Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿನ ಗಾಂಧಿ ಮೈದಾನದಲ್ಲಿ ಸ್ಥಳೀಯ ಟಾರ್ಪೆಡೋಸ್ ತಂಡದ ಆಶ್ರಯದಲ್ಲಿ ಮೂರು ದಿನಗಳಿಂದ ನಡೆದ ‘ಟಿಪಿಎಲ್-2017’ ಅಂತರಾಷ್ಟ್ರೀಯ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟದಲ್ಲಿ ಲೆವೆನ್ ವಾರಿಯರ್ಸ್ ದುಬೈ ತಂಡ 2017 ಸಾಲಿನ ಟಿಪಿಎಲ್ ಚಾಂಪಿಯನ್ ಆಗಿ ಮೂಡಿ ಬಂದಿದೆ. ಕುಂದಾಪುರ ಗಾಂಧಿ ಮೈದಾನದಲ್ಲಿ ನಡೆದ ಫೈನಲಿನಲ್ಲಿ ಉಡುಪಿ ಬಾಯ್ಸ್ ತಂಡವನ್ನು ಎಂಟು ವಿಕೆಟುಗಳಿಂದ ಸೋಲಿಸಿದ ದುಬೈ ತಂಡ ರೂ. ಹತ್ತು ಲಕ್ಷ ನಗದು ಬಹುಮಾನದೊಂದಿಗೆ ಗಜಗಾತ್ರದ ಮಿನುಗುವ ಟಿಪಿಎಲ್ ಟ್ರೋಫಿಯನ್ನು ಗೆದ್ದುಕೊಂಡಿದೆ. ರನ್ನರ್ಸ್-ಅಪ್ ತಂಡ ರೂ. ಐದು ಲಕ್ಷ ನಗದಿನೊಂದಿಗೆ ಮಿನುಗುವ ಬೃಹತ್ ಟ್ರೋಫಿ ಗೆದ್ದಿತು. ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಎಪ್ರಿಲ್ 14 ರಿಂದ 16 ರ ತನಕ ಆಯೋಜಿಸಿದ ಅಂತರಾಷ್ಟ್ರೀಯ ಮಟ್ಟದ ಹಾರ್ಡ್-ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಕೂಟದಲ್ಲಿ ಶ್ರೀಲಂಕಾ, ಕತಾರ್, ಸೌದಿ ಅರೇಬಿಯಾ, ದುಬೈ ಜೊತೆಗೆ ದೇಶದ ವಿವಿಧ ರಾಜ್ಯಗಳಿಂದ ಆಗಮಿಸಿದ 12 ಕ್ರಿಕೆಟ್ ತಂಡಗಳು ಭಾಗವಹಿಸಿ ಲೀಗ್ ಹಾಗೂ ನಾಕೌಟ್ ಮಾದರಿಯಲ್ಲಿ ಪ್ರಶಸ್ತಿಗಾಗಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತೆಕ್ಕಟ್ಟೆ ಪುರಾಣಿಕ್ ಕಾಂಪ್ಲೆಕ್ಸ್‌ನಲ್ಲಿ ಕಾರ್ಯಾರಂಭಗೊಂಡ ನೂತನ ಬಿಜೆಪಿ ಕಛೇರಿಯನ್ನು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಲೋಕಾರ್ಪಣೆಗೊಳಿಸಿದರು. ತೆಕ್ಕಟ್ಟೆ ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷ ಎಂ. ರಾಜೀವ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಂಸದ ಕೆ. ಜಯಪ್ರಕಾಶ ಹೆಗ್ಡೆ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ದಿನಕರ ಹೆಗ್ಡೆ, ರೈತಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಪ್ರವೀಣಕುಮಾರ್ ಶೆಟ್ಟಿ, ಹಿಂದುಳಿದ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಠಲ ಪೂಜಾರಿ, ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗೋಪಾಲ ಕಳಿಂಜೆ, ಯುವಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ಮಹೇಶ್ ಪೂಜಾರಿ, ಕುಂದಾಪುರ ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಂಕರ ಅಂಕದಕಟ್ಟೆ, ಎಸ್ಟಿ ಮೋರ್ಚಾ ಅಧ್ಯಕ್ಷ ಕೃಷ್ಣ ನಾಯ್ಕ್, ಬಿಜೆಪಿಯ ಪ್ರಮುಖರಾದ ರತ್ನಾಕರ ಶೆಟ್ಟಿ, ಬೆಳ್ವೆ ವಸಂತಕುಮಾರ್ ಶೆಟ್ಟಿ, ನವೀನ್ ಹೆಗ್ಡೆ ಶಾನಾಡಿ, ಮೋಹನದಾಸ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬಿ. ಕಿಶೋರ್‌ಕುಮಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ರಾಜೀವ ಶೆಟ್ಟಿ ಸ್ವಾಗತಿಸಿ, ಹಿಂದೂಳಿದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭಾರತೀಯರು ಧಾರ್ಮಿಕತೆ ಹಾಗೂ ದೇಶಭಕ್ತಿಯ ವಿಷಯಕ್ಕೆ ಸಂಘಟಿತರಾಗುತ್ತಾರೆ. ವೈಯಕ್ತಿಕ ಲಾಭ, ಮನಸ್ತಾಪಗಳಿಂದಾಗಿ ವೈಮನಸ್ಸುಗಳಿದ್ದರೂ ದೇಶ, ಧರ್ಮಕ್ಕೆ ಕಳಂಕ ಉಂಟಾದರೇ ಒಗ್ಗಟ್ಟಾಗಿ ಪ್ರತಿಭಟಿಸುವ ಗುಣ ನಮ್ಮಲ್ಲಿದೆ. ಇಂತಹ ಮನೋಭಾವ ಗಟ್ಟಿಯಾಗಬೇಕಾದರೇ ಯುವಶಕ್ತಿಗೆ ಸರಿಯಾದ ಮಾರ್ಗದರ್ಶನ ನೀಡಿ ಒಗ್ಗಟ್ಟಾಗಿ ಮುನ್ನಡೆಯುವ ಮಾರ್ಗ ತೋರಬೇಕಾದ ತುರ್ತು ಅವಶ್ಯಕತೆ ಇದೆ ಎಂದು ಬಸ್ರೂರು ಶ್ರೀ ಮಹಾಲಿಂಗೇಶ್ವದ ದೇವಳದ ಆಡಳಿತ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಹೇಳಿದರು. ಅವರು ಕಳವಾಡಿ ಶ್ರೀ ಮಾರಿಕಾಂಬ ಯುತ್ ಕ್ಲಬ್ ರಿ. ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಜರುಗಿದ ೧೨ನೇ ವಾರ್ಷಿಕೋತ್ಸವ ಹಾಗೂ ಅಭಿನಂದನ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ಅಭಿನಂದನೆ ಸಲ್ಲಿಸಿ ಶುಭಶಂಸನೆಗೈದರು. ಮಕ್ಕಳು ಸನ್ಮಾರ್ಗದಲ್ಲಿ ನಡೆಯಬೇಕಿದ್ದರೆ ಅವರಿಗೆ ಸಂಸ್ಕಾರ ಸಂಸ್ಕೃತಿಯ ಅರಿವಿರಬೇಕು. ಇದನ್ನು ಯಾವ ಶಿಕ್ಷಣ ಕೇಂದ್ರದಲ್ಲಿಯೂ ಹೇಳಿಕೊಡಲಾರಾರರು. ಇದೇ ಪ್ರಸ್ತುತ ಗೊಂದಲಕ್ಕೆ ಕಾರಣವಾಗಿದೆ. ನಮ್ಮ ದೇಶ ಶತಮಾನಗಳ ಕಾಲ ಪರಕೀಯರ ದಾಳಿಗೆ ತುತ್ತಾದರೂ ತನ್ನತನವನ್ನು ಉಳಿಸಿಕೊಂಡಿದೆ. ಸನಾತನ ಸಂಸ್ಕೃತಿಯಿಂದಾಗಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನವೋದಯದ ಪುರುಷ ಎಂದೆನಿಸಿಕೊಂಡಿರುವ ಖ್ಯಾತ ಚಿತ್ರ ಕಲಾವಿದ ಲಿಯೋನಾರ್ಡೋ ಡಾ ವಿಂಚಿ ಅವರ ಜನ್ಮದಿನವನ್ನು ಆಚರಿಸುವ ಮೂಲಕ ಚಿತ್ರಕಲೆಗಿರುವ ಜಾಗತಿಕ ಆಯಾಮ ತೆರೆದಿಡಲಾಗುತ್ತಿದೆ. ಅದ್ಬುತ ಕಲಾಕಾರನನ್ನು ನೆನಪಿಸಿಕೊಳ್ಳುವ ಮೂಲಕ ಚಿತ್ರಕಲೆ ಎಲ್ಲವನ್ನೂ ಮೀರಿದ್ದು ಎಂದು ಹೇಳಹೊರಟಿರುವ ಪ್ರಕ್ರಿಯೆ ವಿಶಿಷ್ಟವಾದುದು ಎಂದು ಹಿರಿಯ ಪತ್ರಕರ್ತ ಎಸ್. ಜನಾರ್ಧನ ಮರವಂತೆ ಹೇಳಿದರು. ಅವರು ಸುರಭಿ ರಿ. ಬೈಂದೂರು ಸಾರಥ್ಯದಲ್ಲಿ ಚಿತ್ರ ಸುರಭಿ, ರೋಟರಿ ಕ್ಲಬ್ ಬೈಂದೂರು, ಜೆ.ಸಿ.ಐ ಉಪ್ಪುಂದ ಹಾಗೂ ಸೌಜನ್ಯ ರಿ. ಬೈಂದೂರು ಆಶ್ರಯದಲ್ಲಿ ಇಲ್ಲಿನ ವಿಶ್ವ ಚಿತ್ರಕಲಾ ದಿನಾಚರಣೆ ಅಂಗವಾಗಿ ರೋಟರಿ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಚಿತ್ರಕಲಾ ಪ್ರದರ್ಶನ ಹಾಗೂ ಸ್ವರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಮಂಜುನಾಥ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಚಿತ್ರಕಲಾವಿದರಾದ ಕೆ.ಬಿ. ಬಡಿಗೇರ್, ಗಿರೀಶ್ ಬೈಂದೂರು ಸುಪ್ರಿತ್ ಆಚಾರ‍್ಯ ಉಪಸ್ಥಿತರಿದ್ದರು. ಭ್ರಮರ ಉಡಪ ಪ್ರಾರ್ಥಿಸಿದರು. ಸೌಜನ್ಯ ರಿ. ಅಧ್ಯಕ್ಷ ಗಣಪತಿ ಹೋಬಳಿದಾರ್ ಸ್ವಾಗತಿಸಿದರು. ಸುರಭಿ ಬೈಂದೂರು ನಿರ್ದೇಶಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗೊಂಬೆಯಾಟ ಎಂದೊಡನೆ ಮೊದಲು ಕೇಳಿ ಬರುವ ಹೆಸರು ಉಪ್ಪಿನಕುದು. ಕಲಾ ಪ್ರಪಂಚಕ್ಕೆ ‘ಗೊಂಬೆಯಾಟ’ ಎನ್ನುವ ವಿಶಿಷ್ಟ ರೀತಿಯ ಕಲೆಯ ಕೊಡುಗೆಯನ್ನು ಕೊಟ್ಟವರು ಉಪ್ಪಿನಕುದ್ರು ಕಾಮತ್ ಮನೆತನದವರು. ಈ ಬೊಂಬೆಯಾಟ ಕಲೆಗೆ ಸುಮಾರು 350 ವರ್ಷಗಳ ಇತಿಹಾಸವಿದೆ. ಇಂದು ಈ ಕಲೆಯನ್ನು ವಿಶ್ವ ವಿಖ್ಯಾತಗೊಳಿಸಿದವರು ಈ ಮನೆತನದ 6ನೇ ತಲೆಮಾರಿನವರಾದ ಭಾಸ್ಕರ್ ಕೊಗ್ಗ ಕಾಮತ್‌ರು. ಸುದೀರ್ಘ ಇತಿಹಾಸ ಇರುವ ಈ ಗೊಂಬೆಯಾಟವು ಈ ಕಲಾ ಜಗತ್ತಿನಲ್ಲಿ ಶಾಶ್ವತವಾಗಿ ಉಳಿಯಬೇಕೆಂಬ ನಿಟ್ಟಿನಲ್ಲಿ ಗೊಂಬೆಯಾಟ ಅಕಾಡೆಮಿಯನ್ನು ನಿರ್ಮಿಸಿ, ತನ್ಮೂಲಕ ನಿರಂತರವಾಗಿ ಕಲಾ ಚಟುವಟಿಕೆಗಳನ್ನು ನಡೆಸುವ ಕನಸು ಕಂಡು ಅದನ್ನು ಸಾಕಾರಗೊಳಿಸಿಕೊಂಡು ಮುನ್ನಡೆಯುತ್ತಿರುವ ಅಂತರಾಷ್ಟ್ರೀಯ ಯಕ್ಷಗಾನ ಗೊಂಬೆಯಾಟ ಕಲಾವಿದ ಭಾಸ್ಕರ್ ಕೊಗ್ಗ ಕಾಮತ್ ಅವರ ಶ್ರಮದ ಫಲ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಗೆ ಇದೀಗ 2ವರ್ಷ ಸಂಭ್ರಮ. ಕುಂದಾಪ್ರ ಡಾಟ್ ಕಾಂ ಸುದ್ದಿ. ಎ.16 ರಂದು ಮಧ್ಯಾಹ್ನ ೨ಕ್ಕೆ ನಡೆಯುವ 2ನೇ ವಾರ್ಷಿಕ ಆಚರಣೆಯ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಾಮಾಜಿಕ ಸಮಾನತೆಗೆ ಶಿಕ್ಷಣವೇ ಮೂಲ ವೇದಿಕೆ, ಆಸ್ಪೃಶ್ಯತೆ ಕಾಲಘಟ್ಟದಲ್ಲಿ ಶಿಕ್ಷಣ ಮೂಲಕ ಸಮಾನತೆ ಸಾಧ್ಯ ಎನ್ನುವುದು ಅಂಬೇಡ್ಕರ್ ನಂಬಿಕೆಯಾಗಿತ್ತು. ಮೇಲೂ, ಕೀಳು ಭಾವನೆ ತೊಳೆದ ಹಾಕಲು ಶಿಕ್ಷಣ ಒಂದೇ ಮಾರ್ಗ. ಪ್ರಸಕ್ತ ಕಾಲಘಟ್ಟದಲ್ಲಿ ಅಲ್ಪಸ್ವಲ್ಪ ಅಸ್ಪೃಶ್ಯತೆ ಇದ್ದರೂ, ಅದನ್ನು ಶಿಕ್ಷಣದ ಮೂಲಕ ನಿವಾರಣೆ ಮಾಡಿಕೊಳ್ಳಬೇಕು ಎಂದು ಕುಂದಾಪುರ ಉಪವಿಭಾಗಾಧಿಕಾರಿ ಶಿಲ್ಪಾ ನಾಗ್ ಸಿ.ಟಿ. ಅಭಿಪ್ರಾಯಪಟ್ಟರು. ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕುಂದಾಪುರ ಶಾಖೆ ಆಶ್ರಯದಲ್ಲಿ ಡಾ.ಬಾಬಾ ಸಾಹೇಬ್ ಆಂಬೇಡ್ಕರ್ ಜನ್ಮ ದಿನಾಚರಣೆ ನಿಮಿತ್ತ ಶುಕ್ರವಾರ ಕುಂದಾಪುರ ಶಾಸ್ತ್ರಿ ವೃತ್ತದಲ್ಲಿ ಹಮ್ಮಿಕೊಂಡ ನಮ್ಮ ಭೂಮಿ, ನಮ್ಮ ಹಕ್ಕು ಜಾಗೃತೆಗಾಗಿ ಹೊರಟ ಜೈ ಭೀಮ್ ರ‍್ಯಾಲಿ ಉದ್ಘಾಟಿಸಿ ಮಾತನಾಡುತ್ತಿದ್ದರು. ಅಂಬೇಡ್ಕರ್ ಶ್ರೇಷ್ಠ ಸಂವಿಧಾನದ ಮೂಲಕ ಸಮಾಜಿಕ ಪರಿರ್ವತೆ ಹರಿಕಾರರಾಗಿದ್ದು, ಪರಿಶಷ್ಟ ಜಾತಿ ಮತ್ತು ಪಂಗಡದ ಮೀಸಲು ಭೂಮಿ ಹಕ್ಕು ನೀಡಲು ತಾಲೂಕ್ ಆಡಳಿತ ಬದ್ದವಾಗಿದೆ ಎಂದು ಹೇಳಿದರು. ಕುಂದಾಪುರ ಪುರಸಭೆ ಉಪಾಧ್ಯಕ್ಷ ರಾಜೇಶ್ ಕಾವೇರಿ, ನಗರಾಭಿವೃದ್ಧಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇದು ಎಸುವಿನ ಕೊನೆಯ ಭೋಜನದ ದಿನವೂ ಆಗಿದೆ ಅಂದು ಎಸು ಮೂರು ಸಂಸ್ಕಾರ ನೇರವೆರಿಸಿದರು, ಒಂದು ರೊಟ್ಟಿಯ (ಪ್ರಸಾದ) ಸಂಸ್ಕಾರ, ಈ ರೊಟ್ಟಿಯ ಮೂಲಕ ತಾನು ನಮ್ಮ ಜೊತೆಗಿರುತ್ತೇನೆಂದು ವಾಗ್ದಾನ ಮಾಡಿದ ದೀನ, ಎರಡನೆಯದು ತನ್ನ ಶಿಸ್ಯರು, ಅನುಯಾಯಿಗಳು ತಾವು ಸೇವೆ ಮಾಡಿಕೊಳ್ಳುವುದಲ್ಲಾ, ಇತರರ ಸೇವೆ ಮಾಡಬೇಕೆಂದು ಭೋದನೆ ಮಾಡಿದ ದಿನ, ಮೂರನೇಯದು ತನ್ನ ಶಿಸ್ಯರನ್ನು ಯಾಜಕರನ್ನಾಗಿ ಮಾಡಿ ಧರ್ಮಗುರುಗಳ ಸಂಸ್ಕಾರ ಆರಂಭಿಸಿದ ದೀನ, ’ನಾನು ಸೇವೆ ಪಡೆಯಲು ಬಂದಿದ್ದಲ್ಲಾ, ನಾನು ಇತರರ ಸೇವೆ ಮಾಡಲು ಬಂದಿದ್ದು’ ಅಂತಾ ಏಸು ನಮಗೆ ಭೋದನೆ ಮಾಡಿದ್ದಾರೆ, ಅದರಂತೆ ಎಸುವಿನ ಹಿಂಬಾಲಾಕರಾದ ನಾವು ದೀನ ದಲಿತರ, ಅಗತ್ಯ ಇರುವರ ಸೇವೆ ಮಾಡಬೇಕೆನ್ನುತ್ತಾ’ ಕುಂದಾಪುರ ಇಗರ್ಜಿಯ ಪ್ರಧಾನ ಗುರು ವಂ.ಅನಿಲ್ ಡಿಸೋಜಾ ಆರಿಸಲ್ಪಟ್ಟ ಸದಸ್ಯರ ಪಾದ ತೊಳೆಯುವ ಸಂಪ್ರದಾಯವನ್ನು ನೇಡೆಸಿಕೊಟ್ಟರು. ಸಹಾಯಕ ಧರ್ಮಗುರು ವಂ. ಜೆರಾಲ್ಡ್ ಸಂದೀಪ್ ಡಿಮೆಲ್ಲೊ ಸಹವರ್ತಿಯಾಗಿ ಈ ಧಾರ್ಮಿಕ ಕ್ರಿಯೆಗಳನ್ನು ನೆಡೆಸಿಕೊಟ್ಟರು

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಡಾ. ಬಿ.ಆರ್. ಅಂಬೇಡ್ಕರ್ ಸಂಘ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮಹಿಳಾ ಘಟಕ ಬೈಂದೂರು ಇದರ ಆಶ್ರಯದಲ್ಲಿ ೨೨ನೇ ವಾರ್ಷಿಕೋತ್ಸವ ಹಾಗೂ ೧೨೬ನೇ ಅಂಬೇಡ್ಕರ್ ಜಯಂತಿ ಇಲ್ಲಿನ ಶಾರದಾ ವೇದಿಕೆಯಲ್ಲಿ ಜರುಗಿತು. ಹಟ್ಟಿಯಂಗಡಿ ನಳಂದಾ ವಿದ್ಯಾಪೀಠದ ಪ್ರಾಂಶುಪಾಲ ಗುರುರಾಜ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಕೆ.ಎಸ್.ಆರ್.ಟಿ.ಸಿ ಅಧ್ಯಕ್ಷ ಕೆ. ಗೋಪಾಲ ಪೂಜಾರಿ, ಬೈಂದೂರು ವೃತ್ತ ನೀರೀಕ್ಷಕ ರಾಘವ ಡಿ. ಪಡೀಲ್, ಶಿರೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಂಜುನಾಥ ಶೆಟ್ಟಿ, ಸವಿತಾ ಸಮಾಜದ ಜಿಲ್ಲಾ ಸಂಘಟಕ ಮಂಜುನಾಥ ಸಾಲಿಯಾನ್,  ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಧರ್ಮದರ್ಶಿ ನರಸಿಂಹ ಹಳಗೇರಿ, ಬೈಂದೂರು ಉಪವಲಯ ಅರಣ್ಯಾಧಿಕಾರಿ ಸದಾಶಿವ ಕೆ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ವಿಕಲಚೇತನ ಕ್ರೀಡಾಪಟುಗಳಾದ ಭುವನಾ ಹಾಗೂ ಮೇಘನಾ ಸಹೋದರಿಯರನ್ನು ಗುರುತಿಸಿ ಗೌರವಿಸಲಾಯಿತು. ಸೇವೆಯಿಂದ ನಿವೃತ್ತರಾದ ಭಾಸ್ಕರ ಪಿ ಹಾಗೂ ಪರಮೇಶ್ವರ ಹಾವಳಿ ಅವರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಲಕ್ಷ್ಮಣ ಯಡ್ತರೆ ಸ್ವಾಗತಿಸಿದರು. ಚೈತ್ರಾ ಯಡ್ತರೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ಇಲ್ಲಿನ ಗಾಂಧಿ ಮೈದಾನದಲ್ಲಿ ಸ್ಥಳೀಯ ಟಾರ್ಪೆಡೋಸ್ ತಂಡದ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯುವ ‘ಟಿಪಿಎಲ್-2017’ ಅಂತರಾಷ್ಟ್ರೀಯ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ ಉದ್ಘಾಟನೆಗೊಂಡಿತು. ಮಾಜಿ ಸಚಿವ ಹಾಗೂ ಶಾಸಕ ಕೆ.ಅಭಯಚಂದ್ರ ಜೈನ್ ಉದ್ಘಾಟಿಸಿ ಮಾತನಾಡಿ ವಿದೇಶದಲ್ಲಿ ಹುಟ್ಟಿದ ಕ್ರಿಕೆಟ್ ಇಂದು ವಿಶ್ವ ವ್ಯಾಪಿಯಾಗಿದೆ. ಎಲ್ಲಾ ವರ್ಗದ ಜನರ ಆಕರ್ಷಣೆಯ ಪಂದ್ಯವಾಗಿರುವ ಕ್ರಿಕೆಟ್ ಹಾಗೂ ಇತರ ಕ್ರೀಡೆಗಳಲ್ಲಿ ನಮ್ಮನ್ನು ತೊಡಗಿಸಿಕೊಳ್ಳುವುದರಿಂದಾಗಿ ದೇಹಕ್ಕೆ ವ್ಯಾಯಾಮದೊಂದಿಗೆ ಇತರರಲ್ಲಿ ಪ್ರೀತಿ ಬೆಳೆಯುತ್ತದೆ ಎಂದರು. ಕ್ರಿಕೆಟ್ ಆಟಕ್ಕೆ ಹೆಸರುವಾಸಿಯಾಗಿದ್ದ ಕುಂದಾಪುರದ ಚಕ್ರವರ್ತಿ ಹಾಗೂ ಟಾರ್ಪೆಡೋಸ್ ಸಂಸ್ಥೆಗಳ ಕ್ರೀಡಾ ಪ್ರೋತ್ಸಾಹ ಶ್ಲಾಘನೀಯ. ವಿದೇಶದಲ್ಲಿ ದುಡಿಯುತ್ತಿರುವ ನಮ್ಮ ಊರಿನ ಯುವಕರನ್ನು ಇಲ್ಲಿ ಸೆಳೆಯುವ ಪ್ರಯತ್ನ ಆಗಿದೆ. ದುಡಿಯುಮೆಯ ಜತೆಯಲ್ಲಿ ಕ್ರಿಕೆಟ್ ಬೆಳೆಸುವ ಯುವಕರ ಪ್ರಯತ್ನಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಅವರು ಹೇಳಿದರು ಕುಂದಾಪುರ ಪುರಸಭೆಯ ಅಧ್ಯಕ್ಷೆ ವಸಂತಿ ಸಾರಂಗ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕುಂದಾಪುರ ಎಜುಕೇಶನ್ ಸೊಸೈಟಿಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕ್ರೀಯಾಶೀಲ ವ್ಯಕ್ತಿತ್ವದ ಯುವಕರ ತಂಡದಿಂದ ಉತ್ತಮ ಕಾರ್ಯಗಳು ಕೈಗೂಡಲಿದೆ. ಮಾಡುವ ಕೆಲಸದಲ್ಲಿ ಶ್ರದ್ಧೆ ಹಾಗೂ ವಿಶ್ವಾಸವಿದ್ದರೆ ಯಶಸ್ಸು ಸದಾ ಹಿಂಬಾಲಿಸಲಿದೆ ಎಂದು ಕುಂದಾಪುರ ಎಜುಕೇಶನ್ ಸೊಸೈಟಿ ಅಧ್ಯಕ್ಷ ಬಿ. ಎಂ. ಸುಕುಮಾರ್ ಶೆಟ್ಟಿ ಹೇಳಿದರು. ಅವರು ವಂಡ್ಸೆಯ ನಿವಾಸದಲ್ಲಿ ಯುವ ಪ್ರತಿಭೆಗಳಾದ ರವೀಂದ್ರ ಶ್ರೀಯಾನ್ ನಿರ್ದೇಶಿಸಿ ಹಾಡಿರುವ, ದಿವ್ಯಾಧರ ಶೆಟ್ಟಿ ಕೆರಾಡಿ ಸಾಹಿತ್ಯ ನೀಡಿರುವ ’ಯಾರೇ ನೀನು’ ಆಲ್ಬಂ ಸಾಂಗ್ ಬಿಡುಗಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಬೈಂದೂರು ಬಿಜೆಪಿ ಕ್ಷೇತ್ರಾಧ್ಯಕ್ಷ ಸದಾನಂದ ಉಪ್ಪಿನಕುದ್ರು ಸಾಂಗ್ ಅಪ್ಲೋಡ್ ಮಾಡಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಸದಾನಂದ ಬಳ್ಕೂರು, ಶರತ್ ಶೆಟ್ಟಿ ಉಪ್ಪುಂದ, ರಾಘವೇಂದ್ರ ನೆಂಪು, ರವಿ ಗಾಣಿಗ, ಸುಹಾಸ್ ಶೆಟ್ಟಿ ಹಾಡಿನಲ್ಲಿ ನಟಿಸಿರುವ ರಾಘುವೇಂದ್ರ ಹುಲಿಕಲ್, ನಿಧಿ ಶೆಣೈ, ಧೀರಜ್ ಡಿಸೋಜ ಮೊದಲಾದವರು ಉಪಸ್ಥಿತರಿದ್ದರು. ಪ್ರದೀಪ್ ಶೆಟ್ಟಿ ಬೆಳ್ಳಾಲ ಕಾರ್ಯಕ್ರಮ ನಿರೂಪಿಸಿದರು. ಸನ್‌ರೈಸ್ ಪ್ರೊಡಕ್ಷನ್ ಸಂಸ್ಥೆಯಿಂದ ನಿರ್ಮಾಣಗೊಂಡಿರುವ ‘ಯಾರೇ ನೀನು’ ಆಲ್ಬಂ ಸಾಂಗ್‌ನ್ನು ರವೀಂದ್ರ…

Read More