Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ತಾಲೂಕಿನ ಗ್ರಾಮೀಣ ಭಾಗವಾದ ಆನಗಳ್ಳಿಯಲ್ಲಿ ಸದ್ದಿಲ್ಲದೆ ಬೆಳೆಯುತ್ತಿರುವ ಯುವ ಪ್ರತಿಭೆಯೊಬ್ಬರು ಇದೀಗ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡುವುದಕ್ಕಾಗಿ ತಯಾರಿ ನಡೆಸುತ್ತಿದ್ದಾರೆ. ಕಾಲೇಜಿನಿಂದ ಆರಂಭವಾದ ಪವರ್ ಲಿಫ್ಪಿಂಗ್ ಎನ್ನುವ ಕ್ರೀಡಾಸಕ್ತಿಯ ಪಯಣ ಇದೀಗ ಅಂತರಾಷ್ಟ್ರೀಯ ಮಟ್ಟದವರೆಗೂ ಬೆಳೆದು ನಿಂತಿರುವ ಬಗ್ಗೆ ಈ ಯುವಕನಲ್ಲಿ ಹೆಮ್ಮೆ ಇದೆ. ಸದ್ಯದಲ್ಲಿಯೇ ಜಮ್‌ಶೆಡ್‌ಪುರದಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿರುವ ಬಸ್ರೂರಿನ ಶಾರದಾ ಕಾಲೇಜಿನ ಜಾಕ್ಸನ್ ಡಿಸೋಜಾ ಇದೀಗ ರಾಜ್ಯದ ಪವರ್ ಲಿಫ್ಟಿಂಗ್ ಸ್ಪರ್ಧಿಗಳ ಪೈಕಿ, ಪದಕ ಗೆಲ್ಲುವ ಭರವಸೆಯ ಕುದರೆ. ಆನಗಳ್ಳಿ ಜೋಸೆಫ್ ಡಿಸೋಜಾ ಹಾಗೂ ಕಾಮೀನ್ ಡಿಸೋಜಾ ದಂಪತಿಗಳ ಕಿರಿಯ ಪುತ್ರ ಜಕ್ಸನ್‌ಗೆ ಕಾಲೇಜು ದಿನಗಳಿಂದಲೂ ಬದುಕಿನಲ್ಲಿ ಏನಾದರು ಸಾಧಿಸಬೇಕು ಎನ್ನುವ ಹಂಬಲ, ಇದಕ್ಕಾಗಿ ಡಾ.ಬಿ.ಬಿ ಹೆಗ್ಡೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವಾಗಲೆ ’ಪವರ್ ಲಿಫ್ಟಿಂಗ್’ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡರು. ಪ್ರಾರಂಭದ ದಿನಗಳಲ್ಲಿಯೇ ಜಿಲ್ಲಾ ಹಾಗೂ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಸೈ ಎನಿಸಿಕೊಂಡ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಿಂದೆ ಯುವ ಜನ ಮೇಳ ಎಂಬುಂದು ಒಂದು ಊರ ಹಬ್ಬ ಅಗುತ್ತಿತ್ತು. ಅದರೆ ಇಂದು ಯುವಕರಲ್ಲಿ ಹಾಗೂ ಪ್ರೇಕ್ಷಕರಲ್ಲೂ ಕೂಡ ಅಸಕ್ತಿ ಕಡಿಮೆ ಆಗ ತೋಡಗಿದೆ. ಯುವಜನ ಮೇಳದಲ್ಲಿ ಸ್ಪರ್ಧೆಗೊಳ್ಳುವ ನಮ್ಮ ವೀರಗಾಸೆ, ಗೀಗೀಪದ, ಕೋಲಾಟ, ಲಾವಣಿ ಸೇರಿದಂತೆ ಇನ್ನಿತರ ಸಾಂಪ್ರದಾಯಿಕ ಕಲೆಗಳನ್ನು ಇಂದು ಇಂಟರ್‌ನೆಟ್, ಮೊಬೈಲ್, ಸಾಮಾಜಿಕ ಜಾಲತಾಣಗಳು ನುಂಗಿವೆ. ನಮ್ಮ ಸಾಂಪ್ರದಾಯಿಕ ಕಲೆಗಳ ಬಗ್ಗೆ ಹಿನ್ನಲೆ ಕೂಡ ನಮಗೆ ಗೋತ್ತಿಲ್ಲ. ಹಿನ್ನಲೆ ಗೋತ್ತಿದ್ದರೇ ಉತ್ತಮ ನಿರ್ವಹಣೆ ಮತ್ತು ಪ್ರದರ್ಶನ ನೀಡಲು ಸಾಧ್ಯವಿದೆ ಎಂದು ಮೀನುಗಾರಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು. ಬೀಜಾಡಿ ಮೂಡು ಶಾಲಾ ವಠಾರದಲ್ಲಿ ಉಡುಪಿ ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಇಲಾಖೆ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಬೀಜಾಡಿ ಹಾಗೂ ಮಿತ್ರ ಸಂಗಮ ಬೀಜಾಡಿ-ಗೋಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಕುಂದಾಪುರ ತಾಲೂಕು ಯುವಜನ ಮೇಳ ‘ಸಂಗಮ-2016’ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಲಯದ ಬಿದ್ಕಲ್ ಕಟ್ಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿ ತಿಂಗಳು ನಡೆಯುವ ವಿನೂತನ ಮಾಸಿಕ ಕಾರ್ಯಕ್ರಮವಾದ ತಿಂಗಳ ಕಲಿಕಾ ಪ್ರದರ್ಶನದ ೫ನೇ ಕಾರ್ಯಕ್ರಮ ’ಶಾಲೆಗೆ ಬನ್ನಿ ಶನಿವಾರ, ಕಲಿಕೆಗೆ ನೀಡಿ ಸಹಕಾರ’ ಎಂಬ ಕಾರ್ಯಕ್ರಮದ ಅಡಿಯಲ್ಲಿ ದಾನಿಗಳಿಂದ ವಿವಿಧ ಕೊಡುಗೆ ಸ್ವೀಕರಿಸುವ ಪ್ರಥಮ ಸಮಾರಂಭವು ಹಾಲಾಡಿ-ಬಿದ್ಕಲ್‌ಕಟ್ಟೆ ಲಯನ್ಸ್ ಕ್ಲಬ್‌ನ ಸಹಯೋಗದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶಾಂತಾರಾಮ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಹಾಲಾಡಿ-ಬಿದ್ಕಲ್‌ಕಟ್ಟೆ ಲಯನ್ಸ್ ಕ್ಲಬ್‌ನ ಅಧ್ಯಕ್ಷರಾದ ಲ.ಉದಯ ಶೆಟ್ಟಿಯವರು ೫ನೇ ತಿಂಗಳ ಕಲಿಕಾ ಪ್ರದರ್ಶನಕ್ಕೆ ಚಾಲನೆ ನೀಡಿದರು. ಪ್ರಾಜೆಕ್ಟರ್, ಲ್ಯಾಪ್‌ಟಾಪ್ ಕೊಡುಗೆ ನೀಡಿದ ಸಂಧ್ಯಾ ಸುಬ್ರಹ್ಮಣ್ಯ ಅಡಿಗ ಹಾಗೂ ದಾನಿ, ನಿವೃತ್ತ ಮುಖ್ಯೋಪಾಧ್ಯಾಯ ಎಚ್ ಸುಬ್ಬಣ್ಣ ಶೆಟ್ಟಿಯವರನ್ನು ಲಯನ್ಸ್ ಕ್ಲಬ್ ವತಿಯಿಂದ ಸನ್ಮಾನಿಸಿ ಮಾತನಾಡಿದ ಲಯನ್ಸ್ ೩೧೭ ಸಿ ಜಿಲ್ಲಾ ಗವರ್ನರ್ ಲ. ದಿವಾಕರ ಶೆಟ್ಟಿ ಯವರು ’ಗ್ರಾಮೀಣ ಪ್ರದೇಶದಲ್ಲಿರುವ ಈ ಸರಕಾರಿ ಶಾಲೆಯ ಶೈಕ್ಷಣಿಕ ಅಭಿವೃದ್ಧಿಗೆ ಸ್ಥಳೀಯ ಜನಸಮುದಾಯ ಕೈಜೋಡಿಸುವ ಮೂಲಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಗಂಗೊಳ್ಳಿಯ ಪಂಚಗಂಗಾವಳಿ ಬಳಗದ ನೂತನ ಅಧ್ಯಕ್ಷರಾಗಿ ಜಿ.ಶ್ರೀನಿವಾಸ ಖಾರ್ವಿ ಆಯ್ಕೆಯಾದರು. ನಾರಾಯಣ ಸುಬ್ರಾಯ ಖಾರ್ವಿ (ಗೌರವಾಧ್ಯಕ್ಷ), ಸೌಪರ್ಣಿಕ ಬಸವ ಖಾರ್ವಿ, ಬೋರ್‌ಕಾರ್ ಮಾಧವ ಖಾರ್ವಿ, ಜಿ.ಎನ್.ಸತೀಶ ಖಾರ್ವಿ, ಮಾಧವ ಗೋವಿಂದ ಖಾರ್ವಿ, ಅನಂತ ಖಾರ್ವಿ (ಉಪಾಧ್ಯಕ್ಷರು), ಜಿ.ಎಂ.ರಾಘವೇಂದ್ರ ಖಾರ್ವಿ (ಕಾರ್ಯದರ್ಶಿ), ಸಂದೀಪ ಖಾರ್ವಿ, ಬೋರ್‌ಕಾರ್ ನಾಗರಾಜ ಖಾರ್ವಿ, ಸಜಿತ್ ಬಿ. (ಜತೆ ಕಾರ್ಯದರ್ಶಿ), ಎಂ.ಕೆ.ನಾಗರಾಜ ಖಾರ್ವಿ (ಖಜಾಂಚಿ), ಚೇತನ್ ಖಾರ್ವಿ (ಲೆಕ್ಕ ಪರಿಶೋಧಕ), ಜಗನ್ನಾಥ ಖಾರ್ವಿ, ಶಿಪಾ ಸಂತೋಷ ಖಾರ್ವಿ, ಬಿ.ಸಂತೋಷ ಖಾರ್ವಿ, ಬಿ.ರಾಮನಾಥ ಖಾರ್ವಿ, ಕೆ.ರಾಜ ಖಾರ್ವಿ, ಸಜಿತ್ ಖಾರ್ವಿ, ಸುಧಾಕರ ಖಾರ್ವಿ (ಕ್ರೀಡಾ ಕಾರ್ಯದರ್ಶಿಗಳು), ಜಿ.ಎನ್.ದಿಲೀಪ ಖಾರ್ವಿ, ಶಿಪಾ ನಾಗ ಖಾರ್ವಿ, ಜೋಗಿ ಸಂತೋಷ ಖಾರ್ವಿ, ಅಣ್ಣಪ್ಪ ಖಾರ್ವಿ, ಕೆ.ರಾಘವೇಂದ್ರ ಖಾರ್ವಿ, ಮಂಜುನಾಥ ಖಾರ್ವಿ, ಸಚಿನ್, ರೋಶನ್, ಕೀರ್ತನ್ (ಕಾರ್ಯಕಾರಿ ಸಮಿತಿ ಸದಸ್ಯರು), ನಾಗರತ್ನ, ಶೋಭಾ ಎಸ್.ಆರ್ಕಾಟಿ, ರೇಖಾ ಆರ್.ಕೆ., ಅಶ್ವಿನಿ ಎಂ., ಜಯಶ್ರೀ ಆರ್., ಅನುಷಾ ಆರ್., ಸೌಮ್ಯ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಯಶಸ್ಸಿಗೆ ಕೇವಲ ಸಂಪತ್ತು ಒಂದೇ ಇದ್ದರೆ ಸಾಲದು ಆರೋಗ್ಯವೂ ಬಹಳ ಮುಖ್ಯ. ರೋಗಗಳ ಬಗ್ಗೆ ಮಾಹಿತಿ ಹಾಗೂ ಅವುಗಳ ನಿಯಂತ್ರಣಕ್ಕೆ ಜನರಲ್ಲಿ ಅರಿವು ಮೂಡಿಸಬೇಕು. ಈ ನಿಟ್ಟಿನಲ್ಲಿ ಈ ಶಿಬಿರಗಳು ಹೆಚ್ಚು ಪರಿಣಾಮಕಾರಿಯಾಗುತ್ತದೆ ಎಂದು ಕುಂದಾಪುರ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀನಿವಾಸ ಸುವರ್ಣ ಹೇಳಿದರು. ಕುಂದಾಪುರ ವಕೀಲರ ಸಂಘದಲ್ಲಿ ಕುಂದಾಪುರ ಬಾರ್ ಅಸೋಸಿಯೇಶನ್ (ರಿ.), ಕುಂದಾಪುರ, ಇಂಡಿಯಾನಾ ಆಸ್ಪತ್ರೆ ಮತ್ತು ಹಾರ್ಟ್ ಇನ್‌ಸ್ಟಿಟ್ಯೂಟ್ ಲಿ. ಮಂಗಳೂರು ಸಂಯುಕ್ತ ಆಶ್ರಯದಲ್ಲಿ ವಕೀಲರುಗಳಿಗೆ ಮತ್ತು ನ್ಯಾಯಾಲಯದ ಸಿಬ್ಬಂದಿಗಳಿಗಾಗಿ ಉಚಿತ ಹೃದಯ ರೋಗ ತಪಾಸಣಾ ಶಿಬಿರ ಮತ್ತು ಮೈ ಇಂಡಿಯಾನಾ ಹೆಲ್ತ್ ಕಾರ್ಡ್ ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತಾನಾಡಿದರು. ಕುಂದಾಪುರ ಬಾರ್ ಅಸೋಸಿಯೇಶನ್ ರಿ. ಕುಂದಾಪುರ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ ಪ್ರಾಸ್ತಾವಿಕ ಮಾತನಾಡಿ ಕಾನೂನು ಮತ್ತು ರಕ್ತದಾನ ಶಿಬಿರಗಳನ್ನು ಹಲವು ಬಾರಿ ಸಂಘಟಿಸಿದ್ದೇವೆ. ಇದೊಂದು ಹೊಸ ಪ್ರಯೋಗ, ನಮ್ಮ ವೃತ್ತಿ ಬಾಂಧವರಿಗೆ ಒಂದೇ ಸೂರಿನಲ್ಲಿ ಹೃದಯಕ್ಕೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಂಗಭೂಮಿಗೆ ವಿಶಿಷ್ಟವಾದ ಕಲ್ಪನಾಶಕ್ತಿಯಿದೆ. ಓದುವುದು ಹಾಗೂ ಕೇಳುವುದರ ಜೊತೆಗೆ ಶೋತ್ರುಗಳೊಂದಿಗೆ ಅನುಸಂಧಾನ ನಡೆಸಲು ನಾಟಕದಿಂದ ಮಾತ್ರವೇ ಸಾಧ್ಯವಿದೆ ಎಂದು ಟೀಚರ‍್ಸ್ ಕೋ-ಆಪರೇಟಿವ್ ಬ್ಯಾಂಕ್ ನಿರ್ದೇಶಕ ಕೆ.ಸಿ ರಾಜೇಶ್ ಹೇಳಿದರು. ಅವರು ಸುರಭಿ ರಿ. ಬೈಂದೂರು ಹಾಗೂ ಯಸ್ಕೋರ್ಡ್ ಟ್ರಸ್ಟ್ ರಿ. ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಆಯೋಜಿಸಲಾಗಿದ್ದ ’ರಂಗಸುರಭಿ 2016’ ನಾಟಕ ಸಪ್ತಾಹದಲ್ಲಿ ದಿನದ ನುಡಿಗಳನ್ನಾಡುತ್ತಿದ್ದರು. ಕಲೆಯ ವಿವಿಧ ಪ್ರಕಾರಗಳ ಬದಲಾವಣೆಗಳನ್ನು ಕಂಡುಕೊಂಡಿದ್ದರೂ ರಂಗದ ಕಲಾವಿದರ ಕಲಾಶಕ್ತಿ ಹಾಗೂ ಸೃಜನಶೀಲತೆ ಇಂದಿಗೂ ಬದಲಾಗಿಲ್ಲ. ರಂಗದ ಕಲಾವಿದ ನೈಜತೆಯೊಂದಿಗೆ ಹತ್ತಿರವಾಗುತ್ತಾನೆ. ರಂಗಭೂಮಿಗೆ ಸುಧೀರ್ಘವಾದ ಹಿನ್ನಲೆ ಹಾಗೂ ಶಕ್ತಿಯಿದೆ. ಕನ್ನಡ ರಂಗಭೂಮಿಯ ಶಕ್ತಿಯೂ ದೊಡ್ಡದಿದ್ದು ಹಲವು ದಿಗ್ಗಜರು ತೊಡಗಿಸಿಕೊಂಡಿದ್ದಾರೆ ಎಂದವರು ವ್ಯಾಖ್ಯಾನಿಸಿದರು. ರಾಷ್ಟ್ರೀಯ ಸಂತ ಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಂಯೋಜಕ ಕಾ.ತ.ಚಿಕ್ಕಣ್ಣ ಮಾತನಾಡಿ ಮನುಷ್ಯನ ಸ್ವಭಾವವನ್ನು ನೇರವಾಗಿ ನೋಡುಗರಿಗೆ ಮುಟ್ಟಿಸುವ ಶಕ್ತಿ ಇರುವುದು ರಂಗಭೂಮಿಗೆ. ಇದು ಮನಷ್ಯನನ್ನು ತಿದ್ದುವುದಲ್ಲದೇ, ನಮ್ಮನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಹಿಂದೂ ಜನಜಾಗೃತಿ ಸಮಿತಿಯು ಹಿಂದುತ್ವದ ರಕ್ಷಣೆಗಾಗಿ ಹಾಗೂ ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಆಯೋಜಿಸುತ್ತಿರುವ ಈ ಧರ್ಮಜಾಗೃತಿ ಸಭೆಗಳು ರಾಜಕೀಯ ಉದ್ದೇಶಕ್ಕಲ್ಲ. ಈ ವರ್ಷ ಕರ್ನಾಟಕದ ದಕ್ಷಿಣ ಮತ್ತು ಉತ್ತರ ಭಾಗದಲ್ಲಿ ಒಟ್ಟು ೭೦ ಕ್ಕಿಂತಲೂ ಹೆಚ್ಚು ಸಭೆಗಳನ್ನು ಹಮ್ಮಿಕೊಳ್ಳಲಾಗಿದೆ. ಇದರ ಮೂಲಕ ಹಿಂದೂ ಧರ್ಮದ ಮೇಲಾಗುತ್ತಿರುವ ವಿವಿಧ ಆಕ್ರಮಣಗಳ ಬಗ್ಗೆ ಅರಿವನ್ನು ಮೂಡಿಸುವುದು ಮಾತ್ರವಲ್ಲದೇ ಹಿಂದೂ ಧರ್ಮೀಯರಲ್ಲಿ ಸ್ವಧರ್ಮದ ಬಗ್ಗೆ ಸ್ವಾಭಿಮಾನವನ್ನು ಜಾಗೃತಗೊಳಿಸುವುದು ಎಂದು ಹಿಂದೂ ಜನಜಾಗೃತಿ ಸಮಿತಿಯ ವಿಜಯಕುಮಾರ್ ಹೇಳಿದರು. ಬೈಂದೂರು ಶ್ರೀ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ನಡೆದ ಹಿಂದೂ ಧರ್ಮಜಾಗೃತಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ನಂತರ ರಣರಾಗಿಣಿ ಶಾಖೆ ವಕ್ತಾರೆ ರೇವತಿ ಮೊಗೇರ ಮಾತನಾಡಿ, ಇಂದು ಪ್ರತಿದಿನ ಹಿಂದೂ ಸ್ತ್ರೀಯರ ಮೇಲೆ ದೌರ್ಜನ್ಯ, ಅತ್ಯಾಚಾರ, ಅಪಹರಣಗಳಂತಹ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ, ಇದನ್ನು ತಡೆಗಟ್ಟಲು ಪ್ರತಿಯೊಬ್ಬ ಹಿಂದೂ ಮಹಿಳೆಯರು ಧರ್ಮಾಚರಣೆಯನ್ನು ಮಾಡಿ ಸ್ವಸಂರಕ್ಷಣೆಯನ್ನು ಕಲಿತು ರಣರಾಗಿಣಿಯರಾಗಬೇಕು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉತ್ತಮ ಭವಿಷ್ಯವನ್ನು ಹೊಂದಲು ವಾರ್ಷಿಕ ಪರೀಕ್ಷೆಗಳಲ್ಲಿ ಅಂಕಗಳಿಸುವುದಷ್ಟೇ ಮುಖ್ಯವಲ್ಲ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಹ ತಯಾರಾಗಬೇಕು.ಂ iiವುದೇ ಕ್ಷೇತ್ರದಲ್ಲಿ ಉತ್ತಮ ಆಡಳಿತಗಾರರಾಗಿ ರೂಪುಗೊಳ್ಳಲು ಸಕಲ ಸಿದ್ಧತೆಗಳನ್ನು ಎಳೆಯ ವಯಸ್ಸಿನಿಂದಲೇ ಮಾಡಿಕೊಳ್ಳಬೇಕು ಎಂದು ಉಡುಪಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಆರ್.ಬಿ. ನಾಯಕ್ ತಿಳಿಸಿದರು. ಕುಂದಾಪುರ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜು ಕುಂದಾಪುರದ ವಾರ್ಷಿಕೋತ್ಸವ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ನಿವೃತ್ತ ಪ್ರಾಂಶುಪಾಲೆ ಚಂದ್ರಪ್ರಭಾ ಆರ್. ಹೆಗ್ಡೆ ಮಾತನಾಡುತ್ತಾ ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಅಂಕ ಗಳಿಸಲು ಏಕಾಗ್ರತೆ ಅತೀ ಅಗತ್ಯ ಉತ್ತಮ ವಾತಾವರಣದಲ್ಲಿ ಕಲಿಯುವ ಎಲ್ಲ ವಿದ್ಯಾರ್ಥಿಗಳು ನಾಳಿನ ಸತ್ಪ್ರಜೆಗಳಾಗುತ್ತಾರೆ ಅಂತಹ ವಾತಾವರಣವನ್ನು ಕುಂದಾಪುರದ ವೆಂಕಟರಮಣ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿ ಸೃಷ್ಟಿಸಿದೆ ಇದರ ಸಂಪೂರ್ಣ ಪ್ರಯೋಜನವನ್ನು ವಿದ್ಯಾರ್ಥಿಗಳು, ಪೋಷಕರು ಪಡೆಯಬೇಕು ಎಂದು ತಿಳಿಸಿದರು. ಶ್ರೀ ವೆಂಕಟರಮಣ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ನ ಅಧ್ಯಕ್ಷ ಕೆ.ಮೋಹನ್ ಕಾಮತ್ ಅಧ್ಯಕ್ಷತೆ ವಹಿಸಿ, ಪ್ರಶಸ್ತಿಯನ್ನು ಗಳಿಸಿದ ಎಲ್ಲ ವಿದ್ಯಾರ್ಥಿಗಳನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀಮದ್ಭಗವದ್ಗೀತೆಯು ವ್ಯಕ್ತಿತ್ವ ವಿಕಸನದಲ್ಲಿ ಔಚಿತ್ಯ ಪ್ರಜ್ಞೆಯನ್ನು ಬೋಧಿಸುತ್ತಾ ಸಂತುಲಿನ ಜೀವನ ಪದ್ಧತಿಯನ್ನು ಆಪೇಕ್ಷಿಸುತ್ತದೆ. ಅತಿಯಾದಲ್ಲಿ ಎಲ್ಲವೂ ನ್ಯೂನತೆಯಾಗುವುದರಿಂದ ಸಮಚಿತ್ತ, ಶುದ್ಧಚಾರಿತ್ಯ ಪ್ರತಿ ವ್ಯಕ್ತಿಯ ಆಂತರಿಕ ಮತ್ತು ಸಾಮಾಜಿಕ ಕರ್ತವ್ಯಗಳನ್ನು ನಿರ್ವಹಿಸುವಲ್ಲಿನ ಪ್ರಾಮುಖ್ಯತೆಯನ್ನು ಸಾರುತ್ತದೆ ಎಂದು ಯಳಜಿತ್ ಶ್ರೀ ಸಿದ್ಧಿವಿನಾಯಕ ಸಾಂಸ್ಕೃತಿಕ ಕೇಂದ್ರದ ಸಂಚಾಲಕ ಸಂತ ವೈ. ಮಂಗೇಶ ಶೆಣೈ ಹೇಳಿದರು. ಬೈಂದೂರು ಶ್ರೀಮದ್ಭಗವದ್ಗೀತಾ ಜಯಂತಿ ಆಚರಣಾ ಸಮಿತಿ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ಶ್ರೀ ಸ್ವರ್ಣವಲ್ಲಿ ಮಹಾಸಂಸ್ಥಾನ ಮಹಾಸ್ವಾಮಿಗಳ ಪೀಠಾರೋಹಣ ರಜತ ವರ್ಷದ ಪ್ರಯುಕ್ತ ವಿವಿಧ ಶೃದ್ಧಾ ಕೇಂದ್ರಗಳಲ್ಲಿ ನಡೆದ ಸಪ್ತಾಹ ಗೀತಾಪಠಣ ಯಜ್ಞದ ಸಮರ್ಪಣಾ ಉತ್ಸವ ಉದ್ಘಾಟಿಸಿ ಮಾತನಾಡಿದರು. ಭಗವದ್ಗೀತೆ ನಿಜಾರ್ಥದಲ್ಲಿ ಒಂದು ಜಾತ್ಯಾತೀತ ಗ್ರಂಥವಾಗಿದ್ದು, ಅದು ಯಾವುದೇ ಒಂದು ಜನಾಂಗದ, ಜಾತಿಯ, ವರ್ಗದ, ದೇಶದ ಜನರನ್ನು ಉದ್ದೇಶಿಸಿ ಉಪದೇಶ ಮಾಡುವಂತಹದ್ದಲ್ಲ. ಎಲ್ಲಾ ಮಾನವರು ತಮ್ಮ ಉದ್ದಾರವನ್ನು ತಾವೇ ಮಾಡಿಕೊಳ್ಳಲು ಬೇಕಾದ ಜೀವನಕ್ರಮವನ್ನು ಮತ್ತು ಚಿಂತನಾ ಕ್ರಮಗಳನ್ನು ಕೊಡುತ್ತದೆ. ಗೀತೆಯ ಅಧ್ಯಯನದಿಂದ ನಮ್ಮ ಧರ್ಮ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕ್ರೀಡೆ ಪ್ರತಿಯೊಬ್ಬರ ದೈಹಿಕ ಹಾಗೂ ಮಾನಸಿಕ ಕ್ಷಮತೆಯನ್ನು ಹೆಚ್ಚಿಸುತ್ತದೆ. ಕ್ರೀಡೆಯಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಂಡಲ್ಲಿ ಆರೋಗ್ಯ ಸಮಸ್ಯೆಗಳು ದೂರವಾಗುವುದು ಎಂದು ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿ ಶ್ರೀ ಸೀತಾರಾಮ ನಕ್ಕತ್ತಾಯರವರು ಸ್ಥಳೀಯ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಗಾಂಧಿ ಮೈದಾನದಲ್ಲಿ ಉದ್ಘಾಟಿಸುತ್ತಾ ಹೇಳಿದರು. ಅತಿಥಿಯಾಗಿದ್ದ ಉಪ್ಪಂದದ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಗನ್ನಾಥರವರು ಇಂದು ಭಾರತದಲ್ಲಿ ಕ್ರೀಡೆಗೆ ಪ್ರೋತ್ಸಾಹ ಕಡಿಮೆಯಾಗುತ್ತಿರುವುದು ದುಃಖಕರವಾದ ವಿಷಯ. ವಿದ್ಯಾರ್ಥಿಗಳಾದ ನೀವು ಈ ಸಂಸ್ಥೆ ನೀಡುವ ಪ್ರೋತ್ಸಾಹ ಬಳಸಿಕೊಂಡು ಎಲ್ಲರೂ ಗುರುತಿಸುವ ಹಾಗೇ ಬೆಳೆಯಬೇಕು ಎಂದರು. ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಬಿ.ಎಂ ಸುಕುಮಾರ ಶೆಟ್ಟಿಯವರು ಅಧ್ಯಕ್ಷೀಯ ಭಾಷಣ ಮಾಡುತ್ತಾ ಇಂದು ಸರಕಾರ ಹಾಗೂ ಸರಕಾರೇತರ ಸಂಸ್ಥೆಗಳು ಕ್ರೀಡೆಗೆ ನೀಡುವ ಪ್ರೋತ್ಸಾಹ ಕಡಿಮೆ ಯಾದರು ಕೆಲವು ಕ್ರೀಡಾಳುಗಳು ಸಿಗುವ ಸೌಲಭ್ಯದಲ್ಲಿಯೇ ಮಹತ್ತರವಾದ ಸಾಧನೆ ಮಾಡುತ್ತಿರುವುದು ಗಮನಾರ್ಹವಾದ ವಿಷಯ. ಎಷ್ಟೇ ಸೌಲಭ್ಯ ಸಿಕ್ಕಿದರೂ ಪರಿಶ್ರಮ ಪಡದೇ ಇದ್ದಲ್ಲಿ ಸಾಧನೆ…

Read More