ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೋಟರಿ ಸದಸ್ಯನಾದ ಮೇಲೆ ಸಮಾಜ ಮುಖಿ ಸೇವೆ ಮಾಡುವಲ್ಲಿ ಯಾವುದೇ ಹಿಂಜರಿಕೆ ಬೇಡ, ರೋಟರಿಯಲ್ಲಿ ತನ್ನ ಬದ್ದತೆಯನ್ನು ತೋರ್ಪಡಿಸುವಲ್ಲಿ ಸಮಾಜ ಮುಖಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕಾದ್ದು ಅಗತ್ಯ ಮತ್ತು ಅನಿವಾರ್ಯ. ಈ ನಿಟ್ಟಿನಲ್ಲಿ ಮಾಡುವ ಸೇವೆಯಲ್ಲಿ ಆರ್ಥಿಕ ಮಟ್ಟದ ಬೇಧ ನೋಡದೆ, ದುಬಾರಿ ಸೇವೆಯೊಂದಿಗೆ ಮಿತ ಖರ್ಚಿನ ಸೇವೆ ಮಾಡಲು ಯಾವುದೇ ಹಿಂಜರಿಕೆ ಬೇಡ ಎಂದು ರೋಟರಿ ಸದಸ್ಯರಿಗೆ ಕರೆ ನೀಡಿದರು. ಅವರು ಇತ್ತೀಚೆಗೆ ನಡೆದ ರೋಟರಿ ಕ್ಲಬ್ ಕುಂದಾಪುರ ಸನ್ರೈಸ್ನ ಕುಟುಂಬ ಸಮ್ಮಿಲನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ರೋಟರಿ ಸನ್ರೈಸ್ ಅಧ್ಯಕ್ಷರಾದ ಕೆ. ನರಸಿಂಹ ಹೊಳ್ಳರು ಈ ರೋಟರಿ ವರ್ಷದಲ್ಲಿ ಸಾಂಸ್ಕೃತಿಕ ಸ್ಪರ್ಧೆಯ ವಲಯ ಚಾಂಪಿಯನ್ಶಿಪ್ ಪಡೆದ ಮತ್ತು ವಲಯ ಕ್ರೀಡಾಕೂಟದಲ್ಲಿ ೧೭ಕ್ಕೂ ಮಿಕ್ಕಿ ಬಹುಮಾನ ಗಳಿಸಿದ ಕ್ಲಬ್ನ ಸದಸ್ಯರನ್ನು, ಅವರ ಕುಟುಂಬಿಕರಿಗೂ ಗೌರವ ಪೂರ್ವಕ ಕೃತಜ್ಞತೆ ಸಲ್ಲಿಸಿದರು. ಆನ್ಸ್ ಕ್ಲಬ್ ಅಧ್ಯಕ್ಷರಾದ ಶೀಲಾ ಚಂದ್ರಶೇಖರ್, ಆನ್ಸ್ ಕ್ಲಬ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಸಂಸ್ಕೃತ ಭಾಷೆಯು ಜಗತ್ತಿನ ಅತ್ಯಂತ ಪುರಾತನವಾದ ಭಾಷೆಗಳಲ್ಲಿ ಒಂದಾಗಿದೆ. ಸಂಸ್ಕೃತ ಭಾಷೆಯು ಹಲವು ಭಾಷೆಗಳಿಂದ ಕಟ್ಟಲ್ಪಟ್ಟಿದ್ದು, ಈ ಭಾಷೆಯಲ್ಲಿರುವ ಜ್ಞಾನ ಜಗತ್ತಿನ ಯಾವ ವಿಜ್ಞಾನಿಗಳ ತಲೆಯಲ್ಲಿಯೂ ಇಲ್ಲ. ಯಾವುದೇ ಭಾಷೆ ವ್ಯವಹಾರದಲ್ಲಿ ಇಲ್ಲದಿರುವಾಗ ಆ ಭಾಷೆ ಜನರಿಂದ ದೂರ ಸರಿಯುತ್ತದೆ. ಪ್ರಸ್ತುತ ಸಂಸ್ಕೃತ ಭಾಷೆ ಹೆಚ್ಚು ಪ್ರಚಲಿತದಲ್ಲಿರದಿರುವುದು ಈ ಭಾಷೆಯ ಬೆಳವಣಿಗೆಗೆ ಹಿನ್ನಡೆಯಾಗಿದೆ ಎಂದು ನಿವೃತ್ತ ಉಪನ್ಯಾಸಕ ಕೋ.ಶಿವಾನಂದ ಕಾರಂತ ಹೇಳಿದರು. ಅವರು ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ಆಶ್ರಯದಲ್ಲಿ ಶಿಶು ಮಂದಿರದ ನಗರ ಜಯವಂತ ನಾಯಕ್ ಸಭಾಭವನದಲ್ಲಿ ಆಯೋಜಿಸಲಾಗಿರುವ ೧೦ ದಿನಗಳ ಸಂಸ್ಕೃತ ಸಂಭಾಷಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ದಿಪುಲ್ ರಾಯ್ ಮಾತನಾಡಿ, ಸಂಸ್ಕೃತ ಭಾರತಿಯು ದೇಶಾದ್ಯಂತ ಸಂಸ್ಕೃತ ಭಾಷೆಯನ್ನು ಪಸರಿಸುವ ಕೆಲಸ ಮಾಡುತ್ತಿದೆ. ಸಂಸ್ಕೃತ ಭಾಷೆಯನ್ನು ಅಧ್ಯಯನ ಮಾಡಿ, ಈ ಭಾಷೆಯನ್ನು ವ್ಯವಹಾರದಲ್ಲಿ ಬಳಕೆಯಾಗುವಂತೆ ಮಾಡಬೇಕಾಗಿದೆ. ಹೀಗಾಗಿ ಉಡುಪಿ ಜಿಲ್ಲೆಯಲ್ಲಿ ವಿವಿಧೆಡೆ ಸಂಸ್ಕೃತ ಸಂಭಾಷಣಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು ಪಕ್ಷ ಸಂಘಟನೆಯಲ್ಲಿ ಬಿಜೆಪಿ ಯುವಮೊರ್ಚಾದ ಪ್ರತಿ ಸದಸ್ಯನೂ ಸಕ್ರೀಯವಾಗಿ ತೊಡಗಿಸಿಕೊಳ್ಳುವಂತೆ ಮಾಡಬೇಕಿದೆ. ಯುವಶಕ್ತಿಯ ಬೆಂಬಲದಿಂದ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರಕಾರ ಅಧಿಕಾರಲ್ಲಿ ಬರಲು ಪ್ರತಿಯೊಬ್ಬರೂ ಈಗಿನಿಂದಲೇ ಕಾರ್ಯೊನ್ಮಖರಾಗಬೇಕಿದೆ ಎಂದು ಬೈಂದೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು ಹೇಳಿದರು. ಅವರು ಶನಿವಾರ ಹೆಮ್ಮಾಡಿಯ ಜಯಶ್ರಿ ಸಭಾಂಗಣದಲ್ಲಿ ಜರುಗಿದ ಬೈಂದೂರು ಬಿಜೆಪಿ ಯುವಮೊರ್ಚಾದ ಪ್ರಥಮ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದರು. ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಬಿ.ಎಂ. ಸುಕುಮಾರ ಶೆಟ್ಟಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಯಶಸ್ಸನ್ನು ಕೋರಿ ಜನವರಿ 1ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ಸನ್ನಿಧಿಯಲ್ಲಿ ನವ ಚಂಡಿಯಾಗ ನಡೆಯಲಿದ್ದು, ಜಡ್ಕಲ್ ವೃತ್ತಿಂದ ಕೊಲ್ಲೂರಿನ ತನಕ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಿದರು. ಕುಂದಾಪ್ರ ಡಾಟ್ ಕಾಂ ಸುದ್ದಿ. ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶರತ್ ಶೆಟ್ಟಿ ಉಪ್ಪುಂದ ಅಧ್ಯಕ್ಷತೆ ವಹಿಸಿದ್ದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಖಂಬದಕೋಣೆ ರೈತರ ಸೇವಾ ಸಂಘ, ಸಂಘವು ಪ್ರಾಯೋಜಿಸಿರುವ ರೈತ ಶಕ್ತಿ ಹಾಗೂ ರೈತ ಸೇವಾ ಕೂಟ ಉಪ್ಪುಂದ ಇವರ ಜಂಟಿ ಆಶ್ರಯದಲ್ಲಿ ಇಲ್ಲಿನ ಶಂಕರ ಕಲಾ ಮಂದಿರ ಸಮೃದ್ಧ್ ಸಭಾಭವನದಲ್ಲಿ ರೈತ ದಿನಾಚರಣೆ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮರವಂತೆಯ ಹಿರಿಯ ಕೃಷಿಕ ಹಾಗೂ ನಿವೃತ್ತ ಪ್ರಾಧ್ಯಾಪಕ ಎ. ರಿಚರ್ಡ್ ರೆಬೆಲ್ಲೊ ಮಾತನಾಡಿ, ರೈತರದ್ದು ಸ್ವಾಭಿಮಾನದ ಬದುಕಾಗಿದ್ದು, ಸಮಸ್ಯೆಗಳಿಗೆ ಧೃತಿಗೆಡದೆ ಜೀವನ ಸಾಗಿಸುವ ರೈತರ ಜೀವನ ಇತರರಿಗೆ ಮಾದರಿಯಾಗಿದೆ. ಇಂದು ರೈತರ ಹೆಸರು ಬಳಸಿಕೊಂಡು ವೈಭವಿಕರಣದ ವ್ಯಾಪಾರೀಕರಣ ನಡೆಯುತ್ತಿದೆ. ಆದರೆ ನಿಜವಾದ ರೈತರ ಸ್ಥಿತಿ ಚಿಂತಜನಕವಾಗಿದೆ ಎಂದರು. ಬೆವರು ಹರಿಸಿ ದುಡಿಯುವ ರೈತರು ತಮ್ಮ ಬೆಳೆಗೆ ಮಾರುಕಟ್ಟೆಯಲ್ಲಿ ಸರಿಯಾದ ಬೆಲೆಯಿಲ್ಲದೇ ನಲುಗಿ ಹೋಗಿದ್ದಾರೆ. ಬಡತನದ ಬೇಗುದಿ, ಸಾಲದ ಬಾಧೆಯಿಂದ ನೂರಾರು ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇವರ ಬೆಂಬಲಕ್ಕೆ ಸರಕಾರಗಳು ನಿಲ್ಲಬೇಕು. ಇವರ ಬೆಳೆಗೆ ದರನಿಗದಿ ಮಾಡುವ ಮದ್ಯವರ್ತಿಗಳ ಹಾವಳಿಯಿಂದ ತಪ್ಪಿಸಿ ಮಾರುಕಟ್ಟೆಯಲ್ಲಿ ಇವರಿಗೆ ನೇರವಾಗಿ ಸೂಕ್ತಬೆಲೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪಡುವರಿ ಗ್ರಾಮ ಪಂಚಾಯತ್ ಆಯೋಜಿಸಿದ್ದ ಮಕ್ಕಳ ಮತ್ತು ಮಹಿಳೆಯರ ವಿಶೇಷ ಗ್ರಾಮಸಭೆ ವಿಭಿನ್ನ ಮತ್ತು ವಿಶಿಷ್ಟವಾಗಿ ಮೂಡಿಬಂದಿತು. ಮಹಿಳೆಯರು ಗರಿಷ್ಠ ಸಂಖ್ಯೆಯಲ್ಲಿ ಸೇರಿದ್ದರೆ, ಊರಿನ ಐದುಶಾಲೆಗಳ ಮಕ್ಕಳ ಭಾಗವಹಿಸಿದ್ದರು. ಉಭಯರೂ ಊರಿನ ಸಮಸ್ಯೆಗಳನ್ನು ಮಂಡಿಸಿ, ಗ್ರಾಮ ಪಂಚಾಯತ್ನಿಂದ ಪರಿಹಾರ ಬಯಸಿದರು. ಮಹತ್ವದ ವಿಷಯಗಳ ಕುರಿತು ಪರಿಣತರು ಮಾಹಿತಿ ನೀಡಿದರು. ಮಕ್ಕಳಿಗೆ ಸ್ಪರ್ಧೆ ನಡೆಸಿ, ವಿಜೇತರಿಗೆ ಬಹುಮಾನ ವಿತರಣೆಯಾಯಿತು. ಆಸಕ್ತರಿಗೆ ಛಾಯಾಗ್ರಹಣ ಮತ್ತು ವರದಿಗಾರಿಕೆ ತರಬೇತಿ ನೀಡಲಾಯಿತು. ವಿದ್ಯಾರ್ಥಿನಿ ಪ್ರಿಯಾಂಕಾ ಸ್ವಾಗತಿಸಿದ ಬಳಿಕ ವೇದಿಕೆಯಲ್ಲಿ ಇರಿಸಿದ್ದ ಕಂಬಕ್ಕೆ ಮಕ್ಕಳ ಸಂಘದ ಪ್ರತಿನಿಧಿಗಳು ತಾವು ಗುರುತಿಸಿರುವ ಸಮಸ್ಯೆಗಳನ್ನು ಸಂಕೇತಿಸುವ ಕೆಂಪುಪಟ್ಟಿಗಳನ್ನು ಮತ್ತು ಗ್ರಾಮ ಪಂಚಾಯತ್ ಅಧ್ಯಕ್ಷೆ ದೀಪಾ ಶೆಟ್ಟಿ ಮತ್ತು ಸದಸ್ಯರು ತಾವು ಪರಿಹರಿಸಿದ ಸಮಸ್ಯೆಗಳನ್ನು ಸಂಕೇತಿಸುವ ಬಿಳಿಪಟ್ಟಿ ಕಟ್ಟುವ ಮೂಲಕ ಗ್ರಾಮಸಭೆಯನ್ನು ವಿಶಿಷ್ಟವಾಗಿ ಉದ್ಘಾಟಿಸಿದರು. ಉಪಾಧ್ಯಕ್ಷ ಸದಾಶಿವ ಡಿ. ಪಡುವರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗ್ರಾಮ ಪಂಚಾಯಿತಿ ಲೆಕ್ಕ ಸಹಾಯಕಿ ಜಯಲಕ್ಮೀ ಹಿಂದಿನ ಗ್ರಾಮಸಭೆಯ ಅನುಪಾಲನಾ ವರದಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಪೊಲೀಸ್ ಇಲಾಖೆಯಿಂದ ಕಾನೂನು ಮಾಹಿತಿ ಬೈಂದೂರು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ ಬೈಂದೂರು ರೋಟರಿ ಸಮುದಾಯ ಭವನದಲ್ಲಿ ಜರುಗಿತು. ವೃತ್ತನಿರೀಕ್ಷಕ ರಾಘವ ಪಡೀಲ್ ಮಾತನಾಡಿ ಕಾನೂನುಬಾಹಿರ ಚಟುವಟಿಕೆಗಳಿಂದ ಸಮಾಜದ ಮೇಲಾಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ಯವಜನತೆಗೆ ಸರಿಯಾದ ಮಾಹಿತಿ, ಕಾರ್ಯಾಗಾರಗಳ ಮೂಲಕ ಅರಿವು ಮೂಡಿಸುವುದರಿಂದ ಸುಧಾರಣೆ ತರಬಹುದು ಎಂದು ಹೇಳಿದರು. ದ್ವಿಚಕ್ರ ಸವಾರಿ ಮಾಡುವಾಗ ಸುರಕ್ಷತೆಗಾಗಿ ಹೆಲ್ಮೆಟ್ ಧರಿಸಲೇಬೇಕು. ಇಲ್ಲವಾದರೆ ದಂಡದ ಜೊತೆಗೆ ಶಿಕ್ಷೆಯನ್ನೂ ಅನುಭವಿಸಬೇಕಾಗುತ್ತದೆ ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥ ಕಾಮಗಾರಿಯಿಂದಾಗಿ ಬೈಂದೂರು ವ್ಯಾಪ್ತಿಯಲ್ಲಿ ಅಪಘಾತಗಳ ಸಂಖ್ಯೆ ದ್ವಿಗುಣಗೊಳ್ಳುತ್ತದೆ, ಈ ನೆಲೆಯಲ್ಲಿ ವಿದ್ಯಾರ್ಥಿಗಳು ರಸ್ತೆ ದಾಟುವಾಗ ಪರಸ್ಪರ ಮಾತನಾಡುತ್ತಾ ಸಾಗುವುದು, ಮೊಬೈಲ್ ಫೋನ್ ಬಳಕೆ ಮಾಡುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿದೆ. ತಪ್ಪು ಯಾರೇ ಮಾಡಿದರೂ ತಪ್ಪೆ. ವಿದ್ಯಾರ್ಥಿಗಳು ಎನ್ನುವ ಕಾರಣಕ್ಕೆ ಬಿಟ್ಟುಬಿಡಲಾಗುವುದಿಲ್ಲ. ಹಾಗಾಗಿ ಸಂಚಾರದ ಸಮಯದಲ್ಲಿ ಜಾಗೃತೆವಹಿಸಿ ಎಂದ ಅವರು, ಈಗಿನ ಸ್ಥಿತಿಯಲ್ಲಿ ತಿಳಿಯದೇ ತಪ್ಪು ಮಾಡಿದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜನರ ಹಿತಕ್ಕಾಗಿ ಅನುಷ್ಟಾನಗೊಳಿಸುವ ಯೋಜನೆಗಳ ಪ್ರಯೋಜನ ಜನರಿಗೆ ತಲುಪುವ ಹಾಗೆ ಮಾಡುವುದರ ಮೂಲಕ ಯೋಜನೆಯ ಮೂಲ ಉದ್ಧೇಶವನ್ನು ಮನವರಿಕೆ ಮಾಡಬೇಕು. ಸರಕಾರ ಮೀನುಗಾರರಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಸಮುದಾಯದ ಅಭಿವೃದ್ಧಿಗಾಗಿ ಅದು ಸದುಪಯೋಗವಾಗಬೇಕು ಎಂದು ಮೀನುಗಾರಿಕಾ, ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು. ಶಿರೂರು ಅಳ್ವೆಗದ್ದೆ ಮೀನುಗಾರಿಕಾ ತಂಗುದಾಣದಲ್ಲಿ ರೂ.೨೮೦ ಲಕ್ಷ ವೆಚ್ಚದ ಮೀನುಗಾರಿಕಾ ಜೆಟ್ಟಿ ಪುನರ್ನಿರ್ಮಾಣ ಕಾಮಗಾರಿಗೆ ಗುದ್ದಲಿಪೂಜೆ ನಡೆಸಿ ಮಾತನಾಡಿದರು. ಮೀನುಗಾರರಿಗೆ ೧೯೦ ಮನೆಗಳ ವಿತರಣೆ, ಸಮುದ್ರದಲ್ಲಿ ಅವಘಡ ಸಂಭವಿಸಿದರೆ ರೂ.೫ಲಕ್ಷ ಪರಿಹಾರ, ಈ ಭಾಗದ ಶಾಶ್ವತ ತಡೆಗೋಡೆ ನಿರ್ಮಾಣಕ್ಕೆ ೩೧ ಕೋಟಿ ರೂಗಳ ಯೋಜನೆ ಸಿದ್ದಪಡಿಸಲಾಗಿದೆ. ವೃತ್ತಿನಿರತ ಮೀನುಗಾರರಿಗೆ ಬೋಟ್ ಮಾಡಲು ಸಾಧ್ಯತಾ ಪತ್ರ ವಿತರಿಸಲಾಗಿದೆ. ಹೀಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಎಲ್ಲಾ ಸಮುದಾಯದ ಪರ ಸಾಕಷ್ಟು ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದರೂ ಅದು ಪ್ರಚಾರಕ್ಕೆ ಬಾರದ ಕಾರಣದಿಂದಾಗಿ ಜನರ ಗಮನಕ್ಕೆ ಬರಲು ವಿಳಂಬವಾಗುತ್ತಿದೆ. ಈ…
ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ, ಡಿ23: ಕುಂದಾಪುರ ಮೂಲಕ ದಂಪತಿಗೆ ಇದೇ ಮೊದಲ ಭಾರಿಗೆ ಒಂದೇ ವಿಭಾಗದಲ್ಲಿ, ಒಬ್ಬರದೇ ಮಾರ್ಗದರ್ಶನದಲ್ಲಿ ಏಕಕಾಲಕ್ಕೆ ಕುವೆಂಪು ವಿಶ್ವವಿದ್ಯಾನಿಲಯದ ಡಾಕ್ಟರೇಟ್ ಪದವಿ ದೊರೆತಿದ್ದು, ಕುಂದಾಪುರದ ಹಿರಿಮೆಗೊಂದು ಗರಿ ಮೂಡಿಸಿದಂತಾಗಿದೆ. ಬೆಂಗಳೂರಿನಲ್ಲಿ ಪತ್ರಕರ್ತರಾಗಿರುವ ಬಿ. ಅರವಿಂದ ಶೆಟ್ಟಿ ಹಾಗೂ ಅವರ ಪತ್ನಿ ಪ್ರಾಧ್ಯಾಪಕಿಯಾಗಿರುವ ವಾಹಿನಿ ಅರವಿಂದ್ ಅವರು ಮಂಡಿಸಿದ ಪ್ರತ್ಯೇಕ ಪ್ರಬಂಧಕ್ಕೆ ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿದ್ದು, ಇಂದು ಶಿವಮೊಗ್ಗದ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆದ 27ನೇ ವಾರ್ಷಿಕ ಘಟಿಕೋತ್ಸವದಲ್ಲಿ ದಂಪತಿಗಳಿಗೆ ಡಾಕ್ಟರೇಟ್ ಪದವಿ ಪ್ರಧಾನ ಮಾಡಿಲಾಯಿತು. ಕುಂದಾಪ್ರ ಡಾಟ್ ಕಾಂ. ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಮುಖಸ್ಥರು ಹಾಗೂ ಸಹ ಪ್ರಾಧ್ಯಾಪಕರು ಆದ ಡಾ. ಪಿ.ಎ. ವರ್ಗೀಸ್ ಅವರ ಮಾರ್ಗದರ್ಶನಲ್ಲಿ ಇವರಿಬ್ಬರು ಪ್ರಬಂಧ ಮಂಡಿಸಿದ್ದರು. ಅರವಿಂದ ಶೆಟ್ಟಿ ಅವರು ‘ಬದಲಾದ ಸಾಮಾಜಿಕ-ಆರ್ಥಿಕ ಮತ್ತು ಮಾಧ್ಯಮ ಪರಿಸರ: ಕರ್ನಾಟಕ ಗ್ರಾಮೀಣ ಪತ್ರಿಕೆಗಳ ಉಳಿವಿನ ಕಾರ್ಯತಂತ್ರಗಳು’ ಎಂಬ ವಿಷಯದ ಮೇಲೆ ಮತ್ತು ಅವರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಿರಿಯರು ಆಚರಿಸಿಕೊಂಡು ಬಂದ ಸಂಸ್ಕೃತಿಯನ್ನು ಉಳಿಸಿ ಬೆಳುಸುವುದು ನಮ್ಮೆಲ್ಲರ ಕರ್ತವ್ಯ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ನಮ್ಮನ್ನು ತೊಡಗಿಸಿಕೊಂಡಾಗ ಪರಸ್ಪರ ಭಾಂದವ್ಯ ಹೆಚ್ಚಾಗುತ್ತದೆ ಎಂದು ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘ ಅಧ್ಯಕ್ಷ ಶ್ರೀನಿವಾಸ ಗಾಣಿಗ ಹೇಳಿದರು. ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘ ಆಶ್ರಯದಲ್ಲಿ ಶ್ರೀ ಲಕ್ಷ್ಮೀಂದ್ರ ತೀರ್ಥ ಶ್ರೀಪಾದಗಳ ಆಶೀರ್ವಾದದೊಂದಿಗೆ ಶ್ರೀ ವ್ಯಾಸರಾಜ ಮಠ ಕುಂದಾಪುರ ಇದರ ಶ್ರೀ ಹಯಗ್ರೀವ ತೀರ್ಥ ಶ್ರೀಪಾದರು ಮತ್ತು ಶ್ರೀ ರಾಮಚಂದ್ರ ತೀರ್ಥ ಶ್ರೀಪಾದರ ವೃಂದಾವನ ಜೀರ್ಣೋದ್ಧಾರ ಶಿಲಾನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೇದಮೂರ್ತಿ ವಿಜಯ ಪೆಜತ್ತಾಯ ಧಾರ್ಮಿಕ ವಿಧಿ ಕೈಂಕರ್ಯ ನೇರವೆರಿಸಿದರು. ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘ ಮುಖ್ಯಸ್ಥರಾದ ರಾಮಲಕ್ಷ್ಮಣ, ಉದ್ಯಮಿಗಳಾದ ಸುಧೀರ್ ಪಂಡಿತ್, ಜಿ.ಆರ್ ಚಂದ್ರಯ್ಯ, ಜಿ.ಬಿ. ಪರಮೇಶ್ವರ, ನಾರಾಯಣ ಮಾಸ್ಟರ್, ಗೋಪಾಲ ಚಲ್ಲೆಮಕ್ಕಿ, ಶ್ರೀನಿವಾಸ ಗಾಣಿಗ ಬಡಾಕೆರೆ, ಪಾಂಡುರಂಗ ಗಾಣಿಗ ಹಾಲಾಡಿ, ಕೆ. ರಮಾನಂದ ಉಪಸ್ಥಿತರಿದ್ದರು. ಕೋಶಾಧಿಕಾರಿ ಶಂಕರನಾರಯಣ ಗಾಣಿಗ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗಂಗೊಳ್ಳಿ ಬಂದರು ಪ್ರದೇಶದ ಅಳಿವೆಯ ಇಕ್ಕಡೆಗಳಲ್ಲಿ ರೂ ೧.೩೯ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಕೇಂದ್ರ ಪುರಸ್ಕೃತ ತಡಗೋಡೆ ನಿರ್ಮಾಣ ಕಾಮಗಾರಿಗೆ ಮೀನುಗಾರಿಕಾ ಹಾಗೂ ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಗುದ್ದಲಿ ಪೂಜೆ ನೆರವೇರಿಸಿದರು. ಆ ಬಳಿಕ ಮಾತನಾಡಿದ ಅವರು ಈ ಯೋಜನೆಯನ್ನು ಕೇಂದ್ರದ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಆಸ್ಕರ್ ಫೆರ್ನಾಂಡೀಸ್ ಮತ್ತು ೫೦:೫೦ಕ್ಕೆ ಶಾಸಕ ಕೆ. ಗೋಪಾಲ ಪೂಜಾರಿ ಅವರ ಪ್ರಯತ್ನದ ಫಲವಾಗಿ ಮಂಜೂರಾಗಿತ್ತು. ಇದರ ವೆಚ್ಚವನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ೭೫:೨೫ರ ಅನುಪಾತದಲ್ಲಿ ಭರಿಸುತ್ತವೆ. ಆದರೆ ಪ್ರಸಕ್ತ ಕೇಂದ್ರ ಸರಕಾರವು ಈ ಅನುಪಾತವನ್ನು ೫೦:೫೦ಕ್ಕೆ ನಿಗದಿಗೊಳಿಸಿದೆ. ಅಷ್ಟು ಪ್ರಮಾಣದ ಮೊತ್ತವನ್ನು ರಾಜ್ಯ ಸರಕಾರಗಳು ಭರಿಸುವ ಶಕ್ತಿ ಹೊಂದದಿರುವುದರಿಂದ ಮುಂದಿನ ದಿನಗಳಲ್ಲಿ ಯಾವುದೇ ಮೀನುಗಾರಿಕಾ ಬಂದರು ಕಾಮಗಾರಿಗಳು ನಡೆಯಲಾರವು. ಈ ವಿಚಾರವನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ರಾಧಾ ಮೋಹನ್ ಸಿಂಗ್ ಅವರ ಗಮನಕ್ಕೆ ತಂದಿದ್ದೇನೆ.…
