ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಾಗರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಬೈಂದೂರು 2016-17ನೇ ಸಾಲಿನಲ್ಲಿ 294 ಕೋಟಿಯಷ್ಟು ವ್ಯವಹಾರ ನಡೆಸಿ 73.15 ಲಕ್ಷ ರೂ. ಲಾಭಗಳಿಸಿದ್ದು, ಸಂಸ್ಥೆಯ ಸದಸ್ಯರಿಗೆ ಶೇ.13ರಷ್ಟು ಡಿವಿಡೆಂಟ್ ನೀಡಲು ನಿರ್ಧರಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಸೋಮವಾರ ಬೈಂದೂರಿನ ಪ್ರಧಾನ ಕಛೇರಿಯಲ್ಲಿ ಜರುಗಿದ 15ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಆರ್ಥಿಕ ವರ್ಷದ ಅಂತ್ಯಕ್ಕೆ ಸಂಘವು 29.85 ಕೊಟಿ ರೂ. ಠೇವಣಿ ಸಂಗ್ರಹಿಸಿ, 25.23 ಕೋಟಿ ರೂ. ಸಾಲ ನೀಡಿ ಒಟ್ಟು 294 ಕೋಟಿ ರೂ. ವಹಿವಾಟು ನಡೆಸಿದೆ ಎಂದ ಅವರು ಪ್ರಧಾನ ಕಛೇರಿ ಸೇರಿದಂತೆ ಆರು ಶಾಖೆಗಳನ್ನು ಹೊಂದಿ ಉತ್ತಮ ವ್ಯವಹಾರ ನಡೆಸುತ್ತಿದ್ದು, ಕುಂದಾಪುರದಲ್ಲಿ ಸ್ವಂತ ಕಟ್ಟಡದಲ್ಲಿ ಕಛೇರಿ ತೆರೆಯುವ ಯೋಜನೆಯಿದೆ. ಪ್ರತಿವರ್ಷ ಉನ್ನತ ಶಿಕ್ಷಣ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುತ್ತಿದ್ದು ಈ ಭಾರಿ 1,71,000 ರೂ ವಿದ್ಯಾರ್ಥಿ ವೇತನ ನೀಡಲಾಗಿದೆ ಎಂದರು. ಸಂಸ್ಥೆಯ ಕಾರ್ಯವ್ಯಾಪ್ತಿಯಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿರುವ ಪ್ರತಿಭಾವಂತ ಬಡ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರಕೃತಿಯಲ್ಲಿರುವ ಹಲವು ಬಗೆಯ ಸಸ್ಯ ಪ್ರಭೇದಗಳು ಹಲವು ಪ್ರಯೋಜನಕಾರಿಯಾಗಿವೆ ಅದರಂತೆ ಶಿವನ ಸಾನಿಧ್ಯವಿರುವ ಬಿಲ್ವ ವೃಕ್ಷವನ್ನು ಸ್ಪರ್ಶಿಸುವುದರಿಂದಲೇ ಪಾಪ ಕ್ಷಯಿಸುವುದು. ಅಂತಹ ಸಸ್ಯ ಪ್ರಭೇದಗಳನ್ನು ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮದಾಗಿರಬೇಕು ಎಂದು ಹಂಗಾರಕಟ್ಟೆ ಬಾಳೆಕುದ್ರು ಶ್ರೀ ಮಠದ ಶ್ರೀ ನೃಸಿಂಹಾಶ್ರಮ ಸ್ವಾಮೀಜಿವರು ನುಡಿದರು. ಅವರು ಕೋಟೇಶ್ವರ ಸಮೀಪದ ಶಾಂತಿಧಾಮ ಗುರುಕುಲ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬಿಲ್ವ ಸಸಿಗಳನ್ನು ವಿತರಿಸಿ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಹರಿಹರ ಸೇವಾ ಬಳಗದ ಅಧ್ಯಕ್ಷ ಎನ್. ಮೋಹನ್ ಆಚಾರ್ಯ, ಸುದ್ದಿಮನೆ ಸಂಪಾದಕ ಸಂತೋಷ ಕೋಣಿ, ವ್ಯಾಪಾರೋದ್ಯಮಿ ವಿಠಲ ಪೈ ಉಪಸ್ಥಿತರಿದ್ದರು. ಶಾಲಾ ಅಧ್ಯಕ್ಷರಾದ ಕೃಷ್ಣರಾಯ ಶ್ಯಾನುಭಾಗ್ ಸ್ವಾಗತಿಸಿ, ವಂದಿಸಿದರು.
ಮೂಕಜ್ಜಿ, ಅಡಿಗ, ಶ್ರೀಧರರ ಶತಮಾನದ ಸ್ಮೃತಿ ಹಬ್ಬ. ನಾಗೂರು ಒಡೆಯರ ಮಠ ಗೋಪಾಲಕೃಷ್ಣ ಕಲಾಮಂದಿರದ ಬಳವಾಡಿ ಮಹಾಲಕ್ಷ್ಮೀ ಹೆಬ್ಬಾರತಿ ಸಭಾವರಣದಲ್ಲಿ ಅಗಸ್ಟ್ 27ರ ರವಿವಾರ ಬೆಳಿಗ್ಗೆಯಿಂದ ಸಂಜೆಯ ತನಕ. *** ಕಾರ್ಯಕ್ರಮದ ವಿವರ
ಕುಂದಾಪ್ರ ಡಾಟ್ ಕಾಂ ಸುದ್ದಿ, ಕುಂದಾಪುರ: ಸಾರ್ವಜನಿಕ ಗಣೇಶೋತ್ಸವ ಎಂದರೆ ಜನರನ್ನು ಒಗ್ಗೂಡಿಸುವ ವೇದಿಕೆ. ಇಂಥಹ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಯುವ ಜನತೆ ಮತ್ತು ಸಾರ್ವಜನಿಕರ ಸಕ್ರೀಯ ಪಾಲ್ಗೊಳ್ಳುವಿಕೆಯಿಂದ ಯಶಸ್ಸು ಸಾಧ್ಯ. ಜನತೆಯ ಸಂಘಟಿತವಾದ ಪಾಲ್ಗೊಳ್ಳುವಿಕೆ ನಿರಂತರವಾಗಿರಲಿ ಎಂದು ಕೆ.ಎಸ್.ಆರ್.ಟಿ.ಸಿ ಅಧ್ಯಕ್ಷರು, ಶಾಸಕರಾದ ಕೆ.ಗೋಪಾಲ ಪೂಜಾರಿ ಹೇಳಿದರು. ಸಾರ್ವಜನಿಕ ಗಣೇಶೋತ್ಸವ ಸಮಿತಿ ವಂಡ್ಸೆ ಇದರ ೧೫ನೇ ವರ್ಷದ ಗಣೇಶೋತ್ಸವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಗಣೇಶೋತ್ಸವ ಸೇವಾ ಪುರಸ್ಕಾರ ಪ್ರದಾನ ಮಾಡಿ ಮಾತನಾಡಿದರು. ಗಣೇಶೋತ್ಸವ ಸಮಿತಿ ಅಧ್ಯಕ್ಷ ಮಹೇಶ ಗಾಣಿಗ ಅಬ್ಬಿ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ.ಸದಸ್ಯ ಉದಯ ಜಿ.ಪೂಜಾರಿ ಚಿತ್ತೂರು ಬಹುಮಾನ ವಿತರಿಸಿದರು. ನಿವೃತ್ತ ಯೋಧ ಬಿಜು ಥೋಮಸ್ ಅವರಿಗೆ ಗಣೇಶೋತ್ಸವ ಸೇವಾ ಪುರಸ್ಕಾರ ನೀಡಲಾಯಿತು. ವಂಡ್ಸೆ ಗ್ರಾ.ಪಂ.ಅಧ್ಯಕ್ಷ ಉದಯಕುಮಾರ್ ಶೆಟ್ಟಿ, ತಿರುಮಲ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ವಿ.ಕೆ.ಶಿವರಾಮ ಶೆಟ್ಟಿ, ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ವಿಠಲ ಆಚಾರ್ಯ ಆತ್ರಾಡಿ, ವಂಡ್ಸೆ ಅಯ್ಯಂಗಾರ್ ಬೇಕರಿಯ ಮಾಲಕ ಜಗದೀಶ ಪ್ರಮೋದ್, ಗಣೇಶ ಫರ್ನಿಚರ್ಸ್ನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ತಮ್ಮ ರಾಜಕೀಯ ಬೇಳೆ ಬೆಯಿಸಿಕೊಳ್ಳುವ ಉದ್ದೇಶದಿಂದ ಕರಾವಳಿ ಜಿಲ್ಲೆಯ ಜನರ ಭಾವನೆ ಕೆರಳಿಸಿ ಜಿಲ್ಲೆಗೆ ಬೆಂಕಿಯಿಡುವ ಕೆಲಸ ಮಾಡುತ್ತಿದೆ, ಇದರಿಂದ ಈ ಭಾಗದ ಜನರು ಹೊರಬರಬೇಕಾದರೆ ಮುಂದಿನ ಚುನಾವಣೆಯಲ್ಲಿ ಜಾತ್ಯತೀತ ಜನತಾ ದಳದ ಕಡೆಗೆ ಬೆಂಬಲ ನೀಡಬೇಕು ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಬಿ. ಬಿ. ನಿಂಗಯ್ಯ ಹೇಳಿದ್ದಾರೆ. ಬೈಂದೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯನವರು ಪರಿಶಿಷ್ಟ ಜಾತಿ, ಪಂಗಡದ ಜನರ ಏಳಿಗೆಗೆ ಯಾವುದೇ ಕ್ರಮ ಕೈಗೊಂಡಿಲ್ಲ, ಬಿಜೆಪಿ ಮುಖಂಡರು ದಲಿತರ ಮನೆಗೆ ಭೇಟಿ ನೀಡಿ ಅಲ್ಲಿ ಹೋಟೇಲ್ ಊಟ ಸವಿಯುತ್ತಿದ್ದಾರೆ, ಎರಡು ಪಕ್ಷಗಳಿಗೆ ದಲಿತರ ಬಗ್ಗೆ ನೈಜ ಕಾಳಜಿಯಿಲ್ಲ. ಜೆಡಿಎಸ್ ಪಕ್ಷ ಪರಿಶಿಷ್ಟ ಜಾತಿ, ಪರಿಶಿಷ್ಠ ಪಂಗಡದ ಜನರ ನಡಿಗೆ ಜೆಡಿಎಸ್ ಕಡೆಗೆ ಎಂಬ ಆಂದೋಲನ ರೂಪಿಸಲಿದೆ, ಈ ಬಗ್ಗೆ ಸೆ. ೨೯ಕ್ಕೆ ಪರಿಶಿಷ್ಠ ಜಾತಿ ಪಂಗಡದ ಬೃಹತ್ ಸಮಾವೇಶ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಅಮಾಸೆಬೈಲು: ತಾಲೂಕು ಕಾನೂನು ಸೇವಾ ಸಮಿತಿ ಕುಂದಾಪುರ, ಕುಂದಾಪುರ ಬಾರ್ ಅಸೋಸಿಯೇಷನ್ ಕುಂದಾಪುರ, ಅಭಿಯೋಗ ಇಲಾಖೆ ಕುಂದಾಪುರ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಕುಂದಾಪುರ ಇವರ ಸಂಯಕ್ತ ಆಶ್ರಯದಲ್ಲಿ ಕಾನೂನು ಮಾಹಿತಿ ಶಿಬಿರ ಅಮವಾಸೆಬೈಲು ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತದ ಸಭಾಂಗಣದಲ್ಲಿ ಜರುಗಿತು. ಕುಂದಾಪುರದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ಡಿ.ಪಿ ಕುಮಾರ ಸ್ವಾಮಿ ಕಾರ್ಯಕ್ರಮವನ್ನು ಉದ್ಘಾಟಸಿ, ಒಂದು ನ್ಯಾಯ ವ್ಯವಸ್ಥೆಯಲ್ಲಿ ದೇಶದ ಪ್ರತಿಯೊಬ್ಬ ಪ್ರಜೆಗೂ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳನ್ನು ನೀಡಲಾಗಿರುತ್ತದೆ. ಕಾನೂನು ಮತ್ತು ಆಡಳಿತ ವ್ಯವಸ್ಥೆ ಸುಗಮವಾಗಿ ಸಾಗಲು ಪ್ರತಿಯೊಬ್ಬರು ಕೂಡಾ ಹಕ್ಕುಗಳನ್ನು ಉಪಯೋಗಿಸಿ ಕರ್ತವ್ಯಗಳನ್ನು ಪಾಲಿಸಬೇಕಾಗುತ್ತದೆ ಎಂದರು. ಕುಂದಾಪುರ ಬಾರ್ ಅಸೋಸಿಯೇಷನ್ ಅಧ್ಯಕ್ಷರಾದ ಬನ್ನಾಡಿ ಸೋಮನಾಥ ಹೆಗ್ಡೆ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ, ಸ್ವಸ್ಥ ಜೀವನಕ್ಕೆ ಮೂಲಭೂತ ಹಕ್ಕುಗಳು ಎಷ್ಟು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿ ಡಾ. ಎಂ. ಎನ್. ರಾಜೇಂದ್ರಕುಮಾರ್ ಅವರು ಟ್ರಸ್ಟ್ ಮೂಲಕ ಇತ್ತಿಚಿಗೆ ಬೈಕ್ ಅಪಘಾತದಲ್ಲಿ ಮರಣ ಹೊಂದಿದ ಗಂಗೊಳ್ಳಿ ಸೀತಾರಾಮ ನವೋದಯ ಸ್ವಸಹಾಯ ಗುಂಪಿನ ಸದಸ್ಯೆ ಮಂಗಳ ಖಾರ್ವಿ ಅವರ ಕುಟುಂಬಕ್ಕೆ ಕೊಡಮಾಡಿದ ಒಂದು ಲಕ್ಷ ರೂ. ಚೆಕ್ನ್ನು ಡಿಸಿಸಿ ಬ್ಯಾಂಕಿನ ನಿರ್ದೇಶಕ ಎಸ್. ರಾಜು ಪೂಜಾರಿ ಅವರು ಕುಟುಂಬಿಕರಿಗೆ ಹಸ್ತಾಂತರಿಸಿದರು. ಈ ಸಂದರ್ಭ ತಾಲೂಕು ನವೋದಯ ಸಂಘಗಳ ಮೇಲ್ವಿಚಾರಕ ಮನೋಹರ ಶೆಟ್ಟಿ, ಬೈಂದೂರು ವಲಯ ನವೋದಯ ಸಂಘಗಳ ಮೇಲ್ವಿಚಾರಕ ಶಿವರಾಮ ಪೂಜಾರಿ ಯಡ್ತರೆ, ತ್ರಾಸಿ ಡಿಸಿಸಿ ಬ್ಯಾಂಕ್ ಮ್ಯಾನೆಜರ್ ನಾಗ ಹಾಗೂ ಪ್ರೇರಕ ವಾಸುದೇವ ಖಾರ್ವಿ, ಜ್ಯೋತಿಕೃಷ್ಣ ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನೃತ್ಯ, ನಾಟಕ, ಸಂಗೀತ, ಯಕ್ಷಗಾನ, ಚಿತ್ರಕಲೆ ಹಾಗೂ ಯಕ್ಷಿಣಿ ಕಲಾ ತರಬೇತಿಗೆ ಮೀಸಲಾಗಿರುವ ಸಂಸ್ಥೆ ಸುರಭಿ ಬೈಂದೂರು ಇದರ ವಿದ್ಯಾರ್ಥಿಗಳು ಕರ್ನಾಟಕ ಸರಕಾರದ ಪ್ರೌಢ ಶಿಕ್ಷಣ ಮಂಡಳಿಯಿಂದ ಪ್ರಸ್ತುತ ಸಾಲಿನಲ್ಲಿ ನಡೆಸಲಾದ ಭರತನಾಟ್ಯ ಪರೀಕ್ಷೆಯಲ್ಲಿ ಇಬ್ಬರು ವಿಶಿಷ್ಟ ದರ್ಜೆಯಲ್ಲಿ ಹಾಗೂ ಇತರರು ಪ್ರಥಮ ಶ್ರೇಣಿಯೊಂದಿಗೆ ಉತ್ತೀರ್ಣಗೊಂಡಿದ್ದು ಸಂಸ್ಥೆಯು ಶೇ. 100 ಫಲಿತಾಂಶ ಪಡಿದಿದೆ. ಕರ್ನಾಟಕ ಶಾಸ್ತ್ರೀಯ ಸಂಗೀತ ವಿಭಾಗದಲ್ಲಿ ವಿದ್ಯಾರ್ಥಿಗಳು ವಿಶಿಷ್ಟ ದರ್ಜೆಯೊಂದಿಗೆ ಉತ್ತೀರ್ಣರಾಗಿದ್ದು ಸಂಸ್ಥೆಯು ಶೇ.೮೦ ಫಲಿತಾಂಶ ಪಡೆದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಗಂಗೊಳ್ಳಿಯ ಮನೆ, ಅಂಗಡಿ, ಹೊಟೇಲ್ ಇತ್ಯಾದಿಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯದ ಸಮಸ್ಯೆಗೆ ಜಿಲ್ಲಾಡಳಿತ ಪರಿಹಾರ ಕಂಡು ಕೊಂಡಿದ್ದು, ಗಂಗೊಳ್ಳಿ ಗ್ರಾಮದಲ್ಲಿ ತ್ಯಾಜ್ಯ ನಿರ್ಮೂಲನೆ ಮಾಡಲು ಜನರ ಸಹಕಾರ ಅತ್ಯಗತ್ಯವಾಗಿದೆ. ಜಿಲ್ಲಾಡಳಿತ ಸ್ವಸಹಾಯ ಸಂಘಗಳ ಸಹಕಾರದೊಂದಿಗೆ ಮನೆ ಮನೆಯಿಂದ ಕಸ ಸಂಗ್ರಹಿಸುವ ಯೋಜನೆ ಹಾಕಿಕೊಂಡಿದ್ದು, ಇದಕ್ಕೆ ಪೂರ್ವಭಾವಿಯಾಗಿ ಗ್ರಾಮದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯಗಳ ಮತ್ತು ಅದರ ನಿರ್ವಹಣೆ ಬಗ್ಗೆ ಸಮೀಕ್ಷೆ ನಡೆಸಲು ಉದ್ದೇಶಿಸಿದೆ ಎಂದು ಗಂಗೊಳ್ಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಿ.ಮಾಧವ ಹೇಳಿದರು. ಅವರು ಗಂಗೊಳ್ಳಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಘನ ಮತ್ತು ದ್ರವ ಸಂಪನ್ಮೂಲ ನಿರ್ವಹಣೆ ಬಗ್ಗೆ ಮಾಹಿತಿ ಸಂಗ್ರಹ ಸಮೀಕ್ಷೆ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಘನ ಮತ್ತು ದ್ರವ ಸಂಪನ್ಮೂಲ ನಿರ್ವಹಣೆ ಬಗ್ಗೆ ಮಾಹಿತಿ ಸಂಗ್ರಹ ಸಂಬಂಧ ಸ್ವಸಹಾಯ ಸಂಘಗಳ ಸ್ವಯಂಸೇವಕರು ಮನೆ ಮನೆಗೆ ಬಂದಾಗ ಸರಿಯಾದ ಮಾಹಿನಿ ನೀಡಿ ಸಹಕರಿಸಬೇಕು. ಮನೆಯಲ್ಲಿ ಉತ್ಪತ್ತಿಯಾಗುವ ಕಸವನ್ನು ಸಂಗ್ರಹಿಸಲು…
