ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ಕುಂದಾಪುರದ ಸಹನಾ ಕನ್ವೆಶ್ಯನ್ ಹಾಲ್ನಲ್ಲಿ ನಡೆದ ೬ನೇ ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ ಪಂಚ್-೨೦೧೬ರಲ್ಲಿ ಆರ್.ಎನ್.ಶೆಟ್ಟಿ ಕಾಲೇಜಿನ ವಿದ್ಯಾರ್ಥಿನಿ ಸಾಹಿತ್ಯ ಎಂ.ಡಿ. ೧೪-೧೬ರ ವಯೋಮಾನದ ಬಾಲಕಿಯರ ವಿಭಾಗದ ಕಟಾದಲ್ಲಿ ತೃತೀಯ, ಕಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾನೆ. ಈಕೆ ಕುಂದಾಪುರದ ಕ್ರೈಂ ಎಸ್ಸೈ ದೇವರಾಜ್ ಹಾಗೂ ಶಿಕ್ಷಕಿ ರತ್ನ ಇವರ ಪುತ್ರಿ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೋಟರಿ ಕ್ಲಬ್ ಕುಂದಾಪುರದ ಆಶ್ರಯದಲ್ಲಿ ರೋಟರಿ ವಲಯ೧ರ ಕ್ರೀಡಾಕೂಟ ಸ್ಪೂರ್ತಿ-೨೦೧೬ ಕುಂದಾಪುರದ ಗಾಂಧಿ ಮೈದಾನದಲ್ಲಿ ನ. ೨೭ರಂದು ಉದ್ಘಾಟನೆಗೊಂಡಿತು. ಕ್ರೀಡಾಕೂಟವನ್ನು ರೋಟರಿ ಸಹಾಯಕ ಗವರ್ನರ್ ಮಧುಕರ ಹೆಗ್ಡೆ ಉದ್ಘಾಟಿಸಿ, ಕ್ರೀಡಾಕೂಟ ಆಯೋಜನೆಯಲ್ಲಿ ಶಿಸ್ತು ಅಚ್ಚುಕಟ್ಟುತನದೊಂದಿಗೆ ಯಶಸ್ವಿಯಾಗಿ ಸಂಘಟಿಸುತ್ತಿರುವ ರೋಟರಿ ಕುಂದಾಪುರದ ಕಾರ್ಯಚಟುವಟಿಕೆ ಪ್ರಶಂಸನೀಯ. ಸ್ಪರ್ಧೆಗಿಂತ ಭಾಗವಹಿಸುವಿಕೆ ತುಂಬಾ ಮಹತ್ವದ್ದಾಗಿದ್ದು, ನಮ್ಮೆಲ್ಲರ ಭಾಂದವ್ಯ ವೃದ್ಧಿಗೆ ಸಹಕಾರಿಯಾಗಿದೆ ಎಂದು ಕ್ರೀಡಾಳುಗಳಿಗೆ ಶುಭಕೋರಿದರು. ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಅಧ್ಯಕ್ಷತೆವಹಿಸಿದ್ದರು. ಮುಖ್ಯಅತಿಥಿಗಳಾಗಿ ಜೋನಲ್ ಲೆಫ್ಟಿನೆಂಟ್ ಡಾ. ರವಿಕಿರಣ್, ರೋಟರಿ ವಲಯ ಕ್ರೀಡಾ ಸಂಯೋಜಕ ಮನೋಜ್ ನಾಯರ್, ಕ್ರೀಡಾಕೂಟ ಸಂಚಾಲಕ ರಂಜಿತ್ ಶೆಟ್ಟಿ, ರೋಟರಿ ಕುಂದಾಪುರ ಸದಸ್ಯ ರೋವನ್ ಡಿ’ಕೋಸ್ಟಾ ಉಪಸ್ಥಿತರಿದ್ದರು. ರೋಟೇರಿಯನ್ಸ್, ಆನ್ಸ್, ಅನೆಟ್ಸ್ ಮೂರು ವಿಭಾಗದಲ್ಲಿ ವಿವಿಧ ಸ್ಪರ್ಧೆಗಳು ನಡೆಯಿತು. ರೋಟರಿ ವಲಯ ೧ರ ವ್ಯಾಪ್ತಿಗೊಳಪಡುವ ರೋಟರಿ ಕ್ಲಬ್ ಸಿದ್ಧಾಪುರ ಹೊಸಂಗಡಿ, ರೋಟರಿ ಕ್ಲಬ್ ಗಂಗೊಳ್ಳಿ, ರೋಟರಿ ಕ್ಲಬ್ ಬೈಂದೂರು, ರೋಟರಿ ಕ್ಲಬ್ ಕುಂದಾಪುರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟೇಶ್ವರ: ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ಕಾಶೀಮಠದ ಶ್ರೀಮದ್ ಭುವನೇಂದ್ರ ತೀರ್ಥ ಸ್ವಾಮೀಜಿಯವರ ಪುಣ್ಯತಿಥಿ ಜರಗಿತು. ಮಧ್ಯಾಹ್ನ ವಿಶೇಷ ಪೂಜೆ, ಮಹಾಸಂತರ್ಪಣೆ ನಡೆಯಿತು. ಸಂಜೆ ಬೆಳ್ಳಿ ಪಲ್ಲಕ್ಕಿ ಉತ್ಸವ, ಅಷ್ಠಾವಧಾನ ಸೇವೆ, ವಸಂತ ಪೂಜೆ ನಡೆಯಿತು. ರಾತ್ರಿ ನಡೆದ ಗುಣಗಾನದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀಧರ ಕಾಮತ್ ಮಾತನಾಡುತ್ತಾ ಸ್ವಾಮೀಜಿಯವರು ಆಯುರ್ವೇದದಲ್ಲಿ ಆಳವಾಗಿ ಅಧ್ಯಯನ ಮಾಡಿದ್ದಾಗಿ ಮತ್ತು ಸ್ವತ: ಔಷದಿಗಳನ್ನು ತಯಾರಿಸಿ ಸಮಾಜದ ಎಲ್ಲಾ ವರ್ಗದ ಜನರ ಖಾಯಿಲೆಗಳನ್ನು ಗುಣಪಡಿಸಿದ್ದರು ಎಂದು ದೃಷ್ಟಾಂತದ ಮೂಲಕ ಹೇಳಿದರು. ಧಾರ್ಮಿಕ ವಿಧಿ ವಿಧಾನಗಳು ಶ್ರೀನಿವಾಸ್ ಭಟ್ ಇವರ ನೇತೃತ್ವದಲ್ಲಿ ನಡೆಯಿತು. ಎಲ್ಲಾ ಕಾರ್ಯಕ್ರಮಗಳಿಗೆ ಸಮಾಜ ಬಾಂಧವರು ಭಾಗವಹಿಸಿ ಶ್ರೀ ಹರಿಗುರು ಕೃಪೆಗೆ ಪಾತ್ರರಾದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಿ. ಎಸ್. ನಂಜಯ್ಯನ ಮಠ ಸಮಿತಿ ಶಿಫಾರಸ್ಸಿನಂತೆ ೪೩೯ ಗ್ರಾಮ ಪಂಚಾಯತ್ ರಚಿಸಿದ ನಂತರ ಜನಪ್ರತಿನಿಧಿಗಳ ಬೇಡಿಕೆ ಆಧರಿಸಿ ಹೊಸ ಗ್ರಾಮ ಪಂಚಾಯತ್ಗಳಿಗೆ ಮೂಲ ಸೌಕರ್ಯ ಅಭಿವೃದ್ಧಿಗೋಸ್ಕರ ೨೦ ಲಕ್ಷ ಅನುದಾನ ಬಿಡುಗಡೆ ಮಾಡಲು ಸರ್ಕಾರ ಆದೇಶ ಹೊರಡಿಸಿದರೂ, ಆದೇಶ ಭರವಸೆಯಾಗಿಯೇ ಉಳಿದಿದೆಯೇ ಹೊರತು ಯಾವ ಚಿಕ್ಕಾಸು ಗ್ರಾಮ ಪಂಚಾಯತ್ಗಳಿಗೆ ಬಿಡುಗಡೆಯಾಗದಿರಲು ಕಾರಣವೇನು ಎಂದು ಕೋಟಾ ಶ್ರೀನಿವಾಸ ಪೂಜಾರಿ ವಿಧಾನ ಪರಿಷತ್ನಲ್ಲಿ ಪ್ರಶ್ನಿಸಿದರು. ಇನ್ನೂ ೩೯೨ ಗ್ರಾಮ ಪಂಚಾಯತ್ಗಳಿಗೆ ಸ್ವಂತ ಕಟ್ಟಡವಿಲ್ಲ, ಸರ್ಕಾರಿ ನಿವೇಶನವು ಮಂಜೂರಾಗದೇ ಶಾಲೆಯ ಕೊಠಡಿಗಳಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ, ಗ್ರಾಮ ಪಂಚಾಯತ್ಗಳ ದೈನಂದಿನ ಕೆಲಸ ಕಾರ್ಯ ನಡೆಯುತ್ತಿದ್ದು ಇದರಿಂದ ಶಾಲಾ ಮಕ್ಕಳಿಗೂ ಮತ್ತು ಶಿಕ್ಷಕರಿಗೂ ತೊಂದರೆಯಾಗುತ್ತಿರುವ ಬಗ್ಗೆ ಅವರು ಉಲ್ಲೇಖಿಸಿದರು. ಗ್ರಾಮ ಪಂಚಾಯತ್ಗಳ ಕಾರ್ಯ ನಿರ್ವಹಣೆಗೆ ಪಿ.ಡಿ.ಓ, ಕಾರ್ಯದರ್ಶಿ, ಲೆಕ್ಕ ಸಹಾಯಕರು ಸೇರಿದಂತೆ ಗ್ರಾಮ ಪಂಚಾಯತ್ಗಳಿಗೆ ಬೇಕಾದ ಸಿಬ್ಬಂದಿಗಳ ವ್ಯವಸ್ಥೆ ಸಹ ಸರಿಯಾಗಿ ಮಾಡಿಲ್ಲ. ೪೬೦ ಗ್ರಾಮ ಪಂಚಾಯತ್ಗಳಿಗೆ ಹೊಸ ಕಟ್ಟಡ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಗಾಂಧಿ ಮೈದಾನದ ಎದುರು ನೂತನವಾಗಿ ನಿರ್ಮಾಣಗೊಂಡ ಅತ್ಯಾಧುನಿಕ ವಾಣಿಜ್ಯ ಮಳಿಗೆ ‘ಶ್ರೀ ಮೂಕಾಂಬಿಕಾ ಕಾಂಪ್ಲೆಕ್ಸ್’ ಲೋಕಾರ್ಪಣೆಗೊಂಡಿತು. ಬೈಂದೂರು ಶ್ರೀ ಸೇನೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಚೆನ್ನಕೇಶವ ಉಪಾಧ್ಯಾಯ ಉದ್ಘಾಟಿಸಿ ಮಾತನಾಡಿ ಜೀವನದಲ್ಲಿ ನಿರಂತರ ಉತ್ಸಾಹ, ಧನತ್ಮಕವಾದ ಚಿಂತನೆಗಳಿದ್ದರೆ. ಅಂತಹವರಿಗೆ ದೇವರ ಸಹಾಯವಿರುತ್ತದೆ. ಆ ದಿಸೆಯಲ್ಲಿ ಇಂದಿನ ಯುವಜನತೆ ಸಮಾಜದ ಹಾಗೂ ಊರಿನ ಅಭಿವೃದ್ಧಿಯ ಪರ ದಿಕ್ಕು ಬದಲಾಯಿಸುವ ಉದ್ದೇಶದಿಂದ ಯಾವುದೇ ಉದ್ಯಮ, ವ್ಯವಹಾರ ಮಾಡುವಂತಾಗಲು ಧೈರ್ಯದಿಂದ ಮುಂದುವರಿದಾಗ ಮಾತ್ರ ಖಂಡಿತವಾಗಿಯೂ ಯಶಸ್ಸು ದೊರಕುವುದು ಎಂದರು. ಪ್ರತಿಯೊಬ್ಬ ವ್ಯಕ್ತಿಗೂ ಹುಟ್ಟೂರಿನ ಋಣ ದೊಡ್ಡದೆನಿಸಿಕೊಳ್ಳುತ್ತದೆ. ಬದುಕು, ಉದ್ಯೋಗಕ್ಕಾಗಿ ಎಲ್ಲಿಗೇ ತೆರಳಿದರೂ ತನ್ನೂರಿನ ಮಣ್ಣಿನ ಋಣ ತೀರಿಸುವ ಗುಣ ಬೆಳೆಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಹಲವಾರು ವರ್ಷಗಳಿಂದ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ದುಡಿಮೆಯ ಒಂದು ಭಾಗವನ್ನು ತನ್ನೂರಿನ ಅಭಿವೃದ್ಧಿಗಾಗಿ ತೊಡಗಿಸಿಕೊಂಡ ಮಂಜುನಾಥ ಎಸ್. ಪಡುವರಿಯವರ ಕಾರ್ಯ ಅನುಕರಣೀಯ ಎಂದರು. ಉದ್ಯಮಿಗಳಾದ ಬಿ. ಜಗನ್ನಾಥ ಶೆಟ್ಟಿ, ಪಿ. ಸೂಲಿಯಣ್ಣ ಶೆಟ್ಟಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೂರು ಮುತ್ತು ಖ್ಯಾತಿಯ ಕುಂದಾಪುರದ ರೂಪಕಲಾ ಸಂಸ್ಥೆಯ ನಿರ್ದೇಶಕ, ಪ್ರಸಿದ್ಧ ಕಲಾವಿದ ಸತೀಶ ಪೈ ಅವರನ್ನು ಬೆಂಗಳೂರಿನ ಗೋಕುಲ್ ಮಿತ್ರ ಬಳಗ ಇದರ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಜರಗಿದ ಸಮಾರಂಭದಲ್ಲಿ ಅತಿಥಿಗಳಾದ ಹೊಟೇಲ್ ಉದ್ಯಮಿ ಎಂ.ಪಿ.ಪ್ರಭು, ಪಿ.ಸುರೇಶ, ಪಿ.ಸತ್ಯ, ಎಸ್.ಎಂ.ರಘು, ಬೆಂಗಳೂರು ಯಕ್ಷ ಪ್ರತಿಷ್ಠಾನದ ಅಧ್ಯಕ್ಷ ಮಣೂರು ವಾಸುದೇವ ಮಯ್ಯ ಮೊದಲಾದವರು ಕಲಾವಿದ ಕೆ.ಸತೀಶ ಪೈ ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಿ ಅಭಿನಂದಿಸಿದರು. ಬೆಂಗಳೂರಿನ ಗೋಕುಲ್ ಮಿತ್ರ ಬಳಗದ ಜಯಂತ ಪೂಜಾರಿ ಹಟ್ಟಿಯಂಗಡಿ, ರಮೇಶ ಕುಮಾರ್ ಚೋರಾಡಿ, ಕಲಾವಿದರಾದ ಅಶೋಕ ಶ್ಯಾನುಭಾಗ್ ಕುಂದಾಪುರ, ಕೆ.ಸಂತೋಷ ಪೈ ಕುಂದಾಪುರ, ನಾಗೇಶ ಕಾಮತ್, ನವೀನ ಭಟ್ ಹಟ್ಟಿಯಂಗಡಿ, ಬಿ.ಗಣೇಶ ಶೆಣೈ ಗಂಗೊಳ್ಳಿ, ಮಣಿಕಂಠ, ನಾಗೇಶ ಹಾಲಾಡಿ, ಶ್ವೇತಾ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಳೆಯ 500, 1000 ನೋಟುಗಳ ರದ್ಧತಿಯ ಬಳಿಕ ಹೊಸ ನೋಟುಗಳು ಸಮರ್ಪಕವಾಗಿ ಜನರ ಕೈಸೇರುವಲ್ಲಿ ವಿಳಂಬವಾಗುತ್ತಿರುವುದಿಂದ ಗ್ರಾಮೀಣ ಭಾಗದ ಜನಸಾಮಾನ್ಯರು ತೀರಾ ತೊಂದರೆ ಅನುಭವಿಸುವಂತಾಗಿದೆ. ರೈತರು, ಮೀನುಗಾರರು, ಕೂಲಿ ಕಾರ್ಮಿಕರು, ಚಿಲ್ಲರೆ ವ್ಯಾಪಾರಿಗಳು ಹಾಗೂ ಮಹಿಳೆಯರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು ಕೈಯಲ್ಲಿ ಹಣವಿಲ್ಲದೇ, ವ್ಯವಹಾರ ವಹಿವಾಟು ನಡೆಸದ ಪರಿಸ್ಥಿತಿ ಬಂದೊದಗಿದೆ. ಹಳೆಯ ನೋಟು ನಿಷೇಧಿಸಿ 22 ದಿನಗಳೇ ಕಳೆದರೂ ಹೊಸ ನೋಟುಗಳು ಗ್ರಾಮೀಣ ಭಾಗವನ್ನು ತಲುಪುತ್ತಿಲ್ಲ. ಎರಡು ಸಾವಿರದ ನೋಟುಗಳಗೆ ಚಿಲ್ಲರೆ ದೊರೆಯದ ಸ್ಥಿತಿ ನಿರ್ಮಾಣವಾಗಿದೆ ಎಂದು ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ವಿಷಾದ ವ್ಯಕ್ತಪಡಿಸಿದ್ದಾರೆ. ಗ್ರಾಮೀಣ ಭಾಗದ ಜನರ ಬಹುಪಾಲು ವ್ಯವಹಾರ ನಡೆಯುವುದೇ ಸಹಕಾರಿ ಸಂಘಗಳು ಹಾಗೂ ಸಹಕಾರಿ ಬ್ಯಾಂಕುಗಳ ಮುಖಾಂತರ. ಲಕ್ಷಾಂತರ ರೈತರು, ಕೂಲಿ ಕಾರ್ಮಿಕರ ಉಳಿತಾಯ ಖಾತೆಗಳ ಸಹಕಾರಿ ಸಂಘಗಳಲ್ಲಿವೆ. ಬ್ಯಾಂಕುಗಳಲ್ಲಿ ನೋಟು ವಿನಮಯ, ಠೇವಣಿಗೆ ಅವಕಾಶ ಮಾಡಿಕೊಟ್ಟು ಸಹಕಾರಿ ಸಂಘಗಳಲ್ಲಿ ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಕಿರಣ್ಸ್ ಡ್ರ್ಯಾಗನ್ ಫಿಸ್ಟ್ ಮಾರ್ಷಲ್ ಆರ್ಟ್ ಆಫ್ ಇಂಡಿಯಾ ಆಯೋಜಿಸಿದ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆ ಸಹನಾ ಕನ್ವೆನ್ಶನ್ ಸೆಂಟರ್ ಕೋಟೇಶ್ವರದಲ್ಲಿ ನಡೆಯಿತು. ಮೂರು ದಿನ ನಡೆದ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆ ಕರಾಟೆ ಅಸೋಸಿಯೇಶನ್ ಆಫ್ ಇಂಡಿಯಾ ಜನರಲ್ ಸೆಕ್ರೆಟರಿ ಶಿಹಾನ್ ಭರತ್ ಶರ್ಮಾ ಡೆಲ್ಲಿ ಉದ್ಘಾಟಿಸಿದರು. ಸಹನಾ ಗ್ರೂಪ್ ಮಾಲೀಕ ಸುರೇಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಗಣೇಶ್ ಶೆಟ್ಟಿ ಮೊಳಹಳ್ಳಿ, ಯಕ್ಷಗಾನ ಕಲಾರಂಗ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ಯೋಗಿಂದರ್ ಚಾಹಾಣ್ ಡೆಲ್ಲಿ, ಲಕ್ಷ್ಮೀಕಾಂತ ಪಿ. ಸಾರಂಗ್ ಮುಂಬಯಿ, ತಾಲೂಕ್ ಬಿಲ್ಲವ ಸಂಘ ಪ್ರಧಾನ ಕಾರ್ಯದರ್ಶಿ ರಾಜೀವ ಕೋಟಿಯಾನ್, ಕೋಟೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಾನಕಿ ಬಿಲ್ಲವ ಉಪಸ್ಥಿತರಿದ್ದರು. ಗ್ರ್ಯಾಂಡ್ ಚಾಂಪಿಯನ್ ಫೈಟಿಂಗ್ನಲ್ಲಿ ಬೆಂಗಳೂರು ಶರತ್ ಕಟಾದಲ್ಲಿ ಎಂ.ಪಿ. ಜಾಗ್ರತ್ ಬೆಂಗಳೂರು ಚಾಂಪಿಯನ್ ಆದರೆ ಹುಡುಗಿಯರ ವಿಭಾಗದಲ್ಲಿ ಕಟಾದಲ್ಲಿ ಮೇಘಾ ಉಡುಪಿ, ಫೈಟಿಂಗ್ನಲ್ಲಿ ಸನ ಉಡುಪಿ ಗ್ರ್ಯಾಂಡ್ ಚಾಂಪಿಯನ್…
ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ. ಅದು ಅಕ್ಷರಶಃ ಹಬ್ಬದ ಸಡಗರ. ಪೇಪರ್, ಕಂಪ್ಯೂಟರ್ ಸ್ಕ್ರೀನ್ ಮೇಲೆ ಗೆರೆಗಳನ್ನು ಮೂಡಿಸಿ ನೋಡುಗರ ಮುಖ ಅರಳಿಸುವ ಮಂದಿಯೆಲ್ಲಾ ಜೊತೆಯಾದ ಸಂಭ್ರಮ. ವಿಚಾರ, ವಿನೋದ, ವಿಡಂಬನೆ, ವಿಮರ್ಷೆ, ಹರಟೆ. ಮೆದುಳಿಗೆ ಕೆಲಸ, ಮನಸ್ಸಿಗೆ ಮುದ, ಹೊರ ನಡೆಯುವಾಗ ಒಂದೊಳ್ಳೆ ಚಿಂತನೆ, ಗೆರೆ ಎಳೆಯಲೊಂದಿಷ್ಟು ಪ್ರೇರಣೆ. ಇದು ಕಾರ್ಟೂನು ಹಬ್ಬ. ಕುಂದಾಪುರದ ಕಲಾಮಂದಿರದಲ್ಲಿ ನಾಲ್ಕು ದಿನಗಳ ಕಾಲ ಕಾರ್ಟೂನು ಕುಂದಾಪುರ ಬಳಗದ ಆಶ್ರಯದಲ್ಲಿ ಜರುಗಿದ ಕಾರ್ಟೂನು ಹಬ್ಬ ಕಾರ್ಟೂನು ಪ್ರಿಯರಿಗಷ್ಟೇ ಅಲ್ಲದೇ ಕುಂದಾಪುರದ ನಾಗರೀಕರಿರಲ್ಲೂ ಒಂದು ಬಗೆಯ ಕಾರ್ಟೂನು ಕ್ರೇಜ್ ಹುಟ್ಟಿಸಿದೆ. ಸತತ ಮೂರನೇ ವರ್ಷ ಕುಂದೇಶ್ವರ ದೀಪೋತ್ಸವದ ಸಮಯದಲ್ಲಿ ಆಯೋಜನೆಗೊಳ್ಳುತ್ತಿರುವ ಕಾರ್ಟೂನು ಹಬ್ಬದಲ್ಲಿ ಭಾವಹಿಸಿದವರೆಲ್ಲ ಕುಂದೇಶ್ವರ ಹಬ್ಬದಂತೆ ಅವರಿಗೆ ಬೇಕಾದ ವಿಚಾರನ್ನು ಕೊಂಡು ಹೋಗಿದ್ದಾರೆ. [quote font_size=”15″ bgcolor=”#ffffff” bcolor=”#dd3333″ arrow=”yes” align=”right”]ಕಾರಿಕೇಚರ್ ಮೂಲಕ ಶಾಲೆಗೆ ದೇಣಿಗೆ: ಕಾರ್ಟೂನು ಹಬ್ಬದಲ್ಲಿ ಕಾರ್ಟೂನುಗಳಿಗಷ್ಟೇ ಸೀಮಿತವಾಗಿಲ್ಲ. ಕ್ಯಾರಿಕೇಚರ್ ಬಿಡಿಸಿ ಅದರಿಂದ ಬಂದ ಹಣವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಹಕಾರಿ ಸಂಘಗಳ ಏಳಿಗೆಯಲ್ಲಿ ಗ್ರಾಮೀಣ ಭಾಗದ ಜನರು, ಕೃಷಿಕರು ಹಾಗೂ ಉದ್ದಿಮೆದಾರರ ಪಾಲು ದೊಡ್ಡದಿದ್ದು ಸಂಘದೊಂದಿಗಿನ ನಿರಂತರ ವ್ಯವಹಾರದಿಂದ ಯಶಸ್ವಿಯಾಗಿ ಮುನ್ನಡೆಯಲು ಸಾಧ್ಯವಾಗುತ್ತಿದೆ ಎಂದು ಶ್ರೀ ರಾಮ ಸೌಹಾರ್ದ ಕ್ರೇಡಿಟ್ ಕೋ-ಆಪರೇಟಿವ್ ಅಧ್ಯಕ್ಷ ಎಸ್. ರಾಜು ಪೂಜಾರಿ ಹೇಳಿದರು. ಅವರು ಶ್ರೀ ರಾಮ ಸೌಹಾರ್ದ ಕ್ರೇಡಿಟ್ ಕೋ-ಆಪರೇಟಿವ್ ನಾಗೂರು ಶಾಖೆಗೆ ಒಂದು ವರ್ಷ ಪೂರ್ಣಗೊಂಡ ಪ್ರಯುಕ್ತ ಆಯೋಜಿಸಲಾಗಿದ್ದ ಗ್ರಾಹಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಹಕರಿಗೆ ಸಕಾಲದ ಸ್ಪಂದನೆ, ಠೇವಣಿಗಳಿಗೆ ಉತ್ತಮ ಬಡ್ಡಿದರ ಹಾಗೂ ಸಕಾಲದಲ್ಲಿ ಆರ್ಥಿಕ ಅಗತ್ಯತೆಯನ್ನು ಪೂರೈಸುತ್ತಿರುವ ಸಂಘಕ್ಕೆ ಪ್ರತಿಯಾಗಿ ದೊರೆಯುತ್ತಿರುವ ಗ್ರಾಹಕರ ನೆರವು ಸಂಘದ ಯಶಸ್ಸಿಗೆ ಕಾರಣವಾಗಿದ್ದು ಪ್ರತಿಯೋರ್ವರಿಗೂ ಧನ್ಯವಾದ ಸಮರ್ಪಿಸುವುದಾಗಿ ಅವರು ಹೇಳಿದರು. ಶ್ರೀ ರಾಮ ಸೌಹಾರ್ದ ಕ್ರೇಡಿಟ್ ಕೋ-ಆಪರೇಟಿವ್ ಉಪಾಧ್ಯಕ್ಷ ವಿನಾಯಕ ರಾವ್, ಕಾರ್ಯನಿರ್ವಹಣಾಧಿಕಾರಿ ನಾಗರಾಜ್ ಪಿ. ಯಡ್ತರೆ, ಬೈಂದೂರು ವಲಯ ನವೋದಯ ಸಂಘದ ಮೇಲ್ವಿಚಾರಕ ಶಿವರಾಮ ಪೂಜಾರಿ ಯಡ್ತರೆ, ಶಾಖಾ ವ್ಯವಸ್ಥಾಪಕ ರಾಜೇಂದ್ರ ದೇವಾಡಿಗ ಉಪಸ್ಥಿತರಿದ್ದರು.…
