ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಕೋಟತಟ್ಟು ಗ್ರಾಮಪಂಚಾಯತ್ ಕೋಟ, ಡಾ.ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ(ರಿ.)ದ ಸಹಭಾಗಿತ್ವದಲ್ಲಿ ಕಳೆದ ಹನ್ನೆರಡು ವರುಷಗಳಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಡಾ.ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರ ನೀಡುತ್ತಾ ಬಂದಿದೆ. ಈಗಾಗಲೇ ಶ್ರೀಯುತರಾದ ವೀರಪ್ಪ ಮೊಯ್ಲಿ, ವೆಂಕಟಾಚಲ , ರಾಮಕೃಷ್ಣ ಹಂದೆ, ರವಿ ಬೆಳಗೆರೆ, ಗಿರೀಶ ಕಾಸರವಳ್ಳಿ, ಜಯಶ್ರೀ, ಮೋಹನ ಆಳ್ವ, ಸಾಲುಮರದ ತಿಮ್ಮಕ್ಕ, ಚಿಟ್ಟಾಣಿ ರಾಮಚಂದ್ರ ಹೆಗಡೆ, ಜಯಂತ ಕಾಯ್ಕಿಣಿ, ಸದಾನಂದ ಸುವರ್ಣ, ಡಾ. ಬಿ.ಎಂ. ಹೆಗ್ಡೆಯವರಿಗೆ ಪ್ರದಾನ ಮಾಡಲಾಗಿರುತ್ತದೆ. ೨೦೧೭ನೇ ಸಾಲಿನಲ್ಲಿ ಸೃಜನಶೀಲತೆ ವ್ಯಕ್ತಿತ್ವದ ಬಹುಭಾಷಾ ನಟ, ನಿರ್ಮಾಪಕ, ನಿರ್ದೇಶಕ ಪ್ರಕಾಶ ರೈ ಅವರನ್ನು ಕಾರಂತ ಹುಟ್ಟೂರ ಪುರಸ್ಕಾರಕ್ಕೆ ಆಯ್ಕೆ ಸಮಿತಿ ಆಯ್ಕೆ ಮಾಡಿದೆ. ಅಕ್ಟೋಬರ್ ೧೦ ರಂದು ಡಾ.ಕೋಟ ಶಿವರಾಮ ಕಾರಂತರ ಹುಟ್ಟುಹಬ್ಬದ ದಿನ ಡಾ.ಕಾರಂತ ಹುಟ್ಟೂರ ಪ್ರಶಸ್ತಿಯನ್ನು ಇವರಿಗೆ ಪ್ರದಾನ ಮಾಡಲಾಗುತ್ತದೆ. ಕಾರಂತರಂತೆ ರಂಗಭೂಮಿ, ಚಲನಚಿತ್ರ, ಸಾಂಸ್ಕೃತಿಕ-ಸಾಹಿತ್ಯಿಕ ಚಿಂತಕ, ಬಹುಭಾಷಾ ನಟ, ನಿಷ್ಠುರ ಗುಣಗಳನ್ನು ಮೈಗೂಡಿಸಿಕೊಂಡ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಾರ್ವಜನಿಕ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಕುಂದಾಪುರದ ಗಾಂಧಿ ಮೈದಾನದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಪದವಿಪೂರ್ವ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಹಾಜಿ.ಕೆ.ಮೊಹಿದ್ದೀನ್ ಬ್ಯಾರಿ ಪಿಯು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಕೊಂಡಿರುತ್ತಾರೆ. (ಸತತ ಮೂರು ವರ್ಷ ಪ್ರಥಮ ಸ್ಥಾನ) ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಹಾಜಿ ಮಾಸ್ಟರ್ ಮೆಹಮ್ಮದ್, ಪ್ರಾಂಶುಪಾಲರಾದ ಡಾ.ಶಮೀರ್, ದೈಹಿಕ ಶಿಕ್ಷಣ ಉಪನ್ಯಾಸಕ ಪ್ರಿತೇಶ್ ಶೆಟ್ಟಿ. ತರಬೇತುದಾರ ಇಲಿಯಾಸ್ ನಾವುಂದ ಹಾಗೂ ಕುಮಾರ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಶಿರೂರಿನ ಗ್ರೀನ್ ವ್ಯಾಲಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕುಂದಾಪುರ ತಾಲೂಕು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಫುಟ್ ಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಗಳಿಸಿದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತಾವು ಪಡೆದ ಟ್ರೋಫಿಯೊಂದಿಗೆ. ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್ ಸಿ ಮತ್ತು ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಶೆಟ್ಟಿ ಉಪಸ್ಥಿತರಿದ್ದಾರೆ. ಇಲ್ಲಿನ ಐದು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿದ್ಯಾರ್ಥಿಗಳಿಗೆ, ಯುವ ಜನರಿಗೆ ಅವರ ಪ್ರತಿಭೆಯ ಪ್ರದರ್ಶನಕ್ಕೆ ಸ್ಪೂರ್ತಿ ನೀಡಿದರೆ ಅವರಿಗೆ ವೇದಿಕೆಗಳಲ್ಲಿ ಅವಕಾಶ ನೀಡಿದರೆ ಅವರು ಭಾಷೆ ಹಾಗೂ ಸಮಾಜದ ಅಭಿವೃದ್ಧಿಗೆ ಶಕ್ತಿಯಾಗುತ್ತಾರೆ. ವಿದ್ಯಾರ್ಥಿಗಳಲ್ಲಿ ಇಂದು ಅಪಾರ ಪ್ರತಿಭೆ ಇದ್ದು, ಅವರಿಗೆ ಪಾಠೇತರ ಉತ್ತಮ ವಿಷಯಗಳಲ್ಲಿ ಆಸಕ್ತಿ ಮೂಡುವಂತೆ ಅವಕಾಶ ನೀಡಿದರು. ವ್ಯಕ್ತಿತ್ವ ವಿಕಸನವಾಗುತ್ತದೆ. ಅವರಿಂದ ಭಾಷೆಯ ಅಭಿವೃದ್ದಿ ಆಗುವಂತೆ ಮಾಡುವ ಪ್ರಯತ್ನ ಆಗಬೇಕಾಗಿದೆ. ಈ ನಿಟ್ಟಿನಲ್ಲಿ ಜೈ ಕೊಂಕಣಿ ಸಂಸ್ಥೆ ಏರ್ಪಡಿಸಿದ ಕೊಂಕಣಿ ವಿದ್ಯಾರ್ಥಿ ಸಮ್ಮೇಳನ ಪ್ರತಿಭಾ ಸಮರ್ಪಣಾ ಸಾರ್ಥಕವಾಗಿದೆ ಎಂದು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಆರ್.ಪಿ.ನಾಯ್ಕ್ ಹೇಳಿದರು. ಕುಂದಾಪುರದ ಸರಕಾರಿ ಪ.ಪೂ.ಕಾಲೇಜಿನ ರೋಟರಿ ಲಕ್ಷ್ಮೀ ನರಸಿಂಹ ಕಲಾ ಮಂದಿರದಲ್ಲಿ ನಡೆದ ಕೊಂಕಣಿ ವಿದ್ಯಾರ್ಥಿ ಸಮ್ಮೇಳನ ಅವರು ಉದ್ಘಾಟಿಸಿ ಮಾತನಾಡುತ್ತಿದ್ದರು. ಶ್ರೇಯಾ ಎಸ್.ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಶೇಟ್ ಜ್ಯುವೆಲ್ಲರ್ ಮಾಲಕ ಬಿ.ಸುಧೀಂದ್ರ ಶೇಟ್ ಪ್ರಧಾನ ಅತಿಥಿಯಾಗಿ ಭಾಗವಹಿಸಿ ಜಾಗಟೆ ಬಾರಿಸಿದರು. ಫ್ಯಾನ್ಸಿಟಾ ಸಮ್ಮೇಳನ ಧ್ವಜ ಹಾರಿಸುವ ಮೂಲಕ ಸಮ್ಮೇಳನಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಸಮುದಾಯ ಕುಂದಾಪುರ ಸಹಯೋಗದೊಂದಿಗೆ ಇತ್ತಿಚಿಗೆ ದುಷ್ಕರ್ಮಿಗಳಿಂದ ಹತ್ಯೆಗೊಳದಾದ ಪತ್ರಕರ್ತೆ ಗೌರಿ ಲಂಕೇಶ್ ಅವರಿಗೆ ನುಡಿನಮನ ಸಲ್ಲಿಸಲಾಯಿತು. ಈ ಸಂದರ್ಭ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಶಿಧರ ಹೆಮ್ಮಾಡಿ, ಸಮುದಾಯ ಕುಂದಾಪುರ ಅಧ್ಯಕ್ಷ ಉದಯ ಗಾಂವ್ಕರ್, ಸಾಹಿತಿ ಎ.ಎಸ್.ಎನ್ ಹೆಬ್ಬಾರ್, ಕಾರ್ಟೂನಿಷ್ಠ್ ಸತೀಶ್ ಆಚಾರ್ಯ, ಪತ್ರಕರ್ತ ರಾಮಕೃಷ್ಣ ಹೇರ್ಳೆ, ಶಿಕ್ಷಕಿ ಅಭಿಲಾಷಾ ಮೊದಲಾದವರು ಕ್ಯಾಂಡಲ್ ಬೆಳಗಿ ನುಡಿನಮನ ಸಲ್ಲಿಸಿದರು. ಕುಂದಾಪುರದ ಸಾಹಿತಿಗಳು, ಪತ್ರಕರ್ತರು, ವಿಚಾರವಾದಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡಲು ಕಾರ್ಯಕರ್ತರು ಶ್ರಮಿಸಬೇಕು. ಪಕ್ಷ ಸಂಘಟನೆ ಹಾಗೂ ಪಕ್ಷ ಬಲವರ್ಧನೆ ಬಗ್ಗೆ ಕಾರ್ಯಕರ್ತರು ಹೆಚ್ಚಿನ ಸಮಯವನ್ನು ನೀಡಬೇಕು. ಜತೆಗೆ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯನ್ನು ಪ್ರತಿಯೊಂದು ಮನೆಗಳಿಗೆ ತಲುಪಿಸುವ ವ್ಯವಸ್ಥೆ ಕಾರ್ಯಕರ್ತರಿಂದ ಆಗಬೇಕು ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಬಿ. ಎಂ. ಸುಕುಮಾರ್ ಶೆಟ್ಟಿ ಹೇಳಿದರು. ಬೈಂದೂರು ವಿಧಾನಸಭಾ ಕ್ಷೇತ್ರದ ಗೋಳಿಹೊಳೆ ಮತ್ತು ಏಳಜಿತ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಶ್ರೀ ಮಹಿಷಮರ್ಧಿನಿ ಸಭಾಂಗಣದಲ್ಲಿ ನಡೆದ ಬಿಜೆಪಿಯ ಗ್ರಾಮಸ್ಪಂದನ ಮತ್ತು ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಭಾರತೀಯ ಜನತಾ ಪಕ್ಷ ಕಾರ್ಯಕರ್ತರ ಪಕ್ಷವಾಗಿ ಬೆಳೆಯುತ್ತಿದೆ. ಓರ್ವ ಸಾಮಾನ್ಯ ಕಾರ್ಯಕರ್ತನೂ ಕೂಡಾ ದೇಶದ ಉನ್ನತ ಹುದ್ದೆಗೇರಲು ಬಿಜೆಪಿಯಲ್ಲಿ ಮಾತ್ರ ಸಾಧ್ಯ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಡಳತ ವೈಖರಿ ಮತ್ತು ದೇಶವನ್ನು ಅಭಿವೃದ್ಧಿಯ ಕಡೆಗೆ ಕೊಂಡೊಯ್ಯುತ್ತಿರುವ ನಿಲುವನ್ನು ಮೆಚ್ಚಿ ಯುವ ಸಮೂಹ ಭಾಜಪದ ಕಡೆಗೆ ಬರುತ್ತಿದೆ. ಕಾಂಗ್ರೆಸ್ನಲ್ಲಿ ಕಾರ್ಯಕರ್ತರ ಮಾತಿಗೆ ಬೆಲೆಯಿಲ್ಲ. ಅಲ್ಲದೇ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕ್ರೀಡೆಯನ್ನು ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಎಲ್ಲಾ ರೀತಿಯ ದೈಹಿಕ ಮತ್ತು ಮಾನಸಿಕ ಪ್ರಗತಿಯಾಗುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಪ್ರತಿಯೊಬ್ಬರೂ ಒಂದಲ್ಲಾ ಒಂದು ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಆರೋಗ್ಯಕರವಾಗಿರಲು ಈ ಕ್ರೀಡೆ ಬಲು ಸಹಕಾರಿ ಎಂದು ಬಸ್ರೂರು ಶಾರದಾ ಕಾಲೇಜಿನ ನಿವೃತ್ತ ಪ್ರಾದ್ಯಾಪಕ ಪ್ರೊ. ಚಂದ್ರಶೇಖರ ಶೆಟ್ಟಿ ವಡ್ಡರ್ಸೆಯವರು ಹೇಳಿದರು. ಅವರು ಸ್ಥಳೀಯ ಆರ್.ಎನ್.ಶೆಟ್ಟಿ ಪದವಿಪೂರ್ವ ಕಾಲೇಜು ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಂಟಿ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಹುಡುಗರ ಹಾಗೂ ಹುಡುಗಿಯರ ವಾಲಿಬಾಲ್ ಪಂದ್ಯಾಟವನ್ನು ದೀಪ ಬೆಳಗಿಸಿ ಉದ್ಘಾಟಿಸುತ್ತಾ ಹೇಳಿದರು. ಇನ್ನೊರ್ವ ಮುಖ್ಯ ಅತಿಥಿ ತಾಲೂಕು ಯುವ ಸಬಲೀಕರಣ ಹಾಗೂ ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿಯವರು ಮಾತನಾಡುತ್ತಾ ಆರೋಗ್ಯವಂತರಾಗಿರಲು ಈ ಕ್ರೀಡೆ ಬಲು ಸಹಕಾರಿ ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಕುಂದಾಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾದ ಬಿ.ಎಂ. ಸುಕುಮಾರ ಶೆಟ್ಟಿಯವರು ಮಾತನಾಡಿ ನಮ್ಮೆಲ್ಲಾ ಸಂಸ್ಥೆಗಳು ಪಾಠ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ಸಮಾನವಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಸೂಕ್ತ ವೇದಿಕೆ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಇಲಾಖೆ ಪ್ರತಿಭಾ ಕಾರಂಜಿಯಂತಹ ವಿನೂತನ ಕಾರ್ಯಕ್ರಮವನ್ನು ಕಳೆದ ಹದಿನೈದು ವರ್ಷಗಳಿಂದ ಸಂಘಟಿಸುತ್ತಿದ್ದು, ಈ ಕರಾವಳಿ ಮಣ್ಣಿನ ಪ್ರತಿಭಾವಂತ ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಪಂ ಸದಸ್ಯ ಸುರೇಶ ಬಟ್ವಾಡಿ ಹೇಳಿದರು. ಉಡುಪಿ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವಶಿಕ್ಷಣ ಅಭಿಯಾನದ ಆಶ್ರಯದಲ್ಲಿ ಶಿರೂರು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿ-ಕಲೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಈ ಹಿಂದೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ಅನಾವರಣಗೊಳಿಸಲು ಸೂಕ್ತ ವೇದಿಕೆ ಸಿಗದೇ ಅವರ ಪ್ರತಿಭೆ ಕಮರಿ ಹೋಗುತ್ತಿತ್ತು, ಆದರೆ ಈಗ ವಿದ್ಯಾರ್ಥಿಗಳಿಗೆ ಸಾಕಷ್ಟು ಅವಕಾಶಗಳು ದೊರಕುತ್ತಿದೆ. ಈ ನೆಲೆಯಲ್ಲಿ ಇದು ಕೇವಲ ಭಾಷಣಕ್ಕೆ ಸೀಮಿತವಾದ ವೇದಿಕೆಯಾಗದೇ ಸಾಂಸ್ಕೃತಿಕ ಹಾಗೂ ಸಾಹಿತ್ಯಿಕವಾಗಿ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಳ್ಳುವಲ್ಲಿ ಪರಿಪೂರ್ಣತೆ ಕಾಣಬೇಕು ಎಂದರು. ಜಿಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರೀ ನಾರಾಯಣ ಗುರುಗಳ ೧೬೩ನೇ ಜನ್ಮ ದಿನಾಚರಣೆಯನ್ನು ಅರ್ಥಗರ್ಬಿತವಾಗಿ ಆಚರಿಸಲಾಯಿತು. ಶ್ರೀ ಗುರುಗಳ ಶ್ರೀರಕ್ಷೆ ಬೇಡುತ್ತಾ ಪುಷ್ಪ ನಮನ ಸಲ್ಲಿಸಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಗೋವಿಂದರಾಜು ಇವರನ್ನು ಸನ್ಮಾನಿಸಲಾಯಿತು. ಈ ಸಮಾರಂಭದಲ್ಲಿ ಶಾಲೆಯ ಸಂಸ್ಥಾಪಕರಾದ ಡಾ|. ಎನ್.ಕೆ.ಬಿಲ್ಲವ ಸಭಾಧ್ಯಕ್ಷತೆ ವಹಿಸಿ ಶ್ರೀ ಗುರುಗಳನ್ನು ಸ್ಮರಿಸಿ ಗುರುಗಳ ಜೀವನ ಶೈಲಿಯನ್ನು ತಿಳಿಸಿದರು. ಈ ಸಭೆಯಲ್ಲಿ ಗೋಪಾಲ ಕೆ. ಪೂಜಾರಿ ಗೌರವಾಧ್ಯಕ್ಷರು ಬಿಲ್ಲವ ಸಮಾಜ ಸೇವ ಸಂಘ ನಾವುಂದ, ಶೇಖರ ಪೂಜಾರಿ ಉಪಾಧ್ಯಕ್ಷರು. ಶ್ರೀ ಗುರು ನಿತ್ಯಾನಂದ ಕೋ. ಆಪರೇಟಿವ್ ಸೊಸೈಟಿ ಅರೆಹೊಳೆ, ಸುರೇಶ್ ಪೂಜಾರಿ ನಿರ್ದೇಶಕರು ಶ್ರೀ ಗುರು ನಿತ್ಯಾನಂದ ಕೋ. ಆಪರೇಟಿವ್ ಸೊಸೈಟಿ ಅರೆಹೊಳೆ, ಸಾವಿತ್ರಿ ನಿರ್ದೇಶಕರು ಶ್ರೀ ಗುರು ನಿತ್ಯಾನಂದ ಕೋ. ಆಪರೇಟಿವ್ ಸೊಸೈಟಿ ಅರೆಹೊಳೆ, ಶಂಕರ ಪೂಜಾರಿ ಸಂಚಾಲಕರು ಹಾಗೂ ಅರುಣ ಬಿ ಪೂಜಾರಿ ಆಡಳಿತಾಧಿಕಾರಿ ಶುಭದಾ ಶಾಲೆಗಳು ಕಿರಿಮಂಜೇಶ್ವರ. ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶ್ರೀ ಗೋವಿಂದರಾಜು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಬೆಳವಣಿಗೆ ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಬಿಡುವಿನ ವೇಳೆಯಲ್ಲಿ ತಮಗೆ ಆಸಕ್ತಿ ಇರುವ ಕ್ರೀಡೆಗಳಲ್ಲಿ ಭಾಗವಹಿಸಬೇಕು. ಮೊಬೈಲ್ ಹಾಗೂ ಟಿವಿ ಮಾಧ್ಯಮದಿಂದ ವಿದ್ಯಾರ್ಥಿಗಳಲ್ಲಿ ಕ್ರೀಡೆ ಬಗ್ಗೆ ಆಸಕ್ತಿ ಕ್ಷೀಣಿಸುತ್ತಿದ್ದು, ಇದೇ ಪರಿಸ್ಥಿತಿ ಮುಂದುವರಿದರೆ ಅನೇಕ ಕ್ರೀಡೆಗಳು ನಶಿಸಿ ಹೋಗುವ ಸಾಧ್ಯತೆ ಇದೆ. ಆದ್ದರಿಂದ ಶಾಲಾ ಕಾಲೇಜುಗಳಲ್ಲಿ ಹೆಚ್ಚೆಚ್ಚು ಕ್ರೀಡಾ ಚಟುವಟಿಕೆಗಳನ್ನು ನಿರಂತರವಾಗಿ ನಡೆಸಿ ಮಕ್ಕಳನ್ನು ಈ ಕ್ಷೇತ್ರದಲ್ಲಿ ಬೆಳೆಸಬೇಕು ಎಂದು ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ. ಪುತ್ರನ್ ಹೇಳಿದರು. ಅವರು ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಮತ್ತು ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಜಂಟಿ ಆಶ್ರಯದಲ್ಲಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕುಂದಾಪುರ ವಲಯ ಮಟ್ಟದ ಬಾಲಕರ ಹಾಗೂ ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು. ಜಿಎಸ್ವಿಎಸ್ ಅಸೋಶಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ…
