Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮರವಂತೆ ಸರಕಾರಿ ಹಿರಿಯ ಪರಾಥಮಿಕ ಶಾಲೆಯಲ್ಲಿ ೭ ದಿನ ನಡೆದ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ನಡೆಯಿತು. ಕುಂದಾಪುರ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸುಬ್ರಹ್ಮಣ್ಯ ಜೋಷಿ ಸಮಾರೋಪ ಭಾಷಣ ಮಾಡಿದರು. ’ಮಕ್ಕಳ ಮುಗ್ಧತೆ ಒಂದು ಸಂಪತ್ತು. ಅದನ್ನು ಯಾವತ್ತೂ ಕಳೆದುಕೊಳ್ಳಬಾರದು. ಕೀಳರಿಮೆಯಿಂದ ಮುಕ್ತರಾಗಿ, ಕರ್ತವ್ಯ ಪ್ರಜ್ಞೆ ಬೆಳೆಸಿಕೊಂಡು, ಭವಿಷ್ಯದ ಬಗ್ಗೆ ಚಿಂತಿಸಿ ಕಾರ್ಯಪ್ರವೃತ್ತರಾದರೆ ಬದುಕಿನಲ್ಲಿ ಯಶಸ್ಸು ಖಚಿತ’ ಎಂದು ಅವರು ಹೇಳಿದರು. ಪ್ರಾಂಶುಪಾಲ ಕವಿತಾ ಎಂ. ಸಿ. ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿದ್ದ ತಾಲೂಕು ಪಂಚಾಯತ್ ಸದಸ್ಯ ರಾಜು ದೇವಾಡಿಗ, ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಿತಾ ಆರ್. ಕೆ, ನಿವೃತ್ತ ಪ್ರಾಂಶುಪಾಲ ಎಂ. ಶಂಕರ ಖಾರ್ವಿ, ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ, ಕಾಲೇಜು ಆಡಳಿತ ಸಮಿತಿಯ ಕಾರ್ಯದರ್ಶಿ ಎನ್. ಸದಾಶಿವ ನಾಯಕ್ ಶುಭ ಹಾರೈಸಿದರು. ರಾಜ್ಯಶಾಸ್ತ್ರ ಉಪನ್ಯಾಸಕ ಅರುಣಕುಮಾರ ಸ್ವಾಗತಿಸಿದರು. ಶಿಬಿರಾರ್ಥಿ ನಾಗರಾಜ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಾಜ್ಯದ 16 ಒಕ್ಕೂಟಗಳಲ್ಲಿಯೇ ದ.ಕ. ಹಾಲು ಉತ್ಪಾದಕರ ಒಕ್ಕೂಟ ರಾಜ್ಯದಲ್ಲಿ ದಾಖಲೆ ಪ್ರಮಾಣದ ಹಾಲು ಸಂಗ್ರಹಿಸುತ್ತಿದ್ದು ಈವರೆಗೂ ಪ್ರಥಮ ಸ್ಥಾನ ಕಾಯ್ದುಕೊಂಡಿದೆ ಎಂದು ದ.ಕ.ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೊಡವೂರು ರವಿರಾಜ್ ಹೆಗ್ಡೆ ಹೇಳಿದರು. ಗೋಳಿಹೊಳೆ ಗ್ರಾಪಂ ವ್ಯಾಪ್ತಿಯಲ್ಲಿ ಒಕ್ಕೂಟದ ೬೯೨ನೇ ಶಾಖೆಯಾದ ಅರೆಶಿರೂರು ಹಾಲು ಉತ್ಪಾದಕರ ಸಹಕಾರ ಸಂಘ ಉದ್ಘಾಟಿಸಿ ಮಾತನಾಡಿದರು. ಮಿಶ್ರತಳಿಯ ಹಸುಗಳನ್ನು ಸಾಕಿ ಆಧುನಿಕ ವಿಧಿವಿಧಾನಗಳಿಂದ ಹೈನುಗಾರಿಕೆಯಲ್ಲಿ ಹೆಚ್ಚಿನ ಲಾಭಗಳಿಸಲು ಸಾಧ್ಯವಾಗುತ್ತದೆ. ಸಂಘದಲ್ಲಿ ಬಂದ ಲಾಭಾಂಶದಲ್ಲಿ ಡಿವಿಡೆಂಟ್, ಬೋನಸ್ ಮೂಲಕ ಸದಸ್ಯರಿಗೆ ಕೊಡಲಾಗುತ್ತಿದೆ. ಹೈನುಗಾರಿಕೆ ಲಾಭದಾಯಿಕ ಕೃಷಿಯಾಗಿದ್ದು, ಗ್ರಾಮೀಣ ಭಾಗದ ಜನರ ಜೀವನಮಟ್ಟವನ್ನು ಆರ್ಥಿಕವಾಗಿ ಹೆಚ್ಚಿಸಲು ಸಹಕಾರಿಯಾಗುತ್ತದೆ ಎಂದರು. ಬಸ್ರೂರು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ. ಅಪ್ಪಣ್ಣ ಹೆಗ್ಡೆ ಂಘದ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿ ನಮ್ಮ ತಾಲೂಕಿನಲ್ಲಿ ಪ್ರತಿದಿನ ನಗರಗಳಿಂದ ೧.೨೦ ಕೋಟಿ ರೂಪಾಯಿ ಹಾಲಿನ ಲಾಭಾಂಶದ ಮೂಲಕ ಹಳ್ಳಿಗಳಿಗೆ ಬರುತ್ತದೆ. ವಿಪರ್ಯಾಸವೆಂದರೆ ನಮ್ಮಲ್ಲಿ ಪ್ರತಿದಿನ ೨.೪೦ ಕೋಟಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿದ್ಯಾರ್ಥಿ ಜೀವನ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯ, ನಿರಂತರವಾಗಿ ಭಾಗವಹಿಸಲು ಅಪೂರ್ವ ಅವಕಾಶ ಒದಗಿಸುವ ಒಂದು ಸುವರ್ಣ ಘಟ್ಟವಾಗಿದೆ. ಗ್ರಾಮೀಣ ಪರಿಸರದ ಕ್ರೀಡಾ ಪ್ರತಿಭೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರಕಾರದ ಇಲಾಖೆಗಳು ಆದ್ಯತೆಯ ಮೇರೆಗೆ ಕಾರ್ಯನಿರ್ವಹಿಸಬೇಕಾಗಿದೆ. ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನ ಓದು, ಕಲಿಕೆಯ ಬಗೆಗೂ ಗಮನಹರಿಸಿ, ಸಮಯ ನೀಡಬೇಕಾದುದು ಅತ್ಯವಶ್ಯ ಎಂದು ಬೆಂಗಳೂರು ಡೆಂಟಲ್ ಲ್ಯಾಬ್ ಮತ್ತು ಕ್ಲಿನಿಕ್ ವ್ಯವಸ್ಥಾಪಕ ನಿರ್ದೇಶಕ ಬಸ್ರೂರು ಗಣೇಶ್ ಪಡಿಯಾರ್ ಅಭಿಪ್ರಾಯಪಟ್ಟರು. ಬಸ್ರೂರು ಶ್ರೀ ಶಾರದಾ ಕಾಲೇಜು ಆಶ್ರಯದಲ್ಲಿ ಕಾಲೇಜ್ ಕ್ರೀಡಾಂಗಣದಲ್ಲಿ ಗುರುವಾರ ದಿಂದ ನಡೆಯುತ್ತಿರುವ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಅಂತರ್ ಕಾಲೇಜ್ ಮಟ್ಟದ ವಾಲಿಬಾಲ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿ, ವಿಜೇತ ತಂಡಗಳಿಗೆ ಬಹುಮಾನವಾಗಿ ಐವತ್ತು ಸಾವಿರ ರೂ ನಗದು ಬಹುಮಾನ ಘೋಷಿಸಿದರು. ಕಾಲೇಜು ಸಂಚಾಲಕ ಬಿ. ಅಪ್ಪಣ್ಣ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ನಿರ್ದೇಶಕರ ಸಂಘ ಅಧ್ಯಕ್ಷ ವೇಣುಗೋಪಾಲ ನೊಂಡ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬಿಜೂರು ಮಕ್ಕಿದೇವಸ್ಥಾನದ ಮಹಾಲಿಂಗೇಶ್ವರ ಯಕ್ಷಗಾನ ಕಲಾಮಂಡಳಿಯ ಆಶ್ರಯದಲ್ಲಿ ನಾಗೂರಿನಲ್ಲಿ ಯಕ್ಷೋತ್ಸವ-೨೦೧೬ ಪ್ರಸ್ತುತಗೊಂಡಿತು. ಅಲ್ಲಿನ ಸಂದೀಪನ್ ಶಾಲೆಯ ಆವರಣದಲ್ಲಿ ನಡೆದ ಈ ಅದ್ದೂರಿಯ ಕಾರ್ಯಕ್ರಮವನ್ನು ಕಿರುತೆರೆಯ ನಟಿ ತಳಕಾಲ್‌ಕೊಪ್ಪದ ಅನುಜ್ಞಾ ಪಿ. ರಾವ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಯಕ್ಷಗಾನವು ಜೀವಂತ ಕಲೆಯಾಗಿರುವುದರಿಂದ ಅದನ್ನು ಸಿನಿಮಾದೊಂದಿಗೆ ಹೋಲಿಸಲಾಗದು. ಸಿನಿಮಾ ತಯಾರಿ ಹಂತದಲ್ಲಿ ಅದರ ಯಾವುದೇ ವಿಭಾಗದಲ್ಲಿ ನುಸುಳುವ ದೋಷವನ್ನು ಪ್ರದರ್ಶನಪೂರ್ವದಲ್ಲಿ ಸರಿಪಡಿಸಬಹುದು. ಯಕ್ಷಗಾನದಲ್ಲಿ ಅದು ಸಾಧ್ಯವಿಲ್ಲವಾದ್ದರಿಂದ ಅದರಲ್ಲಿ ಪಾತ್ರ ನಿರ್ವಹಿಸುವವರು ಉತ್ಕೃಷ್ಟ ಸಾಧನೆ ಮಾಡಬೇಕಾಗುತ್ತದೆ. ಯಕ್ಷಗಾನ ಶ್ರೀಮಂತ ಕಲೆಯಾದುದರಿಂದ ಅದರ ಪರಂಪರೆಗೆ ಚ್ಯುತಿ ಬರದಂತೆ ಉಳಿಸಿಕೊಳ್ಳಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಸಂದೀಪನ್ ಶಾಲೆಯ ಮುಖ್ಯೋಪಾಧ್ಯಾಯ ಬಿ. ವಿಶ್ವೇಶ್ವರ ಅಡಿಗ ಯಕ್ಷಗಾನದ ಪುರಾಣ ಪ್ರಸಂಗಗಳು ಎಲ್ಲ ಕಾಲಕ್ಕೂ ಅನ್ವಯವಾಗುತ್ತವೆ. ಇಂದು ಪ್ರದರ್ಶನಗೊಳ್ಳುವ ವೀರ ಅಭಿಮನ್ಯು ದೇಶದ ರಕ್ಷಣೆಗೆ ಹುತಾತ್ಮರಾಗುವ ಯೋಧರ ತ್ಯಾಗವನ್ನು ನೆನಪಿಸುತ್ತದೆ ಎಂದರು. ಮಂಗಳೂರಿನ ಸುಧಾಕರ ಸಾಲಿಯಾನ್ ಮತ್ತು ಡಾ. ಗುರುರಾಜ ಭಟ್ಟ ಶುಭ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ನಾಡದೋಣಿ ಮೀನುಗಾರರಿಗೆ ಸೀಮೆಎಣ್ಣೆಯ ಸಬ್ಸಿಡಿಯನ್ನು ಬಿಡುಗಡೆಗೊಳಿಸಿದ ರಾಜ್ಯ ಸರಕಾರಕ್ಕೆ ಕುಂದಾಪುರ ತಾಲೂಕು ಸಾಂಪ್ರದಾಯಿಕ ನಾಡದೋಣಿ ಮೀನುಗಾರ ಒಕ್ಕೂಟ ಅಭಿನಂದನೆ ಸಲ್ಲಿಸಿದ್ದಾರೆ. ಮೀನುಗಾರರಿಗೆ ಸೀಮೆಎಣ್ಣೆ ಸಬ್ಸಿಡಿ ಬಿಡುಗಡೆಗೊಳಿಸಲು ಸಹಕರಿಸಿದ ರಾಜ್ಯದ ಮೀನುಗಾರಿಕಾ ಸಚಿವ ಪ್ರಮೋದ ಮಧ್ವರಾಜ್, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಯು.ಟಿ.ಖಾದರ್, ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ಅವರನ್ನು ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಎಚ್.ಮಂಜು ಬಿಲ್ಲವ, ಉಪ್ಪುಂದ ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಕೆ.ಸೋಮಶೇಖರ ಖಾರ್ವಿ, ಶಿರೂರು ವಲಯ ಅಲ್ಪಸಂಖ್ಯಾತ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಕಬ್ಸಿ ಮಹಮ್ಮದ್, ಶಿರೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ನಾಗಪ್ಪ ಮೊಗವೀರ ಹಾಗೂ ನಾಡದೋಣಿ ಮೀನುಗಾರರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮನಃಶಾಸ್ತ್ರ ವಿಭಾಗದ ವತಿಯಿಂದ ಅಂತರಾಷ್ಟ್ರೀಯ ಮಾನಸಿಕ ಆರೋಗ್ಯ ದಿನಾಚರಣೆ ನಡೆಯಿತು. ಭಂಡಾರ್ಕಾರ್ಸ್ ಪದವಿ ಕಾಲೇಜು ಪ್ರಾಂಶುಪಾಲ ಡಾ. ಎನ್. ಪಿ.ನಾರಾಯಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಎ.ವಿ.ಬಾಳಿಗಾ ಆಸ್ಪತ್ರೆಯ ಆಪ್ತಸಮಾಲೋಚಕ ಬಿ.ಎಸ್.ಮಹೇಶ್, ಮನಃಶಾಸ್ತ್ರ ವಿಭಾಗದ ಮುಖ್ಯಸ್ಥೆ ಸವಿತಾ ಕೆ. ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗ ಆಶ್ರಯದಲ್ಲಿ ರಾಷ್ಟ್ರಮಟ್ಟದ ಕಂಪ್ಯೂಟರ್ ನೆಟ್‌ವರ್ಕಿಂಗ್ ಕಾರ್ಯಗಾರ ನಡೆಯಿತು. ಹೈದ್ರಾಬಾದ್ ಐಐಟಿ ಪ್ರತಿನಿಧಿ ಸೀನಿಯರ್ ನೆಟ್‌ವರ್ಕ ಇಂಜಿನಿಯರ್ ನೀರಜ್ ಕುಮಾರ್ ಉದ್ಘಾಟಿಸಿ, ಇಂದಿನ ತಾಂತ್ರಿಕ ಯುಗದಲ್ಲಿ ವಿದ್ಯಾರ್ಥಿಗಳು ಪ್ರಾಯೋಗಿಕ ಜ್ಞಾನದಿಂದ ತಂತ್ರಜ್ಞಾನದ ವಿಷಯ ಅರ್ಥಮಾಡಿಕೊಳ್ಳುವ ಅವಶ್ಯಕತೆ ಇದ್ದು, ಇಂಜಿನಿಯರಿಂಗ್ ಶಿಕ್ಷಣದಿಂದ ಕಷ್ಟಕರ ಎನ್ನುವ ಎಲ್ಲಾ ಸಮಸ್ಯೆಗಳಿಗೆ ಸುಲಭವಾಗಿ ಪರಿಹಾರ ಕಂಡು ಹಿಡಿಯಲು ಸಾದ್ಯ ಎಂದು ಹೇಳಿದರು. ಕಾಲೇಜು ಪ್ರಾಂಶುಪಾಲ ಡಾ. ಮೋಹನ್ ದಾಸ್ ಭಟ್ ಅಧ್ಯಕ್ಷತೆ ವಹಸಿ, ಯಾವುದೇ ಕಾಲೇಜು ಪ್ರಗತಿ ಹೊಂದಬೇಕಾದರೆ ಚಟುವಟಿಕೆಗಳು ಪ್ರಧಾನ ಪಾತ್ರವಹಿಸುತ್ತದೆ. ವಿದ್ಯಾರ್ಥಿಗಳು ಪುಸ್ತಕದಲ್ಲಿನ ವಿಷಯಗಳಿಗೆ ಮಾತ್ರ ಸೀಮಿತವಾಗಿರದೆ, ತಾಂತ್ರಿಕ ಕೇತ್ರದಲ್ಲಿನ ಎಲ್ಲಾ ವಿಷಯಗಳ ಜ್ಞಾನವನ್ನು ಪಡೆದು ಕೊಳ್ಳಬೇಕಾಗಿ ಸಲಹೆ ನೀಡಿದರು ಮೂಡ್ಲಕಟ್ಟೆ ವಿದ್ಯಾಲಯವು ಐ.ಐ.ಟಿ ಹೈದಾಬಾದ್ ಮತ್ತು ಐ.ಐ.ಟಿ ಭುವನೇಶ್ವರ್ ನಡೆಸುವ ಕಾರ‍್ಯಗಾರದ ವಲಯ ಕೇಂದ್ರವಾಗಿ ಆಯ್ಕೆಗಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಕಾರ‍್ಯಾಗಾರಗಳನ್ನು ನಡೆಸಿ ವಿದ್ಯಾರ್ಥಿಗಳ ಪ್ರಾಯೋಗಿಕ ಜ್ಞಾನವನ್ನು ವೃದ್ಧಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಕೊಲ್ಲೂರು ಗ್ರಾಪಂ ಮಾಜಿ ಉಪಾಧ್ಯಕ್ಷ ಉದಯ್ ಶೇರುಗಾರ್ ಅವರ ಮೇಲೆ ಕೊಲ್ಲೂರಿನ ದಳಿ ಎಂಬಲ್ಲಿ ಮಾರಣಾಂತಿಕ ಹಲ್ಲೆ ನಡೆಸಿ, ನಗದು ದೋಚಿ ಪರಾರಿಯಾಗಿದ್ದ ದುಷ್ಕರ್ಮಿಗಳ ಪೈಕಿ ಈರ್ವರನ್ನು ಅದೇ ದಿನ ರಾತ್ರಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಘಟನೆಯ ವಿವರ: ಬೈಕಿನಲ್ಲಿ ಕೊಲ್ಲೂರಿನಿಂದ ಸುಬ್ಬರಸನ ತೊಪ್ಲುವಿನ ಮನೆಗೆ ತೆರಳುತ್ತಿದ್ದ ಉದಯ ಶೇರುಗಾರ್ ಅವರನ್ನು ಕೊಲ್ಲೂರು-ಶಿವಮೊಗ್ಗ ರಾಜ್ಯ ಹೆದ್ದಾರಿಯ ದಳಿಯ ಎಂಬಲ್ಲಿ ಇನ್ನೋವಾ ಕಾರಿನಲ್ಲಿ ಬಂದ ದರೋಡೆಕೋರರ ತಂಡವೊಂದು ಅಡ್ಡಗಟ್ಟಿ ಕಣ್ಣಿಗೆ ಮೆಣಸಿನ ಪುಡಿ ಎರಚಿ ರಾಡ್‌ನಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿತ್ತು. ಬಳಿಕ ಉದಯ್ ಅವರ ಬೈಕ್ ಕೀ, ಸುಮಾರು ರೂ.8 ಸಾವಿರ ಬೆಲೆಯ ಮೊಬೈಲ್ ಮತ್ತು ನಗದು ಒಂದು ಸಾವಿರ ಕಸಿದುಕೊಂಡಿದ್ದ ದಷ್ಕರ್ಮಿಗಳು ಅದೇ ಮಾರ್ಗದಲ್ಲಿ ಬಂದ ಜೀಪನ್ನು ನೋಡಿ ಅಲ್ಲಿಂದ ಪರಾರಿಯಾಗಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ. ಘಟನೆಯ ಬಗ್ಗೆ ದೂರು ದಾಖಲಿಸಿಕೊಂಡ ಕೊಲ್ಲೂರು ಪೊಲೀಸರು ವೃತ್ತ ನಿರೀಕ್ಷಕ ರಾಘವ ಪಡೀಲ್ ಮಾರ್ಗದರ್ಶನಲ್ಲಿ ಕೊಲ್ಲೂರು ಠಾಣಾಧಿಕಾರಿ ಶೇಖರ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ನಮ್ಮ ನಮ್ಮಲ್ಲಿನ ಜಾತಿ ತಾರತಮ್ಯವನ್ನು ಹೋಗಲಾಡಿಸಿ ಭಗವದ್ಗೀತೆಯನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಏಕತೆಯಿಂದ ನೆಮ್ಮದಿಯ ಜೀವನ ನಡೆಸಲು ಪ್ರಯತ್ನಿಸಬೇಕು. ನಮ್ಮ ಸಮೃದ್ಧ ಜೀವನಕ್ಕೆ ಬೇಕಾಗುವ ಎಲ್ಲಾ ವಿಷಯಗಳನ್ನು ಹಾಗೂ ಸದ್ವಿಚಾರಗಳನ್ನು ಹೊಂದಿರುವ ಹಿಂದುಗಳ ಪರಮ ಪವಿತ್ರವಾದ ಭಗವದ್ಗೀತೆ ಎಲ್ಲರ ಮನೆ ಮನಗಳಲ್ಲಿ ನೆಲೆಸುವಂತಾಗಬೇಕು ಎಂದು ಗಂಗೊಳ್ಳಿಯ ಉದ್ಯಮಿ ಜಿ.ವಿಠಲ ಭಾಸ್ಕರ ಶೆಣೈ ಹೇಳಿದರು. ಅವರು ಗಂಗೊಳ್ಳಿಯ ಮಲ್ಯರಬೆಟ್ಟು ಶ್ರೀ ಜಟ್ಟಿಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವೃತಾಚರಣೆ ಸಮಿತಿ ಆಶ್ರಯದಲ್ಲಿ ಆಯೋಜಿಸಿದ್ದ ಭಗವದ್ಗೀತಾ ಅಭಿಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಧಾರ್ಮಿಕ ಚಿಂತಕ ಮಂಗೇಶ ಶೆಣೈ ಅವರು ಭಗವದ್ಗೀತೆಯ ಮಹಿಮೆ ಮತ್ತು ಅದನ್ನು ಪಠಿಸುವ ಬಗ್ಗೆ ಪ್ರವಚನ ನೀಡಿದರು. ವರಮಹಾಲಕ್ಷ್ಮೀ ವೃತಾಚರಣೆ ಸಮಿತಿ ಅಧ್ಯಕ್ಷೆ ಅನಿತಾ ಪುಂಡಲೀಕ ಖಾರ್ವಿ, ಕಾರ್ಯದರ್ಶಿ ಜಯಂತಿ ಹರೀಶ ಖಾರ್ವಿ, ಜತೆ ಕಾರ್ಯದರ್ಶಿ ಸಾವಿತ್ರಿ ಖಾರ್ವಿ ಹಾಗೂ ವರಮಹಾಲಕ್ಷ್ಮೀ ವೃತಾಚರಣೆ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಜಿ.ವಿಠಲ ಶೆಣೈ ಕಾರ್ಯಕ್ರಮ ಆಯೋಜಿಸಿದ್ದರು. ದೇವಳದ ಆಡಳಿತ ಮಂಡಳಿಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಾಂತಿ ಸೌಹಾರ್ದತೆಗೆ ಹೆಸರಾಗಿರುವ ಆನಗಳ್ಳಿ ಗ್ರಾಮದ ಬಗ್ಗೆ ಸಾರ್ವಜನಿಕರಲ್ಲಿ ಗೊಂದಲ ಉಂಟಾಗುವಂತ ಹೇಳಿಕೆ ನೀಡಿರುವ ರಂಗಕರ್ಮಿ ಸುರೇಶ ಆನಗಳ್ಳಿ ಅವರು ಸಾರ್ವಜನಿಕ ಕ್ಷಮೆ ಕೇಳಬೇಕು ಎಂದು ಆನಗಳ್ಳಿ ಗ್ರಾಮಸ್ಥ ಭಾಸ್ಕರ ಬಿಲ್ಲವ ಹೇಳಿದ್ದಾರೆ. ಕುಂದಾಪುರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುರೇಶ ಆನಗಳ್ಳಿ ಅವರು ಅವರ ಸೋದರನ ಮೇಲೆ ನಡೆದಿರುವ ಹಲ್ಲೆಯನ್ನು ಮುಂದಿಟ್ಟುಕೊಂಡು ಆನಗಳ್ಳಿ ಗ್ರಾಮಕ್ಕೆ ಕೆಟ್ಟ ಹೆಸರು ಕಟ್ಟುವುದು ಸರಿಯಲ್ಲ. ವೈಯಕ್ತಿಕ ವಿಚಾರವನ್ನಿಟ್ಟುಕೊಂಡು ಈ ರೀತಿ ಗೊಂದಲಕಾರಿ ಹೇಳಿಕೆ ನೀಡುವುದು ಸರಿಯಲ್ಲ . ಅವರಿಗೆ ಅನ್ಯಾಯವಾಗಿದ್ದರೆ ಕಾನೂನು ಹೋರಾಟ ನಡೆಸಲಿ. ಅದು ಬಿಟ್ಟು ಆನಗಳ್ಳಿ ಗ್ರಾಮದ ಬಗ್ಗೆ, ಜನಪ್ರತಿನಿಧಿಗಳ ಬಗ್ಗೆ ಕೆಟ್ಟದ್ದಾಗಿ ಮಾತನಾಡಬಾರದು ಎಂದರು. ಕುಂದಾಪ್ರ ಡಾಟ್ ಕಾಂ ಸುದ್ದಿ. ಕೆ.ಎಂ.ಗೋಪಾಲ ಮಾತನಾಡಿ ಆನಗಳ್ಳಿಯಲ್ಲಿ ನಾವು ಗೂಂಡಸಂಸ್ಕೃತಿ ಕಂಡಿಲ್ಲ. ಕಪೋಲಕಲ್ಪನೆಯ ವಿಚಾರಗಳನ್ನು ಇಟ್ಟುಕೊಂಡು, ಗ್ರಾಮದ ಬಗ್ಗೆ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ ಎಂದು ಇಲ್ಲಸಲ್ಲದ ಹೇಳಿಕೆ…

Read More