ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜೀವನದಲ್ಲಿ ನಿರಂತರ ಉತ್ಸಾಹ, ಧನತ್ಮಕವಾದ ಚಿಂತನೆಗಳಿದ್ದರೆ. ಅಂತಹವರಿಗೆ ದೇವರ ಸಹಾಯವಿರುತ್ತದೆ. ಆದ್ದರಿಂದ ಯುವಜನತೆ ಸಮಾಜದ ಹಾಗೂ ಊರಿನ ಅಭಿವೃದ್ಧಿಯ ಪರ ದಿಕ್ಕು ಬದಲಾಯಿಸುವ ಉದ್ದೇಶದಿಂದ ಯಾವುದೇ ಉದ್ಯಮ, ವ್ಯವಹಾರ ಮಾಡುವಂತಾಗಲು ಧೈರ್ಯದಿಂದ ಮುಂದುವರಿದಾಗ ಮಾತ್ರ ಖಂಡಿತವಾಗಿಯೂ ಯಶಸ್ಸು ದೊರಕುವುದು ಎಂದು ನಿವೃತ್ತ ಬ್ರಿಗೇಡಿಯರ್ ಮಂಗಳೂರಿನ ಐ. ಎನ್. ರೈ ಹೇಳಿದರು. ಬೈಂದೂರು ಶ್ರೀ ಮೂಕಾಂಬಿಕಾ ರೈಲ್ವೆ ನಿಲ್ದಾಣದ ಬಳಿ ನೂತನವಾಗಿ ನಿರ್ಮಾಣಗೊಂಡ ಹೊಟೇಲ್ ಅಂಬಿಕಾ ಇಂಟರ್ನ್ಯಾಶನಲ್ ಹೋಟೆಲನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು. ೩೪ವರ್ಷಗಳ ಕಾಲ ನನ್ನನ್ನು ದೇಶಕ್ಕಾಗಿ ಸಮರ್ಪಣೆ ಮಾಡಿಕೊಂಡಿದ್ದೇನೆ. ಸಮಾಜದಲ್ಲಿ ಉತ್ತಮ ಕೆಲಸ ಮಾಡಿದವರಿಗೆ ಮನ್ನಣೆ ದೊರೆಯುತ್ತದೆ ಎನ್ನುವುದಕ್ಕೆ ಇದು ಉತ್ತಮ ನಿದರ್ಶನವಾಗಿದೆ. ದೇಶದ ಲಕ್ಷಾಂತರ ಸೈನಿಕರ ಆಶೀರ್ವಾದ ಈ ಹೊಟೇಲ್ ಮೇಲಿರಲಿದೆ ಎಂದು ಶುಭಹಾರೈಸಿದರು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್, ಹೋಟೆಲ್ನ ಸಂಪೂರ್ಣ ಹವಾನಿಯಂತ್ರಿತ ಶಾರದಾ ಕನ್ವೆನ್ಸನ್ ಹಾಲ್ ಉದ್ಘಾಟಿಸಿ, ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿ,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ವೆಂಕಟರಮಣ ಪಿಯು ಕಾಲೇಜ್ ಪಿಸಿಎಂಸಿ ವಿದ್ಯಾರ್ಥಿನಿ ಸತ್ಯಶ್ರೀ ರಾವ್ ವಿಜ್ಞಾನ ವಿಭಾಗದಲ್ಲಿ ಒಟ್ಟು 593ಅಂಕ ಪಡೆದ ರಾಜ್ಯದಲ್ಲಿ ನಾಲ್ಕನೇ ಸ್ಥಾನ ಪಡೆದು ಉತ್ತೀರ್ಣಳಾಗಿದ್ದಾಳೆ. ಇಂಗ್ಲೀಷ್ನಲ್ಲಿ 93 ಅಂಕ ಬಿಟ್ಟರೆ ಉಳಿದಿದ್ದರಲ್ಲಿ ನೂರರ ಸಾಧನೆ. ವಿಶೇಷವೆಂದರೆ ಯಾವ ಶಾಲೆಯಲ್ಲಿ ತಂದೆ ಚಾಲಕರಾಗಿ ದುಡ್ಡಿಯುತ್ತಿದ್ದರೋ ಅದೇ ಶಾಲೆಯಲ್ಲಿ ಕಲಿತ ಮಗಳು ರಾಜ್ಯಕ್ಕೆ ನಾಲ್ಕನೇ ಟಾಪರ್ ಆಗಿದ್ದಾರೆ. ಕುಂದಾಪುರ ಅಂಕದಕಟ್ಟೆ ನಾಗೇಶ್ ರಾವ್ ಹಾಗೂ ಲಲಿತಾ ಎನ್.ರಾವ್ ಇಬ್ಬರು ಹೆಣ್ಣು ಮಕ್ಕಳಲ್ಲಿ ಸತ್ಯಾಶ್ರೀ ಎರಡನೆಯವಳು. ಪ್ರತಿಭಾವಂತ ವಿದ್ಯಾರ್ಥಿನಿ ಅಕ್ಕ ಶೈಲಶ್ರೀ ಕುಂದಾಪುರ ಭಂಡಾರ್ಕಾರ್ಸ್ ಕಾಲೇಜ್ ಬಿಎಸ್ಸಿ ವಿದ್ಯಾರ್ಥಿನಿ. ಕುಂದಾಪ್ರ ಡಾಟ್ ಕಾಂಗೆ ಸತ್ಯಾಶ್ರೀ ಪ್ರತಿಯಿಸಿ ದಿನಕ್ಕೆ ಮೂರು ಗಂಟೆ ಓದುತ್ತಿದ್ದು, ಓದಲಿಕ್ಕಾಗಿಯೇ ಸಮಯ ನಿಗಧಿ ಮಾಡಿಕೊಳ್ಳುತ್ತಿರಲಿಲ್ಲ. ಮನೆಯಲ್ಲಿ ಕೂಡಾ ಓದುವಂತೆ ಒತ್ತಡ ಹೇರುತ್ತಿರಲಿಲ್ಲ. ಓದಿನೊಟ್ಟಿಗೆ ತ್ರೋ ಬಾಲ್ ಹಾಗೂ ಡಾನ್ಸ್ ಬಗ್ಗೆಯೂ ಗಮನ ಹರಿಸುತ್ತಿದ್ದೆ. ಇನ್ನೂ ಒಂದೆರಡು ಹೆಚ್ಚು ಅಂಕ ನೀರೀಕ್ಷಿಸಿದ್ದು, ಅಂಗ್ಲಾ ಭಾಷೆಯಲ್ಲಿ ನಾನು ಎಣಿಸಿದ್ದಕ್ಕಿಂತ ಕಡಿಮೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಆರ್.ಎನ್.ಶೆಟ್ಟಿ ಪಿಯು ಕಾಲೇಜಿನ ವಿದ್ಯಾರ್ಥಿ ವೆಂಕಟೇಶ್ ಪುರಾಣಿಕ್ ದ್ವಿತೀಯ ಪಿಯುಸಿ ಕಾಮರ್ಸ್ ವಿಭಾಗದಲ್ಲಿ 600ಕ್ಕೆ 593 ಅಂಕ ಪಡೆದು ರಾಜ್ಯಕ್ಕೆ ಎರಡನೇ ಸ್ಥಾನ ಪಡೆದುಕೊಂಡಿದ್ದಾನೆ. ಸ್ಟ್ಯಾಟ್-100, ಎಕನಾಮಿಕ್ಸ್-99, ಬಿಜಿನೆಸ್-100, ಅಕೌಂಟೆನ್ಸಿ-100, ಸಂಸ್ಕೃತ100 ಹಾಗೂ ಇಂಗ್ಲೀಷ್ 96 ರಷ್ಟು ಅಂಕ ಪಡೆದುಕೊಂಡಿದ್ದಾನೆ. ಕುಂದಾಪುರ ತಾಲೂಕು ಬಸ್ರೂರು ಮಾರ್ಗೋಳಿ ಸುಬ್ರಹ್ಮಣ್ಯ ಪುರಾಣಿಕ ಹಾಗೂ ಅನ್ನಪೂರ್ಣ ಪುರಾಣಿಕ್ ಇಬ್ಬರು ಮಕ್ಕಳಲ್ಲಿ ವೆಂಕಟೇಶ್ ಹಿರಿಯ ಮಗ. ತಂಗಿ ವೈಷ್ಣವಿ ಬಸ್ರೂರು ಸರ್ಕಾರಿ ಪ್ರೌಢಶಾಲೆಯಲ್ಲಿ ೮ನೇ ತರಗತಿ ವಿದ್ಯಾರ್ಥಿ. ಬಸ್ರೂರು ಸರ್ಕಾರಿ ಪೌಢಶಾಲೆಯಲ್ಲಿ ಎಸ್ಎಸ್ಎಲ್ಸಿಯಲ್ಲಿ 625ಕ್ಕೆ 622 ಅಂಕ ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಪಾಸಾಗಿದ್ದು ವೆಂಕಟೇಶ್ ಹಿಂದಿನ ಸಾಧನೆ. ಕುಂದಾಪ್ರ ಡಾಟ್ ಕಾಂಗೆ ವೆಂಕಟೇಶ್ ಪ್ರತಿಕ್ರಿಯಿಸಿ ದಿನಕ್ಕೆ ಮೂರು ಗಂಟೆ ಓದ್ತೆ. ಮನೆಯಲ್ಲಿ ಪೂಜೆ ಪುನಸ್ಕಾರ ಮಾಡಿ ಶಾಲೆಗೆ ಹೋತೆ. ಪ್ರಬಂಧ, ಕ್ವಿಜ್ ನಂಗೆ ತುಂಬಾ ಇಷ್ಟ ಆತ್ತೂ.. ಓದೂಕೆ ಅಂತ ಹಟಕ್ಕೆ ಬಿದ್ ಓತ್ತಿಲ್ಲೆ.. ಶಾಲೀಲಿ ಮಾಸ್ತರು ಹೇಳಿದ್ದೇ ಸಾಕಾತ್ತು..…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಆರ್.ಎನ್.ಶೆಟ್ಟಿ ಪಿಯು ಕಾಲೇಜ್ ವಿದ್ಯಾರ್ಥಿ ವಿವೇಕ್ ಗಿರಿಧರ ಪೈ ಹೆಚ್. ವಿಜ್ಞಾನ ವಿಭಾಗದಲ್ಲಿ ಒಟ್ಟು 590 ಅಂಕ ಪಡೆದ ಪಾಸಾಗಿದ್ದಾರೆ. ಮಂಗಳೂರು ಕೆಎಸ್ಸಾಆರ್ಟಿಸಿ ಡಿಪೋದಲ್ಲಿ ಅಧಿಕಾರಿಯಾಗಿರುವ ಗಿರಿಧರ ಪೈ ಹೆಚ್. ಹಾಗೂ ಕುಂದಾಪುರ ಭಂಡಾರ್ಕಾರ್ಸ್ ಕಾಲೇಜ್ ಹೆಚ್ಒಡಿ ಹೆಡ್ ಗಾಯತ್ರಿ ಪೈ ಏಕೈಕ ಪುತ್ರ ಗಿರಿಧರ್ ಒಟ್ಟು 595ರಷ್ಟು ಅಂಕ ನೀರೀಕ್ಷಿಸಿದ್ದು, ನಿರೀಕ್ಷಿತ ಅಂಕ ಬಾರದ ಬಗ್ಗೆ ನಿರಾಸೆಯೇನು ಇಲ್ಲ. ಮುಂದೆ ಎಂಬಿಬಿಎಸ್ ಮಾಡಿ ಡಾಕ್ಟರ್ ಆಗಬೇಕು ಎನ್ನೋದು ನನ್ನ ಗುರು ಎಂದು ವಿಜಯವಾಣಿ ತಿಳಿಸಿದ್ದಾನೆ. ಓದಿನೊಟ್ಟಿಗೆ ಕ್ರಿಕೆಟ್ ಹಾಗೂ ಫುಟ್ಬಾಲ್ ಕ್ರೀಡೆ ಬಗ್ಗೆ ಆಸಕ್ತಿ ಇರುವ ವಿವೇಕ್ ಎಸ್ಸೆಸ್ಎಲ್ಸಿಯಲ್ಲಿ ಒಟ್ಟು 622 ಅಂಕ ಪಡೆದು ಉತ್ತೀರ್ಣರಾಗಿದ್ದ. ಮಗನ ಸಾಧನೆ ಬಗ್ಗೆ ತಂದೆ ಗಿರಿಧರ್ ಹಾಗೂ ತಾಯಿ ಗಾಯತ್ರಿ ಅವರಿಗೆ ತೃಪ್ತಿಯಿದ್ದು, ಮುಂದಿನ ಆಯ್ಕೆ ಅವನಿಗೆ ಬಿಟ್ಟಿದ್ದು ಎಂದು ಅವರು ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಇಂದಿನ ತಂತ್ರಜ್ಞಾನ ಯುಗದಲ್ಲಿ ಶಾಂತಿಯುತವಾದ ಹಾಗೂ ಅಹಿಂಸಾ ನೀತಿಯ ಮೌಲ್ಯಾಧಾರಿತ ಜೀವನಶೈಲಿ ವಿರಳವಾಗಿದ್ದು, ಯುವಜನತೆ ಸೋಷಿಯಲ್ ಮೀಡಿಯಾದ ಹೆಚ್ಚು ಉಪಯೋಗದಿಂದ ಸಾಮಾಜಿಕ ಮೌಲ್ಯಗಳನ್ನು ಕಳೆದುಕೊಳ್ಳುತ್ತಿರುವುದು ವಿಷಾದನೀಯ ಎಂದು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿವಂದನೀಯ ಲಾರೆನ್ಸ್ ಮುಕ್ಕುಯಿ ಹೇಳಿದರು. ಬೈಂದೂರು ಗ್ರಾಪಂ ವ್ಯಾಪ್ತಿಯ ಕಲ್ಮಕ್ಕಿಯಲ್ಲಿ ನೂತನ ನಿರ್ಮಾಣದ ಸಂತ ಸೆಬಾಸ್ಟಿಯನ್ ಸಮದಾಯ ಭವನವನ್ನು ಭಾನುವಾರ ಸಂಜೆ ಉದ್ಘಾಟಿಸಿ ಆಶೀರ್ವಚನ ನೀಡಿದರು. ಸಮಾಜದಲ್ಲಿ ತಮ್ಮ ಮಕ್ಕಳಿಗೆ ಕೇವಲ ಶಿಕ್ಷಣ ಹಾಗೂ ಉತ್ತಮ ಉದ್ಯೋಗದ ಬಗ್ಗೆ ಮಾತ್ರ ಹೆತ್ತವರು ಕಾಳಜಿವಹಿಸುತ್ತಾರೆ. ಆದರೆ ಜೀವನದ ಸಾರ್ಥಕತೆ ಕುರಿತು ಯಾರಲ್ಲೂ ಚಿಂತನೆ ಇಲ್ಲ. ನಿರ್ದಿಷ್ಟವಾದ ಗುರಿ, ಚೌಕಟ್ಟು ಬದುಕಿಗೆ ಇಲ್ಲವಾದರೆ ಜೀವನದ ಅರ್ಥವೇ ಕೆಟ್ಟು ಹೋಗುತ್ತದೆ. ಯೇಸುಕ್ರಿಸ್ತರ ಭೋಧನೆಯಂತೆ ಮನುಷ್ಯ ಮನುಷ್ಯರ ನಡುವೆ ಬಾಂದ್ಯವ ವೃದ್ಧಿಸಬೇಕು. ಪ್ರೀತಿ ವಿಶ್ವಾಸಗಳಿಂದ ಬಾಳಬೇಕು. ಇಂತಹ ಸೌಹಾರ್ದತೆ ಪರಿಸರ ನಿರ್ಮಾಣವಾದಾಗ ಮಾತ್ರ ಮಕ್ಕಳು ಕೂಡಾ ಭವಿಷ್ಯದಲ್ಲಿ ಉತ್ತಮ ವ್ಯಕ್ತಿಗಳಾಗಲು ಸಾಧ್ಯವಿದೆ ಎಂದರು. ರೆ. ಫಾ. ಜೋಜಿ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಉತ್ಸವಕ್ಕೆ ಬರುವಂತೆ ಮತದಾನಕ್ಕೆ ಕೇಂದ್ರಕ್ಕೆ ಮತದಾರರು ಬರಬೇಕು. ಜಾತ್ರೆ ಉತ್ಸವ, ಹಬ್ಬ-ಹರಿದಿನಗಳಲ್ಲಿ ಜನ ಹೇಗೆ ಉತ್ಸಾಹದಲ್ಲಿ ಪಾಲ್ಗೊಳ್ಳುತ್ತಾರೋ ಹಾಗೆ ಮತದಾನದಲ್ಲಿ ಪಾಲ್ಗೊಳ್ಳಬೇಕು. ಸರದಿ ರಹಿತ, ಪಿಂಕ್, ವಿಕಲಚೇತನ, ಯುವ,ಹಿರಿಯ ನಾಗರಿಕ ಮತಗಟ್ಟೆಗಳ ಮೂಲಕ ಮತದಾನ ಶೇ.ಹೆಚ್ಚಳಕ್ಕೆ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ. ನಗುತಾ ನಗುತಾ ಬನ್ನಿ..ಮತದಾನ ಮಾಡಿ.. …ಹೀಗೆ ಹೇಳಿದವರು ಕುಂದಾಪುರ ಚುನಾವಣೆ ಅಧಿಕಾರಿ ಟಿ.ಭೂಬಾಲನ್. ಕುಂದಾಪುರ ಮಿನಿ ವಿಧಾನ ಸೌಧ ಎಸಿ ಕೋರ್ಟ್ ಹಾಲ್ನಲ್ಲಿ ಶನಿವಾರ ನಡೆದ ಎಲೆಕ್ಟ್ರಾನಿಕ್ ಮತಯಂತ್ರ ಪ್ರಾತ್ಯಕ್ಷಕೆಯಲ್ಲಿ ಮಾತನಾಡಿ, ಕುಂದಾಪುರ ಮಧುಸೂಧನ ಕುಶೆ ಸರ್ಕಾರಿ ಪ್ರೌಢಶಾಲೆ, ಕೋಣಿ ಗ್ರಾಮ ಮೇಲ್ಕಟ್ಕೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಿಂಕ್ ಮತಘಟ್ಟೆಯಾಗಿದ್ದು, ಸಿಬ್ಬಂದಿಯಿಂದ ಹಿಡಿದು ಪೊಲೀಸ್ ತನಕ ಎಲ್ಲರೂ ಮಹಿಳೆಯರೇ ಆಗಿದ್ದಾರೆ. ಮಹಿಳಾ ಮತದಾರರು ಹೆಚ್ಚಿರುವ ನಿಮಿತ್ತ ಈ ಎರಡು ಮತಘಟ್ಟೆ ಪಿಂಕಾಗಿದೆ ಎಂದು ತಿಳಿಸಿದರು. ವಿಕಲಚೇತನರಿಗೆ ರ್ಯಾಂಪ್ ಇರುವ ಮತಘಟ್ಟೆ ತೆರೆಯಲಾಗಿದ್ದು, ಹಿರಿಯ ನಾಗರಿಕರಿಗೆ ಪ್ರತ್ಯೇಕ ಮತಘಟ್ಟೆ ಒಂದಿದ್ದು, ಅವರನ್ನು ಕರೆತಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಮರವಂತೆಯ ಮೀನುಗಾರರ ಸೇವಾ ಸಮಿತಿ ಮತ್ತು ಶ್ರೀರಾಮ ಮಂದಿರ ಸಮಿತಿಯ ಮುಂದಿನ ಮೂರು ವರ್ಷಗಳ ಅವಧಿಯ ಅಧ್ಯಕ್ಷರಾಗಿ ಎಂ. ಮೋಹನ ಖಾರ್ವಿ ಆಯ್ಕೆಯಾಗಿದ್ದಾರೆ. ಮೀನುಗಾರ ಮುಖಂಡರಾಗಿರುವ ಅವರು ಮರವಂತೆ ಗ್ರಾಮ ಪಂಚಾಯಿತಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಆದಿ ಶಂಕರರು ಜ್ಞಾನದ ಪರಾಕಾಷ್ಠೆಯ ಕುರಿತು ವಾದಿಸುತ್ತಲೇ ಆ ಜ್ಞಾನ ಪ್ರಾಪ್ತಿಗೆ ಭಗವತ್ ಕೃಪೆ ಹೊಂದಲು ಭಕ್ತಿರಸ ಭರಿತ ಸ್ತೋತ್ರ ಸಾಹಿತ್ಯದ ಭಂಡಾರವನ್ನೇ ಸೃಷ್ಟಿಸಿದರು. ಭಕ್ತಿ ಮತ್ತು ಜ್ಞಾನ ಊರ್ಧ್ವಮಖಗಮನಕ್ಕೆ ಎರಡು ರೆಕ್ಕೆಗಳಿದ್ದಂತೆ ಎಂದು ತತ್ತ್ವ ಜ್ಞಾನಿಗಳ ದಿನಾಚರಣೆ – ಶಂಕರ ಭಗವತ್ಪಾದಕರ ಜಯಂತಿ ಉತ್ಸವಾಚರಣೆಯ ಸರಣಿ ಕಾರ್ಯಕ್ರಮದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ ಸಾಹಿತಿ ಉಪ್ಪುಂದ ಚಂದ್ರಶೇಖರ ಹೊಳ್ಳ ತಿಳಿಸಿದರು. ಸಮಾರೋಪ ಭಾಷಣ ಗೈದ ಸುವಿಚಾರ ಬಳಗ ಟ್ರಸ್ಟ್ ರಿ. ನ ಅಧ್ಯಕ್ಷ ಬಿ. ರಾಮಕೃಷ್ಣ ಶೇರುಗಾರ ಮಾತನಾಡುತ್ತ ಆಧ್ಯಾತ್ಮ – ತತ್ತ್ವ ಜ್ಞಾನಿಗಳಲ್ಲಿ ಆಸಕ್ತ ಜನರ ಸಂಖ್ಯೆ ಸೀಮಿತವಾಗಿದ್ದರೂ, ಅಂಧಕಾರದಲ್ಲಿ ದೀಪ ಭೆಳಗುವಂತೆ ಅಂಥವರ ಪ್ರಭಾವ ಅಪಾರವಾಗಿರುತ್ತದೆ. ’ಸಜ್ಜನರ ಸಂಘ ಹೆಜ್ಜೇನು ಸವಿದಂತೆ’ ಎಂಬ ನುಡಿಯಂತೆ ಜೀವನ ಮೌಲ್ಯಗಳನ್ನು ಪಾಲಿಸುತ್ತ ಗುರಿಯತ್ತ ಸಾಗುವುದರಿಂದ ಜನಕಲ್ಯಾಣ ಸಾಧ್ಯ ಎಂದರು. ಶಂಕರ ಜಯಂತಿಯ ಪ್ರಯುಕ್ತ ಶಂಕರ ತತ್ತ್ವ- ಆದರ್ಶಗಳ ಕುರಿತು ಪಡುವರಿ ಪಂಚಲೀಗೇಶ್ವರೀ ದೇವಸ್ಥಾನದ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಮರವಂತೆಯ ಆಸರೆ ಚಾರಿಟಬಲ್ ಟ್ರಸ್ಟ್ ಅಲ್ಲಿನ ಸಾಧನಾ ಸಮುದಾಯ ಭವನದ ವಿ. ಕೆ. ಕಾಮತ್ ಸಭಾಗೃಹದಲ್ಲಿ ಒಂದು ವಾರದ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಟ್ರಸ್ಟ್ನ ಅಧ್ಯಕ್ಷ ಸತೀಶ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಶುಭಾಶಂಸನೆ ಮಾಡಿದ ನಿವೃತ್ತ ಶಿಕ್ಷಕ ಎಂ. ಶಂಕರ ಬಿಲ್ಲವ ಬೇಸಿಗೆ ಶಿಬಿರದಲ್ಲಿ ಮಕ್ಕಳ ಬದುಕಿನ ಮೌಲ್ಯ ವೃದ್ಧಿಗೆ ಪೂರಕವಾದ ವಿಚಾರ ಮತ್ತು ಕೌಶಲ್ಯಗಳನ್ನು ಕಲಿಯಲು ಸಾಧ್ಯವಾಗುತ್ತದೆ. ಅವರು ಉತ್ತಮ ಪ್ರಜೆಗಳಾಗಿ ರೂಪುಗೊಂಡು ಸಮಾಜಕ್ಕೆ ಒಳಿತು ಮಾಡುವಂತಾಗಲಿ ಎಂದರು. ಶಿಬಿರಾರ್ಥಿಗಳು ಅನಿಸಿಕೆ ವ್ಯಕ್ತಪಡಿಸಿದರಲ್ಲದೆ ಯೋಗ ಪ್ರದರ್ಶನ ನೀಡಿದರು. ಎಲ್ಲರಿಗೆ ಪ್ರಮಾಣಪತ್ರ ವಿತರಿಸಲಾಯಿತು. ಟ್ರಸ್ಟಿ ಕರುಣಾಕರ ಆಚಾರ್ ಸ್ವಾಗತಿಸಿದರು. ರಾಜೇಶ್ ಆಚಾರ್ ವಂದಿಸಿದರು. ಸತೀಶ ಮಧ್ಯಸ್ಥ ನಿರೂಪಿಸಿದರು. ಸಾಧನಾ ಅಧ್ಯಕ್ಷ ಚಂದ್ರಗುಪ್ತ ಖಾರ್ವಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ದಯಾನಂದ ಬಳೆಗಾರ್, ಮೀನುಗಾರರ ಸೇವಾ ಸಮಿತಿಯ ಅಧ್ಯಕ್ಷ ಮೋಹನ ಖಾರ್ವಿ, ಯೋಗ ಶಿಕ್ಷಕ ಸುಬ್ಬಯ್ಯ ದೇವಾಡಿಗ, ಶಿಬಿರದ ನಿರ್ದೇಶಕ ಮಹಾಬಲ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು : ಇಲ್ಲಿನ ರಂಗ ಸುರಭಿಯ ಆಶ್ರಯದಲ್ಲಿ ನದೆಯತ್ತಿರುವ 10 ದಿನಗಳ ಚಿಣ್ಣರ ರಂಗ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಬೈಂದೂರಿನ ರೋಟರಿ ಭವನದಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೈಂದೂರು ಹಿರಿಯ ನಾಗರಿಕ ವೇದಿಕೆಯ ಅಧ್ಯಕ್ಷ ನಿವೃತ ವಿಜಯ ಬ್ಯಾಂಕ್ ಅಧಿಕಾರಿ ರೋ. ವಸಂತ ಹೆಗ್ಡೆ ವಹಿಸಿದ್ದು ರಂಗಸುರಭಿಯ ಚಿಣ್ಣರ ರಂಗ ಚಟುವಟಿಕೆಗೆ ಶುಭ ಹಾರೈಸಿದರು. ಸಮಾರೋಪ ನುಡಿಗಳನ್ನಾಡಿದ ರಂಗ ನಿರ್ದೇಶಕ ಡಾ || ಶ್ರೀ ಪಾದ್ ಭಟ್ ರವರು ಪಾಲಕರು ತಮ್ಮ ಮಕ್ಕಳ ಜೀವನವನ್ನು ಮುಮ್ಮುಖವಾನ್ನಾಗಿಸಬೇಕೆ ಹೊರತು ಹಿಮ್ಮುಖವಾಗಿಸಬಾರದು ಎಂದರು. ಮುಖ್ಯ ಅತಿಥಿಯಾಗಿ ರೋಟರಿಯ ಮಾಜಿ ಸಹಾಯಕ ಗವರ್ನರ್ ಜೀವ ವಿಮಾ ಅಧಿಕಾರಿ ರೋ. ಸೋಮನಾಥನ್ ರವರು ಶುಭ ಹಾರೈಸಿದರು. ಶಿಬಿರದ ರಂಗ ನಿರ್ದೇಶಕಿ ಕು || ಅಕ್ಷತಾ ಶಿವಮೊಗ್ಗ ವೇದಿಕೆಯಲ್ಲಿ ಉಪಸ್ಥಿತರಿದ್ದು ಸುರಭಿಯ ಅಧ್ಯಕ್ಷ ಶಿವರಾಮ ಕೊಠಾರಿಯವರು ಸ್ವಾಗತಿಸಿ, ಕಾರ್ಯದರ್ಶಿ ಲಕ್ಷ್ಮಣ. ವೈ. ಕೊರಗ ವಂದಿಸಿ ಸುರಭಿಯ ನಿದೇರ್ಶಕ ಸುಧಾಕರ . ಪಿ.…
