Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ವಿಶೇಷ ವರದಿ ಸಾಧಿಸುವ ಛಲ, ಪೂರಕ ಧೈರ್ಯ, ಜೊತೆಯಲ್ಲಿ ಆತ್ಮವಿಶ್ವಾಸ ಇದ್ದರೆ ಅಸಾಧ್ಯವೆಂಬುವುದನ್ನು ಸಾಧಿಸಬಹುದು ಎನ್ನುವುದಕ್ಕೆ ಆರ್ಡಿಯ ಹರ್ಷಾದ್ ರಾವ್ ಅವರೇ ಜ್ವಲಂತ ಸಾಕ್ಷಿ. ಇವರು ಮಾಡಿರುವುದು ಅಂತಿಂಥ ಸಾಧನೆಯಲ್ಲ ವಿಶ್ವದ ಅತೀ ಎತ್ತರದ 8,848 ಮೀ. ಎತ್ತರದ ಮೌಂಟ್ ಎವರೆಸ್ಟ್ ಶಿಖರದ ತುತ್ತ ತುದಿ ಏರಿದ್ದು. ಮೂಲತಃ ಕುಂದಾಪುರ ತಾಲೂಕಿನ ಆರ್ಡಿಯ ಕೆರ್ಜಾಡಿಯ ಯುವಕ ಹುಬ್ಬೆರಿಸುವ ಮೇರು ಸಾಧನೆ ಮಾಡಿದ್ದಾರೆ. ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿಯಾದ ಕಮಲಾಕ್ಷ ಮಹಾಲಿಂಗ ರಾವ್ ಮತ್ತು ಹೇಮಾಲತಾ ದಂಪತಿಗಳ ಪುತ್ರ ಹರ್ಷದ್ ಕಮಲಾಕ್ಷ ರಾವ್ ಈ ಸಾಧನೆ ಮಾಡಿರುವ ಅಪ್ರತಿಮ ಸಾಧಕ. ಪುಣೆಯಲ್ಲಿ ಕಂಪ್ಯೂಟರ್ ಇಂಜಿನಿಯರ್ ಆಗಿರುವ ಹರ್ಷದ್ ಮೇ.21ರಂದು ಎವರೆಸ್ಟ್ ತುತ್ತ ತುದಿ ತಲುಪಿ ರಾಷ್ಟ್ರಧ್ವಜವನ್ನು ಹಾರಿಸಿದ್ದಾರೆ. ಈ ಸಾಧನೆ ಮಾಡಲು ಅವರು ೮ ತಿಂಗಳುಗಳ ಕಾಲ ತಯಾರಿ ನಡೆಸಿದ್ದಾರೆ. ಸುಮಾರು ೨೮ಲಕ್ಷಕ್ಕೂ ಹೆಚ್ಚು ಹಣ ವಿನಿಯೋಗಿಸಿದ್ದಾರೆ. ಮಾ.29ರಂದು ಪರ್ವತಾರೋಹಣಕ್ಕೆ ಮುಂದಾದ ಅವರು ಕೊನೆಗೂ ಛಲದಿಂದ ಕುಂದಾಪುರದ ಯುವಕ ಎವರೆಸ್ಟ್ ಶಿಖರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗಂಗೊಳ್ಳಿಯ ಪೇಟೆ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಮೊಕ್ಕಾಂನಲ್ಲಿರುವ ಶ್ರೀ ಕಾಶೀ ಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಶನಿವಾರ ದೇವಸ್ಥಾನದ ಶ್ರೀ ಮುಖ್ಯಪ್ರಾಣ ದೇವರಿಗೆ ೧೦೮ ಪವಮಾನ ಕಲಶಾಭಿಷೇಕ, ಬಳಿಕ ದೇವಸ್ಥಾನದಲ್ಲಿ ನಡೆದ ಲಘು ವಿಷ್ಣುಹವನದ ಪೂರ್ಣಾಹುತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪುರ್ಣಾಹುತಿ ನೆರವೇರಿಸಿದರು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಜಿ.ಮೋಹನದಾಸ ಭಟ್, ವೇದಮೂರ್ತಿ ಜಿ.ರಾಘವೇಂದ್ರ ಆಚಾರ್ಯ, ವೇದಮೂರ್ತಿ ಜಿ.ವೇದವ್ಯಾಸ ಆಚಾರ್ಯ, ದೇವಳದ ಮೊಕ್ತೇಸರ ಜಿ.ರಘುವೀರ ನಾಯಕ್, ಅಧ್ಯಕ್ಷ ಡಾ.ಕಾಶೀನಾಥ ಪೈ, ದೇವಳದ ಆಡಳಿತ ಮಂಡಳಿ ಸದಸ್ಯರು ಹಾಗೂ ಊರಿನ ಹತ್ತು ಸಮಸ್ತರು ಮತ್ತು ಜಿಎಸ್‌ಬಿ ಸಮಾಜ ಬಾಂಧವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಾನವೀಯತೆಗೆ ಒತ್ತುಕೊಟ್ಟು ಮನುಕುಲದ ಕಲ್ಯಾಣಕ್ಕಾಗಿ ದುಡಿಯುತ್ತಿರುವ ರೋಟರಿ ಕ್ಲಬ್ ಜಗತ್ತಿನಾದ್ಯಂತ ನೀಡುತ್ತಿರುವ ಸೇವೆ ಅನನ್ಯವಾದುದು. ಸಾಮಾಜಿಕ ಪರಿಸ್ಥಿತಿಯನ್ನು ಅವಲೋಕಿಸಿ ಅವಶ್ಯಕತೆಯಿರುವ ಸೇವೆಯನ್ನು ಗುರುತಿಸಿ ಅದನ್ನು ಯಶಸ್ವಿಯಾಗಿ ಕಾರ್ಯರೂಪಕ್ಕಿಳಿಸಿದೆ. ವಿಶ್ವದಾದ್ಯಂತ ನಡೆಸಿದ ಪಲ್ಸ್ ಪೋಲಿಯೋ ಆಂದೋಲನದಿಂದಾಗಿ ಇಂದು ಜಗತ್ತು ಪೋಲಿಯೋ ಮುಕ್ತವಾಗಿದೆ. ಇಂತಹ ಸಮಾಜಮುಖಿ ಕಾರ್ಯಕ್ರಮಗಳಿಂದ ರೋಟರಿ ಜನಸ್ನೇಹಿಯಾಗಿದೆ ಎಂದು ಮಾಜಿ ರೋಟರಿ ಜಿಲ್ಲಾ ಗವರ್ನರ್ ಡಾ. ದೇವದಾಸ ರೈ ಹೇಳಿದರು. ಅವರು ರೋಟರಿ ಕ್ಲಬ್ ಕುಂದಾಪುರದ ಆಶ್ರಯದಲ್ಲಿ ಕೋಟೇಶ್ವರದ ಸಹನಾ ಕನ್‌ವೆನ್ಶನ್ ಸೆಂಟರ್‌ನಲ್ಲಿ ನಡೆದ ಪದಪ್ರದಾನ ಸಮಾರಂಭದಲ್ಲಿ ನೂತನ ಅಧ್ಯಕ್ಷ, ಕಾರ್ಯದರ್ಶಿಗಳಿಗೆ ಪದಪ್ರದಾನ ನೆರವೇರಿಸಿ ಮಾತನಾಡಿದರು. ರೋಟರಿಯು ಯುವಜನರಿಗಾಗಿ ರೋಟರ‍್ಯಾಕ್ಟ್, ಶಾಲಾ ಮಕ್ಕಳಿಗೆ ಇಂಟರ‍್ಯಾಕ್ಟ್‌ನಂತಹ ಸಹ ಸಂಸ್ಥೆಗಳನ್ನು ಆರಂಭಿಸಿ ನಾಯಕತ್ವ, ಸೇವಾಗುಣಗಳನ್ನು ಪ್ರೇರೆಪಿಸುವ ಕಾರ್ಯದಲ್ಲಿ ತೊಡಗಿದೆ. ಪಲ್ಸ್ ಪೋಲಿಯೋದ ಯಶಸ್ಸಿನ ಬಳಿಕ ಜಗತ್ತಿನಾದ್ಯಂದ ಸಾಕ್ಷರತೆಗೆ ಆಧ್ಯತೆ ನೀಡಿದೆ. ತನ್ಮೂಲಕ ಸೇವೆಗೆ ನೂತನ ಭಾಷ್ಯ ಬರೆದು ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ವಿಶ್ವದಾದ್ಯಂತ ಅಗ್ರಸ್ಥಾನವನ್ನು ಹೊಂದಿದೆ ಎಂದರು. ರೋಟರಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರ್ನಾಟಕ ಖಾರ್ವಿ ಯಾನೆ ಹರಿಕಾಂತ ಮಹಾಜನ ಸಂಘ ಉಪ್ಪುಂದ ಇದರ ವಾರ್ಷಿಕ ಮಹಾಸಭೆಯು ಖಂಬದಕೋಣೆ ನಿರ್ಮಾಣ ಹಂತದಲ್ಲಿರುವ ಸಂಸ್ಥೆಯ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ನವೀನ್‌ಚಂದ್ರ ಉಪ್ಪುಂದ ಅಧ್ಯಕ್ಷತೆವಹಿಸಿದ್ದರು. ಇತ್ತೀಚಿಗೆ ನಿಧನರಾದ ಸಮುದಾಯದ ಹಿರಿಯ ಹಾಗೂ ಗೌರವಾನ್ವಿತರಾದ ಟಿ.ಕೆ. ಖಾರ್ವಿಯವರಿಗೆ ಸಭೆಯಲ್ಲಿ ನುಡಿನಮನ ಸಲ್ಲಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮುದಾಯದ ಸಾಧಕರಿಗೆ, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ೨೦೧೫-೧೬ರ ಸಾಲಿನಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಕಾರ್ಯಕಾರಿ ಸಮಿತಿ ಸದಸ್ಯ ಪಿ. ರಾಮದಾಸ್ ಖಾರ್ವಿ ಗತವರ್ಷದ ನಿರ್ಣಯ ಮಂಡಿಸಿದರು. ಕೋಶಾಧಿಕಾರಿ ಮರವಂತೆ ಶಂಕರ ಖಾರ್ವಿ ವರದಿ ವಾಚಿಸಿದರು. ಸಂಘದ ಕಾರ್ಯದರ್ಶಿ ಎ. ಆನಂದ ಖಾರ್ವಿ ಆಯ-ವ್ಯಯವನ್ನು ಮಂಡಿಸಿ ಅನುಮೋದನೆ ಪಡೆದರು. ಪ್ರಸನ್ನ ಕುಮಾರ್ ಸನ್ಮನಿತರ ಪಟ್ಟಿಯನ್ನು ವಾಚಿಸಿದರು. ಉಪಾಧ್ಯಕ್ಷ ಕೊಡೇರಿ ಕೇಶವ ಖಾರ್ವಿ, ಜೊತೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಿದ್ಯಾರ್ಥಿಜೀವನದಲ್ಲಿ ದೊರೆತ ಅವಕಾಶವನ್ನು ಸರಿಯಾಗಿ ಉಪಯೋಗಿಸಿಕೊಂಡು ವಿದ್ಯಾರ್ಥಿ ಸಂಸತ್ತಿನಲ್ಲಿ ತೊಡಗಿಸಿಕೊಂಡರೆ, ಭವಿಷ್ಯದಲ್ಲಿಯೂ ಉತ್ತಮ ನಾಯಕರಾಗಲು ಸಾಧ್ಯವಿದೆ ಎಂದು ರಂಗತಜ್ಞ ಡಾ ಶ್ರೀಪಾದ ಭಟ್ ಶಿರಸಿ ಹೇಳಿದರು. ರತ್ತುಬಾಯಿ ಜನತಾ ಪ್ರೌಢಶಾಲೆಯಲ್ಲಿ ಇತ್ತಿಚಿಗೆ ಜರುಗಿದ ಕಾರ್ಯಕ್ರಮದಲ್ಲಿ ಶಾಲಾ ಸಂಸತ್ತು ಹಾಗೂ ರಂಗಸ್ಪರ್ಶ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮುಖ್ಯ ಅತಿಥಿ ಯುಸ್ಕೋರ್ಡ್ ಟ್ರಸ್ಟ್‌ನ ಅಧ್ಯಕ್ಷ ಸುಧಾಕರ ಪಿ. ಉಪಸ್ಥಿತರಿದ್ದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯ ಹಾಗೂ ವಿದ್ಯಾರ್ಥಿ ಸಂಸತ್ತಿನ ರಾಷ್ಟ್ರಪತಿ ಜಿ. ಎಸ್. ಭಟ್‌ರವರು ಪ್ರಮಾಣ ವಚನ ಭೋದಿಸಿ ಉತ್ತಮಕಾರ್ಯ ನಿರ್ವಹಿಸುವಂತೆ ಮಾರ್ಗದರ್ಶನ ನೀಡಿದರು. ಶಿಕ್ಷಕರಾದ ಪ್ರಕಾಶ್ ಎಮ್. ಸ್ವಾಗತಿಸಿ, ಮಂಜು. ಕೆ ಅವರು ಪ್ರಸ್ತಾವನೆಗೈದರು. ಚಂದ್ರ ದೇವಾಡಿಗ ಧನ್ಯವಾದಗೈದರು ಶಾಲಾ ಸಂಸತ್ತಿನ ಮಾರ್ಗದರ್ಶಕ ಶಿಕ್ಷಕ ಆನಂದ ಮದ್ದೋಡಿ ನಿರೂಪಿಸಿದರು. ಬಳಿಕ ರಂಗತಜ್ಞ ಡಾ. ಶ್ರೀಪಾದ ಭಟ್ ಶಿರಸಿ ಇವರು ಶಾಲಾ ವಿದ್ಯಾರ್ಥಿಗಳಿಗೆ ರಂಗಸ್ವರ್ಶ ತರಬೇತಿಯನ್ನು ನಡೆಸಿಕೊಟ್ಟರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪಕ್ಷದ ತತ್ವ ಸಿದ್ದಾಂತಗಳ ಆಧಾರದಲ್ಲಿ ಕೆಲಸ ಮಾಡುವ ಸಾಮಾನ್ಯ ಕಾರ್ಯಕರ್ತನನ್ನೂ ಅಸಮಾನ್ಯನಾಗಿ ಬೆಳೆಯಲು ಬಿಜೆಪಿ ಪಕ್ಷ ಅತ್ಯುತ್ತಮ ತಳಹದಿ. ಬಿಜೆಪಿಯ ಸಾಮಾನ್ಯ ಕಾರ್ಯಕರ್ತರಾಗಿದ್ದ ನರೇಂದ್ರ ಮೋದಿ ದೇಶದ ಪ್ರಧಾನ ಮಂತ್ರಿ ಹುದ್ದೆಗೇರಿದ್ದು ಇದಕ್ಕೊಂದು ಸ್ಪಷ್ಟ ನಿದರ್ಶನ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯೆ ಶ್ಯಾಮಲಾ ಕುಂದರ್ ಹೇಳಿದರು. ಕುಂದಾಪುರ ಬಿಜೆಪಿ ಕಚೇರಿಯಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಭಾರತ ಮಾತೆಗೆ ಪುಪ್ಪಾರ್ಪಣೆ ಮಾಡಿ ಉದ್ಘಾಟಿಸಿ ಮಾತನಾಡಿದ ಅವರು ಅನೇಕ ಹಿರಿಯ ನಾಯಕರ ಶ್ರಮದಿಂದ ಬಿಜೆಪಿ ದೊಡ್ಡ ಪಕ್ಷವಾಗಿ ಬೆಳೆದು ನಿಂತಿದೆ. ಅದನ್ನು ಸಮರ್ಥವಾಗಿ ಮುನ್ನೆಡೆಸುವ ಜವಾಬ್ದಾರಿ ನೂತನ ಪದಾಧಿಕಾರಿಗಳ ಹೆಗಲ ಮೇಲಿದೆ. ಒಳಿತು ಕೆಡುಕುಗಳನ್ನು ಆಂತರಿಕವಾಗಿಯೇ ಚರ್ಚಿಸಿ, ಪಕ್ಷದ ತಳಹದಿಯನ್ನು ಗಟ್ಟಿಗೊಳಿಸಿಕೊಳ್ಳುವ ಜವಾಬ್ದಾರಿ ಪ್ರತಿ ಕಾರ್ಯಕರ್ತನ ಮೇಲೂ ಇದೆ. ಉಡುಪಿ ಜಿಲ್ಲೆ ಬಿಜೆಪಿ ಉಪಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ ಪದಗ್ರಹಣ ನೆರೆವೇರಿಸಿದರು. ನಿರ್ಗಮಿತ ಅಧ್ಯಕ್ಷ ರಾಜೇಶ್ ಕಾವೇರಿ ಅವರು ನೂತನ ಅಧ್ಯಕ್ಷ ಕಾಡೂರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಗರದ ಮಧ್ಯಭಾಗದಲ್ಲಿರುವ ಬೋರ್ಡ್ ಹೈಸ್ಕೂಲ್ ಮೈದಾನವನ್ನು ಪ್ರಾರ್ಥನಾ ಕೇಂದ್ರವಾಗಿ ಪರಿವರ್ತಿಸುತ್ತಿರುವುದಲ್ಲದೇ ಮುಸ್ಲಿಂ ಸಮುದಾಯದ ಖಾಸಗಿ ಸೊತ್ತನ್ನಾಗಿ ಮಾಡಿಕೊಳ್ಳುವ ಹುನ್ನಾರ ನಡೆಯುತ್ತಿದ್ದು ಇದನ್ನು ಬಜರಂಗದಳ ಕುಂದಾಪುರ ಘಟಕ ಖಂಡಿಸುತ್ತದೆ ಎಂದು ಬಜರಂಗದಳ ಜಿಲ್ಲಾ ಸಹಸಂಚಾಲಕ ಗಿರೀಶ್ ಕುಂದಾಪುರ ಹೇಳಿದರು. ಕುಂದಾಪುರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬೋರ್ಡ್ ಹೈಸ್ಕೂಲ್ ಮೈದಾನದಲ್ಲಿರುವ ಟಿಪ್ಪು ಸ್ಮಾರಕವಿದ್ದು, ಇಲ್ಲಿ ಮುಸ್ಲಿಂ ಭಾಂದವರು ವರ್ಷಕ್ಕೆ ಎರಡು ಬಾರಿ ಸಾಮೂಹಿಕ ಪ್ರಾರ್ಥನೆ ನಡೆಸುತ್ತಾರೆ. ಹೀಗೆಯೇ ಯಾಥಾಸ್ಥಿತಿ ಮುಂದುವರಿಸಲು ನಮ್ಮ ಅಭ್ಯಂತರವಿಲ್ಲ. ಆದರೆ ಸರಕಾರಿ ಶಾಲೆಯ ಜಾಗವನ್ನು ಪ್ರಾರ್ಥನೆ ನಡೆಸುವ ಉದ್ದೇಶಕ್ಕಾಗಿ ಖಾಸಗಿ ಸೊತ್ತನ್ನಾಗಿಸಿಕೊಳ್ಳುವ ಕಾರ್ಯಕ್ಕೆ ಮುಂದಾದರೇ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳೇ ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆ ಎಂದವರು ಎಚ್ಚರಿಸಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಆರ್‌ಟಿಸಿ ತಿದ್ದುವ ಪ್ರಯತ್ನ: ಸಾರ್ವಜನಿಕ ಅಹವಾಲು ಸ್ವೀಕರಿಸಲು ಕುಂದಾಪುರಕ್ಕೆ ಬಂದಿದ್ದ ಸಚಿವ ಪ್ರಮೋದ್ ಮಧ್ವರಾಜ್ ಬಳಿ ಕೆಲ ಮುಸ್ಲಿಂ ಮುಖಂಡರು ಜಾಗ ಬಿಟ್ಟುಕೊಡುವಂತೆ ಮನವಿ ಮಾಡಿದ್ದಾರೆ. ಮೂಲ ಅಡಂಗಲ್ ದಾಖಲೆಯಲ್ಲಿ ಶಾಲಾ…

Read More

ಹದಿನೈದು ವರ್ಷದ ಹಿಂದಿನ ತಪ್ಪಿಗೆ ಪ್ರಾಯಶ್ಚಿತವೆಂದು ಡೆತ್‌ನೋಟ್ ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಹದಿನೈದು ವರ್ಷಗಳ ಹಿಂದೆ ಮಾಡಿದ ತಪ್ಪಿಗಾಗಿ ಪ್ರಾಯಶ್ಚಿತ ಮಾಡಿಕೊಳ್ಳುತ್ತಿದ್ದೇನೆಂದು ಡೆತ್‌ನೋಟ್ ಬರೆದಿಟ್ಟು ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಜಡ್ಕಲ್ ಗ್ರಾಪಂ ವ್ಯಾಪ್ತಿಯ ಬೀಸಿನಪಾರೆ ಎಂಬಲ್ಲಿ ನಡೆದಿದೆ. ಬೀಸಿನಪಾರೆ ನಿವಾಸಿ ಜರೀಷ್ ಜೋಸೆಫ್ (34) ಆತ್ಮಹತ್ಯೆಗೆ ಶರಣಾದಾತ. ಘಟನೆಯ ವಿವರ: ಬೀಸಿನಪಾರೆ ರಸ್ತೆಯ ಬದಿಯಲ್ಲಿ ತನ್ನ ಮನೆಯಲ್ಲಿದ್ದ ಬಂದೂಕಿನಿಂದ ಬಾಯಿಗೆ ಗುಂಡಿಕ್ಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಶುಕ್ರವಾರ ರಾತ್ರಿ ಘಟನೆ ನಡೆದಿದೆ ಎಂದು ಶಂಕಿಸಲಾಗಿದೆ. ಮರುದಿನ ಬೆಳಿಗ್ಗೆ ರಿಕ್ಷಾ ಚಾಲಕರೋರ್ವರು ಶವವನ್ನು ಕಂಡು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬೀಸಿನಪಾರೆಯ ಕೆ.ವಿ. ಜೋಸೆಫ್ ಅವರ ಹನ್ನೆರಡು ಮಕ್ಕಳಲ್ಲಿ ಏಳನೆಯವನಾದ ಜರೀಶ್ ಊರಿನಲ್ಲಿಯೇ ಕೃಷಿ ಕೆಲಸ ಮಾಡಿಕೊಂಡಿದ್ದರು. ಸೌಮ್ಯ ಸ್ವಭಾವದ ವ್ಯಕ್ತಿಯಾಗಿದ್ದು ಯಾರೊಂದಿಗೂ ದ್ವೇಷ ಕಟ್ಟಿಕೊಂಡಿರಲಿಲ್ಲ ಎನ್ನಲಾಗಿದೆ. ಆದರೆ ಆತನ ಜೇಬಿನಲ್ಲಿ ದೊರೆತ ಡೆತ್ ನೋಟ್‌ನಲ್ಲಿ ಹದಿನೈದು ವರ್ಷಗಳ ಹಿಂದೆ ತಾನು ಮಾಡಿದ ತಪ್ಪಿನ ಪ್ರಾಯಶ್ಚಿತಕ್ಕಾಗಿ ಆತ್ಮಹತ್ಯೆಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಎಚ್ಚರ ಸದಾ ಇರಬೇಕು. ಸಮಾಜದ ವಿವಿಧ ಅಗತ್ಯತೆಗಳಿಗೆ ತೆರದುಕೊಳ್ಳಬಲ್ಲ ನೈತಿಕ ಮತ್ತು ವೈಜ್ಞಾನಿಕ ಮನೋಭಾವನೆಯನ್ನು ರೂಢಿಸಿಕೊಳ್ಳಬೇಕು ಎಂದು ಬಸ್ರೂರು ಶಾರದಾ ಪದವಿ ಕಾಲೇಜಿನ ಪ್ರಾಂಶುಪಾಲ ರಾಧಾಕೃಷ್ಣ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ರೋಟರಿ ಸಭಾಂಗಣದಲ್ಲಿ ನಡೆದ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಪ್ರಸಕ್ತ ಶೈಕ್ಷಣಿಕ ವರುಷದ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು. ರಾಷ್ಟ್ರೀಯತೆ, ಪ್ರಜಾಸತ್ತಾತ್ಮಕತೆ, ಜಾತ್ಯತೀತತೆ ಎಲ್ಲದರ ಮಹತ್ವವನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ನನಗಲ್ಲ ನಿನಗೆ ಎನ್ನುವ ಎನ್ನೆಸ್ಸಿಸ್ಸಿನ ನುಡಿಗಳನ್ನು ಪಾಲಿಸಬೇಕು. ವಿನಯಶೀಲತೆ ನಮ್ಮದಾಗಬೇಕು ಎಂದು ಅವರು ಹೇಳಿದರು. ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್ ಸಿ ವಹಿಸಿದ್ದರು. ಜಿ.ಎಸ್.ವಿ.ಎಸ್ ಅಸೋಷಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ ಶುಭ ಹಾರೈಸಿದರು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ಮುಖ್ಯಸ್ಥ ನಾರಾಯಣ ಈ ನಾಯ್ಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ರಾಜ್ಯಶಾಸ್ತ್ರ ಪ್ರಾಧ್ಯಾಪಕ ಅರುಣ್ ಕುಮಾರ್ ಅತಿಥಿಗಳನ್ನು ಸ್ವಾಗತಿಸಿದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ಗಾಣಿಗ ಸೇವಾ ಸಂಘ ಹಾಗೂ ಸಮಾಜ ಬಾಂದವರ ಸಹಕಾರದಲ್ಲಿ ಕುಂದಾಪುರ ನವೀಕರಣಗೊಂಡ ಶ್ರೀ ವ್ಯಾಸರಾಜ ಮಠದ ಉದ್ಘಾಟನೆ ಹಾಗೂ ಧಾರ್ಮಿಕ ಸಭೆ ಮoದ ವೇದಿಕೆಯಲ್ಲಿ ಜರುಗಿತು. ಕುಂದಾಪುರ ಶ್ರೀ ವ್ಯಾಸರಾಜ ಮಠ ಶ್ರೀ ಲಕ್ಷ್ಮೀಂದ್ರತೀರ್ಥ ಸ್ವಾಮೀಜಿ ದಾನಿಗಳನ್ನು ಸನ್ಮಾನಿಸಿ ಬಳಿಕ ಅಶೀರ್ವಚನ ನೀಡಿದರು. ಕುಂದಾಪುರ ತಾಲೂಕು ಗಾಣಿಗ ಸಂಘ ಅಧ್ಯಕ್ಷ ಶ್ರೀನಿವಾಸ ಗಾಣಿಗ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಶ್ರೀ ಗುರುಮಠ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿದರೇ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಗಾಣಿಗ ಸಮಾಜದ ಸಾಕ್ಷಿಚಿತ್ರ ಬಿಡುಗಡೆ ಮಾಡಿದರು. ಉದ್ಯಮಿಗಳಾದ ಕೆ.ಎಂ.ರಾಮ, ಸುಧೀರ್ ಪಂಡಿತ್, ನೀಲಾವರ ಸಂಜೀವ ರಾವ್, ಬಿ.ಎ.ನರಸಿಂಹಮೂರ್ತಿ, ಜಿ.ಆರ್.ಚಂದ್ರಯ್ಯ, ಎಚ್.ಸುಬ್ಬಯ್ಯ, ವಿಜಯೇಂದ್ರ, ಬಿ.ವಿ.ರಾವ್, ಶ್ರೀಧರ ಗಾಣಿಗ ಗಂಗೊಳ್ಳಿ, ಬೆಂಗಳೂರು ಸೋಮಕ್ಷತ್ರಿಯ ಗಾಣಿಗ ಸಮಾಜ ಅಧ್ಯಕ್ಷ ಎಚ್.ಟಿ.ನರಸಿಂಹ, ಗೌರವಾಧ್ಯಕ್ಷ ಬಿ.ಎಸ್.ಮಂಜುನಾಥ, ಮುಂಬೈ ಗಾಣಿಗ ಸಂಘ ಅಧ್ಯಕ್ಷ ಜಗನ್ನಾಥ ಎಂ.ಗಾಣಿಗ, ಶಿವಮೊಗ್ಗ ಗಾಣಿಗ ಸೇವಾ ಸಂಘ…

Read More