ಕುಂದಾಪುರ: ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ನಡೆಯುತ್ತಿರುವ ಮನ್ಮಥ ನಾಮ ಸಂವತ್ಸರದ ಚಾತುರ್ಮಾಸದ ಅಂಗ ವಿಶೇಷ ಧಾರ್ಮಿಕ ಕಾರ್ಯಕ್ರಮವಾಗಿ ಧನ್ವಂತರಿ ಹಾಗೂ ಮಹಾಮೃತುಂಜಯ ಹವನ ನಡೆಯಿತು. ಪೂರ್ಣಾಹುತಿಯು ಕಾಶೀ ಮಠ ಕಿರಿಯ ಯತಿಗಳಾದ ಶ್ರೀಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರಿಂದ ಜರಗಿತು. ಈ ಸಂದರ್ಭದಲ್ಲಿ ಸೇವಾದಾರರಾದ ದಿನೇಶ ಗೋವಿಂದ್ರಾಯ ಕಾಮತ ಮತ್ತು ಕುಟುಂಬದವರು ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪುರ: ಇಲ್ಲಿನ ಹರ್ಕುಲಸ್ ಜಿಮ್ ಆಯೋಜಿಸಿದ ಕರ್ನಾಟಕ ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಮಾಸ್ಟರ್ಸ್-2 ವಿಭಾಗದಲ್ಲಿ ಭಾಗವಹಿಸಿದ ಜಿ.ವಿ.ಅಶೋಕ್ ಅವರು 500 ಕೆಜಿ ಭಾರ ಎತ್ತುವ ಮೂಲಕ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ಪ್ರಸ್ತುತ ಕೆನರಾ ಬ್ಯಾಂಕ್ ಗಂಗೊಳ್ಳಿ ಶಾಖೆಯ ಉದ್ಯೋಗಿಯಾಗಿದ್ದು, ಸಾಲಿಗ್ರಾಮ ವೀರಮಾರುತಿ ವ್ಯಾಯಾಮ ಶಾಲೆಯ ಸದಸ್ಯರಾಗಿದ್ದಾರೆ.
ಬೈಂದೂರು: ಕಾಲ್ತೋಡು ಗ್ರಾಪಂ ವ್ಯಾಪ್ತಿಯ ನೀರ್ಕುಳಿಯ ಬಡಕುಟುಂಬದ ಪದ್ಮಾವತಿ ಶೆಟ್ಟಿ ಎರಡೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ಅವರಿಗೆ ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ರೂ. ೨೦ ಸಾವಿರ ಸಹಾಯಧನ ನೀಡುವ ಮೂಲಕ ಆರ್ಥಿಕ ಸಹಾಯ ಮಾಡಿದರು. ಯುವ ಬಂಟರ ಸಂಘದ ಅಧ್ಯಕ್ಷ ಸುಕೇಶ್ ಶೆಟ್ಟಿ ಹೊಸಮಠ, ಕಾರ್ಯದರ್ಶಿ ಅವಿನಾಶ್ ರೈ, ಪದಾಧಿಕಾರಿಗಳಾದ ಹರ್ಷವರ್ಧನ ಶೆಟ್ಟಿ ಕಟ್ಕೆರೆ, ಗಣೇಶ್ ಶೆಟ್ಟಿ ಅಲ್ಸಾಡಿ, ನಿತಿನ್ ಶೆಟ್ಟಿ ಹುಂಚನಿ, ಸುನಿಲ್ ಶೆಟ್ಟಿ ಹೇರಿಕುದ್ರು, ರವಿಶಂಕರ್ ಹೆಗ್ಡೆ ದಬ್ಬಾಡಿ, ಧನಂಜಯ ಶೆಟ್ಟಿ ಹರ್ಕೂರು, ಅರ್ಜುನ ಶೆಟ್ಟಿ ಕುಂದಾಪುರ, ಸಚಿನ್ ಶೆಟ್ಟಿ ಹುಂಚನಿ ಉಪಸ್ಥಿತರಿದ್ದರು.
ಗಂಗೊಳ್ಳಿ: ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತನ್ನು ಮೈಗೂಡಿಸಿಕೊಂಡು ನಿಯಮಾನುಸಾರ ಜೀವನ ನಡೆಸಿದರೆ ಜೀವನದಲ್ಲಿ ಎಂದೂ ಸೋಲು ಬರುವುದಿಲ್ಲ. ಸ್ಕೌಟ್ ಮತ್ತು ಗೈಡ್ಸ್ನಂತಹ ಚಟುವಟಿಕೆಗಳಲ್ಲಿ ಪಾಲ್ಗೊಂಡಾಗ ನಮ್ಮಲ್ಲಿ ಶಿಸ್ತು ಹಾಗೂ ನಾಯಕತ್ವ ಗುಣಗಳು ರೂಪುಗೊಳ್ಳುತ್ತದೆ. ಇಂತಹ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರೀಯವಾಗಿ ಪಾಲ್ಗೊಂಡು ವಿದ್ಯಾರ್ಥಿ ಜೀವನವನ್ನು ಇನ್ನಷ್ಟು ಉಜ್ವಲಗೊಳಿಸಿಕೊಳ್ಳಬೇಕು ಎಂದು ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕ ಎನ್.ಸದಾಶಿವ ನಾಯಕ್ ಹೇಳಿದರು. ಅವರು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ರೋಟರಿ ಸಭಾಂಗಣದಲ್ಲಿ ಭಾರತ ಸ್ಕೌಟ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಕುಂದಾಪುರ ಮತ್ತು ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಕುಂದಾಪುರ ವಲಯ ಮಟ್ಟದ ಪಟಾಲಾಯಂ ನಾಯಕತ್ವ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು. ಗಂಗೊಳ್ಳಿ ಜಿಎಸ್ವಿಎಸ್ ಅಸೋಸಿಯೇಶನ್ನ ಅಧ್ಯಕ್ಷ ಡಾ.ಕಾಶೀನಾಥ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಗ್ರಾಪಂ ಅಧ್ಯಕ್ಷೆ ರೇಷ್ಮಾ ಆರ್.ಖಾರ್ವಿ, ಸ್ಕೌಟ್ ಮತ್ತು ಗೈಡ್ಸ್ನ ಕುಂದಾಪುರ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷರಾದ…
ಕುಂದಾಪುರ: ಡಿ.ಎನ್.ಎ. ರಕ್ತ ಪರೀಕ್ಷೆಯು ಜೀವನಾಂಶ ಪ್ರಕರಣವೊಂದರಲ್ಲಿ ಪುರುಷನಿಗೆ ಪ್ರಯೋಜನಕಾರಿಯಾದ ಪ್ರಕರಣವು ಕುಂದಾಪುರ ನ್ಯಾಯಾಲಯದಲ್ಲಿ ನಡೆದಿದೆ. ಹಳ್ಳಿಹೊಳೆ ಗ್ರಾಮದ ಸುರೇಶ ಅಸಾಹಯಕ ಪರಿಸ್ಥಿತಿಯಲ್ಲಿದ್ದ ತನ್ನ ಮೇಲೆ ಅತ್ಯಾಚಾರಮಾಡಿ ಗರ್ಭಿಣಿಯನ್ನಾಗಿಸಿದ್ದಾನೆಂದು ಯುವತಿಯೋರ್ವಳು ಆರೋಪಿಸಿದ್ದಳು. ಅನಂತರ ಆತನಿಂದ ತಾನು ಗಂಡು ಮಗುವಿಗೆ ಜನ್ಮ ನೀಡಿದ್ದು, ಮಗುವಿನ ಲಾಲನೆ , ಪೋಷಣೆ, ವಿದ್ಯಾಭ್ಯಾಸದ ಬಗ್ಗೆ ಮಾಸಿಕ ಜೀವನಾಂಶ ಅರ್ಜಿಯನ್ನು ದಾಖಲಿಸಿದ್ದಳು. ನ್ಯಾಯಾಲಯಕ್ಕೆ ಹಾಜರಾದ ಸುರೇಶ್ ಯುವತಿಯನ್ನು ತಾನು ಅತ್ಯಾಚಾರ ಮಾಡಿಲ್ಲವೆಂದು ಹಾಗೂ ಆಕೆಯ ಮಗುವಿಗೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ವಾದಿಸಿದ್ದನು. ನ್ಯಾಯಾಲಯದ ಆದೇಶದಂತೆ ಸುರೇಶ ಯುವತಿ ಹಾಗೂ ಚಿಕ್ಕ ಮಗುವಿನ ರಕ್ತವನ್ನು ಬಹಿರಂಗ ನ್ಯಾಯಾಲಯದಲ್ಲಿ ಸಂಗ್ರಹಿಸಿ ಡಿ.ಎನ್.ಎ. ಪರೀಕ್ಷೆಗೆ ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅಲ್ಲಿನ ವೈಜ್ಞಾನಿಕ ಅಧಿಕಾರಿ ಅಧಿಕಾರಿ ಎಲ್.ಪುರುಷೋತ್ತಮ ಅವರು ವಿವರವಾದ ರಕ್ತ ಪರೀಕ್ಷೆ ಮಾಡಿ ಮಗುವಿನ ತಂದೆ ಸುರೇಶ ಅಲ್ಲವೆಂದು ತಜ್ಞ ವರದಿಯನ್ನು ಕಳುಹಿಸಿದ್ದರು. ಪ್ರತಿಕೂಲ ವರದಿ ಬಂದ ಹಿನ್ನಲೆಯಲ್ಲಿ ಯುವತಿ ನ್ಯಾಯಾಲಯಕ್ಕೆ ಹಾಜರಾಗದೇ ಇದ್ದು ನ್ಯಾಯಾಲಯ ಆಕೆ…
ಕುಂದಾಪುರ: ರಾಜ್ಯ ಸರಕಾರದ ಹಿಂದೂ ವಿರೋಧಿ ನೀತಿ ಹಾಗೂ ಮಡಿಕೇರಿಲ್ಲಿ ನಡೆದ ಗಲಭೆ ಪ್ರಕರಣವನ್ನು ನ್ಯಾಯಾಂಗ ತನಿಕೆಗೆ ಒಪ್ಪಿಸಬೇಕೆಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಇಂದು ಕುಂದಾಪುರದ ಶಾಸ್ತ್ರೀ ವೃತ್ತದ ಬಳಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದರು. ಪ್ರತಿಭಟನಾಕಾರನ್ನುದ್ದೇಶಿಸಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ ಜನಪರ ಕಾರ್ಯಗಳನ್ನು ಮಾಡಿ ಜನರ ವಿಶ್ವಾಸ ಗಳಿಸಬೇಕಾಗಿದ್ದ ಸರಕಾರ ಜನವಿರೋಧಿ ನಿಲುವನ್ನು ತಾಳುತ್ತಿರುವುದು ದುರದೃಷ್ಟಕರ. ಇತ್ತಿಚಿಗೆ ರಾಜ್ಯದಲ್ಲಿ ನಡೆದ ಸಾವು-ನೋವುಗಳನ್ನು ಗಮನಿಸಿದರೇ ಸರಕಾರ ಬೇಜವಾಬ್ದಾರಿ ನಡುವಳಿಕೆಯ ದರ್ಶನವಾಗುತ್ತದೆ. ಇದಕ್ಕಿಂತ ದುರಂತ ಇನ್ನೊಂದಿಲ್ಲ. ಬಿಜೆಪಿಯ ಸರಕಾರವಿರುವಾಗ ಯಾವುದೇ ಕೋಮು ಸಂಘರ್ಷಗಳಿಗೆ ಅವಕಾಶ ನೀಡದೇ ಜನರು ಅನ್ಯೂನ್ಯತೆಯಿಂದ ಬದುಕುವಂತೆ ಮಾಡಿತ್ತು, ಸಮಾಜದ ಎಲ್ಲಾ ಧರ್ಮದ ಜನರೂ ಒಂದೇ ಎಂಬ ಭಾವನೆಯಿಂದ ಆಡಳಿತ ನಡೆಸಿತ್ತು. ಸಿದ್ದರಾಮಯ್ಯನವರ ಸರಕಾರ ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆದು ಆಳಿ ಸಮಾಜದ ಸಂಘರ್ಷಗಳಿಗೆ ಎಡೆ ಮಾಡಿಕೊಡುತ್ತಿದೆ ಎಂದರು. ಇತ್ತಿಚಿನ ಘಟನೆಗಳನ್ನು ಅವಲೋಕಿಸಿದಾಗ ರಾಜ್ಯ ಸರಕಾರ ಯಾವುದೋ ಅಜೆಂಡಾಕ್ಕೆ ತಲೆಭಾಗಿ ರಾಜ್ಯದಲ್ಲಿ ಶಾಂತಿ…
ಕುಂದಾಪುರ: ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ನಡೆಯುತ್ತಿರುವ ಚಾತುರ್ಮಾಸದಲ್ಲಿ ಕಾಶೀ ಮಠದ ಕಿರಿಯ ಯತಿಗಳಾದ ಶ್ರೀಮತ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಸುರೇಶ ಗೋವಿಂದ್ರಾಯ ಕಾಮತರ “ಶ್ರೀ ಗೋವಿಂದ ಗೋರಕ್ಷಾ ಗೋಕುಲ ಧಾಮ”ಕ್ಕೆ ಭೇಟಿ ನೀಡಿ ಗೋಪೂಜೆಯನ್ನು ಸಲ್ಲಿಸಿದರು
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಖ್ಯಾತ ಚಿತ್ರ ನಿರ್ದೇಶಕ, ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ್ ಅವರಿಗೆ ಇಂದು ಹೊಸನಗರ ತಾಲೂಕು ನಿಟ್ಟೂರು ಬಳಿಯ ಬಾಮೆ ಎಂಬಲ್ಲಿ ಶೂಟಿಂಗ್ ನಡೆಸುತ್ತಿದ್ದ ವೇಳೆ ಹೆಜ್ಜೆನು ಕಚ್ಚಿದ ಪರಿಣಾಮ ಕುಂದಾಪುರದ ಖಾಸಗಿ ಅಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಯ ವಿವರ: ನಾಗತಿಹಳ್ಳಿ ಚಂದ್ರಶೇಕರ್ ನಿರ್ದೇಶನದ ಇಷ್ಟಕಾಮ್ಯ ಎಂಬ ಕನ್ನಡ ಚಿತ್ರದ ಶೂಟಿಂಗ್ ಗಾಗಿ 60ಜನರ ಚಿತ್ರತಂಡ ಇಂದು ಕೊಲ್ಲೂರು ಸಮೀಪದ ನಿಟ್ಟೂರಿಗೆ ಬಂದಿಳಿದಿತ್ತು. ಬಾಮೆ ತೂಗು ಸೇತುವೆ ಸಮೀಪ ಶೂಟಿಂಗ್ ನಡೆಸುವುದು ನಿಗದಿಯಾಗಿತ್ತು. ಬೆಳಿಗ್ಗೆ 10:30ರ ಹೊತ್ತಿಗೆ ಕ್ಯಾಮರಾ ಪೊಜಿಷನ್ ನೋಡಲು ಸ್ವಲ್ಪ ಮುಂದೆ ತೆರಳಿದ ನಾಗತಿಹಳ್ಳಿಗೆ ಒಮ್ಮೇಲೆ ಎಲ್ಲಿಂದಲೋ ಬಂದ ಜೇನು ದಾಳಿ ಇಟ್ಟಿದೆ. ಕೂಡಲೇ ಚಿತ್ರತಂಡದ ಇತರರಿಗೆ ತಿಳಿಸಿದ ನಾಗತಿಹಳ್ಳಿ ಕಾರಿನಲ್ಲಿ ಕುಳಿತುಕೊಳ್ಳುವಂತೆ ಹೇಳಿದ್ದಾರೆ. ಆದರೆ ಅಷ್ಟರೊಳಗೆ ಜೇನು ಇತರರಿಗೂ ದಾಳಿ ಮಾಡಲು ಶುರುವಿಟ್ಟುಕೊಂಡಿತ್ತು. ನಾಗತಿಹಳ್ಳಿಯವರನ್ನು ರಕ್ಷಿಸಲು ಬಂದ ನಾಲ್ಕೈದು ಮಂದಿಗೂ ಜೇನು ದಾಳಿ ಮಾಡಿದೆ. ನಾಗತಿಹಳ್ಳಿ ಹಾಗೂ ಕೃಷ್ಣ ಎಂಬುವವರಿಗೆ ಕಣ್ಣು ಹಾಗೂ ತಲೆಯ…
ಕುಂದಾಪುರ: ಕರ್ನಾಟಕ ಕಾರ್ಮಿಕರ ವೇದಿಕೆ ನೀಡುವ ರಾಜ್ಯಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ವಿಜಯವಾಣಿ ಉಡುಪಿ ಜಿಲ್ಲಾ ಹಿರಿಯ ವರದಿಗಾರ ಆರ್.ಶ್ರೀಪತಿ ಹೆಗಡೆ ಹಕ್ಲಾಡಿ ಆಯ್ಕೆ ಆಗಿದ್ದಾರೆ. ನ.29 ರಂದು ಉಡುಪಿ ಎಂಜಿಎಂ ಕಾಲೇಜ್ ಆಟದ ಮೈದಾನದಲ್ಲಿ ದಿನವಿಡೀ ನಡೆಯುವ ರಾಜ್ಯ ಸಮಾವೇಶ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಕರ್ನಾಟಕ ಕಾರ್ಮಿಕ ವೇದಿಕೆ ಅಧ್ಯಕ್ಷ ಕೆ.ರವಿ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕುಂದಾಪ್ರ ಡಾಟ್ ಕಾಂ ಸುದ್ದಿ) ನೇರ, ದಿಟ್ಟ ವರದಿಗಾರಿಕೆಯ ಮೂಲಕ ಪತ್ರಿಕಾರಂಗದಲ್ಲಿ ತನ್ನದೇ ಆದ ಛಾಪು ಮೂಡಿಸಿದ ಹಿರಿಯ ಪತ್ರಕರ್ತ ಹಕ್ಲಾಡಿಯವರಿಗೆ ಕರ್ನಾಟಕ ರಾಜ್ಯ ಕಲಾವಿದರ ಕಲ್ಯಾಣ ವೇದಿಕೆಯು ಕೊಡಮಾಡುವ ಆರನೇ ವರ್ಷದ `ಕಡಲ ತೀರದ ಭಾರ್ಗವ ಡಾ.ಕೆ.ಶಿವರಾಮ ಕಾರಂತ ಸದ್ಭಾವನಾ ರಾಜ್ಯ ಪ್ರಶಸ್ತಿ’, ಮಾನವ ಹಕ್ಕು ಮಂಡಳಿ- ಬೆಂಗಳೂರು ಸಂಸ್ಥೆಯು ಕೊಡಮಾಡುವ ರಾಜ್ಯ ಮಟ್ಟದ ‘ಟಿಪ್ಪು ಸುಲ್ತಾನ್ ಸದ್ಭಾವನಾ ಪ್ರಶಸ್ತಿ’, ಬಿಜಾಪುರದ ಶ್ರೀ ಬಸವೇಶ್ವರ ಕರ್ಮವೀರ ಕಲಾ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯು ಕೋಡಮಾಡುವ ‘ಬಸವ ಜ್ಯೋತಿ ರಾಜ್ಯ ಪ್ರಶಸ್ತಿ’ ಸೇರಿದಂತೆ ಹಲವಾರು…
