Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ವೈಯಕ್ತಿಕ ಕಾರಣಗಳಿಂದ ಹತಾಶನಾದ ಯುವಕನೊರ್ವ ಮನೆಯಲ್ಲಿಯೇ ನೇಣಿಗೆ ಶರಣಾದ ಘಟನೆ ಕುಂದಾಪುರದ ಹಂಗಳೂರಿನಲ್ಲಿ ನಡೆದಿದೆ. ಹಂಗಳೂರು ಹುಚ್ಕೇರಿ ನಿವಾಸಿ ಸರೋಜಿನ ಸರ್ಸಿಂಗ್ ಹೋಂ ರಸ್ತೆಯ ಪ್ರದೀಪ (22) ಮೃತ ಯುವಕ. (ಕುಂದಾಪ್ರ ಡಾಟ್ ಕಾಂ ಸುದ್ದಿ) ಡಿಪ್ಲೊಮಾ ಇಂಜಿನಿಯರ್ ಪದವಿಧರನಾದ ಪ್ರದೀಪ್ ಮಣಿಪಾಲದ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದ. ರಾತ್ರಿಪಾಳಿ ಕೆಲಸವಾದುದರಿಂದ ಹಗಲಿಗೆ ಮನೆಯಲ್ಲಿ ಮಲಗುತ್ತಿದ್ದ. ಮಧ್ಯಾಹ್ನ 2ಗಂಟೆಯ ವೇಳೆಗೆ ಆತನ ತಂದೆ ಉಟ ಮಾಡುವಂತೆ ಆತನನ್ನು ಎಬ್ಬಿಸಿದ್ದರೂ, ಊಟ ಮಾಡದೇ ಹಾಗೆಯೇ ಮಲಗಿದ್ದವ 3ಗಂಟೆಯ ಸುಮಾರಿಗೆ ಬಾಗಿಲು ಚಿಲಕ ಹಾಕಿಕೊಂಡಿದ್ದ ಎನ್ನಲಾಗಿದೆ. ಸಂಜೆ ಕೆಲಸಕ್ಕೆ ತೆರಳುವ ಸಮಯವಾದರೂ ಹೊರಕ್ಕೆ ಬಾರದಿದ್ದುದನ್ನು ಗಮನಿಸಿದ ತಂದೆ ಬಾಗಿ ತಟ್ಟಿದಾಗ ತೆರೆದ್ದಿದ್ದುದರಿಂದ ಅನುಮಾನಗೊಂ ಅವರು ಕಿಟಕಿಯಲ್ಲಿ ಇಣಕಿ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿತ್ತು. ಪ್ರೇಮ ವೈಪಲ್ಯವೇ ಆತ್ಮಹತ್ಯೆಗೆ ಕಾರಣವೆಂದು ಶಂಕಿಸಲಾಗಿದ್ದು ಈ ಬಗ್ಗೆ ತನಿಕೆ ನಡೆಯುತ್ತಿದೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೈಂದೂರು: ಉಡುಪಿಯಿಂದ ಹೊನ್ನಾವರ ಕಡೆ ತೆರಳುತ್ತಿದ್ದ ಮೀನು ತುಂಬಿದ ಪಿಕ್ ಅಪ್ ವಾಹನ ಮತ್ತು ಮಂಗಳೂರಿನಿಂದ ಗೋವಾ ಕಡೆಗೆ ತೆರಳುತ್ತಿದ್ದ ಸರಕು ತುಂಬಿದ ಲಾರಿ ನಡುವೆ ಗುರುವಾರ ಮುಂಜಾನೆ ನಾಗೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಪಿಕ್ ಅಪ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು. ಎರಡೂ ವಾಹನಗಳ ಮುಂಭಾಗ ನಜ್ಜುಗುಜ್ಜಾಗಿದೆ. ಗಾಯಾಳು ಚಾಲಕನನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪುರ: ಕೆಲವು ಸಮಯದ ಹಿಂದೆ ಬಸ್ಸೊಂದು ಡಿಕ್ಕಿಹೊಡೆದು ಜಖಂ ಗೊಂಡಿದ್ದ ಆವರಣ ಗೋಡೆಯು ನಿನ್ನೆ ರಾತ್ರಿ ಹಠಾತ್ ಕುಸಿದು ಬಿದ್ದಿದೆ. ರಾತ್ರಿವೇಳೆ ಕುಸಿದ್ದಿದರಿಂದ ಪ್ರಮಾದಶವಾತ್ ಯಾವುದೇ ಅವಘಡ ಸಂಭವಿಸದಿರುವುದಕ್ಕೆ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಹಗಲಿನಲ್ಲಿ ಇಲ್ಲಿ ಕಿಕ್ಕಿರಿದು ಪ್ರಯಾಣಿಕರು ಬಸ್ಸಿಗಾಗಿ ಕಾಯುತಲಿರುವ ದೃಶ್ಯ ಸರ್ವೇ ಸಾಮಾನ್ಯವಾಗಿದ್ದರೂ ಸ್ಥಳೀಯಾಡಳಿತ ಮಾತ್ರ ಬಸ್ಸು ಡಿಕ್ಕಿ ಹೊಡೆದು ಜಖಂ ಗೊಂಡಿದ್ದ ಆವರಣ ಗೋಡೆಯ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದು ಸಾರ್ವಜನಿಕರಿಂದ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ದಢಾ ದಿಢೀರನೆ ಗೋಡೆಯು ಕುಸಿದು ಬಿದ್ದಿದ್ದೆ.

Read More

ಕುಂದಾಪುರ: ಜಮ್ಯಿಯತುಲ್ ಫಲಾಹ ಕುಂದಾಪುರ ತಾಲೂಕು ಘಟ್ಟದ ವತಿಯಿಂದ ಪಾರಿಜಾತ ಹೋಟೇಲ್‌ನ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಝಕಾತ್ ಫಂಡಿನಿಂದ ವಿದ್ಯಾರ್ಥಿ ವೇತನ ನೀಡಲಾಯಿತು. ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನ ಪುರಸ್ಕರಿಸಲಾಯಿತು. ಕಾರ್ಯಕ್ರಮದಲ್ಲಿ ಜಮ್ಯಿಯ ತುಲ್‌ಫಲಾಹ್ ದ.ಕ.ಉಡುಪಿ ಜಿಲ್ಲಾಧ್ಯಕ್ಷ ಜನಾಬ್ ಅಬ್ದುಲ್ ಲತೀಫ್, ಅಖಿಲ ಭಾರತ ಕೊಂಕಣಿ ಖಾರ್ವಿ ಮಹಾ ಸಭಾದ ಅಧ್ಯಕ್ಷ ಬಸವ ಖಾರ್ವಿ, ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ನಿರ್ದೇಶಕ ಚಂದ್ರಶೇಖರ್ ದೋಮ, ದ.ಕ.-ಉಡುಪಿ ಜಿಲ್ಲಾ ಮಾಜಿ ಅಧ್ಯಕ್ಷರಾದ ಖಲೀಲ್ ಆಹ್ಮದ ಉಡುಪಿಶುಭಹಾರೈಸಿದರು. ಸಭೆಯ ಅಧ್ಯಕ್ಷತೆಯನ್ನು ಜಮೀಯ್ಯ ತುಲ್ ಫಲಾಹ್ ಕುಂದಾಪುರದ ತಾಲೂಕು ಘಟಕದ ಜನಾಬ್ ಖತೀಜ್ ಅಬು ಮೊಹ್ಮದ್ ವಹಿಸಿದರು. ಕಾರ್ಯದರ್ಶಿ ಅಸ್ಗರ್ ಅಲಿ ಸ್ವಾಗತಿಸಿ ವಂದಿಸಿದರು. ಖಜಾಂಚಿ ಬಿ.ಅಪ್ಪಣ್ಣ ಪ್ರತಿಭಾವಂತ ವಿದ್ಯಾರ್ಥಿಗಳ ಹೆಸರು ಓದಿದರು. ಅಸ್ಗರ ಹೈಕಾಡಿ ಕಾರ್ಯಕ್ರಮವನ್ನು ನಿರೂಪಿಸಿದರು. ಖಜಾಂಜಿ ಬಿ.ಅಬ್ದುಲ್ಲಾ ಜೊತೆ ಕಾರ್ಯದರ್ಶಿ ಕೆ.ಎಸ್.ರಿಯಾಜ್ ಹಾಗೂ ಅಲ್ತಾಫ ಕುರೈಷಿ ಕಾರ್ಯಕ್ರಮಕ್ಕೆ ಸಹಕರಿಸಿದ್ದರು.

Read More

ಬೈಂದೂರು: ಉಪ್ಪುಂದದಲ್ಲಿ ನಲವತ್ತು ಲಕ್ಷ ರೂಪಾಯಿ ಅನುದಾನದ ಅಂಬಾಗಿಲು ಹಳೇ ಎಂಬೆಸ್ಸಿ ರಸ್ತೆ ಹಾಗೂ ಮೀನುಗಾರಿಕಾ ನಬಾರ್ಡನ ಹದಿನೈದು ಲಕ್ಷ ಅನುದಾನದ ಮಡಿಕಲ್ ಉಪ್ಪುಂದ ಕಿರುಸೇತುವೆ ಸಹಿತ ರಸ್ತೆ ಕಾಮಗಾರಿಗೆ ಶಾಸಕ ಗೋಪಾಲ ಪೂಜಾರಿ ಗುದ್ದಲಿ ಪೂಜೆ ನೆರವೇರಿಸಿದರು. ಜಿಲ್ಲಾ ಶಿಕ್ಷಣ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ ದೇವಾಡಿಗ, ಜಿಪಂ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ, ಮಾಜಿ ಸದಸ್ಯ ಮದನ್‌ಕುಮಾರ್, ಗ್ರಾಪಂ ಅಧ್ಯಕ್ಷೆ ದುರ್ಗಮ್ಮ, ಗ್ರಾಪಂ ಸದಸ್ಯರಾದ ಐ.ನಾರಾಯಣ, ಸತೀಶ ಶೆಟ್ಟಿ, ಸುಮಿತ್ರಾ, ರಾಮಚಂದ್ರ ಖಾರ್ವಿ, ನಾರಾಯಣ ಖಾರ್ವಿ, ವೆಂಕಟರಮಣ ಖಾರ್ವಿ, ವಸುದೇವ ಪೂಜಾರಿ, ಲಯನ್ಸ್ ಕ್ಲಬ್ ಅಧ್ಯಕ್ಷ ಗೋಕುಲ ಶೆಟ್ಟಿ, ಮುಂತಾದವರು ಹಾಜರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಅಮಾಸೆಬೈಲು ಚಟ್ಟರಿಕಲ್ ನಿಂದ ಕಲ್ಲು ಸಾಗಿಸುತ್ತಿದ್ದ ಲಾರಿ ಚರಂಡಿಗೆ ಇಳಿದ ಪರಿಣಾಮ ಅದನ್ನು ಮೇಲೆತ್ತಲು ಬಂದಿದ್ದ ಕ್ರೇನಿನ ಬದಿಯಲ್ಲಿ ನಿಂತಿದ್ದ ಇನ್ನೊಂದು ಲಾರಿ ಚಾಲಕನ ಮೇಲೆ ಕ್ರೇನ್ ಮಗುಚಿ ಬಿದ್ದದ್ದರಿಂದ ಚಾಲಕ ಕೃಷ್ಣ (33) ಸ್ಥಳದಲ್ಲಿಯೇ ಮೃತಪಟ್ಟ ಘಟನೆ ವರದಿಯಾಗಿದೆ. ಚರಂಡಿಗೆ ಲಾರಿ ಇಳಿದ್ದರಿಂದ ಲಾರಿಯನ್ನು ಕ್ರೇನ್ನಿಂದ ಮೇಲೆತ್ತಿರುವುದನ್ನು ನೋಡಲು ತನ್ನ ಲಾರಿಯನ್ನು ನಿಲ್ಲಿಸಿ ಬಂದಿದ್ದ  ಕೃಷ್ಣ ದೂರದಲ್ಲಿಯೇ ನಿಂತು ನೋಡುತ್ತಿದ್ದಾಗ ಏಕಾಏಕಿ ಕ್ರೇನ್ ಈತನ ತಲೆಯ ಮೇಲೆಯೇ ಮಗುಚಿ ಬಿದ್ದದ್ದರಿಂದ ತಲೆಗೆ ಗಂಭೀರ ಗಾಯಗಳಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಲಾಯಿತಾದರೂ ಅಷ್ಟರಲ್ಲಿ ಅವರು ಮೃತಪಟ್ಟಿದ್ದರು. ಘಟನಾ ಸ್ಥಳಕ್ಕೆ ಅಮಾಸೆಬೈಲು ಠಾಣಾಧಿಕಾರಿ ಸುನಿಲ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಠಾಣೆಯಲ್ಲಿ ದೂರು ದಾಖಲಾಗಿದೆ.

Read More

ಕುಂದಾಪುರ: ಇಲ್ಲಿನ ಕುಂದಪ್ರಭ ಪತ್ರಿಕೆ,  ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನ (ರಿ) ಮಂಗಳೂರು, ಆಕಾಶವಾಣಿ ಮಂಗಳೂರು, ಕುಂದಾಪುರ ಸರಕಾರಿ ಪ.ಪೂ.ಕಾಲೇಜಿನ ಸಹಯೋಗದೊಂದಿಗೆ ಲಕ್ಷ್ಮಿ ನರಸಿಂಹ ಕಲಾಮಂದಿರದಲ್ಲಿ ಉಡುಪಿ ಜಿಲ್ಲಾ ಯುವ ಕವಿ ಸಮ್ಮೆಳನ ಹಾಗೂ ಪುಟ್ಟಣ್ಣ ಕುಲಾಲ್ ಯುವ ಕವಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಿತು. ಸಮಾರಂಭವನ್ನು ಉದ್ಘಾಟಿಸಿದ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಅಂಬಾತನಯ ಮುದ್ರಾಡಿ ಮಾತನಾಡಿ, ಸತತ ಅಧ್ಯಯನಶೀಲತೆಯಿಂದ ಉತ್ತಮ ಕವಿತೆ ಮೂಡಿ ಬರಲು ಸಾಧ್ಯ. ಒಳ್ಳೆಯ ಭಾಷೆಯನ್ನು ಬಳಸುವ ಮೂಲಕ ಉತ್ತಮ ಕೃತಿಗಳನ್ನು ಮೂಡಿಸಲು ಸಾಧ್ಯವಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಮಂಗಳೂರಿನ ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನ ರಿ. ಇದರ ಅಧ್ಯಕ್ಷ ಡಾ| ಅಣ್ಣಯ್ಯ ಕುಲಾಲ್ ಮಾತನಾಡಿ, ಮಾನಸಿಕ ಸ್ಥಿಮಿತವನ್ನು ಕಾಯ್ದುಕೊಳ್ಳಲು ಸಾಹಿತ್ಯ ಮಹತ್ತರ ಪಾತ್ರ ವಹಿಸುತ್ತದೆ. ಬೇರೆ ಭಾಷೆಯ ತಿರುಳನ್ನು ಕನ್ನಡಕ್ಕೆ ತರುವ ಪ್ರಯತ್ನ ಮಾಡಬೇಕು ಒಟ್ಟಾರೆ ಕನ್ನಡವನ್ನು ಕಟ್ಟುವ ಕಾರ್ಯ ನಡೆಯಬೇಕು ಎಂಬ ಆಶಯ ವ್ಯಕ್ತಪಡಿಸಿದರು. ಮುಖ್ಯ ಅತಿಥಿಯಾಗಿ ಕುಂದಾಪುರ ಸರಕಾರಿ ಪ.ಪೂ.ಕಾಲೇಜಿನ ಪ್ರಾಂಶುಪಾಲ…

Read More

ಬೈಂದೂರು: ಈ ಸಾಲಿನ ಬೈಂದೂರು ವಲಯ ಮಟ್ಟದ ಪ್ರತಿಭಾ ಕಾರಂಜಿಯು ಮಂಗಳವಾರ ತಾರಪತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಸೂಕ್ತ ವೇದಿಕೆ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಇಲಾಖೆ ಪ್ರತಿಭಾ ಕಾರಂಜಿಯಂತಹ ವಿನೂತನ ಕಾರ್ಯಕ್ರಮವನ್ನು ಸಂಘಟಿಸಿದೆ. ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಈ ಹಿಂದೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ಅನಾವರಣಗೊಳಿಸಲು ಸೂಕ್ತ ವೇದಿಕೆ ಸಿಗದೇ ಅವರ ಪ್ರತಿಭೆ ಕಮರಿ ಹೋಗುತ್ತಿತ್ತು, ಆದರೆ ಈಗ ವಿದ್ಯಾರ್ಥಿಗಳಿಗೆ ಸಾಕಷ್ಟು ಅವಕಾಶಗಳು ದೊರಕುತ್ತಿದೆ ಎಂದರು. ಪಡುವರಿ ಗ್ರಾ.ಪಂ. ಅಧ್ಯಕ್ಷೆ ದೀಪಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ. ಉಪಾಧ್ಯಕ್ಷ ಸದಾಶಿವ ಡಿ. ಪಡುವರಿ, ಮಾಜಿ ಜಿ.ಪಂ. ಸದಸ್ಯ ಮದನ ಕುಮಾರ, ತಾ.ಪಂ. ಸದಸ್ಯರಾದ ಪ್ರಸನ್ನ ಕುಮಾರ, ಗೌರಿ ದೇವಾಡಿಗ ಬಿಜೂರು, ಗ್ರಾ.ಪಂ. ಸದಸ್ಯರಾದ ಸುರೇಶ ಬಟ್ವಾಡಿ,…

Read More

ಕುಂದಾಪುರ: ತಲ್ಲೂರಿನ ಪಾರ್ತಿಕಟ್ಟೆಯಲ್ಲಿ ಕೋಮುಸೌಹಾರ್ದತೆಗೆ ಧಕ್ಕೆ ತರುವಂತಿದ್ದ ಹಾಗೂ ಕಾನೂನು ಬಾಹಿರವಾಗಿ ಅಳವಡಿಲಾಗಿದ್ದ ಭಗವಧ್ವಜವನ್ನು ತೆಗೆದು ಹಾಕಲು ತಲ್ಲೂರು ಗ್ರಾ.ಪಂ. ಅಧ್ಯಕ್ಷರು ಹಾಗೂ ಪಿಡಿಓ ಅವರ ಬಳಿ ಮನವಿ ಮಾಡಿಕೊಂಡ ಬಳಿಕ ಅವರು ಕಾನೂನುಕ್ರಮ ಕೈಗೊಂಡಿದ್ದಾರೆ. ಇಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರುವ ಯಾವುದೇ ಪ್ರಯತ್ನ ನಡೆಸಿಲ್ಲ. ಆದರೆ ರಾಜಕೀಯ ಪ್ರೇರಿತವಾಗಿ ಸಾಮಾಜಿಕ ತಾಣಗಳಲ್ಲಿ ತನ್ನ ತೇಜೋವಧೆ ಮಾಡಲಾಗುತ್ತಿದೆ ಎಂದಿರುವ ತಲ್ಲೂರು ಗ್ರಾ.ಪಂ. ಸದಸ್ಯ ಉದಯಕುಮಾರ ತಲ್ಲೂರು ಘಟನೆ ಕುರಿತು ‘ಕುಂದಾಪ್ರ ಡಾಟ್ ಕಾಂ’ಗೆ ಸ್ಪಷ್ಟನೆ ನೀಡಿದ್ದಾರೆ. ತಲ್ಲೂರು ವಾರ್ಡ್-1ರ ಗಡಿಯಲ್ಲಿ ಹಟ್ಟಿಯಂಗಡಿ ಗ್ರಾಮ ಪಂಚಾಯತಿಗೆ ಸೇರಿದ 9 ಮನೆಗಳಿದ್ದು ಈ ಭಾಗದ ರಸ್ತೆ ಹಾಗೂ ಮೂಲಭೂತ ಸೌಕರ್ಯಗಳನ್ನು ತಲ್ಲೂರು ಗ್ರಾಮ ಪಂಚಾಯತ್ ವತಿಯಿಂದಲೇ ಅಭಿವೃದ್ಧಿಪಡಿಸಿತ್ತು. ಹಾಗಾಗಿ ಈ ಭಾಗದಲ್ಲಿ ಧ್ವಜವನ್ನು ಹಾಕುವ ಬಗ್ಗೆ ಪರವಾನಿಗೆ ನೀಡಲು ತಲ್ಲೂರು ಹಾಗೂ ಹಟ್ಟಿಯಂಗಡಿ ಗ್ರಾಮ ಪಂಚಾಯತ್ ಜಂಟಿ ಸದನ ಸಮಿತಿಯಲ್ಲಿ ತೀರ್ಮಾನ ಅವಶ್ಯ. ಕೇವಲ ಒಂದು ಗ್ರಾಮ ಪಂಚಾಯತಿಯಿಂದ ತಾತ್ಕಾಲಿಕ ಪರವಾನಿಗೆ ಪಡೆದರೇ…

Read More

ಬೈಂದೂರು: ಉಡುಪಿ ಜಿಲ್ಲೆಯ ಜನಪ್ರತಿನಿಧಿಗಳು ಖಾಸಗೀ ಬಸ್ಸು ಮಾಲಕರ ಅಪವಿತ್ರ ಮೈತ್ರಿಯಿಂದಾಗಿ ಜನರು ರೈಲುಗಳ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಜನರಿಗೆ ರೈಲು ಸೌಲಭ್ಯ ಸಿಗದಿರಲು ಜನಪ್ರತಿನಿಧಿಗಳ ವೈಪಲ್ಯವಾಗಿದೆ. ಜಿಲ್ಲೆಯಲ್ಲಿ 35 ಸಾವಿರ ಸಹಿ ಸಂಗ್ರಹ ಮಾಡಿ ರೈಲು ಬೇಡಿಕೆ ಈಡೇರಿಸಲು ರೈಲ್ವೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿ, ಮುಂದೆ ಹಂತಹಂತವಾಗಿ ತೀವ್ರ ತೆರನಾದ ಹೋರಾಟಗಳನ್ನು ಸಿಪಿಐ(ಎಂ) ಪಕ್ಷ ನಡೆಸಲಿದೆ ಎಂದು ಬೈಂದೂರು ವಲಯ ಕಾರ್ಯದರ್ಶಿ ಸುರೇಶ್‌ಕಲ್ಲಾಗರ ಹೇಳಿದರು. ಅವರು ಬೈಂದೂರಿನಲ್ಲಿ ನಡೆದ ಕಾರವಾರ-ಬೆಂಗಳೂರು ರೈಲು ವೇಗ ಹೆಚ್ಚಳಕ್ಕಾಗಿ ಹಾಗೂ ಬೆಂಗಳೂರಿಗೆ ಮತ್ತೊಂದು ರೈಲು ಆರಂಭಿಸಲು ಒತ್ತಾಯಿಸಿ ಸಾರ್ವಜನಿಕರಿಂದ ಸಹಿ ಸಂಗ್ರಹ ಚಳವಳಿಯಲ್ಲಿ ಭಾಗವಹಿಸಿ ಮಾತನಾಡಿದರು. ಸಿಪಿಐ(ಎಂ) ಬೈಂದೂರು ವಲಯ ಮುಖಂಡರಾದ ವೆಂಕಟೇಶಕೋಣಿ ಮಾತನಾಡಿ ಖಾಸಗಿ ಮತ್ತು ಸರಕಾರಿ ಬಸ್ಸುಗಳ ಮಾಲಕರು ಹಬ್ಬ ಹರಿದಿನಗಳಲ್ಲಿ ಮನಸ್ಸೊ-ಇಚ್ಚೆ ಜನರಿಂದ ಸಾವಿರಾರು ರೂ.ಗಳನ್ನು ವಸೂಲಿ ಮಾಡಲಾಗುತ್ತಿದೆ. ಬಸ್ಸು ಮಾಲಕರಿಗೆ ಯಾವುದೇ ಕಡಿವಾಣ ಇಲ್ಲದಂತಾಗಿದೆ. ಕ್ರಮ ಜರುಗಿಸಬೇಕಾದ ಜಿಲ್ಲಾಡಳಿತ ತಪ್ಪಗೆ ಮಲಗಿದೆ ಎಂದು ಆರೋಪಿಸಿದರು. ಸಿಪಿಐ(ಎಂ) ಮುಖಂಡರಾದ ಹೆಚ್. ನರಸಿಂಹ, ರಾಜೀವ…

Read More