Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಂಗಭೂಮಿಯಲ್ಲಿ ತೊಡಗಿಸಿಕೊಳ್ಳುವವರಿಗೆ ಜಾತಿ, ಅಂತಸ್ತು ಅರ್ಹತೆಯ ಅಗತ್ಯವಿಲ್ಲ. ನಾಟಕಗಳ ಮೂಲಕವೇ ಉತ್ತಮ ಬದುಕು ಕಟ್ಟಿಕೊಳ್ಳುವ ಗಟ್ಟಿತನತನವನ್ನು ರಂಗಭೂಮಿಯಲ್ಲಿ ತೊಡಗಿಸಿಕೊಂಡವರಿಗೆ ಕರಗತವಾಗುವಷ್ಟು ಅಂಕಗಳ ಬೆನ್ನತ್ತಿ ಉದ್ಯೋಗ ಗಿಟ್ಟಿಸಿಕೊಳ್ಳುವವರಿಗೆ ಬದುಕಿನ ಗಟ್ಟಿತನ ಕರಗತವಾಗದು ಎಂದು ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಡಾ. ಗಣೇಶ್ ಅಮೀನಗಡ ಹೇಳಿದರು. ಅವರು ಇಲ್ಲಿನ ಶಾರದಾ ವೇದಿಕೆಯಲ್ಲಿ ಸುರಭಿ ರಿ. ಬೈಂದೂರು ಹಾಗೂ ಯಸ್ಕೋರ್ಡ್ ಟ್ರಸ್ಟ್ ರಿ. ಆಶ್ರಯದಲ್ಲಿ ನಡೆಯುತ್ತಿರುವ ನಾಡೋಜ ಏಣಗಿ ಬಾಳಪ್ಪ ಸಂಸ್ಮರಣೆಯ ರಂಗಸುರಭಿ 2017  ನಾಟಕ ಸಪ್ತಾಹವನ್ನು ಉದ್ಘಾಟಿಸಿ, ಏಣಗಿ ಬಾಳಪ್ಪ ಅವರ ಭಾವಚಿತ್ರಕ್ಕೆ ಪುಪ್ಪ ಸಮರ್ಪಿಸಿ ಬಳಿಕ ಮಾತನಾಡಿದರು. ನಾಟಕ ಉತ್ಸವದ ನೆಪದಲ್ಲಿ ರಂಗಾಸಕ್ತರು ಸೇರುವಂತೆ ಮಾಡುವುದೇ ದೊಡ್ಡ ಕೆಲಸ. ಒಳ್ಳೆಯ ನಾಟಕಗಳನ್ನು ನೋಡುವುದೆಂದರೆ ಉತ್ತಮ ಕೃತಿಗಳನ್ನು ಓದಿದಂತೆ. ನೈಜವಾಗಿರುವ ರಂಗಭೂಮಿ ಪ್ರೇಕ್ಷಕರಿಗೆ ಸದಾ ಆಪ್ತವಾಗುತ್ತದೆ ಎಂದವರು ಹೇಳಿದರು. ನಾಡೋಜ ಏಣಗಿ ಬಾಳಪ್ಪ ಅವರು ನಡೆದಾಡುವ ರಂಗಭೂಮಿ ಎಂದೆಸಿನಿಕೊಂಡವರು. ಬಡತನದ ಮಧ್ಯೆ ಬೆಳೆದು ಬಂದ ಅವರಿಗೆ ಅಚಾನಕವಾಗಿ ಒದಗಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 8 ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಈ ಕುರಿತು ಕೈಗೊಳ್ಳಬೇಕಾದ ಸಿದ್ದತೆಗಳ ಕುರಿತು ಕ.ರಾ.ರ.ಸಾ.ನಿಗಮದ ಅಧ್ಯಕ್ಷರು ಹಾಗೂ ಬೈಂದೂರು ಶಾಸಕ ಗೋಪಾಲ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ , ಬೈಂದೂರಿನ ಪ್ರವಾಸಿ ಮಂದಿರದಲ್ಲಿ ಗುರುವಾರ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಶಾಸಕ ಗೋಪಾಲ ಪೂಜಾರಿ ಅವರು, ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರಥಮ ಕಾರ್ಯಕ್ರಮ ಬೈಂದೂರಿನಲ್ಲಿ ನಡೆಯಲಿದ್ದು, ಕಾರ್ಯಕ್ರಮದ ವೇದಿಕೆ ನಿರ್ಮಾಣ ಸೇರಿದಂತೆ ಎಲ್ಲಾ ಅಗತ್ಯ ಕಾರ್ಯಗಳನ್ನು, ಯಾವುದೇ ಲೋಪಗಳಿಲ್ಲದಂತೆ ಕೈಗೊಳ್ಳುವಂತೆ ಹಾಗೂ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ತಮಗೆ ವಹಿಸಿರುವ ಜವಾಬ್ದಾರಿಗಳನ್ನು ನಿರ್ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು, ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾರ್ವಜನಿಕರಿಗೆ ಊಟೋಪಚಾರ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ತಾ.ಪಂ. ಸದಸ್ಯ ರಾಜು ಪೂಜಾರಿ, ಲೋಕೋಪಯೋಗಿ ಇಲಾಖೆಯ ಕಾರ್ಯ ನಿರ್ವಾಹಕ ಇಂಜಿನಿಯರ್ ಚಂದ್ರಶೇಖರ್, ಕುಂದಾಪುರ ತಹಸೀಲ್ದಾರ್ ಜಿ.ಎಂ.ಬೋರ್ಕರ್,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೆಸುಗೆ ಫೌಂಡೇಶನ್ ರಿ. ಬೈಂದೂರು, ಗ್ರಾಮ ಪಂಚಾಯತ್ ಪಡುವರಿ, ಉಡುಪಿ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಸಹಯೋಗದೊಂದಿಗೆ ಬೈಂದೂರು ಸೋಮೇಶ್ವರ ಬೀಚ್‌ನಲ್ಲಿ ಡಿಸೆಂಬರ್ ೨೮ ಹಾಗೂ ೨೯ರಂದು ಬೈಂದೂರು ಬೀಚ್ ಉತ್ಸವ ಜರುಗಲಿದ್ದು, ಉತ್ಸವದ ಸಿದ್ದತೆಗಳ ಬಗ್ಗೆ ಬೆಸುಗೆ ಫೌಂಡೇಶನ್‌ನ ಅಧ್ಯಕ್ಷ ಕೆ. ವೆಂಕಟೇಶ ಕಿಣಿ ಬೈಂದೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದರು. ತಾಲೂಕು ಕೇಂದ್ರವಾಗಿ ರೂಪುಗೊಳ್ಳುತ್ತಿರುವ ಬೈಂದೂರು ಸುತ್ತಮುತ್ತಲಿನ ಪ್ರವಾಸೋದ್ಯಮ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಸರಕಾರ, ಇಲಾಖೆ, ಜನಪ್ರತಿನಿಧಿಗಳು, ಸಂಘ-ಸಂಸ್ಥೆ ಹಾಗೂ ನಾಗರಿಕರ ನಡುವಿನ ಕೊಂಡಿಯಾಗಿ ನಿಂತು ಮಾದರಿ ಪ್ರವಾಸೋದ್ಯಮ ತಾಣವನ್ನಾಗಿಸುವ ಉದ್ದೇಶದೊಂದಿಗೆ ಹುಟ್ಟಿಕೊಂಡ ’ಬೆಸುಗೆ ಫೌಂಡೇಶನ್ ರಿ. ಬೈಂದೂರು’ ಸಂಸ್ಥೆಯ ಸಾರಥ್ಯದಲ್ಲಿ ಪಡುವರಿ ಗ್ರಾಮ ಪಂಚಾಯತ್ ಹಾಗೂ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಸಹಯೋಗದೊಂದಿಗೆ ಪ್ರಪ್ರಥಮ ಭಾರಿಗೆ ಆಯೋಜನೆಗೊಂಡಿದೆ ಬೈಂದೂರು ಬೀಚ್ ಉತ್ಸವವನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರಿಂದ ಉತ್ತಮ ಸ್ಪಂದನ ದೊರೆಯುತ್ತಿದೆ ಎಂದರು. ದಿ. ೨೮ ಡಿಸೆಂಬರ್ ೨೦೧೭ರ ಗುರುವಾರ ಬೆಳಿಗ್ಗೆ ೯ ಗಂಟೆಗೆ ಗಾಳಿಪಟ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಕಿಯನ್ನು ಚಿಕಿತ್ಸೆಗಾಗಿ ಝೀರೋ ಟ್ರಾಫಿಕ್ ನಿರ್ಮಾಣ ಮಾಡಿ ಅರೆಶಿರೂರಿನಿಂದ ಮಂಗಳೂರಿಗೆ ಕರೆದೊಯ್ದು ಅಲ್ಲಿಂದ ವಿಮಾನದ ಮೂಲಕ ಬೆಂಗಳೂರಿಗೆ ಸಾಗಿಸಲಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗೊಳಿಹೊಳೆ ಗ್ರಾಮದ ಅರೆಶಿರೂರಿನ ಆರನೇ ತರಗತಿ ವಿಧ್ಯಾರ್ಥಿನಿ, ಕಪ್ಪಾಡಿ ಶಾಲೆಯ ಮುಖ್ಯಶಿಕ್ಷಕ ಸಂಜೀವ ಗೌಡ ಅವರ ಮಗಳು ಅನುಷಾ ಗೌಡ (11) ಗಂಭೀರವಾದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಕೆಲವು ದಿನಗಳ ಹಿಂದೆ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಕೆಯ ಆರೋಗ್ಯದಲ್ಲಿ ಸ್ಪಲ್ಪ ಮಟ್ಟಿನ ಸುಧಾರಣೆ ಕಂಡ ಬಳಿಕ ಡಿಸ್ಚಾರ್ಜ್ ಮಾಡಿ ಮನೆಗೆ ಕರೆದುಕೊಂಡು ಬರಲಾಗಿತ್ತು. ಆದರೆ ಆಕೆಗೆ ಮತ್ತೆ ನೋವು ಹೆಚ್ಚಾಗಿದ್ದರಿಂದ ಆರ್ಥಿಕ ಸಂಕಷ್ಟದಲ್ಲಿದ್ದ ಕುಟುಂಬ ಕರ್ನಾಟಕ ಕಾರ್ಮಿಕರ ವೇದಿಕೆ ಜಿಲ್ಲಾಧ್ಯಕ್ಷ ರವಿ ಶೆಟ್ಟಿ ಅವರನ್ನು ಸಂಪರ್ಕಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ರವಿ ಶೆಟ್ಟಿ ಬಾಲಕಿಯ ಚಿಕಿತ್ಸೆಯ ವಿವರಗಳನ್ನು ಬೆಂಗಳೂರಿನ ವೈದ್ಯರಿಗೆ ತಲುಪಿಸಿದಾಗ ಕೂಡಲೇ ಚಿಕಿತ್ಸೆಗೆ ಕರೆತಂದರೆ ಯಕೃತ್ತಿನ ಕಸಿ ಚಿಕಿತ್ಸೆ ನೀಡಬಹುದು. ಚಿಕಿತ್ಸೆಗೆ 25ಲಕ್ಷ ಹಣ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಾಗೂರು ಕುಸುಮ ಫೌಂಡೇಶನ್ ಇವರ ವಾರ್ಷಿಕ ಸಾಂಸ್ಕೃತಿಕ ಉತ್ಸವ ‘ಕುಸುಮಾಂಜಲಿ’ ಕಾರ್ಯಕ್ರಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ನಿಸ್ವಾರ್ಥ ಸಾಮಾಜಿಕ ಸೇವೆಗಾಗಿ ಕೊಡಮಾಡುವ ಪ್ರತಿಷ್ಠಿತ ‘ಕುಸುಮಶ್ರೀ ಪ್ರಶಸ್ತಿಯನ್ನು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಡೀನ್, ನಿವೃತ್ತ ಪ್ರಾಧ್ಯಾಪಕ ಪ್ರೊ. ಎ. ವಿ ನಾವಡ ಹಾಗೂ ಜಾನಪದ ಕ್ಷೇತ್ರದಲ್ಲಿನ ಸಾಧನೆಯನ್ನು ಪರಿಗಣಿಸಿ ಸಂಶೋಧಕರು ವಿಮರ್ಶಕರು ಆಗಿರುವ ಡಾ. ಗಾಯತ್ರಿ ನಾವಡ ಮಂಗಳೂರು ಇವರಿಗೆ ಪ್ರದಾನ ಮಾಡಲಾಗುತ್ತಿದೆ. ಡಿ.24 ಭಾನುವಾರ ರಾತ್ರಿ 8:30ಕ್ಕೆ ನಡೆಯುವ ‘ಕುಸುಮಾಂಜಲಿ’ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಬಳಿಕ ಮಂಗಳೂರಿನ ಅರೆಹೊಳೆ ಪ್ರತಿಷ್ಠಾನದ ‘ನಂದಗೋಕುಲ’ ತಂಡದವರಿಂದ ನೃತ್ಯ ವೈಭವ ಕಾರ್ಯಕ್ರಮ ನಡೆಯಲಿದೆ ಎಂದು ಕುಸುಮ ಸಂಸ್ಥೆಯ ಆಡಳಿತ ನಿರ್ದೇಶಕ ನಳಿನ್ ಕುಮಾರ್ ಶೆಟ್ಟಿ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು. ಸಂಸ್ಥೆಯ ಸಲಹೆಗಾರ ವೀಗನ್ ಶಂಕರನಾರಾಯಣ, ಕುಸುಮಾಂಜಲಿ ನಿರ್ದೇಶಕಿ ರೇಷ್ಮಾ ಉಪಸ್ಥಿತರಿದ್ದರು. ► ಡಿ.24ರಂದು ನಾಗೂರಿನಲ್ಲಿ ಸಾಂಸ್ಕೃತಿಕ ಉತ್ಸವ – ಕುಸುಮಾಂಜಲಿ 2017  -…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಡುಪಿ ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರನ್ನಾಗಿ ಹಿರಿಯ ಶಿಕ್ಷಣ ತಜ್ಞ, ಸಾಂಸ್ಕತಿಕ ಧುರೀಣ ಹಾಗೂ ಮಣಿಪಾಲ ಅಕಾಡಮಿ ಆಫ್ ಜನರಲ್ ಎಜುಕೇಷನ್ ಆಡಳಿತಾಧಿಕಾರಿ ಡಾ. ಎಚ್. ಶಾಂತರಾಮ್ ಅವರನ್ನು ಆಯ್ಕೆ ಮಾಡಲಾಗಿದೆ. 2018ರ ಜನವರಿ 12, 13 ಮತ್ತು 14 ರಂದು ಕಂಬದಕೋಣೆಯ ಸರಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಜರಗುವ ಈ ನುಡಿಹಬ್ಬದಲ್ಲಿ ವಿಚಾರಗೋಷ್ಠಿ, ಕವಿಗೋಷ್ಠಿ, ಸಂವಾದ, ಸಾಧಕರಿಗೆ ಸನ್ಮಾನ ಹಾಗೂ ವಿವಿಧ ಮನರಂಜನಾ ಕಾರ್ಯಕ್ರಮಗಳು ನಡೆಯಲಿವೆ. ಈ ಮೂರು ದಿನಗಳ ನುಡಿ ಜಾತ್ರೆಗೆ ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದ ಸುತ್ತಲಿನ ರಮಣೀಯ ಸ್ಥಳಗಳನ್ನು ಪರಿಚಯ, ಮುಂದಿನ ಪೀಳಿಗೆಗೆ ಸ್ಥಳೀಯ ಸಾಂಸ್ಕೃತಿಕ ಹಾಗೂ ಪಾರಂಪರಿಕ ಕಲೆಗಳನ್ನು ಪರಿಚಯಿಸುವುದರೊಂದಿಗೆ ಈ ಭಾಗದ ಪ್ರವಾಸಿ ತಾಣಗಳನ್ನು ಅಭಿವೃದ್ಧಿಗೊಳಿಸುವ ಚಿಂತನೆಯೊಂದಿಗೆ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಉಡುಪಿ ಪರ್ಬ ಹಾಗೂ ಬೀಚ್ ಉತ್ಸವದ ಭಾಗವಾಗಿ ಡಿ.29 ಹಾಗೂ 30ರಂದು ಕೋಟೇಶ್ವರ ಬೀಜಾಡಿ ಕಡಲ ಕಿನಾರೆಯಲ್ಲಿ ’ಊರ್ಮನಿ ಹಬ್ಬ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಕುಂದಾಪುರ ಕಂದಾಯ ಉಪವಿಭಾಗದ ಆಯುಕ್ತೆ ಶಿಲ್ಪಾ ನಾಗ್ ಹೇಳಿದರು. ಅವರು ಬುಧವಾರ ಮಿನಿ ವಿಧಾನಸೌಧದ ಕಛೇರಿಯಲ್ಲಿ ಜರುಗಿದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಜಿಲ್ಲಾಡಳಿತ ಹಾಗೂ ಕೋಟೇಶ್ವರ ಬೀಚ್ ಉತ್ಸವ ಸಮಿತಿ ನೇತೃತ್ವದಲ್ಲಿ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಉಡುಪಿ, ಪುರಸಭೆ ಕುಂದಾಪುರ, ಗ್ರಾಮ ಪಂಚಾಯತ್ ಬೀಜಾಡಿ, ಗ್ರಾಮ ಪಂಚಾಯತ್ ಕೋಟೇಶ್ವರಹಾಗೂ ಸ್ಥಳೀಯ ಯುವಕ ಮಂಡಲಗಳು ಸಹಕಾರದೊಂದಿಗೆ ಊರ್ಮನಿ ಹಬ್ಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಊರ್ಮನಿ ಹಬ್ಬದಲ್ಲಿ ಗಾಳಿಪಟ ಉತ್ಸವ, ವಸ್ತು ಪ್ರದರ್ಶನ, ಮರಳುಶಿಲ್ಪ ರಚನೆ, ಮಾರಾಟ ಮಳಿಗೆಗಳು ಹಾಗೂ ವಿವಿಧ ಸಾಂಸ್ಕೃತಿಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಧರ್ಮ ಪಾಲನೆ, ಸತ್ಯದ ಹಾದಿ ಹಾಗೂ ಉತ್ತಮ ನಡೆ ನುಡಿಯ ಮೂಲಕ ನಮ್ಮೊಳಗಿನ ದೇವರನ್ನು ಶುದ್ಧವಾಗಿರಿಸಿಕೊಂಡರೆ ಬದುಕಿನಲ್ಲಿ ನೆಮ್ಮದಿಯನ್ನು ಕಾಣಲು ಸಾಧ್ಯ. ನೆಮ್ಮದಿದ್ದರೆ ಆತ್ಮವಿಶ್ವಾಸ ಬೆಳೆಯುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಅವರು ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರಿಗೆ ಉಪ್ಪುಂದ ರಾಣಿಬಲೆ ಮೀನುಗಾರ ಒಕ್ಕೂಟದಿಂದ ಕೊಡಮಾಡಿದ ನೂತನ ಬೆಳ್ಳಿರಥವನ್ನು ಸಮರ್ಪಿಸಿದ ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶಿರ್ವಚನವಿತ್ತರು. ತಂದೆ ತಾಯಿ ನಮ್ಮನ್ನು ಸಲಹಿದ ರೀತಿಯಲ್ಲಿಯೇ ಪ್ರಕೃತಿಯೂ ನಮ್ಮನ್ನು ಸಲಹುತ್ತದೆ. ನಮ್ಮ ಇತಿಮಿತಿಯ ಎಲ್ಲೆ ಮೀರಿ ವರ್ತಿಸಿದರೆ ಪ್ರಕೃತಿ ವಿಕೋಪದಂತಹ ಅವಘಡಗಳು ಸಂಭವಿಸುತ್ತವೆ. ನಮ್ಮ ಪರಿಧಿಯಲ್ಲಿ ಶ್ರದ್ಧೆ, ಸತ್ಯ, ಧರ್ಮದಿಂದ ನಡೆದಾಗ ಎಲ್ಲವೂ ನಮಗೆ ಪೂರಕವಾಗಿರುತ್ತದೆ ಎಂದರು. ಯೋಚನೆ ಮಾಡಿ ದಾನ ಮಾಡಿದರೆ ಅದರಿಂದ ದೊರೆಯಬೇಕಾದ ಪುಣ್ಯಫಲ ದೊರೆಯದು. ಶ್ರಿಮಂತರು ಕಟ್ಟಿದ ದೇವಸ್ಥಾನಗಳು ಹೆಚ್ಚು ಕಾಲ ಉಳಿಯದು. ಫಲಾಪೇಕ್ಷೆ ಇಲ್ಲದ ದಾನ, ಭಕ್ತರು ಕಟ್ಟಿದ ದೇವಸ್ಥಾನ ಎಂದಿಗೂ…

Read More

ಕುಂದಾಪ್ರ ಡಾಟ್ ಕಾಂ ಲೇಖನ. ಆಕಸ್ಮಿಕಗಳು ನಡೆಯುವುದೇ ಹಾಗೆ. ಆಕಸ್ಮಿಕವಾಗಿ! ಬಹುನಿರೀಕ್ಷಿತ ‘ಕತ್ತಲೆಕೋಣೆ’ ಕನ್ನಡ ಸಿನೆಮಾದ ಶೂಟಿಂಗ್ ವೇಳೆ ಸಂಭವಿಸಿದ ಆಕಸ್ಮಿಕ ಘಟನೆಗಳು ಇಡಿ ಚಿತ್ರತಂಡವನ್ನು ಆಶ್ಚರ್ಯಕ್ಕೆ ನೂಕಿರುವುದಲ್ಲದೇ ಒಂದಿಷ್ಟು ಭಯ ಹಾಗೂ ಆತಂಕವನ್ನುಂಟುಮಾಡಿದೆ. ಒಂದು ಹಂತದಲ್ಲಿ ಅಂದುಕೊಂಡಂತೆ ನಡೆಯುತ್ತಿದ್ದ ಚಿತ್ರೀಕರಣದ ನಡುವೆಯೇ ಹಲವು ಘಟನೆಗಳು ಕೈಮೀರಿ ಘಟಿಸಿವೆ. ಶೂಟಿಂಗ್ ವೇಳೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡ ಹೊರತಾಗಿಯೂ ನಡೆದ ಇಂತಹ ಘಟನೆಗಳು ಒಂದು ತೆರನಾದ ಭಯವನ್ನು ಸೃಷ್ಠಿಸಿಬಿಟ್ಟಿವೆ. ಘಟನೆ 1 ಅದು ಕುಂದಾಪುರದ ತಾಲೂಕಿನ ಒಂದು ಕಾಡುದಾರಿ. ಸೀನ್ ಒಂದರಲ್ಲಿ ಮರದ ಮೇಲಿರಿ ನಟಿಸುತ್ತಿದ್ದ ಕಲಾವಿದ. ಇನ್ನೇನು ಆತ ಕೆಳಕ್ಕಿಳಿಬೇಕು ಎಂಬಷ್ಟರಲ್ಲಿ ಹಠಾತ್ತನೆ ಮರದ ಕೊಂಬೆಯೇ ತುಂಡಾಯಿತು. ನೋಡನೋಡುತ್ತಿದ್ದಂತೆಯೇ ಕೊಂಬೆಯೊಂದಿಗೆ ೮ ಅಡಿ ಎತ್ತರದಿಂದ ಆತ ನೆಲಕ್ಕುರುಳಿದ. ಅಷ್ಟು ಮೇಲಿಂದ ಬಿದ್ದರೂ ಅದೃಷ್ಟವಶಾತ್ ಆತ ಅಪಾಯದಿಂದ ಪಾರಾಗಿದ್ದ! ಸಾಕಷ್ಟು ಮುಂಜಾಗೃತಾ ಕ್ರಮ ಕೈಗೊಂಡಿದ್ದರೂ ಇಂತಹದ್ದೊಂದು ಅವಘಡ ಸಂಭವಿಸಿಬಿಟ್ಟಿತ್ತು. ಎಲ್ಲವನ್ನೂ ಪರೀಕ್ಷಿಸಿದ ಬಳಿಕವಷ್ಟೇ ಮರವೇರಿದ್ದರೂ ಕೊಂಬೆ ಮುರಿದ್ದದ್ದು ಹೇಗೆ ಎಂಬುದು ಮಾತ್ರ ಚಿತ್ರತಂಡವನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನೂರಿಪ್ಪತ್ತೈದು ವರ್ಷದ ಹಿಂದೆ ಸ್ವಾಮೀ ವಿವೇಕಾನಂದರ ಸಿಂಹ ನುಡಿಯ ಮೂಲಕ ವಿದೇಶಿಯರು ಭಾರತ ನೋಡುವ ದೃಷ್ಟಿ ಬದಲಾಯಿತು. ಇದೇ ವಿವೇಕವಾಣಿಯ ಪ್ರೇರಣೆಯಿಂದ ಇಂದು ಭಾರತಕ್ಕೆ ಧಮ್ಕಿ ಹಾಕುವ ದೇಶಗಳಿಗೆ ತಿರುಗೇಟು ನೀಡುವಷ್ಟು ಸಾಮರ್ಥ್ಯ ದೇಶಹೊಂದಿದೆ ಎಂದು ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅಭಿಪ್ರಾಯಪಟ್ಟರು. ಮತ್ತೊಮ್ಮೆ ದಿಗ್ವಿಜಯ ವಿವೇಕಾನಂದರ ಭಾರತದಲ್ಲಿ ಕಾರ‍್ಯಾಚರಣೆ ವಿಚಾರ ಗೋಷ್ಠಿಯಲ್ಲಿ ಮಾತನಾಡಿ, ಮತ್ತೊಮ್ಮೆ ವಿವೇಕವಾಣಿಯಿಂದ ಯುವ ಸಮಾಜ ಜಾಗೃತವಾಗಿದೆ. ಇದರ ಹಿನ್ನೆಲೆಯಲ್ಲಿ ಈ ಬದುಕು ದೇಶಕ್ಕಾಗಿ ಎಂಬ ವಿವೇಕಾನಂದ ಜೀವನ ಮೌಲ್ಯವಿದೆ ಎಂದು ಹೇಳಿದರು. ಸ್ವಾತಂತ್ರ ಪೂರ್ವದ ಕ್ರಾಂತಿಕ್ರಾರಿಗಳ ಪಟ್ಟಿಯಲ್ಲಿ ವಿವೇಕಾನಂದ ಮೊದಲ ಸ್ಥಾನದಲ್ಲಿದ್ದು ಅವರಲ್ಲಿ ಒಬ್ಬ ಕ್ರಾಂತಿಕಾರಿ ಹುಟ್ಟಿಕೊಂಡಿದ್ದ. ದೇಶದ ದಾಸ್ಯ ಮುಕ್ತಿಗೆ ವಿವೇಕಾನಂದ ದೇಶ ಸುತ್ತಿ ಮಾಡಿದ ಭಾಷಣ ಜಾಗೃತಿ ಮೂಡಿಸಿ, ಸಮಾಜದಲ್ಲಿ ಸ್ವಾತಂತ್ರ್ಯದ ಕಿಚ್ಚು ಹಚ್ಚಿದರು ಎಂದು ಹೇಳಿದರು. ವಿವೇಕಾನಂದರನ್ನು ಶ್ರೇಷ್ಟ ಬುದ್ದಿವಂತ ಎಂದು ವಿಶ್ವವೇ ಒಪ್ಪಿಕೊಳ್ಳುವಂತೆ ಅವರ ಚಿಕಾಗೋ ಬಾಷಣ ಮಾಡಿದರೆ, ಸದಾ ದೇಶದ ಬಗ್ಗೆ ಚಿಂತಿಸುತ್ತಿದ್ದರು.…

Read More