ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕದಲ್ಲಿ ಬಿಜೆಪಿ ಸರಕಾರ ಜಾರಿಗೆ ತಂದಿದ್ದ ಮಹಿಳಾ ಹಿತಾಸಕ್ತಿ ಯೋಜನೆಗಳು ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ನೆನೆಗುದಿಗೆ ಸರಿದಿದ್ದು, ಅದನ್ನು ಮತ್ತೆ ಚಾಲನೆಗೆ ತರಲು ಬಿಜೆಪಿ ಸರಕಾರ ಬಿಜೆಪಿ ಸರಕಾರದಿಂದ ಮಾತ್ರ ಸಾಧ್ಯವಿದೆ. ಈ ನಿಟ್ಟಿನಲ್ಲಿ ಮಹಿಳೆಯರು ರಾಜಕೀಯದಲ್ಲಿ ಕ್ರಿಯಾಶೀಲತೆಯಿಂದ ಕೆಲಸ ಮಾಡುವ ಜವಾಬ್ದಾರಿ ಇದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಕುಂದಾಪುರ ಕ್ಷೇತ್ರ ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳ ಪದಗ್ರಹಣವನ್ನು ಕುಂದಾಪುರ ಬಿಜೆಪಿ ಕಚೇರಿಯಲ್ಲಿ ನೆರವೇರಿಸಿ ಮಾತನಾಡಿ, ಬಿಜೆಪಿ ಸರಕಾರ ರಾಜ್ಯದಲ್ಲಿ ಸ್ತ್ರೀ ಬಲವರ್ಧನೆಗಾಗಿ ಭಾಗ್ಯಲಕ್ಷ್ಮೀ ಸಂಧ್ಯಾ ಸುರಕ್ಷಾ ಮುಂತಾದ ಯೋಜನೆಗಳನ್ನು ಜಾರಿಗೆ ತಂದಿದ್ದು, ಕಾಂಗ್ರೆಸ್ ಸರಕಾರ ಯೋಜನೆ ಅರ್ಧಕ್ಕೆ ನಿಲ್ಲಿಸಿದೆ. ಯೋಜನೆಗಳ ಪುನರಾರಂಭಿಸಲು ಮತ್ತೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂದರು. ಕೋಟೇಶ್ವರ ಗ್ರಾಪಂ ಅಧ್ಯಕ್ಷೆ ಜಾನಕಿ ಬಿಲ್ಲವ ಬಿಜೆಪಿ ಕುಂದಾಪುರ ಕ್ಷೇತ್ರದ ಮಹಿಳಾ ಮೋರ್ಚಾದ ಅಧ್ಯಕ್ಷರಾಗಿ ನಾಮನಿರ್ದೇಶನಗೊಂಡಿದ್ದು, ಸಂಸದೆ ಶೋಭಾ ಕರಂದ್ಲಾಜೆ ಪದಗ್ರಹಣ ನೆರೆವೇರಿಸಿದರು. ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ನಯನಾ…
Author: ನ್ಯೂಸ್ ಬ್ಯೂರೋ
ಶ್ರೇಯಾಂಕ್ ಎಸ್. ರಾನಡೆ | ಕುಂದಾಪ್ರ ಡಾಟ್ ಕಾಂ ಲೇಖನ ನಿಮಗೆ ಮಂಗಳೂರು ನರಕವಾದರೆ ನೀವು ಇಸ್ಲಾಮಾಬಾದ್ನಲ್ಲಿಯೇ ಸುಖವಾಗಿರಿ. ಪಾಕಿಸ್ತಾನಕ್ಕೆ ”ಅದೃಷ್ಟದ ನಕ್ಷತ್ರ”ವಾದರೆ ಸಂತೋಷ. ಆದರೆ ಭಾರತದ ಪಾಲಿಗೆ ದುರಾದೃಷ್ಟವಾಗದಿರಿ. ಎರಡು ದೇಶಗಳ ನಡುವೆ ಸರಕಾರಗಳ ಮಟ್ಟದಲ್ಲಿ ನೇರವಾದ ಮಾತುಕತೆ, ವ್ಯವಹಾರ ಫಲಿಸದೇ ಇದ್ದಾಗ ಎರಡೂ ದೇಶಗಳ ಸರಕಾರೇತರ ವ್ಯಕ್ತಿಗಳು, ಸಂಘ ಸಂಸ್ಥೆಗಳು ಪರಸ್ಪರರ ನಡುವಿನ ಸಂಬಂಧವನ್ನು ಉತ್ತಮಗೊಳಿಸಿ, ಆ ಮೂಲಕ ದೇಶದೊಳಗೆ ಗುಣಾತ್ಮಕ ವಾತಾವರಣವನ್ನು ನಿರ್ಮಿಸಿ ಕುಸಿದ ಮಾತುಕತೆ-ಸಂಬಂಧವನ್ನು ಪುನಚ್ಛೇತನಗೊಳಿಸಲು ಸರಕಾರಗಳ ಮೇಲೆ ಒತ್ತಡ ಹೇರುವ ಮಾರ್ಗವೇ ಟ್ರಾಕ್ 2, ಟ್ರಾಕ್ 3 ರಾಜತಾಂತ್ರಿಕತೆ. ಎರಡು ದೇಶಗಳ ಪ್ರಜೆಗಳ ನಡುವಿನ, ಸರ್ಕಾರೇತರ ಗುಂಪುಗಳು ಸಮಾನ ಸಂಗತಿಗಳ ಕುರಿತು ಪರಸ್ಪರ ಸಂಬಂಧವನ್ನು ಉತ್ತಮಗೊಳಿಸಲು ನಡೆಸುವ ಇಂತಹ ಮಾರ್ಗಗಳು ಒತ್ತಡ ತಂತ್ರವಾಗಿ, ಕೆಲವೊಮ್ಮೆ ಸ್ವಹಿತಕ್ಕಾಗಿ ಬಳಕೆಯಾಗುವ ಅಪಾಯವಿದೆಯಾದರೂ ಇಂತಹ ಸಂಪರ್ಕ ಮಾರ್ಗಗಳು ದೇಶ,ದೇಶಗಳ ನಡುವಿನ ಬಾಂಧವ್ಯ ವೃದ್ಧಿಸುವಲ್ಲಿ ಮಹತ್ವದ ಪಾತ್ರವಹಿಸುತ್ತವೆ. ಯಾರೂ ಕೇಳದಿದ್ದರೂ ಸ್ವಯಂಘೋಷಿತವಾಗಿ ಎಡಬಿಡಂಗಿತನ ಪ್ರದರ್ಶಿಸುವುದು ಶುದ್ಧ ಅಧಿಕಪ್ರಸಂಗಿತನ. ಇಂತಹ ಪೆದ್ದು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಮ್ಮ ಕುಟುಂಬಕ್ಕಿಂತ ಸಮಾಜದ ಹಿತವನ್ನೇ ಅನುಗಾಲವೂ ಬಯಸಿ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೇ ಜಿಲ್ಲೆಯ ಜನತೆಯ ಆಗು-ಹೋಗುಗಳಿಗೆ ಸ್ಪಂದಿಸುತ್ತಾ ಅವರಿಗೆ ಸರಿಯಾದ ರೀತಿ ಮಾರ್ಗದರ್ಶನ ನೀಡುತ್ತಾ ಕೇವಲ ಅಲ್ಪಕಾಲ ಬಾಳಿದ ಸಂಜೀವರಾಯರು ಒರ್ವ ವ್ಯಕ್ತಿಯಾಗಿರದೇ ತಮ್ಮ ವ್ಯಕ್ತಿತ್ವದ ಮೂಲಕ ಒಂದು ಅದ್ಭುತ ಶಕ್ತಿಯಾಗಿದ್ದರು ಎಂದು ಮಾಜಿ ಶಾಸಕ ಕೆ. ಅಪ್ಪಣ್ಣ ಹೆಗ್ಡೆ ಹೇಳಿದರು. ಖಂಬದಕೋಣೆ ಅಭಿವೃದ್ಧಿ ಹರಿಕಾರ ಆರ್.ಕೆ.ಸಂಜೀವ ರಾವ್ ಅವರ 100ನೇ ಜನ್ಮದಿನ ಪ್ರಯುಕ್ತ ಜನ್ಮಶತಾಬ್ದಿ ಆಚರಣಾ ಸಮಿತಿ, ಗ್ರಾಪಂ ಖಂಬದಕೋಣೆ, ಸಂಜೀವ ರಾವ್ ಸ್ಮಾರಕ ದತ್ತಿನಿಧಿ, ಸಹಿಪ್ರಾ ಶಾಲೆ ಖಂಬದಕೋಣೆ ಇವರ ಜಂಟಿ ಆಶ್ರಯದಲ್ಲಿ ಆರ್ಕೆಎಸ್ ಜನ್ಮಶತಾಬ್ದಿಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ರಾಯರಿಗೆ ನುಡಿನಮನ ಸಲ್ಲಿಸಿ ಮಾತನಾಡಿದರು. ಈ ಭಾಗದ ಕೃಷಿ, ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಮುಂಚೂಣಿಯಾಗಿ ನಿಂತು ಅಭಿವೃದ್ಧಿಗೊಳಿಸಿದವರು. ರಾಜಕಿಯೇತರವಾಗಿ ಜನಸೇವೆಗೆ ಇತರರನ್ನು ಉತ್ತೇಜಿಸುತ್ತದ್ದ ಆರ್ಕೆಎಸ್, ಗ್ರಾಪಂ ಅಧ್ಯಕ್ಷ ತಾಪಂ ಸದಸ್ಯರಾಗಿಯೂ ಜನ ಗುರುತಿಸುವಂತಹ ಉತ್ತಮ ಕೆಲಸ ಮಾಡಿದವರು ಎಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರಜಾಪ್ರಭುತ್ವ ಬೇರೆ ಚರ್ಚೆಯಲ್ಲಿದ್ದು, ಆಶಯಗಳ ಪರಿವರ್ತನೆ ಆಗಬೇಕಿದೆ. ಮರಕ್ಕೆ ಬೇರು ಹೇಗೆ ಮುಖ್ಯವೂ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರೇ ಪ್ರಜಾಪ್ರಭುತ್ವದ ಬೇರುಗಳು ಎಂದು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಬಣ್ಣಿಸಿದ್ದಾರೆ. ಕಲಾ ಕ್ಷೇತ್ರ ಕುಂದಾಪುರ ಆಶ್ರಯದಲ್ಲಿ ಕುಂದಾಪುರ ಪದವಿಪೂರ್ವ ಕಾಲೇಜಿನ ಶ್ರೀ ಲಕ್ಷ್ಮೀನರಸಿಂಹ ಕಲಾ ಮಂದಿರದಲ್ಲಿ ನಡೆದ ವಿಚಾರ ಸಂಕಿರಣ, ಸಂವಾದ ಹಾಗೂ ಚರ್ಚಾಗೋಷ್ಠಿ ಉದ್ಘಾಟಿಸಿ ಮಾತನಾಡಿ ಶಾಸಕಾಂಗ ಸಭೆಯಲ್ಲಿ ಎಲ್ಲಾ ವಿಷಯಗಳ ಮೇಲೆ ಚರ್ಚೆ ನಡೆದು, ಚಿಂಥನ, ಮಂಥನ ಮೂಲಕ ಮರ್ಧಿಸಿದಾಗ ಮಾತ್ರ ಒಳ್ಳೆಯ ವಿಷಯ ಹೊರ ಬರಲು ಸಾಧ್ಯ ಎಂದು ಹೇಳಿದರು. ಮಾಜಿ ವಿಧಾನ ಪರಿಷತ್ ಸಭಾಪತಿ ಸುದರ್ಶನ್ ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷ ವಿಷಯವಾಗಿ ಮಾತನಾಡಿ ಕರಾವಳಿ ಜನ ಎಲ್ಲರಿಗೂ ಸ್ಪೂರ್ತಿಯಾಗಿದ್ದು, ಬ್ಯಾಂಕಿಂಗ್ ಕ್ಷೇತ್ರ ಮೂಲಕ ಗಮನ ಸೆಳೆದಿದೆ. ಸಾಹಿತ್ಯ, ಧಾರ್ಮಿಕ ಹಾಗೂ ಯಕ್ಷಗಾನ ಮೂಲಕ ಎಲ್ಲಾ ವಿಭಾಗದಲ್ಲಿ ಗಮನ ಸೆಳೆದು ಸಾಕಷ್ಟು ಬೆಳೆಯಲು ಅಕಾಶವಿದ್ದರೂ, ಕೋಮು ಸಂಘರ್ಷ, ಭಿನ್ನಾಭಿಪ್ರಾಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಯುನೈಟೆಡ್ ಕಿಂಗ್ಡಂನ ಭಾರತೀಯ ದೂತಾವಾಸವು ಲಂಡನ್ನ ವಿಶಾಲ ಜಿಮ್ಖಾನಾ ಬಯಲಿನಲ್ಲಿ ಆಯೋಜಿಸಿದ್ದ ಭಾರತದ 70ನೆಯ ಸ್ವಾತಂತ್ರ್ಯೋತ್ಸವದಲ್ಲಿ ಕುಂದಾಪುರದ ಇಬ್ಬರು ಅನಿವಾಸಿ ಕನ್ನಡಿಗರು ಪ್ರದರ್ಶಿಸಿದ ಯಕ್ಷಗಾನದ ತುಣುಕು ನೆರೆದಿದ್ದ 10 ಸಾವಿರ ಭಾರತೀಯರ ಮೆಚ್ಚುಗೆ ಗಳಿಸಿತು. ಅವರಿಗೆ ನೀಡಲಾಗಿದ್ದ ಹದಿನೈದು ನಿಮಿಷಗಳ ಅವಕಾಶದಲ್ಲಿ ಕಂಸವಧೆಯ ನೃತ್ಯ ರೂಪಕವನ್ನು ಅವರು ಪ್ರಸ್ತುತಪಡಿಸಿದ್ದರು. ಇದರಲ್ಲಿ ಯು.ಕೆಯ ಡಂಕ್ಯಾಸ್ಟರ್ನಲ್ಲಿ ವೈದ್ಯ ವೃತ್ತಿ ನಡೆಸುತ್ತಿರುವ ಕುಂದಾಪುರದ ಡಾ. ಗುರುಪ್ರಸಾದ ಪಟ್ವಾಲ್ ಕಂಸನ ಪಾತ್ರ ನಿರ್ವಹಿಸಿದರೆ, ಬ್ರಿಸ್ಟಲ್ನ ಏರ್ಬಸ್ ವಿಮಾನ ಕಂಪನಿಯಲ್ಲಿ ಏರೋಸ್ಪೇಸ್ ಇಂಜಿನಿಯರ್ ಆಗಿ ದುಡಿಯುತ್ತಿರುವ ಯೋಗೀಂದ್ರ ಮರವಂತೆ ಕೃಷ್ಣನ ಪಾತ್ರ ಮಾಡಿದ್ದರು. ಎರಡೂ ಪಾತ್ರಗಳ ಪ್ರಸಾಧನದ ವರ್ಣವಿನ್ಯಾಸ, ಲಯಬದ್ಧ ನೃತ್ಯ, ಸನ್ನಿವೇಶವನ್ನು ಬಿಂಬಿಸುವಂತಿದ್ದ ಭಾವಾಭಿನಯ ವಿವಿಧೆಡೆಯ ಭಾರತೀಯ ಮೂಲದ ಪ್ರೇಕ್ಷಕರನ್ನು ಮುದಗೊಳಿಸಿದುವು. ಪ್ರದರ್ಶನ ಮುಗಿಯುತ್ತಿದ್ದಂತೆ ಉಭಯ ಹವ್ಯಾಸಿ ಕಲಾವಿದರು ಪ್ರೇಕ್ಷರ ಮತ್ತು ಮಾಧ್ಯಮದ ಆಕರ್ಷಣೆಯ ಕೇಂದ್ರವಾದರು. ಹಲವರು ಅವರ ಜತೆ ನಿಂತು ಸೆಲ್ಫೀ ತೆಗೆದುಕೊಂಡರೆ, ಮಾಧ್ಯಮದವರು ಅವರನ್ನು ಸಂದರ್ಶಿಸಿದರು. ಕ್ರಮವಾಗಿ ಕೋಟದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾರತಕ್ಕೆ ಅವಿಚ್ಛಿನ್ನವಾದ ಸಾಂಸ್ಕೃತಿಕ ಪರಂಪರೆಯಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿರುವ ಜೀವನ ಶೈಲಿ, ಕೊಳ್ಳುಬಾಕ ಸಂಸ್ಕೃತಿ, ಕೈಗಾರೀಕರಣ, ಪರಿಸರ ಮಾಲಿನ್ಯಕ್ಕೆ ಮುಖ್ಯ ಕಾರಣವಾಗುತ್ತಿದೆ ಎಂದು ಕುಂದಾಪುರ ಪುರಸಭೆಯ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಹೇಳಿದರು. ಇದೇ ಸಂದರ್ಭದಲ್ಲಿ ಪ್ಲಾಸ್ಟಿಕ್ ನಿರ್ಮೂಲನೆ, ತ್ಯಾಜ್ಯ ನಿರ್ವಹಣೆ, ಸ್ವಚ್ಛ ಭಾರತ ಯೋಜನೆ, ಪೌರ ಕಾರ್ಮಿಕರ ಸಮಸ್ಯೆ ಮತ್ತು ಸವಾಲುಗಳು, ದೃಶ್ಯ ಮಾಲಿನ್ಯ ಈ ವಿಷಯದ ಕುರಿತು ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು. ತ್ಯಾಜ್ಯ ವಿಲೇವಾರಿ ಮಾಡಲು ನಾಗರಿಕರ ಸಹಕಾರ ಅನಿವಾರ್ಯ ಮತ್ತು ಸ್ವಚ್ಛ ಕುಂದಾಪುರಕ್ಕೆ ಯುವ ಜನತೆಯ ಪಾತ್ರ ಬಹುಮುಖ್ಯ ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಅಧ್ಯಕ್ಷತೆ ವಹಿಸಿದ್ದರು. ಎನವೈರ್ನಮೆಂಟ್ ಎಂಜಿನಿಯರ್ ಮದನ್ ನಾಯ್ಡು, ಪ್ರಭಾರ ಪ್ರಾಂಶುಪಾಲ ರಾಜೇಶ್ ಶೆಟ್ಟಿ ಉಪಸ್ಥಿತರಿದ್ದರು. ಎನ್.ಎಸ್.ಎಸ್. ಯೋಜನಾಧಿಕಾ ರಕ್ಷಿತ್ ರಾವ್ ಗುಜ್ಜಾಡಿ ಸ್ವಾಗತಿಸಿದರು, ಸಹ ಯೋಜನಾಧಿಕಾರಿ ಕು. ಪ್ರೀತಿ ಹೆಗ್ಡೆ ವಂದಿಸಿದರು. ವಿದ್ಯಾರ್ಥಿನಿ ಪುಷ್ಪಲತಾ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಹಳ್ಳಿ ಪ್ರದೇಶಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಜಾಲದ ಬಗ್ಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿವಿಧ ಮಹಿಳಾ ಸಂಘಟನೆಯ ಸದಸ್ಯೆಯರು ತಾಪಂ ಸದಸ್ಯೆ ಗ್ರೀಷ್ಮಾ ಭಿಡೆ ನೇತೃತ್ವದಲ್ಲಿ ಶುಕ್ರವಾರ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರನ್ನು ಕೊಲ್ಲೂರು ದೇವಳದಲ್ಲಿ ಭೇಟಿಮಾಡಿ ಮನವಿ ಸಲ್ಲಿಸಿದರು. ಜಡ್ಕಲ್-ಮುದೂರು ಗ್ರಾಪಂ ವ್ಯಾಪ್ತಿಯಲ್ಲಿ ಯಾವುದೇ ಪರವಾನಿಗೆ ಇಲ್ಲದೇ ತಲೆಯೆತ್ತಿರುವ ಅನಧೀಕೃತ ಗೂಡಂಗಡಿ ಹಾಗೂ ಕೆಲವರ ಮನೆಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದು, ಇದರಿಂದ ಹಲವಾರು ಕುಟುಂಬಗಳು ಬೀದಿಗೆ ಬಂದಿದೆ. ಈ ವಿಷಯ ಗೊತ್ತಿದ್ದರೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಇದನ್ನು ನಿಯಂತ್ರಿಸುವ ಹಾಗೂ ಅಂತವರ ಮೇಲೆ ಸೂಕ್ತ ಕಾನೂನು ಕ್ರಮ ಜರಗಿಸುವ ಬಗ್ಗೆ ನಿರ್ಲಕ್ಷತನ ತೋರುತ್ತಿದ್ದಾರೆ ಎಂದು ಮಹಿಳೆಯರು ದೂರಿದರು. ಆದಷ್ಟು ಬೇಗ ಅಕ್ರಮ ಮದ್ಯದ ವ್ಯವಹಾರಕ್ಕೆ ಕಡಿವಾಣ ಹಾಕಬೇಕೆಂದು ಮನವಿ ಮಾಡಿದರು. ಈ ಸಂದರ್ಭ ಅಲ್ಲಿದ್ದ ಮಾಧ್ಯಮದವರೂ ಕೂಡಾ ಈ ವಿಚಾರವಾಗಿ ಸಚಿವರ ಗಮನ ಸೆಳೆದರು. ಕರಾವಳಿಯಲ್ಲಿ ಹೆಚ್ಚುತ್ತಿರುವ ಆಕ್ರಮ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಗೋರಕ್ಷಕನೆಂಬ ಮುಖವಾಡ ಧರಿಸಿ ಕೊಲೆ, ಸುಲಿಗೆ ಹಾಗೂ ನೈತಿಕ ಪೋಲಿಸ್ಗಿರಿ ಮೂಲಕ ಮತೀಯ ಭಾನೆಗಳನ್ನು ಕೆರಳಿಸಿ ಸಮಾಜದ ಸ್ವಾಸ್ಥ್ಯ ಹಾಗೂ ಸಾಮರಸ್ಯ ಹಾಳುಮಾಡುವ ಸಂಘಟನೆಗಳನ್ನು ಮಟ್ಟಹಾಕಬೇಕು ಎಂದು ಶಾಸಕ. ಕೆ. ಗೋಪಾಲ ಪೂಜಾರಿ ಸರಕಾರವನ್ನು ಆಗ್ರಹಿಸಿದರು. ಕೆಂಜೂರು ಪ್ರವೀಣ್ ಪೂಜಾರಿ ಹತ್ಯೆ ಖಂಡಿಸಿ ಬೈಂದೂರು ಮತ್ತು ವಂಡ್ಸೆ ಬ್ಲಾಕ್ ಕಾಂಗ್ರೆಸ್ ಜಂಟಿಯಾಗಿ ಶುಕ್ರವಾರ ಹಮ್ಮಿಕೊಂಡ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ವಿದ್ಯಾರ್ಥಿ ಸಂಘಟನೆ ಹೆಸರಿನಲ್ಲಿ ಕಾಲೇಜಿನ ಯುವಕರನ್ನು ಪ್ರಚೋದಿಸಿ ದಾರಿತಪ್ಪಿಸುತ್ತಿದ್ದಾರೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳು ಎಚ್ಚರವಹಿಸಬೇಕು. ಕೇಸರಿಶಾಲು ಮತ್ತು ಕೆಂಪುನಾಮ ಹಾಕಿಕೊಂಡು ಕೊಲೆ, ಸುಲಿಗೆ, ಗೂಂಡಾಗಿರಿ ಮುಂತಾದ ಹೀನಾಯ ಕೃತ್ಯ ಎಸಗುವವರ ವಿರುದ್ದ ಕಾನೂನಿನಡಿಯಲ್ಲಿ ಕಠಿಣ ಶಿಕ್ಷೆಯಾಗಬೇಕು ಎಂದರು. ದೇಶದ ಸ್ವಾತಂತ್ರ್ಯ ತಂದುಕೊಟ್ಟ ಹಾಗೂ ಇತಿಹಾಸ ಹೊಂದಿರುವ ಪಕ್ಷದ ಬಗ್ಗೆ ಬಿಜೆಪಿ ಹಾಗೂ ಸಂಘಪರಿವಾರದವರಿಗೆ ಮಾತನಾಡುವ ನೈತಿಕತೆಯಿಲ್ಲ. ದೇಶಕ್ಕಾಗಿ ಯಾವುದೇ ಬಲಿದಾನ ನೀಡದ ಬಿಜೆಪಿಯವರು ಪ್ರವೀಣ್ ಪೂಜಾರಿಯಂತಹ ಅಮಾಯಕರನ್ನು ಬಲಿಪಶುಗಳನ್ನಾಗಿಸಿ ಹಾಗೂ ದೇಶದ ಜನರ ಮುಂದೆ ಸುಳ್ಳು-ಪೊಳ್ಳು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ, ಗ್ರಾ.ಪಂ. ಹಕ್ಲಾಡಿ, ಎಸ್.ಡಿ.ಎಂ.ಸಿ ಸ.ಕಿ.ಪ್ರಾ. ಶಾಲೆ ಯಳೂರು – ತೊಪ್ಲು ಇವುಗಳ ಆಶ್ರಯದಲ್ಲಿ ಸರಕಾರಿ, ಕಿರಿಯ ಪ್ರಾಥಮಿಕ ಶಾಲೆ ಯಳೂರು – ತೊಪ್ಲು ಇಲ್ಲಿ ಪೈಪ್ ಕಂಪೋಸ್ಟ್ ಘಟಕಕ್ಕೆ ರೋಟರಿ ಅಧ್ಯಕ್ಷ ಉದಯ ಕುಮಾರ ಶೆಟ್ಟಿ ಚಾಲನೆ ನೀಡಿದರು. ರೋಟರಿ ಕಾರ್ಯದರ್ಶಿ ಹಾಗೂ ಶಾಲಾ ಮುಖ್ಯ ಶಿಕ್ಷಕ ಸಾಲ್ಗದ್ದೆ ಶಶಿಧರ್ ಶೆಟ್ಟಿ ಪೈಪ್ ಕಂಪೋಸ್ಟನ ಉದ್ದೇಶ, ತಯಾರಿ, ಬಳಕೆ ಮತ್ತು ವಿಲೇವಾರಿ ಹಾಗೂ ಅದರ ಪರಿಣಾಮವನ್ನು ಪರಿಸರದ ಜನರಿಗೆ ತಿಳಿ ಹೇಳಿದರು. ಕಾರ್ಯಕ್ರಮದಲ್ಲಿ ಪಂ. ಸದಸ್ಯರಾದ ಸತೀಶ ಶೆಟ್ಟಿ, ಶ್ರೀಮತಿ ಗುಲಾಬಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಶ್ರೀಮತಿ ಸಿಂಗಾರಿ, ಉಪಾಧ್ಯಕ್ಷೆ ಶ್ರೀಮತಿ ಸಾಕು, ಎಸ್.ಡಿ.ಎಂ.ಸಿ. ಸದಸ್ಯರು, ಪೋಷಕರು, ವಿದ್ಯಾಭಿಮಾನಿಗಳು, ಊರಿನ ಗಣ್ಯರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಉಡುಪಿ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕುಸ್ತಿಪಟು ಆದರ್ಶ ಕುಮಾರ್ ಶೆಟ್ಟಿ ಮಾತನಾಡಿ, ಕುಸ್ತಿಯನ್ನು ಬಹಳ ಶೃದ್ಧೆ, ಭಕ್ತಿ ಮತ್ತು ಶಿಸ್ತಿನಿಂದ ಕಲಿಯಬೇಕು. ಹಾಗೆ ಪ್ರಯತ್ನಪೂರ್ವಕವಾಗಿ ಯಶಸ್ವಿ ಕುಸ್ತಿಪಟುವಾಗಲು ಸಾಧ್ಯ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಇದರ ಆಡಳಿತಾಧಿಕಾರಿಗಳಾದ ಡಾ.ಹೆಚ್.ಶಾಂತಾರಾಮ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾಲೇಜಿನ ವಿಶ್ವಸ್ಥರಾದ ಪ್ರಕಾಶ್ ಟಿ ಸೋನ್ಸ್, ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಆರ್.ಬಿ.ನಾಯ್ಕ್, ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಕ್ರೀಡಾ ಸಂಯೋಜಕರಾದ ಶ್ರೀಧರ ಶೆಟ್ಟಿ, ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ದೈಹಿಕ ನಿರ್ದೇಶಕರ ಸಂಘದ ಅದ್ಯಕ್ಷರಾದ ವಸಂತ ಶೆಟ್ಟಿ, ಗೌರವಾಧ್ಯಕ್ಷರಾದ ಶರತ್ ರಾವ್, ಬಸ್ರೂರಿನ ಶ್ರಿ ಶಾರದಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜಯಪ್ರಕಾಶ ಶೆಟ್ಟಿ, ಭಂಡಾರ್ಕಾರ್ಸ್ ಪದವಿ…
