ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಾಲಾಡಿಯ ಜೆಸಿಸಿ ಕ್ರಿಕೆಟ್ ಕ್ಲಬ್ ಜಾಲಾಡಿಯ ಜೆಸಿಸಿ ಮೈದಾನದಲ್ಲಿ ಆಯೋಜಿಸಿದ ಎರಡು ದಿನಗಳ ರಾಜ್ಯ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ಥಳೀಯ ಈಗಲ್ಸ್ ಕುಂಭಾಶಿ ತಂಡವನ್ನು ೧೭ ರನ್ಗಳಿಂದ ಭರ್ಜರಿಯಾಗಿ ಸೋಲಿಸಿದ ಬೆಂಗಳೂರಿನ ಜೈ ಕರ್ನಾಟಕ ತಂಡ ‘ಜಟ್ಟಿಗೇಶ್ವರ ಕ್ರಿಕೆಟ್’ ಟ್ರೋಫಿಯನ್ನು ಗೆದ್ದುಕೊಂಡಿದೆ. ಫೈನಲ್ ಹಣಾಹಣಿಯಲ್ಲಿ ಮೊದಲು ಬ್ಯಾಟ್ ಮಾಡಿದ ಬೂನ್ ಸಾರಥ್ಯದ ಜೈ ಕರ್ನಾಟಕ ತಂಡವು ೬ ಓವರ್ಗಳ ಅಂತ್ಯಕ್ಕೆ ೩ ವಿಕೆಟ್ ಕಳೆದುಕೊಂಡು ೫೧ ರನ್ ಪೇರಿಸಿತು. ಗುರಿ ಬೆನ್ನತ್ತಿದ ಸುಧಾಕರ ನಾಯಕತ್ವದ ಈಗಲ್ಸ್ ಕುಂಭಾಶಿ ತಂಡ ನಿಗದಿತ ಓವರ್ಗಳ ಅಂತ್ಯಕ್ಕೆ ೩ ವಿಕೆಟ್ ಕಳೆದುಕೊಂಡು ೩೪ ರನ್ ಗಳಿಸಲಷ್ಟೇ ಶಕ್ತವಾಗಿ, ೧೭ ರನ್ಗಳಿಂದ ಸೋತು ರನ್ನರ್ ಅಪ್ಗೆ ತೃಪ್ತಿಪಟ್ಟುಕೊಂಡಿತು. ವಿಜೇತ ಜೈ ಕರ್ನಾಟಕ ತಂಡ ೧.೨೫ ಲಕ್ಷ ರೂ., ರನ್ನರ್ಅಪ್ ಈಗಲ್ಸ್ ತಂಡ ೬೫ ಸಾವಿರ ರೂ. ನಗದು ಹಾಗೂ ಟ್ರೋಫಿಯನ್ನು ಪಡೆಯಿತು. ೩೦ ತಂಡಗಳು ಭಾಗಿ ೪೦…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮನೆ ಮುಂದೆ ಬಸ್ ಹಾಗೂ ಕಾರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದವರ ರಕ್ಷಣೆ ಧಾವಿಸಿದ ವಿದ್ಯಾರ್ಥಿ ಅಪಪಘಾತಕ್ಕೆ ಬಲಿಯಾದ ಘಟನೆ ಭಾನುವಾರ ರಾತ್ರಿ ಕೋಣಿ ಬಳಿ ನಡೆದಿದೆ. ಕುಂದಾಪುರ ಭಂಡಾರ್ಕಾರ್ಸ್ಕಾಲೇಜ್ಅಂತಿಮ ಪದವಿ ವಿದ್ಯಾರ್ಥಿ ವಡೇರಿ ಹೋಬಳಿ ಗ್ರಾಮ, ಬೆಟಗೇರಿ ನಿವಾಸಿ ಸಂಜೀವ ಮತ್ತುರೇವತಿದಂಪತಿಏಕೈಕ ಪುತ್ರ ನಿತಿನ್ ಪೂಜಾರಿ (೨೧) ಮೃತಪಟ್ಟವರು. ಅಪಘಾತದ ಸುದ್ದುಕೇಳಿ ಮನೆಯಿಂದ ಹೊರ ಬಂದುನಿತಿನ್ ಹಾಗೂ ಗಾರೆಕಾರ್ಮಿಕ ಅನಿಲ್ ರಕ್ಷಣೆಕಾರ್ಯದಲ್ಲಿನಿರತರಾಗಿದ್ದರು. ಇದೇ ಸಂದರ್ಭಬಂದಓಮ್ನಿಕಾರ್ನಿತಿನ್ ಹಾಗೂ ಅನಿಲ್ ಎಂಬವರಿಗೆಡಿಕ್ಕಿ ಹೊಡೆಯಿತು. ನಿತಿನ್ರಸ್ತೆ ಸಮೀಪದಗದ್ದೆಗೆ ಅಪ್ಪಳಿಸಿದ ಪರಿಣಾಮತಲೆ ಹಾಗೂ ಮುಖಕ್ಕೆಗಂಭೀರ ಗಾಯಗಳಾಗಿತ್ತು.ಕೂಡಲೇ ಗಾಯಾಳು ಸಮೀಪದ ಖಾಸಗಿ ಆಸ್ಪತ್ರೆಯಲ್ಲಿಚಿಕಿತ್ಸೆ ಕೊಡಿಸಿ ಹೆಚ್ಚಿನಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೆ ನಿತಿನ್ ಕೊನೆಯುಸಿರೆಳೆದಿದ್ದಾನೆ. ಗಾಯಗೊಂಡಿರುವ ಅನಿಲ್ ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿಚಿಕಿತ್ಸೆ ಪಡೆಯುತ್ತಿದ್ದಾರೆ.ಕುಂದಾಪುರಠಾಣೆಯಲ್ಲಿ ಪ್ರಕರಣದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನವ್ಯ ಕವಿ ಪ್ರೋ. ಮೊಗೇರಿ ಗೋಪಾಲಕೃಷ್ಣ ಅಡಿಗರ ಜನ್ಮಶತಾಬ್ದಿಯ ಅಂಗವಾಗಿ ಅವರ ಹುಟ್ಟೂರಾದ ಮೊಗೇರಿಯಲ್ಲಿ ಕಲಾಗ್ರಾಮ ನಿರ್ಮಾಣಕ್ಕೆ ಅನುದಾನ ಒದಗಿಸುವಂತೆ ಹಾಗೂ ಕನ್ನಡ ಅಭಿವೃದ್ಧಿ ಪ್ರಾಕಾರದ ಅಧ್ಯಕ್ಷ ಪ್ರೋ. ಎಸ್.ಜಿ. ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಸರಕಾರಿ ಶಾಲೆಯ ಸಬಲೀಕರಣಕ್ಕಾಗಿ ೨೦೧೭ರಲ್ಲಿ ಅಸ್ತಿತ್ವಕ್ಕೆ ಬಂದ ೨೧ ಶಿಫಾರಸ್ಸುಗಳನ್ನು ಆದ್ಯತೆಯ ಮೇರೆಗೆ ಅನುಷ್ಠಾನಗೊಳಿಸುವಂತೆ ಕಂಬದಕೋಣೆ ಸರಕಾರಿ ಪದವಿಪೂರ್ವ ಕಾಲೇಜಿನ ಪುಂಡಲೀಕ ಹಾಲಂಬಿ ಸಭಾಂಗಣ ಮೊಗೇರಿ ಗೋಪಾಲಕೃಷ್ಣ ಅಡಿಗ ವೇದಿಕೆಯಲ್ಲಿ ನಡೆದ ೧೨ನೇ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ವರ್ಧಮಾನ-೨೦೧೮ರಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಬಳಿಕ ನಡೆದ ಸಮಾರೋಪ ಸಮಾರಂಭದಲ್ಲಿ ಸಮಾರೋಪ ನುಡಿಗಳನ್ನಾಡಿದ ಹಿರಿಯ ಪತ್ರಕರ್ತ ಎ. ಈಶ್ವರಯ್ಯ, ಕನ್ನಡದಲ್ಲಿ ಪ್ರತಿಭಾವಂತ ಬರಹಗಾರರು, ಕಾದಂಬರಿಕಾರರು ಇದ್ದು, ಭಾಷೆ ಮುಳುಗೀತು ಎನ್ನುವುದರಲ್ಲಿ ಅರ್ಥವಿಲ್ಲ, ಆದರೂ ಇಂದು ಭಾಷೆ ಬೆಳೆಯಲು ಪೂರಕ ವಾತಾವರಣ ನಿರ್ಮಿಸುವ ಅಗತ್ಯವಿದೆ. ನವೋದಯ ಕಾಲದಲ್ಲಿದ್ದ ಶಿಸ್ತು ಈಗಿಲ್ಲ, ಆ ಕಾಲದಲ್ಲಿದ್ದ ಭಾಷೆಯ ಮೇಲಿನ ಪ್ರೀತಿ ಈಗ ಇದೆಯೇ ನಮ್ಮ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪ್ರತಿ ಮನೆಗಳಲ್ಲಿ ಸಂಸ್ಕಾರ, ಸಂಸ್ಕೃತಿ, ಪುರಾಣದ ಬಗ್ಗೆ ತಿಳಿವಳಿಕೆ ಮೂಡಿಸಬೇಕಲ್ಲದೇ, ಧಾರ್ಮಿಕ ಆರಾಧನ ಕೇಂದ್ರಗಳಲ್ಲೂ ಭಗವದ್ಗೀತೆ, ರಾಮಾಯಣ, ಮಹಾಭಾರತದ ಬಗ್ಗೆ ಅರಿವು ಮೂಡಿಸುವುದು ಅಗರ್ಯವಿದೆ ಎಂದು ಶ್ರೀ ಕ್ಷೇತ್ರ ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಈಶವಿಠಲ ಸ್ವಾಮೀಜಿ ಹೇಳಿದರು. ಮಕರ ಸಂಕ್ರಮಣದಂದು ನಾಗೂರು ಶ್ರೀ ವೀರ ಹನುಮಾನ್ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಶಬರಿಮಲೆ ಸಂರಕ್ಷಣಾ ಸಮಿತಿ ಮತ್ತು ಶಬರಿಮಲೈ ಅಯ್ಯಪ್ಪ ಸೇವಾ ಸಮಾಜಂ ಸಹಯೋಗದಲ್ಲಿ ಶ್ರೀ ಅಯ್ಯಪ್ಪ ಸ್ವಾಮೀ ಪೂಜಾ ಮಹೋತ್ಸವದಲ್ಲಿ ಭಾಗವಹಿಸಿ ಅವರು ಆಶೀರ್ವಚನ ನೀಡಿದರು. ಸಂಸ್ಕೃತಿಯ ಕೇಂದ್ರ ಬಿಂದುವಾದ ತಾಯಿ, ತಮ್ಮ ಮಕ್ಕಳಿಗೆ ಏಳವೆಯಲ್ಲಿಯೇ ನೈತಿಕ ಶಿಕ್ಷಣ ನೀಡಬೇಕಾಗಿದ್ದು, ನಮ್ಮ ವೃತಗಳು ನೈತಿಕ ಬೆಳವಣೆಗೆಗೆ ಹಾಗೂ ಆತ್ಮಶಕ್ತಿಯನ್ನು ಜಾಗೃತರನ್ನಾಗಿ ಮಾಡುತ್ತದೆ ಎಂದರು. ಶಬರಿಮಲೆ ಸಂರಕ್ಷಣ ಸಮಿತಿಯ ಅಧ್ಯಕ್ಷ ಸಾಬು ಮಾಧವನ್ ಮಾತನಾಡಿ, ಇಂದು ಶಬರಿಮಲೆ ಯಾತ್ರೆ ನೈಜ ಸ್ವರೂಪ ಹೊರಟುಹೋಗಿ, ಆಡಂಬರ ಆಗಿದೆ. ಈ ಯಾತ್ರೆಯಿಂದ ಪುಣ್ಯ ಲಭಿಸಬೇಕಾದರೆ ಅಲ್ಲಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೆಂಗಳೂರಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ೨೦೧೭ರ ಜುಲೈನಲ್ಲಿ ನಡೆಸಿದ ಸ್ನಾತಕೋತ್ತರ ಪರೀಕ್ಷೆಯ ಎಮ್.ಟೆಕ್ ಕಂಪ್ಯೂಟರ್ ಸಾಯನ್ಸ್ ವಿಭಾಗದಲ್ಲಿ ಆರ್.ಎನ್.ಎಸ್ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿನಿಯಾದ ಬೈಂದೂರಿನ ಸ್ವಾತಿ. ಬಿ. ಶೆಟ್ಟಿ 3ನೇ ರ್ಯಾಂಕ್ ಪಡೆದಿರುತ್ತಾರೆ. ಪ್ರಸ್ತತ ಇವರು ಕಾಲೇಜಿನ ಕ್ಯಾಂಪಸ್ ಆಯ್ಕೆಯ ಮೂಲಕ ಬೆಂಗಳೂರಿನ ಪ್ರತಿಷ್ಠಿತ IBM ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದು ಸೇವೆ ಸಲ್ಲಿಸುತ್ತಿದ್ದಾರೆ. ಇವರು ಬೈಂದೂರಿನ ಶ್ರೀ ಮಂಜುನಾಥ ಮೆಡಿಕಲ್ಸ್ನ ಮಾಲೀಕರಾದ ಮಂಜುನಾಥ ಶೆಟ್ಟಿ ಮತ್ತು ನಾಗರತ್ನ ಎಮ್. ಶೆಟ್ಟಿಯವರ ಪುತ್ರಿ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರೀದುರ್ಗಾ ನೃತ್ಯ ಅಕಾಡೆಮಿ ಮೈಸೂರು ಇವರು ಏರ್ಪಡಿಸಿದ ರಾಷ್ಟ್ರ ಮಟ್ಟದ ಭರತನಾಟ್ಯ ಸ್ಪರ್ಧೆಯಲ್ಲಿ 4 ವಿಭಾಗಗಳಲ್ಲಿ ಕೇರಳ, ಆಂಧ್ರ, ತಮಿಳುನಾಡು ಹಾಗೂ ಕರ್ನಾಟಕದ ವಿವಿಧ ಜಿಲ್ಲೆಗಳಿಂದ 200ಕ್ಕೂ ಮಿಕ್ಕಿ ಸ್ಪರ್ಧಾಳುಗಳು ಭಾಗವಹಿಸಿದ್ದು, ಕುಂದಾಪುರದ ನೃತ್ಯ ವಸಂತ ನಾಟ್ಯಾಲಯದ ಸಂಸ್ಥೆಯಿಂದ ಸ್ಪರ್ಧಿಸಿದ 8 ಮಕ್ಕಳು ಬಹುಮಾನ ಗಳಿಸಿ ಅಚ್ಚರಿಗೊಳಿಸಿದ್ದಾರೆ. ಸಬ್ ಜೂನಿಯರ್ ವಿಭಾಗದಲ್ಲಿ ಸ್ಪರ್ಧಿಸಿದ ಕುಮಾರಿ ಗಾರ್ಗಿದೇವಿ ಪ್ರಥಮ ಸ್ಥಾನ ಪಡೆದು ನಾಟ್ಯ ಮಯೂರಿ ಪ್ರಶಸ್ತಿಗೆ ಭಾಜನಳಾಗಿದ್ದಾಳೆ. ಜೂನಿಯರ್ ವಿಭಾಗದಲ್ಲಿ ನಿಯತಿ.ಎಚ್.ಕೆ ಪ್ರಥಮ ಸ್ಥಾನಿಯಾಗಿ ನಾಟ್ಯವರ್ಷಿಣಿ ಪ್ರಶಸ್ತಿ ಗಳಿಸಿದ್ದಾಳೆ. ಸೀನಿಯರ್ ವಿಭಾಗದಲ್ಲಿ ಭಾಗವಹಿಸಿದ ಬಿ.ಯುಕ್ತಿ ಉಡುಪ ತೃತೀಯ ಸ್ಥಾನ ಗಳಿಸಿದ್ದಾಳೆ. ಓಪನ್ ಕ್ಯಾಟಗರಿಯಲ್ಲಿ ಭಾಗವಹಿಸಿದ ಮೈತ್ರಿ ಪಿ.ಆರ್ ಪ್ರಥಮ ಸ್ಥಾನ ಪಡೆದು ನಾಟ್ಯ ರತ್ನ ಪ್ರಶಸ್ತಿಗಳಿಸಿರುತ್ತಾರೆ. ಎಲ್ಲ್ಲಾ ವಿಭಾಗಗಳಲ್ಲಿ ಕಠಿಣ ಸ್ಪರ್ಧೆ ಇದ್ದು ವಿಶೇಷವೆಂದರೆ ಜೂನಿಯರ್ ವಿಭಾಗದಲ್ಲಿ ೮೫ ಸ್ಪರ್ಧಿಗಳಿದ್ದು ನೃತ್ಯ ವಸಂತ ನಾಟ್ಯಾಲಯದಿಂದ ಸ್ಪರ್ಧಿಸಿದ 5 ವಿದ್ಯಾರ್ಥಿಗಳು ಪ್ರಥಮ ದ್ವಿತೀಯ, ತೃತೀಯ, ಚತುರ್ಥ, ಪಂಚಮ ಸ್ಥಾನಿಯಾಗಿ ಹೊರಹೊಮ್ಮಿರುವುದು ವಿಶೇಷವಾಗಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಯುವಕರನ್ನು ಆಕರ್ಷಿಸಿ, ಅವರಲ್ಲಿ ಸ್ಫೂರ್ತಿ ಪ್ರೇರಣೆ ತುಂಬಿ ಉತ್ತಮ ವ್ಯಕ್ತಿತ್ವ ರೂಪಿಸುವ ಏಕೈಕ ಸಂಸ್ಥೆ ಜೇಸಿಯಾಗಿದೆ ಎಂದು ಜೇಸಿ ವಲಯಾದ್ಯಕ್ಷ ರಾಕೇಶ್ ಕುಂಜೂರು ಹೇಳಿದರು. ಅವರು ಕೋಟೇಶ್ವರದ ಸಹನ ಕನ್ವೆನ್ಶನ್ ಸೆಂಟರ್ನ ಸುಮೇದಾ ಒಪನ್ ಪಾರ್ಕ್ನಲ್ಲಿ ನಡೆದ ಜೇಸಿಐ ಕುಂದಾಪುರ ಸಿಟಿಯ ೨೦೧೮ನೇ ಸಾಲಿನ ಪದ ಪ್ರದಾನ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಜೇಸಿ ವಲಯ ಉಪಾಧ್ಯಕ್ಷ ರಾಘವೇಂದ್ರ ಪ್ರಭು ನೂತನ ಅಧ್ಯಕ್ಷ ಪಿ.ಜಯಚಂದ್ರ ಶೆಟ್ಟಿ ಮತ್ತು ತಂಡದವರಿಗೆ ಪದಪ್ರದಾನ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಜೇಸಿಐ ಇಂಡಿಯಾ ಫೌಂಡೇಶನ್ನ ನಿರ್ದೇಶಕ ವೈ.ಸುಕುಮಾರ್, ರೋಟರಿ ಕ್ಲಬ್ ಕುಂದಾಪುರದ ಪೂರ್ವಾಧ್ಯಕ್ಷ ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ, ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ವಿಕಾಸ್ ಹೆಗ್ಡೆ, ಜೇಸಿ ವಲಯದ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ನಿರ್ದೇಶಕ ಕಾರ್ತಿಕೇಯ ಮಧ್ಯಸ್ಥ, ಜೇಸಿರೆಟ್ ಅಧ್ಯಕ್ಷೆ ಗೀತ ಸುವರ್ಣ, ಜೆಜೇಸಿ ಅಧ್ಯಕ್ಷ ಕಾರ್ತಿಕ್, ನಿರ್ಗಮನ ಕಾರ್ಯದರ್ಶಿ ಪ್ರಶಾಂತ್ ಹವಲ್ದಾರ್, ನಿರ್ಗಮನ ಜೆಜೇಸಿ ಅಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತಾಲೂಕು ಶಾಖೆ ಆಶ್ರಯದಲ್ಲಿ ಇಲ್ಲಿನ ಆರ್.ಎನ್. ಶೆಟ್ಟಿ ಭವನದಲ್ಲಿ ಸ್ವಾಮಿ ವಿವೇಕಾನಂದ 155ನೇ ಜನ್ಮದಿನದ ಅಂಗವಾಗಿ ಯುವಜಾಗೃತಿ ವಿದ್ಯಾರ್ಥಿ ಸಮಾವೇಶ ಜರುಗಿತು. ಎಬಿವಿಪಿ ಕ್ಷೇತ್ರೀಯ ಸಹ ಸಂಘಟನಾ ಕಾರ್ಯದರ್ಶಿ ವಿನಯ ಬಿದರೆ ಮಾತನಾಡಿ ಲವ್ ಜಿಹಾದ್ ಸತ್ಯ. ನೆರೆಯ ಕೇರಳರಾಜ್ಯದಲ್ಲಿ 990ಯುವತಿಯರು ಲೌವ್ ಜಿಹಾದಿಗೆ ಬಲಿಯಾಗಿದ್ದು, ಅವರಲ್ಲಿ 960 ಯುವತಿಯರ ಕತೆ ಏನಾಯಿತು ಎನ್ನೋದು ಗೊತ್ತಿಲ್ಲ. ಐಸಿಸ್ ಸೇರಿದರಾ? ಭಯೋತ್ಪಾಕರ ವಶವಾದರಾ? ಮಾರಾಟ ಮಾಡಲಾಯಿತಾ ಎನ್ನೋದು ಇನ್ನೂ ನಿಗೂಢ. ಲವ್ ಜಿಹಾದ್ ಮೂಲಕ ಮತಾಂತರವಷ್ಟೇ ಅಲ್ಲಾ ರಾಷ್ಟ್ರಾಂತರ ಕೃತ್ಯ. ಮತಾಂತರಗೊಂಡವರು ಮಾತೃಭೂಮಿಗೆ ದ್ರೋಹ ಬಗೆಯುವ ಮಟ್ಟಕ್ಕೆ ಮೈಡ್ವಾಶ್ ಮಾಡಲಾಗುತ್ತದೆ ಎಂದರು. ರಾಷ್ಟ್ರೀಯತೆ ಕೆಲಸ ಮಾಡುತ್ತಿರುವ ಸಂಘಟನೆಗಳಿಗೆ ಉಗ್ರಗಾಮಿ ಪಟ್ಟಕಟ್ಟುತ್ತಿದ್ದು, ಲವ್ ಜಿಹಾದ್ ಜಾಲದಿಂದ ಯುವತಿಯರ ರಕ್ಷಣೆ, ರಾಷ್ಟ್ರ ವಿರೋಧ ಭಯೋತ್ಪಾದಕ ಕೃತ್ಯ ವಿರುದ್ಧ ನಿರಂತರ ಹೋಡಾಡುತ್ತಿರುವ ಸಂಘಟನೆಗಳ ಕೇಸರಿ ಉಗ್ರರೆಂದರೆ ನಾವು ಹಿಂಜರಿಯಲಾರೆವು. ಭಾರತೀಯ ಸನಾತನ ಸಂಸ್ಕೃತಿ ರಕ್ಷಣೆU…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಮ್ಮ ಕಾನೂನು ಮತ್ತು ನೀತಿ ನಿಯಮಗಳ ಬಗೆಗೆ ಪ್ರತೀ ನಾಗರಿಕರಲ್ಲಿಯೂ ಕನಿಷ್ಠ ಪ್ರಜ್ಞೆ ಇರಬೇಕು.ಮತ್ತು ಈ ಕುರಿತಂತೆ ಸಮಾಜದಲ್ಲಿನ ಜನರಲ್ಲೂ ಜಾಗೃತಿ ಮೂಡಿಸುವಲ್ಲಿ ಎಲ್ಲರೂ ಪ್ರಯತ್ನಿಸಬೇಕು ಎಂದು ಗಂಗೊಳ್ಳಿ ಕರಾವಳಿ ಕಾವಲು ಪೋಲಿಸ್ ಠಾಣೆಯ ನಿರೀಕ್ಷಕರಾದ ಜಿ.ಎಮ್ ನಾಯ್ಕರ್ ಅಭಿಪ್ರಾಯಪಟ್ಟರು. ಅವರು ಅಪರಾಧ ತಡೆ ಮಾಸಾಚರಣೆ ಅ೦ಗವಾಗಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಗಂಗೊಳ್ಳಿಯ ಕರಾವಳಿ ಕಾವಲು ಪೋಲಿಸ್ ಠಾಣೆಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಅಪರಾಧ ಕೃತ್ಯಗಳ ಬಗೆಗೆ ಕೆಟ್ಟ ಕುತೂಹಲವನ್ನು ಬೆಳೆಸಿಕೊಳ್ಳಬೇಡಿ. ಈ ವಿಷಯದಲ್ಲಿ ಒಮ್ಮೆ ಇಡುವ ತಪ್ಪು ಹೆಜ್ಜೆ ನಮ್ಮ ಇಡೀ ಜೀವನವನ್ನೇ ಬಲಿತೆಗೆದುಕೊಳ್ಳಬಹುದು. ಸ್ನೇಹಿತರನ್ನು ಆರಿಸಿಕೊಳ್ಳುವಾಗಲೂ ಎಚ್ಚರಿಕೆಯಿರಲಿ. ಎಂದು ಅವರು ಕಿವಿಮಾತು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಭಾರ ಪ್ರಾ೦ಶುಪಾಲರಾದ ಥಾಮಸ್ ಪಿ ಎ ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ನಾರಾಯಣ್ ನಾಯ್ಕ್ ಗಂಗೊಳ್ಳಿ ಕರಾವಳಿ…
ಕನ್ನಡದ ಉಳಿವಿಗೆ ಸರಕಾರ ಇಚ್ಛಾಶಕ್ತಿ ಪ್ರದರ್ಶಿಸಬೇಕು: ಹರಿಕೃಷ್ಣ ಪುನರೂರು ಕುಂದಗನ್ನಡಕ್ಕೆ ಅಧ್ಯಯನ ಪೀಠ ಸ್ಥಾಪನೆಯಾಗಲಿ: ಸಮ್ಮೇಳನಾಧ್ಯಕ್ಷ ಡಾ. ಎಚ್. ಶಾಂತರಾಮ್ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಂದು ಕನ್ನಡ ಭಾಷೆ ಸಂದಿಗ್ದತೆಯಲ್ಲಿದೆ, ಅದರ ಉಳಿವಿಗಾಗಿ ಸರ್ಕಾರ ಇಚ್ಛಾಶಕ್ತಿ ಪ್ರದರ್ಶಿಸಬೇಕಿದೆ. ಸರ್ಕಾರಕ್ಕೆ ಭಾಷೆಯ ಬಗ್ಗೆ ಕಾಳಜಿಯಿಲ್ಲದ ಕಾರಣದಿಂದಾಗಿ ದಿನಕ್ಕೊಂದು ಆಂಗ್ಲಮಾಧ್ಯಮ ಶಾಲೆ ತೆರೆಯಲು ಅನುಮತಿ ನೀಡುತ್ತಿದೆ. ಇದರಿಂದಾಗಿ ಕನ್ನಡ ಶಾಲೆಗಳಲ್ಲಿ ಮಕ್ಕಳ ಸಂಖ್ಯೆಯ ಕೊರತೆಯಿಂದ ಮುಚ್ಚಲ್ಪಡುತ್ತಿದೆ. ಅಧಿಕಾರಿಗಳಿಗೆ ಕನ್ನಡದ ಅರಿವಿಲ್ಲ ಎಂದು ಕಸಾಪ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ವಿಷಾದ ವ್ಯಕ್ತಪಡಿಸಿದರು. ಖಂಬದಕೋಣೆ ಸರಕಾರಿ ಪದವಿಪೂರ್ವ ಕಾಲೇಜಿನ ಮೊಗೇರಿ ಗೋಪಾಲ ಕೃಷ್ಣ ವೇದಿಕೆಯ, ಪುಂಡಲೀಕ ಹಾಲಂಬಿ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ೧೨ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ವರ್ಧಮಾನ ೨೦೧೮ನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಕನ್ನಡದ ಉಸಿರುಗಟ್ಟುತ್ತಿದೆ ಎಂದ ಅವರು ಸಾಮಾಜಿಕ ಜಾಲತಾಣದ ಪ್ರಭಾವದಿಂದಾಗಿ ಪುಸ್ತಕಗಳನ್ನು ಓದುವವರ ಸಂಖ್ಯೆ ಕ್ಷೀಣಿಸುತ್ತಿದೆ. ಯುವ ಪೀಳಿಗೆ ಮನಸ್ಸನ್ನು…
