Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಾಲ್ತೋಡು ಗ್ರಾಪಂ ವ್ಯಾಪ್ತಿಯ ಮೆಟ್ಟಿನಹೊಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೂಜ್ಯ ಶಿರಸಿ ಸ್ವರ್ಣವಲ್ಲಿ ಶ್ರೀ ಗಂಗಾಧರೇಂದ್ರ ಶ್ರೀಗಳ ಮಾರ್ಗದರ್ಶನ ಹಾಗೂ ಆಶೀರ್ವಾದದೊಂದಿಗೆ ನಡೆಯುವ ಭಗವದ್ಗೀತಾ ಸಪ್ತಾಹ ಅಭಿಯಾನದ ಪ್ರಯುಕ್ತ ಪೂರ್ವಭಾವಿ ಸಭೆ ನಡೆಯಿತು. ಸಭೆಯನ್ನುದ್ದೇಶಿಸಿ ಯಳಜಿತ್ ಶ್ರೀ ಸಿದ್ಧಿವಿನಾಯಕ ಸಾಂಸ್ಕೃತಿಕ ಕೇಂದ್ರದ ಸಂಚಾಲಕ, ಸಂತ ಮಂಗೇಶ್ ಶೆಣೈ ಮಾತನಾಡಿ ಇಂದಿನ ದಿನಗಳಲ್ಲಿ ತಾಂತ್ರಿಕ ಜೀವನವನ್ನು ಅವಲಂಬಿಸುತ್ತಿರುವ ಪರಿಣಾಮ ಮಾನಸಿಕ ಒತ್ತಡ, ಖಿನ್ನತೆಗೆ ಒಳಗಾಗಿ ರಾಕ್ಷಸರಾಗುತ್ತಿದ್ದೇವೆ. ಇದನ್ನು ನಿಯಂತ್ರಿಸಲು ಪ್ರತಿ ಮನೆಗಳಲ್ಲಿಯೂ ಭಗವದ್ಗೀತೆ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಜೀವನಕ್ಕೆ ಪೂರಕವಾದ ಅಂಶಗಳೇ ಭಗವದ್ಗೀತೆಯ ಸಾರಾಂಶ ಎಂದು ಹೇಳಿದರು. ಜಾತಿ, ಮತ, ಸಸ್ಯಾಹಾರಿ, ಮಾಂಸಹಾರಿಗಳೆಂಬ ಭೇಧವಿಲ್ಲದೇ ಏಕಾಗ್ರತೆಯಿಂದ ಧ್ಯಾನಾಸಕ್ತರಾಗಿ ಗೀತಾಪಠಣ ಮಾಡಿದರೆ ಜ್ಞಾನ ಹೆಚ್ಚಾಗುವುದಲ್ಲದೇ ಸಾಂಸಾರಿಕಾ, ವ್ಯಾವಹಾರಿಕಾ ಒತ್ತಡಗಳ ನಿಯಂತ್ರಣಕ್ಕೂ ಸಹಕಾರಿಯಾಗುತ್ತದೆ. ಪಾಪಕರ್ಮ ಮಾಡಿದವರಿಗೂ ಇದರಿಂದ ವಿಮೋಚನಾ ಮಾರ್ಗ ಪಡೆಯಬಹುದಲ್ಲದೆ, ಸೂತಕಾದಿಗಳು ಕೂಡಾ ಇಂದಿಗೂ ವಿಶ್ವ ಮಾನ್ಯವಾಗಿರುವ ಹಾಗೂ ಸೂತ್ರಪ್ರಾಯವಾಗಿರುವ ಮಹಾನ್ ಗ್ರಂಥವನ್ನು ಓದಬಹುದು ಎಂದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಡಿಸೆಂಬರ್ ೪ರಿಂದ ೧೦ರ ವರೆಗೆ ನ್ಯೂಜಿಲ್ಯಾಂಡ್‌ನ ಕ್ರೈಸ್ಟ್ ಚರ್ಚ್‌ನಲ್ಲಿ ನಡೆಯಲಿರುವ ಏಷ್ಯಾ ಒಷ್ಯಾನಿಯಾ ಪವರ್ ಲಿಪ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಕುಂದಾಪುರ ತಾಲೂಕಿನ ಬಾಳಿಕೆರೆಯ ವಿಶ್ವನಾಥ ಗಾಣಿಗ ಅವರಿಗೆ ಜೇಸಿಐ ಕುಂದಾಪುರ ಹಾಗೂ ರೋಟರ‍್ಯಾಕ್ಟ್ ವೆಲ್‌ಫೇರ್ ಟ್ರಸ್ಟ್ (ರಿ) ಕುಂದಾಪುರ ಆರ್ಥಿಕ ಸಹಾಯ ಹಸ್ತ ನೀಡಿದೆ. ಈ ಸಂದರ್ಭದಲ್ಲಿ ಜೇಸಿಐ ಕುಂದಾಪುರದ ನಿಯೋಜಿತ ಅಧ್ಯಕ್ಷ ಶ್ರೀಧರ ಸುವರ್ಣ, ರೋಟರ‍್ಯಾಕ್ಟ್ ವೆಲ್‌ಫೇರ್ ಟ್ರಸ್ಟ್‌ನ ಬಿ. ಕಿಶೋರ್ ಕುಮಾರ್ ಕುಂದಾಪುರ, ಪ್ರವೀಣ್‌ಕುಮಾರ್ ಟಿ, ದಾಮೋದರ ಪೈ, ಜೇಸಿಐ ಕುಂದಾಪುರದ ಪೂರ್ವಾಧ್ಯಕ್ಷ ರಾಘವೇಂದ್ರಚರಣ ನಾವಡ, ನಾಗೇಶ ನಾವಡ, ಮಿಥುನ್ ಸುವರ್ಣ, ಚರಣ್ ಸುವರ್ಣ, ಸಂತೋಷ ಕೋಟೇಶ್ವರ ಉಪಸ್ಥಿತರಿದ್ದರು. ಜೇಸಿಐ ಕುಂದಾಪುರ ಹಾಗೂ ರೋಟರ‍್ಯಾಕ್ಟ್ ವೆಲ್‌ಫೇರ್ ಟ್ರಸ್ಟ್ (ರಿ) ಕುಂದಾಪುರ ನೀಡಿದ ಸಹಕಾರಕ್ಕೆ ಕ್ರೀಡಾ ಪಟು ವಿಶ್ವನಾಥ ಗಾಣಿಗ ಕೃತಜ್ಞತೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಉಪ್ಪಿನಕುದ್ರು ಹೊಳೆಯ ಮರಳು ಅಡ್ಡೆ ಇರುವ ಪ್ರದೇಶದಲ್ಲಿ ಆಯತಪ್ಪಿ ದೋಣಿಯಿಂದ ನದಿಗೆ ಬಿದ್ದ ಉತ್ತರಪ್ರದೇಶದ ಕಾರ್ಮಿಕ ರಾಮು (40) ದಾರುಣವಾಗಿ ಮೃತಪಟ್ಟಿದ್ದಾರೆ. ಉಪ್ಪಿನಕುದ್ರು ಹೊಳೆಯಲ್ಲಿ ರಣಧೀರ ಎಂಬುವವರ ದೋಣಿಯನ್ನು ರಿಪೇರಿ ಹಾಗೂ ಪೈಂಟಿಂಗ್ ಮಾಡಿಸಲು ತೆಗೆದುಕೊಂಡು ಹೋಗುತ್ತಿದ್ದಾಗ ದೋಣಿಯನ್ನು ಸಾಗಿಸಲು ಉಪಯೋಗಿಸುವ ಬಿದಿರು ಕೋಲಿನ ಜಲ್ಲು ತುಂಡಾಗಿ ಆಯತಪ್ಪಿ ರಾಮು ಹೊಳೆಯ ನೀರಿಗೆ ಬಿದ್ದಿದ್ದರು. ದೋಣಿಯಲ್ಲಿದ್ದ ರಣಧೀರ ನೀರಿಗೆ ಹಾರಿ ನೀರಿನಿಂದ ಎತ್ತಲು ಪ್ರಯತ್ನಿಸಿದರೂ ನೀರಿನ ಸುಳಿಯಲ್ಲಿ ಸಿಗದೆ, ಸ್ಥಳೀಯರ ಸಹಾಯದಿಂದ ಬುಧವಾರ ಮಧ್ಯಾಹ್ನ ಮೃತದೇಹವನ್ನು ಮೇಲೆತ್ತಲಾಗಿತ್ತು. ಘಟನೆಯ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ಅಧ್ಯಕ್ಷ ಸ್ಥಾನವನ್ನು ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕ ಕೆ. ಗೋಪಾಲ ಪೂಜಾರಿ ನಿರಾಕರಿಸಿದ್ದಾರೆ. ಅರಣ್ಯ ಅಭಿವೃದ್ಧಿ ನಿಗಮದಿಂದ ಸಾರ್ವಜನಿಕ ಸಂಪರ್ಕಕ್ಕೆ ಯಾವುದೇ ಅನುಕೂಲಕರ ಸ್ಥಿತಿ ಇಲ್ಲದಿರುವುದು ಮತ್ತು ಶಾಸಕನಾಗಿ ಕ್ಷೇತ್ರದಲ್ಲಿ ಮಾಡಬೇಕಿರುವ ಅಭಿವೃದ್ಧಿ ಕೆಲಸಗಳು ಸಾಕಷ್ಟಿರುವ ಹಿನ್ನೆಲೆಯಲ್ಲಿ ಅರಣ್ಯ ನಿಗಮದ ಅಧ್ಯಕ್ಷ ಸ್ಥಾನವನ್ನು ನಿರಾಕರಿಸುತ್ತಿರುವುದಾಗಿ ಗೋಪಾಲ ಪೂಜಾರಿ ಅವರು ’ಕುಂದಾಪ್ರ ಡಾಟ್ ಕಾಂ’ಗೆ ತಿಳಿಸಿದ್ದಾರೆ. ನಾಲ್ಕು ಬಾರಿ ಬೈಂದೂರು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಗೋಪಾಲ ಪೂಜಾರಿ ಅವರು, ಸಚಿವ ಸ್ಥಾನ ಆಕಾಂಕ್ಷಿಯಾಗಿದ್ದರು. ಎರಡೆರಡು ಭಾರಿ ಸಚಿವಸ್ಥಾನ ಕೈತಪ್ಪಿದಾಗ ತಮ್ಮ ಆಕ್ರೋಶ ಬಹಿರಂಗವಾಗಿ ಹೊರಹಾಕಿದ್ದರು. ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುವುದಾಗಿ ತಿಳಿಸಿದ್ದರಿಂದ ಸಚಿವ ಸ್ಥಾನದ ರೇಸ್‌ನಿಂದ ಹಿಂದೆ ಸರಿದಿದ್ದರು. ಆದರೆ ಗೋಪಾಲ ಪೂಜಾರಿ ಅವರು ರಸ್ತೆ ಅಭಿವೃದ್ಧಿ ನಿಗಮವನ್ನು ಕೇಳಿಕೊಂಡಿದ್ದರೇ, ಸಿದ್ಧರಾಮಯ್ಯನವರು ಅರಣ್ಯ ಅಭಿವೃದ್ಧಿ ನಿಗಮ ನೀಡಿದ್ದು ಇದರಿಂದ ಜನರೊಂದಿಗೆ ಸಂಪರ್ಕ ಸಾಧಿಸಲು ಸಾಧ್ಯವಿಲ್ಲ ಹಾಗಾಗಿ ಅಧ್ಯಕ್ಷ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಾಜ್ಯದ ನಿಗಮ-ಮಂಡಳಿಗಳಿಗೆ ಅಧ್ಯಕರನ್ನು ನೇಮಕ ಮಾಡಿ ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಅವರು ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ನಾಲ್ಕನೇ ಭಾರಿಗೆ ಬೈಂದೂರು ಕ್ಷೇತ್ರದ ಶಾಸಕರಾಗಿ ಆಯ್ಕೆಗೊಂಡಿದ್ದ ಗೋಪಾಲ ಪೂಜಾರಿ ಅವರಿಗೆ ಹಿರಿತನದ ಆಧಾರದಲ್ಲಿ ಕಾಂಗ್ರೆಸ್ ಸರಕಾರದಲ್ಲಿ ಸಚಿವರಾಗುವ ಅವಕಾಶವಿದ್ದರೂ ಕಾರಣಾಂತರದಿಂದ ಅದು ಕೈತಪ್ಪಿ ಹೋಗಿತ್ತು. ಈಗ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಿರುವುದು ಸಹಜವಾಗಿ ಅವರ ಅಭಿಮಾನಿಗಳಲ್ಲಿ ಸಂತಸವನ್ನುಂಟುಮಾಡಿದೆ. ನಿಗಮ ಮಂಡಳಿಯ ಪಟ್ಟಿಯಲ್ಲಿ 21 ಶಾಸಕರು ಸ್ಥಾನ ಪಡೆದಿದ್ದು, 70 ಕಾರ್ಯಕರ್ತರು ಮತ್ತು ಮುಖಂಡರಿಗೆ ಅಧ್ಯಕ್ಷ ಸ್ಥಾನ ಲಭಿಸಿದೆ. ಅಧಿಕಾರ ವಹಿಸಿಕೊಂಡ ದಿನದಿಂದ ಜಾರಿಗೆ ಬರುವಂತೆ ಅಧ್ಯಕ್ಷರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ ನೀಡಲಾಗಿದೆ. ಅಧ್ಯಕ್ಷ ಸ್ಥಾನ ಪಡೆದಿರುವ ಶಾಸಕರ ಪಟ್ಟಿ * ಕೆ.ಗೋಪಾಲ ಪೂಜಾರಿ, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತ * ಕೆ.ವಸಂತ ಬಂಗೇರ, ಕರ್ನಾಟಕ ರಾಜ್ಯ ಸಣ್ಣ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಿರಿಯ ನ್ಯಾಯವಾದಿ, ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿ ಕಾರ್ಯದರ್ಶಿ ಶ್ಯಾಮಲ ಭಂಡಾರಿ ರಾಜ್ಯ ಮಹಿಳಾ ಆಯೋಗದ ತನ್ನ ಸದಸ್ಯೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸರವರ ಅಧಿಕಾರಾವಧಿ ಇನ್ನೂ ೮ ತಿಂಗಳು ಬಾಕಿ ಇರುವ ಸಂದರ್ಭದಲ್ಲಿ ಸಕಾರಣವಿಲ್ಲದೆ ಏಕಾಏಕಿ ರಾಜೀನಾಮೆ ಪಡೆದಿರುವುದನ್ನು ಪ್ರತಿಭಟಿಸಿ ಈ ಘಟನೆಯಿಂದ ಮನನೊಂದು ತಾನು ತನ್ನ ಆಯೋಗದ ಸದಸ್ಯೆ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಭಂಡಾರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮಹಿಳೆಯರ ಮೇಲಾಗುವ ದೌರ್ಜನ್ಯ ತಡೆಗಟ್ಟುವುದು, ಅವರಿಗೆ ರಕ್ಷಣೆ ಒದಗಿಸುವುದು, ಸಮಾನತೆ ಕಲ್ಪಿಸುವುದು ಮತ್ತು ಅವರು ಗೌರವಯುತವಾಗಿ ಬದುಕುವ ಸನ್ನಿವೇಶ ನಿರ್ಮಿಸುವುದು ಮಹಿಳಾ ಆಯೋಗದ ಕಾರ್ಯವಾಗಿರುತ್ತದೆ. ಆದರೆ ಮಹಿಳಾ ಆಯೋಗದೊಳಗಿನ ಪ್ರಸಕ್ತ ಸನ್ನಿವೇಶ ನೋವು ತಂದಿದೆ ಎಂದು ಅವರು ವಿವರಿಸಿದ್ದಾರೆ. ಮಹಿಳಾ ಆಯೋಗದ ಸದಸ್ಯೆಯಾಗಿ ನೇಮಕಗೊಂಡ ನಂತರ ಅಂದರೆ ಕಳೆದ ೨ ವರ್ಷಗಳಿಂದ ಸಕ್ರೀಯವಾಗಿ ಆಯೋಗದ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ತಾನು ಅದೇ ಸಮಯದಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿದ್ದರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಹಂಪಿ: ಹೆಲಿಕ್ಯಾಪ್ಟರ್ ಮೂಲಕ ಆಗಸದಿಂದ ಹಂಪಿ ಸ್ಮಾರಕಗಳನ್ನು ವೀಕ್ಷಿಸುವ ಹಂಪಿ ಬೈ ಸ್ಕೈ (ಆಗಸದಿಂದ ಹಂಪಿ) ಕಾರ್ಯಕ್ರಮಕ್ಕೆ ಮಂಗಳವಾರ ಅಧಿಕೃತ ಚಾಲನೆ ದೊರೆತಿದೆ. ಸಸಿಗೆ ನೀರು ಹಾಕಿ ಪಾರಿವಾಳಗಳನ್ನು ಹಾರಿಬಿಡುವ ಮೂಲಕ ಬಳ್ಳಾರಿ ನಗರ ವಿಧಾನ ಸಭಾ ಕ್ಷೇತ್ರದ ಶಾಸಕ ಅನಿಲ್ ಲಾಡ್ ಚಾಲನೆ ನೀಡಿದರು. ಹಂಪಿ ಬೈಸ್ಕೈಗೆ ಮೊದಲ ದಿನವೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದ್ದು ನೂರಕ್ಕೂ ಅಧಿಕ ಜನ ಹಂಪಿ ಸ್ಮಾರಕಗಳ ವೀಕ್ಷಣೆ ಮಾಡಿದರು. ಒಟ್ಟು ಮೂರು ಹೆಲಿಕ್ಯಾಪ್ಟರ್‌ಗಳು ಹಾರಾಟ ನಡೆಸಲಿದ್ದು, ಏಳು ನಿಮಿಷಗಳ ವೀಕ್ಷಣೆಗೆ ಸಾವಿರದ ಒಂಭತ್ತುನೂರು ರೂ ಮತ್ತು ಹತ್ತು ನಿಮಿಷಗಳ ವೀಕ್ಷಣೆಗೆ ಎರಡು ಸಾವಿರದ ಆರುನೂರು ರೂಗಳನ್ನು ನಿಗದಿಪಡಿಸಲಾಗಿದೆ. ನ.೧ರಿಂದ ನ.೭ರ ವರೆಗೆ ಏಳು ದಿನಗಳ ಕಾಲ ಬೆಳಗ್ಗೆ ೮:೩೦ರಿಂದ ಸಂಜೆ ೫:೩೦ರ ವರೆಗೆ ಹಾರಾಟ ನಡೆಸಲಿವೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಗೋಳಿಹೊಳೆ ಗ್ರಾಪಂ ವ್ಯಾಪ್ತಿಯ ಶ್ರೀ ವಿನಾಯಕ ಆಟೋರಿಕ್ಷಾ, ಗೂಡ್ಸ್, ಟೆಂಪೋ ಮತ್ತು ಟ್ಯಾಕ್ಸಿ ಚಾಲಕ ಮಾಲಕರ ಸಂಘದ ಮೂರನೇ ವರ್ಷದ ವಾರ್ಷಿಕ ಮಹಾಸಭೆ ಹಾಗೂ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಕೊಲ್ಲೂರು ದೇವಳದ ಮಾಜಿ ಆಡಳಿತ ಧರ್ಮದರ್ಶಿ ಬಿ. ಎಂ. ಸುಕುಮಾರ್ ಶೆಟ್ಟಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸಂಘಟನೆಯಿಂದ ಜನಜಾಗೃತಿ, ಆರ್ಥಿಕ ಸ್ಥಿತಿ ಮತ್ತು ಸಮಾಜ ಸುಧಾರಣೆ ಸಾಧ್ಯವಾಗುತ್ತದೆ. ಸಂಘಟನೆಯ ಸದಸ್ಯರ ಏಳಿಗೆಗಾಗಿ ಮತ್ತು ಆರ್ಥಿಕ ಪರಿಸ್ಥಿತಿಯ ಸುಧಾರಣೆಗಾಗಿ ಕೆಲವು ಯೋಜನೆಗಳನ್ನು ಹಾಕಿಕೊಳ್ಳುವ ಕುರಿತು ಚಿಂತನೆ ಮಾಡುವ ಅಗತ್ಯವಿದೆ. ತಮ್ಮ ಜೀವನ ನಿರ್ವಹಣೆಗಾಗಿ ಸೇವಾ ಮನೋಭಾವದಿಂದ ಪ್ರಾಮಾಣಿಕರಾಗಿ ಹೋರಾಟ ಮಾಡುವ ಟ್ಯಾಕ್ಸಿ, ರಿಕ್ಷಾ ಚಾಲಕರು ಸಮಾಜದ ಅವಿಭಾಜ್ಯ ಅಂಗವಾಗಿದ್ದು ಸಾಮಾಜಿಕ ಕಳಕಳಿಯನ್ನು ಹೊಂದಿರುವುದರ ಜತೆಗೆ ಊರಿನ ಅಭಿವೃದ್ಧಿಯಲ್ಲಿಯೂ ತೊಡಗಿಸಿಕೊಳ್ಳುವುದನ್ನು ಕಾಣುತ್ತಿದ್ದೇವೆ ಎಂದರು. ಜಿಪಂ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ಅಧ್ಯಕ್ಷತೆವಹಿಸಿದ್ದರು. ಉಡುಪಿ ಮಾಜಿ ಶಾಸಕ ಹಾಗೂ ಜಿಲ್ಲಾ ಟ್ಯಾಕ್ಸಿ ಎಸೋಸಿಯೇಶನ್ ಅಧ್ಯಕ್ಷ ಕೆ.…

Read More

ರಾಜ್ಯೋತ್ಸವ ಯಕ್ಷಗಾನ ತಾಳಮದ್ದಳೆ-೪೦ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನವೆಂಬರ್ ೧ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರಾಜ್ಯೋತ್ಸವ ಯಕ್ಷಗಾನ ತಾಳಮದ್ದಳೆ-೪೦ರಸಂಭ್ರಮ ಕಾರ್ಯಕ್ರಮದಲ್ಲಿ ಮಣಿಪಾಲದ ಅಕಾಡೆಮಿ ಆಫ್ ಜನರ್ಲ್ ಎಜುಕೇಶನ್ ಇದರ ಆಡಳಿತಾಧಿಕಾರಿಗಳಾದ ಡಾ.ಹೆಚ್.ಶಾಂತಾರಾಮ್ ಅವರು ಬಡಗು ಹಾಗೂ ತೆಂಕುತಿಟ್ಟು ಸವ್ಯಸಾಚಿ ಚಂಡೆವಾದಕ  ಶಿವಾನಂದ ಕೋಟ ಇವರಿಗೆ ಡಾ.ಹೆಚ್.ಶಾಂತಾರಾಮ್ ಯಕ್ಷಗಾನ ಪುರಸ್ಕಾರವನ್ನು ನೀಡಿ ಸನ್ಮಾನಿಸಿದರು. ಬಳಿಕ ಮಾತನಾಡಿದ ಡಾ. ಹೆಚ್. ಶಾಂತಾರಾಮ್ ಕರ್ನಾಟಕ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಬೇಕೆಂಬ ಉದ್ದೇಶದಿಂದ ಕರಾವಳಿಯ ಹೆಮ್ಮೆಯ ಕಲೆ ಯಕ್ಷಗಾನ ತಾಳಮದ್ದಳೆಯನ್ನು ಆರಭಿಸಲಾಯಿತು. ಅಲ್ಲದೇ ಯುವಜನತೆಗೆ ಯಕ್ಷಗಾನ ಕಲೆಯ ವಿಶಿಷ್ಠತೆಯನ್ನು ತಿಳಿಸುವುದು ಇದರ ಉದ್ದೇಶವಾಗಿದೆ. ಅಹೋರಾತ್ರಿ ನಡೆಯುತ್ತಿದ್ದ ಈ ಕಾರ್ಯಕ್ರಮ ನಂತರದ ದಿನಗಳಲ್ಲಿ ಮಧ್ಯಾಹ್ನದಿಂದ ಸಂಜೆಯವರೆಗೆ ಮಾತ್ರ ನಡೆಯುತ್ತಿತ್ತು. ನಂತರ ಯಕ್ಷಗಾನಕ್ಕೆ ಹೊಸ ಆಯಾಮಗಳನ್ನು ಕೊಡಬೇಕು ಎಂಬ ಉದ್ದೇಶದಿಂದ ಯುವ ಯಕ್ಷಗಾನ ಕಲಾವಿದರನ್ನು ಬೆಳೆಸಬೇಕೆಂಬ ಅಭಿಲಾಷೆಯಿಂದ ಯಕ್ಷಗಾನ ಪುರಸ್ಕಾರವನ್ನು ನೀಡಲು ಆರಂಭಿಸಲಾಯಿತು. ಪುರಸ್ಕಾರವನ್ನು ನೀಡುವುದರೊಂದಿಗೆ ಯಕ್ಷಗಾನವನ್ನು ಇನ್ನೂ ಮುತುವರ್ಜಿಯಿಂದ ಉಳಿಸಿ ಬೆಳೆಯಬೇಕು. ಪಡೆದವರ ಮೂಲಕ ಕಲೆ ಬೆಳೆಯಬೇಖು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಕನ್ನಡ ಭಾಷೆಯ ಬಗೆಗೆ ನಿಜವಾದ ಅಭಿಮಾನ ಕಾಳಜಿ ಪ್ರತಿಯೊಬ್ಬ ಕನ್ನಡಿಗನಲ್ಲೂ ಮೂಡಿಬರಬೇಕು. ನಮ್ಮ ಎಲ್ಲಾ ಸಂಭ್ರಮಾಚರಣೆಯ ಜೊತೆಯಲ್ಲಿ ದೇಶ ಕಾಯುವ ಸೈನಿಕರನ್ನು ಸ್ಮರಿಸಿಕೊಳ್ಳಬೇಕು. ಎ೦ದು ಗ೦ಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕ ನಾರಾಯಣ ಶೆಟ್ಟಿ ಅಭಿಪ್ರಾಯ ಪಟ್ಟರು. ಅವರು ಕರ್ನಾಟಕ ಕರಾವಳಿ ನಾಗರಿಕ ಹಿತರಕ್ಷಣಾ ವೇದಿಕೆಯ ಗಂಗೊಳ್ಳಿ ಘಟಕ ಮತ್ತು ಬೆಂಗಳೂರು ಹೋಟೆಲ್ ನ್ಯೂಸ್ ಪತ್ರಿಕೆಯು ಇಲ್ಲಿ ಹಮ್ಮಿಕೊ೦ಡಿದ್ದ ಕನ್ನಡ ರಾಜ್ಯೋತ್ಸವ ಕಾರ‍್ಯಕ್ರಮದಲ್ಲಿ ಧ್ವಜಾರೋಹಣವನ್ನು ನೆರವೇರಿಸಿ ಅವರು ಮಾತನಾಡಿದರು. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ನರೇಂದ್ರ ಎಸ್ ಗ೦ಗೊಳ್ಳಿ ಮಾತನಾಡಿ ಮಾತೃಬಾಷೆ ಮೂಲಕ ಕಲಿತ ವಿದ್ಯೆ ನೇರವಾಗಿ ಹೃದಯದೊಳಕ್ಕೆ ಇಳಿಯುತ್ತದೆ. ಕನ್ನಡ ಮಧ್ಯಮದ ಮಕ್ಕಳು ತಮ್ಮೊಳಗೆ ಯಾವ ಕೀಳರಿಮೆಯನ್ನು ಇಟ್ಟುಕೊಳ್ಳಬಾರದು. ಸಾಧನೆಯೆ ಮುಖ್ಯವಾಗಬೇಕು ಎಂದರು. ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷರಾದ ಜಿ.ಕೆ. ವೆಂಕಟೇಶ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸುರೇಶ.ಜಿ. ಕಾರ‍್ಯಕ್ರಮ ನಿರ್ವಹಿಸಿದರು.ಈ ಸಂದರ್ಭದಲ್ಲಿ ಗಣೇಶ, ಆನ೦ದ, ನಾಗರಾಜ, ರಾಮಚಂದ್ರ,…

Read More