ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮನೆಯ ಕೊಟ್ಟಿಗೆಯಲ್ಲಿ ಕಟ್ಟಲಾಗಿದ್ದ 5 ಜೆರ್ಸಿ ದನಗಳನ್ನು ತಡರಾತ್ರಿ ಕದ್ದೊಯ್ದಿರುವುದಲ್ಲದೇ ಒಂದು ಕರುವನ್ನು ಕತ್ತು ಹಿಸುಕಿ ಸಾಯಿಸಿರುವ ಘಟನೆ ಗೋಳಿಹೊಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲೂರು ಎಂಬಲ್ಲಿ ನಡೆದಿದೆ. ಎಲ್ಲೂರು ನಿವಾಸಿ ರಾಜೇಶ್ ಕಿಣಿ ಮನೆಯ ಪಕ್ಕದಲ್ಲಿರುವ ಕೊಟ್ಟಿಗೆಯಿಂದ ದನಗಳನ್ನು ಕದ್ದೊಯ್ಯಲಾಗಿದೆ. ಕೊಟ್ಟಿಗೆಯಲ್ಲಿ ಕಟ್ಟಿದ್ದ 9 ದನಗಳಲ್ಲಿ ಪೈಕಿ 5 ದನಗಳನ್ನು (1.70ಲಕ್ಷ) ಅಪಹರಿಸಿದ ದುಷ್ಕರ್ಮಿಗಳು ಒಂದು ಕರುವನ್ನು ಅಮಾನುಷವಾಗಿ ಕತ್ತು ಹಿಸುಕಿ ಸಾಯಿಸಿದ್ದಾರೆ. ಬುಧವಾರ ಬೆಳಗ್ಗೆ 5 ಗಂಟೆಯ ಸುಮಾರಿಗೆ ಹಾಲು ಕರೆಯಲು ತೆರಳಿದಾಗ ದನಗಳು ನಾಪತ್ತೆಯಾಗಿರುವುದು ಕಂಡು ಬಂದಿದ್ದು, ಬೈಂದೂರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಕುಂದಾಪುರ ಡಿವೈಎಸ್ಪಿ ಪ್ರವೀಣ ಕುಮಾರ ಘಟನಾ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ, ಹಾಲ್ಕಲ್ ಸಮೀಪದ ಸಿಸಿಟಿವಿ ಪೋಟೇಜ್ನ್ನು ಪರಿಶೀಲಿಸಿ ದನಗಳ್ಳರನ್ನು ಶೀಘ್ರ ಪತ್ತೆ ಹಚ್ಚಲಾಗುವುದು ಎಂದು ತಿಳಿಸಿದ್ದಾರೆ. ಕುಂದಾಪ್ರ ಡಾಟ್ ಕಾಂ . ದನಗಳರನ್ನು ಪತ್ತೆ ಮಾಡಲು ಆಗ್ರಹ: ಎಲ್ಲೂರು, ಹಾಲ್ಕಲ್ ಭಾಗದಲ್ಲಿ ಕೊಟ್ಟಿಗೆ ನುಗ್ಗಿ ದನಗಳ್ಳತನ ಪ್ರಕರಣ ಇದೇ ಮೊದಲಲ್ಲ, ಹಲವು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಸರಕಾರ ಬಡವರ ಪರವಾಗಿ ಹತ್ತಾರು ಯೋಜನೆಗಳನ್ನು ಕೈಗೆತ್ತಿಕೊಂಡು ಯಶಸ್ವಿಯಾಗಿ ಜಾರಿಗೊಳಿಸುತ್ತಿದೆ. ಅರ್ಜಿದಾರರಿಗೆ 94ಸಿ ಹಕ್ಕುಪತ್ರ ವಿತರಿಸುವಲ್ಲಿ ಈ ಹಿಂದೆ ಇದ್ದ ಕಾನೂನು ತೊಡಕುಗಳನ್ನು ನಿವಾರಿಸಿ 94ಸಿ ಹಾಗೂ 94ಸಿಸಿ ಮೂಲಕ ಬಡವರಿಗೆ ಕಡಿಮೆ ಶುಲ್ಕದಲ್ಲಿ ಭೂಮಿ ಹಕ್ಕುಪತ್ರ ಸಿಗುವಂತೆ ಮಾಡಲಾಗಿದ್ದು ಕ್ಷೇತ್ರದ ಫಲಾನುಭವಿಗಳಿಗೆ ಹಂತ ಹಂತವಾಗಿ ವಿತರಿಸಲಾಗುತ್ತಿದೆ ಎಂದು ಬೈಂದೂರು ಶಾಸಕ ಹಾಗೂ ಕೆಎಸ್ಆರ್ಟಿಸಿ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಗೊಳಿಹೊಳೆ ಮೂರುಕೈ ಶ್ರೀ ಮಹಿಷಮರ್ಧಿನಿ ಸಭಾಭವನದಲ್ಲಿ ನಡೆದ ಗೊಳಿಹೊಳೆ ಹಾಗೂ ಕಾಲ್ತೋಡು ಗ್ರಾ.ಪಂ ವ್ಯಾಪ್ತಿಯ ಶಾಸಕರ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದರು. ಡೀಮ್ಡ್ ಫಾರೆಸ್ಟ್ನಲ್ಲಿ ವಾಸವಿರುವವರಿಗೂ ಈವರೆಗೆ ಹಕ್ಕುಪತ್ರ ನೀಡಲು ಸಾಧ್ಯವಾಗಿಲ್ಲ. ಒಂದು ತಿಂಗಳಲ್ಲಿ ಸರಕಾರz ಗ್ಯಾಜೆಟ್ ನೋಟಿಪಿಕೇಶ್ ಹೊರಡಿಸಿದ ಬಳಿಕ ಅವರಿಗೂ ಹಕ್ಕಪತ್ರ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದ ಶಾಸಕರು ಕಾಲ್ತೋಡು ಹಾಗೂ ಗೋಳಿಹೊಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಮೂಲಭೂತ ಸೌಯರ್ಕಗಳ ಅಭಿವೃದ್ಧಿಗೆಅನುದಾನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭಾರತೀಯ ಜನತಾ ಪಕ್ಷವನ್ನು ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ತರುವ ಮಹತ್ತರವಾದ ಜವಾಬ್ದಾರಿ ಬಿಜೆಪಿಯ ಕಾರ್ಯಕರ್ತರಿಗಿದ್ದು ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕಿದೆ. ಬಿಜೆಪಿಯ ವಿವಿಧ ಮೋರ್ಚಾಗಳು ಸಂಘಟನಾತ್ಮವಾಗಿ ಕಾರ್ಯನಿರ್ವಹಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮಿಸಬೇಕಿದೆ ಎಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಬಿ. ಎಂ. ಸುಕುಮಾರ್ ಶೆಟ್ಟಿ ಹೇಳಿದರು. ವಂಡ್ಸೆಯಲ್ಲಿ ನಡೆದ ಬೈಂದೂರು ವಿಧಾನಸಭಾ ಕ್ಷೇತ್ರದ ವಂಡ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಪಂದನ, ಕೋಟಿ ವೃಕ್ಷ ಅಭಿಯಾನ ಹಾಗೂ ಕಾರ್ಯಕರ್ತರ ಸಭೆಯನ್ನದ್ದೇಶಿಸಿ ಮಾತನಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಬಡವರು ಹಾಗೂ ದುರ್ಬಲ ವರ್ಗದವರನ್ನು ಮರೆತಿದೆ. ಈ ನಿಟ್ಟಿನಲ್ಲಿ ಪ್ರತಿ ಬೂತ್ ಮಟ್ಟದಲ್ಲಿಯೂ ಬಿಜೆಪಿಯ ಕಾರ್ಯಕರ್ತರು ಸಂಘಟಿತ ಹೋರಾಟ ನಡೆಸುವ ಮೂಲಕ ರಾಜ್ಯದಲ್ಲಿ ಮತ್ತೆ ಬಿ. ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುವಂತೆ ಕಾಯೋನ್ಮಕವಾಗಬೇಕಿದೆ ಎಂದರು. ಕ್ಷೇತ್ರಾಧ್ಯಕ್ಷ ಉಪ್ಪಿನಕುದ್ರು ಸದಾನಂದ ಅಧ್ಯಕ್ಷತೆವಹಿಸಿದ್ದರು. ಬಿಜೆಪಿ ರಾಜ್ಯ ಕಾರ್ಯದರ್ಶಿ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಯಡ್ತರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳ ಸಭೆ ಜರುಗಿತು. ನೂತನವಾಗಿ ರಚನೆಗೊಂಡ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಸುಧಾಕರ ದೇವಾಡಿಗ ಯಡ್ತರೆ ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ವಿಕ್ರಮ ಪೂಜಾರಿ ಗರ್ಜಿನಹಿತ್ಲು, ಕಾರ್ಯದರ್ಶಿಯಾಗಿ ನಾರಾಯಣ ಕೆ. ಬಿಲ್ಲವ ದುರ್ಮಿ, ಜೊತೆ ಕಾರ್ಯದರ್ಶಿಯಾಗಿ ಚೈತ್ರಾ ಯಡ್ತರೆ ಹಾಗೂ ಅಶ್ವಿನಿ ಯಡ್ತರೆ ಆಯ್ಕೆಯಾಗಿದ್ದಾರೆ. ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಗೌರವ ಸಲಹೆಗಾರರಾಗಿ ವೆಂಕಟಾಚಲ ಮಯ್ಯ, ಜ್ಯೋತಿ ಶೆಟ್ಟಿ ಯಡ್ತರೆ, ಎಸ್. ರಾಜು ಪೂಜಾರಿ, ಶಂಕರ ಪೂಜಾರಿ ತಗ್ಗರ್ಸೆ, ಡಾ. ಮಿಥುನ್ ಶೆಟ್ಟಿ ಅವರನ್ನು ಸೂಚಿಸಿ ಆಯ್ಕೆ ಮಾಡಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸ್ನೇಹಿತರೊಂದಿಗೆ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಲವಲವಿಕೆಯಿಂದ ಭಾಗಿಯಾಗಿದ್ದ ವಿದ್ಯಾರ್ಥಿಯೊರ್ವ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ನಡೆದಿದೆ. ಕುಂದಾಪುರ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಪ್ರಥಮ ಬಿಕಾಂ ವಿದ್ಯಾರ್ಥಿ, ಜಡ್ಡಿನಕುದ್ರು ನಿವಾಸಿ ಅಮಿತ್ (18) ಮೃತ ದುರ್ದೈವಿ. ಬೆಳಿಗ್ಗೆ ಎಂದಿನಂತೆ ಕಾಲೇಜಿಗೆ ಬಂದಿದ್ದ ಅಮಿತ್ ಧ್ವಜಾರೋಹಣ ಮುಗಿದ ಬಳಿಕ ಸಭಾಂಗಣದಲ್ಲಿ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ವೀಕ್ಷಿಸುತ್ತಿದ್ದ ವೇಳೆ ಹಠಾತ್ ಎದೆ ನೋವು ಕಾಣಿಸಿಕೊಂಡು ಕುಸಿದು ಬಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಿಯೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಕುಂದಾಪ್ರ ಡಾಟ್ ಕಾಂ . ಮುಂಬೈಯಲ್ಲಿ ಉದ್ಯೋಗಿಯಾಗಿರುವ ಹಟ್ಟಿಕುದ್ರುವಿನ ಆನಂದ ಪೂಜಾರಿ ಹಾಗೂ ಸುಗಂಧಿ ದಂಪತಿಗಳ ಮೂವರು ಮಕ್ಕಳಲ್ಲಿ ಹಿರಿಯವರಾದ ಅಮಿತ್ಗೆ ಈ ಹಿಂದಿಯೂ ಹೃದಯ ಸಂಬಂಧಿ ಸಮಸ್ಯೆಯಿದ್ದು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರೆನ್ನಲಾಗಿದೆ. ಅಕಾಲಿಕವಾಗಿ ಮರಣವನ್ನಪ್ಪಿದ್ದ ಅಮಿತ್ಗೆ ಕುಂದಾಪುರ ಎಜುಕೇಶನ್ ಸೊಸೈಟಿ ಅಧ್ಯಕ್ಷರಾದ ಬಿ.ಎಂ ಸುಕುಮಾರ್ ಶೆಟ್ಟಿ, ಪ್ರಾಂಶುಪಾಲರು ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸಂತಾಪ ಸೂಚಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ : ಸತ್ಯ ಪ್ರಾಮಾಣಿಕತೆಗಳು ಎಂದಿಗೂ ತಮ್ಮ ಬೆಲೆ ಕಳೆದುಕೊಳ್ಳುವುದಿಲ್ಲ. ಅವು ಹೆಚ್ಚು ಮೌಲ್ಯಯುತ ಸಂಗತಿಗಳಾಗಿವೆ. ಎಂದಿಗೂ ಸತ್ಯವೇ ಜಯಿಸುತ್ತದೆ. ವಿದ್ಯಾರ್ಥಿಗಳು ತಮ್ಮ ವೈಯುಕ್ತಿಕ ಜೀವನದಲ್ಲಿ ಅಳವಡಿಸಿಕೊಳ್ಳಬಹುದಾದ ಗರಿಷ್ಠ ಮೌಲ್ಯವೆಂದರೆ ಅದು ಸತ್ಯನಿಷ್ಠೆಯಾಗಿದೆ. ನಮ್ಮ ದೇಶ ನಮಗೆ ಪೂಜನೀಯ, ಮಾತೃ ಸಮಾನ. ಸರ್ವ ಜನಾಂಗಕ್ಕೂ ಇಲ್ಲಿ ಬಾಳ್ವೆಗೆ ಸಮಾನ ಹಕ್ಕುಗಳಿವೆ. ಸಂವಿಧಾನವು ಮೂಲಭೂತವಾಗಿ ನಾಲ್ಕು ಪ್ರಧಾನ ಸ್ಥಂಭಗಳನ್ನು ಹೊಂದಿದ್ದು, ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗ ಮತ್ತು ಪತ್ರಿಕಾರಂಗಗಳು ದೇಶದ ಅಭಿವೃದ್ಧಿಯಲ್ಲಿ ತಮ್ಮದೇ ಪ್ರಾಮುಖ್ಯತೆಯನ್ನು ಹೊಂದಿವೆ. ವಿದ್ಯಾರ್ಥಿಗಳು ದೇಶ ಹಾಗೂ ಸಮಾಜದಿಂದ ಪಡೆದುಕೊಂಡದ್ದನ್ನು ಮತ್ತೆ ಸಮಾಜಕ್ಕಾಗಿ ಧಾರೆಯೆರೆಯಬೇಕು ಹಾಗೂ ಇನ್ನೊಬ್ಬರೊಂದಿಗೆ ಹಂಚಿಕೊಳ್ಳಬೇಕು ಎಂದು ನಿಟ್ಟೆ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಎನ್. ವಿನಯ ಹೆಗ್ಡೆ ಹೇಳಿದರು. ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಪುತ್ತಿಗೆ ಪದವಿನಲ್ಲಿರುವ ಶ್ರೀಮತಿ ವನಜಾಕ್ಷಿ ಕೆ.ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ 71ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ವಿದ್ಯೆಯೆಂಬುದು ಕಠಿಣ ಪರಿಶ್ರಮದಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಇತರ ರಾಷ್ಟ್ರಗಳಿಗೆ ಹೋಲಿಸಿದರೆ ಹೆಚ್ಚಿನ ಯುವಶಕ್ತಿ ಭಾರತ ದೇಶದಲ್ಲಿದೆ. ಆದರೆ ಈ ಶಕ್ತಿಯು ದೇಶದ ಭದ್ರತೆಗೆ ವಿನಿಯೋಗಿಸಲು ಸಿಗುತ್ತಿಲ್ಲ. ಯುವಕರು ಭ್ರಮೆಯ ಗುಂಗಿನಲ್ಲಿ ತೇಲಾಡುತ್ತಿದ್ದಾರೆ. ದೇಶದ ಮುಂದೆ ದೊಡ್ಡ ಸವಾಲುಗಳೇ ಇದ್ದು, ಮುಂದಿನ ದಿನಗಳು ಮತ್ತಷ್ಟು ಕಷ್ಟಕರವಾಗಿದೆ. ಹೀಗಾಗಿ ರಾಷ್ಟ್ರದ ಏಳಿಗೆಗೆ ಒಳಿತಿಗಾಗಿ ನಮ್ಮನ್ನು ಅರ್ಪಿಸಿಕೊಳ್ಳಬೇಕಾಗಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಉಡುಪಿ ಜಿಲ್ಲಾ ಉದ್ಯೋಗಿ ಕಾರ್ಯಪ್ರಮುಖ್ ವಿಜಯ ಕೊಡವೂರು ಹೇಳಿದರು. ಅವರು ಗಂಗೊಳ್ಳಿಯ ಹಿಂದು ಜಾಗರಣ ವೇದಿಕೆ ಆಶ್ರಯದಲ್ಲಿ ಗಂಗೊಳ್ಳಿಯ ಶ್ರೀ ವೀರೇಶ್ವರ ದೇವಸ್ಥಾನದ ವಠಾರದಲ್ಲಿ ಜರಗಿದ ಅಖಂಡ ಭಾರತ ಸಂಕಲ್ಪ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಸೌಹಾರ್ದತೆ ಮತ್ತು ಸಹಬಾಳ್ವೆಯ ಪ್ರತಿಯೊಬ್ಬ ಭಾರತೀಯನ ಕಣಕಣದಲ್ಲಿ ಇದೆ. ರಾಷ್ಟ್ರ ಧರ್ಮವನ್ನು ಮೀರಿದ ಮತ್ತೊಬ್ಬ ಧರ್ಮವು ದೇಶದ ಬೆಳವಣಿಗೆಗೆ ಅಡ್ಡಗಾಲು ಹಾಕುತ್ತಿದೆ. ಇದರ ಕರಾಳ ಮುಖಗಳು ದೇಶ ಕಟ್ಟಲು ನಮಗೆ ತೊಂದರೆಯನ್ನುಂಟು ಮಾಡುತ್ತಿದೆ. ಕೇವಲ ಕೇರಳಕ್ಕೆ ಸೀಮಿತವಾಗಿದ್ದ ಜಿಹಾದಿ ಉಗ್ರವಾದ ಇಂದು ಕರಾವಳಿಯ ಮುಕ್ಕಾಲು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸರಕಾರ ಅಭಿವೃದ್ಧಿಯೇ ಆಡಳಿತ ಮಂತ್ರ ಎನ್ನುವ ನಿಟ್ಟಿನಲ್ಲಿ ಮನಸ್ವಿನಿ, ಮೈತ್ರಿ, ಸಕಾಲ, ಅನ್ನಭಾಗ್ಯ, ಕೌಶಲ್ಯ ಕರ್ನಾಟಕ, ಕ್ಷೀರ ಭಾಗ್ಯ ಹೀಗೆ ಹಲವಾರು ಯೋಜನೆಗಳ ರೂಪಿಸಿ ಯಶಸ್ವಿಯಾಗಿ ಜಾರಿಗೊಳಿಸಿದೆ. ಜಿಲ್ಲೆಯ ಗ್ರಾಮ ಪಂಚಾಯತ್ ವ್ಯಾಪ್ತಿ ಶೌಚಾಲಯ ನಿರ್ಮಾಣ ಗುರಿ ಪೂರೈಸಿದ್ದು, ಸಂಪೂರ್ಣ ಸ್ವಚ್ಛತೆ ಸಾಧಿಸಿ, ದೇಶದಲ್ಲೇ ಉಡುಪಿ ಜಿಲ್ಲೆ ಸ್ವಚ್ಛತೆಯಲ್ಲಿ ಏಳನೇ ಸ್ಥಾನ ಪಡೆದಿದದೆ ಎಂದು ಕುಂದಾಪುರ ಉಪವಿಭಾಗಾಧಿಕಾರಿ ಶಿಲ್ಪಾ ನಾಗ್ ಸಿ.ಟಿ. ಹೇಳಿದರು. ಕುಂದಾಪುರ ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿ ಆಶ್ರಯದಲ್ಲಿ ಕುಂದಾಪುರ ಗಾಂಧಿ ಮೈದಾನದಲ್ಲಿ ನಡೆದ ಸ್ವಾತಂತ್ರಯೋತ್ಸವ ದ್ವಜಾರೋಹಣ ನೆರವೇರಿಸಿ ಮಾತನಾಡುತ್ತಿದ್ದರು. ಸ್ವಚ್ಛ ಭಾರತ್ ಮಿಶನ್ ಯೋಜನೆಯಲ್ಲಿ ಕುಂದಾಪುರ ಪುರಸಭೆ ಬಯಲು ಶೌಚಾಲಯ ಮುಕ್ತ ಎಂದು ಘೋಷಣೆಯಾಗಿದ್ದು, ಹೆಮ್ಮಯ ಸಂಗತಿ ಎಂದ ಅವರು, ಜಿಲ್ಲೆಗೆ ಕ್ರೀಡಾ ಆಕಾಡೆಮಿ ಸ್ಥಾಪನೆಗೆ ಸರ್ಕಾರಸಮ್ಮತಿಸಿದ್ದು, ಜಿಲ್ಲಾ ವಸತಿ ಕ್ರೀಡಾ ಶಾಲೆಯಲ್ಲಿ ಪದವಿಪೂರ್ವ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು. ಗ್ರಾಮೀಣ ಭಾಗದ ೧೦೩ ಕಿ.ಮೀ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾರತ ದೇಶಕ್ಕೆ ಸ್ವಾತಂತ್ರ್ಯ ಸಿಗಲು ಅನೇಕ ಮಹಾನ್ ಸ್ವಾತಂತ್ರ್ಯ ಹೋರಾಟಗಾರರಲ್ಲದೇ, ಮಹಾನ್ ಚೇತನರುಗಳು ಪ್ರಮುಖ ಪಾತ್ರವನ್ನು ವಹಿಸಿದ್ದಾರೆ. ಅವರ ಸೈದ್ಧಾಂತಿಕ ನಿಲುವುಗಳು ಅವರು ಕಟ್ಟಿಕೊಟ್ಟ ಆದರ್ಶಯುತ ತತ್ವಗಳು ಅಲ್ಲದೇ, ನಮ್ಮ ಸುಧೀರ್ಘ ಪರಂಪರೆಯ ಮೌಲ್ಯಗಳು ಇಂದಿನ ಪೀಳಿಗೆಯ ಯುವಕರಿಗೆ ಮಾರ್ಗದರ್ಶಕಗಳಾಗಬೇಕು. ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆ ಕೇವಲ ಒಂದು ದಿವಸದ ಹಬ್ಬವಾಗಿರದೇ, ಅದರ ನಿರಂತರ ಮೌಲ್ಯಗಳು ನಮಗೆಲ್ಲರಿಗೂ ಪ್ರೇರಣೆಯಾಗಬೇಕು ಎಂದು ಗುರುಕುಲ ಪಬ್ಲಿಕ್ ಶಾಲೆಯಲ್ಲಿ ಧ್ವಜರೋಹಣ ಮಾಡಿದ ಶ್ರೀಮಾತಾ ಹಾಸ್ಪಿಟಲ್ನ ಖ್ಯಾತ ಮನೋತಜ್ಞರಾದ ಡಾ. ಪ್ರಕಾಶ್ ತೋಳಾರ್ ತಮ್ಮ ಮಾತುಗಳಿಂದ ಶಾಲೆಯ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು. ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆಯನ್ನು ಗುರುಕುಲ ಪಬ್ಲಿಕ್ ಶಾಲೆಯಲ್ಲಿ ಧ್ವಜರೋಹಣದ ಜೊತೆಗೆ ವಿವಿಧ ಕವಾಯತುಗಳಾದ ಮಾರ್ಚ್ ಪಾಸ್ಟ್ , ಮಾಸ್ ಡ್ರಿಲ್ , ಪಿರಮಿಡ್ ಮತ್ತು ಕರಾಟೆ ಪ್ರದರ್ಶನಗಳು ನಡೆಯಿತು. ಅಲ್ಲದೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಶಾಲೆಯ ತಂಡಗಳಾದ ರಾಮನ್, ಕಲ್ಪನಾ, ಆರ್ಯಭಟ ಮತ್ತು ಕಲಾಮ್ ಗಳ ನಡುವೆ ರಾಷ್ಟ್ರಗೀತೆ ಮತ್ತು ರಾಷ್ಟ್ರೀಯ ಐಕ್ಯತೆಯನ್ನು ಸಾರುವ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ದೇಶ ಸ್ವತಂತ್ರವಾಗುವಲ್ಲಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರ, ಮಹಾತ್ಮರ ತ್ಯಾಗ, ಬಲಿದಾನ ಹಾಗೂ ಲಕ್ಷಾಂತರ ವೀರ ಯೋಧರ ಪರಾಕ್ರಮ ಹಾಗೂ ರಕ್ತತರ್ಪಣವನ್ನು ಸ್ಮರಿಸಿದಾಗ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಲಿದೆ ಎಂದ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಬೈಂದೂರು ಶಾಸಕರ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ರಾಷ್ಟ್ರಧ್ವಜಾರೋಹಣಗೈದು ಮಾತನಾಡಿದರು. ನಮ್ಮ ವೀರ ಯೋಧರು ಜೀವದ ಹಂಗುತೊರೆದು ದೇಶ ರಕ್ಷಣೆ ಮಾಡಿದ ಪರಿಣಾಮ ಇಂದು ನಾವೆಲ್ಲರೂ ಕ್ಷೇಮವಾಗಿರಲು ಸಾಧ್ಯವಾಗಿದೆ. ಈ ನೆಲೆಯಲ್ಲಿ ನಾವೆಲ್ಲರೂ ಒಂದಾಗಿ ಪ್ರತಿದಿನವೂ ಯೋಧರನ್ನು ಸ್ಮರಿಸೋಣ. ನೂರಾರು ವರ್ಷಗಳಿಂದ ಎಲ್ಲಾ ಜಾತಿ, ಮತ, ಧರ್ಮದ ಜನರು ಒಂದಾಗಿ ಸೌಹಾರ್ದ ಹಾಗೂ ಸಾಮರಸ್ಯದಿಂದ ಬಾಳುತ್ತಿರುವ ನಮ್ಮ ಪರಿಸರವನ್ನು ಸಾಮಾಜಿಕ ಕಾಳಜಿ ಮೂಡಿಸುವ ಕೇಂದ್ರಗಳಾಗಿ ಪರಿವರ್ತಿಸೋಣ ಎಂಬ ಸಂದೇಶ ನೀಡಿದರು. ಜಿಪಂ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಮದನ್ಕುಮಾರ್, ಕಾರ್ಯದರ್ಶಿ ನಾಗರಾಜ ಗಾಣಿಗ ಬಂಕೇಶ್ವರ್, ಕ್ಷೇತ್ರ ಶಿಕ್ಷಣಾಧಿಕಾರಿ ಒ. ಆರ್. ಪ್ರಕಾಶ್, ಬೈಂದೂರು, ಯಡ್ತರೆ,…
