Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕಾಮರ್ಸ್ ಮ್ಯಾನೇಜ್ಮೆಂಟ್ ಮತ್ತು ಐಟಿ ಅಸೋಸಿಯೇಷನ್ ವತಿಯಿಂದ ಸೋಮವಾರ “ಕ್ಯಾಂಪಸ್ ಟು ಕಾರ್ಪೊರೇಟ್ – ಕೆರಿಯರ್ ರೆಡಿನೆಸ್”ಕಾರ್ಯಕ್ರಮ ಕಾಲೇಜಿನ ಎ.ವಿ. ಹಾಲ್‌ನಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ರಜತ್ ಬಂಗೇರ ಅವರು ವಿದ್ಯಾರ್ಥಿಗಳಿಗೆ ಉದ್ಯೋಗ ಕ್ಷೇತ್ರದ ಕೌಶಲ್ಯಗಳು, ಸಂದರ್ಶನ ಸಿದ್ಧತೆ ಹಾಗೂ ಕಾರ್ಪೊರೇಟ್ ಕ್ಷೇತ್ರಕ್ಕೆ ತಯಾರಾಗುವ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ಸಂಯೋಜಕರಾದ ಪ್ರೀತಿ ಹೆಗ್ಡೆ ಸ್ವಾಗತಿಸಿದರು. ಮೇಘಾ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಕಾಮರ್ಸ್ ಮ್ಯಾನೇಜ್ಮೆಂಟ್ ಹಾಗೂ ಐಟಿ ಅಸೋಸಿಯೇಷನ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಪ್ರತಿಭೆ ನಿಮ್ಮದು, ವೇದಿಕೆ ನಮ್ಮದು ವಿನೂತನ ಕಾರ್ಯಕ್ರಮ ಸರಣಿಯಡಿ ಸಂಸ್ಕೃತಿ, ಸಂಸ್ಕಾರ, ಸಂಪ್ರದಾಯ ಉಳಿಸಿ ಬೆಳೆಸುವಲ್ಲಿ ವಿಶೇಷ ಪ್ರಯತ್ನ ಸತತ 119ನೇ ತಿಂಗಳ ಕಾರ್ಯಕ್ರಮ ಇತ್ತೀಚೆಗೆ ಜರುಗಿತು. ಟಿ.ಎನ್.ಪ್ರಭು, ತಲ್ಲೂರು ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಪ್ರಾಂಶುಪಾಲ ಎಮ್. ರತ್ನಾಕರ್ ಪೈ, ಬ್ಯಾನರ್ ಕಲಾವಿದ ಕೆ.ಕೆ. ರಾಮನ್, ರಜನಿ ಎನ್. ಪ್ರಭು, ವಿಶ್ವನಾಥ್ ಶ್ಯಾನುಭಾಗ್, ಆಶಾಕಾರ್ಯಕರ್ತೆ ಜ್ಯೋತಿ ಪೂಜಾರಿ ಹಾಗೂ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಖ್ಯಾತ ಬ್ಯಾನರ್ ಕಲಾವಿದ ಕೆ.ಕೆ.ರಾಮನ್, ಕುಂದಾಪುರ ಮತ್ತು ಶಾಲಿನಿ, ಉಪ್ಪಿನಕುದ್ರು ಅವರನ್ನು ಅಕಾಡೆಮಿಯ ವತಿಯಿಂದ ಸಮ್ಮಾನಿಸಲಾಯಿತು. ತದನಂತರ ಯಕ್ಷೇಶ್ವರಿ ತಂಡ ಉಪ್ಪಿನಕುದ್ರು ಇವರಿಂದ ಕುಣಿತ ಭಜನೆ ಜರುಗಿತು. ರಾಜೇಂದ್ರ ಪೈ ಅವರು ನಿರೂಪಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬ್ರಹ್ಮಾವರ: ಇಂದಿನ ಸಮಾಜದಲ್ಲಿ ನಾವು ಸ್ವಾತಂತ್ರವಾಗಿ ಬದುಕಬೇಕೆಂದರೆ ಕಾನೂನು ಸುವ್ಯವಸ್ಥೆಗಳ ಕುರಿತು ಮಾಹಿತಿ ಎಲ್ಲರಿಗೂ ಅಗತ್ಯ ಎಂದು ಬ್ರಹ್ಮಾವರ ಪೋಲಿಸ್ ಸ್ಟೇಷನ್‌ನ ಸಬ್ ಇನ್ಸ್‌ಪಕ್ಟೆರ್‌ ಮುಕ್ತಾ ಬಾಯಿ ಹೇಳಿದರು. ಅವರು ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ನಡೆಯುತ್ತಿರುವ ಬ್ಯೂಟೀಪಾರ್ಲರ್ ಮತ್ತು ಕಂಪ್ಯೂಟರ್ ಡಿ.ಟಿ.ಪಿ. ಶಿಭಿರಾರ್ಥಿಗಳಿಗೆ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಸೈಬರ್ ಕ್ರೈಮ್‌ ಬಗ್ಗೆ ವಾಟ್ಸಪ್ ಗ್ರೂಪ್‌ಗಳಿಗೆ ಪರಿಚಯವಿಲ್ಲದವರಿಂದ ಗ್ರೂಪ್‌ಗೆ ಸೇರಿಸಿದರೆ ಗ್ರೂಪ್‌ನಿಂದ ಹೊರಬಂದು ಸುರಕ್ಷಿತವಾಗಿರಬೇಕು ಹಾಗೂ ಪೋಕ್ಸೋ ಕಾಯ್ದೆಯ ಬಗ್ಗೆ ತಿಳಿಸಿದರು. ಸ್ನಾಪ್ ಚಾಟ್‌ಗಳನ್ನು ತುಂಬಾ ಜಾಗರೂಕತೆಯಿಂದ ಬಳಸಿ ಇದರಲ್ಲಿ ತೊಂದರೆ ಆಗುವ ಸಾಧ್ಯತೆ ಜಾಸ್ತಿ ಇರುತ್ತದೆ. ಆತ್ಯಹತ್ಯೆಗೆ ಯುವ ಜನಾಂಗ ಆಲೋಚನೆ ಮಾಡದೇ ಸಹನೆಯಿಂದ ಯೋಚಿಸಿ ಬಾಳಬೇಕು. ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಇದೆ, ಜೀವನ ಇರುವುದು ಒಂದು ಸಾರಿ ಹಾಗಾಗಿ ಉತ್ತಮ ರೀತಿಯಲ್ಲಿ ಬದುಕನ್ನು ಜೀವಿಸಿ ಎಂದು ಹೇಳಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಇನ್ನೋರ್ವ ಸಂಪನ್ಮೂಲ ವ್ಯಕ್ತಿಯಾದಂತಹ ಬ್ರಹ್ಮಾವರ ಅಸಿಸ್ಟಂಟ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ತಾಯಿಯೇ ಮೊದಲ ಗುರು. ಮನೆಯೇ ಮೊದಲ ಪಾಠಶಾಲೆ. ಈ ಮಾತಿನಂತೆ ಇಂದು ತಾಯಂದಿರೇ ತಮ್ಮ ಮಕ್ಕಳನ್ನು ತಿದ್ದಿ ತೀಡಬೇಕು. ಇಳಿ ವಯಸ್ಸಿನಲ್ಲಿಯೇ ನಾವು ಮಕ್ಕಳಿಗೆ ಸಂಸ್ಕಾರ, ಸಂಸ್ಕೃತಿ ಮತ್ತು ನಮ್ಮ ಪರಂಪರೆಯನ್ನು ಕಲಿಸಿದಾಗ ಮಾತ್ರ ಸಮಾಜದಲ್ಲಿ ದೌರ್ಜನ್ಯವೇ ಕಾಣದಂತಾಗುತ್ತದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಹೇಳಿದರು. ಜಿಲ್ಲಾ ಚೈತನ್ಯ ಸ್ತ್ರೀ ಶಕ್ತಿ ಒಕ್ಕೂಟ ಉಡುಪಿ, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಉಡುಪಿ, ಉಡುಪಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತರ ಮತ್ತು ಸಹಾಯಕಿಯರ ಸಂಘ ಉಡುಪಿ ಹಾಗೂ ವಿವಿಧ ಸಂಘಟನೆಯ ಸಹಯೋಗದೊಂದಿಗೆ ತೆಕ್ಕಟ್ಟೆ ದುರ್ಗಾಪರಮೇಶ್ವರಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಜರುಗಿದ ಮಹಿಳಾ ಸ್ಪಂದನಾ ಸಮಾವೇಶ ನಿಮ್ಮ ದೂರು ನಮ್ಮ ಪರಿಹಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಉಡುಪಿ ಜಿಲ್ಲಾ ಚೈತನ್ಯ ಸ್ತ್ರೀ ಶಕ್ತಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಪ್ರೇಮಾ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಗೀತಾಂಜಲಿ ಸುವರ್ಣ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗ ಗಂಗೊಳ್ಳಿ ಇದರ ವತಿಯಿಂದ ದಾನಿಗಳ ನೆರವಿನಿಂದ ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡದ ಮಕ್ಕಳಿಗೆ ಉಚಿತ ನೋಟ್ಸ್ ಬುಕ್ ಹಾಗೂ ಲೇಖನ ಸಾಮಾಗ್ರಿ ವಿತರಣಾ ಕಾರ್ಯಕ್ರಮ ಮೇಲ್‌ಗಂಗೊಳ್ಳಿಯ ಡಾ. ಅಂಬೇಡ್ಕರ್ ಸಭಾಭವನದಲ್ಲಿ ಭಾನುವಾರ ಜರಗಿತು. ಕೆನರಾ ಬ್ಯಾಂಕಿನ ನಿವೃತ್ತ ಸಿಬ್ಬಂದಿ ಪ್ರಮೋದ ಗಾಣಿಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ನೋಟ್ಸ್ ಬುಕ್ ಹಾಗೂ ಲೇಖನ ಸಾಮಾಗ್ರಿಗಳನ್ನು ವಿತರಿಸಿ ಶುಭ ಹಾರೈಸಿದರು. ಉಡುಪಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್ ಅವರು ಶಿಕ್ಷಣ ಮಾಹಿತಿ ನೀಡಿದರು. ಗಂಗೊಳ್ಳಿ ಜೇಸಿಐ ಕಾರ್ಯದರ್ಶಿ ನಾಗರಾಜ ಖಾರ್ವಿ, ಮಹಮ್ಮದ್ ಹುಸೇನ್, ಸರಸ್ವತಿ, ಜಿ.ಈಶ್ವರ, ಕಲಾಶ್ರೀ ಶಿಕ್ಷಣ ಬಳಗದ ಅಧ್ಯಕ್ಷೆ ಸುಮಿತ್ರಾ ಜಿ., ನವೀನ್ ಜಿ., ವಿಜೇತ ಕೆ., ಸುನೀತಾ, ಹೇಮಾ, ಸುಕನ್ಯಾ, ಮಂಜುನಾಥ ಜಿ., ನವೀನ್ ಜಿ. ಉಪಸ್ಥಿತರಿದ್ದರು. ಸುಮಿತ್ರಾ ಸ್ವಾಗತಿಸಿದರು. ವಿಜೇತ ಕಾರ್ಯಕ್ರಮ ನಿರ್ವಹಿಸಿದರು. ಸರಸ್ವತಿ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಸರಕಾರಿ ಪದವಿ ಪೂರ್ವ ಕಾಲೇಜಿನ 1990ರ ಎಸ್.ಎಸ್.ಎಲ್.ಸಿ ಸಮಾನ ಮನಸ್ಕ ವಿದ್ಯಾರ್ಥಿಗಳ SSLC-1990LM ಫ್ಯಾಮಿಲಿ ವಾಟ್ಸಪ್ಪ್ ಬಳಗದ 6ನೇ ಕುಟುಂಬ ಮಿಲನ ಕಾರ್ಯಕ್ರಮವು ಬಳಗದ ಸದಸ್ಯರಾದ ಸಿದ್ದಾಪುರ ಮೇಲ್ ಕಡ್ರಿ ವಿದ್ವಾನ್ ಗಣೇಶ್ ಅಡಿಗರ ಮನೆಯಲ್ಲಿ ನೆರವೇರಿತು. ಸುಮಾರು 50ಕ್ಕೂ ಅಧಿಕ ಕುಟುಂಬ ಸದಸ್ಯರು ಭಾಗವಹಿಸಿದ ಈ ಕಾರ್ಯಕ್ರಮದಲ್ಲಿ ಮಕ್ಕಳಿಗೆ, ಮಹಿಳೆಯರಿಗೆ ಮತ್ತು ಪುರುಷರಿಗೆ ಬೇರೆ ಬೇರೆ ತಮಾಷೆಯ ಪಂದ್ಯಗಳನ್ನು ನಡೆಸಿ ಬಹುಮಾನಗಳನ್ನು ನೀಡಲಾಯಿತು. 2025-26ನೇ ಸಾಲಿನ ದ್ವಿತೀಯ ಪಿ.ಯು.ಸಿ ವಾಣಿಜ್ಯ ವಿಭಾಗದಲ್ಲಿ 92% ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನಿಯಾದ ಹೊಸಂಗಡಿ ಕಾಲೇಜಿನ ಸುವಿಧಾ ಗಣಪತಿ ಶೆಟ್ಟಿ ಅವರಿಗೆ ನಗದು ಪುರಸ್ಕಾರದೊಂದಿಗೆ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿವಿಧ ಶಾಲೆಗಳಲ್ಲಿ ಕಲಿತು   ಉತ್ತಿರ್ಣರಾದ ಬಳಗದ ಸದಸ್ಯರ ಮಕ್ಕಳಾದ ಪ್ರಣಮ್ಯ ಗುರುಪ್ರಸಾದ್ ಉಪ್ಪೂರ್, ಶ್ರೇಯಾಂಕಾ ಶಂಕರ್ ಚಿಟ್ಟೆ, ಅಂಶು ಯೋಗೇಂದ್ರ ನಾಯ್ಕ್, ಸ್ಕಂದ ಸುಭಾಸ್ ರಾವ್ ಅವರನ್ನು ಅಭಿನಂದಿಸಿ ಸನ್ಮಾನಿಸಿ ಮುಂದಿನ ವಿದ್ಯಾಭ್ಯಾಸಕ್ಕೆ ಶುಭ ಹಾರೈಸಲಾಯಿತು.  ತಸ್ಮಯಿ ಎನ್. ತಲ್ಲಂಜೆ ಮತ್ತು ತನ್ಮಯಿ ಎನ್. ತಲ್ಲಂಜೆ ಅವರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ನಮ್ಮ ಮೂಡುಬಿದಿರೆ, ನೇತಾಜಿ ಬ್ರಿಗೇಡ್, ಜೆಸಿಐ, ಮೂಡುಬಿದಿರೆ ಬಂಟರ ಮಹಿಳಾ ಸಂಘದ ಸದಸ್ಯರು ಭಾನುವಾರ ವಿದ್ಯಾಗಿರಿ-ಹನ್ಡೇಲು ಹಾಗೂ ವಿದ್ಯಾಗಿರಿ-ಪುತ್ತಿಗೆ ಪರಿಸರದ 5.5 ಕಿಮೀ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ ಸ್ವಚ್ಛ ಸಂಕಲ್ಪ ಕಾರ್ಯಕ್ರಮವನ್ನು ಹಮ್ಮಿಕೊಂಡರು. ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್‌ನ ಅಧ್ಯಕ್ಷ ಅಶೋಕ ಅಡ್ಯಂತಾಯ ಕಾರ್ಯಕ್ರಮಕ್ಕೆ ಶುಭ ಹಾರೈಸಿ ಸ್ವಚ್ಛತೆ ಎನ್ನುವುದು ಆರೋಗ್ಯಕರ ಸಮಾಜದ ಅಡಿಪಾಯ. ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯೂ ಹೌದು. ಇದೇ ಉದ್ದೇಶವನ್ನು ಮನಗಂಡು ಮೂಡುಬಿದಿರೆಯಲ್ಲಿ ವಿವಿಧ ಸಂಘ–ಸಂಸ್ಥೆಗಳು ಕೈಜೋಡಿಸಿ “ಸ್ವಚ್ಛ ಸಂಕಲ್ಪ” ಎಂಬ ಮಹತ್ವದ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಂಡಿವೆ ಎಂದರು. ಕಾರ್ಯಕ್ರಮದಲ್ಲಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ, ಆಳ್ವಾಸ್‌ನಿಂದ ಕಳೆದ 12 ವರ್ಷಗಳಿಂದ ಅಳಿವೆ ಪ್ರದೇಶದಲ್ಲಿ ನಿರಂತರವಾಗಿ ಸ್ವಚ್ಛತಾ ಅಭಿಯಾನ ನಡೆಸುತ್ತ ಬರಲಾಗಿದೆ. ನಂದಿನಿ ಹಾಗೂ ಫಾಲ್ಗುಣಿ ನದಿಗಳು ಈ ಭಾಗದಲ್ಲಿ ಹರಿಯುತ್ತಿದ್ದು, ಅವುಗಳಿಗೆ ಸಂಪರ್ಕ ಹೊಂದಿರುವ ಚರಂಡಿಗಳ ಮೂಲಕ ತ್ಯಾಜ್ಯಗಳು ನದಿಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: 2025-26ನೇ ಸಾಲಿನ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ನಡೆದಿದ ದ್ವಿತೀಯ ಪಿಯುಸಿ ಪರೀಕ್ಷೆ -2ರ ಫಲಿತಾಂಶ ಪ್ರಕಟಗೊಂಡಿದ್ದು ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿಗಳು ಸಾಧನೆ ಮೆರೆದಿದ್ದಾರೆ. ವಿದ್ಯಾರ್ಥಿಗಳಾದ ಅಕ್ಷತಾ ವೀರಣ್ಣ 597ಅಂಕ ಗಳಿಸಿ 3ನೇ ರ‍್ಯಾಂಕ್‌, ದೀಕ್ಷಾ 596 ಅಂಕದೊಂದಿಗೆ 4ನೇ ರ‍್ಯಾಂಕ್‌, ತನ್ವಿತಾ 595 5ನೇ ರ‍್ಯಾಂಕ್‌, ಗಗನ್ ಜಿ.594 6ನೇ ರ‍್ಯಾಂಕ್‌, ಸ್ಮೃತಿಕಾ 593ಅಂಕದೊಂದಿಗೆ 7ನೇ ರ‍್ಯಾಂಕ್‌, ಶ್ರೇಯಸ್ ಪಿ. ಗಾಣಿಗ 591 9ನೇ ರ‍್ಯಾಂಕ್‌, ಸಾಕ್ಷಿ ಎಸ್. ಪೂಜಾರಿ 591ಅಂಕದೊಂದಿಗೆ 9ನೇ ರ‍್ಯಾಂಕ್‌, ಸನ್ಮಿತಾ 590 ಅಂಕ ಗಳಿಸಿ 10ನೇ ರ‍್ಯಾಂಕ್‌, ಶ್ರದ್ಧಾ ಎಸ್.ಎಮ್. 590ಅಂಕ ಗಳಿಸಿ 10ನೇ ರ‍್ಯಾಂಕ್‌, ಸ್ಪಂದನಾ ಪಿ.ಎಸ್‌. 590 ಅಂಕದೊಂದಿಗೆ 10ನೇ ರ‍್ಯಾಂಕ್‌, ಅನುಷಾ ಪೂಜಾರಿ 590 ಅಂಕಗಳೊಂದಿಗೆ 10ನೇ ರ‍್ಯಾಂಕ್‌ ಪಡೆದಿರುತ್ತಾರೆ . ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಸರ್ಕಾರಿ, ಖಾಸಗಿ ಸೇರಿದಂತೆ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರಿಗೆ ಕೆಲಸದ ಸ್ಥಳಗಳಲ್ಲಿ ಸುರಕ್ಷಿತ ವಾತಾವರಣ ಕಲ್ಪಿಸುವುದರೊಂದಿಗೆ, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಶೂನ್ಯವಾಗಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮೀ ಚೌಧರಿ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಕರ್ನಾಟಕ ರಾಜ್ಯ ಮಹಿಳಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರಕ್ಷಕ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ ಹಾಗೂ ಆಂತರಿಕ ದೂರು ನಿವಾರಣಾ ಸಮಿತಿ ಸದಸ್ಯರಿಗೆ ನಡೆದ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ – 2013 (POSH ACT) ರ ಕುರಿತ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಗೌರವಯುತ ವಾತಾವರಣ ನಿರ್ಮಾಣವಾಗಬೇಕು. ಮಹಿಳೆಯರು ದೈಹಿಕವಾಗಿ ಹಾಗೂ ಮಾನಸಿಕವಾಗಿ ಭಯಮುಕ್ತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇತ್ತೀಚಿಗೆ ದಳಿ ಎಂಬಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಹಿಳೆಯೋರ್ವರ ಮೇಲಿನ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಹೇಮಂತ್ ಎಂಬಾತನನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ಮೇ.17ರಂದು ನಡೆದ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ಮಹಿಳಾ ಯಾತ್ರಾರ್ಥಿಯವರು ಮೃತಪಟ್ಟಿದ್ದರು. ಘಟನಾ ಸ್ಥಳದಲ್ಲಿ ಮೃತಪಟ್ಟ ಮಹಿಳೆಯೋರ್ವರ ಮೈಮೇಲಿನ ಚಿನ್ನಾಭರಣಗಳನ್ನು ಯಾರೋ ಕಳ್ಳರು ಕಳ್ಳತನ ಮಾಡಿದ ಬಗ್ಗೆ ಕೆಲ ದಿನಗಳ ಬಳಿಕ ಶ್ರೀಕುಮಾರ ಎಂಬುವವರು ದೂರು ನೀಡಿದ್ದರು. ಅದರಂತೆ ಕಾರ್ಯಪ್ರವೃತ್ತರಾದ ಕೊಲ್ಲೂರು ಪೊಲೀಸ್ ಠಾಣಾ ಉಪನಿರೀಕ್ಷಕರಾದ ವಿನಯ ಎಂ. ಕೊರ್ಲಹಳ್ಳಿ, ನಾಗೇಂದ್ರ ಹೆಚ್‌ಸಿ, ಲಕ್ಷ್ಮಣ ಗಾಣಿಗ ಹೆಚ್‌ಸಿ, ರಾಘವೇಂದ್ರ ಹೆಚ್‌ಸಿ, ನಾಗರಾಜ ಪಿ.ಸಿ ರವರುಗಳು ಸಿಸಿಟಿವಿ, ಘಟನಾ ಸ್ಥಳದಲ್ಲಿ ಸಾರ್ವಜನಿಕರು ತೆಗೆದ ವಿವಿಧ ಫೊಟೋಗಳು ಮತ್ತು ತಾಂತ್ರಿಕ ಸಹಾಯದಿಂದ ಆರೋಪಿ ಕೊಲ್ಲೂರು ಕಲ್ಯಾಣಿಗುಡ್ಡೆಯ ಹೇಮಂತ s/o ನಾರಾಯಣ ಶೆಟ್ಟಿ ಎಂಬಾತನನ್ನು ಪ್ರಕರಣ ದಾಖಲಾದ 24 ಗಂಟೆ ಒಳಗಡೆ ಪತ್ತೆಹಚ್ಚಿ ಬಂಧಿಸಿದ್ದಾರೆ. ಆರೋಪಿಯು ಕಳವು ಮಾಡಿದ್ಸ 1) 3.910 ಗ್ರಾಂ…

Read More