ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ನಾವುಂದ ಗ್ರಾಮದ ಪಡುವಾಯಿನ ಮನೆ ಎಂಬಲ್ಲಿ ಒಬ್ಬಂಟಿಯಾಗಿ ನೆಲೆಸಿದ್ದ ಮಾಧವ ಪೂಜಾರಿ (62) ಎಂಬುವವರನ್ನು ಹಣ ಹಾಗೂ ಚಿನ್ನದ ಆಸೆಗೆ ಕಡಿದು ಕೊಲೆಗೈದು ಬಂಧಿತನಾಗಿದ್ದ ನರಸಿಂಹ ನಾಯ್ಕ್ (47) ಎಂಬಾತನಿಗೆ ಇಂದು ಕುಂದಾಪುರ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಪ್ರಕಾಶ್ ಕೆ. ಅವರು ಕೊಲೆ ಆರೋಪಿಗೆ ಕೊನೆಯುಸಿರಿರುವ ತನಕ ಜೀವಾವಧಿ ಶಿಕ್ಷೆ ಹಾಗೂ 80 ಸಾವಿರ ರೂ. ದಂಡ ವಿಧಿಸಿದೆ. 2016 ಮಾಚ್ 19ರಂದು ಒಬ್ಬಂಟಿಯಾಗಿ ವಾಸಿಸುತ್ತಿದ್ದ ಮಾಧವ ಪೂಜಾರಿ ಅವರನ್ನು ಕೊಲೆಗೈದಿದ್ದ ನರಸಿಂಹ ನಾಯ್ಕ್ ಎಂಬುವವನನ್ನು ಪೊಲೀಸರು ಮೂರು ದಿನದಲ್ಲಿ ಬಂಧಿಸಿದ್ದರು. ಕೊಲೆ ಮಾಡಲು ಬಳಸಿದ್ದ ಕತ್ತಿ ಹಾಗೂ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿತ್ತು. ಆತನ ಮುಖದ ಮೇಲಿದ್ದ ಗಾಯದ ಗುರುತು, ಕತ್ತಿನಲ್ಲಿದ್ದ ರಕ್ತದ ಕಲೆ ಮಾದರಿ ಹಾಗೂ ಬನಿಯಾನ್ನಲ್ಲಿದ್ದ ಮೃತ ವ್ಯಕ್ತಿಯ ರಕ್ತದ ಕಲೆ ಪ್ರಕರಣಕ್ಕೆ ಪೂರಕ ಸಾಕ್ಷ್ಯ ಒದಗಿಸಿದ್ದವು. ಈ ಹಿಂದೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಮನುಷ್ಯನಲ್ಲಿನ ಅನುಭವದ ಹೂರಣವನ್ನು ಹೊರತರುವಲ್ಲಿ ಕಾಲೇಜಿನ ವಾರ್ಷಿಕ ಸಂಚಿಕೆಗಳು ಬಹಳ ಸಹಕಾರಿ. ವ್ಯವಹಾರಿಕ ಬದುಕಿನಲ್ಲಿ ಉದ್ಯಮಶೀಲತೆಯ ಜೊತೆಗೆ ಕ್ರಿಯಾಶೀಲತೆ ಮತ್ತು ಸೃಜನ ಶೀಲತೆಯನ್ನು ಬೆಳೆಸಿಕೊಳ್ಳಲು ಅವು ಸಹಾಯ ಮಾಡುತ್ತವೆ ಎಮದು ಕೋಟೇಶ್ವರ ವರದರಾಜ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ರಾಜೇಂದ್ರ ನಾಯಕ್ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಕಳೆದ ಸೋಮವಾರ ನಡೆದ ಸಮಾರಂಭದಲ್ಲಿ ಕಾಲೇಜಿನ ವಾರ್ಷಿಕ ಸಂಚಿಕೆ ದೃಷ್ಟಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಪ್ರತಿಯೊಬ್ಬ ವಿದ್ಯಾರ್ಥಿಗಳು ಸಾಹಿತ್ಯಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮುಖೇನ ತಮ್ಮ ಜ್ಞಾನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುವ ಪ್ರಯತ್ನವನ್ನು ಮಾಡಬೇಕು ಎಂದು ಅವರು ಹೇಳಿದರು. ಮುಖ್ಯ ಅತಿಥಿಗಳಾಗಿ ಜಿ.ಎಸ್.ವಿ.ಎಸ್ ಅಸೋಷಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ , ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಕಾರ್ಯದರ್ಶಿ ಎನ್ ಸದಾಶಿವ ನಾಯಕ್ ಉಪಸ್ಥಿತರಿದ್ದರು.ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್ ಸಿ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಉಪನ್ಯಾಸಕ ಸುಜಯೀಂದ್ರ ಹಂದೆ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಆಂಗ್ಲ…
ಕುಂದಾಪ್ರ ಡಾಟ್ ಕಾಂ ಸುದ್ದಿ., ಬೈಂದೂರು: ಧರ್ಮಶ್ರೀ ರಿಲೀಫ್ ಫೌಂಡೇಶನ್ ಮಟ್ನಕಟ್ಟೆ ಕೆರ್ಗಾಲ್ ಇವರಿಂದ ನಾಯ್ಕನಕಟ್ಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಪ್ರಿಂಟರ್ ಕೊಡುಗೆಯಾಗಿ ನೀಡಲಾಯಿತು. ಆ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಈಶ್ವರ ಶೇರೆಗಾರ್, ಗ್ರಾಮಪಂಚಾಯತ್ ಅಧ್ಯಕ್ಷರಾದ ಸೋಮು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ರಾಜು ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರಾದ ರಾಘವೇಂದ್ರ ಪೂಜಾರಿ, ದೈಹಿಕ ಶಿಕ್ಷಕರಾದ ವಿಷ್ಣು ಕೆ.ಬಿ., ಹಳೆವಿದ್ಯಾರ್ಥಿ ಸಂಘದವರು ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು.
ಮಾತು ಕಥೆ ಖಾದ್ಯದೊಂದಿಗೆ ಜರುಗಿತು ಸಸ್ಯಾಮೃತ ಸಂಭ್ರಮ. ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ತಾಲೂಕಿನ ವಕ್ವಾಡಿ ಗುರುಕುಲ ಶಿಕ್ಷಣ ಸಂಸ್ಥೆಯಲ್ಲಿ ತುಂಬೆಲ್ಲಾ ಭಾನುವಾರ ವಿವಿಧ ಖಾದ್ಯಗಳ ಘಮ. ಸಾಂಪ್ರದಾಯಿಕ ಹಾಗೂ ಔಷಧಿಯ ಗುಣಗಳುಳ್ಳ ಸಸ್ಯಗಳಿಂದ ತಯಾರಾದ ವಿವಿಧ ಬಗೆಯ ಸವಿಯಾದ ಶುಚಿರುಚಿಯಾದ ತಿನಿಸುಗಳು ಬಾಯಲ್ಲಿ ನೀರುರಿಸುತ್ತಿದ್ದವು. ಗುಣಮಟ್ಟದ ಶಿಕ್ಷಣದೊಂದಿಗೆ ಸದಾ ಹೊಸತನ ಆಲೋಚನೆಗಳನ್ನು ಅಚ್ಚುಕಟ್ಟಾಗಿ ಅನುಷ್ಠಾನಗೊಳಿಸುವ ಬಾಂಡ್ಯ ಎಜ್ಯುಕೇಶನ್ ಟ್ರಸ್ಟ್ನ ವಕ್ವಾಡಿಯ ಗುರುಕುಲ ವಿದ್ಯಾಸಂಸ್ಥೆ ಪಠ್ಯದ ಜತೆಗೆ ಆಹಾರ, ಕ್ರೀಡೆ, ಸಂಸ್ಕ್ರತಿ, ಕಲೆ, ಸಾಹಿತ್ಯ, ಆರೋಗ್ಯ ಮೊದಲಾದ ಪಠ್ಯೇತರ ಕಾರ್ಯಕ್ರಮಗಳನ್ನೂ ನಿಯಮಿತವಾಗಿ ಆಯೋಜಿಸಿ ವಿದ್ಯಾರ್ಥಿಗಳಲ್ಲೊಂದು ನಾವಿನ್ಯತೆಯನ್ನು ತುಂಬುತ್ತಾ ಬದುಕಿನ ಪಾಠ ಕಲಿಸುತ್ತಿದೆ. ಆಷಾಢ ಮಾಸದ ಆಸುಪಾಸಿನಲ್ಲಿ ದೇಸಿ ಶೈಲಿಯ ಆಹಾರ ಕ್ರಮದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ’ಸಸ್ಯಾಮೃತ’ ಆಯೋಜಿಸಿದ್ದ ಕಾರ್ಯಕ್ರಮ ಸಂಸ್ಥೆಯ ಕ್ರೀಯಾಶೀಲ ಪ್ರಯೋಗಗಳಲ್ಲೊಂದು. ಸಸ್ಯ ಪದಾರ್ಥಗಳ ಸವಿ: ಶುಂಠಿ ಲಿಂಬು ಕಷಾಯ, ಕಣಲೆ – ಧಾರೆಹುಳಿ, ಉಪ್ಪಿನಕಾಯಿ, ಈರುಳ್ಳಿ ಸೊಪ್ಪಿನ ಕೋಸಂಬರಿ, ಸಾಂಬಾರ್ ಸೊಪ್ಪಿನ ಚಟ್ನಿ, ಕೆಸುವಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ಮಹಿಳಾ ಮಂಡಳದ ವತಿಯಿಂದ ಸ್ವರ್ಣಮುಖಿ ರಂಗ ಮಂದಿರದಲ್ಲಿ ಮಕ್ಕಳಿಗೆ ಮುದ್ದು ರಾಧಾಕೃಷ್ಣ ಸ್ಪರ್ಧೆ ನಡೆಸಲಾಯಿತು. ತೀರ್ಪುಗಾರರಾಗಿ ಕೊಲ್ಲೂರು ಪ್ರಾಥಮಿಕ ಶಾಲಾ ಶಿಕ್ಷಕರಾದ ಕೃಷ್ಣ ಜಿ ಹಾಗೂ ಮಹಿಳಾ ಮಂಡಳದ ಮಾಜಿ ಅಧ್ಯಕ್ಷರಾದ ಲಲಿತಾಹಂದೆ ಯವರು ಹಾಗೂ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ತಾಲ್ಲೂಕು ಪಂಚಾಯಿತಿ ಸದಸ್ಯರಾದ ಗ್ರೀಷ್ಮಾ ಗಿರಿಧರ ಬಿಢೆ ಹಾಗೂ ಕೊಲ್ಲೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ನೇತ್ರಾವತಿ ಆಚಾರಿ ಮತ್ತು ಮಹಿಳಾ ಮಂಡಳದ ಅಧ್ಯಕ್ಷೆಯಾದ ಶ್ರೀಮತಿ ಪ್ರಸನ್ನ ಶರ್ಮಾ ಹಾಗೂ ಉಪಾಧ್ಯಕ್ಷರಾದ ಲತಾ ಹಾಗೂ ಕಾರ್ಯದರ್ಶಿ ಸುಶೀಲಾ ಹೆಬ್ಬಾರ್ ಅವರು ಸಭೆಯಲ್ಲಿ ಉಪಸ್ಥಿತರಿದ್ದರು. ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಕೊಲ್ಲೂರು ಜೀಪು ಚಾಲಕ ಹಾಗೂ ರಿಕ್ಷಾ ಚಾಲಕರು ಮತ್ತು ಟ್ಯಾಕ್ಸಿ ಚಾಲಕರ ವತಿಯಿಂದ ಮತ್ತು ವಿಧಾತ್ರಿ ವಸತಿಗೃಹದ ಮಾಲಿಕರು ಬಹುಮಾನ ವಿತರಣೆಯ ಪ್ರಾಯೋಜಕರಾಗಿದ್ದು ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಲೇಖನ. ಕರಾವಳಿ ಭಾಗದಲ್ಲಿ ಮುಖ್ಯವಾಗಿ ಗೌಡಸಾರಸ್ವತ ಬ್ರಾಹ್ಮಣ ಸಮಾಜದ ಮುತ್ತೈದೆಯರಿಗೆ ವರ್ಷದ ಉಳಿದ ಎಲ್ಲ ಮಾಸಗಳಿಗಿಂತ ಶ್ರಾವಣಮಾಸ ಪ್ರಮುಖವಾದದ್ದು. ಅದಕ್ಕೆ ಕಾರಣ ಅವರು ಶ್ರಾವಣಮಾಸ ಪೂರ್ತಿ ಶುಕ್ರವಾರ ಹಾಗೂ ಭಾನುವಾರ ಮಾಡುವ ಚೂಡಿ ಪೂಜೆ. ಮುತ್ತೈದೆಯರು ಚೂಡಿ ಪೂಜೆ ಮಾಡುವುದು ತುಳಸಿ ಗಿಡಕ್ಕೆ. ತುಳಸಿಯ ತೌರುಮನೆ ಗಂಗಾನದಿ ಎನ್ನುವ ನಂಬಿಕೆಯೂ ಇದೆ. ಇದು ಕರಾವಳಿ ಭಾಗದಲ್ಲಿ ಆಚರಿಸಲ್ಪಡುವ ವಿಶಿಷ್ಟವಾದ ಸಂಪ್ರದಾಯಗಳಲ್ಲೊಂದು. ಮನೆಯ ಮುಂದೆ ತುಳಸಿಕಟ್ಟೆ ಕಟ್ಟಿ, ಅದರಲ್ಲಿ ಹುಲುಸಾಗಿ ಬೆಳೆದ ತುಳಸಿಗಿಡ ನೆಟ್ಟು ಪ್ರತಿದಿವಸ ಅದರ ದರ್ಶನ ಮಾಡುತ್ತಿದ್ದರೆ ಸರ್ವದೋಷಗಳ ನಿವಾರಣೆಯಾಗುವುದಂತೆ. ಯಾವುದೇ ರೀತಿಯ ಅನಿಷ್ಟ, ಕೆಟ್ಟ ದೃಷ್ಟಿ ಇದ್ದರೂ ಪರಿಹಾರವಾಗುವುದೆನ್ನುವ ನಂಬಿಕೆ ಶ್ರದ್ಧಾವಂತರಿಗಿದೆ. ಇದರಿಂದ ಅನೇಕ ಆರೋಗ್ಯದ ಲಾಭಗಳೂ ಉಂಟು. ತುಳಸಿ ಎಲೆಗಳನ್ನು ನಿಯಮಿತವಾಗಿ ಸೇವಿಸುವುದರಿಂದ ಶರೀರದೊಳಗಿನ ಕಲ್ಮಶವೆಲ್ಲವೂ ವಿಸರ್ಜನೆಯಾಗಿ ಶರೀರ ಸ್ವಚ್ಛವಾಗುವುದು. ತುಳಸಿಯಿಂದ ಮನೆಯ ಸುತ್ತಲಿನ ವಾತಾವರಣದಲ್ಲಿ ಪರಿಶುದ್ಧ ಪ್ರಾಣವಾಯು ಆಮ್ಲಜನಕ ವಿಪುಲವಾಗಿ ದೊರಕುತ್ತದೆ. ಅಲ್ಲದೆ ತುಳಸಿ ಕ್ರಿಮಿನಾಶಕವೂ ಹೌದು! ಚರ್ಮರೋಗ, ವಾತ, ಗಂಟಲು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಮೀನುಗಾರಿಕೆ ಮುಗಿಸಿ ದಡಕ್ಕೆ ಬರುತ್ತಿದ್ದ ಮೀನುಗಾರನೋರ್ವ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಭಾನುವಾರ ಮಧ್ಯಾಹ್ನ ಗಂಗೊಳ್ಳಿಯ ಖಾರ್ವಿಕೇರಿ ಎಂಬಲ್ಲಿ ನಡೆದಿದೆ. ಗಂಗೊಳ್ಳಿ ಖಾರ್ವಿಕೇರಿ ನಿವಾಸಿ ಜಿ.ನಾಗರಾಜ ಖಾರ್ವಿ (೪೫) ಮೃತಪಟ್ಟ ಮೀನುಗಾರ. ಅವರು ಭಾನುವಾರ ಮಧ್ಯಾಹ್ನ ದೋಣಿಯಲ್ಲಿ ಮೀನುಗಾರಿಕೆ ಮುಗಿಸಿಕೊಂಡು ವಾಪಾಸು ಬರುತ್ತಾ ಸಮುದ್ರದ ದಡದಲ್ಲಿ ದೋಣಿಯಲ್ಲಿ ಏಕಾಏಕಿ ಕುಸಿದು ಬಿದ್ದರು. ಕೂಡಲೇ ಕುಂದಾಪುರದ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಗಂಗೊಳ್ಳಿ ಕೊಂಕಣಿ ಖಾರ್ವಿ ಮಾರ್ಕೇಟಿಂಗ್ ಸಮಿತಿ, ಗಂಗೊಳ್ಳಿ ಕೊಂಕಣಿ ಖಾರ್ವಿ ಸಮಾಜದ ನಿರ್ದೇಶಕರಾಗಿ, ಗಂಗೊಳ್ಳಿ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾಗಿ, ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆಯ ಶಿಕ್ಷಕ-ರಕ್ಷಕ ಸಮಿತಿ ಸದಸ್ಯರಾಗಿ, ಖಾರ್ವಿಕೇರಿ ಶ್ರೀ ಗಣೇಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರ ಸಂಘದ ಕೋಶಾಧಿಕಾರಿಯಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಬೈಂದೂರು 2016-17ನೇ ಸಾಲಿನಲ್ಲಿ ಒಟ್ಟು 41 ಕೋಟಿಗೂ ಮಿಕ್ಕಿ ವ್ಯವಹಾರ ನಡೆಸಿ 44.34 ಲಕ್ಷ ರೂ. ಲಾಭಗಳಿಸಿದೆ. ಹಿಂದಿನ ಆರ್ಥಿಕ ವರ್ಷಗಳಿಗಿಂತ ಸಂಸ್ಥೆಯು ಉತ್ತಮ ಪ್ರಗತಿ ಸಾಧಿಸಿದೆ ಎಂದು ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ ಹೇಳಿದರು. ಭಾನುವಾರ ಸಂಘದ ಪ್ರಧಾನ ಕಛೇರಿಯಲ್ಲಿ ಜರುಗಿದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಸಹಕಾರಿಯು 2016-17ನೇ ಸಾಲಿನಲ್ಲಿ ರೂ. 9.19 ಕೋಟಿ ಠೇವಣಿ ಹೊಂದಿದ್ದು 9.53 ಕೋಟಿ ಸಾಲ ನೀಡಿ ಪ್ರಸ್ತುತ ವರ್ಷದಲ್ಲಿ 41 ಕೋಟಿಯಷ್ಟು ವಹಿವಾಟು ನಡೆಸಿದೆ. ಸದಸ್ಯರಿಗೆ ಶೇ.13 ಡಿವಿಡೆಂಟ್ ಘೋಷಿಸಿದೆ ಎಂದರು. ಕಳೆದ ಸಾಲಿನ ಕಾರ್ಯಯೋಜನೆಯಲ್ಲಿ ನಿಗದಿಪಡಿಸಿದ ಠೇವಣಿ, ಸಾಲ, ಅನುತ್ಪಾದಕ ಸಾಲ, ಸುಸ್ತಿ ಸಾಲ ಹಾಗೂ ಮುಂಗಡ ಲಾಭಗಳಿಕೆಯಲ್ಲಿ ನಿಗದಿತ ಗುರಿಯನ್ನು ಮೀರಿ ಸಂಸ್ಥೆ ಮುನ್ನಡೆಯುತ್ತಿದ್ದರೇ, ಗ್ರಾಹಕರ ಸಹಕಾರ, ನಿಧಿಗಳ ಸಮರ್ಪಕ ನಿರ್ವಹಣೆ, ಸಾಲಗಳ ವಿತರಣೆ ಹಾಗೂ ಸಮಯೋಜಿತ ಹೂಡಿಕೆಗಳಿಂದಾಗಿ ಸಂಘವು ನಿರೀಕ್ಷೆಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಮನುಷ್ಯನ ಜೀವನದಲ್ಲಿ ಸಂಗೀತ ಅವಶ್ಯವಾಗಿದೆ. ಮನಸ್ಸಿಗೆ ಉಲ್ಲಾಸ ನೀಡುವ ಮನಸ್ಸನ್ನು ಪುಳಕಿತಗೊಳಿಸಿ ಜೀವನವನ್ನು ಉತ್ತಮಗೊಳಿಸುವ ಶಕ್ತಿ ಸಂಗೀತಕ್ಕಿದೆ. ಹೀಗಾಗಿ ಸಂಗೀತವನ್ನು ಅಧ್ಯಯನ ಮಾಡಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಂಗೀತದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಜಿಎಸ್ವಿಎಸ್ ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ ಹೇಳಿದರು. ಗಂಗೊಳ್ಳಿ ಸಮುದಾಯ ಹಿತರಕ್ಷಣಾ ವೇದಿಕೆ ಆಶ್ರಯದಲ್ಲಿ ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ವಿಶೇಷ ಘಟಕ ಯೋಜನೆಯಡಿ ಪ್ರಾಯೋಜಿತ ಆಕಾಶವಾಣಿ ಕಲಾವಿದ, ಪತ್ರಕರ್ತ ಚಂದ್ರ ಕೆ. ಹೆಮ್ಮಾಡಿ ಮತ್ತು ಬಳಗದವರ ಸುಗಮ ಸಂಗೀತ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇತರ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಹಳಷ್ಟು ಶ್ರಮ ಪಡಬೇಕಿದೆ. ಆದರೆ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಲು ವಿಪುಲ ಅವಕಾಶಗಳಿದ್ದು, ಈ ಅವಕಾಶಗಳನ್ನು ಬಳಸಿಕೊಂಡು ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಲು ಮುಂದಾಗಬೇಕು ಎಂದು ಅವರು ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಮೂಕಾಂಬಿಕಾ ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ಕೆ. ವೆಂಕಟೇಶ ಕಿಣಿ ಅವರನ್ನು ಕೇಂದ್ರ ರೈಲ್ವೆ ಮಂತ್ರಾಲಯವು ರಾಪ್ಟ್ರೀಯ ರೈಲ್ವೆ ಪ್ರಯಾಣಿಕರ ಪರಾಮರ್ಶಕ ಸಮಿತಿ ಸದಸ್ಯರನ್ನಾಗಿ ಮುಂದಿನ ಎರಡು ವರ್ಷದ ಅವಧಿಗೆ ನೇಮಕ ಮಾಡಿ ಆದೇಶ ಹೊರಡಿಸಿದೆ. ಇತಿಹಾಸದಲ್ಲಿ ಇದೇ ಮೊದಲ ಭಾರಿಗೆ ಕರಾವಳಿ ಭಾಗದವರಿಗೆ ಈ ಅವಕಾಶ ದೊರೆತಿರುವುದು ರಾಷ್ಟ್ರಮಟ್ಟದ ಪ್ರಾತಿನಿಧ್ಯ ಸಿಕ್ಕಿದಂತಾಗಿದೆ. ಮಾಜಿ ಮುಖ್ಯಮಂತ್ರಿ, ಸಂಸದ ಬಿ. ಎಸ್. ಯಡಿಯೂರಪ್ಪ ವೆಂಕಟೇಶ ಕಿಣಿಯವರ ಆಯ್ಕೆ ಕುರಿತಂತೆ ಕೇಂದ್ರ ರೈಲ್ವೆ ಮಂತ್ರಿಗಳಿಗೆ ಶಿಫಾರಸು ಮಾಡಿದ್ದರು. ಬೈಂದೂರು ಮೂಕಾಂಬಿಕಾ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವಲ್ಲಿ ಕಿಣಿ ಅವರ ಶ್ರಮ ಅಪಾರವಾದದ್ದು. ರೈಲ್ವೆ ಯಾತ್ರಿ ಸಂಘದ ಮೂಲಕ ಹಲವು ವರ್ಷಗಳಿಂದ ನಿರಂತರವಾಗಿ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸುತ್ತಾ, ಬೇಡಿಕೆಯಿಡುತ್ತಾ ಕಾರ್ಯಸಾಧಿಸುವಲ್ಲಿ ಶ್ರಮಿಸಿದ್ದಾರೆ. ತಮ್ಮ ಉದ್ಯಮದೊಂದಿಗೆ ಬೈಂದೂರಿನ ಅಭಿವೃದ್ಧಿ ಕಲ್ಪನೆಯನ್ನು ಸಾಕಾರಗೊಳಿಸುವಲ್ಲಿ ನಿರಂತರವಾಗಿ ತೊಡಗಿಸಿಕೊಂಡ ಕೆಲವೇ ಕೆಲವರ ಪೈಕಿ ವೆಂಕಟೇಶ ಕಿಣಿ ಅವರೂ ಓರ್ವರೆನಿಸಿಕೊಂಡಿದ್ದಾರೆ.
