Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಗಂಗೊಳ್ಳಿಯ ನಿನಾದ ಸಂಸ್ಥೆಯ ವತಿಯಿಂದ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಗುರುವಂದನಾ ಕಾರ್ಯಕ್ರಮದ ಭಾಗವಾಗಿ ನಡೆಯುತ್ತಿರುವ ಜ್ಞಾನಗಂಗಾ-೨ ಕಾರ್ಯಕ್ರಮ ಗಂಗೊಳ್ಳಿಯ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಭಾನುವಾರ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಪ್ರತಿ ತಿಂಗಳು ನಡೆಯುತ್ತಿರುವ ಶ್ರೀಮದ್ ಭಗವದ್ಗೀತಾ ಬೋಧನೆಯು ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಮಂಗೇಶ ಶೆಣೈ ಯಳಜಿತ್ ಅವರು ಗೀತೆಯ ೬ನೇ ಅಧ್ಯಾಯ ’ಆತ್ಮ ಸಂನ್ಯಾಸ ಯೋಗ’ದ ಬಗ್ಗೆ ಮಾತನಾಡಿದರು. ಸನ್ಯಾಸ ಆಶ್ರಮದಲ್ಲದೆ ಎಲ್ಲಾ ಆಶ್ರಮಗಳಲ್ಲಿ ತಮ್ಮ ಕರ್ತವ್ಯ ಸಾಧನೆಯಿಂದ ಮುಕ್ತಿಯನ್ನು ಹೊಂದಲು ಸಾಧ್ಯ ಇದೆ ಎಂದು ಹೇಳಿದರು. ತ್ಯಾಗದ ಮೂಲಕ ಆಧ್ಯಾತ್ಮದ ತುತ್ತತುದಿಯನ್ನು ತಲುಪಬಹುದೆಂದು ಕೆಲವು ನಿದರ್ಶನಗಳೊಂದಿಗೆ ವಿದ್ಯಾರ್ಥಿಗಳಿಗೆ ವಿವರಿಸಿದರು. ಜ್ಞಾನಗಂಗಾ ಕಾರ್ಯಕ್ರಮದ ವಿದ್ಯಾರ್ಥಿಗಳಾದ ಜಿ.ವಜ್ರೇಶ ಶೆಣೈ, ಎನ್.ಪದ್ಮಶ್ರೀ ಕಿಣಿ, ಪೂರ್ವಿ ಚಿತ್ತಾಲ್ ಮತ್ತಿತರರು ಭಗವದ್ಗೀತಾ ಕಂಠಪಾಠವನ್ನು ನಡೆಸಿ ಶ್ಲೋಕಗಳ ಅರ್ಥವನ್ನು ತಿಳಿಸುವ ಪ್ರಯತ್ನ ನಡೆಸಿ ಪ್ರಶಂಸೆಗೆ ಪಾತ್ರರಾದರು. ಇದೇ ಸಂದರ್ಭ ಸಭಿಕರಿಂದ ಗೀತೆಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಆಲ್ಟೋ ಕಾರು ಹಾಗೂ ಇನ್ಸುಲೇಟರ್ ವಾಹನದ ನಡುವಿನ ಭೀಕರ ಅಪಘಾತದಲ್ಲಿ ತಾಯಿ ಹಾಗೂ ಮಗ ದಾರುಣವಾಗಿ ಮೃತಪಟ್ಟದ ಘಟನೆ ಕೋಟ ಮೂರುಕೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಬಾರಕೂರು ಬೆಣ್ಣೆಕುದ್ರು ನಿವಾಸಿಗಳಾದ ಗಿರಿಜಾ (52) ಹಾಗೂ ಅವರ ಮಗ ಅವಿನಾಶ್ (27) ಮೃತ ದುರ್ದೈವಿಗಳು. ಘಟನೆಯನ್ನು ಕಾರಿನಲ್ಲಿದ್ದ ಮತ್ತಿರ್ವರು ಗಂಭೀರ ಗಾಯಗೊಂಡಿದ್ದಾರೆ. ಆರತಕ್ಷತೆ ಕಾರ್ಯಕ್ರಮಕ್ಕಾಗಿ ಮನೆಯಿಂದ ಕೋಟದ ಕಾಸನಗುಂದುವಿಗೆ ತೆರಳುತ್ತಿದ್ದ ವೇಳೆ ಕೋಟ ಮೂರುಕೈ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪದ ಕಾರು ವಿಭಾಜಕವೇರಿ ಎದುರಿನಿಂದ ಬರುತ್ತಿದ್ದ ಕಂಟೇನರ್‌ಗೆ ಡಿಕ್ಕಿಯಾಗಿತ್ತು. ಕಾರು ಚಲಾಯಿಸುತ್ತಿದ್ದ ಅವಿನಾಶ್ ಹಾಗೂ ಅವರ ಪಕ್ಕದಲ್ಲಿ ಕುಳಿತಿದ್ದ ಅವರ ತಾಯಿ ಸ್ಥಳದಲ್ಲಿಯೇ ಮೃತಪಟ್ಟರೇ, ಹಿಂಬಂದಿ ಸೀಟಿನಲ್ಲಿ ಕುಳಿತ ಇಬ್ಬರ ಪೈಕಿ ಓರ್ವರ ಸ್ಥತಿ ಚಿಂತಾಜನಕವಾಗಿದ್ದು, ಇನ್ನೊರ್ವರು ಗಂಭೀರ ಗಾಯಗೊಂಡಿದ್ದಾರೆ. ಮೃತ ಅವಿನಾಶ್ ವಿದೇಶದಲ್ಲಿ ಕಾರ್ ಮೆಕ್ಯಾನಿಕ್ ಆಗಿದ್ದರು.  ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಲಿ., ಉಪ್ಪುಂದ ಇದರ ನೂತನ ಕಟ್ಟಡ ರೈತಸಿರಿ ಲೋಕಾರ್ಪಣೆಗೆ ಸಜ್ಜುಗೊಂಡಿದ್ದು ಡಿ.೧೪ರ ಬುಧವಾರ ಭವ್ಯ ಕಾರ್ಯಕ್ರಮದೊಂದಿಗೆ ಉದ್ಘಾಟನೆಗೊಳ್ಳಲಿದ್ದು, ವಿವಿಧ ಕ್ಷೇತ್ರದ ಗಣ್ಯರು ಹಾಗೂ ಸಾರ್ವಜನಿಕರ ಉಪಸ್ಥಿತಿಯಲ್ಲಿ ಸಭಾ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ ಎಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು. ಅವರು ಉಪ್ಪುಂದದಲ್ಲಿ ಜರುಗಿದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ರಾಜ್ಯ ಸಹಕಾರ ಸಚಿವ ರಮೇಶ ಜಾರಕಿಹೋಳಿ ಉದ್ಘಾಟಿಸಲಿದ್ದು, ಪ್ರಧಾನ ಕಛೇರಿಯನ್ನು ಮೀನುಗಾರಿಕೆ ಮತ್ತು ಯುವಜನ ಸಬಲೀಕರಣ ಸಚಿವ ಪ್ರಮೋದ ಮಧ್ವರಾಜ್ ಉದ್ಘಾಟಿಸಲಿದ್ದಾರೆ. ಬ್ಯಾಂಕಿಂಗ್ ವಿಭಾಗವನ್ನು ಕ.ರಾ.ಸ.ಮಾರಾಟ ಮಹಾಮಂಡಳಿ ಅಧ್ಯಕ್ಷ ಡಾ|ಎಂ.ಎನ್.ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್.ಪ್ರಕಾಶ್ಚಂದ್ರ ಶೆಟ್ಟಿ ವಹಿಸಲಿದ್ದಾರೆ. ರೈತಸಿರಿ ಸಭಾಭವನವನ್ನು ಶಾಸಕ ಕೆ.ಗೋಪಾಲ ಪೂಜಾರಿ, ರೈತರ ಉತ್ಪತ್ತಿ ದಾಸ್ತಾನು ಮತ್ತು ಕೃಷಿ ಸಲಕರಣೆ ಮಳಿಗೆಯನ್ನು ಮಾಜಿ ಸಚಿವ ವಿನಯಕುಮಾರ ಸೊರಕೆ, ನ್ಯಾಯಬೆಲೆ ಅಂಗಡಿಯನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ರಸ್ತೆ ಅಭಿವೃದ್ಧಿ ಹಾಗೂ ಕಾಲೇಜು ಕಟ್ಟಡ ಅಭಿವೃದ್ಧಿ ಕಾಮಗಾರಿಗೆ 7.75 ಕೋಟಿ ಅನುದಾನ ಮಂಜೂರಾಗಿದ್ದು, ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಗುದ್ದಲಿಪೂಜೆ ನೆರವೇರಿಸಿದ ಕಾಮಗಾರಿಗಳ ವಿವರ: ಎಡಮೊಗ್ಗೆ ಗ್ರಾ.ಪಂ ಕಮಲಶಿಲೆ ಮುಖ್ಯ ರಸ್ತೆ ಬಡಾಮನೆ ಮಂಗಳಮಕ್ಕಿ ಪ.ಪಂಗಡ ಕಾಲನಿ ರಸ್ತೆ ಅಬಿವೃದ್ದಿ ರೂ 25.00 ಲಕ್ಷ ಸಿದ್ದಾಪುರ –ಹಳ್ಳಿಹೊಳೆ –ಜಡ್ಕಲ್ ರಸ್ತೆ ಕಿ,ಮೀ 0.00 ರಿಂದ 2.00 ವರಗೆ ನಮೀಕರಣ ರೂ 44.00 ಲಕ್ಷ ಸೌಡ –ಸಿದ್ದಾಪುರ ರಸ್ತೆ ಕಿ.ಮೀ 10.00 ರಿಂದ 10.30 ರವರಗೆ ಅಬಿವೃದ್ದಿ ರೂ 50.00 ಲಕ್ಷ ಶಂಕರನಾರಾಯಣ ಸರಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡ ಅಭಿವೃದ್ದಿ ರೂ 151.00 ಲಕ್ಷ ಸೌಡ ಸಿದ್ದಾಪುರ ರಸ್ತೆ ಅಬಿವೃದ್ದಿ (ಕಿ.ಮೀ 0.00 ರಿಂದ 1.75 ಮತ್ತು 1.75 ಮತ್ತು 2.40 ರಿಂದ 5.05 ವರಗೆ) ರೂ 225.00…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಂಗಭೂಮಿ ಉಡುಪಿ ಆಯೋಜಿಸಿದ 38ನೇ ವರ್ಷದ ರಾಜ್ಯ ಮಟ್ಟದ ನಾಟಕ ಸ್ವರ್ಧೆಯಲ್ಲಿ ಬೈಂದೂರಿನ ಪ್ರತಿಷ್ಠಿತ ನಾಟಕ ಸಂಸ್ಥೆ ಲಾವಣ್ಯ ತಂಡ ಪ್ರಸ್ತುತಪಡಿಸಿದ ‘ಗಾಂಧಿಗೆ ಸಾವಿಲ್ಲ’ ನಾಟಕ ತೃತೀಯ ಸ್ಥಾನ ಪಡೆದುಕೊಂಡಿದೆ. ನಾಟಕದಲ್ಲಿ ಶ್ರೇಷ್ಠ ರಂಗಪರಿಕರಕ್ಕಾಗಿ ಹಾಗೂ ಪ್ರಸಾದನಕ್ಕಾಗಿ ಮೂರನೇ ಸ್ಥಾನ, ಶ್ರೇಷ್ಠ ಬೆಳಕಿಗಾಗಿ ಎರಡನೇ ಸ್ಥಾನ ಪಡೆದುಕೊಂಡಿದೆ. ಗೋಡ್ಸೆ ಪಾತ್ರಧಾರಿ ಸುಬ್ರಹ್ಮಣ್ಯ ಜಿ. ಉಪ್ಪುಂದ ಮೆಚ್ಚಗೆ ಗಳಿಸಿದ್ದಾರೆ. ಅಸ್ಗರ್ ವಜಾಹತ್ ರಚನೆಯ ಹಸನ ನಯೀಂ ಸುರಕೋಡ ಕನ್ನಡಕ್ಕೆ ಭಾಷಾಂತರದ ನಾಟಕವನ್ನು ಗಿರೀಶ್ ಬೈಂದೂರು ನಿರ್ದೇಶಿಸಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಸುಮಾ ಫೌಂಡೇಶನ್ ನಾಗೂರು ಕುಸುಮಾಂಜಲಿ – 2017ರ ಪೂರ್ವಭಾವಿಯಾಗಿ ಆಯೋಜಿಸಿದ್ದ ಗಾನಕುಸುಮ ಸಂಗೀತ ಸ್ಪರ್ಧೆಯ ಅಂತಿಮ ಸುತ್ತು ಬ್ಲಾಸಮ್ ಸಂಗೀತ ನೃತ್ಯ ಶಾಲೆಯ ಕೆ.ಎ.ಎಸ್. ಆಡಿಟೊರಿಯಂನಲ್ಲಿ ನಡೆಯಿತು. ಗಾನಕುಸುಮ – 2017ರ ಅಂತಿಮ ಸುತ್ತಿನಲ್ಲಿ ೧೫ ಸ್ಪರ್ಧಿಗಳು ಭಾಗವಹಿಸಿದ್ದರು. ಪ್ರಥಮ ಸ್ಥಾನವನ್ನು ಸೀನಿಯರ್ ವಿಭಾಗದಲ್ಲಿ ಕುಂದಾಪುರ ಭಂಡಾರಕಾರ‍್ಸ್ ಕಾಲೇಜಿನ ವಿದ್ಯಾರ್ಥಿನಿ ಅನುಷಾ ಭಟ್ ಹಾಗೂ ಜೂನಿಯರ್ ವಿಭಾಗದಲ್ಲಿ ಉಪ್ಪುಂದ ಶ್ರೀ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ವಿಶ್ವಜಿತ್ ಕಿಣಿ ತಮ್ಮದಾಗಿಸಿಕೊಂಡರು. ಕುಸುಮಾಂಜಲಿ 2017ರ ಚಾನಲ್ ಪಾರ್ಟ್ನರ್ ಮುಂಬಯಿ ಶುಭಸಾಗರ್ ಹೋಟೆಲ್ ಮಾಲಿಕರಾದ ಲಕ್ಷ್ಮಣ ಪೂಜಾರಿ ಕಾರ್ಯಕ್ರಮವನ್ನು ಉಧ್ಘಾಟಿಸಿ ಸ್ಪರ್ಧಿಗಳಿಗೆ ಶುಭ ಹಾರೈಸಿದರು. ಸ್ಪರ್ಧೆಯ ತೀರ್ಪುಗಾರರಾಗಿ ಪ್ರಸಿದ್ಧ ಗಾಯಕ ಚಂದ್ರಶೇಖರ ಕೆದಿಲಾಯ, ಆಕಾಶವಾಗಿ ಕಲಾವಿದ ಗಣೇಶ ಗಂಗೊಳ್ಳಿ ಹಾಗೂ ಸಂಗೀತ ಪದವಿಧರೆ ಶ್ವೇತಾ ಕಾರ್ಯನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಕುಸುಮ ಹೋಮ್ಸ್ ಪ್ರೈವೆಟ್ ಲಿಮಿಟೆಡ್‌ನ ನಿರ್ದೇಶಕರಾದ ಕುಸುಮಾವತಿ ಎಸ್. ಶೆಟ್ಟಿ, ಸುಧಾಕರ ಶೆಟ್ಟಿ ಹಾಗೂ ಯು. ಪ್ರಭಾಕರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೆಸುಗೆ ಫೌಂಡೇಶನ್ ಹಾಗೂ ಪಡುವರಿ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಪ್ರವಾಸೋದ್ಯಮ ಇಲಾಖೆಯ ಸಹಕಾರದೊಂದಿಗೆ ಬೈಂದೂರು ಸೋಮೇಶ್ವರದಲ್ಲಿ ಮೊದಲ ಭಾರಿಗೆ ಡಿ.೨೮ರಿಂದ ಜ.೧ರ ತನಕ ಜರುಗುತ್ತಿರುವ ’ಬೈಂದೂರು ಬೀಚ್ ಉತ್ಸವ’ದ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮದ ಪೋಸ್ಟರ್ ಹಾಗೂ ಸ್ಟಿಕ್ಕರ್‌ಗಳನ್ನು ನಿವೃತ್ತ ಐಎಫ್‌ಎಸ್ ಅಧಿಕಾರಿ ಜಗನ್ನಾಥ ಶೆಟ್ಟಿ ಬಿಡುಗಡೆಗೊಳಿಸಿದರು. ಜಿಲ್ಲಾ ಪಂಚಾಯತ್ ಸದಸ್ಯ ಸುರೇಶ್ ಬಟವಾಡಿ, ಗೌರಿ ದೇವಾಡಿಗ, ತಾ.ಪಂ ಸದಸ್ಯೆ ಗಿರಿಜಾ ಖಾರ್ವಿ, ಪಡುವರಿ ಗ್ರಾಪಂ ಅಧ್ಯಕ್ಷೆ ದೀಪಾ ಶೆಟ್ಟಿ, ಉಪಾಧ್ಯಕ್ಷ ಸದಾಶಿವ ಡಿ. ಪಡುವರಿ, ಶಿರೂರು ಗ್ರಾಪಂ ಸದಸ್ಯ ರಘುರಾಮ ಪೂಜಾರಿ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಸುಬ್ರಹ್ಮಣ್ಯ ಭಟ್, ಪ್ರಮುಖರಾದ ಕೆ.ಜಿ. ನಾಗಪ್ಪ ಶೇರುಗಾರ್, ಸೊಡಿತಾರ್ ಸುಬ್ರಾಯ ಶೇರುಗಾರ್, ಪ್ರಸನ್ನಕುಮಾರ್ ಉಪ್ಪುಂದ, ಮುದಾಸಿರ್ ಬೈಂದೂರು, ಪ್ರಿಯದರ್ಶಿನಿ ಬೆಸ್ಕೂರು, ಲಾವಣ್ಯ ಬೈಂದೂರು ಅಧ್ಯಕ್ಷ ಗಿರೀಶ್ ಬೈಂದೂರು, ರಾಮಕ್ಷತ್ರಿಯ ಮಾತೃ ಮಂಡಳಿ ಬೈಂದೂರು ಇದರ ಮಾಜಿ ಅಧ್ಯಕ್ಷ ಆಶಾ ಜಗದೀಶ ಪಟವಾಲ್, ಬೆಸುಗೆ…

Read More

ಕುಂದಾಪುರ ವಿಧಾನಸಭಾ ಕ್ಷೇತ್ರ ಇಂಟೆಕ್ ಸಮಾವೇಶದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪಚಂದ್ರ ಶೆಟ್ಟಿ ಅಭಿಮತ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುವ ಸಂದರ್ಭದಲ್ಲಿ ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದು, ಮನೆ ಮನೆ ಕಾಂಗ್ರೆಸ್ ಕಾರ್ಯಕ್ರಮದ ಮೂಲಕ ಸರಕಾರದ ಕಾರ್ಯಕ್ರಮ ಹಾಗೂ ಸಾಧನೆಗಳನ್ನು ಜನರ ಮುಂದೆ ತೆರೆದಿಡುವ ಜೊತೆಗೆ ಜನರ ಸಮಸ್ಯೆ ಹಾಗೂ ಅಭಿಪ್ರಾಯವನ್ನು ಕ್ರೊಢೀಕರಿಸುವ ಕೆಲಸ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಚಂದ್ರ ಶೆಟ್ಟಿ ಹೇಳಿದರು. ಅವರು ಇಲ್ಲಿನ ಆರ್.ಎನ್ ಶೆಟ್ಟಿ ಸಭಾಂಗಣದಲ್ಲಿ ಜರುಗಿದ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಇಂಟೆಕ್ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಕ್ಷ ಅಸ್ತಿತ್ವವನ್ನು ಕಂಡುಕೊಳ್ಳಬೆಕಿದ್ದರೆ ಅಭ್ಯರ್ಥಿ ಗೆಲ್ಲಬೇಕು. ಇಲ್ಲವೇ ಗೆಲ್ಲಿಸಬೇಕು, ಗೆಲ್ಲುವವರಿಗೆ ಬಿಟ್ಟುಕೊಡಬೇಕು. ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಗೆಲ್ಲವ ಅಭ್ಯರ್ಥಿಗೆ ಜೊತೆಯಾಗಿ ನಿಂತು ಸಂಘಟಿತವಾಗಿ ಶ್ರಮಿಸಬೇಕಿದೆ ಎಂದವರು ಹೇಳಿದರು. ಕರ್ನಾಟಕ ರಾಜ್ಯ ಇಂಟೆಕ್ ಅಧ್ಯಕ್ಷ ರಾಕೇಶ್ ಮಲ್ಲಿ ಮಾತನಾಡಿ ಇಂಟೆಕ್ ಸಂಘಟನೆ ಪ್ರಪಂಚದಲ್ಲಿಯೇ ಅತಿಹೆಚ್ಚು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನ್ಯಾಯಕ್ಕಾಗಿ ಬರುವ ಕಕ್ಷಿದಾರರಿಗೆ ಸರಿಯಾದ ನ್ಯಾಯಕೊಡಿಸುವ ಮೂಲಕ ನ್ಯಾಯವಾದಿಗಳು ತಮ್ಮ ವಕೀಲ ವೃತ್ತಿಯ ಪಾವಿತ್ರ್ಯತೆಯನ್ನು ಕಾಪಾಡಬೇಕು ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಪ್ರಕಾಶ್ ಖಂಡೇರಿ ಹೇಳಿದರು. ಅವರು ಕುಂದಾಪುರ ವಕೀಲರ ಸಂಘ (ರಿ.) ಕುಂದಾಪುರ ಇವರ ಆಶ್ರಯದಲ್ಲಿ ಕುಂದಾಪುರ ನ್ಯಾಯಾಲಯದ ಸಂಕೀರ್ಣದಲ್ಲಿ ನಡೆದ ವಕೀಲರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತೆ ಶಿಲ್ಪಾನಾಗ್ ಅವರು ಮಾತನಾಡಿ, ನ್ಯಾಯವಾದಿಗಳ ಮಾರ್ಗಸೂಚಿ ಹಾಗೂ ನಿರ್ದೇಶನಗಳ ಮೂಲಕ ಸ್ವತಂತ್ರ ಭಾರತದ ಬಡತನ ಮತ್ತು ಅನಕ್ಷರತೆಯ ಪ್ರಮಾಣ ಕಡಿಮೆಯಾಗಲು ಕಾರಣವಾಯಿತು. ಇಂದು ಭಾರತ ಸೂಪರ್ ಪವರ್ ದೇಶವಾಗಲು ನ್ಯಾಯವಾದಿಗಳ ಪಾತ್ರ ಮಹತ್ತರವಾಗಿದೆ ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಕುಂದಾಪುರ ನಗರ ಪ್ರಾಧಿಕಾರದ ಅಧ್ಯಕ್ಷ ಹಾಗೂ ನ್ಯಾಯವಾದಿ ವಿಕಾಸ್ ಹೆಗ್ಡೆ ಮಾತನಾಡಿ, ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ಅತಿದೊಡ್ಡ ಸಮೂಹ ಎಂದರೆ ನ್ಯಾಯವಾದಿಗಳ ಸಮುದಾಯವಾಗಿದೆ. ಅಂತಹ ಸಮುದಾಯದ ಹೋರಾಟದಿಂದ ಸಿಕ್ಕಿದ ಸ್ವಾತಂತ್ರ್ಯವನ್ನು ಪ್ರಶ್ನಿಸಿಕೊಳ್ಳುವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಾನವ ಹಕ್ಕುಗಳ ಪ್ರತಿಪಾದನೆ ಮತ್ತು ಸಂಶೋಧನಾ ಪ್ರತಿಷ್ಠಾನವು ನವದೆಹಲಿಯ ಕಾನ್ಸ್ಟಿಟ್ಯೂಶನಲ್ ಕ್ಲಬ್‌ನಲ್ಲಿ ಈಚೆಗೆ ನಡೆಸಿದ ಎರಡು ದಿನಗಳ ರಾಷ್ಟ್ರೀಯ ಸಮಾಲೋಚನಾ ಸಭೆಯಲ್ಲಿ ದೇಶದ ಸ್ಥಳೀಯಾಡಳಿತಗಳ ಬಲವರ್ಧನೆಗಾಗಿ ಸಂವಿಧಾನ ತಿದ್ದುಪಡಿ ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸರಕಾರಗಳ ಮೇಲೆ ಒತ್ತಾಸೆ ತರುವ ನಿರ್ಧಾರ ಕೈಗೊಂಡಿತು. ಈ ಉದ್ದೇಶ ಸಾಧನೆಗಾಗಿ ಇದೇ ಗುರಿಹೊಂದಿರುವ ಸಂಸ್ಥೆಗಳ ಮತ್ತು ಸಮಾನ ಮನಸ್ಕ ವ್ಯಕ್ತಿಗಳ ಸಹಯೋಗ ಪಡೆದುಕೊಳ್ಳಲು ತೀರ್ಮಾನಿಸಿತು. ಪಂಚಾಯತ್ ರಾಜ್ ಮತ್ತು ಪೌರಾಡಳಿತ ಸಂಸ್ಥೆಗಳ ಪರಿಣಾಮಕಾರಿತ್ವವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸಂವಿಧಾನದ ೭೩ ಮತ್ತು ೭೪ನೆಯ ತಿದ್ದುಪಡಿಗಳು ರಾಜ್ಯಗಳಿಗೆ ನೀಡಿದ ವಿವೇಚನಾಧಿಕಾರಗಳಲ್ಲಿ ಹಲವನ್ನು ಬಂಧನೀಯಗೊಳಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಮತ್ತು ಆ ದಿಸೆಯ ಕಾರ್ಯವಿಧಾನಗಳ ಕುರಿತು ವಿಸ್ತೃತ ಚರ್ಚೆ ನಡೆಸಿತು. ಅದಕ್ಕಾಗಿ ರಾಷ್ಟ್ರೀಯ, ಪ್ರಾದೇಶಿಕ ಮತ್ತು ರಾಜ್ಯವಾರು ಕಾರ್ಯಪಡೆಗಳನ್ನು, ಸಂವಿಧಾನ ತಿದ್ದುಪಡಿ ಪ್ರಸ್ತಾವನೆಯ ಕರಡು ಸಿದ್ಧಪಡಿಸಲು ಪರಿಣತರ ಸಮಿತಿಯನ್ನು ರೂಪಿಸಲು ನಿರ್ಣಯಿಸಿತು. ಬದಲಾವಣೆಯ ಸಂದರ್ಭದಲ್ಲಿ ತೃಣಮೂಲ ಮತ್ತು ಜನಸಹಭಾಗಿತ್ವ ಪ್ರಜಾತಂತ್ರ ವ್ಯವಸ್ಥೆಗೆ…

Read More