Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಿವೃತ್ತ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಐ. ವಸಂತಕುಮಾರಿ (೭೧) ಅಲ್ಪಕಾಲದ ಅಸ್ವಾಸ್ಥ್ಯದ ಕಾರಣ ಗುರುವಾರ ಬೆಂಗಳೂರಿನ ಅಪೊಲೊ ಆಸ್ಪತ್ರೆಯಲ್ಲಿ ನಿಧನರಾದರು. ಕನ್ನಡ ಪಂಡಿತ ಐರೋಡಿ ಯಜ್ಞನಾರಾಯಣ ಉಡುಪ-ಸಾಂಪ್ರದಾಯಿಕ ಹಾಡುಗಳ ಗಾಯಕಿ ರುಕ್ಮಿಣಿ ಉಡುಪ ದಂಪತಿಯ ಪುತ್ರಿ ಆಗಿರುವ ಅವರು ಬಸ್ರೂರು, ಕುಂದಾಪುರ, ಕೋಟೇಶ್ವರ, ಬೈಂದೂರು ಮತ್ತು ನಾವುಂದ ಪ್ರೌಢಶಾಲೆಗಳಲ್ಲಿ ವಿಜ್ಞಾನ ಶಿಕ್ಷಕಿಯಾಗಿ ದುಡಿದಿದ್ದರು. ಮುಖ್ಯೋಪಾಧ್ಯಾಯಿನಿ ಹುದ್ದೆಗೆ ಬಡ್ತಿಗೊಂಡ ಬಳಿಕ ಮರವಂತೆ ಸರಕಾರಿ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದರು. ವಿಜ್ಞಾನ ವಿಷಯದ ಪರಿಣಾಮಕಾರಿ ಬೋಧನೆ ಮತ್ತು ಶಾಲಾಭಿವೃದ್ಧಿಯ ಮೂಲಕ ಗುರುತಿಸಲ್ಪಟ್ಟಿದ್ದ ಅವರಿಗೆ ೨೦೦೨-೦೩ನೆ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಲಭಿಸಿತ್ತು. ಅವರು ಪತಿ ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ, ಬೈಂದೂರಿನ ತೆರಿಗೆ ಸಲಹೆಗಾರ ಜತೀಂದ್ರ ಮತ್ತು ಬ್ರಿಸ್ಟಲ್‌ನ ಏರ್‌ಬಸ್ ವಿಮಾನ ತಯಾರಿ ಸಂಸ್ಥೆಯ ಹಿರಿಯ ತಂತ್ರಜ್ಞ ಯೋಗಿಂದ್ರ ಸೇರಿ ಇಬ್ಬರು ಪುತ್ರರನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಸಂಸ್ಕೃತಿಯೆಂಬುದು ಒಬ್ಬ ಮನುಷ್ಯನಲ್ಲಿ ಎಲ್ಲಾ ಒಳ್ಳೆಯ ಗುಣಗಳನ್ನು ಬೆಳೆಸುತ್ತದೆ. ನಾವು ಪಡೆದುಕೊಳ್ಳುತ್ತಿರುವ ಶಿಕ್ಷಣದ ಉದ್ದೇಶವೂ ಒಳ್ಳೆಯ ಗುಣಗಳನ್ನು ಬೆಳೆಸುವುದೇ ಆದ್ದರಿಂದ ನಮ್ಮ ಕಲಿಕೆಯನ್ನು ಒಂದು ಸಂಸ್ಕೃತಿಯೆಂದೇ ಎಂದು ಆಳ್ವಾಸ್ ವಿದ್ಯಾರ್ಥಿಸಿರಿ ೨೦೧೬ರ ಅಧ್ಯಕ್ಷೆ ವಿ ಎಸ್.ಡಿ.ಎಂ. ಪ್ರೌಢಶಾಲೆಯ ವಿದ್ಯಾರ್ಥಿನಿ ಅನನ್ಯಾ ಹೇಳಿದರು. ವಿದ್ಯಾಗಿರಿಯ ರತ್ನಾಕರವರ್ಣಿ ವೇದಿಕೆಯಲ್ಲಿ ಜರುಗಲಿರುವ ಆಳ್ವಾಸ್ ನುಡಿಸಿರಿ – ಕನ್ನಡ ನಾಡು, ನುಡಿ, ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನದ ಅಂಗವಾಗಿ ಆಯೋಜಿಸಲಾಗಿದ್ದ ಆಳ್ವಾಸ್ `ವಿದ್ಯಾರ್ಥಿ ಸಿರಿ’-ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನ ಅವರು ಮಾತನಾಡಿದರು. ಮನುಷ್ಯನಲ್ಲಿರುವ ಜ್ಞಾನ, ಆಲೋಚನಾ ಶಕ್ತಿಯೇ ಅವನನ್ನು ಇತರ ಪ್ರಾಣಿಗಳಿಗಿಂತ ಭಿನ್ನವಾಗಿ ನಿಲ್ಲುವಂತೆ ಮಾಡುತ್ತದೆ. ಮನುಷ್ಯನ ಪರಿಪೂರ್ಣ ವ್ಯಕ್ತಿತ್ವಕ್ಕೆ ಅವನಲ್ಲಿರುವ ಬುದ್ಧಿವಂತಿಕೆಯೇ ಬುನಾದಿಯಾಗುತ್ತದೆ. ಇದೇ ಕಾರಣಕ್ಕೆ ವೇದ ಕಾಲದಿಂದಲೂ ನಮ್ಮಲ್ಲಿ ಜ್ಞಾನಾರ್ಜನೆಗೆ ಹೆಚ್ಚಿನ ಮಹತ್ವ ನೀಡಲಾಗಿದೆ’ ಎಂದರು. ಇಂದಿನ ವಿದ್ಯಾರ್ಥಿಗಳು ಬಹುಮುಖ ಪ್ರತಿಭೆಯನ್ನು ಹೊಂದುವಂತಾಗಬೇಕು. ಕೇವಲ ಪುಸ್ತ ಓದುವುದರಿಂದ ಮಾತ್ರ ನಮ್ಮ ವ್ಯಕ್ತಿತ್ವ ಪರಿಪೂರ್ಣವಾಗದು. ಅದರ ಜೊತೆಗೆ ಸಾಂಸ್ಕೃತಿಕ ಹಾಗೂ ಕ್ರೀಡಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಇಂದು ಇತರ ಭಾಷೆಗಳನ್ನು ಕಲಿಯುವ, ಪ್ರೀತಿಸುವ ಹಂಬಲದಲ್ಲಿ `ನಮ್ಮತನ’ವನ್ನು ಕಡೆಗಣಿಸುತ್ತಿದ್ದೇವೆ. ಆದರೆ ನಮ್ಮ ಸಂಸ್ಕೃತಿಯನ್ನು ಪ್ರೀತಿಸಿ ಬೆಳೆಸುವ ಕಾಯಕ ಅಗತ್ಯವಾಗಿ ನಡೆಯಬೇಕಿದೆ. ಇಂತಹ ಸಂದರ್ಭಗಳಲ್ಲಿ ಆಳ್ವಾಸ್ ನುಡಿಸಿರಿಯಂತಹ ಸಮ್ಮೇಳನಗಳು ತುಂಬಾ ಮುಖ್ಯವೆನಿಸುತ್ತದೆ ಎಂದು ಕನ್ನಡದ ಹಿರಿಯ ರಂಗಭೂಮಿ ಕಲಾವಿದೆ ಬಿ. ಜಯಶ್ರೀ ಅಭಿಪ್ರಾಯಪಟ್ಟರು. ರತ್ನಾಕರವರ್ಣಿ ವೇದಿಕೆಯಲ್ಲಿ ಆಳ್ವಾಸ್ ನುಡಿಸಿರಿ- ಕನ್ನಡ ನಾಡು, ನುಡಿ, ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನದ ಮುನ್ನಾದಿನ ಆಯೋಜಿಸಲಾಗಿದ್ದ ಆಳ್ವಾಸ್ `ವಿದ್ಯಾರ್ಥಿ ಸಿರಿ’-ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನ ಇಲ್ಲಿನ ಉದ್ಘಾಟಿಸಿ ಅವರು ಮಾತನಾಡಿದರು. ಆಳ್ವಾಸ್ ನುಡಿಸಿರಿಯ ಮೂಲಕ ಕನ್ನಡ ಸಂಸ್ಕೃತಿ ಲೋಕಕ್ಕೆ ಗಣನೀಯ ಸೇವೆ ಸಲ್ಲಿಸುತ್ತಿರುವ ಡಾ. ಎಂ. ಮೋಹನ್ ಆಳ್ವರ ಕಾರ್ಯ ನಿಜಕ್ಕೂ ಶ್ಲಾಘನೀಯವಾದುದು. ತನ್ನ ವೈಶಿಷ್ಟ್ಯತೆಯಿಂದಾಗಿ ಕನ್ನಡದ ಇತರೆ ಹಬ್ಬಗಳಿಗಿಂತ ಆಳ್ವಾಸ್ ನುಡಿಸಿರಿ ವಿಭಿನ್ನವಾಗಿ ನಿಲ್ಲುತ್ತದೆ ಎಂದರು. `ಆಳ್ವಾಸ್ ಸಿನಿಸಿರಿ’-ಮಿನಿ ಚಲನಚಿತ್ರೋತ್ಸವವನ್ನು ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ ಉದ್ಘಾಟಿಸಿದರು. ಆಳ್ವಾಸ್ ವಿದ್ಯಾರ್ಥಿಸಿರಿ ೨೦೧೬ರ ಅಧ್ಯಕ್ಷೆ ವಿ ಎಸ್.ಡಿ.ಎಂ. ಪ್ರೌಢಶಾಲೆಯ ವಿದ್ಯಾರ್ಥಿನಿ ಅನನ್ಯಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿರುವ ಕುಂದಾಪುರ ತಾಲೂಕಿನ ಕಂಚುಗೋಡು ನಿವಾಸಿ ಚಂದ್ರ ಖಾರ್ವಿ ಅವರ ಮಗ ಭರತ್ ಖಾರ್ವಿ ಅವರ ವೈದ್ಯಕೀಯ ಚಿಕಿತ್ಸೆಗೆ ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘದಿಂದ ೨೦ ಸಾವಿರ ರೂ.ಗಳನ್ನು ನೀಡಲಾಯಿತು. ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಎಚ್.ಮಂಜು ಬಿಲ್ಲವ ಅವರು ಭರತ್ ಖಾರ್ವಿ ಅವರ ಮನೆಗೆ ತೆರಳಿ ಸಹಾಯಧನದ ಚೆಕ್‌ನ್ನು ಹಸ್ತಾಂತರಿಸಿದರು. ಸಂಘದ ಉಪಾಧ್ಯಕ್ಷ ಮೋಹನ ಖಾರ್ವಿ ಎಪಿ., ಮಾಜಿ ಅಧ್ಯಕ್ಷ ಡಿ.ಚಂದ್ರ ಖಾರ್ವಿ, ಮಡಿ ಶಂಕರ ಖಾರ್ವಿ, ಬಿ.ಸುರೇಶ ಬಂಗೇರ ಕೋಡಿ, ನಾಗಪ್ಪಯ್ಯ ಪಟೇಲ್ ಹಾಗೂ ನಾಡದೋಣಿ ಮೀನುಗಾರರ ಸಂಘದ ಸದಸ್ಯರು ಉಪಸ್ಥಿತರಿದ್ದರು .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ನೆಹರೂ ಮೈದಾನದಲ್ಲಿ ಯಕ್ಷಗಾನ ಪ್ರದರ್ಶನ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡಬೇಕು ಎಂಬ ಯಕ್ಷಗಾನ ಅಭಿಮಾನಿಗಳು ಹಾಗೂ ಸಾರ್ವಜನಿಕರ ಒಕ್ಕೂರಲ ಒತ್ತಾಯ, ಚರ್ಚೆ ನಡುವೆ ಅಂತಿಮ ತೀರ್ಮಾನವನ್ನು ಜಿಲ್ಲಾ ಉಸ್ತವಾರಿ ಸಚಿವರು ಕಾದಿರಿಸಿದ್ದು, ಯಕ್ಷಭಿಮಾನಿಗಳು ನಿರ್ಣಯ ಹೇಗೆ ಬರಲಿದೆ ಎಂಬ ನಿರೀಕ್ಷೆಯಲ್ಲಿದ್ದಾರೆ. ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೆಹರು ಮೈದಾನದಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಅವಕಾಶ ನಿಡುವ ಕುರಿತು ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಇಲಾಖೆ ಅಧಿಕಾರಿಗಳು, ಯಕ್ಷಪ್ರಿಯರು, ಕಲಾವಿದರು ಹಾಗೂ ಸಾರ್ವಜನಿಕರ ಅಭಿಪ್ರಾಯ ಕಲೆ ಹಾಕಲಾಗಿದ್ದು, ಒಂದಿಬ್ಬರು ಬಿಟ್ಟರೆ ಮತ್ತೆಲ್ಲರೂ ಯಕ್ಷಗಾನ ಪ್ರದರ್ಶನಕ್ಕೆ ಅವಕಾಶ ನೀಡುವಂತೆ ಸಲಹೆ ಮಾಡಿದರು. ಇದಕ್ಕೆ ಇಲಾಖೆ ಅಧಿಕಾರಿಗಳು ಕೂಡಾ ಪರೀಕ್ಷೆ ಸಮಯ ಹೊರತು ಪಡಿಸಿ, ಯಕ್ಷಗಾನ ಪ್ರದರ್ಶನಕ್ಕೆ ಅವಾಕಾಶ ನೀಡಲು ಅಭ್ಯಂತರವಿಲ್ಲ ಎನ್ನುವ ಅಭಿಪ್ರಾಯ ಸಭೆಯಲ್ಲಿ ಮೂಡಿಬಂತು. ಯಕ್ಷಾಗಾನ ಅಭಿಮಾನಿ ರಾಮಕೃಷ್ಣ ಹೇರ್ಳೆ, ಮಾಜಿ ಕುಂದಾಪುರ ಪುರಸಭೆ ಅಧ್ಯಕ್ಷ ನರಸಿಂಹ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಡುಪಿ ಜಿಲ್ಲೆ ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಕುಂದಾಪುರ ಸೈಂಟ್ ಮೇರಿಸ್ ಸಂಯುಕ್ತ ಕಾಲೇಜು ಆಶ್ರಯದಲ್ಲಿ ಕುಂದಾಪುರ ಗಾಂಧಿ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜು ಕ್ರೀಡಾ ಕೂಟದಲ್ಲಿ ಕಲ್ಯಾಣಪುರ ವಿಲಾಗ್ರಿಸ್ ಪದವಿಪೂರ್ವ ಕಾಲೇಜು ತಂಡ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಕಲ್ಯಾಣಪುರ ವಿಲಾಗ್ರಿಸ್ ಪದವಿಪೂರ್ವ ಕಾಲೇಜು ಬಾಲಕರ ತಂಡ ಸಮಗ್ರ ಪ್ರಶಸ್ತಿ ಪಡೆದಿದ್ದು, ನಿಟ್ಟೆ ಡಾ.ಎನ್.ಎಸ್.ಎ.ಎಂ. ಪದವಿಪೂರ್ವ ಕಾಲೇಜ್ ಬಾಲಕಿಯರು ಸಮಗ್ರ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ. ಮಣಿಪಾಲ ಪದವಿಪೂರ್ವ ಕಾಲೇಜು ಸಂಗಮೇಶ್ ಬಾಲಕರ ವೀರಾಗ್ರೇಸ ಪ್ರಶಸ್ತಿ ಪಡೆದೆಕೊಂಡರೆ, ಬಾಲಕಿಯರ ವಿಭಾಗದಲ್ಲಿ ನಿಟ್ಟೆ ಡಾ.ಎನ್.ಎಸ್.ಎ.ಎಂ. ಪದವಿಪೂರ್ವ ಕಾಲೇಜು ಭೂಮಿಕಾ ವೀರಾಗ್ರಣಿ ಪ್ರಶಸ್ತಿ ತಮ್ಮದಾಗಿಸಿಕೊಂಡರು. ಕುಂದಾಪುರ ಪುರಸಭೆ ಉಪಾಧ್ಯಕ್ಷ ರಾಜೇಶ್ ಕಾವೇರಿ ಅಧ್ಯಕ್ಷತೆಯಲ್ಲಿ ನಡೆದ ಸಮಾರೋಪದಲ್ಲಿ ಉಡುಪಿ ಧರ್ಮಪ್ರಾಂತ್ಯ ಛಾನ್ಸಿಲರ್ ವಂ. ವೆಲೇರಿಯನ್ ಮೆಂಡೋನ್ಸಾ ಪ್ರಶಸ್ತಿ ಪ್ರದಾನ ಮಾಡಿದರು. ಜಿಲ್ಲಾ ಕ್ರೀಡಾ ಸಂಯೋಜಕ ಎಸ್.ಶ್ರೀಧರ ಶೆಟ್ಟಿ ಕ್ರೀಡಾ ಕೂಟದಲ್ಲಿ ಶ್ರಮಿಸಿದವರಿಗೆ ಅಭಿನಂದನೆ ಸಲ್ಲಿಸಿದರು. ಕುಂದಾಪುರ ಸಹಾಯಕ ಧರ್ಮಗುರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ/ಬೈಂದೂರು: ಹಳೆ ನೋಟುಗಳನ್ನು ಒಪ್ಪಿಸಿ ಹೊಸ ನೋಟು ಪಡೆಯಲು ಹಾಗೂ ಖಾತೆಗೆ ಹಣ ಜಮೆ ಮಾಡಲು ಕಳೆದ ಕೆಲವು ದಿನಗಳಿಂದ ಜನರು ದಿನವಿಡಿ ಬ್ಯಾಂಕುಗಳ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗೆ ಬ್ಯಾಂಕುಗಳ ಹೊರಕ್ಕೆ ಬಿಸಿಲಿನಲ್ಲಿ ನಿಲ್ಲುವವರು ಹಾಗೂ ನೋಟು ಬದಲಾವಣೆಯ ಅರ್ಜಿಗಳನ್ನು ತುಂಬಲು ತಿಳಿಯದವರಿಗಾಗಿ ಕುಂದಾಪುರ ತಾಲೂಕಿನ ಕೆಲವೆಡೆ ಯುವಕರ ತಂಡ ಬ್ಯಾಂಕಿನ ಗ್ರಾಹಕರ ನೆರವಿಗೆ ಬಂದಿದೆ. ಬೈಂದೂರು ಸಮೀಪದ ಕಂಬದಕೋಣೆ ವಿಜಯ ಬ್ಯಾಂಕಿನ ಎದುರು ದಿನವೂ ಸರತಿ ಸಾಲು ನಿರ್ಮಾಣವಾಗಿರುವುದನ್ನು ಮನಗಂಡ ಪರಿಸರದ ಯುವಕರು ಬಿಸಿಲಿನಲ್ಲಿ ನಿಲ್ಲುವವರಿಗಾಗಿ ಬ್ಯಾಂಕಿನ ಎದುರು ಶ್ಯಾಮಿಯಾನ ವ್ಯವಸ್ಥೆ ಮಾಡಿಕೊಟ್ಟಿದೆ. ಬೈಂದೂರು ಕ್ಷೇತ್ರ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶರತ್‌ಕುಮಾರ್ ಶೆಟ್ಟಿ ಹಾಗೂ ಬೈಂದೂರು ಬಿಜೆಪಿ ಯುವಮೋರ್ಚಾ ಕಂಬದಕೋಣೆ ಸ್ಥಾನೀಯ ಸಮಿತಿ ಅಧ್ಯಕ್ಷ ಅಧ್ಯಕ್ಷ ರಾಘವೇಂದ್ರ ದೇವಾಡಿಗ ಮತ್ತವರ ತಂಡ ಶ್ಯಾಮಿಯಾನ ಹಾಕಿಸಿ ನೆರಳಾಗಿದ್ದಾರೆ. ಗಂಗೊಳ್ಳಿಯ ಬ್ಯಾಂಕುಗಳನ್ನು ಜನರ ಸರತಿ ಸಾಲು ಕಂಡ ವೀರ ಸಾವರ್ಕರ ದೇಶಪ್ರೇಮಿ ಬಳಗ…

Read More

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯಲಿರುವ ಆಳ್ವಾಸ್ ನುಡಿಸಿರಿ-2016 ನಾಡು ನುಡಿಯ ಸಮ್ಮೇಳನಕ್ಕೆ ಪೂರಕವಾಗಿ ನ.17ರಿಂದ 20ರವರೆಗೆ ಕೃಷಿ ಸಿರಿ ನಡೆಯಲಿದೆ. ಹಲವಾರು ವೈವಿಧ್ಯತೆಗಳೊಂದಿಗೆ ಮೂಡಿಬರಲಿದೆ ಎಂದು ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. 150 ಮಳಿಗೆಗಳಿಗೆ ಉಚಿತ ವ್ಯವಸ್ಥೆ: ಕೃಷಿ ಸಂಬಂಧಿ ಪರಿಕರಗಳ ಪ್ರದರ್ಶನ ಹಾಗೂ ಮಾರಾಟದ ವ್ಯವಸ್ಥೆಯೂ ಈ ಕೃಷಿ ಉತ್ಸವದಲ್ಲಿದ್ದು ಈಗಾಗಲೇ 150ಕ್ಕೂ ಮಿಕ್ಕಿ ರಾಜ್ಯಮಟ್ಟದ ಕೃಷಿ ಮಳಿಗೆಗಳು ಹೆಸರು ನೋಂದಾಯಿಸಿಕೊಂಡಿವೆ. ತಂತ್ರಜ್ಞಾನಾಧಾರಿತ ಆಧುನಿಕ ಕೃಷಿ ಉಪಕರಣಗಳು ಈ ಪ್ರದರ್ಶನದಲ್ಲಿ ಪಾಲ್ಗೊಳ್ಳುತ್ತಿದ್ದು ಗ್ರಾಮೀಣ ಭಾಗದ ಕೃಷಿಕರಿಗೆ ಆಧುನಿಕತೆಯ ಪರಿಚಯ ಮಾಡಿಕೊಡುವುದು ಮಾತ್ರವಲ್ಲ ಕೃಷಿಕರ ಅಗತ್ಯತೆಗಳನ್ನು ಪೂರೈಸುವಲ್ಲಿಯೂ ಈ ಕೃಷಿಸಿರಿ ಪ್ರಯತ್ನಿಸಲಿದೆ. ಕೃಷಿ ಸಂಸ್ಕೃತಿಯಿಂದ ದೂರವಿರುವ ಆಧುನಿಕ ಯುವ ಪೀಳಿಗೆಗೆ ಆಹಾರ ಸಂಸ್ಕೃತಿಯನ್ನು ಪರಿಚಯಿಸುವುದು ಮಾತ್ರವಲ್ಲ ಅವರ ಜ್ಞಾನದ ಪರಿಧಿಯನ್ನು ವಿಸ್ತರಿಸುವಲ್ಲಿಯೂ ಸಹಕಾರಿಯಾಗಲಿದೆ. ಕೃಷಿ ಉಪಕರಣ, ಕೃಷಿ ಪರಿಕರ ಹಾಗೂ ಆಹಾರೋತ್ಪನ್ನಗಳ ಪ್ರದರ್ಶನ, ಪ್ರಾತ್ಯಕ್ಷಿಕೆ ಮತ್ತು ಮಾರಾಟಗಳು ನಡೆಯಲಿದ್ದು ಮಳಿಗೆದಾರರಿಗೆ ಮಳಿಗೆಯು ಉಚಿತವಾಗಿದೆ ಹಾಗೂ ಮಳಿಗೆದಾರರ ತಂಡಕ್ಕೆ ಉಚಿತ…

Read More

ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಯಕ್ಷಗಾನ ತಿರುಗಾಟ ಆರಂಭಗೊಂಡು ದಿನಕಳೆಯುತ್ತಿದ್ದರೂ ಕುಂದಾಪುರದ ನೆಹರೂ ಮೈದಾನದಲ್ಲಿ ಯಕ್ಷಗಾನ ಪ್ರದರ್ಶನ ನೋಡುವ ಭಾಗ್ಯವಿಲ್ಲ. ಯಾರದ್ದೋ ಸ್ವಪ್ರತಿಷ್ಠೆಗೆ ವಿಶ್ವಮಾನ್ಯ ಕಲೆಯ ನೆಲೆಯಲ್ಲಿಯೇ ಕಂಟಕ ತಂದಿಟ್ಟಿರುವುದು ಯಕ್ಷಪ್ರಿಯರನ್ನು ನಿರಾಶೆಗೊಳಿಸಿದೆ. ವಾಸ್ತವವಾಗಿ ಯಕ್ಷಗಾನ ಪ್ರದರ್ಶನದಿಂದ ಯಾರಿಗೆ ತೊಂದರೆಯಾಗುವುದೆಂಬ ಕಾರಣ ನೀಡಿದ್ದರೋ ಅಲ್ಲಿನ ಪರಿಸ್ಥಿತಿ ಮಾತ್ರ ಚಿಂತಾಜನಕ. ಮೈದಾನದ ಅಕ್ಕಪಕ್ಕವಿರುವ ಹಾಸ್ಟೆಲ್‌ಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸದೇ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದ ಬಗ್ಗೆ ಕೆಲವು ಮಹನೀಯರಿಗೆ ಚಿಂತೆ ಹತ್ತಿಕೊಂಡಿದ್ದು ಒಟ್ಟಿನಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿಪಡಿಸುತ್ತಿರುವವರ ಹಿಂದೆ ಸ್ವಹಿತಾಸ್ತಿಯೂ ಅಡಗಿರಬಹುದೆಂಭ ಆರೋಪ ಕೇಳಿಬರುತ್ತಿದೆ. ಯಕ್ಷಗಾನಕ್ಕೆ ವಿರೋಧಿಸುವವರು ಹಾಸ್ಟೆಲ್ ಪರಿಸ್ಥಿತಿ ಅವಲೋಕಿಸಿದ್ದಾರೆ? ಶಾಲೆ, ಹಾಸ್ಟೆಲ್, ಸ್ವಚ್ಛತೆ, ಭದ್ರತೆಯನ್ನು ಮುಂದಿಟ್ಟುಕೊಂಡು ಯಕ್ಷಗಾನ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುತ್ತಿರುವವರು ಒಮ್ಮೆ ಹಾಸ್ಟಲ್‌ಗೆ ಭೇಟಿ ನೀಡಿ ಪರೀಕ್ಷಿಸಲಿ. ಎಂತಾ ಪರಿಸರದಲ್ಲಿ ಮಕ್ಕಳು ದಿನಕಳೆಯುತ್ತಿದ್ದಾರೆ ಎನ್ನುವ ಕನಿಷ್ಟ ಅರಿವಾದರೂ ಮೂಡುತ್ತದೆ. ಹಾಸ್ಟೆಲ್ ಮೂಲಭೂತ ಸೌಲಭ್ಯ, ಸ್ವಚ್ಛತೆ ಬಗ್ಗೆ ಕಾಳಜಿಯಿದ್ದರೆ ಮೊದಲು ಹಾಸ್ಟೆಲ್ ವ್ಯವಸ್ಥೆ ಸರಿಪಡಿಸಲಿ. ಹಾಸ್ಟೆಲ್ ಮುಂದಿರುವ ಪಾಯಿಖಾನೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೂಡಲಕಟ್ಟೆ ರೈಲ್ವೆ ನಿಲ್ದಾಣದಲ್ಲಿ ಎಕ್ಷ್‌ಪ್ರೆಸ್ ರೈಲು ನಿಲುಗಡೆಗೆ ಆಗ್ರಹಿಸಿ ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಮನವಿ ಸಲ್ಲಿಸಿದರು. ಮೂಡಲಕಟ್ಟೆ ರೈಲ್ವೆ ನಿಲ್ದಾಣದ ಮೂಲಕ ಕೊಚ್ಚುವೇಲಿ, ಬಿಕಾನೇರ್ ಎಕ್ಷ್‌ಪ್ರೆಸ್ ಬೆಳಗ್ಗೆ ೬.೪೫ಕ್ಕೆ ತೆರಳುತ್ತಿದ್ದು ಬೈಂದೂರು, ಮುರುಡೇಶ್ವರ ಕುಮುಟಾ, ಗೋವಾ, ಮುಂಬೈ, ಗುಜರಾತ್, ರಾಜಸ್ತಾನ ಪ್ರವಾಸಿ ತಾಣಗಳಿಗೆ ಹೋಗಲು ಅನುಕೂಲವಾಗುವ ಜೊತೆ ಗೋವಾಕ್ಕೆ ತೆರಳೀ, ಅದೇ ದಿನ ಹಿಂದಕ್ಕೆ ಮರುಳಲು ಅವಕಾಶ ಇರುವುದರಿಂದೆ ಈ ರೈಲುಗಳು ನಿಲುಗಡೆಯಾದರೆ ಉತ್ತಮ ಎಂದು ಸಮಿತಿ ಮನವಿಯಲ್ಲಿ ತಿಳಿಸಿದೆ. ಸಂಸದೆ ಶೋಭಾ ಕರಂದ್ಲಾಜ್ ರೈಲು ನಿಲುಗಡೆ ಬಗ್ಗೆ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಕುಂದಾಪುರ ರಾಜಸ್ತಾನ ಸಮುದಾಯ ಮುಖಂಡ ಮಘುರಾಮ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಕಿರಣ್ ಕೊಡ್ಗಿ, ಆಟ್ಕೆರೆ ಬಾಬು ಪೈ, ರೈಲು ಹೋರಾಟ ಸಮಿತಿ ಹಂಗಾಮಿ ಕಾರ‍್ಯದರ್ಶಿ ಜೋಯ್ ಜೆ.ಕಾರ‍್ವಾಲೋ, ಗಣೇಶ್ ಪುತ್ರನ್, ವಿವೇಕ್ ನಾಯಕ್, ಉದಯ ಭಂಡಾರ್‌ಕಾರ್, ಪದ್ಮನಾಭ ಶೆಣೈ, ವಿವೇಕ್…

Read More