ಕುಂದಾಪುರ: ಪ್ರತಿಯೊಬ್ಬರಿಗೂ ಮಾತೃಭಾಷೆ ಮುಖ್ಯವಾಗಿರುತ್ತದೆ. ನಮ್ಮ ಭಾಷೆಯ ಮೇಲೆ ಪ್ರೀತಿಯನ್ನು ಬೆಳೆಸಿಕೊಳ್ಳಬೇಕು. ಕನ್ನಡ ಭಾಷೆಯನ್ನು ಬೆಳೆಸುವುದರೊಂದಿಗೆ ಬೇರೆ ಭಾಷೆಗೂ ಪ್ರಾಮುಖ್ಯತೆಯನ್ನು ನೀಡಬೇಕಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ ಹೇಳಿದರು. ಅವರು ಕನ್ನಡ ವೇದಿಕೆ ಕುಂದಾಪುರ, ಕುಂದಾಪುರ ತಾಲೂಕು ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘ, ಬಕುಳ ಸಾಹಿತ್ಯ ವೇದಿಕೆ, ಸರಕಾರಿ ಪ.ಪೂ.ಕಾಲೇಜು ಕುಂದಾಪುರ ಇವರ ಆಶ್ರಯದಲ್ಲಿ ಕುಂದಾಪುರದ ಸರಕಾರಿ ಪ.ಪೂ.ಕಾಲೇಜಿನ ಲಕ್ಷ್ಮಿ ನರಸಿಂಹ ಕಲಾಮಂದಿರದಲ್ಲಿ ನಡೆದ ಪ್ರೌಢಶಾಲಾ ವಿದ್ಯಾರ್ಥಿಗಳ ಜೊತೆ ಕನ್ನಡ ಮಾಸಾಚರಣೆಯ ಪ್ರಯುಕ್ತ ನಿತ್ಯ ಸತ್ಯ ಕನ್ನಡ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ವಿಜ್ಞಾನಿ ಡಾ|ದಿನೇಶ್ ಆಶಯ ಭಾಷಣ ಮಾಡಿ ಭಾಷೆ ಎನ್ನುವುದು ಅನುಭವಿಸುವಂತಾಗಬೇಕು. ಪ್ರತಿಯೊಬ್ಬನು ಭಾಷೆಯ ಬಗ್ಗೆ ಅಭಿಮಾನವನ್ನು ಬೆಳೆಸಿಕೊಂಡು ಅದು ಬದುಕಿನ ಒಂದು ಭಾಗವಾಗಬೇಕು ಎಂದರು. ಮುಖ್ಯ ಅತಿಥಿಗಳಾಗಿ ಕುಂದಾಪುರ ತಾಲೂಕು ಪ್ರೌಢಶಾಲಾ ಮುಖ್ಯೋಪಾಯರ ಸಂಘದ ಅಧ್ಯಕ್ಷ ದಿನಕರ ಆರ್.ಶೆಟ್ಟಿ, ಅರುಣ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಕುಂದಾಪುರ…
Author: ನ್ಯೂಸ್ ಬ್ಯೂರೋ
ಗಂಗೊಳ್ಳಿ: ಇತ್ತೀಚೆಗೆ ಕರ್ನಾಟಕ ಸರಕಾರದ ಪದವಿಪೂರ್ವ ಶಿಕ್ಷಣ ಇಲಾಖೆ ಬೆಂಗಳೂರು ಇವರ ವತಿಯಿಂದ ಚಿತ್ರದುರ್ಗದಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕರ ಟೆನ್ನಿಕಾಯ್ಟ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕರು ದ್ವಿತೀಯ ಸ್ಥಾನ ಪಡೆದರು.. ಟ್ರೋಫಿಯೊಂದಿಗೆ ವಿಜೇತ ಕ್ರೀಡಾಳುಗಳಾದ ನಾಗೇಂದ್ರ ಮೊಗವೀರ,ನಾಗರಾಜ ನಾಯಕ್ ಮತ್ತು ಪ್ರಜ್ವಲ್ ಖಾರ್ವಿ. ಸರಸ್ವತಿ ವಿದ್ಯಾಲಯದ ಪ್ರಾಂಶುಪಾಲ ಆರ್ ಎನ್ ರೇವಣ್ಕರ್,ದೈಹಿಕ ಶಿಕ್ಷಣ ನಿರ್ದೇಶಕರಾದ ನಾಗರಾಜ ಶೆಟ್ಟಿ ಉಪಸ್ಥಿತರಿದ್ದಾರೆ. ವರದಿ: ನರೇಂದ್ರ ಎಸ್ ಗಂಗೊಳ್ಳಿ.
ಗಂಗೊಳ್ಳಿ: ವ್ಯಕ್ತಿ ಎಷ್ಟೇ ದೊಡ್ಡವನಾದರೂ ತಾಯ್ನೆಲ ಮತ್ತು ತಾಯಿ ಬಾಷೆಯನ್ನು ಮರೆಯಬಾರದು. ಕನ್ನಡ ಎನ್ನುವುದು ನಮ್ಮ ದಿನನಿತ್ಯದ ಬಳಕೆಯಲ್ಲಿ ಸರಾಗವಾಗಿ ಹರಿಯಬೇಕು. ಬಾಷೆಯ ಬಗೆಗೆ ಹೆಮ್ಮೆ ಇರಬೇಕೆ ಹೊರತು ಕೀಳರಿಮೆ ಸಲ್ಲದು. ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ವಿಶ್ವನಾಥ ಭಟ್ ಅವರು ಅಭಿಪ್ರಾಯ ಪಟ್ಟರು. ಬೆಂಗಳೂರು ಹೋಟೆಲ್ ನ್ಯೂಸ್ ಮಾಸಪತ್ರಿಕೆ ಮತ್ತು ಕರ್ನಾಟಕ ಕರಾವಳಿ ನಾಗರಿಕ ಹಿತರಕ್ಷಣಾ ವೇದಿಕೆಯ ಗಂಗೊಳ್ಳಿ ಘಟಕವು ಇಲ್ಲಿ ಹಮ್ಮಿಕೊಂಡಿದ್ದ 60ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ನೆರವೇರಿಸಿ ಅವರು ಮಾತನಾಡಿದರು. ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷರಾದ ಜಿ.ಕೆ. ವೆಂಕಟೇಶ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ನರೇಂದ್ರ ಎಸ್ ಗಂಗೊಳ್ಳಿ ಕಾರ್ಯಕ್ರಮ ನಿರ್ವಹಿಸಿದರು. ದೈಹಿಕ ಶಿಕ್ಷಕ ನಾರಾಯಣ ಶೆಟ್ಟಿ. ರವೀಂದ್ರ ಪಟೇಲ್,ನಾಗರಾಜ ಶೇರುಗಾರ್, ರಾಘವೇಂದ್ರ ಪೂಜಾರಿ, ಆನಂದ ಗಾಣಿಗ ,ಆಕಾಶ್ ಗಾಣಿಗ , ಭಾಸ್ಕರ, ಲಕ್ಷ್ಮಣ, ಗುರು, ನಾರಾಯಣ, ಮುಕುಂದ, ನಾಗರಾಜ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು.ಸ.ವಿ.ಮಾದರಿ ಹಿರಿಯ…
ಕುಂದಾಪುರ: ತಾಲೂಕಿನ ಹಟ್ಟಿಯಂಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ್ದೆನ್ನಲಾದ ಸ್ಥಳದಲ್ಲಿ ಹಾಕಲಾಗಿದ್ದ ಭಗವದ್ವಜವನ್ನು ವಿನಾಕಾರಣ ಕಿತ್ತೆಸೆದ ತಲ್ಲೂರು ಗ್ರಾಮಾಡಳಿತದ ಕ್ರಮವನ್ನು ಖಂಡಿಸಿ ಇಂದು ತಲ್ಲೂರು ಗ್ರಾಮಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. (ಕುಂದಾಪ್ರ ಡಾಟ್ ಕಾಂ ಸುದ್ದಿ) ಕೋಟೆಬಾಗಿಲಿನ ಯುವಕರು ಇತ್ತೀಚೆಗೆ ಪಾರ್ತಿಕಟ್ಟೆ ಎಂಬಲ್ಲಿ ರಕ್ತೇಶ್ವರಿ ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿದ್ದ ಭಗವದ್ವಜ ನೆಟ್ಟಿದ್ದರು. ಸೋಮವಾರ ಮಧ್ಯಾಹ್ನ ತಲ್ಲೂರು ಪಂಚಾಯಿತಿ ಗುಮಾಸ್ತರೊಬ್ಬರು ಈ ಬಾವುಟವನ್ನು ಕಿತ್ತಿದ್ದರೆನ್ನಲಾಗಿದೆ. ಪುನಃ ದ್ವಜ ನೆಟ್ಟಿದ್ದರೂ ತಲ್ಲೂರು ಗ್ರಾಮ ಪಂಚಾಯಿತಿ ಸದಸ್ಯರೋರ್ವರ ಅಣತಿಯಂತೆ ಮತ್ತೆ ರಾತ್ರಿ ಕೀಳಲಾಗಿದೆ ಎಂದು ಕೆಲ ಯುವಕರು ಆರೋಪಿಸಿದ್ದಾರೆ. ಈ ಬಗ್ಗೆ ಮಂಗಳವಾರ ನಡೆದ ತಲ್ಲೂರು ಗ್ರಾಮಸಭೆಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾವುದೋ ಪೂರ್ವಾಪರ ಇಟ್ಟುಕೊಂಡು ಧ್ವಜವನ್ನು ಕಿತ್ತು ತಪ್ಪೆಸಗಿದವರು ಕ್ಷಮೆ ಯಾಚಿಸಬೇಕು. ಇಲ್ಲದಿದ್ದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಹಿಂದೂ ಸಂಘಟನೆಯ ಯುವಕರು ಎಚ್ಚರಿಸಿದ್ದರು. (ಕುಂದಾಪ್ರ ಡಾಟ್ ಕಾಂ ಸುದ್ದಿ) ಈ ನಡುವೆ ಸಾಮಾಜಿಕ ತಾಣಗಳಲ್ಲಿ ಭಗವಧ್ವಜ ಕಿತ್ತೆಸೆದಿರುವ ಬಗ್ಗೆ ಹಿಂದೂ ಪರ…
ಬೈಂದೂರು: ಇಲ್ಲಿಗೆ ಸಮೀಪದ ನಾಯ್ಕನಕಟ್ಟೆ ಬಳಿ ಲಾರಿಯೊಂದು ಮೊಪೆಡ್ ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭಿರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಇಂದು ಸಂಜೆಯ ವೇಳೆಗೆ ನಡೆದಿದೆ. ನಂದನವನ ನಿವಾಸಿ ಲಕ್ಷ್ಮಣ ಭಟ್ (66) ಮೃತ ದುರ್ದೈವಿ. ಬೈಂದೂರಿನಿಂದ ಕುಂದಾಪುರಕ್ಕೆ ಸಾಗುತ್ತಿದ್ದ ಲಾರಿ ಉಪ್ಪುಂದ ಕಡೆಯಿಂದ ನಂದನವನದತ್ತ ಸಾಗುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದಾಗ ಬೈಕ್ ಸವಾರ ಪಕ್ಕಕ್ಕೆ ಬಿದ್ದು, ಬೈಕ್ ಮೇಲೆ ಲಾರಿ ಏರಿಹೋದ ಪರಿಣಾಮ ಬೈಕ್ ಸಂಪೂರ್ಣ ನುಜ್ಜು ಗುಜ್ಜಾಗಿತ್ತು. ಗಂಭೀರವಾಗಿ ಗಾಯಗೊಂಡ ಲಕ್ಷ್ಮಣ ಭಟ್ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುತ್ತಿರುವಾಗ ಅವರು ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. (ಕುಂದಾಪ್ರ ಡಾಟ್ ಕಾಂ) ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ: ಕ್ರೀಡೆಗಳು ಬದುಕಿನಲ್ಲಿ ಹೊಸ ಚೈತನ್ಯ ಮೂಡಿಸುವ ಜೊತೆಗೆ ನಮ್ಮ ಕೌಶಲ್ಯವನ್ನು ವೃದ್ಧಿಸುತ್ತದೆ. ನಮ್ಮೊಳಗಿನ ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ಅವಕಾಶ ಕ್ರೀಡಾಕೂಟದಿಂದ ದೊರೆಯುವುದರಿಂದ ರೋಟರಿ ವಲಯದ ಸದಸ್ಯರ ನಡುವಿನ ಭಾಂದವ್ಯ ವೃದ್ಧಿಸುವ ಸಲುವಾಗಿ ವಲಯ ಕ್ರೀಡೋತ್ಸವವನ್ನು ಆಯೋಜಿಸಲಾಗಿದೆ. ಎಲ್ಲ ಸದಸ್ಯರ ಉತ್ಸಾಹದ ಭಾಗವಹಿಸುವಿಕೆಯಿಂದ ಕ್ರೀಡಾಕೂಟ ಯಶಸ್ವಿಯಾಗಲು ಸಾಧ್ಯವಾಗಿದೆ ಎಂದು ರೋಟರಿ ಅಸಿಸ್ಟೆಂಟ್ ಗವರ್ನರ್ ಸತೀಶ್ ಎನ್. ಶೇರೆಗಾರ್ ಹೇಳಿದರು. ಅವರು ರೋಟರಿ ಕ್ಲಬ್ ಕುಂದಾಪುರದ ಆಶ್ರಯದಲ್ಲಿ ರೋಟರಿ ವಲಯ 1ರ ಸದಸ್ಯರಿಗೆ ಏರ್ಪಡಿಸಿದ ರೋಟರಿ ವಲಯ ಕ್ರೀಡಾಕೂಟದ ಅಂಗವಾಗಿ ಕುಂದಾಪುರದ ಆರ್ಶೀವಾದ ಹಾಲ್ನಲ್ಲಿ ಆಯೋಜಿಸಿದ ಬಹುಮಾನ ವಿತರಣೆ ಸಮಾರಂಭದಲ್ಲಿ ಮಾತನಾಡಿದರು. ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಅಧ್ಯಕ್ಷತೆವಹಿಸಿದ್ದರು. ಸಹನಾ ಡೆವಲಪರ್ಸ್ನ ನಿರ್ದೇಶಕ ಸುರೇಂದ್ರ ಶೆಟ್ಟಿ ಬಹುಮಾನ ವಿತರಿಸಿದರು. ವಲಯದ ಕಾರ್ಯದರ್ಶಿ ಸುದರ್ಶನ್ ಕೆ. ಎಸ್., ಕ್ರೀಡಾಕೂಟ ಸಂಯೋಜಕ ರವಿರಾಜ್ ಶೆಟ್ಟಿ, ಕ್ರೀಡಾಕೂಟ ಸಂಚಾಲಕ ರಂಜಿತ್ ಶೆಟ್ಟಿ, ರೋಟರಿ ಕುಂದಾಪುರ ಕಾರ್ಯದರ್ಶಿ ಸಂತೋಷ ಕೋಣಿ ಉಪಸ್ಥಿತರಿದ್ದರು. ರೋಟರಿ ಸದಸ್ಯರಾದ…
ಬೈಂದೂರು: ಸಿಬ್ಬಂದಿಯೊಬ್ಬ ತನ್ನ ಸೇವಾ ಅವಧಿಯಲ್ಲಿ ಪ್ರಾಮಾಣಿಕತೆ, ನಿಷ್ಠೆ ಹಾಗೂ ತನ್ನ ಕರ್ತವ್ಯ ಅರಿತು ಕೆಲಸಮಾಡಿದಾಗ ಜನಮನ್ನಣೆಗಳಿಸಲು ಸಾಧ್ಯ ಎನ್ನುವುದಕ್ಕೆ ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಶಂಕರ ಕೊಠಾರಿ ಉತ್ತಮ ನಿದರ್ಶನ ಎಂದು ಸಂಘದ ಅಧ್ಯಕ್ಷ ಟಿ. ನಾರಾಯಣ ಹೆಗ್ಡೆ ಹೇಳಿದರು. ಯಡ್ತರೆಯ ಸಂಘದ ಪ್ರಧಾನ ಕಛೇರಿ ಆವರಣದಲ್ಲಿ ನಡೆದ ಇತ್ತೀಚೆಗೆ ನಿವೃತ್ತರಾದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಂಕರ ಕೊಠಾರಿ ಹಾಗೂ ವ್ಯವಸ್ಥಾಪಕ ವೈ. ಸುರೇಶ್ ಶ್ಯಾನುಬಾಗ್ ಅವರ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸುಧೀರ್ಘ 19 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ ಕೊಠಾರಿ ಅವರು ಸಂಘದ ಸಿಬ್ಬಂದಿಗಳು ಹಾಗೂ ಆಡಳಿತ ಮಂಡಳಿಯ ನಡುವೆ ಸಂಪರ್ಕ ಕೊಂಡಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಸಂಘದ ಅಭಿವೃದ್ಧಿಯಲ್ಲಿ ಅವರ ಕೊಡುಗೆ ಮಹತ್ತರವಾಗಿದೆ ಎಂದರು. ಎಸ್ಸಿಡಿಸಿಸಿ ಬ್ಯಾಂಕಿನ ನಿರ್ದೇಶಕ ರಾಜು ಪೂಜಾರಿ, ಸಂಘದ ನಿರ್ದೇಶಕರಾದ ವೆಂಕ್ಟ ಪೂಜಾರಿ, ಸದಾಶಿವ ಪಡುವರಿ, ಬಾಬು ಶೆಟ್ಟಿ, ಚಿಕ್ಕು ಪೂಜಾರಿ, ಎನ್. ನಾಗರಾಜ ಶೆಟ್ಟಿ,…
ಗಂಗೊಳ್ಳಿ : ನಿವೃತ್ತಿ ಎನ್ನುವುದು ಪ್ರತಿ ಉದ್ಯೋಗಸ್ಥರ ಜೀವನದ ಸಹಜ ತಿರುವು. ದುಖಃ ಸಂತೋಷಗಳೆರಡೂ ಸಹಜ. ಅವೆಲ್ಲಕ್ಕಿಂತ ಹೆಚ್ಚಾಗಿ ಒಬ್ಬರ ನಿವೃತ್ತಿ ಮೊದಲಿನ ಬದುಕು ಇಡೀ ಸಂಸ್ಥೆ ಮತ್ತು ಸಮಾಜ ಹಮ್ಮೆಪಡುವಂತಿದ್ದರೆ ಅದು ನಿಜವಾದ ಸಾಧನೆ ಎಂದು ಜಿ.ಎಸ್ ವಿ.ಎಸ್ ಅಸೋಶಿಯೇಶನ್ನಿನ ಅಧ್ಯಕ್ಷರಾದ ಡಾ.ಕಾಶೀನಾಥ ಪೈ ಅಭಿಪ್ರಾಯಪಟ್ಟರು. ಅವರು ಇಲ್ಲಿಯ ರೋಟರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದಲ್ಲಿ ಸತತ ನಲವತ್ತೊಂದು ವರುಷಗಳ ಕಾಲ ದ್ವಿತೀಯ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಜಿ.ಸದಾಶಿವ ಗಾಣಿಗರನ್ನು ಬೀಳ್ಗೊಡುವ ಸಮಾರಂಭದಲಿ ಅದ್ಯಕ್ಷತೆ ವಹಿಸಿ ಅವರನ್ನು ಅಭಿನಂದಿಸಿ ಮಾತನಾಡಿದರು. ಜಿ.ಎಸ್ ವಿ.ಎಸ್ ಅಸೋಶಿಯೇಶನ್ನಿನ ಕಾರ್ಯದರ್ಶಿ ಹೆಚ್ ಗಣೇಶ್ ಕಾಮತ್, ಸರಸ್ವತಿ ವಿದ್ಯಾಲಯದ ಕಾರ್ಯದರ್ಶಿ ಎನ್ ಸದಾಶಿವ ನಾಯಕ್, ಕಾಲೇಜಿನ ಪ್ರಾಂಶುಪಾಲ ಆರ್ ಎನ್ ರೇವಣ್ಕರ್ ,ಆಂಗ್ಲ ಮಾಧ್ಯಮ ಫ್ರೌಢಶಾಲೆಯ ಮುಖ್ಯೋಪಧ್ಯಾಯ ರಾಘವೇಂದ್ರ ಶೇರುಗಾರ್, ಆಡಳಿತ ಮಂಡಳಿಯ ಸದಸ್ಯ ಅಶ್ವಿನ್ ನಾಯಕ್, ಕಛೇರಿ ಸಿಬ್ಬಂದಿ ವರ್ಗದವರು ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ಕಛೇರಿ ಯ ನಿಕಟವರ್ತಿ ಭಾಸ್ಕರ್…
ಕುಂದಾಪುರ: ಹೋಲಿ ರೋಜರಿ ಮಾತೆ ಇಗರ್ಜಿಯ ತೆರಾಲಿ ಹಬ್ಬದ ಪೂರ್ವಭಾವಿಯಾಗಿ ಭಾನುವಾರ ಸಂಜೆ ಇಗರ್ಜಿ ಭಕ್ತವಂದದವರ ಸಹಭಾಗಿತ್ವದಲ್ಲಿ ಬೃಹತ್ ಪುರಮೆರವಣಿಗೆ ಹಾಗೂ ಸಹೋದರ ಭಾಂದತ್ವದ ರವಿವಾರವನ್ನು ಆಚರಿಸಲಾಯಿತು. ಮಂಗಳೂರಿನ ಮಂಗಳ ಜ್ಯೋತಿಯ ನಿರ್ದೇಶಕರಾದ ವಂದನೀಯ ಧರ್ಮಗುರು ವಿಜಯ್ ಮಚಾದೊ ಅವರ ಮಾರ್ಗದರ್ಶನದಲ್ಲಿ ರೊಜಾರಿ ಚರ್ಚಿನಲ್ಲಿ ಪವಿತ್ರ ಬಲಿದಾನದ ಪೂಜೆ ನೆರವೇರಿಸಲಾಯಿತು. ಕುಂದಾಪುರ ರೊಜಾರಿ ಮಾತೆ ಇಗರ್ಜಿಯ ಧರ್ಮಗುರು ವ| ಅನೀಲ್ ಡಿ’ಸೋಜಾ ಹಾಜರಿರು. ಸಹಾಯಕ ಧರ್ಮ ಗುರುಳಾದ ವ|ಪಾವ್ಲ್ ಪ್ರಕಾಶ್ ಡಿಸೋಜಾ ಮತ್ತು ಸಂತ ಮೇರಿಸ್ ಜೂ.ಕಾಲೇಜಿನ ಪ್ರಾಂಶುಪಾಲಾರಾದ ಧರ್ಮಗುರು ವ|ಪ್ರವೀಣ್ ಅಮ್ರತ್ ಮಾರ್ಟಿಸ್, ಚರ್ಚ್ ಮಂಡಳಿಯ ಸದಸ್ಯರು, ಧರ್ಮ ಭಗಿನಿಯರು ಹಾಗೂ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಈ ಪೂಜಾ ವಿಧಿಯಲ್ಲಿ ಭಾಗವಹಿಸಿದ್ದರು. ಬಳಿಕ ಸಂತ ಮೇರಿಸ್ ವಿದ್ಯಾ ಸಂಸ್ಥೆಯ ಆವರಣದಲ್ಲಿ ನಡೆದ ಪರಮ ಪ್ರಸಾದದ ಆರಾಧನೆಯಲ್ಲಿ ಕುಂದಾಪುರದ ಕ್ರೈಸ್ತ ಸಮುದಾಯದ ಬಂಧುಗಳು ಭಾಗವಹಿಸಿದ್ದರು. ಸಭೆಗೂ ಮೊದಲು ಮೇಣದ ಬತ್ತಿಗಳನ್ನು ಹೊತ್ತಿಸಿ, ಭಕ್ತಿ ಗಾಯನದೊಂದಿಗೆ, ಅಲಂಕಾರಗಳೊಂದಿಗೆ ಪರಮ ಪ್ರಸಾದದ ಮೆರವಣಿಗೆಯನ್ನು ಕುಂದಾಪುರದ…
ಕುಂದಾಪುರ: ಎಲ್ಲಾ ಭಾರತೀಯ ಭಾಷೆಗಳನ್ನು ಕಂಪ್ರೂಟರ್ಗೆ ಅಳವಡಿಸುವುದು ನನ್ನ ಗುರುತರ ಜವಾಬ್ಧಾರಿಯಾಗಿತ್ತು, ಆದರೆ ನನ್ನ ಮೂಲ ಭಾಷೆ ಕನ್ನಡವಾಗಿದ್ದರಿಂದ ಮತ್ತು ಅತಿ ಸುಲಭವಾಗಿ ನನಗೆ ಕನ್ನಡ ಲಿಪಿ ಮತ್ತು ಭಾಷೆ ಗೊತ್ತಿರುವುದರಿಂದ ನನಗೆ ಕನ್ನಡದ ತಂತ್ರಾಂಶದ ಅಭಿವೃದ್ಧಿಯತ್ತ ಹೆಚ್ಚು ಆಸಕ್ತನಾಗಲು ಸಾಧ್ಯವಾಯಿತು ಎಂದು ಕನ್ನಡ ತಂತ್ರಾಂಶ ಸಂಶೋಧಕ ನಾಡೋಜ ಕೆ.ಪಿ.ರಾವ್ ಹೇಳಿದರು. ಕನ್ನಡ ವೇದಿಕೆ ಕುಂದಾಪುರ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನವಂಬರ್ ತಿಂಗಳ ಎಲ್ಲಾ ಭಾನುವಾರಗಳು ನಡೆಯಲಿರುವ ಎರಡನೇ ವರ್ಷದ ಕನ್ನಡ ಮಾಸಾಚರಣೆ ’ಡಿಂಡಿಮ’ ಕಾರ್ಯಕ್ರಮವನ್ನು ಭಾನುವಾರ ಸಂಜೆ ಸ.ಪ.ಪೂ.ಕಾಲೇಜಿನ ಕಲಾಮಂದಿರದಲ್ಲಿ ಉದ್ಘಾಟಿಸಿ ಮಾತನಾಡಿದರು. ಒಂದು ಭಾರತೀಯ ಲಿಪಿಯಲ್ಲಿ ಮೊದಲ ಬಾರಿಗೆ ಕಂಪ್ಯೂಟರ್ಗೆ ಅಳವಡಿಸಿದ್ದು ಸಿಂಧೂ ಲಿಪಿಗೆ. ನಂತರದಲ್ಲಿ ಕನ್ನಡ ಸೇರಿದಂತೆ ಇತರ ಭಾಷಾ ಲಿಪಿಗಳ ಅಳವಡಿಕೆ ಸಾಧ್ಯವಾಯಿತು. ಕನ್ನಡೆ ಭಾಷೆಯನ್ನು ಕಂಪ್ಯೂಟರ್ನಲ್ಲಿ ಹೇಗೆ ಅಳವಡಿಸಿಕೊಳ್ಲಬೇಕು? ಮಾಹಿತಿ ತಂತ್ರಜ್ಞಾನಗಳಲ್ಲಿ ಕನ್ನಡವನ್ನು ಅಳವಡಿಸಿಕೊಳ್ಳುವ ಮೂಲಕ ಕನ್ನಡದ ಅಭಿವೃದ್ಧಿಗೆ ಹಚ್ಚು ಪ್ರಯತ್ನಶೀಲನಾಗಬೇಕಾಗಿದೆ. ಐದು ಶತಮಾನಗಳ ಹಿಂದೆ ಪಾಣಿನಿಯ ಮಾಹೇಶ್ವರ ಸೂತ್ರಗಳನ್ನು ಮೂಲವಾಗಿಟ್ಟುಕೊಂಡು ಲಿಪಿಗಳನ್ನು…
