ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ದೇಶ ಮತ್ತು ದೇಶ ಕಾಯುತ್ತಿರುವ ಸೈನಿಕರ ವಿರೋಧಿ ಘೋಷಣೆ ಕೂಗಿದವರನ್ನು ಬಿಟ್ಟು ಎಬಿವಿಪಿ ಕಾರ್ಯಕರ್ತರನ್ನು ಹತ್ತಿಕ್ಕುವ ಪ್ರಯತ್ನ ನಡೆಸುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರ ದೇಶದ್ರೋಹಿಗಳನ್ನು ಬೆಂಬಲಿಸುತ್ತಿರುವುದು ಭಾರತೀಯರಾದ ನಮ್ಮ ದೌರ್ಭಾಗ್ಯ ಎಂದು ಬಿಜೆಪಿ ಬೈಂದೂರು ಕ್ಷೇತ್ರ ಸಮಿತಿ ಕೋಶಾಧ್ಯಕ್ಷ ಬಿ.ಎಸ್. ಸುರೇಶ್ ಶೆಟ್ಟಿ ಸರಕಾರದ ವಿರುದ್ದ ಹರಿಹಾಯ್ದರು. ಬುಧವಾರ ಬೈಂದೂರಿನಲ್ಲಿ ಕ್ಷೇತ್ರ ಬಿಜೆಪಿ ಮತ್ತು ಕ್ಷೇತ್ರ ಯುವಮೋರ್ಚಾ ಬೆಂಗಳೂರಿನ ಅಮ್ನೆಸ್ಟಿ ಇಂಟರ್ನ್ಯಾಶನಲ್ ಸಂಸ್ಥೆ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು. ಮೂರು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ಈವರೆಗೆ ಹಗರಣಗಳಲ್ಲಿಯೇ ಮುಳುಗಿದ್ದು, ನ್ಯಾಯ ಕೇಳಲು ಬಂದ ದೇಶಭಕ್ತರ ಮೇಲೆ ಪೋಲಿಸರಿಂದ ಲಾಠಿಚಾರ್ಜ್ ಮೂಲಕ ದೌರ್ಜನ್ಯ ನಡೆಸುತ್ತಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ. ತಕ್ಷಣ ತಪ್ಪಿತಸ್ಥ ಸಂಸ್ಥೆಯ ವಿರುದ್ದ ಕ್ರಮಕೈಗೊಳ್ಳುವ ತನಕ ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದು ಎಚ್ಚರಿಸಿದರು. ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಬಿ. ಎಂ. ಸುಕುಮಾರ್ ಶೆಟ್ಟಿ, ಕ್ಷೇತ್ರ ಬಿಜೆಪಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಬೇಳೂರು ಮೊಗೆಬೆಟ್ಟು ಬಳಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯ ವರದಿಗೆಂದು ತೆರಳಿದ್ದ ಪತ್ರಕರ್ತರ ಮೇಲೆ ಕಲ್ಲುಕೋರೆಯ ಮಾಲಕರು ಹಲ್ಲೆ ನಡೆಸಿ, ಕ್ಯಾಮರಾ, ಮೊಬೈಲ್ಗಳನ್ನು ಪುಡಿಗೈದ ಘಟನೆ ಬುಧವಾರ ನಡೆದಿದೆ. ಘಟನೆಯ ವಿವರ: ಕಳೆದ ಕೆಲವು ವರ್ಷಗಳಿಂದ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದರೆನ್ನಲಾದ ಬೇಳೂರು ಸಮೀಪದ ಮೊಗೆಬೆಟ್ಟು ಎಂಬಲ್ಲಿನ ಕಲ್ಲುಕೋರೆ ಬಗ್ಗೆ ವರದಿ ಮಾಡಲು ಸ್ವಂದನ ವಾಹಿನಿಯ ಪ್ರತಿನಿಧಿ ರಾಜೇಶ್ ಕುಂದಾಪುರ ಹಾಗೂ ವಿಜಯ ಕರ್ನಾಟಕ ಪತ್ರಿಕೆಯ ವರದಿಗಾರ ಗಣೇಶ್ ಸೈಬರ್ಕಟ್ಟೆ ತೆರಳಿದ್ದಾಗ ಕಲ್ಲುಕೋರೆಯ ಮಾಲಿಕರು, ಸ್ಥಳಿಯ ಕೆಲವರೊಂದಿಗೆ ಸೇರಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ರಾಜೇಶ್ ಬಳಿಯಿದ್ದ ಕ್ಯಾಮರಾ, ಮೊಬೈಲ್ಗಳನ್ನು ಕಸಿದುಕೊಂಡು ಪುಡಿಗೈದಿರುವುದಲ್ಲದೇ, ಸಿಮ್ ತೆಗೆದಿರಿಸಿಕೊಂಡಿದ್ದಲ್ಲದೇ ಜೀವಬೆದರಿಕೆ ಹಾಕಿದ್ದರೆನ್ನಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ರತ್ನಾಕರ ಶೆಟ್ಟಿ, ಸುಧಾಕರ ಶೆಟ್ಟಿ ಹಾಗೂ ಮಧುಕರ ಶೆಟ್ಟಿ ಎಂಬುವವರ ವಿರುದ್ಧ ಹಲ್ಲೆ, ಸ್ವತ್ತು ನಾಶ ಹಾಗೂ ಕರ್ತವ್ಯಕ್ಕೆ ಅಡ್ಡಿಯ ದೂರು ದಾಖಲಾಗಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಬ್ರಹ್ಮಾವರ ವಲಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಮೇರಿಕದ ನ್ಯೂಜೆರ್ಸಿಯ ಅಟ್ಲಾಂಟಿಕ್ ನಗರದಲ್ಲಿ ಸೆಪ್ಟೆಂಬರ್ 2ರಿಂದ 4ರ ವರೆಗೆ ನಡೆಯುವ 9ನೇ ಅಕ್ಕ ವಿಶ್ವ ಕನ್ನಡ ಸಮ್ಮೇಳನದ ಬಹುಭಾಷಾ ಕವಿಗೋಷ್ಠಿಯಲ್ಲಿ ಭಾಗವಹಿಸಲು ಬ್ಯಾರಿ ಸಾಹಿತ್ಯ ಅಕಾಡೆಮಿಯ ೨೦೧೫ನೇ ಸಾಲಿನ ಡಾ| ವಹಾಬ್ ದೊಡ್ಮನೆ ಪ್ರಶಸ್ತಿ ಪುರಸ್ಕೃತ ಬರಹಗಾರ ಮತ್ತು ಕಲಾವಿದ ಯಾಕೂಬ್ ಖಾದರ್ ಗುಲ್ವಾಡಿ ವಿಶೇಷ ಆಮಂತ್ರಿತರಾಗಿದ್ದಾರೆ. ಬಹುಮುಖ ಪ್ರತಿಭೆ ಯಾಕೂಬ್ ಖಾದರ್ ಗುಲ್ವಾಡಿ ದೇಶದ ವಿವಿದೆಡೆ ಅಲ್ಲದೇ ವಿದೇಶಗಳಾದ ಅಮೇರಿಕ, ಕೆನಡಾ, ಸಿಂಗಾಪುರ, ದುಬೈ, ಓಮನ್, ಶ್ರೀಲಂಕಾ ಮಾಲ್ಡೀವ್ಸ್, ಕತಾರ್, ಕೀನ್ಯಾ, ತಾನ್ಜೇನಿಯಾ, ಮಲೇಶಿಯಾ, ಥೈಲಾಂಡ್, ಅಂಡಮಾನ್ ಮತ್ತು ನಿಕೋಬಾರ್ನಲ್ಲಿ ನಡೆದ ಸಾಹಿತ್ಯ, ಸಾಂಸ್ಕೃತಿಕ ಸಮ್ಮೇಳನಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದಲ್ಲದೇ ಪ್ರವಾಸಕಥನಗಳನ್ನು ಪ್ರಕಟಿಸಿದ್ದಾರೆ. ಯುವ ಬರಹಗಾರರಾಗಿ, ಚಲನಚಿತ್ರಗಳಿಗೆ ಕಲಾ ನಿರ್ದೇಶಕನಾಗಿ, ವಸ್ತ್ರವಿನ್ಯಾಸಕಾರರಾಗಿ ಕೆಲಸ ಮಾಡಿದ್ದಲ್ಲದೇ ಕೆಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಗುಲ್ವಾಡಿ ಸಾಂಸ್ಕೃತಿಕ ಪ್ರತಿಷ್ಠಾನದ ಪ್ರಧಾನ ನಿರ್ದೇಶಕರಾಗಿ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ನಿಕಟಪೂರ್ವ ಸದಸ್ಯನಾಗಿ, ಕರ್ನಾಟಕ ಚಲನಚಿತ್ರ ಆಯ್ಕೆ ಸಮಿತಿಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಖಿಲ ಭಾರತ ಕೃಷಿ ಕೂಲಿಕಾರರ ಸಂಘ ನವದೆಹಲಿ ಸಂಯೋಜಿಸಲ್ಪಟ್ಟ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಕುಂದಾಪುರ ತಾಲೂಕು ಸಮಿತಿ ನೇತೃತ್ವದಲ್ಲಿ ಕಾವ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂಡ್ಲೂರು ಹಳ್ನಾಡು ಗ್ರಾಮಗಳ ಮನೆ ನಿವೇಶನ ರಹಿತರಿಂದ – ನಿವೇಶನ ಹಕ್ಕು ಪತ್ರಕ್ಕಾಗಿ ಒತ್ತಾಯಿಸಿ ಕಾವ್ರಾಡಿ-ಕಂಡ್ಲೂರು ಗ್ರಾಮ ಪಂಚಾಯತ್ ಕಛೇರಿ ಎದುರು ಪ್ರತಿಭಟನಾ ಮುಷ್ಕರ ಹೋರಾಟ ಜರಗಿತು. ಸಿಐಟಿಯು ತಾಲೂಕು ಅಧ್ಯಕ್ಷ ಹೆಚ್. ನರಸಿಂಹ ನಿವೇಶನ ರಹಿತರ ಪ್ರತಿಭಟನಾಕಾರರನ್ನು ಉದ್ದೇಶಿಸಿ, ಮಾತನಡುತ್ತಾ ಕಳೆದ ಮೂರು ವರ್ಷಗಳಿಂದ – ಮನೆ ನಿವೇಶನ ರಹಿತರು ಭೂಮಿ ಹಕ್ಕು ಪತ್ರಕ್ಕಾಗಿ ವಿವಿಧ ಹಂತದ ಹೋರಾಟ ಚಳವಳಿಯನ್ನು ನಿರಂತರವಾಗಿ ಮಾಡುತ್ತಿದ್ದರೂ ಸರಕಾರ ನಿವೇಶನ ಸ್ಥಳ ಹಕ್ಕು ಪತ್ರ ವಿತರಣೆ ಮಾಡದಿರುವುದನ್ನು ತೀವ್ರವಾಗಿ ಖಂಡಿಸಿದರು. ಈ ಹಿನ್ನಲೆಯಲ್ಲಿ ಸೆಪ್ಟಂಬರ್ ೨೮ ರಂದು ಜರಗುವ ಕುಂದಾಪುರ ತಾಲೂಕು ಕಛೇರಿ ಮುತ್ತಿಗೆ ಹೋರಾಟವನ್ನು ಎಲ್ಲಾ ನಿವೇಶನ ರಹಿತ ಅರ್ಜಿದಾರರು ಬೆಂಬಲಿಸಬೇಕು ಎಂದು ಕರೆಕೊಟ್ಟರು. ಕೃಷಿ ಕೂಲಿಕಾರರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗಂಗೊಳ್ಳಿಯ ಮಹಾಸತಿ ಪ್ರಾಥಮಿಕ ಮೀನುಗಾರರ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಸ್ಥಳಾಂತರಿತ ಕಛೇರಿಯನ್ನು ಸೋಮವಾರ ಸಂಘದ ಅಧ್ಯಕ್ಷೆ ಶಾರದಾ ಎಸ್. ಖಾರ್ವಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಗಂಗೊಳ್ಳಿಯ ಮುಖ್ಯರಸ್ತೆಯಲ್ಲಿರುವ ಗೌರಿ ಕಾಂಪ್ಲೆಕ್ಸ್ನ ನೆಲ ಅಂತಸ್ತಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂಘದ ಮುಖ್ಯ ಕಛೇರಿಯನ್ನು ಸಹಕಾರಿಯ ಸದಸ್ಯರ ಮತ್ತು ಜನರ ಅನುಕೂಲಕ್ಕಾಗಿ ವಿಸ್ತಾರವಾದ ಪ್ರಥಮ ಮಹಡಿಯಲ್ಲಿ ಸುಸಜ್ಜಿತವಾಗಿ ನಿರ್ಮಿಸಲಾಗಿದೆ ಎಂದು ಹೇಳಿದರು. ಪುರೋಹಿತರಾದ ಜಿ.ಅನಂತಕೃಷ್ಣ ಭಟ್ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಸಂಘದ ಉಪಾಧ್ಯಕ್ಷೆ ಮಾಲತಿ ಜಿ.ಖಾರ್ವಿ, ನಿರ್ದೇಶಕಿಯರಾದ ನೀಲಾವತಿ ಎಸ್.ಖಾರ್ವಿ, ಪಾರ್ವತಿ ಬಿ.ಖಾರ್ವಿ, ಶಾರದಾ ಆರ್.ಹೆಗ್ಡೆ, ದೀಪಾ ಎಸ್.ಖಾರ್ವಿ, ಶೈಲಾ ಎಂ.ಖಾರ್ವಿ, ರೇಖಾ ಜಿ.ಖಾರ್ವಿ, ಮತ್ಸ್ಯೋದ್ಯಮಿ ಶಿವಪ್ಪ ಖಾರ್ವಿ, ಸುರೇಂದ್ರ ಡಿ.ಖಾರ್ವಿ, ಕೃಷ್ಣ ಕೋಟಾನ್, ಸಹಕಾರಿಯ ಸಿಬ್ಬಂದಿಗಳು, ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು. ಸಹಕಾರಿಯ ಕಾರ್ಯದರ್ಶಿ ಗಣಪತಿ ಖಾರ್ವಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಕಾಲೇಜಿಗೆ ಭೇಟಿ ನೀಡಿದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಬಿ. ಎಸ್. ಯಡಿಯೂರಪ್ಪ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಶೈಕ್ಷಣಿಕ ಬೆಳವಣಿಗೆಯನ್ನು ಶ್ಲಾಘಿಸಿದರು. ಕಾಲೇಜಿನ ಆವರಣದಲ್ಲಿ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಬೋಧಕ-ಬೋಧಕೇತರ ವರ್ಗದವರ ಜೊತೆ ಸಂವಾದ ನಡೆಸಿದರು. ಸುಮಾರು ನಾಲ್ಕು ಸಾವಿರ ವಿದ್ಯಾರ್ಥಿಗಳು ಈ ಎಜ್ಯುಕೇಶನ್ ಸೊಸೈಟಿಯಲ್ಲಿ ಪ್ರತೀ ವರ್ಷ ಅಧ್ಯಯನ ಮಾಡುತ್ತಿರುವುದು ಉಲ್ಲೇಖನೀಯ. ಗ್ರಾಮೀಣ ಪ್ರದೇಶದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹೆಚ್ಚು ಮನ್ನಣೆ ನೀಡುತ್ತಿರುವುದು ಹಾಗೂ ಮಹಿಳೆಯರಿಗೆ ಹೆಚ್ಚು ಪ್ರಾತಿನಿಧ್ಯ ನೀಡುತ್ತಿರುವುದು ಮೆಚ್ಚತಕ್ಕ ಸಂಗತಿ. ಈ ಶಿಕ್ಷಣ ಸಂಸ್ಥೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಪ್ರಜ್ಞಾವಂತ ಪ್ರಜೆಗಳಾಗಲಿ ಎಂದು ಶುಭ ಹಾರೈಸಿದರು. ಮಟ್ಟಾರ್ ರತ್ನಾಕರ ಹೆಗ್ಡೆ, ಉದಯ ಕುಮಾರ್ ಶೆಟ್ಟಿ, ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಬಿ. ಎಮ್. ಸುಕುಮಾರ ಶೆಟ್ಟಿ, ಸದಾನಂದ ಶೇರೆಗಾರ್ ಬೈಂದೂರು ಮತ್ತು ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಬೋಧಕ-ಬೋಧಕೇತರ ವರ್ಗದವರು ಉಪಸ್ಥಿತರಿದ್ದರು. ಕಾಲೇಜಿನ ವಾಣಿಜ್ಯ ಉಪನ್ಯಾಸಕಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಗತ್ತಿನ ಹೆಚ್ಚುತ್ತಿರುವ ತಾಪಮಾನ ಜನಜೀವನಕ್ಕೆ ಮಾರಕ ಕೋಟಿ ವೃಕ್ಷ ಯೋಜನೆ ಪರಿಸರ ಸಮತೋಲನಕ್ಕೆ ಮುನ್ನುಡಿ ಬರೆದಂತೆ ಎಂದು ಕುಂದಾಪುರ ರೋಟರಿ ಕ್ಲಬ್ನ ಮಾಜಿ ಅಧ್ಯಕ್ಷ ಕೆ.ಆರ್. ನಾಯ್ಕ್ ಹೇಳಿದರು. ಅವರು ಸ.ಕಿ.ಪ್ರಾ.ಶಾಲೆ ಯಳೂರು-ತೊಪ್ಲು ಇಲ್ಲಿನ ಪರಿಸರದ ವಿದ್ಯಾರ್ಥಿಗಳು, ಪೋಷಕರು, ವಿದ್ಯಾಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ರೋಟರಿ ಅಧ್ಯಕ್ಷ ಉದಯ ಶೆಟ್ಟಿ, ಮಾಜಿ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಶ್ರೀಮತಿ ಸಿಂಗಾರಿ, ಶಾಲಾ ಮುಖ್ಯ ಶಿಕ್ಷಕ ಸಾಲ್ಗದ್ದೆ ಶಶಿಧರ ಶೆಟ್ಟಿ ಉಪಸ್ಥಿತರಿದ್ದರು. ಶಶಿಧರ ಶೆಟ್ಟಿ ಸ್ವಾಗತಿಸಿ, ವಂದಿಸಿದರು.
ಅಮ್ನೆಸ್ಟಿ ಇಂಟರ್ನ್ಯಾಶನಲ್ ಸಂಸ್ಥೆ ನಿಷೇಧಕ್ಕೆ ಆಗ್ರಹ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೆಂಗಳೂರಿನ ದಿ ಯುನೈಟೆಡ್ ಥಿಯಾಲಾಜಿಕಲ್ ಕಾಲೇಜಿನಲ್ಲಿ ಅಮ್ನೆಸ್ಟಿ ಇಂಟರ್ನ್ಯಾಶನಲ್ ಸಂಸ್ಥೆ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಭಾರತೀಯ ಸೇನೆ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿರುವುದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರು ಕಳೆದೊಂದು ವಾರದಿಂದ ನಡೆಯುತ್ತಿರುವ ಪ್ರತಿಭಟನೆ ಕಾವು ರಾಜ್ಯಾದಾದ್ಯಂತ ವ್ಯಾಪಿಸಿದ್ದು ಕುಂದಾಪುರ ತಾಲೂಕಿನಲ್ಲಿಯೂ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಕುಂದಾಪುರ ಶಾಸ್ತ್ರೀ ವೃತ್ತದ ಬಳಿ ಭಂಡಾರ್ಕಾರ್ಸ್ ಕಾಲೇಜು ಹಾಗೂ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರೇ, ಬಸ್ರೂರಿನಲ್ಲಿ ಶ್ರೀ ಶಾರದಾ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಬೈಂದೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ವಿವಾದಿತ ಸಂಸ್ಥೆಯ ವಿರುದ್ಧ ತನಿಕೆ ನಡೆಸುದಲ್ಲದೇ, ದೇಶದ ಅಖಂಡತೆಗೆ ಭಂಗ ಸಂಸ್ಥೆಗಳನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಮನವಿ ಸಲ್ಲಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮನೆಯಿಂದ ಕುಂದಾಪುರಕ್ಕೆ ಹೋಗಿಬರುವುದಾಗಿ ತೆರಳಿ ಮರಳಿ ಬಾರದೇ ಕಾಣೆಯಾಗಿದ್ದ ಯುವತಿ ಇಂದು ತೀರಾ ಅಸ್ವಸ್ಥ ಸ್ಥಿತಿಯಲ್ಲಿ ಮನೆಗೆ ಮರಳಿದ್ದು, ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮನೆಗೆ ಮರಳಿದ ಬಳಿಕ ಯುವತಿಯ ವರ್ತನೆ ಹಲವು ಅನುಮಾನಗಳಿಗೆ ಎಡೆಮಾಡಿಕೊಡುತ್ತಿದ್ದು, ಆಪಹರಣಗೈಯಲಾಗಿತ್ತೆ ಎಂಬ ಶಂಕೆ ವ್ಯಕ್ತವಾಗಿದೆ. kundapraa.com ಕೊಲ್ಲೂರು ಸಮೀಪದ ಯಲ್ಲೂರಿನ ಯುವತಿ ಸೋಮವಾರ ಮನೆಯಿಂದ ಕುಂದಾಪುರಕ್ಕೆ ತೆರಳಿದ್ದವಳು ರಾತ್ರಿಯಾದರೂ ಮನೆಗೆ ಹಿಂತಿರುಗಿರಲಿಲ್ಲ. ಮನೆಯವರು ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾದರಾದರೂ ಸ್ಥಳೀಯರೋರ್ವರು ಹಿಂದಿರುಗಿ ಬರಬಹುದು ಎಂದು ಹೇಳಿದ್ದರಿಂದ ಸುಮ್ಮನಾಗಿದ್ದರು. ಇಂದು ಬೆಳಿಗ್ಗೆ ರಿಕ್ಷಾವೊಂದರಲ್ಲಿ ಮನೆಗೆ ಮರಳಿದ್ದ ಯುವತಿ ತೀರಾ ಅಸ್ವಸ್ಥಳಾಗಿರುವುದನ್ನು ಗಮನಿಸಿದ ಮನೆಯವರು ಕೂಡಲೇ ಕುಂದಾಪುರ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಅಪಹರಣದ ಶಂಕೆ: ಕುಂದಾಪುರಕ್ಕೆ ತೆರಳಿದ್ದ ಯುವತಿಯನ್ನು ಅಪಹರಣಗೈಯಲಾಗಿತ್ತೆ ಎಂಬ ಶಂಕೆ ವ್ಯಕ್ತವಾಗಿದೆ. ಕುಟುಂಬಿಕರೂ ಇದಕ್ಕೆ ಪುಷ್ಠಿ ನೀಡುವಂತೆ ಮಾತನಾಡಿದ್ದು ಪ್ರಕರಣದಲ್ಲಿ ಒಟ್ಟು ಮೂವರ ಕೈವಾಡ ಇದೆ ಎಂಬ ಮಾತುಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾರತ ಇತಿಹಾಸ ಕಲೆಯ ತಳಹದಿಯಲ್ಲಿ ನಿಂತಿದೆ. ನೂರು ಮಾತುಗಳಿಂದ ಪರಿವರ್ತನೆಯಾಗದ್ದನ್ನು ಒಂದು ಚಿತ್ರದ ಮೂಲಕ ಬದಲಾವಣೆ ತರಲು ಸಾಧ್ಯವಿದೆ. ಕಲೆಗೆ ಮನಸ್ಸನ್ನು ಪರಿವರ್ತಿಸುವ ಶಕ್ತಿಯಿದ್ದು, ಯುವಕರು ಕಲಾ ಸಾಹಿತ್ಯದ ತೊಡಗಿಸಕೊಳ್ಳುವ ಮೂಲಕ ಸಮಾಜದ ಬದಲಾವಣೆ ಸಾಧ್ಯವಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ಹೇಳಿದರು. ಯುವ ಮೆರಿಡಿಯನ್ ಸಮೂಹ ಸಂಸ್ಥೆ ಬೇ ಸ್ಪಾ ರೆಸಾರ್ಟ್ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಯುವ ಮೆರಿಡಿಯನ್ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ನಾಲ್ಕು ದಿನಗಳ ರಾಷ್ಟ್ರಮಟ್ಟದ ‘ಮಾನ್ಸೂನ್ ಕಲರ್ಸ್’ ಕಲಾ ಶಿಬಿರದಲ್ಲಿ ಅವರು ಮಾತನಾಡಿ ಕರಾವಳಿಯಲ್ಲಿ ವೈವಿದೈತೆಯ ಪ್ರವಾಸ ಹಾಗೂ ಯತ್ರಾ ಸ್ಥಳಗಳಿದ್ದು, ಅಧಿಕಾರಿಗಳ ಜೊತೆ ಸಮಾಲೋಚಿಸಿ ಕರಾವಳಿ ಅಭಿವೃದ್ಧಿಗೆ ಪ್ರಯತ್ನಸಲಾಗುತ್ತದೆ. ಕುಂದಾಪುರದಂತಹ ಪ್ರವಾಸಿ ತಾಣಗಳ ನಡುವೆ ಕಲಾವಿದರಿಗೆ ಕಲಾರಚನೆ ಅವಕಾಶ ಹೆಚ್ಚಿದೆ. ಉಡುಪಿ ಸಾಯಿರಾಧಾ ಡೆವಲಪರ್ರ್ಸ್ ಮಾಲೀಕ ಮನೋಹರ ಶೆಟ್ಟಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ವೈವಿಧತೆ ತವರೂರು ಕುಂದಾಪುರ ಪರಿಸರದಲ್ಲಿ ರಾಷ್ಟ್ರೀಯ ಮಟ್ಟದ ಕಲಾವಿದರ ಕಲಾ…
