Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಿಕ್ಷಣ ಕ್ಷೇತ್ರದ ಮಹೋನ್ನತ ಗುರಿಯೊಂದಿಗೆ ಏಳು ಜನ ಅತ್ಯಂತ ಅನುಭವಿ ಉಪನ್ಯಾಸಕರುಗಳೇ ಸೇರಿ ಸ್ಥಾಪಿಸಿದ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ 2022ರಲ್ಲಿ ತನ್ನ ಶಿಕ್ಷಣ ಸೇವೆಯನ್ನು ಉಡುಪಿಗೂ ವಿಸ್ತರಿಸುವ ಯೋಜನೆಯೊಂದಿಗೆ ಕಲ್ಯಾಣಪುರದ ತ್ರಿಶಾ ಪಪೂ. ಕಾಲೇಜಿನ ಶೈಕ್ಷಣಿಕ ಸಹಭಾಗಿತ್ವ ವಹಿಸಿಕೊಂಡಿತು. ಈಗಾಗಲೇ ಪಿ.ಯು ಫಲಿತಾಂಶದಲ್ಲಿ ಆರಂಭಿಕ ವರ್ಷದಲ್ಲೇ ರಾಜ್ಯದ ಗಮನ ಸೆಳೆದ ಕ್ರಿಯೇಟಿವ್ ಸಂಸ್ಥೆ ಉಡುಪಿಯ ಶಾಖೆಯಲ್ಲೂ ಆ ಯಶಸ್ಸನ್ನು ಮುಂದುವರೆಸಿದೆ. ತನ್ನ ಪ್ರಥಮ ವರ್ಷದ ಫಲಿತಾಂಶದಲ್ಲೇ 100% ಗಳಿಸುವುದರ ಜೊತೆಗೆ ಪಿ.ಯು ಪರೀಕ್ಷೆಯಲ್ಲಿ ರಾಜ್ಯಕ್ಕೆ 8ನೇ ರ್ಯಾಂಕ್‌ಗಳಿಸುವ ಮೂಲಕ ಸಂಸ್ಥೆ ಕೀರ್ತಿ ಗಳಿಸಿದೆ. 94 ಮಕ್ಕಳೊಂದಿಗೆ ಪ್ರಾರಂಭವಾದ ವಿದ್ಯಾಸಂಸ್ಥೆಯಲ್ಲಿ ಇಂದು 400ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಲ್ಲಿ ಕೇವಲ ಅಂಕ ಗಳಿಕೆಯ ಹಸಿವನ್ನು ಮಾತ್ರ ಬೆಳೆಸದೆ ಜೀವನ ಮೌಲ್ಯಗಳು, ನೈತಿಕತೆ, ಸದ್ವಿಚಾರಗಳನ್ನು ಪ್ರತಿನಿತ್ಯ ಬೋಧಿಸುತ್ತಿರುವುದು ಸಂಸ್ಥೆಯು ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿಯಾಗಿದೆ. ಉಡುಪಿಯಲ್ಲಿ ಕ್ರಿಯೇಟಿವ್ ಸಂಸ್ಥೆಯ ಯಶಸ್ಸಿನ ಪಯಣ ಸಂಸ್ಥೆ ಪ್ರಾರಂಭದ ವರ್ಷದಲ್ಲೇ 100%…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಕ್ಲಾಟ್ ಒಕ್ಕೂಟವು ನಡೆಸಿದ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ ಸಿಎಲ್‌ಎಟಿ 2025ರ ಫಲಿತಾಂಶದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಆಳ್ವಾಸ್‌ನ ದರ್ಶನ್ ಹೆಚ್‌ಜೆ, ಮಧು, ರಕ್ಷಾ ಕೆ.,  ರಾಜ್‌ದೀಪ್ ಎಸ್. ನಾಯಕ್, ಕುಂದನಿಕ ಗೌಡ, ಭೂಮಿ, ಗೌರಿ ಎಸ್. ಪಾಟೀಲ್, ಅರ್ವಿನ್, ಅನನ್ಯ ಡಿ, ಅನ್ನಾ ಲಹರಿ, ಮಿಥಾಲಿ ನಾಯ್ಕ ಕ್ಲಾಟ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಯನ್ನು  ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ, ಪ್ರಾಚರ್ಯ, ಮಹಮ್ಮದ್ ಸದಾಕತ್, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಮ್‌ಡಿ ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನ ಪದವಿ ವಿದ್ಯಾರ್ಥಿಗಳಿಗೆ ಕಾಲೇಜಿನ ಯೂತ್ ರೆಡ್ ಕ್ರಾಸ್ ಘಟಕ ಮತ್ತು ಜಿಲ್ಲಾ ಪಂಚಾಯತ್ ಉಡುಪಿ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮ, ಜಿಲ್ಲಾ ಆರೋಗ್ಯ ಕೇಂದ್ರ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಶ್ರೀ ಗಣೇಶ್ ದೇವಾಡಿಗ ಉಪ್ಪುಂದ, ಶ್ರೀ ಶಾರದಾಂಬ ಟ್ರಸ್ಟ್ ರಿ. ತೊಂಡೆಮಕ್ಕಿ ಇವರಿಂದ ಜಾನಪದ ಕಲಾ ಪ್ರಕಾರ ದಡಿಯಲ್ಲಿ ಯಕ್ಷಗಾನದ  ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ, ಪ್ರಾಥಮಿಕ ಆರೋಗ್ಯ ಕೇಂದ್ರ ಬಸ್ರೂರಿನ ಸಿಬ್ಬಂದಿಗಳು, ಕಾಲೇಜಿನ ಬೋಧಕ, ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜಿನ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಮುರಳೀಧರ ಹೆಗ್ಡೆ ಕಾರ್ಯಕ್ರಮ ನಿರ್ವಹಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಕರ್ನಾಟಕದಲ್ಲಿ ಅಂಚೆ ಕಚೇರಿಗಳು ವಹಿಸುತ್ತಿರುವ ಮಹತ್ವದ ಪಾತ್ರ, ಹಣಕಾಸು ಒಳಗೊಳ್ಳುವಿಕೆ ಹಾಗೂ ಗ್ರಾಮೀಣ ಸೇವಾ ವಿತರಣೆ ಕುರಿತು ಲೋಕಸಭೆಯಲ್ಲಿ ಪ್ರಶ್ನೆ ಮಾಡಿದ್ದಾರೆ. ಅಂಚೆ ಕಚೇರಿಗಳ ಮೂಲಕ ಬ್ಯಾಂಕಿಂಗ್, ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್ಫರ್ (DBT), ಡಿಜಿಟಲ್ ಸೇವೆಗಳು ಹಾಗೂ ಲಾಸ್ಟ್–ಮೈಲ್ ಡೆಲಿವರಿ ಬಲಪಡಿಸುವ ಕುರಿತು ಅವರು ಸರ್ಕಾರದ ಗಮನ ಸೆಳೆದಿದ್ದಾರೆ. ಈ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಂವಹನ ಸಚಿವಾಲಯದ ರಾಜ್ಯ ಸಚಿವರು, ಕರ್ನಾಟಕದಲ್ಲಿ ಅಂಚೆ ಕಚೇರಿಗಳು ಮತ್ತು ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಮೂಲಕ ಹಣಕಾಸು ಒಳಗೊಳ್ಳುವಿಕೆ ಮತ್ತು ಗ್ರಾಮೀಣ ಆರ್ಥಿಕ ಚಟುವಟಿಕೆಗಳು ಬಲಪಡಿಸಲಾಗುತ್ತಿವೆ ಎಂದು ಸದನಕ್ಕೆ ತಿಳಿಸಿದರು. ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿ 48.5 ಲಕ್ಷಕ್ಕೂ ಹೆಚ್ಚು IPPB ಖಾತೆಗಳು ತೆರೆಯಲ್ಪಟ್ಟಿದ್ದು, 28,000 ಕೋಟಿಗೂ ಅಧಿಕ ಮೊತ್ತದ 23 ಕೋಟಿ ಡಿಬಿಟಿ ವ್ಯವಹಾರಗಳು ಅಂಚೆ ಕಚೇರಿಗಳ ಮೂಲಕ ನೆರವೇರಿವೆ ಎಂದು ಸಚಿವರು ವಿವರಿಸಿದರು. ರಾಜ್ಯದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಪ್ರತಿಯೊಂದು ಮಗುವಿನ ಹಕ್ಕು ಆಗಿದೆ. ಮಗುವಿಗೆ ಅವಶ್ಯವಿರುವ ಪ್ರೀತಿ ಮತ್ತು ಆರೈಕೆಯನ್ನು ಕುಟುಂಬದ ವಾತಾವರಣವು ಕಲ್ಪಿಸುತ್ತದೆ. ದತ್ತು ಪ್ರಕ್ರಿಯೆ ಕಾನೂನು ಬದ್ಧವಾಗಿ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ತಿದ್ದುಪಡಿ ಕಾಯಿದೆ 2021ರ ಸೆಕ್ಷನ್ 56 (1) 58 ಮತ್ತು 61ರ ಅಡಿಯಲ್ಲಿ ಕುಟುಂಬದ ಪ್ರೀತಿ ವಂಚಿತ, ಪೋಷಕರನ್ನು ಕಳೆದುಕೊಂಡ, ಪಾಲನೆ ಪೋಷಣೆ ವಂಚಿತ ಪರಿತ್ಯಕ್ತ ಹಾಗೂ ನಿರ್ಗತಿಕ ಮಕ್ಕಳು ಮಾತ್ರ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯಿಂದ ದತ್ತು ಮುಕ್ತ ಆದೇಶ ಪಡೆದು ದತ್ತು ನೀಡಲು ಅರ್ಹರಾಗಿರುತ್ತಾರೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು ಇತ್ತೀಚೆಗೆ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿಯಲ್ಲಿ ತಮಿಳುನಾಡು ಮೂಲದ ಇಬ್ಬರು ದಂಪತಿಗಳಿಗೆ ಹಾಗೂ ಹಾಸನ ಮೂಲದ ಓರ್ವ ದಂಪತಿಗಳಿಗೆ ಒಟ್ಟು ಮೂರು ಮಕ್ಕಳ ಅಂತಿಮ ದತ್ತು ಆದೇಶ ನೀಡಿ, ಮಾತನಾಡಿದರು. ದತ್ತು ಪಡೆಯಲು ಇಚ್ಛಿಸುವ ದಂಪತಿಗಳು ಕಾನೂನು ಬದ್ಧವಾಗಿ ದತ್ತು ಪ್ರಕ್ರಿಯೆ ಮೂಲಕ ದತ್ತು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಿಕ್ಷಣ ಜ್ಞಾನ ಪತ್ರಿಕೆ ಬೆಂಗಳೂರು ಇವರು ಪ್ರತೀ ವರ್ಷ ಕೊಡಮಾಡುವ ಪ್ರಾಥಮಿಕ ಶಾಲಾ ವಿಭಾಗದ ರಾಜ್ಯ ಮಟ್ಟದ ʼಜ್ಞಾನಜ್ಯೋತಿ ಪ್ರಶಸ್ತಿ-2025ʼ ಕ್ಕೆ ತಾಲೂಕಿನ ಮೊಳಹಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆಯಾಗಿದ್ದಾರೆ. 1997ರಲ್ಲಿ ಶಿಕ್ಷಕ ವೃತ್ತಿಗೆ ಸೇರಿದ ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾಯ್ಕನಕಟ್ಟೆಯಲ್ಲಿ ಐದುವರೆ ವರ್ಷಗಳ ಸೇವೆ ಸಲ್ಲಿಸಿ ಉತ್ತಮ ಶಿಕ್ಷಕಿ ಎನಿಸಿಕೊಂಡರು. 2002ರಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೊಳಹಳ್ಳಿಯಲ್ಲಿ ಸೇವೆ ಸಲ್ಲಿಸುತ್ತಿರುವ ಅವರು ಸದಾಕಾಲ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸುತ್ತಾ, ಶಿಕ್ಷಕರ ಟಿ.ಎಲ್.ಎ೦ ಮೇಳದಲ್ಲಿ ಪ್ರಶಸ್ತಿ ಪಡೆದಿದ್ದು, 2001-2002 ರಲ್ಲಿ ಬೆಂಗಳೂರಿನ ಚಂದನ ವಾಹಿನಿಯಲ್ಲಿ ಬರುವ ಥಟ್ ಅ೦ಥ ಹೇಳಿ’ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲೆಯಿಂದ ಭಾಗವಹಿಸಿದ ಏಕೈಕ ಪ್ರಾಥಮಿಕ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದು, ಅದರಲ್ಲಿ ವಿದ್ಯಾರ್ಥಿಗಳು ಪ್ರಶಸ್ತಿ ಪಡೆಯಲು ಶ್ರಮ ವಹಿಸಿದ್ದಾರೆ. ಈವರೆಗೆ ಐದು ಬಾರಿ ಪ್ರಭಾರ ಮುಖ್ಯೋಪಾಧ್ಯಾಯರ ಕರ್ತವ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಬಿಜೂರು ಗ್ರಾಮದ ಕಂಚಿಕಾನ ಎಂಬಲ್ಲಿ ಒಬ್ಬಂಟಿಯಾಗಿ ವಾಸವಿದ್ದ ಕೆ. ಲೀಲಾವತಿ ಭಟ್ಟ (71) ಎಂಬ ವೃದ್ಧೆಯು ಸುಮಾರು ಕಳೆದ ಒಂದು ತಿಂಗಳಿನಿಂದ ನಾಪತ್ತೆಯಾಗಿರುವುದಾಗಿ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. 5 ಅಡಿ ಎತ್ತರ, ಉರುಟು ಮುಖ, ಎಣ್ಣೆಕಪ್ಪು ಮೈಬಣ್ಣ, ಸದೃಢ ಶರೀರ ಹೊಂದಿದ್ದು, ಕನ್ನಡ ಹಾಗೂ ಸಂಸ್ಕೃತ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-251033, ಮೊ.ನಂ: 9480805459, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ:08254-251031, ಮೊ.ನಂ: 9480805434 ಹಾಗೂ ಕಂಟ್ರೋಲ್ ರೂಂ 100 (0820-2526444) ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೈಂದೂರು ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕೆ ಮಾಡುವ ವಾಹನಗಳು ಓವರ್ ಲೋಡ್‌ನಿಂದಾಗಿ ಕಾಂಕ್ರೀಟ್ ರಸ್ತೆಯ ಮೇಲೆ ಎಲ್ಲೆಡೆ ಬೀಳುವುದರಿಂದ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುವುದರ ಜೊತೆಗೆ ಅಪಘಾತಗಳು ಆಗುತ್ತಿವೆ. ಅಂತಹ ವಾಹನಗಳಿಗೆ ನಿರ್ಧಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಂಡು ದಂಡ ವಿಧಿಸಬೇಕು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಕೆಲವು ಬಸ್‌ಗಳು ಬಸ್ ನಿಲ್ದಾಣವನ್ನು ಹೊರತುಪಡಿಸಿ, ಎಲ್ಲೆಂದರಲ್ಲಿ ನಿಲುಗಡೆ ಮಾಡುತ್ತಿದ್ದಾರೆ. ಇದರಿಂದ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಈ ಹಿಂದೆ ಈ ಬಗ್ಗೆ ಆರ್.ಟಿ.ಓ ಅಧಿಕಾರಿಗಳಿಗೆ ಕ್ರಮ ವಹಿಸಲು ಸೂಚಿಸಲಾಗಿತ್ತು. ಆದರೂ ಸುಧಾರಣೆ ಕಂಡುಬಂದಿಲ್ಲ. ಪ್ರತೀ ಮಾಹೆಯೂ ನಿಯಮವನ್ನು ಉಲ್ಲಂಘಿಸಿದಂತಹ ಬಸ್‌ಗಳ ಮೇಲೆ ಪ್ರಕರಣ ದಾಖಲಿಸಬೇಕು ಎಂದ ಅವರು, ಪ್ರತಿಯೊಂದು ಬಸ್‌ಗಳಿಗೂ ಸಹ ಡೋರ್‌ಗಳನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ವಿದ್ಯಾರ್ಥಿಗಳಿಗೆ ಕ್ರೀಡಾ ಕ್ಷೇತ್ರ ವಿಫುಲ ಅವಕಾಶಗಳಿವೆ. ಪಾಠದ ಜೊತೆಗೆ ಕ್ರೀಡೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಕ್ರೀಡೆಯಿಂದ ದೈಹಿಕವಾಗಿ ಮತ್ತು ಮಾನಸಿಕವಾಗಿ ಬೆಳವಣಿಗೆಯಾಗಲು ಸಾಧ್ಯವಿದೆ. ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಹೆಚ್ಚು ಸಹಾಯಕವಾಗುತ್ತದೆ ಎಂದು ಪತ್ರಕರ್ತ ಬಿ. ರಾಘವೇಂದ್ರ ಪೈ ಹೇಳಿದರು. ಅರು ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಶಾಲೆಯ ವಾರ್ಷಿಕ ಕ್ರೀಡಾಕೂಟದಲ್ಲಿ ಕ್ರೀಡಾಜ್ಯೋತಿಯನ್ನು ಪ್ರಜ್ವಲಿಸಿ ಮಾತನಾಡಿದರು. ಉದ್ಯಮಿ ಸುರೇಶ ಪೂಜಾರಿ ಧ್ವಜಾರೋಹಣಗೈದು ಶುಭ ಹಾರೈಸಿದರು. ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ರವಿಶಂಕರ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಸ್‌ಡಿಎಂಸಿ ಸದಸ್ಯ ಅಶೋಕ ಪೂಜಾರಿ, ತೌಹೀದ್ ಆಂಗ್ಲ ಮಾಧ್ಯಮ ಶಾಲೆಯ ದೈ.ಶಿ.ಶಿಕ್ಷಕಿ ಪವಿತ್ರ, ಎಸ್‌ಡಿಎಂಸಿ ಸದಸ್ಯರು, ಹಳೆ ವಿದ್ಯಾರ್ಥಿಗಳು, ಶಾಲೆಯ ಶಿಕ್ಷಕರು ಮೊದಲಾದವರು ಉಪಸ್ಥಿತರಿದ್ದರು. ಶಾಲೆಯ ಪ್ರಭಾರ ಮುಖ್ಯ ಉಷಾ ಕುಮಾರಿ ಸ್ವಾಗತಿಸಿ, ಸಹಶಿಕ್ಷಕಿ ಅನುಷಾ ಸಿ. ಬಂಗೇರ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು ಶಿಕ್ಷಣ ಕ್ಷೇತ್ರದಲ್ಲಿ ತನ್ನ ವಿಶಿಷ್ಟ ಸಾಧನೆಗಾಗಿ ರಾಷ್ಟ್ರೀಯ ಪ್ರಶಸ್ತಿಯಾದ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಪಡೆದುಕೊಂಡಿದೆ. ಶಿಕ್ಷಣ ಕ್ಷೇತ್ರದಲ್ಲಿ ತರಲಾಗುತ್ತಿರುವ ಕ್ರಾಂತಿಕಾರಿ ಬದಲಾವಣೆಗಳು-ಸುಧಾರಣೆಗಳು, ತಂತ್ರಜ್ಞಾನದ ಪರಿಣಾಮಕಾರಿ ಬಳಕೆ, ಪರಿಸರ ಸ್ನೇಹಿ ಕಾರ್ಯಕ್ರಮಗಳು, ಸಮಾಜಕ್ಕೆ ನೀಡಲಾಗುತ್ತಿರುವ ಕೊಡುಗೆಗಳು ಮತ್ತು ಪಠ್ಯೇತರ ಚಟುವಟಿಕೆ ವಿಭಾಗದಲ್ಲಿ ಶಾಲೆಯು ತೋರಿಸುತ್ತಿರುವ ವಿಶೇಷ ಆಸಕ್ತಿ ಮತ್ತು ಪ್ರೋತ್ಸಾಹಗಳನ್ನು ಗಮನಿಸಿ ಈ ಗೌರವ ನೀಡಲಾಗಿದೆ. ಈ ಪ್ರಶಸ್ತಿಯನ್ನು ಶಾಲೆಯ ಹಿರಿಯ ಅಧ್ಯಾಪಕಿಯಾದ ಬೇಬಿ ಎಸ್. ನಾಯ್ಕ್ ಅವರು ಶಾಲೆಯ ಪರವಾಗಿ ಸಮಾರಂಭದಲ್ಲಿ ಸ್ವೀಕರಿಸಿದರು. ಮುಂಬೈನಲ್ಲಿ ನಡೆದ ಈ ಕಾರ್ಯಕ್ರಮವು ESFE ಹಾಗೂ ಟೈಮ್ಸ್ ಆಫ್ ಇಂಡಿಯಾ ಇವರ ಸಹಯೋಗದಲ್ಲಿ ಆಯೋಜಿಸಲಾಗಿತ್ತು. ಪ್ರಶಸ್ತಿ ಪ್ರದಾನ ಸಮಾರಂಭದೊಂದಿಗೆ ಎಜುಕೇಶನ್ ಸಪ್ಲೈ ಮತ್ತು ಫ್ರಾಂಚೈಸಿ ಎಕ್ಸ್ಪೋ ಕೂಡ ನಡೆಯಿತು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿ ಮತ್ತು ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರರು ಶಾಲೆಯ ಸಿಬ್ಬಂದಿವರ್ಗ ಮತ್ತು ಆಡಳಿತ ಮಂಡಳಿಯು ಪ್ರೋತ್ಸಾಹ…

Read More