತರದಿಂದ ಹರಿದು ಬರುವ ನೀರು ಗೋವಿಂದ ತೀರ್ಥವಾಗಿ ಧರೆಗಿಳಿಯುವಲ್ಲಿ ನೆರೆದ ಸಹಸ್ರಾರು ಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಕೊಡಚಾದ್ರಿಯ ತಪ್ಪಲಿನಲ್ಲಿರುವ ಗೋವಿಂದ ತೀರ್ಥಕ್ಕೆ ನಡೆದೇ ಸಾಗಬೇಕಾದುದರಿಂದ ಎಳ್ಳಾಮವಾಸ್ಯೆ ದಿನ ಕಾಡು ದಾರಿಯಲ್ಲಿ ಗುಡ್ಡ ಹತ್ತಿ ಸಾಗುವವರಿಗೆ ಮಜ್ಜಿಗೆ ವ್ಯವಸ್ಥೆ, ಮಧ್ಯಾಹ್ನ ಅನ್ನಸಂತರ್ಪಣೆ ವ್ಯವಸ್ಥೆಯನ್ನೂ ಕಲ್ಪಿಸಲಾಗಿತ್ತು. ಗುಡ್ಡದ ಕೆಳಗಿರುವ ಗಣಪತಿ ಗೋವಿಂದ ಕೊಟಿಲಿಂಗೇಶ್ವರ ದೇವರಿಗೆ ನಮಸ್ಕರಿಸಿ ಪ್ರಸಾದ ಸ್ವೀಕಸಿದರು. ►  ವಿಸ್ಮಯಕಾರಿ ತಾಣ ‘ಬೆಳ್ಕಲ್ ತೀರ್ಥ’ – http://kundapraa.com/?p=2297

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಯಡ್ತರೆ ನಾಕಟ್ಟೆಯಲ್ಲಿ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿಯ ಜೀಣೋದ್ಧಾರ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಪೂರ್ವಭಾವಿಯಾಗಿ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ, ವೇ.ಮೂ ಕೇಂಜ ಶ್ರೀಧರ ತಂತ್ರಿ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಎರಡು ದಿನಗಳ ಕಾಲ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಅಘೋರ ಹೋಮ, ವನದುರ್ಗಾ ಯಾಗ, ಸುದರ್ಶನ ಯಾಗ, ಅಘೋರ ಬಲಿ ವಿಧಾನ, ಪ್ರತಿಗತಿ ಸಂಖ್ಯೆಯಲ್ಲಿ ತುಲಾಯಾಗ, ವಿಷ್ಣು ಚಕ್ರಾಬ್ಜ್ಯ ಪೂಜೆ, ಹಾಗೂ ದೈವ ಸಾನಿಧ್ಯ ಶುದ್ಧಿ, ಮಧ್ನಾಹ್ನ ಅನ್ನ ಪ್ರಸಾದ ವಿತರಣೆ ಕಾರ್ಯಕ್ರಮಗಳು ಜರುಗಿದವು. ಧಾರ್ಮಿಕ ಕಾರ್ಯಕ್ರಮದಲ್ಲಿ ದೈವಸ್ಥಾನವನ್ನು ನಂಬಿದ ಭಕ್ತರಾದ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಬೈಂದೂರು ಗ್ರಾಮ ಪಂಚಾಯತ್ ಸದಸ್ಯ ವೆಂಕ್ಟ ಪೂಜಾರಿ, ಮಹೇಶ ಪೂಜಾರಿ ಮುಂಬೈ, ಸ್ಥಳೀಯರಾದ ಜಗನ್ನಾಥ ಶೆಟ್ಟಿ ನಾಕಟ್ಟೆ, ಆನಂದ ಶೆಟ್ಟಿ, ನಾಕಟ್ಟೆ, ನಾಗಯ್ಯ ಶೆಟ್ಟಿ ನಾಕಟ್ಟೆ ಸೇರಿದಂತೆ ಗರಡಿಯ ಭಕ್ತರು ಪಾಲ್ಗೊಂಡಿದ್ದರು. ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸ್ವಾಮಿ ವಿವೇಕಾನಂದರು ಕಂಡ ಕನಸಿನ ಭಾರತ ಸಾಕಾರಗೊಳ್ಳುವ ದಿನಗಳು ಬಂದಿದ್ದು, ಜಗತ್ತು ಇಂದು ನಮ್ಮತ್ತ ಮುಖಮಾಡುವಂತಾಗಿದೆ. ವಿಶ್ವದ ಶಕ್ತಿಶಾಲಿ ದೇಶಗಳು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳುವ ಮೊದಲು ಅದರ ಬಗೆಗೆ ಭಾರತದ ನಿಲುವು ಹಾಗೂ ವಿಚಾರವೇನು ಎಂದು ಯೋಚಿಸುವ ಕಾಲಘಟ್ಟದಲ್ಲಿ ನಾವುರುವುದು ಹೆಮ್ಮೆಯ ಸಂಗತಿ ಎಂದು ಆರ್‌ಎಸ್‌ಎಸ್ ಮಂಗಳೂರು ವಿಭಾಗ ಕಾರ್ಯವಾಹಕ ನಾ. ಸೀತಾರಾಮ್ ಹೇಳಿದರು. ಅವರು ಬೈಂದೂರು ಸೀತಾರಾಮಚಂದ್ರ ದೇವಸ್ಥಾನದ ಸಭಾಭವನದಲ್ಲಿ ಜರುಗಿದ ಸಮರ್ಥ ಭಾರತ ಬೈಂದೂರು ಘಟಕದ ಆಯೋಜಿಸುತ್ತಿರುವ ವಿವೇಕ ಪರ್ವ ಕಾರ್ಯಕ್ರಮದ ಸ್ವಾಗತ ಸಮಿತಿ ಸಭೆ ಹಾಗೂ ಬೈಠಕ್‌ನಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಯುವ ಸಮಾಜ ದೇಶದ ಬಹುದೊಡ್ಡ ಆಸ್ತಿ. ವೇಗ ಹಾಗೂ ಉತ್ಸಾಹ ಇಂದಿನ ಯುವ ಸಮುದಾಯದಲ್ಲಿದೆ. ಅವರಿಗೆ ಸರಿಯಾದ ಮಾರ್ಗದರ್ಶವನ್ನು ನೀಡಿ ಸಮಾಜನವನ್ನು ಏಕೀಕೃತ ಭಾವದಿಂದ ಕೊಂಡೊಯ್ಯಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದ ಅವರು ಪ್ರತಿಯೊಬ್ಬರಲ್ಲೂ ಸಮಾಜದ ಕೆಲಸ ಮಾಡುವ ಮೂಲಕ ರಾಷ್ಟ್ರದ ಕೆಲಸ ಮಾಡುತ್ತಿದ್ದೇನೆಂಬ ಭಾವ ಮೂಡುವಂತಾಗಬೇಕು ಆಶಿಸಿದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಂಡ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದೆ. ರಾಜ್ಯಮಟ್ಟದಲ್ಲಿ ನೀಡಲಾಗುವ ಗಾಂಧಿ ಗ್ರಾಮ ಪುರಸ್ಕಾರ ಪಡೆದಿರುವುದು ಹೆಮ್ಮೆಯ ವಿಚಾರ. ಈ ಪುರಸ್ಕಾರ ಇನ್ನಷ್ಟು ಪ್ರಗತಿಗೆ ಸ್ಪೂರ್ತಿಯಾಗಲಿ. ಗ್ರಾಮ ವಿಕಾಸ ಯೋಜನೆ ವಂಡ್ಸೆ ಪಂಚಾಯತ್‌ಗೆ ದೊರಕಿದ್ದು, ಬಹುತೇಕ ಬೇಡಿಕೆಗಳು ಇದರ ಮೂಲಕ ಈಡೇರಲಿವೆ ಎಂದು ಬೈಂದೂರು ಕ್ಷೇತ್ರದ ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು. ಅವರು ವಂಡ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು ೭೫ ಲಕ್ಷ ರೂಪಾಯಿ ವೆಚ್ಚದ ಗ್ರಾಮ ವಿಕಾಸ ಯೋಜನೆಯನ್ವಯ ಕಾರ್ಯಗತಗೊಳ್ಳಲಿರುವ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಸರ್ಕಾರಿ ಶಾಲೆಗಳು ಮಕ್ಕಳ ಕೊರತೆಯಿಂದ ಮುಚ್ಚುತ್ತಿರುವ ಈ ಸಂದರ್ಭದಲ್ಲಿ ವಂಡ್ಸೆಯ ಸರ್ಕಾರಿ ಶಾಲೆ ಎಲ್.ಕೆಜಿ ಯುಕೆಜಿ ಆಂಗ್ಲ ಮಾಧ್ಯಮದಲ್ಲಿ ೧ನೇ ತರಗತಿ ಆರಂಭಿಸುವ ಮೂಲಕ ಮಾದರಿಯಾಗಿ ಮೂಡಿಬಂದಿದೆ. ಈ ಮಾದರಿಯನ್ನೇ ಬಹುತೇಕ ಸರ್ಕಾರಿ ಶಾಲೆಗಳು ಮಾಡಲು ಮುಂದಾಗಿವೆ. ಸರ್ಕಾರಿ ಶಾಲೆಯನ್ನು ಉಳಿಸುವಲ್ಲಿನ ಪ್ರಯತ್ನ ಅನುಕರಣೀಯ ಎಂದರು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉದಯಕುಮಾರ್ ಶೆಟ್ಟಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮರವಂತೆಯ ಪ್ರಧಾನ ರಸ್ತೆಗಳಲ್ಲಿ ಒಂದಾದ ಮಹಾತ್ಮ ಗಾಂಧಿ ಮಾರ್ಗದಲ್ಲಿ ಬಿದ್ದಿರುವ ಹತ್ತಾರು ಗುಂಡಿಗಳಿಗೆ ಊರಿನ ರಿಕ್ಷಾ ಚಾಲಕರು ಮಂಗಳವಾರ ಗಟ್ಟಿ ಮಣ್ಣು ಭರ್ತಿಮಾಡಿ ತಾತ್ಕಾಲಿಕ ಕಾಯಕಲ್ಪ ನೀಡಿದರು. ತಮ್ಮೊಳಗೆ ದೇಣಿಗೆ ಒಟ್ಟುಗೂಡಿಸಿ ಮಣ್ಣು ತರಿಸಿಕೊಂಡ ಅವರು ಶ್ರಮದಾನ ಮಾಡಿ, ಸುರಿದ ಮಣ್ಣನ್ನು ಗಟ್ಟಿಗೊಳಿಸಿದರು. ಅಸಮರ್ಪಕವಾಗಿ ನಿರ್ಮಿಸಿದ ವೇಗತಡೆಗೆ ಮಣ್ಣಿನ ಇಳಿಜಾರು ನಿರ್ಮಿಸಿದರು. ಅವರ ಈ ಉಪಕ್ರಮವನ್ನು ಮೆಚ್ಚಿಕೊಂಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆ. ಎ. ಅನಿತಾ ಮತ್ತಿತರರು ಅವರನ್ನು ಅಭಿನಂದಿಸಿದರೆ, ಸಾರ್ವಜನಿಕರಲ್ಲಿ ಕೆಲವರು ಈ ಕುರಿತು ಗಮನ ಹರಿಸದೆ ನಿರ್ಲಕ್ಷ್ಯ ತೋರಿರುವ ಸ್ಥಳೀಯಾಡಳಿತ ಮತ್ತು ಜನಪ್ರತಿನಿಧಿಗಳ ಬಗೆಗೆ ಅಸಮಾಧಾನ ವ್ಯಕ್ತಪಡಿಸಿದರು.

Read More