ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ತಗ್ಗರ್ಸೆ ಶ್ರೀ ಬ್ರಹ್ಮದೇವರ ವಠಾರದ ಶ್ರೀ ನಾಗಬನಲ್ಲಿ ಜರುಗುವ 27ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವದ ಕಾರ್ಯಕಾರಿ ಸಮಿತಿ ಅಧ್ಯಕ್ಷರಾಗಿ ಶಿವಾನಂದ ಚಂದನ್ ಆಯ್ಕೆಯಾಗಿದ್ದಾರೆ. ಕಾರ್ಯಕಾರಿ ಸಮಿತಿ ಉಪಾಧ್ಯಕ್ಷರಾಗಿ ಪ್ರದೀಪ್ ಆಚಾರ್ಯ, ಮಂಜುನಾಥ ದಾಸ್, ಅಕ್ಷಯ ಶೆಟ್ಟಿ, ಸಂತೋಷ್ ಆಚಾರ್ಯ ಆಯ್ಕೆಯಾಗಿದ್ದರೇ ಕಾರ್ಯದರ್ಶಿಯಾಗಿ ಗುರುರಾಜ ಆಚಾರ್ಯ, ವಿಕ್ರಮ್, ಸುಬ್ರಹ್ಮಣ್ಯ ಆಚಾರ್ಯ, ಪ್ರಶಾಂತ ಆಚಾರ್ಯ ಆಯ್ಕೆಗೊಂಡಿದ್ದಾರೆ. ಜೊತೆ ಕಾರ್ಯದರ್ಶಿಯಾಗಿ ಮಂಜುನಾಥ ಹಕ್ಲುಮನೆ, ಮಂಜುನಾಥ ಹಾಡಿಮನೆ, ನಾಗರಾಜ ಶೆಟ್ಟಿ, ಶ್ರೀನಿವಾಸ ಆಚಾರ್ಯ, ಮಂಜುನಾಥ ಆಚಾರ್ಯ, ಮಂಜುನಾಥ ಸಿದ್ಧನಹಿತ್ಲು, ರಾಘವೇಂದ್ರ ಆಚಾರ್ಯ, ದಯಾನಂದ ಚಂದನ್; ಸಂಘಟನಾ ಕಾರ್ಯದರ್ಶಿಯಾಗಿ ಪ್ರದೀಪ್ ಶೆಟ್ಟಿ, ಸೋಮಶೇಖರ ಆಚಾರ್ಯ, ರಾಜಶೇಖರ್, ಪ್ರಮೋದ್ ಆಚಾರ್ಯ, ಚಂದನ್, ನಟರಾಜ್ ಆಚಾರ್ಯ, ಸುದೇಶ ಆಚಾರ್ಯ, ಪ್ರಭಾಕರ ಮೊಗವೀರ್, ಮಂಜುನಾಥ ಚಂದನ್, ಸಂತೋಷ್ ಶೇರುಗಾರನಹಿತ್ಲು, ವಸಂತ ಪೂಜಾರಿ, ನಾಗರಾಜ ಚಂದನ್; ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ದೇವರಾಜ ಆಚಾರ್ಯ, ಪ್ರವೀಣ ಆಚಾರ್ಯ, ಮಹೇಶ್, ಗುರುಪ್ರಸಾದ್ ಆಚಾರ್ಯ, ಹರೀಶ್ ಎನ್., ಗೋಪಾಲ್ ಹಾಡಿಮನೆ, ಗುರುರಾಜ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭಾರತ ದೇಶ ಎಂದಿಗೂ ಶಾಂತಿ ಬಯಸುತ್ತದೆ. ಆದರೆ ಪಾಕಿಸ್ತಾನದ ಭಯೋತ್ಪಾದರು ದೇಶ ಶಾಂತಿ ಕದಡುವ ಕೆಲಸಕ್ಕೆ ಮುಂದಾಗಿದ್ದಾರೆ. ಸೈನಿಕರ ನಿದ್ರೆಯಲ್ಲಿದ್ದಾಗ ಅವರ ಮೇಲೆ ದಾಳಿ ನಡೆಸಿ 18 ವೀರ ಸೈನಿಕರ ಸಾವಿಗೆ ಕಾರಣರಾದ ಕೃತ್ಯ ಖಂಡನೀಯವಾದುದು ಎಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಬಿ.ಎಂ ಸುಕುಮಾರ ಶೆಟ್ಟಿ ಹೇಳಿದರು. ಅವರು ಬೈಂದೂರು ಬಿಜೆಪಿ ಯುವಮೋರ್ಚಾ ವತಿಯಿಂದ ಇಲ್ಲಿನ ಬೈಪಾಸ್ ಬಳಿ ಆಯೋಜಿಸಲಾಗಿದ್ದ ‘ಯೋಧರಿಗೆ ನಮನ’ ಕಾರ್ಯಕ್ರಮದಲ್ಲಿ ಹುತಾತ್ಮ ಯೋಧನಿಗೆ ಪುಷ್ಪಾರ್ಚನೆಗೈದು, ಮೊಂಬತ್ತಿ ಬೆಳಗಿ ಮಾತನಾಡಿದರು. ಬೈಂದೂರು ಬಿಜೆಪಿ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು ಮಾತನಾಡಿ ನಮ್ಮ ದೇಶದ ಬುದ್ಧಿಜೀವಿಗಳಿಗೆ ದೇಶದ ಗಡಿಕಾಯ್ದು ದೇಶಕ್ಕಾಗಿಯೇ ವೀರ ಮರಣವನ್ನಪ್ಪುವ ಸೈನಿಕರಿಗಿಂತ ದೇಶದೊಳಗಿದ್ದುಕೊಂಡು ಐಕ್ಯತೆ ಹಾಗೂ ಸಾಮರಸ್ಯಕ್ಕೆ ಭಂಗ ತರುವವರ ಮೇಲೆಗೆ ಅನುಕಂಪ ಜಾಸ್ತಿಯಾಗುತ್ತಿದೆ. ಇದು ಖಂಡನೀಯವಾದುದು. ದೇಶದ ಒಗ್ಗಟ್ಟನ್ನು ಒಡೆಯುವ ಹುನ್ನಾರವನ್ನು ನಾವೆಲ್ಲರೂ ಒಕ್ಕೊರಲಿನಿಂದ ವಿರೋಧಿಸಬೇಕಿದೆ ಎಂದರು. ಬೈಂದೂರು ಬಿಜೆಪಿ ಮಾಜಿ ಅಧ್ಯಕ್ಷ ಬಿ.ಎಸ್. ಸುರೇಶ್ ಶೆಟ್ಟಿ ಮಾತನಾಡಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀ ಕೃಪಾಪೋಷಿತ ಯಕ್ಷಗಾನ ಮಂಡಳಿ ಹಟ್ಟಿಯಂಗಡಿ ಉಪ್ಪುಂದದಲ್ಲಿ ಪ್ರಥಮ ಭಾರಿಗೆ ನಮ್ಮ ಕಲಾಕೇಂದ್ರ ಕೋಟೇಶ್ವರದ ಸಹಯೋಗದೊಂದಿಗೆ ಉಪ್ಪುಂದದ ಶಂಕರ ಕಲಾಮಂದಿರದಲ್ಲಿ ಆಯೋಜಿಸಿದ ’ಯಕ್ಷ ಪಂಚಮಿ-2016’ 5 ದಿನಗಳ ಯಕ್ಷ ಹಬ್ಬಕ್ಕೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ಚಾಲನೆ ನೀಡಿದರು. ಹಿರಿಯ ಸಾಹಿತಿ ಯು. ಚಂದ್ರಶೇಖರ ಹೊಳ್ಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಸಿದ್ಧಿವಿನಾಯಕ ದೇವಳದ ಅರ್ಚಕ ಚಾಲಚಂದ್ರ ಭಟ್, ಕುಂದಾಪುರ ಹಿರಿಯ ನಾಗರಿಕ ವೇದಿಕೆ ಅಧ್ಯಕ್ಷ ಕೆ. ರವಿರಾಜ ಶೆಟ್ಟಿ, ನಮ್ಮ ಕಲಾಕೇಂದ್ರದ ಗೌರವಾಧ್ಯಕ್ಷ ಕೆ. ಗೋಪಾಲ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಶ್ರೀ ಹಟ್ಟಿಯಂಗಡಿ ಮೇಳದ ಸಂಚಾಲಕ ವಕ್ವಾಡಿ ರಂಜಿತ್ಕುಮಾರ್ ಶೆಟ್ಟಿ ಸ್ವಾಗತಿಸಿ ಪ್ರಸ್ತಾವನೆಗೈದರು. ಯಕ್ಷಹಬ್ಬದ ಸಂಚಾಲಕ ಸಂತೋಷ್ ಕೋಣಿ ವಂದಿಸಿದರು. ಸುನಿಲ್ ಹೆಚ್. ಜಿ. ಬೈಂದೂರು ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ನಾಲ್ಕು ಗೋಡೆಗಳ ಮಧ್ಯ ಕುಳಿತು ಓದುವ ವಿಶ್ವವಿದ್ಯಾಲಯವನ್ನು ಬಿಟ್ಟು ಇಡೀ ವಿಶ್ವವನ್ನೆ ವಿಶ್ವವಿದ್ಯಾಲಯವನ್ನಾಗಿಕೊಂಡು ನೋಡಿ, ಕೇಳಿ, ಅನುಭವಿಸಿ ಕಲಿತವರು ಕಾರಂತರು. ಅವರ ಪ್ರತಿಯೊಂದು ಕೃತಿಯಲ್ಲೂ ಕೂಡ ಸೃಜನ ಶೀಲತೆಯನ್ನು ನಾವು ಕಾಣಬಹುದು, ಆದರೆ ಇಂದು ಮಕ್ಕಳಲ್ಲಿ ಸೃಜನೆ ಶೀಲತೆಗೆ ಪ್ರೋತ್ಸಾಹಿಸುವ ಕೆಲಸಗಳು ಆಗುತ್ತಿಲ್ಲ. ಬರೀ ಕಟ್, ಕಾಪಿ, ಪೇಸ್ಟ್ ಸಂಸ್ಕೃತಿಯಿಂದಾಗಿ ಸೃಜನಶೀಲತೆ ಮರೆಯಾಗುತ್ತಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಅವರು ಕೋಟ ಶಿವರಾಮ ಕಾರಂತ ಥೀಂ ಪಾರ್ಕ್ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಬೆಂಗಳೂರು, ಕೋಟತಟ್ಟು ಗ್ರಾಮ ಪಂಚಾಯಿತಿ ಕೋಟ, ಡಾ.ಶಿವರಾಮ ಕಾರಂತ ಪ್ರತಿಷ್ಠಾನ (ರಿ.) ಕೋಟ ಇವರ ಸಹಭಾಗಿತ್ವದಲ್ಲಿ ಆಯೋಜಿಸಲಾದ ಡಾ.ಶಿವರಾಮ ಕಾರಂತರ ವಿಷಯಾಧಾರಿತ ರಾಜ್ಯಮಟ್ಟದ ಸಿಮೆಂಟ್ ಶಿಲ್ಪಕಲಾ ಶಿಬಿರದ ಸಮಾರೋಪ ಸಮಾರಂಭದಲ್ಲಿ ಡಾ.ಶಿವರಾಮ ಕಾರಂತರ ಫೈಬರ್ ಪ್ರತಿಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ನಮ್ಮ ರಾಜ್ಯದಲ್ಲಿ ಜ್ಞಾನ ಪೀಠ ಪ್ರಶಸ್ತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರತಿಷ್ಠಿತ ಜೇಸಿಐ ಕುಂದಾಪುರದ 43ನೇ ಅಧ್ಯಕ್ಷರಾಗಿ ಅಕ್ಷತಾ ಗಿರೀಶ್ ಆಯ್ಕೆಯಾಗಿದ್ದಾರೆ. ಜೇಸಿಐ ಕುಂದಾಪುರದ ಜೇಸಿರೆಟ್ ವಿಭಾಗದ ಅಧ್ಯಕ್ಷೆಯಾಗಿ ಜೇಸಿಯ ವಿವಿಧ ಪದಾಧಿಕಾರಿಯಾಗಿ ಅನುಪಮ ಸೇವೆ ಸಲ್ಲಿಸಿದ ಇವರು ಪತ್ರಕರ್ತೆಯಾಗಿ, ಟಿ.ವಿ. ನಿರೂಪಕರಾಗಿ ಹತ್ತು ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಸಂಘಟಿಸಿದ ಮತ್ತು ಹಲವಾರು ಸಂಘ ಸಂಸ್ಥೆಯಲ್ಲಿ ಸಕ್ರೀಯವಾಗಿ ದುಡಿದ ಅನುಭವ ಹೊಂದಿದ್ದಾರೆ. ಇತ್ತೀಚೆಗೆ ಜೇಸಿಐ ಕುಂದಾಪುರಕ್ಕೆ ವಲಯಾಧ್ಯಕ್ಷರ ಭೇಟಿ ಸಂದರ್ಭ ಹೋಟೆಲ್ ಶೆರೋನ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಮುಂದಿನ ಸಾಲಿನ ಅಧ್ಯಕ್ಷರನ್ನಾಗಿ ಅಕ್ಷತಾ ಗಿರೀಶ್ ಅವರನ್ನು ಘೋಷಿಸಲಾಯಿತು. ಜೇಸಿಐ ಕುಂದಾಪುರದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಮಹಿಳೆಯೊರ್ವರು ಅಧ್ಯಕ್ಷರಾಗುತ್ತಿದ್ದು, ಈ ಹೆಗ್ಗಳಿಕೆ ಅಕ್ಷತಾ ಗಿರೀಶ್ ಅವರ ಪಾಲಾಗಿದೆ. ಕಾರ್ಯದರ್ಶಿಯಾಗಿ ರಾಘು ವಿಠಲವಾಡಿ, ಉಪಾಧ್ಯಕ್ಷರಾಗಿ ಲಕ್ಷ್ಮೀ ಡಿ.ಕೆ ಪ್ರಭಾಕರ, ನರೇಶ್ ಕೋಟೇಶ್ವರ, ಪ್ರವೀಣ್ ಆಯ್ಕೆಯಾದರು. ಈ ಸಂದರ್ಭದಲ್ಲಿ ಜೇಸಿ ವಲಯಾಧ್ಯಕ್ಷರಾದ ಸಂದೀಪ್, ಜೇಸಿಐ ಕುಂದಾಪುರ ಅಧ್ಯಕ್ಷ ವಿಷ್ಣು ಕೆ.ಬಿ, ಪೂರ್ವಾಧ್ಯಕ್ಷರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಾಮಾಜಿಕ ನ್ಯಾಯ ಜನರಿಗೆ ನೀಡಿ ಊರಿನ ಶಾಂತಿ ಕಾಪಾಡುತ್ತಿದ್ದ ಸಬ್ಲಾಡಿ ಶೀನಪ್ಪ ಶೆಟ್ಟಿಯವರು ರಾಜಕಾರಣಿಗಳಿಗೆ ಮಾದರಿಯಾಗಿದ್ದವರು. ಅವರು ನೀಡುತ್ತಿದ್ದ ನ್ಯಾಯತೀರ್ಮಾನ ತೀರ್ಪುಗಳು, ಅಲ್ಲಿ ಅವರ ದೂರದೃಷ್ಟಿತ್ವವನ್ನು ಇವತ್ತು ಕೂಡಾ ಜನ ನೆನಪಿಸಿಕೊಳ್ಳುತ್ತಾರೆಂದರೆ ಅವರು ಎಷ್ಟೆಂದು ಜನಪ್ರಿಯರಾಗಿದ್ದರು ಎನ್ನುವುದನ್ನು ಊಹಿಸಬಹುದು. ಅವರ ಹೆಸರಿನಲ್ಲಿ ಟ್ರಸ್ಟ್ ಆರಂಭಿಸಿ, ಸಮಾಜಕ್ಕೆ ಸೇವೆ ಮುಂದುವರಿಸುತ್ತಿರುವುದು ಶ್ಲಾಘನಾರ್ಹವಾದುದು ಎಂದು ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷರು, ರಾಜ್ಯ ಪ್ರಶಸ್ತಿ ಪುರಸ್ಕೃತ ಶಾಂತಾರಾಮ ಶೆಟ್ಟಿ ಬಾರ್ಕೂರು ಹೇಳಿದರು. ಕುಂದಾಪುರದ ಬಂಟರ ಯಾನೆ ನಾಡವರ ಸಂಕೀರ್ಣದ ಮಿನಿಹಾಲ್ನಲ್ಲಿ ಸಬ್ಲಾಡಿ ಕೆ.ಶೀನಪ್ಪ ಶೆಟ್ಟಿ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್ ವತಿಯಿಂದ ನಡೆದ ವಿದ್ಯಾರ್ಥಿವೇತನ, ಆರೋಗ್ಯ ಸಹಾಯಧನ, ಕೃಷಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ, ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಥಮ ದರ್ಜೆ ಕಾಲೇಜು ಮಣೂರು-ಕೋಟ ಇಲ್ಲಿನ ಪ್ರಾಂಶುಪಾಲರಾದ ಡಾ|ರಾಜೇಂದ್ರ ನಾಯ್ಕ್ ಉಪನ್ಯಾಸ ನೀಡಿ, ವಿದ್ಯಾರ್ಥಿ ವೇತನ ವಿದ್ಯಾರ್ಥಿಗಳ ವಿದ್ಯಾರ್ಜನೆ ಸಹಕಾರ ಮತ್ತು ಸ್ಪೂರ್ತಿಯಾಗಬೇಕು. ಶಿಕ್ಷಣದಲ್ಲಿ ಸಾಧನೆ ಮಾಡಲು ಪೂರಕವಾಗುತ್ತದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಗುರುವಾರ ಸಂಘದ ಅಧ್ಯಕ್ಷರಾದ ಟಿ. ನಾರಾಯಣ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ಸಂಘದ ಪ್ರಧಾನ ಕಛೇರಿ ಯಡ್ತರೆಯಲ್ಲಿ ಜರುಗಿತು. ಸಂಘವು ೨೦೧೫-೧೬ನೇ ಸಾಲಿನಲ್ಲಿ ರೂ. ೩೬೬.೦೬ ಕೋಟಿಗೂ ಮೀರಿ ವ್ಯವಹಾರ ಮಾಡಿ ರೂ. ೯೦.೪೧ ಲಕ್ಷ ಲಾಭ ಗಳಿಸಿದ್ದು, ತನ್ನ ಲಾಭಾಂಶದಲ್ಲಿ ತನ್ನ ಸದಸ್ಯರಿಗೆ ಶೇಕಡಾ ೧೬ ಡಿವಿಡೆಂಡ್ ಘೋಷಿಸಿದೆ. ಸಂಘವು ವರದಿ ಸಾಲಿನಲ್ಲಿ ೪೧.೨೬ ಕೋಟಿ ರೂ. ಠೇವಣಿ ಹೊಂದಿದ್ದು, ೩೦.೨೨ ಕೋಟಿ ರೂ. ಹೊರಬಾಕಿ ಸಾಲ ಇರುತ್ತದೆ. ರೂ.೫೨.೩೧ ಕೋಟಿ ದುಡಿಯುವ ಬಂಡವಾಳ ಹೊಂದಿದ್ದು, ಅಡಿಟ್ ವರ್ಗೀಕರಣದಲ್ಲಿ ಎ ತರಗತಿ ಹೊಂದಿರುತ್ತದೆ. ಸಂಘದ ವ್ಯಾಪ್ತಿಗೆ ಬರುವ ಫ್ರೌಢಶಾಲಾ ವಿಭಾಗದ ೨೦೧೫-೧೬ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ೧೦ನೇ ತರಗತಿಯಲ್ಲಿ ಶಾಲೆಗೆ ಅತೀ ಹೆಚ್ಚು ಅಂಕ ಗಳಿಸಿದ ೨೨ ವಿದ್ಯಾರ್ಥಿಗಳಿಗೆ ಸಂಘದ ವತಿಯಿಂದ ಪ್ರೋತ್ಸಾಹಧನ ಹಾಗೂ ಅಭಿನಂದನಾ ಪತ್ರವನ್ನು ನೀಡಲಾಯಿತು. ಸಭೆಯಲ್ಲಿ ಸಂಘದ ನಿರ್ದೇಶಕರಾದ ಎನ್.ನಾಗರಾಜ ಶೆಟ್ಟಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಕಾರಂತರು ನಡೆದಾಡಿದ ಮಣ್ಣು ನಾವೇಲ್ಲ ಶೀರೊಧಾರೆ ಮಾಡಿಕೊಳ್ಳುವಷ್ಟು ಪವಿತ್ರವಾದದು. ಅಂತಹ ಕಾರಂತರಿಗಾಗಿ ಕೋಟತಟ್ಟು ಗ್ರಾಮ ಪಂಚಾಯಿತಿಯು ದೇಶದಲ್ಲಿ ಯಾವೋಬ್ಬ ಕವಿಗೂ ಸಿಗದ ಗೌರವವನ್ನು ಥೀಂ ಪಾರ್ಕ ರಚಿಸುವ ಮೂಲಕ ನೀಡಿ ಗೌರವಿಸಿದ್ದಿರಿ. ಇವೆಲ್ಲದರ ಹಿಂದಿನ ಶಕ್ತಿ ಕಾರಂತರ ಶಿಷ್ಯೋತ್ತಮ ಕೋಟ ಶ್ರೀನಿವಾಸ ಪೂಜಾರಿಯವರ ಶ್ರಮವನ್ನು ಬಣ್ಣಿಸಲು ಅಸಾಧ್ಯವಾದದು, ಶಿಷ್ಯನೋರ್ವ ಗುರುವಿಗೆ ನೀಡುವ ಅತ್ಯದ್ಬುತ ಕಾಣಿಕೆಯನ್ನು ನೀಡಿದ್ದಾರೆ ಎಂದು ಸಾಹಿತಿ, ಕಸಾಪ ಮಾಜಿ ಜಿಲ್ಲಾಧ್ಯಕ್ಷ ನ್ಯಾಯವಾದಿ ಎ.ಎಸ್.ಎನ್.ಹೆಬ್ಬಾರ್ ಹೇಳಿದರು. ಅವರು ಕೋಟ ವಿವೇಕ ಪದವಿ ಪೂರ್ವ ಕಾಲೇಜಿನಲ್ಲಿ ಕೋಟತಟ್ಟು ಗ್ರಾಮ ಪಂಚಾಯಿತಿ, ಡಾ.ಶಿವರಾಮ ಕಾರಂತ ಪ್ರತಿಷ್ಠಾನ(ರಿ.) ಕೋಟ, ಡಾ.ಶಿವರಾಮ ಕಾರಂತ ಜನ್ಮದಿನೋತ್ಸವದ ಅಂಗವಾಗಿ ಆಯೋಜಿಸಲಾದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಪಂಚಾಯತ್ರಾಜ್ ಮತ್ತು ಸ್ಥಳೀಯಾಡಳಿತ ಪ್ರತಿನಿಧಿಗಳ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕ ಸ್ಪರ್ಧೆ ಹೊಳಪು 2016 ಇದರ ಪ್ರಯುಕ್ತ ನಿರ್ಮಿಸಲಾದ ಸ್ವಾಗತ ಗೋಪುರ, ಕಾರಂತ ಮಹಾದ್ವಾರವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ…
ಕುಂದಾಪ್ರ ಡಾಟ್ ಕಾಂ ವರದಿ ಗಂಗೊಳ್ಳಿ : ಬೆಳೆಯುತ್ತಿರುವ ಪಟ್ಟಣ ಪ್ರದೇಶವಾಗಿರುವ ಗಂಗೊಳ್ಳಿಯಲ್ಲಿ ಇರುವ ಏಕೈಕ ಅಂಚೆ ಕಛೇರಿಯು ಸಮಸ್ಯೆಗಳ ಆಗರವಾಗಿದ್ದು, ಇಲಾಖೆಯ ಅಸಮರ್ಪಕ ಸೇವೆಯಿಂದ ಜನರು ಬಹಳಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಗಂಗೊಳ್ಳಿಯು ಸುಮಾರು ಒಂದು ಸಾವಿರ ಎಕ್ರೆ ವಿಸ್ತೀರ್ಣದ ಮೀನುಗಾರಿಕಾ ಬಂದರು ಪ್ರದೇಶವಾಗಿದ್ದು, ಸುಮಾರು 25 ಸಾವಿರಕ್ಕೂ ಮಿಕ್ಕಿ ಜನರು ವಾಸಿಸುತ್ತಿದ್ದಾರೆ. ಎರಡು ರಾಷ್ಟ್ರೀಕೃತ ಬ್ಯಾಂಕುಗಳು ಸೇರಿದಂತೆ ಸುಮಾರು 10ಕ್ಕೂ ಮಿಕ್ಕಿ ಸಹಕಾರಿ, ಸೌಹಾರ್ದ ಸಂಘಗಳು ಕಾರ್ಯನಿರ್ವಹಿಸುತ್ತಿದೆ ಅಲ್ಲದೆ ಸುಮಾರು 10ಕ್ಕೂ ಮಿಕ್ಕಿ ಶಾಲಾ ಕಾಲೇಜುಗಳು ಗಂಗೊಳ್ಳಿಯಲ್ಲಿ ಮಕ್ಕಳ ವಿದ್ಯಾರ್ಜನೆಯಲ್ಲಿ ತೊಡಗಿಕೊಂಡಿದೆ. ಮೀನುಗಾರಿಕಾ ಚಟುವಟಿಕೆಗಳಿಂದ ಸದಾ ಬ್ಯೂಸಿಯಾಗಿರುವ ಗಂಗೊಳ್ಳಿ ಗ್ರಾಮದ ಹೃದಯ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಚೆ ಕಛೇರಿಯು ಗ್ರಾಹರಿಗೆ ಉತ್ತಮ ಸೇವೆ ನೀಡುವಲ್ಲಿ ವಿಫಲವಾಗಿದೆ. ಈ ಹಿಂದೆ ಗಂಗೊಳ್ಳಿಯಲ್ಲಿ ಎರಡು ಅಂಚೆ ಕಛೇರಿಗಳು ಕಾರ್ಯನಿರ್ವಹಿಸುತ್ತಿದ್ದು, ಕಾರ್ಯಭಾರ ಕಡಿಮೆಯಾದ ಹಿನ್ನಲೆಯಲ್ಲಿ ಬಂದರು ಅಂಚೆ ಕಛೇರಿಯನ್ನು ಮುಚ್ಚಲಾಗಿತ್ತು. ಬಳಿಕ ಗಂಗೊಳ್ಳಿಯ ಮಧ್ಯಭಾಗದಲ್ಲಿ ಬಾಡಿಗೆ ಕಟ್ಟಡದಲ್ಲಿ ಗಂಗೊಳ್ಳಿ ಅಂಚೆ ಕಛೇರಿಯು ಕಾರ್ಯನಿರ್ವಹಿಸುತ್ತಿದೆ. ಪ್ರಸ್ತುತ ಓರ್ವ ಅಂಚೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಕಾರ್ಕಳದ ಭುವನೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ.ಮನಿಷಾ ಪೂಜಾರಿ,ರಕ್ಷಿತಾ ಕೊತ್ವಾಲ್, ಪ್ರತಿಭಾ ದೇವಾಡಿಗ,ಸಹನಾ ಮೇಸ್ತ, ಸ್ನೇಹಾ ಮತ್ತು ಸುಪ್ರೀತಾ ಜಿ ತಾವು ಗಳಿಸಿದ ಟ್ರೋಫಿಯೊಂದಿಗೆ.ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್ ಸಿ, ದೈಹಿಕ ಶಿಕ್ಷಕ ನಾಗರಾಜ ಶೆಟ್ಟಿ ಮತ್ತು ತಂಡ ನಿರ್ವಾಹಕಿ ಯಮುನಾ ಅವರು ಚಿತ್ರದಲ್ಲಿದ್ದಾರೆ. ಚಿತ್ರ
