ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು: ಮಣಿಪಾಲದಲ್ಲಿ ನಡೆದ ಅಪಘಾತದಲ್ಲಿ ತಲೆಗೆ ಗಂಭೀರ ಏಟು ತಗಲಿ ಬ್ರೈನ್ ಡೆಡ್ ಆಗಿದ್ದ ಬೈಂದೂರಿನ ಖ್ಯಾತ ವೈದ್ಯ ಡಾ. ರವಿರಾಜ್ ಅವರ ಪುತ್ರ ಹಿಮಾಂಶುವಿನ ದೇಹದೊಳಗಿನ ಅಂಗಾಂಗಗಳನ್ನು ಶಸ್ತ್ರಚಿಕಿತ್ಸೆಯ ಮೂಲಕ ಹೊರತೆಗೆದು ಅಗತ್ಯವಿರುವವರಿಗೆ ಜೋಡಿಲಾಗಿದ್ದು, ನೋವಿನ ನಡುವೆಯೂ ಅಂಗಾಂಗ ದಾನಕ್ಕೆ ಮುಂದಾಗಿದ್ದ ಕುಟುಂಬದ ನಿರ್ಣಯದಿಂದಾಗಿ ಯುವಕನ ಅಂಗಾಗಗಳು ಐವರ ಬಾಳಿಗೆ ಬೆಳಕಾಗಿದೆ. ಅ.8ರ ಶನಿವಾರ ನಡೆದ ಅಪಘಾತದಲ್ಲಿ ಹಿಮಾಂಶುವಿನ ಬ್ರೈನ್ ಡೆಡ್ ಆಗಿರುವುದನ್ನು ಖಚಿತಪಡಿಸಿಕೊಂಡ ಬಳಿಕ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ಮತ್ತು ಮಣಿಪಾಲ್ ಆಸ್ಪತ್ರೆ ಬೆಂಗಳೂರಿನ ನುರಿತ ವೈದ್ಯರ ತಂಡ ಸೋಮವಾರ ಬೆಳಿಗ್ಗೆ 2:30ರ ವೇಳೆಗೆ ಅಂಗಾಂಗಗಳನ್ನು ಶಸ್ತ್ರಕ್ರಿಯೆ ಮೂಲಕ ಹೊರತೆಗೆದು ಅದನ್ನು ಬೆಂಗಳೂರಿಗೆ ರವಾನೆ ಮಾಡಿ ಬೇರೆ ದೇಹಕ್ಕೆ ಯಶಸ್ವಿಯಾಗಿ ಜೋಡಣೆ ಮಾಡಿದ್ದಾರೆ. ಕುಂದಾಪ್ರ ಡಾಟ್ ಕಾಂ ವರದಿ. ಅಂಗಾಂಗ ದಾನ ಮಾಡುವ ಕುರಿತು ಸ್ವತಃ ವೈದ್ಯರಾಗಿರುವ ಡಾ. ರವಿರಾಜ್ ಹಾಗೂ ಸುಜಾತ ದಂಪತಿಗಳಿಂದ ಭಾನುವಾರ ಸಮ್ಮತಿ ದೊರೆತ ಕೂಡಲೇ ಕಾನೂನಿನ ವಿವಿಧ ಪ್ರಕ್ರಿಯೆಗಳಿಗೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮೇಕೋಡು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಅತ್ಯುತ್ತಮ ಹಾಲು ಉತ್ಪಾದಕರ ಸಹಕಾರಿ ಸಂಘ ಪ್ರಶಸ್ತಿ ಲಭಿಸಿದೆ. ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಮ್.ಎನ್. ರಾಜೇಂದ್ರಕುಮಾರ್ ಇವರು ಸಂಘದ ಅಧ್ಯಕ್ಷರಾದ ಪ್ರಕಾಶಚಂದ್ರ ಶೆಟ್ಟಿ ಮತ್ತು ಕಾರ್ಯದರ್ಶಿ ಕುಶಕುಮಾರ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ನಿರ್ದೇಶಕರು ಉಪಸ್ಥಿತರಿದ್ದರು
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ನವರಾತ್ರಿಯ ಅಂಗವಾಗಿ ಪ್ರಸಿದ್ಥ ಯಾತ್ರಾಸ್ಥಳ ಕೊಲ್ಲೂರಿಗೆ ಆಗಮಿಸಿದ್ದ ಸಹಸ್ರಾರು ಭಕ್ತರು ವಿಜಯದಶಮಿಯಂದು ತಮ್ಮ ಮಕ್ಕಳಿಗೆ ವಿದ್ಯಾರಂಭ ಮಾಡಿಸಿದರು. ಶ್ರೀ ಮೂಕಾಂಬಿಕಾ ದೇವಸ್ಥಾನದ ಪ್ರಾಂಗಣದ ಸರಸ್ವತಿ ಮಂಟಪದ ಮುಂಭಾಗದಲ್ಲಿ ಮಕ್ಕಳಿಗೆ ಪ್ರಾಥಃಕಾಲದಿಂದಲೇ ಅಕ್ಷರಾಭಾಸ ಮಾಡಿಸಲಾಯಿತು. ಹೆತ್ತವರು ಕಾಲಿನ ಮೇಲೆ ಮಕ್ಕಳನ್ನು ಕುರಿಸಿಕೊಂಡು ವಿದ್ಯಾರಂಭ ಮಾಡಿಸಲಾಗುತ್ತದೆ. ಅರ್ಚಕರು ಚಿನ್ನದಿಂದ ಮಗುವಿನ ನಾಲಗೆಯ ಮೇಲೆ ಓಂ ಎಂದು ಬರೆಯುತ್ತಾರೆ, ಬಳಿಕ ಹೆತ್ತವರು ಮಗುವಿನ ಬೆರಳಿಂದ ಅಕ್ಕಿ ತುಂಬಿದ ಹರಿವಾಣದಲ್ಲಿ ಓಂ ಎಂದು ಬರೆಯಿಸಿ ಬಳಿಕ ಮಾತೃಭಾಷೆಯಲ್ಲಿ ಅ,ಆ,ಇ ಬರೆಸುವ ಮೂಲಕ ಅಕ್ಷರಾಭ್ಯಾಸ ಮಾಡಿಸಲಾಗುತ್ತದೆ. ಇದರಿಂದ ಮಕ್ಕಳ ನಾಲಿಗೆಯ ಮೇಲೆ ಸರಸ್ವತಿ ದೇವಿ ನೆಲೆಸಿ ಅವರ ಶೈಕ್ಷಣಿಕ ಭವಿಷ್ಯ ಸಮೃದ್ಧಿಯಾಗುತ್ತದೆ ಎಂಬ ನಂಬಿಕೆ ಭಕ್ತರದ್ದು. ನವಾನ್ನಪ್ರಾಶನ: ಎಳೆಯ ಕಂದಮ್ಮಗಳಿಗೆ ನವಾನ್ನಪ್ರಾಶನದ ಮೂಲಕ ಮೊದಲ ಭಾರಿಗೆ ಅನ್ನವನ್ನು ತಿನ್ನಿಸಲಾಗುತ್ತದೆ. ಶ್ರೀ ಮೂಕಾಂಬಿಕೆಯ ಸನ್ನಿಧಿಯಲ್ಲಿ ಅನ್ನಾಹಾರ ಆರಂಭಿಸಿದ ಮಗು ಮುಂದೆ ಯಾವುದೇ ರೀತಿಯ ಅನಾರೋಗ್ಯದಿಂದ ಬಳಲುವುದಿಲ್ಲ ಎಂಬುದು ನಂಬಿಕೆ. ಈ ಬಾರಿ ಕೊಲ್ಲೂರಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮುತ್ತೂಟ್ ಫೈನಾನ್ಸ್ ಸಂಸ್ಥೆಯ ಬೈಂದೂರು ಶಾಖಾ ವ್ಯವಸ್ಥಾಪಕ ಮಹೇಶ್ ಸುವರ್ಣ (32) ಸೋಮವಾರ ಶಾಖಾ ಕಚೇರಿಯಲ್ಲಿ ಕರ್ತವ್ಯ ನಿರತರಾಗಿದ್ದಾಗ ತೀವ್ರ ಹೃದಯಾಘಾತದಿಂದ ನಿಧನರಾದರು. ರಕ್ತದೊತ್ತಡದಲ್ಲಿ ಒಮ್ಮೆಲೇ ತೀವ್ರ ಕುಸಿತವಾದ ಕಾರಣ ಹೃಯಾಘಾತ ಸಂಭವಿಸಿತು ಎನ್ನಲಾಗಿದೆ. ಬ್ರಹ್ಮಾವರದ ಇಂದಿರಾನಗರ ನಿವಾಸಿ ಶೀನ ಮರಕಾಲ ಅವರ ಪುತ್ರರಾದ ಮಹೇಶ್ ಐದು ತಿಂಗಳ ಹಿಂದೆ ಚಿಕ್ಕಮಗಳೂರು ಶಾಖೆಯಿಂದ ಇಲ್ಲಿಗೆ ಶಾಖಾಧಿಕಾರಿಯಾಗಿ ಬಡ್ತಿಹೊಂದಿ ಬಂದಿದ್ದರು. ಶಾಲಾ ದಿನಗಳಿಂದಲೂ ಕ್ರೀಡಾಪಟುವಾಗಿದ್ದ ಅವರು ಕೊಕ್ಕೋ ಮತ್ತು ಕ್ರಿಕೆಟ್ ಆಟದಲ್ಲಿ ಪರಿಣತಿ ಹೊಂದಿದ್ದರು. ಬ್ರಹ್ಮಾವರದ ಎಂಜೋಯ್ ಕ್ರಿಕೆಟರ್ಸ್ ತಂಡದ ಸದಸ್ಯರಾಗಿ ವಿಶೇಷ ಸಾಧನೆ ಮಾಡಿದ್ದರು. ಅವಿವಾಹಿತರಾಗಿರುವ ಅವರು ತಂದೆ, ತಾಯಿ, ಇಬ್ಬರು ಸಹೋದರರು ಮತ್ತು ಸಹೋದರಿಯನ್ನು ಅಗಲಿದ್ದಾರೆ. ಅವರ ಅಂತಿಮ ಸಂಸ್ಕಾರ ಮಂಗಳವಾರ ಬ್ರಹ್ಮಾವರದಲ್ಲಿ ನಡೆಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀ ರಾಮಚಂದ್ರ ದೇವಸ್ಥಾನದ ಶ್ರೀ ರಾಮಕ್ಷತ್ರಿಯ ಯುವಕ ಮಂಡಳಿಯ 30ನೇ ವರ್ಷದ ಶಾರದೋತ್ಸವದ ಪುರಮೆರವಣಿಗೆ ವಿಜೃಂಭಣೆಯಿಂದ ಜರುಗಿತು. ಡೋಲು, ಕೀಲು ಕುದುರೆ, ಡೈನಾಸಾರೋ, ಬೆಂಕಿಯಾಟ, ಹುಲಿವೇಶ ಟ್ಯಾಬ್ಲೋ ಸಾರ್ವಜನಿಕರ ಗಮನ ಸೆಳೆದವು. ಬೈಂದೂರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿ ಕೊನೆಯಲ್ಲಿ ಶಾರದಾ ಮಾತೆಯ ಜಲಸ್ತಂಭನ ಕಾರ್ಯಕ್ರಮ ಜರುಗಿತು. More photos of Sharadotsava here – https://www.facebook.com/kundapra/posts/1203626803044421
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀ ಸೇನೇಶ್ವರ ದೇವಸ್ಥಾನದ ಸಾರ್ವಜನಿಕ ಶಾರದೋತ್ಸವ ಸಮಿತಿಯ 43ನೇ ವರ್ಷದ ಶಾರದೋತ್ಸವದ ಪುರಮೆರವಣಿಗೆ ವಿಜೃಂಭಣೆಯಿಂದ ಜರುಗಿತು. ಡೋಲು, ಕೀಲು ಕುದುರೆ, ಕೋಳಿ, ನಾರದ, ಟ್ಯಾಬ್ಲೋ ಗಮನ ಸೆಳೆದವು. ಬೈಂದೂರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿ ಕೊನೆಯಲ್ಲಿ ಶಾರದಾ ಮಾತೆಯ ಜಲಸ್ತಂಭನ ಕಾರ್ಯಕ್ರಮ ಜರುಗಿತು. More Photos here – https://www.facebook.com/kundapra/posts/1203616506378784
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲೊಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಚಂಡಿಕಾಯಾಗ ಹಾಗೂ ನವರಾತ್ರಿ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ಜರಗಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮಣಿಪಾಲ ಸಮೀಪ ಮಣ್ಣಪಳ್ಳದ ದೇವಸ್ಥಾನದ ಬಳಿಯ ರಸ್ತೆಯಲ್ಲಿ ಶನಿವಾರ ರಾತ್ರಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಂದೂರಿನ ಖ್ಯಾತ ಮಕ್ಕಳ ತಜ್ಞ ಡಾ. ರವಿರಾಜ್ ಅವರ ಪುತ್ರ ಹಿಮಾಂಶು ರಾವ್ (16) ಅವರ ಬ್ರೈನ್ ಡೆಡ್ ಆಗಿದ್ದು, ಆತನ ಅಂಗಾಂಗ ದಾನಕ್ಕೆ ಪೋಷಕರು ನಿರ್ಧರಿಸಿದ್ದಾರೆ. ಹಿಮಾಂಶುವಿನ ಕಣ್ಣು (ಕಾರ್ನಿಯಾ), ಕಿಡ್ನಿ, ಲಿವರ್ ದಾನ ಮಾಡಲು ನಿರ್ಧರಿಸಲಾಗಿದ್ದು ಸೋಮವಾರ ಬೆಳಿಗ್ಗೆ ಗ್ರೀನ್ ಕಾರಿಡಾರ್ ಮೂಲಕ, ಝೀರೊ ಟ್ರಾಫಿಕ್ ನಲ್ಲಿ 6 ಗಂಟೆಗೆ ಬೆಂಗಳೂರಿಗೆ ರವಾನೆ ಮಾಡಲಾಗಿದೆ. ಗಂಭೀರ ಗಾಯಗೊಂಡ ಹಿಮಾಂಶುವನ್ನು ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅಫಘಾತದಲ್ಲಿ ಬೈಕ್ ಸವಾರಿ ಮಾಡುತ್ತಿದ್ದ ಬಂಟಕಲ್ಲು ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಹರ್ಷಿತ್ ಶಿರ್ವ (19) ಸ್ಥಳದಲ್ಲಿಯೇ ಸಾವನ್ನಪ್ಪಿದ್ದರೇ, ಸಹ ಸವಾರ ಹಿಮಾಂಶುವಿಗೆ ಗಂಭೀರವಾಗಿ ಗಾಯಗಳಾಗಿ ಬ್ರೈನ್ ಡೆಡ್ ಆಗಿತ್ತು. ನೋವಿನಲ್ಲಿಯೂ ಪೊಷಕರು ಅಂಗಾಂಗದಾನಕ್ಕೆ ಮುಂದಾಗುವ ಮೂಲಕ ಮಾದರಿ ಕಾರ್ಯವೆಸಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಕರ್ನಾಟಕದ ರೈತರ ಹಿತದೃಷ್ಠಿಯಿಂದ ಕಾವೇರಿ ನೀರು ಹಂಚಿಕೆಯ ವಿಚಾರದಲ್ಲಿ ಕಠಿಣ ನಿರ್ಧಾರ ಕೈಗೊಂಡು ಸತ್ಯಾಗ್ರಹ ಮಾಡಿದ್ದೇನೆಯೇ ಹೊರತು ಇದರಲ್ಲಿ ನನ್ನ ಸ್ವಾರ್ಥ ರಾಜಕೀಯ ಇಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದರು. ಅವರು ಕೊಲ್ಲೂರು ಶ್ರೀ ಮೂಕಾಂಬಿಕೆಯ ದರ್ಶನ ಪಡೆಯುವ ಖಾಸಗಿ ಹೋಟೆಲ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಹಿಂದಿನ ದ್ವಿಸದಸ್ಯ ಪೀಠಕ್ಕೆ ರಾಜ್ಯ ಸರಕಾರ ಸರಿಯಾಗಿ ಮನರಿಕೆ ಮಡಿಕೊಡದ ನೆಲೆಯಲ್ಲಿ ನ್ಯಾಯಾಲಯ ನೀಡಿದ ತೀರ್ಪು ಹಲವರು ಗೊಂದಲಗಳಿಗೆ ಕಾರಣವಾಗಿತ್ತು. ಈಗ ಅಧ್ಯಯನ ತಂಡ ನೀಡಿದ ವರದಿಯನ್ನು ತ್ರಿಸದಸ್ಯ ಪೀಠದಿಂದ ವಿಚಾರಣೆ ನಡೆಯಬೇಕಾಗಿದೆ. ಯವುದೇ ರೀತಿಯ ಸಂಧಾನ ಫಲಕಾರಿಯಾಗದು ಎಂದರು. ಕಾವೇರಿ ನೀರಿನ ಹಂಚಿಕೆಯ ಹೋರಾಟ 1993ರಿಂದ ಪ್ರಾರಂಭಗೊಡಿದ್ದು, ಈವರೆಗೂ ಅಂತ್ಯ ಕಂಡಿಲ್ಲ. ಈ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿಯವರಲ್ಲಿ ಸುದೀರ್ಘ ಮಾತುಕತೆ ನಡೆಸಿದ್ದು, ತಕ್ಷಣ ಸ್ಪಂದಿಸಿದ ಅವರು ಅಟಾರ್ನಿ ಜನರಲ್ ಹಾಗೂ ನಾಲ್ಕು ರಾಜ್ಯಗಳ ಅಧಿಕಾರಿಗಳಿರುವ ಅಧ್ಯಯನ ತಂಡವನ್ನು ಜಲಾಶಯಗಳ ಸ್ಥಿತಿಗತಿಯ ಪರಿಶೀಲನೆಗಾಗಿ ಕಳುಹಿಸಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಬಿಜೆಪಿ ಯುವಮೋರ್ಚಾ ಬೈಂದೂರು ಜಿಲ್ಲಾ ಪಂಚಾಯತ್ ಕ್ಷೇತ್ರ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಯುವ ಉದ್ಯಮಿ ವಿಕ್ರಮ್ ಪೂಜಾರಿ, ಕಾರ್ಯದರ್ಶಿಯಾಗಿ ಗಣೇಶ್ ಗಾಣಿಗ ತಗ್ಗರ್ಸೆ ನೇಮಕಗೊಂಡಿದ್ದಾರೆ. ಇತ್ತಿಚಿಗೆ ನಡೆದ ಬಿಜೆಪಿ ಯುವಮೋರ್ಚಾ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಬೈಂದೂರು ಬಿಜೆಪಿ ಯುವಮೋರ್ಚಾದ ನೂತನ ಅಧ್ಯಕ್ಷ ಶರತ್ ಶೆಟ್ಟಿ ಉಪ್ಪುಂದ ಅವರು ನೇಮಿಸಿದ ಶಕ್ತಿಕೇಂದ್ರದ ಪದಾಧಿಕಾರಿಗಳನ್ನು ಹಿರಿಯ ಮುಖಂಡರ ಸಮ್ಮುಖದಲ್ಲಿ ಗೌರವಿಸಿದರು.
