Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬಸ್ರೂರು: ಇಲ್ಲಿನ ಕಾಶೀ ಮಠದದಲ್ಲಿರುವ ಶ್ರೀಮದ್ ಭುವನೇಂದ್ರ ತೀರ್ಥ ಸ್ವಾಮೀಜಿಯವರ ವೃಂದಾವನದಲ್ಲಿ ಗುರುವರ್ಯರ ೧೩೦ನೇ ಪುಣ್ಯತಿಥಿಯ ಅಂಗವಾಗಿ ಗುರು ಆರಾಧನಾ ಮಹೋತ್ಸವವು ವಿಜೃಂಭಣೆಯಿಂದ ಜರಗಿತು. ಪೂವಾಹ್ನ ಸಾನಿದ್ಯ ಹವನ, ಶತಕಲಶಾಭಿಷೇಕ, ೧೦೮ ಎಳನೀರಿನ ಅಭಿಷೇಕ, ಪವಮಾನ ಅಭಿಷೇಕ, ಲಘು ವಿಷ್ಣು ಹವನ ಹಾಗೂ ಮಧ್ಯಾಹ್ನ ಮಹಾಪೂಜೆ, ಮಹಾ ಅನ್ನ ಸಂತರ್ಪಣೆ ಊರ ಪರವೂರ ಭಕ್ತ ಹಾಗೂ ಶಿಷ್ಯ ವೃಂದದವರ ಭಾಗವಹಿಸುವಿಕೆಯಿಂದ ನಡೆಯಿತು. ಈ ಕಾರ್ಯಕ್ರಮದಲ್ಲಿ ಚೇಂಪಿ,ಸಾಲಿಗ್ರಾಮ,ಕೋಟ ಭಜನಾ ಮಂಡಳಿಗಳಿಂದ ವಿಶೇಷ ಭಜನಾ ಕಾರ್ಯಕ್ರಮ ಜರಗಿತು. ರಾತ್ರಿ ನಗರೋತ್ಸವ, ಅಷ್ಟಾವಧಾನ ಸೇವೆ ಹಾಗೂ ಗುರು ಗುಣಗಾನ ಕಾರ್ಯಕ್ರಮ ನೇರವೇರಿತು. ಮಠದ ವ್ಯವಸ್ಥಾಪಕ ಸಮಿತಿ ಮುಖ್ಯಸ್ಥರಾದ ಶ್ರೀಧರ ಕಾಮತ್, ದಿನೇಶ ಕಾಮತ್, ದಿನಕರ ಶೆಣೈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ರಂಗನಾಥ ಪಡಿಯಾರ್, ರಾಮಚಂದ್ರ ಪಡಿಯಾರ್, ಗಣೇಶ ಕಾಮತ್ ನೇತೃತ್ವದಲ್ಲಿ ಹೂವಿನ ಹಾಗೂ ವಿದ್ಯುದೀಪಾಲಂಕಾರ ಶೃಂಗಾರಗೊಂಡು ಪಲ್ಲಕಿಯಲ್ಲಿ ಶ್ರೀ ಗುರುವರ್ಯರ ಭಾವಚಿತ್ರ ಹಾಗೂ ದೇವರ ಮೂರ್ತಿಯನ್ನು ಕೊಂಡೊಯ್ದು ನಗರೋತ್ಸವ ನೇರವೇರಿತು. ವೇ.ಮೂ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಬಾಗಲಕೋಟೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ೧೪ರ ವಯೋಮಿತಿಯ ಬಾಲಕಿಯರ ೨೦೧೬-೧೭ನೇ ಸಾಲಿನ ರಾಜ್ಯಮಟ್ಟದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಉಪ್ಪುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ೮ನೇ ತರಗತಿಯ ವಿದ್ಯಾರ್ಥಿನಿ ಅಕ್ಷತಾ, ೧.೩೬ಮೀ. ಸಾಧನೆಗೈದು ಬೆಳ್ಳಿಯ ಪದಕ ಪಡೆದು ಇದೀಗ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಈಕೆ ಖಂಬದಕೋಣೆ ಗುಡ್ಡಿಮನೆ ಶಾರದಾ ನಾಗ ಪೂಜಾರಿ ಪುತ್ರಿ.. ಈಕೆಯ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ಶಿಕ್ಷಕವರ್ಗದವರು ಹಾಗೂ ಎಸ್‌ಡಿಎಂಸಿ ಸದಸ್ಯರು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರಪಂಚದ ಇತಿಹಾಸ ಹಾಗೂ ಅಭಿವೃದ್ಧಿ ಹೊಂದುತ್ತಿರುವ ನಾಗರಿಕತೆಯಷ್ಟೇ ಕಾನೂನು ಹಳೆಯತಾಗಿದ್ದು. ನಾಗರಿಕ ಸಮಾಜದ ಪ್ರತಿ ಚಟುವಟಿಕೆಯೂ ಕಾನೂನಿನಿಂದಲೇ ನಿಯಂತ್ರಿಸಲ್ಪಡುತ್ತದೆ ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜಶೇಖರ ವಿ. ಪಾಟೀಲ್ ಹೇಳಿದರು. ಅವರು ಕುಂದಾಪುರ ಬಾರ್ ಅಸೋಸಿಯೇಶನ್ ಆಶ್ರಯದಲ್ಲಿ ನ್ಯಾಯಾಲಯದ ಆವರಣದಲ್ಲಿ ಜರುಗಿದ ವಕೀಲರ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು. ವಕೀಲರಿಗೆ ತಮ್ಮ ವೃತ್ತಿಯಲ್ಲಿ ಗೌರವ ಇರಬೇಕು. ತಾವು ಓದುವ ಕಾನೂನು ಪುಸ್ತಕಗಳಿಂದ ನ್ಯಾಯಾಲಯಕ್ಕೆ ಏನು ಹೇಳಬೇಕು ಎಂಬ ತಿಳುವಳಿಕೆ ಹಾಗೂ ತನ್ನ ಕಕ್ಷಿದಾರನನ್ನು ಹೇಗೆ ವಿಶ್ವಾಸಕ್ಕೆ ತೆಗೆದುಕೊಳ್ಳುವ ಚಾಕಚಕ್ಯತೆ ಇದ್ದರೆ ವೃತ್ತಿಯಲ್ಲಿ ಯಶಸ್ಸುನ್ನು ಕಾಣಲು ಸಾಧ್ಯವಿದೆ ಎಂದವರು ಹೇಳಿದರು. ಮಂಗಳೂರಿನ ಹಿರಿಯ ನ್ಯಾಯವಾದಿ ಎಂ.ವಿ ಶಂಕರ ಭಟ್ ಉಪನ್ಯಾಸ ನೀಡಿದರು. ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀನಿವಾಸ ಸುವರ್ಣ, ಕುಂದಾಪುರ ಸಿವಿಲ್ ನ್ಯಾಯಾಧೀಶ್ ಪ್ರೀತ್ ಜೆ, ಹೆಚ್ಚುವರಿ ನ್ಯಾಯಾಧೀಶೆ ಲಾವಣ್ಯ ಎಚ್. ಎನ್. ಉಪಸ್ಥಿತರಿದ್ದರು. ಕುಂದಾಪುರ ಬಾರ್ ಅಸೋಸಿಯೇಶನ್ ಅಧ್ಯಕ್ಷ ಬನ್ನಾಡಿ ಸೋಮನಾಥ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪಂಡರಾಪುರ ದಿಂದ ಹೊರಟ ದೇವ ಸ್ವರೂಪಿ ಎಂದೇ ಗುರುತಿಸಿಕೊಂಡ ಮೂರುಕಣ್ಣಿನ ಬಸವ ಹೆಸರು ಸೋಮನಾಥ. ೧೨ನೇ ಜೋತಿರ‍್ಲಿಂಗ ದರ್ಶನ ನಿಮಿತ್ತ ಪಂಡರಾಪುರದಿಂದ ಹೊರಟ ಬಸವ ನಾನಾಕಡೆ ಸಂಚರಿಸಿ, ಕುಂದಾಪುರಕ್ಕೆ ಆಗಮಿಸಿದೆ. ಮಿನಿ ಟೆಂಪೂದಲ್ಲಿ ಆಗಮಿಸಿದ ಬಸವನಿಗೆ ಗಗ್ಗರಗಳ ಶೃಂಗಾರವಿದ್ದು, ವಾಹನ ಹಿಂಮುಖವಾಗಿ ನಿಂತಿದ್ದಾನೆ. ನಡು ನೆತ್ತಿಮೇಲೆ ನೇರಕ್ಕೆ ಸಾಗಿದ ಒಂದು ಕೊಂಬಿದ್ದು, ಮತ್ತೆರಡು ಕೊಂಬುಗಳು ಮಾಮೂಲು ಎತ್ತಗಳಿಗೆ ಬರುವಹಾಗೆ ಇದೆ. ಎರಡು ಕಣ್ಣು ಮುಖದ ಇಕ್ಕೆಡೆಗಳಲ್ಲಿದ್ದರೆ, ಮೂರನೇ ಕಣ್ಣು ನೇರಕ್ಕೆ ಸಾಗಿದ ಕೊಂಬಿನ ಬದಿಯಲ್ಲಿದೆ. ಹದಿನಾಲ್ಕು ವರ್ಷದ ಪ್ರಾಯದ ಬಸವ ಸೌಮ್ಯ ಸ್ವರೂಪಿಯಾಗಿದ್ದು, ವಾಹನ ಸಂಚಾರದ ಸಮಯ ಅಲ್ಲಾಡದೇ ನಿಲ್ಲುತ್ತಾನೆ. ವೀಕ್ಷಕರು ಬಂದರೆ ತನ್ನ ಪಾಡಿಗೆ ತಾನಿದ್ದರೆ, ಭಕ್ತರು ಇದು ಈಶ್ವರನ ಅಪರವಾತರವಾಗಿದ್ದು, ನಂದಿ ಈಶ್ವರನ ಮೂರನೇ ಕಣ್ಣು ಹೊತ್ತು ಭೂಮಿಗೆ ಬಂದಿದ್ದಾನೆ ಎನ್ನುವ ಭಯ, ಭಕ್ತಿಯಿಂದ ನಮಿಸಿ, ಆಶೀರ್ವಾದ ಪಡೆಯುತ್ತಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮಾರುತಿ ಸುಜುಕಿ ಆಟೋಮೊಬೈಲ್ ಸಂಸ್ಥೆಯು ದೆಹಲಿಯಲ್ಲಿ ಆಯೋಜಿಸಿದ್ದ ರಾಷ್ಟ್ರ ಮಟ್ಟದ 25ನೇ ಅಖಿಲ ಭಾರತ ಕೌಶಲ್ಯ ಸ್ವರ್ಧೆಯ ಎಕ್ಸ್‌ಪ್ರೆಸ್ ಸರ್ವಿಸ್ ವಿಭಾಗದಲ್ಲಿ ಬೆಂಗಳೂರು ಬಿಮಾಲ್ ಆಟೋ ಎಜೆನ್ಸಿಯಲ್ಲಿ ಟೆಕ್ನಿಶಿಯನ್ ಆಗಿರುವ ಸಂತೋಷ್ ಆಚಾರ್ಯ ಹಾಗೂ ಬಿಚ್ಕಿ ಕುಮಾರ್ ಸಾಹೋ ಅವರು ಪ್ರಥಮ ಸ್ಥಾನಗಳಿಸಿ ಸ್ಥಾನ ಪಡೆದು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಸಂತೋಷ್ ಆಚಾರ್ಯ ಬೈಂದೂರು ತಗ್ಗರ್ಸೆಯ ಗಣಪಯ್ಯ ಆಚಾರ್ಯ ಹಾಗೂ ಜಯಲಕ್ಷ್ಮೀ ಅವರ ಪುತ್ರ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕನ್ನಡನಾಡಿನ ಪಡುಗಡಲ ತಡಿಯ ಪ್ರಕೃತಿ ಸೌಂದರ್ಯವನ್ನು ಹಾಸಿಹೊದ್ದು ಮಲಗಿದ ನಯನ ಮನೋಹರ ಭೂಪ್ರದೇಶ ಹಾಗೂ ಉಡುಪಿ ಜಿಲ್ಲೆಯ ತುತ್ತ ತುದಿಯಲ್ಲಿ ಬೆಟ್ಟದ ಕೆಳಗೆ ಹರವಿಕೊಂಡು ಅರಬೀ ಸಮುದ್ರದ ಅಲೆಗಳಿಂದ ಸದಾ ಮುತ್ತಿಕ್ಕಿಕೊಳ್ಳುವ ಬೈಂದೂರು, ಕಲಾವಿದರ, ಕಲಾಸಂಸ್ಥೆಗಳ, ಕಲಾಪೋಷಕರ ಹಾಗೂ ವಿವಿಧ ಕಲೆಗಳ ತವರೂರು ಎಂಬಲ್ಲಿ ಎರಡು ಮಾತಿಲ್ಲ. ಇಲ್ಲಿನ ಅರ್ಚಕ ರಾಜೇಶ್ ಐತಾಳ್ ಎಂಬುವವರ ಕೋರಿಕೆಯಂತೆ ಕಾರ‍್ಪೆಂಟರಿ ಹರಿದಾಸ್ ಆಚಾರ್ಯ ತನ್ನ ಸಹಪಾಠಿ ಪಂಚ ಯುವ ಆಚಾರ್ಯರಾದ ಹರೀಶ್, ರಮೇಶ್, ಅಕ್ಷತ್, ಪ್ರಮೋದ್ ಹಾಗೂ ಮಂಜುನಾಥ ಒಟ್ಟಾಗಿ ಸೇರಿ ಗ್ರಾಮದೊಡೆಯ ಮಹತೋಭಾರ ಶ್ರೀ ಸೇನೇಶ್ವರ ದೇವರಿಗೆಂದು ಸುಂದರವಾದ ಶಿಲ್ಪಕೆತ್ತನೆಗಳಿಂದ ಕೂಡಿದ ಪುಷ್ಪರಥ ನಿರ್ಮಾಣ ಮಾಡಿದ್ದಾರೆ. ಟಾಟಾ ಏಸ್ ವಾಹನದ ಚೆಸ್ಸನ್ನು ತಳಭಾಗದಲ್ಲಿ ಆಧಾರವಾಗಿಟ್ಟುಕೊಂಡು ಅದರ ಮೇಲೆ ಸಂಪೂರ್ಣ ಹೆಬ್ಬೆಲಸು ಮರದಿಂದ ರಥ ನಿರ್ಮಾಣವಾಗಿದೆ. ೧೫ ಅಡಿ ಎತ್ತರವುಳ್ಳ ಈ ರಥದ ಸುತ್ತಲೂ ಹಾಗೂ ಗೋಪುರವು ಸುಂದರ ಶಿಲ್ಷಕಲಾ ಕೆತ್ತನೆಯಿಂದ ಕೂಡಿದ್ದು, ಹಿಂದಿನಿಂದ ರಥದ ನಿಯಂತ್ರಣ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ದೀಪಾರಾಧನೆಯಿಂದ ನಮ್ಮ ಜೀವನದಲ್ಲಿನ ಅಂಧಕಾರ ಕತ್ತಲು ದೂರವಾಗುತ್ತದೆ. ಪ್ರತಿನಿತ್ಯ ದೇವತಾರಾಧನೆಯಿಂದ ಜೀವನದಲ್ಲಿ ಅಭಿವೃದ್ಧಿ ಹೊಂದಲು ಸಾಧ್ಯ. ಸತ್ಕಾರ್ಯ ಹಾಗೂ ಸತ್ಕರ್ಮಗಳಿಂದ ಜೀವನ ಪಾವನವಾಗಿ ದೇವರ ಅನುಗ್ರಹ ಸಿದ್ಧಿಸುತ್ತದೆ ಎಂದು ವಿಶ್ವ ಹಿಂದೂ ಪರಿಷತ್‌ನ ಉಪಾಧ್ಯಕ್ಷ ಪ್ರೇಮಾನಂದ ಶೆಟ್ಟಿ ಹೇಳಿದರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ ಜರಗಿದ ಗಂಗೊಳ್ಳಿಯ ಶ್ರೀ ವೀರೇಶ್ವರ ದೀಪೋತ್ಸವ ಸೇವಾ ಸಮಿತಿಯ ೯ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಧಾರ್ಮಿಕ ಪ್ರವಚನ ನೀಡಿ ಮಾತನಾಡಿದರು. ಕುಂದಾಪುರ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಿದ್ಧಾಪುರ ಕೆನರಾ ಬ್ಯಾಂಕಿನ ಸೀನಿಯರ್ ಮ್ಯಾನೇಜರ್ ರತ್ನಾಕರ ಗಾಣಿಗ ಗಂಗೊಳ್ಳಿ, ಬೈಂದೂರು ಉಪವಲಯ ಅರಣ್ಯಾಧಿಕಾರಿ ಸದಾಶಿವ ಕೆ. ನಾಯಕವಾಡಿ, ಶ್ರೀ ಶಾರದೋತ್ಸವ ಮಹಿಳಾ ಸೇವಾ ಸಮಿತಿ ಅಧ್ಯಕ್ಷೆ ಪ್ರೇಮಾ ಸಿ.ಎಸ್. ಪೂಜಾರಿ, ಶ್ರೀ ರಾಘವೇಂದ್ರ ಆರಾಧನಾ ಮಹೋತ್ಸವ ಸಮಿತಿ ಅಧ್ಯಕ್ಷ ಶ್ರೀನಿವಾಸ ಎಂ., ಕುಂದಾಪುರದ ಉದ್ಯಮಿ ಸತೀಶ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುವೆಂಪು ಶತಮಾನೋತ್ಸವ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿ ಸಿನಿಮಾ ನಟ ಮಣಿ ಶೆಟ್ಟಿ ಅವರನ್ನು ಶಾಲಾ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಮಣಿ ಶೆಟ್ಟಿ, ನಾನು ಕುವೆಂಪು ಶತಮಾನೋತ್ಸವ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿ ಎನ್ನುವುದಕ್ಕೆ ಹೆಮ್ಮೆ ಇದೆ. ಈ ಶಾಲೆ ನನಗೆ ಬದುಕು ಕಟ್ಟಿ ಕೊಟ್ಟಿದೆ. ಸಿನೇಮಾ ನಟ, ನಾಯಕನಾಗಿ ಬೆಳೆದರೂ ನಾನು ಈ ಶಾಲೆಯನ್ನು ಮರೆಯುವುದಿಲ್ಲ. ಇದು ನನ್ನ ಹೆಮ್ಮೆಯ ಶಾಲೆ. ನನಗೆ ವಿದ್ಯೆ ಕಲಿಸಿದ ಗುರುಗಳನ್ನು ಸದಾ ಸ್ಮರಿಸುತ್ತೇನೆ. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಸಂಜೀವ ದೇವಾಡಿಗ, ಕೋಟೇಶ್ವರ ವೃತ್ತ ಶಿಕ್ಷಣ ಸಂಯೋಜಕಿ ಅನಿತಾ, ಮುಖ್ಯ ಶಿಕ್ಷಕಿ ಲಲಿತ, ಪ್ರಾ.ಶಾ.ಶಿ.ಸಂಘದ ಅಧ್ಯಕ್ಷ ಮಲ್ಯಾಡಿ ಸದಾರಾಮ ಶೆಟ್ಟಿ, ನೀಲಾವರ ಸುರೇಂದ್ರ ಅಡಿಗ ಹಾಗೂ ಎಲ್ಲಾ ಅಧ್ಯಾಪಕ ವೃಂದದವರು, ಹಳೆ ವಿದ್ಯಾರ್ಥಿ ಸಂತೋಷ್ ಶೆಟ್ಟಿ ಉಪಸ್ಥಿತರಿದ್ದರು. ಶಿಕ್ಷಕ ವಕ್ವಾಡಿ ವೇಣುಗೋಪಾಲ್ ಹೆಗ್ಡೆರವರು ಸ್ವಾಗತಿಸಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ವಾರ್ಷಿಕ ದೀಪೋತ್ಸವ ಸಂಭ್ರಮ ಸಡಗರದಿಂದ ಜರುಗಿತು. ಶ್ರೀ ದೇವಳದ ಭಕ್ತರು ಕಾರ್ತಿಕ ಮಾಸದ ದೀಪೋತ್ಸವದಲ್ಲಿ ಪಾಲ್ಗೊಂಡು ವಿಶೇಷ ವಿಶೇಷ ಪೂಜೆ ಸಲ್ಲಿಸಿದರು. ದೇವಳದ ಅರ್ಚಕ ಗಣಪತಿ ಸುವರ್ಣ ಪೂಜೆ ನೆರವೇರಿಸಿದರು. ದೇವಳದ ಉತ್ಸವ ಸಮಿತಿ ಅಧ್ಯಕ್ಷ ಪ್ರಕಾಶ್ ಕೆ. ಬಿ. ಇನ್ನಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಪ್ರಯುಕ್ತ ನಡೆದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟಕ್ಕೆ ಜಿಪಂ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ಕ್ರೀಡಾಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಪ್ರಶಾಂತ್ ಬಟ್ ಧ್ವಜಾರೋಹಣಗೈದರು. ಠಾಣಾಧಿಕಾರಿ ಸಂತೋಷ್ ಆನಂದ್ ಕಾಯ್ಕಿಣಿ ಧ್ವಜವಂದನೆ ಸ್ವೀಕರಿಸಿದರು. ವಿದ್ಯಾರ್ಥಿ ನಾಯಕ ಶರತ್ ಕುಮಾರ್ ಪ್ರತಿಜ್ಞಾವಿಧಿ ಬೋಧಿಸಿದರು. ಕಾಲೇಜಿನ ಪ್ರಾಂಶುಪಾಲ ಪಾಲಾಕ್ಷ ಟಿ, ಉಪಪ್ರಾಂಶುಪಲೆ ಜ್ಯೋತಿ ಶ್ರೀನಿವಾಸ್, ಹಳೆ ವಿದ್ಯಾರ್ಥಿಗಳಾದ ಎನ್. ಆನಂದ ಶೆಟ್ಟಿ, ಬಿ. ಎಂ. ನಾಗರಾಜ ಗಾಣಿಗ, ಮಣಿಕಂಠ, ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಭಾಕರ ಎಸ್., ಪುಷ್ಪ ಶೆಟ್ಟಿ ಮೊದಲದವರು ಉಪಸ್ಥಿತರಿದ್ದರು. ಶಿಕ್ಷಕ ರವೀಂದ್ರ ಪಿ. ನಿರೂಪಿಸಿದರು.

Read More