Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿಶಾಲವಾದ ಕರಾವಳಿ ತೀರ ಸೌಂದರ್ಯದ ನೆಲೆಬೀಡು. ಸರಕಾರ ಸಮುದ್ರಕ್ಕೆ ಕಲ್ಲು ಹಾಕಲು ನೀಡಿದ ಆದ್ಯತೆಯನ್ನು ಬೀಚ್ ಅಭಿವೃದ್ಧಿಗೆ ನೀಡಿಲ್ಲ. ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಯಾದಂತೆ ಕರ್ನಾಟಕದಲ್ಲಿ ಈವರೆಗೂ ಆಗಿಲ್ಲ. ಹೀಗೆಂದವರು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ. ಬೀಜಾಡಿ-ಕೋಟೇಶ್ವರ ಹಳಅಳಿವೆ ಬೀಚ್‌ನಲ್ಲಿ ಕುಂದಾಪುರ ಊರ್‌ಮನಿ ಹಬ್ಬ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಕುಂದಾಪುರ ತಾಲೂಕು ಪಂಚಾಯತ್ ಅಧ್ಯಕ್ಷ ಜಯಶ್ರೀ ಸುಧಾಕರ ಮೊಗವೀರ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಸದಸ್ಯೆ ಲಕ್ಷ್ಮೀ ಮಂಜು ಬಿಲ್ಲವ, ಶ್ರೀಲತಾ ಸುರೇಶ್ ಶೆಟ್ಟಿ, ಕುಂದಾಪುರ ಪುರಸಭೆ ಉಪಾಧ್ಯಕ್ಷ ರಾಜೇಶ್ ಕಾವೇರಿ, ತಾ.ಪಂ ಸದಸ್ಯೆ ರೂಪಾ ಪೈ, ಕೋಟೇಶ್ವರ ಗ್ರಾಪಂ ಅದ್ಯಕ್ಷೆ ಜಾನಕಿ ಬಿಲ್ಲವ, ಬೀಜಾಡಿ ಗ್ರಾಪಂ ಅಧ್ಯಕ್ಷೆ ಸಾಕು ಬೀಜಾಡಿ, ಮೀನುಗಾರಿಕ ಅಭಿವೃದ್ದಿ ನಿಗಮ ಮಾಜಿ ಅಧ್ಯಕ್ಷ ಹೆರಿಯಣ್ಣ ಚಾತ್ರಬೆಟ್ಟು,  ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಅನಿತಾ ಮೊದಲಾದವರು ಉಪಸ್ಥಿತರಿದ್ದರು. ಕೋಟೇಶ್ವರ ಬೀಚ್ ಉತ್ಸವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ತಾಲೂಕಿನ ಪ್ರವಾಸಿ ತಾಣಗಳ ಅಭಿವೃದ್ಧಿಗೆ ನಿರಂತವಾಗಿ ಶ್ರಮಿಸಲಾಗುತ್ತಿದೆ. ಸೋಮೇಶ್ವರ ಬೀಚ್ ಮೂಲಭೂತ ಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಸರಕಾರದಿಂದ ಅನುದಾನ ನೀಡಲಾಗಿದ್ದು, ಮೊದಲ ಹಂತದ ಕಾಮಗಾರಿ ಈಗಾಗಲೇ ನಡೆದಿದ್ದು, ಎರಡನೇ ಹಂತದ ಅನುದಾನ ಮುಂದಿನ ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಬೆಸುಗೆ ಫೌಂಡೇಶನ್ ರಿ. ಬೈಂದೂರು, ಗ್ರಾಮ ಪಂಚಾಯತ್ ಪಡುವರಿ ಹಾಗೂ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಸಹಯೋಗದೊಂದಿಗೆ ಜರುಗಿದ ಬೈಂದೂರು ಬೀಚ್ ಉತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬೈಂದೂರು ತಾಲೂಕು ಹಂತ ಹಂತವಾಗಿ ಅಭಿವೃದ್ಧಿಯಾಗಲಿದ್ದು, ಆಡಳಿತಾತ್ಮಕ ಹಾಗೂ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದರು. ನಿವೃತ್ತ ಐ.ಎಫ್.ಎಸ್ ಅಧಿಕಾರಿ ಜಗನ್ನಾಥ ಶೆಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಪಶ್ಚಿಮಘಟ್ಟ ಹಾಗೂ ಅರಬ್ಬಿ ಸಮುದ್ರದ ನಡುವೆ ಇರುವ ಸುಂದರ ಪ್ರದೇಶ ಮನಮೋಹಕವಾಗಿದ್ದು ಪ್ರಕೃತಿದತ್ತವಾಗಿ ಉತ್ತಮ ಪ್ರವಾಸಿ ತಾಣಗಳನ್ನು ಹೊಂದಿದೆ. ಇದರನ್ನು ಅಭಿವೃದ್ದಿಪಡಿಸುವ ಕೆಲಸ ಹೆಚ್ಚಾಗಿ ಆಗಬೇಕಿದೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೆಸುಗೆ ಫೌಂಡೇಶನ್ ರಿ. ಬೈಂದೂರು, ಪಡುವರಿ ಗ್ರಾಮ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆ ಸಹಯೋಗದೊಂದಿಗೆ ಸೋಮೇಶ್ವರದಲ್ಲಿ ಜರುಗುತ್ತಿರುವ ಬೈಂದೂರು ಬೀಚ್ ಉತ್ಸವ 2017ರ ವಿವಿಧ ಕಾರ್ಯಕ್ರಮಗಳು ಹಾಗೂ ಸ್ವರ್ಧೆಗಳಿಗೆ ಗಾಳಿಪಟ ಉತ್ಸವದ ಮೂಲಕ ಚಾಲನೆ ದೊರೆಯಿತು. ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಸುಬ್ರಹ್ಮಣ್ಯ ಭಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಬೈಂದೂರು ಸುತ್ತಲಿನ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿ ಹಿನ್ನೆಡೆಯನ್ನು ಕಂಡಿದ್ದು ಆದರೆ ಈ ಉತ್ಸವದ ಮೂಲಕ ಅದಕ್ಕೊಂದು ವೇಗ ದೊರೆತಿದೆ ಎಂದರು. ಗಾಳಿಪಟ ಉತ್ಸವಕ್ಕೆ ಚಾಲನೆ ನೀಡುವ ಸಂದರ್ಭ ಗುಡೇಮನೆ ನಾಗಪ್ಪ ಶೇರುಗಾರ್ ಅಧ್ಯಕ್ಷತೆ ವಹಿಸಿದರು. ಮುಖ್ಯ ಅಥಿತಿಗಳಾಗಿ ಪಡುವರಿ ಗ್ರಾ.ಪಂ ಅಧ್ಯಕ್ಷೆ ದೀಪಾ ಶೆಟ್ಟಿ, ಪಡುವರಿ ಗ್ರಾ.ಪಂ.ಸದಸ್ಯರಾದ ಮಾಣಿಕ್ಯ ಹೋಬಳಿದಾರ್, ಎಸ್. ತಿಮ್ಮಪ್ಪ, ಶಿವರಾಮ ಪೂಜಾರಿ, ಸೋಡಿತಾರ್ ಸುಬ್ರಾಯ ಶೇರುಗಾರ್, ಸಂಜು ದೇವಾಡಿಗ, ಶ್ರೀ ರಾಮ ಭಜನಾ ಮಂಡಳಿ ಸೋಮೇಶ್ವರ ಇದರ ಅಧ್ಯಕ್ಷ ಪರಮೇಶ್ವರ, ಬೆಸುಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೆಸುಗೆ ಫೌಂಡೇಶನ್ ರಿ. ಬೈಂದೂರು, ಗ್ರಾಮ ಪಂಚಾಯತ್ ಪಡುವರಿ, ಉಡುಪಿ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಸಹಯೋಗದೊಂದಿಗೆ ಬೈಂದೂರು ಸೋಮೇಶ್ವರ ಬೀಚ್ನಲ್ಲಿ ಡಿಸೆಂಬರ್ 28 ಹಾಗೂ 29ರಂದು ಬೈಂದೂರು ಬೀಚ್ ಉತ್ಸವ ಜರುಗಲಿರುವ ಬೀಚ್ ಉತ್ಸವಕ್ಕೆ ಕೊನೆ ಕ್ಷಣದ ಸಿದ್ಧತೆಗಳು ಜರುಗುತ್ತಿವೆ. ಬೈಂದೂರಿನಲ್ಲಿ ಪ್ರಪ್ರಥಮ ಭಾರಿಗೆ ಆಯೋಜನೆಗೊಂಡಿರುವ ಬೈಂದೂರು ಬೀಚ್ ಉತ್ಸವಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನ ದೊರೆಯುತ್ತಿದ್ದು, ಪಡುವರಿ ಸೋಮೇಶ್ವರ ಕಡಲತೀರ ಸಿಂಗರಿಸಿಕೊಳ್ಳುತ್ತಿದೆ. ಉತ್ಸವಕ್ಕಾಗಿ ಬೀಚ್ ಪರಿಸರವನ್ನು ಸ್ವಚ್ಛಗೊಳಿಸಲಾಗಿದ್ದು, ವೇದಿಕೆ, ಪ್ರದರ್ಶನ ಮಳಿಗೆಗಳು, ಅಮ್ಯೂಸ್ ಮೆಂಟ್ ಪಾರ್ಟ್ ಮುಂದಾದವುಗಳ ಜೋಡಣೆಯ ಅಂತಿಮ ಹಂತದ ಸಿದ್ಧತೆ ನಡೆದಿದೆ. ಸೋಮೇಶ್ವರದಿಂದ ಅಳಿವೆಯ ತನಕ ವಿದ್ಯುದೀಪಗಳ ಅಲಂಕಾರ, ಬಣ್ಣದ ಚಿತ್ತಾರದಿಂದ ಬೀಚ್ ಪರಿಸರ ಶುಭ್ರವಾಗಿ ಕಂಗೊಳಿಸುತ್ತಿದೆ. ದಿ. 28 ಡಿಸೆಂಬರ್ 2017ರ ಗುರುವಾರ ಬೆಳಿಗ್ಗೆ 9 ಗಂಟೆಗೆ ಗಾಳಿಪಟ ಉತ್ಸವ ಸ್ವರ್ಧೆಗೆ ಚಾಲನೆ, 9:30ಕ್ಕೆ ಸೂಪರ್ ಸೆಲ್ಫಿ ಸ್ವರ್ಧೆಗೆ ಚಾಲನೆ, 10ಗಂಟೆಗೆ ಮರಳುಶಿಲ್ಪ ಅನಾವರಣ, 10:30ಕ್ಕೆ ಚಿತ್ರಸಿರಿ, ಚಿತ್ರಕಲಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪರಿಪೂರ್ಣತೆ ಮತ್ತು ಪರಿಪಕ್ವತೆ ಸಾಧನೆ ಎಂಬ ನಾಣ್ಯದ ಎರಡು ಮುಖಗಳಿದ್ದಂತೆ. ವಿದ್ಯಾರ್ಥಿಗಳು ತಮ್ಮ ಶಾಲಾ ಮತ್ತು ಕಾಲೇಜು ಹಂತಗಳಲ್ಲಿ ವಿಷಯವಾರು ಪರಿಕಲ್ಪನೆಗಳನ್ನು ಮಾತ್ರ ಕರಗತ ಮಾಡಿಕೊಳ್ಳದೇ, ಜೀವನದ ಮೌಲ್ಯದ ಬಗ್ಗೆ ಸಂಪೂರ್ಣವಾದ ಅರಿವನ್ನು ತಂದುಕೊಳ್ಳಬೇಕು. ಯಾವ ವಿದ್ಯಾಸಂಸ್ಥೆ ವಿದ್ಯಾರ್ಥಿಗಳ ಸಮಗ್ರ ವಿಕಾಸಕ್ಕೆ ವಿಫುಲವಾದ ಅವಕಾಶವನ್ನು ಹಾಗೂ ವೇದಿಕೆಯನ್ನು ನಿರ್ಮಾಣಮಾಡಿಕೊಡುತ್ತದೆಯೋ ಅಂತಹ ಶಿಕ್ಷಣ ಸಂಸ್ಥೆ ಸಮಾಜದ ಮುಂದಿನ ಆಶೋತ್ತರಗಳನ್ನು ಈಡೇರಿಸಲು ಉತ್ತಮ ವೇದಿಕೆಯಾಗುತ್ತದೆ ಎಂದು ಗುರುಕುಲ ವಿದ್ಯಾಸಂಸ್ಥೆಯ 12ನೇ ವರ್ಷದ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ  ಎಮ್.ಜಿ.ಎಮ್ ಕಾಲೇಜು ಉಡುಪಿ ನಿರ್ವತ್ತ ಪ್ರಾಂಶುಪಾಲರು ಕುಸುಮ ಕಾಮತ್ ತಮ್ಮ ಅನುಭವನ್ನು ಹಂಚಿಕೊಂಡರು. ಗುರುಕುಲ ವಿದ್ಯಾಸಂಸ್ಥೆಯ ವಿಶಾಲವಾದ ಆವರಣದಲ್ಲಿ ರಂಗು ರಂಗಿನ ಬೆಳಕಿನ ನಡುವೆ ತನ್ನ 12ನೇ ವರ್ಷದ ವಾರ್ಷಿಕೋತ್ಸವವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಸ್ಥಾಪಕರಾದ ಶ್ರೀ.ಬಸ್ರೂರು ಅಪ್ಪಣ್ಣ ಹೆಗ್ಡೆ ರವರು ವಹಿಸಿದ್ದರಲ್ಲದೇ ತಮ್ಮ ಅಧ್ಯಕ್ಷೀಯ ಮಾತುಗಳಲ್ಲಿ ಗುರುಕುಲ ಹೇಗೆ ಸಮಾಜಮುಖಿ ಶಿಕ್ಷಣ ಸಂಸ್ಥೆಯಾಗುದೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕುಸುಮ ಫೌಂಡೇಶನ್ ನಾಗೂರು ಸಾರಥ್ಯದಲ್ಲಿ ಜರುಗುತ್ತಿರುವ ವಾರ್ಷಿಕ ಸಾಂಸ್ಕೃತಿಕ ಉತ್ಸವ ‘ಕುಸುಮಾಂಜಲಿ-2017’ ನಾಗೂರಿನಲ್ಲಿ ಅದ್ಧೂರಿಯಾಗಿ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಪ್ರೇಕ್ಷಕರು ಭಾಗವಹಿಸಿದರು. ಎಸ್.ಡಿ.ಪಿ.ಟಿ. ಪ್ರಥಮ ದರ್ಜೆ ಕಾಲೇಜು ಕಟೀಲು ಇಲ್ಲಿನ ಪ್ರಾಶುಂಪಾಲರಾದ ಎಮ್. ಬಾಲಕೃಷ್ಣ ಶೆಟ್ಟಿ ಇವರು ದಿಕ್ಸೂಚಿ ಭಾಷಣ ಮಾಡಿ ಸಂಸ್ಕೃತಿ ಹಾಗೂ ಕಲೆಯ ಉಳಿಯುವಿಕೆಗೆ ಕುಸುಮ ಫೌಂಡೇಶನ್‌ನ ಕೊಡುಗೆಯನ್ನು ಶ್ಲಾಘಿಸಿದರು. ಸಂಸ್ಥೆಯು ನಿಸ್ವಾರ್ಥ ಸಾಮಾಜಿಕ ಸೇವೆಗಾಗಿ ಕೊಡಮಾಡುವ ಪ್ರತಿಷ್ಠಿತ ‘ಕುಸುಮಶ್ರೀ’ ಪ್ರಶಸ್ತಿಯನ್ನು ಪ್ರೊ. ಎ.ವಿ. ನಾವಡ, ನಿವೃತ್ತ ಪ್ರಾಧ್ಯಾಪಕರು ಮತ್ತು ಡೀನ್ ಕನ್ನಡ ವಿಶ್ವವಿದ್ಯಾನಿಲಯ, ಹಂಪಿ ಹಾಗೂ ಡಾ. ಗಾಯತ್ರಿ ನಾವಡ, ಸಂಶೋಧಕರು ಮತ್ತು ವಿಮರ್ಶಕರು, ಮಂಗಳೂರು ದಂಪತಿಗಳಿಗೆ ಇವರು ಜಾನಪದ ಕ್ಷೇತ್ರದಲ್ಲಿ ಮಾಡಿರುವ ಸಾಧನೆ ಪರಿಗಣಿಸಿ ಪ್ರಧಾನ ಮಾಡಿದರು. ಅವರು ಮಾತನಾಡಿ ಜಾನಪದ ಕಲೆ ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ, ಈ ನಿಟ್ಟಿನಲ್ಲಿ ಕುಸುಮ ಸಂಸ್ಥೆ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಹೇಳಿದರು. ಕಾರ್ಯಕ್ರಮದ ಚಾನಲ್ ಪಾರ್ಟನರ್ ಮುಂಬೈನ ಶುಭಸಾಗರ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸುತ್ತಲಿನ ಸಮಸ್ಯೆ, ತಲ್ಲಣಗಳಿಗೆ ಸ್ಪಂದಿಸಿ ಸಮಾಜವನ್ನು ಎಚ್ಚರಿಸುವ ಜೊತೆಗೆ ವಿಘಟನೆಯ ಕಾಲಘಟ್ಟದಲ್ಲಿಯೂ ಎಲ್ಲರನ್ನೂ ಬೆಸೆಯುವ ಬಹುಮುಖ್ಯ ಮಾಧ್ಯಮವಾಗಿ ರಂಗಭೂಮಿ ಬೆಳೆದಿದೆ ಎಂದು ರಂಗ ಕಲಾವಿದೆ, ಸಾಹಿತಿ ಮಮತಾ ಅರಸಿಕೆರೆ ಹೇಳಿದರು. ಅವರು ಇಲ್ಲಿನ ಶಾರದಾ ವೇದಿಕೆಯಲ್ಲಿ ಸುರಭಿ ರಿ. ಬೈಂದೂರು ಹಾಗೂ ಯಸ್ಕೋರ್ಡ್ ಟ್ರಸ್ಟ್ ರಿ. ಆಶ್ರಯದಲ್ಲಿ ನಡೆಯುತ್ತಿರುವ ನಾಡೋಜ ಏಣಗಿ ಬಾಳಪ್ಪ ಸಂಸ್ಮರಣೆಯ ರಂಗಸುರಭಿ ೨೦೧೭ ನಾಟಕ ಸಪ್ತಾಹದ ಎರಡನೇ ದಿನ ಏಣಗಿ ಬಾಳಪ್ಪ ಅವರ ಭಾವಚಿತ್ರಕ್ಕೆ ಪುಪ್ಪ ನಮನ ಸಲ್ಲಿಸಿ ಬಳಿಕ ಮಾತನಾಡಿದರು. ಸಿನೆಮಾ, ಧಾರಾವಾಹಿ, ಸಾಮಾಜಿಕ ಜಾಲತಾಣಗಳು ಸೇರಿದಂತೆ ವಿವಿಧ ಬಗೆಯ ಮಾಧ್ಯಮಗಳಲ್ಲಿ ಭಿತ್ತರವಾಗುತ್ತಿರುವ ಅಂಶಗಳು ಸಮಾಜವನ್ನು ಕಲುಷಿತಗೊಳಿಸಿರುವ ಹೊತ್ತಿನಲ್ಲಿ ಕ್ಷೇತ್ರದ ವಿಚಾರಗಳನ್ನು ಒಳಗೊಂಡಿರುವ ರಂಗಭೂಮಿ ಪರಿಹಾರ ಆಗಬಲ್ಲದು. ದಾರಿ ತಪ್ಪುತ್ತಿರುವ ಯುವಕ ಸಮುದಾಯ ರಂಗಭೂಮಿಯಲ್ಲಿ ಹೆಚ್ಚೆಚ್ಚು ತೊಡಗಿಸಿಕೊಳ್ಳವ ಅಗತ್ಯವೂ ಇದೆ ಎಂದರು. ಈ ಸಂದರ್ಭ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯ ರಂಗಕರ್ಮಿ ಅರಸಿಕೆರೆಯ ಡಾ| ಹೆಚ್. ಆರ್.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಸಿದ್ಧಾಪುರ ಜಿಲ್ಲಾ ಪಂಚಾಯತ್ ಕ್ಷೇತ್ರದ ಸದಸ್ಯ ಹಾಲಾಡಿ ತಾರಾನಾಥ ಶೆಟ್ಟಿ (೫೬) ಅನಾರೋಗ್ಯದಿಂದ ಭಾನುವಾರ ರಾತ್ರಿ ನಿಧನರಾಗಿದ್ದಾರೆ. ಸಾಮಾಜಿಕ, ರಾಜಕೀಯ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ತಾರಣ್ಣ ಅಂತಲೇ ಜನಜನಿತರಾಗಿದ್ದರು. ಹಾಲಾಡಿ ಶ್ರೀ ಮರ್ಲಚಿಕ್ಕು ದೇವಸ್ಥಾನದ ಧರ್ಮದರ್ಶಿಯಾಗಿದ್ದರು, ಹಾಲಾಡಿ ಯಕ್ಷಗಾನ ಮೇಳದ ಸಂಚಾಲಕರಾಗಿದ್ದರು. ಕಳೆದ ಭಾರಿ ನಡೆದ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಸಿದ್ಧಾಪುರ ಕ್ಷೇತ್ರದಿಂದ ಗೆದ್ದು ಬಂದಿದ್ದರು. ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದು ಅವರು ಭಾನುವಾರ ರಾತ್ರಿ ನಿಧನರಾಗಿದ್ದಾರೆ. ಅವಿವಾಹಿತರಾಗಿದ್ದ ಅವರು ಕುಟುಂಬಿಕರು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಂಗಭೂಮಿ ಸಮಷ್ಠಿಯ ಕಲೆ. ಒಬ್ಬರಿಂದ ಅದು ಪರಿಪೂರ್ಣಗೊಳ್ಳಲು ಸಾಧ್ಯವಿಲ್ಲ. ಆಧುನಿಕ ಯುಗದಲ್ಲಿ ನಮ್ಮ ನಮ್ಮ ನಡುವೆ ಕಟ್ಟಿಕೊಂಡಿರುವ ಗೋಡೆಯನ್ನು ತೊಡೆದುಹಾಕಿ, ರಂಗ ಉತ್ಸವಗಳ ಮೂಲಕ ಎಲ್ಲರನ್ನೂ ಒಗ್ಗೂಡಿಸುವ ಮಹತ್ತರ ಕೆಲಸ ರಂಗಭೂಮಿಯಿಂದಾಗುತ್ತಿದೆ ಎಂದು ಬರಹಗಾರ್ತಿ, ರಂಗ ನಿರ್ದೇಶಕಿ ಅಭಿಲಾಷಾ ಹಂದೆ ಹೇಳಿದರು. ಅವರು ಇಲ್ಲಿನ ಶಾರದಾ ವೇದಿಕೆಯಲ್ಲಿ ಸುರಭಿ ರಿ. ಬೈಂದೂರು ಹಾಗೂ ಯಸ್ಕೋರ್ಡ್ ಟ್ರಸ್ಟ್ ರಿ. ಆಶ್ರಯದಲ್ಲಿ ನಡೆಯುತ್ತಿರುವ ನಾಡೋಜ ಏಣಗಿ ಬಾಳಪ್ಪ ಸಂಸ್ಮರಣೆಯ ರಂಗಸುರಭಿ ೨೦೧೭ ನಾಟಕ ಸಪ್ತಾಹದಲ್ಲಿ ಸನ್ಮಾನ ಸ್ವೀಕರಿಸಿ ಬಳಿಕ ಮಾತನಾಡಿ ಇತಿಹಾಸದಲ್ಲಿ ಎದುರಾದ ಬಿಕ್ಕಟ್ಟುಗಳಿಗೆ ನಾಟಕಗಳ ಮೂಲಕ ಸಂಚಲನ ಮೂಡಿಸಿ, ಜನರನ್ನು ಜಾಗೃತಿಗೊಳಿಸಿದ ಹೆಗ್ಗಳಿಕೆ ರಂಗಭೂಮಿಯದ್ದು. ಕಲೆ ಮತ್ತು ಸಾಹಿತ್ಯ ಮನುಷ್ಯನ ಬದುಕನ್ನು ಖುಷಿ ಹಾಗೂ ಲವಲವಿಕೆಯಿಂದ ಇರುವಂತೆ ಮಾಡುತ್ತದೆ ಎಂದರು. ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಡಾ. ಗಣೇಶ್ ಅಮೀನಗಡ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸುರಭಿ ರಿ. ಬೈಂದೂರು ಇದರ ಗೌರವಾಧ್ಯಕ್ಷ, ಹಿರಿಯ ಸಾಹಿತಿ ಯು.…

Read More