Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮುಂದಿನ ದಿನಗಳಲ್ಲಿ ಡಾಟಾ ಮೈನಿಂಗ್ ಕ್ಷೇತ್ರದಲ್ಲಿ ವಿಫುಲ ಉದ್ಯೋಗಾವಕಾಶಗಳಿವೆ ಎಂದು ಬೆಂಗಳೂರಿನ ಹೆಚ್ ಪಿಯಲ್ಲಿ ಜ್ಯೂನಿಯರ್ ಡಾಟಾ ವಿಜ್ನಾನಿ ಚೈತನ್ಯ ಹೊಳ್ಳ ಅವರು ಹೇಳಿದರು. ಅವರು ಇತ್ತೀಚೆಗೆ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಖ್ಯಾಶಾಸ್ತ್ರ ಭೌತಶಾಸ್ತ್ರ ಹಾಗೂ ಕೆರಿಯರ್ ಗೈಡೆನ್ಸ್ ಸೆಲ್ ಇದರ ಸಹಯೋಗದಲ್ಲಿ ನಡೆದ ಉಪಾನ್ಯಾಸ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತದ ದಿನಗಳಲ್ಲಿ ಡಾಟಾ ಮೈನಿಂಗ್ ಕ್ಷೇತ್ರವು ಸಾಕಷ್ಟು ಬೆಳೆಯುತ್ತಿದೆ. ಮುಂದಿನ ದಿನಗಳಲ್ಲೂ ಸಹ ಇದೇ ಕ್ಷೇತ್ರದಲ್ಲಿ ಉದ್ಯೋಗವೆಂಬುದನ್ನು ಅರಸಿಕೊಳ್ಳಬಹುದು. ಕೃತಕ ಬುದ್ಧಿವಂತಿಕೆ ಮತ್ತು ಯಂತ್ರಭಾಷೆಯನ್ನು ಕುರಿತು ಇಲ್ಲಿ ಹೆಚ್ಚಿನ ಮಹತ್ವವಿದೆ. ಅದಕ್ಕೆ ಪೂರಕವಾಗಿ ಆರ್ ಮತ್ತ್ ಪೈಥೋನ್ ಸಾಪ್ಟ್ ವೇರ್ ಗಳ ಕಲಿಯುವಿಕ್ವ್ ಅಗತ್ಯವಾಗಿ ಬೇಕಾಗಿರುತ್ತದೆ. ಇದಕ್ಕೆ ಯಾವುದೇ ವಾಣಿಜ್ಯ್ ಮತ್ತು ವಿಜ್ನಾನ ಪದವಿಗಳನ್ನು ಅಭ್ಯಸಿಸಿದರೆ ಅನೂಕೂಲಕರವಾಗಿರುತ್ತದೆ. ಅದರಲ್ಲೂ ಸಂಖ್ಯಾಶಾಸ್ತ್ರ ಮತ್ತು ಭೌತಶಾಸ್ತ್ರ ವಿಷಯಗಳ ಅಧ್ಯಯನ ಈ ಕ್ಷೇತ್ರದಲ್ಲಿ ಜ್ನಾನ ಬೆಳೆಸಿಕೊಳ್ಳಲು ಅನುಕೂಲ ಮಾಡಿಕೊಡುತ್ತದೆ. ವಿದ್ಯಾರ್ಥಿಗಳು ವಿಶೇಷ ಕೌಶಲವನ್ನು ಬೆಳೆಸಿಕೊಂಡಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕುಂದಾಪುರ ತಾಲೂಕು ಶಿರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವೇಶನ ರಹಿತರ ಹೋರಾಟ ಸಮಿತಿ ಮತ್ತು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಕುಂದಾಪುರ ತಾಲೂಕು ಸಮಿತಿಗಳ ನೇತೃತ್ವದಲ್ಲಿ ಶಿರೂರು ಗ್ರಾಮದ ಬಡ ನಿವೇಶನ ರಹಿತರು ನಿವೇಶನ ಸ್ಥಳ ಮಂಜೂರು ಮಾಡಲು ಒತ್ತಾಯಿಸಿ ಶಿರೂರು ಗ್ರಾಮ ಪಂಚಾಯತ್ ಕಛೇರಿ ಮುತ್ತಿಗೆ ಹೋರಾಟ ಕಾರ್ಯಕ್ರಮ ಗುರುವಾರ ನಡೆಯಿತು. ಸ್ವಂತ ಮನೆ, ಭೂಮಿ ಇಲ್ಲದ, ಬಾಡಿಗೆ ಮನೆಯಲ್ಲಿ ವಾಸವಾಗಿರುವ ಒಂದೇ ಮನೆಯ ಸೂರಿನಡಿಯಲ್ಲಿ ೨-೩ ಕುಟುಂಬ ಅನಿವಾರ್ಯ ಪರಿಸ್ಥಿತಿಯಲ್ಲಿ ವಾಸವಾಗಿರುವ ಬಡ ನಿವೇಶನ ರಹಿತ ೧೧೬೦ ಅರ್ಜಿದಾರರು ನಿವೇಶನ ಕೋರಿ ಸಲ್ಲಿಸಿದ ಅರ್ಜಿಗಳನ್ನು ಈ ಕೂಡಲೇ ಅರ್ಹ ನಿವೇಶನ ರಹಿತರ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಿ, ಅದಕ್ಕನುಗುಣವಾಗಿ ಎಷ್ಟು ಸರಕಾರಿ ಜಮೀನು ನಿವೇಶನಕ್ಕಾಗಿ ಮಂಜೂರು ಮಾಡಲು ಬೇಕು ಎಂಬುದಕ್ಕೆ ಬೈಂದೂರು ತಹಶೀಲ್ದಾರರವರಿಗೆ ಸ್ಥಳೀಯ ಗ್ರಾಮ ಪಂಚಾಯತ್ ವತಿಯಿಂದ ಪ್ರಸ್ಥಾವನೆಯನ್ನು ಸಲ್ಲಿಸಲು ಕ್ರಮ ವಹಿಸಬೇಕು ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಾಡಿನ ರಕ್ಷಣೆ, ಮೂಡನಂಬಿಕೆಯ ಬಗೆಗಿನ ಜಾಗೃತಿ ಮೂಡಿಸುವ ಸುಂದರ ಕಥಾಹಂದರವಿರುವ ಕಿರುಚಿತ್ರ ‘ಕಾಡು ದಾರಿ’ ಸೆಪ್ಟೆಂಬರ್ 13ರ ಸಂಜೆ ಬಿಡುಗಡೆಗೊಳ್ಳಲಿದೆ. ಯುವ ತಂಡ ಒಟ್ಟಾಗಿ ನಿರ್ಮಿಸಿರುವ ಕಿರುಚಿತ್ರ ಒಂದಿಷ್ಟು ಕುತೂಹಲ ಮೂಡಿಸಿದೆ. ಅರಣ್ಯಾಧಿಕಾರಿ ಹಾಗೂ ಕಾಡುಗಳ್ಳರ ಸುತ್ತ ನಡೆಯುವ ಕಾಡು ದಾರಿಕಿರುಚಿತ್ರಕ್ಕೆ ಕಾಡುವ ದಾರಿ ಎಂಬ ಟ್ಯಾಗ್ಲೈನ್ ನೀಡಲಾಗಿದೆ. ಸ್ನೇಹಜೀವಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಮೂಡಿಬರುತ್ತಿರುವ ಕಿರುಚಿತ್ರ ಯುವ ನಿರ್ದೇಶಕ ಅಮಿತ್ ಶೆಟ್ಟಿ ಆವರ್ಸೆ ಅವರ ನಿರ್ದೇಶನದಲ್ಲಿ ಮೂಡಿಬಂದಿದೆ. ಈ ಕಿರುಚಿತ್ರಕ್ಕೆ ಶರತ್ ಅಡಿಗ, ಶ್ರೀಕುಮಾರ್ ಛಾಯಾಗ್ರಹಣ ಮಾಡಿದ್ದಾರೆ. ಶ್ರೀಧರ ಪೂಜಾರಿ ಆವರ್ಸೆ ಕಥೆ ಚಿತ್ರಕಥೆ ಬರೆದಿದ್ದು ಸಂಪತ್ ವಂಡಾರು ಸಂಭಾಷಣೆ ಬರೆದಿದ್ದಾರೆ. ಕಾರ್ತಿಕ್ ರಾಜ್, ಮನು ಹಂದಾಡಿ ಸಂಗೀತ ನೀಡಿದ್ದು, ಹರೀಶ್ ಕಿರಣ್ ತುಂಗ ಸಾಸ್ತಾನ ಸಂಕಲನ ಮಾಡಿದ್ದಾರೆ. ನಿರ್ದೇಶಕರಾದಿಯಾಗಿ ಸ್ಥಳೀಯರೇ ಈ ಕಿರುಚಿತ್ರದಲ್ಲಿ ನಟಿಸಿದ್ದಾರೆ. ಯುವಕರ ಈ ಹೊಸ ಪ್ರಯತ್ನವನ್ನು ಪ್ರೋತ್ಸಾಹಿಸುವ ಕೆಲಸವನ್ನು ಪ್ರೇಕ್ಷಕ ಪ್ರಭುಗಳು ಮಾಡಬೇಕಿದೆ. ಚಿತ್ರದ ಟ್ರೇಲರ್ ಇಲ್ಲಿದೆ

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸಲು ಕಾಲೇಜಿನ ಕಟ್ಟಡವೋ ಭೋದಕ ಸಿಬ್ಬಂದಿಯೋ ಮಾತ್ರ ಕಾರಣವಾಗೋದಿಲ್ಲ. ಯಶಸ್ಸಿಗಾಗಿ ಕನಸನ್ನು ಬಿತ್ತುವ ಹೆತ್ತವರೂ ಪ್ರಮುಖ ಕಾರಣರಾಗುತ್ತಾರೆ. ಅಪ್ಪ ಅಮ್ಮ ಬೀರುವ ಪ್ರಭಾವ ಇನ್ನೊಬ್ಬರಿಂದ ಅಸಾಧ್ಯ ಹೀಗಾಗಿ ಮಕ್ಕಳು ಪರೀಕ್ಷಾ ಅಂಕಗಳಿಗಷ್ಟೇ ಸೀಮಿತವಾಗದೆ ಪ್ರಜ್ಞಾವಂತ ನಾಗರಿಕರಾಗಿ ಬದುಕಿನಲ್ಲೂ ಉತ್ತಮ ಅಂಕಗಳಿಸುವಂತೆ ಹುರಿದುಂಬಿಸುವ ಪೋಷಕರು ನಾವಾಗುವ ಬೇಕು ಎಂದು ಅಂತರ್ರಾಷ್ಟೀಯ ಜಾದೂಗಾರ ಲೇಖಕ ಓಂಗಣೇಶ್ ಉಪ್ಪುಂದ ಹೇಳಿದರು. ನಾವುಂದ ರಿಚರ್ಡ್ ಅಲ್ಮೇಡಾ ಮೆಮೋರಿಯಲ್ ಕಾಲೇಜಿನ ರಕ್ಷಕ ಶಿಕ್ಷಕರ ಮಹಾ ಸಭೆಯಲ್ಲಿ ವಿದ್ಯಾಥಿಗಳ ಹೆತ್ತವರ ಹೊಣೆಗಾರಿಕೆಯ ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಕೆ ಶಾಂತಾರಾಮ್ ಪ್ರಸ್ತಾವಿಕ ಮಾತನಾಡುತ್ತಾ ಶಿಕ್ಷಣಸಂಸ್ಥೆಗಳಿಗೆ ಪೋಷಕರ ನಿರಂತರ ಸಂಪರ್ಕದಿಂದ ವಿದ್ಯಾರ್ಥಿಗಳಿಗೂ ಉಪನ್ಯಾಸಕರಿಗೂ ಸ್ಪೂರ್ತಿ ಹೆಚ್ಚುತ್ತದೆ ಹಾಗೂ ಜವಾಬ್ದಾರಿ ಬೆಳೆಯುತ್ತದೆ ಇದೇ ಉದ್ದೇಶಕ್ಕಾಗಿ ಇಂದು ಸಭೆ ಹಮ್ಮಿಕೊಂಡಿದ್ದೇವೆ ಎಂದರು. ಕಾಲೇಜಿನ ಪ್ರಧಾನ ಸಂಚಾಲಕ ಸಿಲ್ವೆಸ್ಟರ್ ಡಿ ಅಲ್ಮೇಡಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಸಂಸ್ಥೆಯ ಪರಿಶೃಮವನ್ನು ಹಾಗೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಮ್ಮ ಅಗತ್ಯಕ್ಕಿಂತ ಹೆಚ್ಚು ಸಮಯ ಆಸಕ್ತಿಗಳನ್ನು ತಂತ್ರಜ್ಞಾನದ ಬಳಕೆಗೆ ಮೀಸಲಾಗಿಟ್ಟರೆ, ಯುವ ವಿದ್ಯಾರ್ಥಿಗಳು ಬೌದ್ಧಿಕ ಬೆಳವಣಿಗೆಗೆ ಬೇಕಾದ ಸಮಯ ಮತ್ತು ಸಂಯಮವನ್ನು ಕಳೆದುಕೊಳ್ಳಬೇಕಾಗುತ್ತದೆ. ಬದಲಾಗಿ ಯುವ ಜನತೆಯು ಕಲಾತ್ಮಕ ಚಟುವಟಿಕೆಗಳಲ್ಲಿ ತೊಡಗಿಕೊಂಡು ಇತರರೊಂದಿಗೆ ಸಹನೆಯಿಂದ ಬಾಳಲು ಕಲಿಯಬೇಕು ಎಂದು ಕುಂದಾಪುರದ ಭಂಡಾರ್‌ಕಾರ್ಸ್ ಕಾಲೇಜಿನ ಕನ್ನಡಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ರೇಖಾ ವಿ ಬನ್ನಾಡಿ ಹೇಳಿದರು. ಅವರು ಕುಂದಾಪುರದ ಆರ್.ಎನ್.ಶೆಟ್ಟಿ. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷರಾದ ಕಾಲೇಜಿನ ಸಂಚಾಲಕರಾದ ಬಿ.ಎಂ ಸುಕುಮಾರ ಶೆಟ್ಟಿ ವಿದ್ಯಾರ್ಥಿಗಳು ಮನೋಸ್ಥೈರ್ಯವನ್ನು ವೃದ್ಧಿಸಿಕೊಳ್ಳಬೇಕೆಂಬ ಕಿವಿಮಾತು ಹೇಳಿದರು. ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿಯವರಾದ ಸೀತಾರಾಮ ನಕ್ಕತ್ತಾಯರವರು ವಿದ್ಯಾರ್ಥಿಗಳ ಸ್ಪರ್ಧೆಗೆ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ನವೀನ ಕುಮಾರ ಶೆಟ್ಟಿಯವರು ಅತಿಥಿಗಳನ್ನು ಸ್ವಾಗತಿಸಿದರು. ಆಂಗ್ಲಭಾಷಾ ಪ್ರಾದ್ಯಾಪಕಿ ಸುಮತಿ ಶೆಣೈಯವರು ಉದ್ಘಾಟಕರ ಪರಿಚಯ ಮಾಡಿದರು. ಆಂಗ್ಲಭಾಷಾ ಪ್ರಾಧ್ಯಾಪಕಿ ಲೋನಾ ಲೂಯಿಸ್‌ರವರು ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಬಿದ್ಕಲ್‌ಕಟ್ಟೆ ಆಶ್ರಯದಲ್ಲಿ ಬಿದ್ಕಲ್‌ಕಟ್ಟೆಯಲ್ಲಿ ಜರುಗಿದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕಬಡ್ಡಿ ಪಂದ್ಯಾಟದಲ್ಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜು ಬಾಲಕಿಯರು ಪ್ರಥಮ ಸ್ಥಾನ ಪಡೆದು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ವಿಜೇತ ವಿದ್ಯಾರ್ಥಿಗಳೊಂದಿಗೆ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ್ ಶೆಟ್ಟಿ ಹೊಸಮಠ, ದೈಹಿಕ ಶಿಕ್ಷಣ ಶಿಕ್ಷಕ ಸಚಿನ್ ಕುಮಾರ್ ಶೆಟ್ಟಿ ಹುಂಚನಿ, ಉಪನ್ಯಾಸಕ ರಾಮ್ ನಾಯ್ಕ್ ಮತ್ತು ಗ್ರಾಮ ಪಂಚಾಯತ್ ಸದಸ್ಯ ಪ್ರಕಾಶ್ ಪೂಜಾರಿ ಇದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ, ಕುಂದಾಪುರ: ಮನುಷ್ಯನ ಅಂಗಾಂಗಳಲ್ಲಿ ಕಣ್ಣು ಚಿಕ್ಕದಾಗಿದ್ದರೂ ಕೂಡ ಐದು ಬಗೆಯ ಖಾಯಿಲೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಕಣ್ಣಿನ ಸಂಬಂಧಿ ಖಾಯಿಲೆಯಲ್ಲಿ ನಾಲ್ಕು ಪ್ರಕಾರವನ್ನು ಗುಣಪಡಿಸಲಾಗಿದ್ದರೂ ಮುಂದಾಗುವ ಹಾನಿಯನ್ನು ನಿಯಂತ್ರಿಸಬಹುದಷ್ಟೇ. ಆದರೆ ಕಣ್ಣಿನ ಪೊರೆ ಸಮಸ್ಯೆಯನ್ನು ಸಂಪೂರ್ಣವಾಗಿ ಹೋಗಲಾಡಿಸುವ ಚಿಕಿತ್ಸೆಗಳು ಲಭ್ಯವಿದ್ದು, ವಯಸ್ಸಾದಂತೆ ದೃಷ್ಟಿ ಮಂಜಾಗದಂತೆ ನೋಡಿಕೊಳ್ಳಬಹುದಾಗಿದೆ ಎಂದು ಪಾರ್ವತಿ ಮಹಾಬಲ ಶೆಟ್ಟಿ, ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಜಯರಾಮ ಶೆಟ್ಟಿ ಹೇಳಿದರು. ಅವರು ರೋಟರಿ ಕ್ಲಬ್ ಬೈಂದೂರು, ಇನ್ನರ್‌ವ್ಹೀಲ್ ಕ್ಲಬ್ ಬೈಂದೂರು, ಹಿಂದೂ ಅಭ್ಯುದಯ ಸಂಘ ರಿ. ನಾವುಂದ, ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಮತ್ತು ಕಣ್ಣಿನ ಆಸ್ಪತ್ರೆ ಶಿರೂರು-ಮುದ್ದುಮನೆ, ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ ಉಡುಪಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರಿ. ಸಂಯುಕ್ತಾಶ್ರಯದಲ್ಲಿ ನಾವುಂದ ಶ್ರೀ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ ಜರುಗಿದ ಉಚಿತ ನೇತ್ರ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರವನ್ನು ದೀಪ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಂಗೀತದ ಬಗೆಗೆ ಕನಿಷ್ಠ ಜ್ಞಾನ, ಅಧ್ಯಯನವಿಲ್ಲದೇ ನೇರವಾಗಿ ವೇದಿಕೆಯಲ್ಲಿ ಹಾಡುವ ಪ್ರವೃತ್ತಿ ಹೆಚ್ಚುತ್ತಿದೆ. ಆದರೆ ನಿರಂತರವಾದ ಕಲಿಕೆಯಿಂದ ಮಾತ್ರ ಸಂಗೀತದಲ್ಲಿ ಸಾಧನೆ ಮಾಡಲು ಸಾಧ್ಯವಿದೆ. ಗ್ರಾಮೀಣ ಭಾಗದಲ್ಲಿ ನಡೆಯುವ ಸಂಗೀತ ಸ್ವರ್ಧೆಗಳು ಮಕ್ಕಳಲ್ಲಿನ ಪ್ರತಿಭಾನ್ವೇಷಣೆಗೆ ವೇದಿಕೆಯಾಗುವುದಲ್ಲದೇ, ಸಂಗೀತಾಸಕ್ತರಿಗೆ ಆರಂಭದಲ್ಲಿಯೇ ಪ್ರೋತ್ಸಾಹ ನೀಡುವ ಕಾರ್ಯ ಮಾಡುತ್ತದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಸುಬ್ರಹ್ಮಣ್ಯ ಭಟ್ ಹೇಳಿದರು. ಅವರು ಸವಿಸವಿ ನೆನಪು ಕಲಾ ಸಂಸ್ಥೆ ಕಳವಾಡಿ, ಶ್ರೀ ಮಾರಿಕಾಂಬ ಹವ್ಯಾಸಿ ಕಲಾ ತಂಡ ಕಳವಾಡಿ ಹಾಗೂ ಶ್ರೀ ಬ್ರಹ್ಮಲಿಂಗೇಶ್ವರ ಫ್ರೆಂಡ್ಸ್ ತಗ್ಗರ್ಸೆ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಜೆಎನ್‌ಆರ್ ಕಲಾಮಂದಿರದಲ್ಲಿ ಆಯೋಜಿಸಲಾಗಿದ್ದ ಶ್ರಾವಣ ಸಂಗೀತ ಸ್ವರ್ಧೆ ಹಾಗೂ ಸಂಗೀತ ರಸಮಂಜರಿ ಸ್ವರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು. ಬೈಂದೂರು ಕಂಬಳ ಸಮಿತಿ ಅಧ್ಯಕ್ಷ ವೆಂಕಟ ಪೂಜಾರಿ ಸಸಿಹಿತ್ಲು ಅಧ್ಯಕ್ಷತೆ ವಹಿಸಿದ್ದರು. ಸವಿ ಸವಿ ನೆನಪು ಕಲಾತಂಡದ ಗೌರವ ಪೋಷಕ ರಘುರಾಮ ಪೂಜಾರಿ, ಸಂಗೀತಗಾರ ಚಂದ್ರ ಬಂಕೇಶ್ವರ್,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಹಕಾರಿ ಸಂಘಗಳು ದೈನಂದಿನ ಆರ್ಥಿಕ ವ್ಯವಹಾರಗಳೊಂದಿಗೆ ಸಾಮಾಜಮುಖಿ ಚಟುವಟಿಕೆಗಳಲ್ಲಿಯೂ ಗಮನ ಹರಿಸಿದಾಗ ಹೆಚ್ಚಿನ ಪ್ರಗತಿ ಕಾಣಲು ಸಾಧ್ಯವಿದೆ. ಸದಸ್ಯರು ಸ್ವಾವಲಂಭಿ ಬದುಕಿಗೆ ಅಗತ್ಯವಾದ ನೆರವು ಪಡೆದು, ಕೌಶಲಗಳನ್ನು ಅಳವಡಿಸಿಕೊಳ್ಳುವುದರ ಜೊತೆಗೆ ಪರಸ್ಪರರೊಂದಿಗೆ ಸ್ನೇಹ ವಿಶ್ವಾಸದಿಂದ ಬದುಕುವುದೂ ಅಗತ್ಯವಾಗಿದೆ ಎಂದು ಉಪ್ಪುಂದ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷೆ ಯು. ವರಮಹಾಲಕ್ಷ್ಮೀ ಹೊಳ್ಳ ಹೇಳಿದರು. ಅವರು ಉಪ್ಪುಂದ ಶಂಕರ ಕಲಾಮಂದಿರ ಆವರಣದಲ್ಲಿ ಜರುಗಿದ ವನಿತಾ ಸ್ನೇಹ ಸಮ್ಮಿಲನ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಪ್ರತಿವರ್ಷ ಆಯೋಜಿಸಲಾಗುತ್ತಿರುವ ವನಿತಾ ಸ್ನೇಹ ಸಮ್ಮಿಲನ ಸಂಘದ ಸದಸ್ಯರ ಉತ್ತಮ ಭಾಂದವ್ಯಕ್ಕೆ ಸಾಕ್ಷಿಯಾಗಿದೆ ಎಂದರು. ಹಿರಿಯ ಸಾಹಿತಿ ಯು. ಚಂದ್ರಶೇಖರ ಹೊಳ್ಳ, ಬೈಂದೂರು ಇನ್ನರ್‌ವ್ಹೀಲ್ ಕ್ಲಬ್ ಲಿಟರಸಿ ಕೋ ಆರ್ಡಿನೇಟರ್ ಸುಜಾತಾ ರಾವ್ ಉಪಸ್ಥಿತರಿದ್ದರು. ಬೈಂದೂರು ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ. ಕೆ. ಶಂಕರ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ರಂಗೋಲಿ, ಆಶುಭಾಷಣ, ರಸಪಶ್ನೆ, ಕರಕುಶಲ ವಸ್ತು ತಯಾರಿ, ದಾಸರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ತಗ್ಗರ್ಸೆ ಶ್ರೀ ಬ್ರಹ್ಮದೇವರ ವಠಾರ ಶ್ರೀ ನಾಗಬನದಲ್ಲಿ ಜರುಗುವ 28ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವದ ಕಾರ್ಯಕಾರಿ ಸಮಿತಿ ಅಧ್ಯಕ್ಷರಾಗಿ ಮಂಜುನಾಥ ಪೂಜಾರಿ ಹಕ್ಲುಮನೆ ಹಾಗೂ ಕಾರ್ಯದರ್ಶಿಯಾಗಿ ಸುಬ್ರಹ್ಮಣ್ಯ ಆಚಾರ‍್ಯ ಆಯ್ಕೆಯಾಗಿದ್ದಾರೆ. ಸಮಿತಿಯ ಉಪಾಧ್ಯಕ್ಷರಾಗಿ ಪ್ರದೀಪ ಶೆಟ್ಟಿ, ಮಂಜುನಾಥ ದಾಸ್, ಗುರುರಾಜ ಆಚಾರ‍್ಯ, ಪ್ರಶಾಂತ ಆಚಾರ‍್ಯ, ಮಂಜುನಾಥ ಹಾಡಿಮನೆ, ಅಕ್ಷಯ್ ಶೆಟ್ಟಿ; ಜೊತೆ ಕಾರ್ಯದರ್ಶಿಯಾಗಿ ಪ್ರದೀಪ್ ಆಚಾರ‍್ಯ, ಸೋಮಶೇಖರ ಆಚಾರ‍್ಯ, ಪ್ರಭಾಕರ ಮೊಗವೀರ, ಶಿವಾನಂದ ಚಂದನ್, ಮಂಜುನಾಥ ಆಚಾರ‍್ಯ, ಸಂತೋಷ ಆಚಾರ‍್ಯ, ನಾಗರಾಜ ಶೆಟ್ಟಿ; ಕೋಶಾಧಿಕಾರಿಗಳಾಗಿ ಪ್ರಮೋದ್ ಆಚಾರ‍್ಯ, ಮಹೇಶ್, ರಾಘವೇಂದ್ರ ಆಚಾರ‍್ಯ, ಆಕಾಶ್ ಕುಂದರ್, ವಸಂತ ಪೂಜಾರಿ, ಮಂಜುನಾಥ ಸಿದ್ಧನಹಿತ್ಲು, ರಾಜೇಂದ್ರ ಪೂಜಾರಿ, ಕಾರ್ತಿಕ್ ಶೆಟ್ಟಿ, ಅಭಿಷೇಕ್; ಲೆಕ್ಕ ಪರಿಶೋಧಕರಾಗಿ ಗಣೇಶ ಜಟ್ಟಿಹಿತ್ಲು, ಮಹೇಂದ್ರ ಆಚಾರ‍್ಯ ಆಯ್ಕೆಯಾಗಿದ್ದಾರೆ. ಸಂಘಟನಾ ಕಾರ್ಯದರ್ಶಿಯಾಗಿ ದೇವರಾಜ ಆಚಾರ‍್ಯ, ಗೋವಿಂದರಾಜ ಆಚಾರ‍್ಯ, ಲಕ್ಷ್ಮಣ ಚಂದನ್, ಸುದೇಶ್, ರಾಜಶೇಖರ, ಶ್ರೀನಿವಾಸ ಆಚಾರ‍್ಯ, ಗುರುಪ್ರಸಾದ್, ಸಂತೋಷ್, ರವಿದಾಸ್, ದಯಾನಂದ ಚಂದನ್;…

Read More