Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಂಕೋಲಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಡಸ್ಟರ್ ಕಾರು ಹಾಗೂ ಟ್ಯಾಂಕರ್ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಕುಂದಾಪುರ ಟಿ.ಟಿ ರಸ್ತೆಯ ನಿವಾಸಿ ಗುರುರಾಜ ಪೂಜಾರಿ (29) ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಕುಂದಾಪುರದ ಕಂಪ್ಯೂಟರ್ ಸೆಂಟರೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಗುರುರಾಜ್, ಮಂಗಳವಾರ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾಕ್ಕೆ ಕೆಲಸದ ನಿಮಿತ್ತ ಸ್ನೇಹಿತನೊಂದಿಗೆ ತೆರಳಿ ಕುಂದಾಪುರಕ್ಕೆ ಮರುಳುತ್ತಿರುವಾಗ ಅಂಕೋಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಡಸ್ಟರ್ ಕಾರು ಹಾಗೂ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿತ್ತು. ಅಫಘಾತದ ತೀವ್ರತೆಗೆ ಟ್ಯಾಂಕ್ ಮಗುಚಿ ಬಿದ್ದು ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿತ್ತು. ಕಾರು ಚಲಾಯಿಸುತ್ತಿದ್ದ ಗುರುರಾಜ್ ಗೆ ಗಂಭೀರ ಗಾಯಗಳಾಗಿ ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಅಲ್ಲಿಂದ ಮಣಿಪಾಲಕ್ಕೆ ಕೊಂಡೊಯ್ದು ತೀವ್ರ ನಿಗಾ ಘಟಕದಲ್ಲಿರಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ಶುಕ್ರವಾರ ರಾತ್ರಿ ಮೃತಪಟ್ಟಿದ್ದರು. ಕಾರಿನಲ್ಲಿದ್ದ ಸ್ನೇಹಿತ ಅಪಘಾತದಿಂದ ಪಾರಾಗಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ ಟಿ.ಟಿ ರಸ್ತೆಯ ಆನಂದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ-66ರ ಇಕ್ಕೆಲಗಳಲ್ಲಿರುವ ಎರಡು ವಾಣಿಜ್ಯ ಸಂಕೀರ್ಣಗಳ 6 ಅಂಗಡಿಗಳಿಗೆ, ಹಾಗೂ ಸಮೀಪದ ದೇವಸ್ಥಾನದ ಪಕ್ಕದಲ್ಲಿರುವ ಇರುವ ಒಂದು ಅಂಗಡಿಗೆ ಕನ್ನ ಹಾಕಿರುವ ಕಳ್ಳರ ತಂಡ ಚಿನ್ನದಂಗಡಿಯ 2 ಕೆ.ಜಿ ಬೆಳ್ಳಿ ಸೇರಿದಂತೆ ಸುಮಾರು ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತುಗಳನ್ನು ಕದ್ದೊಯ್ದಿದ್ದು, ಈ ಕುಕೃತ್ಯ ಅಂಗಡಿಗಳಿಗೆ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೆದ್ದಾರಿ ಬದಿಯ ಅಂಗಡಿಗಳನ್ನು ಗುರಿಯಾಗಿಸಿಕೊಂಡು ಕಳ್ಳತನಕ್ಕೆ ಮುಂದಾಗಿದ್ದ 6 ಜನರ ತಂಡ ಹೈಡ್ರೋಲಿಕ್ ಜಾಕ್ ಬಳಸಿ ಶಟರ್ ಮುರಿದು ಒಳನುಗ್ಗಿದ್ದಾರೆ ಎನ್ನಲಾಗಿದ್ದು, ಮೆಡಿಕಲ್ ಶಾಪ್ ಹಾಗೂ ಒಂದು ಕಾಂಪ್ಲೆಕ್ಸ್ ನಲ್ಲಿ ಹಾಕಲಾಗಿದ್ದ ಸಿಸಿ ಟಿವಿಯಲ್ಲಿ ಕಳ್ಳರ ಚಲನವಲನವನ್ನು ಗುರುತಿಸಲಾಗಿದೆ. ಕಳ್ಳರು ತೆಕ್ಕಟ್ಟೆಯು ಶಾರದಾ ಜ್ಯುವೆಲ್ಲರ್ಸ್ ನಿಂದ ಸುಮಾರು 2 ಕೆ.ಜಿ ಬೆಳ್ಳಿ, ಕೃಷ್ಣ ಮೆಡಿಕಲ್ಸ್’ನಿಂದ ಸುಮಾರು 15,000ರೂ ನಗದು, ಆರ್ಯ ಪೆಂಟ್ಸ್ ಹಾಗೂ ವಿಜಯಲಕ್ಷ್ಮಿ ಟ್ರೇಟರ್ಸ್’ನಿಂದ ತಲಾ 3,000ರೂ ನಗದು, ಶ್ರೀ ಮಹಾಲಿಂಗೇಶ್ವರ ಕಾಂಡಿಮೆಂಟ್ಸ್’ನಿಂದ 1000ರೂ ನಗದು ಹಾಗೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕಶ್ವಿ ಚೆಸ್ ಸ್ಕೂಲ್ ಕುಂದಾಪುರ ಇವರ ನೂತನ ಕಛೇರಿಯನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಉಚ್ಚಿಲ ಮಹಾಲಕ್ಷ್ಮಿ ಧರ್ಮದರ್ಶಿ ರಾಘವೇಂದ್ರ ಉಪಾಧ್ಯಾಯ ಮಾತನಾಡಿ ಚದುರಂಗದ ನಿಯಮಗಳಲ್ಲಿ ಬರುವ ನೀತಿ ನಿರ್ಬಂಧನೆಗಳು ಮನುಷ್ಯನು ತನ್ನ ಜೀವನದಲ್ಲಿ ಕೂಡ ಅಳವಡಿಸಿಕೊಳ್ಳಬೇಕು ಎಂದರು. ಮಹಾಭಾರತದ ಕಾಲದಿಂದಲೂ ಚದುರಂಗಕ್ಕೆ ಪ್ರಮುಖ ಸ್ಥಾನವನ್ನು ಕೊಟ್ಟಿದ್ದಾರೆ ಎಂದು ನುಡಿದರು. ಸಭಾಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಡೆರಿಕ್ ಚೆಸ್ ಸ್ಕೂಲ್ ಮಂಗಳೂರು ಸಂಸ್ಥಾಪಕ ಡೆರಿಕ್ ಪಿಂಟೋ ಮಾತನಾಡಿ, ಚೆಸ್ ಕೇವಲ ಕ್ರೀಡೆಯಲ್ಲ ಮನೋರಂಜನೆಯ ಬೆಳಕು ಕುಂದಾಪುರದಲ್ಲಿ ಒಬ್ಬ ಹೊಸ ಚೆಸ್ ಗ್ರಾಂಡ್ ಮಾಸ್ಟರ್ ಹುಟ್ಟಿ ಬರಲೆಂದು ಆಶಿರ್ವದಿಸಿದರು. ಹಾಗೆ ಈ ಸಂಧರ್ಭದಲ್ಲಿ ಎರೋಸ್ ಗ್ರೂಪ್ ದುಬೈ ಮಾರ್ಕೆಟಿಂಗ್ ಮ್ಯಾನೇಜರ್ ನಂದೀಶ್ ರಾವ್, ಅಂತಾರಾಷ್ಟ್ರೀಯ ಮಟ್ಟ ಚೆಸ್ ತರಬೇತಿಗಾರ ಪ್ರಸನ್ನ ರಾವ್, ಕುಂದಾಪುರ ಪುರಸಭೆ ವಸಂತಿ ಸಾರಂಗ್, ಜೆ ಸಿ ಐ ವಿಷ್ಣು, ಶಾರದಾ ಕಾಲೇಜಿನ ಪ್ರಾಂಶುಪಾಲ ರಾಧಾಕೃಷ್ಣ ಶೆಟ್ಟಿ ದೈಹಿಕ ಶಿಕ್ಷಕರಾದ ಸುಜಾಜ್ ಶೆಟ್ಟಿ, ಕಟ್ಟಡದ ಮಾಲೀಕ ವಿಮಲೇಶ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಸಮಾಜದ ವಿವಿಧ ಸ್ತರಗಳ ಬಗೆಗೆ ನಮ್ಮಲ್ಲಿ ಎಚ್ಚರ ಇರಬೇಕು. ಜೊತೆಗೆ ಸಮಾಜದ ಅಗತ್ಯ ವರ್ಗದ ಅಗತ್ಯತೆಗಳಿಗೆ ಸ್ಪಂದಿಸುವ ಸಹೃದಯೀ ಗುಣವನ್ನು ನಾವು ಬೆಳೆಸಿಕೊಳ್ಳಬೇಕು ಎಂದು ಕುಂದಾಪುರದ ಚಿನ್ಮಯಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಉಮೇಶ್ ಪುತ್ರನ್ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ರೋಟರಿ ಸಭಾಂಗಣದಲ್ಲಿ ನಡೆದ ಸಮಾರಂದಲ್ಲಿ ೨೦೧೫-೧೬ನೇ ಸಾಲಿನ ದ್ವಿತೀಯ ಪಿಯುಸಿಯ ವಿಜ್ಞಾನದ ಎರಡು ವಿಭಾಗಗಳಲ್ಲಿನ ಅಗ್ರಸ್ಥಾನಿಗಳಿಗೆ ತಮ್ಮ ವತಿಯಿಂದ ತಲಾ ೨೫೦೦೦ ರೂಪಾಯಿಗಳ ನಗದು ಪ್ರೋತ್ಸಾಹ ಧನವನ್ನು ವಿತರಿಸಿ ಮಾತನಾಡಿದರು. ಪಠ್ಯ ಕಲಿಕೆಯ ಜೊತೆ ಬದುಕನ್ನು ಸಾಗಿಸಲು ಅಗತ್ಯವಿರುವ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಆಗ ಮಾತ್ರ ನಿಜವಾದ ಬದುಕಿನ ಸಂತೋಷವನ್ನು ಅನುಭವಿಸಲು ಸಾಧ್ಯ ಎಂದು ಅವರು ಹೇಳಿದರು. ಸಮಾರಂಭದ ಅಧ್ಯಕ್ಷತೆಯನ್ನು ಪ್ರಾಂಶುಪಾಲೆ ಕವಿತಾ ಎಮ್ ಸಿ ವಹಿಸಿದ್ದರು. ಜಿ.ಎಸ್ ವಿ.ಎಸ್ ಅಸೋಷಿಯೇಷನ್ನಿನ ಅಧ್ಯಕ್ಷ ಡಾ. ಕಾಶೀನಾಥ ಪೈ ಶುಭ ಹಾರೈಸಿದರು.ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳ ಕಾರ‍್ಯದರ್ಶಿ ಎನ್ ಸದಾಶಿವ ನಾಯಕ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಪ್ರಕೃತಿಯ ಋಣವನ್ನು ತಿರಿಸಲು ಯಾರಿಗೂ ಸಾಧ್ಯವಿಲ್ಲ. ಮಳೆ ಕಡಿಮೆ ಆದರೆ ಕೃಷಿ ಚಟುವಟಿಕೆ ಕುಂಠಿತಗೊಳ್ಳುತ್ತದೆ. ನಾವು ಯಾವುದೇ ವಸ್ತುವನ್ನು ಪ್ರೀತಿಸಿದರೆ ಮಾತ್ರ ಅದರ ಮೇಲೆ ನಮಗೆ ಪ್ರೀತಿ . ಅದಕ್ಕಾಗಿ ಪ್ರತಿಯೊಬ್ಬರೂ ನಮ್ಮ ಪರಿಸರದ ಗಿಡ ಮರಗಳನ್ನು ಪ್ರೀತಿಸಬೇಕು ಎಂದು ಕುಂದಾಪುರ ಸಾಮಾಜಿಕ ವಲಯ ಅರಣ್ಯಾಧಿಕಾರಿ ತುಳಸಿ ಹೇಳಿದರು. ಅವರು ಬಗ್ವಾಡಿಯಲ್ಲಿ ಅರಣ್ಯ ಇಲಾಖೆ, ಶ್ರೀ ಮಹಿಷಮರ್ದಿನಿ ಯುವಕ ಮಂಡಲ ಹಾಗೂ ಹರೆಗೋಡು ಮಹಾವಿಷ್ಣು ಯುವಕ ಮಂಡಲ ಇವರ ಜಂಟಿ ಆಶ್ರಯದಲ್ಲಿ ನಡೆದ ಕೋಟಿ ವೃಕ್ಷ ಅಭಿಯಾನ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿ ಮಾತನಾಡಿದರು. ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯ ರಾಧಾಕೃಷ್ಣ ಗಾಣಿಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬಚ್ಚು ನಾಯ್ಕ್ ಹಾಗೂ ಕೃಷಿಕ ನಾಗಪ್ಪಯ್ಯ ಭಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನರಸಿಂಹ ಗಾಣಿಗ ಹರೆಗೋಡು, ಶಾಲಾ ಮುಖ್ಯ ಶಿಕ್ಷಕಿ ಶೈಲಜಾ ಹರೆಗೋಡು, ಮಾಹವಿಷ್ಣು ಯುವಕ ಮಂಡಲದ ಅಧ್ಯಕ್ಷ ರವೀಶ ಡಿ.ಎಚ್., ಕೃಷಿಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಎಲ್ಲಾ ಕಾಲದಲ್ಲಿ ಎಲ್ಲರೂ ಎಲ್ಲರಿಗೂ ಒಳ್ಳೆಯವರಾಗಲು ಸಾಧ್ಯವಿಲ್ಲ. ಕಳೆದೆರಡು ವರ್ಷ ಹತ್ತು ತಿಂಗಳ ಅಧಿಕಾರಾವಧಿಯಲ್ಲಿ ನೊಂದು ಬಂದವರಿಗೆ, ಅನ್ಯಾಯವಾದವರಿಗೆ ನ್ಯಾಯ ಒದಗಿಸುನ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ ತೃಪ್ತಿಯಿದೆ ಎಂದು ನಿರ್ಗಮಿತ ಬೈಂದೂರು ವೃತ್ತ ನಿರೀಕ್ಷಕ ಸುದರ್ಶನ್ ಮುದ್ರಾಡಿ ಹೇಳಿದರು. ಬೈಂದೂರು ರೋಟರಿ ಸಮುದಾಯ ಭವನದಲ್ಲಿ ನಡೆದ ಅವರ ವಿದಾಯಕೂಟದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಎಷ್ಟೇ ಪ್ರಭಾವಿ ವ್ಯಕ್ತಿಯೂ ಕೂಡಾ ಕಾನೂನಿಗಿಂತ ದೊಡ್ಡವರಲ್ಲ. ಯಾವ ಅಧಿಕಾರಿಯಾಗಿದ್ದರೂ ಸೃಷ್ಠಿಯ ನಿಯಮ ಮೀರಲು ಸಾಧ್ಯವಾಗದು. ಅನುಭವ ಜೀವನದ ಪಾಠ ಕಲಿಸುತ್ತದೆ. ಹಿರಿಯರಿಗೆ, ಮಹಿಳೆಯರಿಗೆ, ಕಾನೂನನ್ನು ಗೌರವಿಸುವುದು ನಮ್ಮ ದೇಶದ ಸಂಸ್ಕೃತಿ. ನಮ್ಮ ಕೆಳಗಿನ ಅಧಿಕಾರಿಗಳನ್ನು ಕೂಡಾ ಕೀಳಾಗಿ ಕಾಣುವುದು ಮೇಲಾಧಿಕಾರಿಗಳ ವ್ಯಕ್ತಿತ್ವಕ್ಕೆ ಶೋಭೆತರದು ಎಂದ ಅವರು ಇಂದಿನ ವ್ಯವಸ್ಥೆಯಲ್ಲಿ ಪೋಲಿಸರು ಜನಸ್ನೇಹಿಯಾಗಿ ಕರ್ತವ್ಯ ಪಾಲಿಸಬೇಕಾಗುತ್ತದೆ. ಸಾಮರಸ್ಯ, ಸೌಹಾರ್ದತೆಯ ಸಮಾಜ ನಿರ್ಮಾಣಕ್ಕೆ ಆರಕ್ಷಕರು ಪ್ರಥಮ ಆದ್ಯತೆ ನೀಡುವುದರ ಮೂಲಕ ಸಾರ್ವಜನಿಕರ ವಿಶ್ವಾಸಗಳಿಸುವಂತಾಗಬೇಕು ಎಂದು ಸಿಬ್ಬಂದಿಗಳಿಗೆ ಕಿವಿಮಾತು ಹೇಳಿದರು. ಬೈಂದೂರು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಿರಂತರ ಹೊಸತನದ ಹುಡುಕಾಟದಲ್ಲಿರುವ ಗೀತಕಾರ, ಶಿಕ್ಷಕ, ಲೇಖಕ ರವೀಂದ್ರ ಪಿ. ಬೈಂದೂರು ರಚನೆಯ ಪರಿಸರ ಕಾಳಜಿಯ ಗೀತೆಗಳ ’ಹಸಿರೇ ಜೀವನ’ ಧ್ವನಿಸುರುಳಿಯನ್ನು ಇತ್ತಿಚಿಗೆ ಮಂಗಳೂರಿನ ಪುರಭವನದಲ್ಲಿ ನಡೆದ ಅರಣ್ಯ ಇಲಾಖೆಯ ಕೋಟಿ ವೃಕ್ಷ ಆಂದೋಲನದಲ್ಲಿ ಅರಣ್ಯ ಸಚಿವ ರಮಾನಾಥ ರೈ ಬಿಡುಗಡೆಗೊಳಿಸಿದರು. ರವಿಂದ್ರರ ಪರಿಸರ ಕಾಳಜಿಯನ್ನು ಪ್ರಶಂಸಿಸಿದ ಸಚಿವರು, ಅರಣ್ಯ ರಕ್ಷಣೆ ಮತ್ತು ಅದರ ಮಹತ್ವವನ್ನು ಗೀತೆಗಳ ರೂಪದಲ್ಲಿ ಸಮಾಜಕ್ಕೆ ತಿಳಿಯಪಡಿಸುವ ಕಾರ್ಯ ಶ್ಲಾಘನೀಯವಾದುದು ಎಂದು ಅವರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮೇಯರ್ ಹರಿನಾಥ್ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಮೊದೀನ್ ಬಾವಾ, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ, ವಲಯ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ ಪಿ. ಮುಂತಾದವರು ಹಾಜರಿದ್ದರು. ಭಕ್ತಿಯಿಂದ ಭಾವದೆಡೆಗೆ, ಭಾವದಿಂದ ಪರಿಸರದೆಡೆಗೆ ಸಾಗುತ್ತಿರುವ ಗೀತಕಾರ ರವೀಂದ್ರ ಪಿ ಅವರು ಈವರೆಗೆ ಸುಮಾರು ಇನ್ನೂರಿಪ್ಪತ್ತು ಗೀತೆಗಳನ್ನು ರಚಿಸಿದ್ದು ಇವುಗಳಲ್ಲಿ ಐವತ್ತರಷ್ಟು ಧ್ವನಿಸುರುಳಿಯಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಪಾರಂಪಳ್ಳಿ ಪಡುಕರೆ ವಾರ್ಡ್‌ಗೆ ಸಂಬಂಧಿಸಿದ ನಾಯ್ಕನಬೈಲು ಹೊಳೆಯಲ್ಲಿ ತೋಡ್ಕಟ್ಟು ಮತ್ತು ಪಾರಂಪಳ್ಳಿ ಪಡುಕರೆಗೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಹಲವು ಹಿಂದೆ ನಿರ್ಮಿಸಲಾಗಿದ್ದ ಮರದ ಕಾಲು ಸಂಕದ ದುರಸ್ಥಿಗೆ ಪಟ್ಟಣ ಪಂಚಾಯಿತಿ ನಿಯೋಜಿಸಿದ ಕೆಲಸಗಾರರು ಆಗಮಿಸಿದ ಸಾರ್ವಜನಿಕರು ಘೇರಾವ್ ಹಾಕಿದ ಘಟನೆ ನಡೆಯಿತು. ಶಾಶ್ವತ ಸೇತುವೆ ಮಂಜೂರಾಗದ ಹೊರತು ಪ್ರಸ್ತುತ ರಸ್ತೆ ದುರಸ್ಥಿ ನಡೆಸಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದ ಗ್ರಾಮಸ್ಥರು ಪಟ್ಟಣ ಪಂಚಾಯತಿ ಅಧ್ಯಕ್ಷರು ಮತ್ತು ಮುಖ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸುವಂತೆ ಪಟ್ಟು ಹಿಡಿದರು. 1952ರಲ್ಲಿ ಕೋ.ಲ. ಕಾರಂತರಿಂದ ಶಂಕು ಸ್ಥಾಪನೆಗೊಂಡ ಈ ಮರದ ಸೇತುವೆ ಇದುವರೆಗೆ ಅಭಿವೃದ್ಧಿ ಕಾಣದೆ ಹಾಗೇ ಉಳಿದಿದೆ. ಪ್ರತಿ ವರ್ಷ ಮಳೆಗಾಲ ಬಂದಾಗ ಸ್ಥಳೀಯ ಪಟ್ಟಣ ಪಂಚಾಯತಿ ನಿದ್ದೆಯಿಂದ ಎಚ್ಚರವಾಗಿ ದುರಸ್ಥಿ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಿನಿಯೋಗಿಸುತ್ತಿದೆ. ಈ ಬಗ್ಗೆ ಸ್ಥಳೀಯರು ಸಾಕಷ್ಟು ಬಾರಿ ಮನವಿ ಮಾಡಿದರೂ ಕೂಡ ಪಟ್ಟಣ ಪಂಚಾಯಿತಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುವೆಂಪು ಶತಮಾನೋತ್ಸವ ಮಾದರಿ ಶಾಲೆ, ತೆಕ್ಕಟ್ಟೆ. ಇತ್ತೀಚೆಗೆ ಇಲ್ಲಿ ದತ್ತಿನಿಧಿ ಬಡ್ಡಿಯಿಂದ ಎಲ್ಲಾ ಮಕ್ಕಳಿಗೆ ಉಚಿತ ಬರೆವಣಿಗೆ ಪುಸ್ತಕ ಹಾಗೂ ಧಾನಿಗಳ ಸಹಾಯದಿಂದ ಎಲ್ಲಾ ವಿಧ್ಯಾರ್ಥಿಗಳಿಗೆ ಗುರುತು ಪತ್ರವಿರುವ ಕೊರಳಪಟ್ಟಿಯನ್ನು ವಿತರಿಸುವ ಸಮಾರಂಭ ನಡೆಯಿತು. ಮಕ್ಕಳ ಶೈಕ್ಷಣಿಕ ಅವಶ್ಯಕತೆಗಳನ್ನು ಗಮನಿಸಿಕೊಂಡು ಬರವಣಿಗೆ ಪುಸ್ತಕ ವಿತರಿಸುವ ಕಾರ್ಯ ಶ್ಲಾಘನೀಯವಾದುದು. ಈ ಪ್ರದೇಶದ ಸರಕಾರಿ ಶಾಲೆಗಳಲ್ಲಿ ಮೊತ್ತ ಮೊದಲ ಬಾರಿಗೆ ಜೈ ಭಾರತ್ ಸಂಸ್ಥೆಯಿಂದ ಗುರುತುಪತ್ರವಿರುವ ಕೊರಳಪಟ್ಟಿ ನೀಡುತಿರುವುದು ಪ್ರಶಂಸನೀಯಾದುದು. ದತ್ತಿನಿಧಿಗೆ ಸಹಕರಿಸಿದ ದಾನಿಗಳು ಹಾಗೂ ಗುರುತುಪತ್ರಕ್ಕೆ ನೆರವು ನೀಡಿದ ಜೈ ಭಾರತ್ ಸಂಸ್ಥೆಯ ಶ್ಲಾಘನೀಯ ಕಾರ್ಯವನ್ನು ಶಿಕ್ಷಣತಜ್ಞ ಕೆ.ವಿ.ನಾಯಕ್ ಕೊಂಡಾಡಿದರು. ತೆಕ್ಕಟ್ಟೆ ಗ್ರಾಮ ಪಂಚಾಯತಿ ಅಧ್ಯಕ್ಷ ಶೇಖರ್ ಕಾಂಚನ್ ಉಚಿತ ಬರವಣಿಗೆ ಪುಸ್ತಕ ವಿತರಿಸಿ ಮಾತನಾಡಿದರು. ತೆಕ್ಕಟ್ಟೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಮಲ್ಯಾಡಿ ಶಿವರಾಮ ಶೆಟ್ಟಿರವರು ಗುರುತು ಪತ್ರ ವಿತರಿಸಿ; ಜೈ ಭಾರತ್ ಸಂಸ್ಥೆಯ ಕಾರ್ಯ ಇತರರಿಗೆ ಮಾದರಿ ಎಂದು ಹೇಳಿದರು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೀದರ್ ದೇಶಪಾಂಡೆ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ಉಷಾ ಸಿ ಯತ್ನಳ್ಳಿ ಸದ್ಬಾವನ ವೇದಿಯಲ್ಲಿ ಜರುಗಿದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಕಳೆದ ನಲವತ್ತು ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಸೇವೆಸಲ್ಲಿಸುತ್ತಿರುವ ನಾಯ್ಕನಕಟ್ಟೆ ಪುಂಡಲೀಕ ನಾಯಕ್ ಅವರಿಗೆ ’ಸಹಕಾರಿ ರತ್ನ’ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕುಂದಾಪುರ ತಾಲೂಕು ಕೆರ್ಗಾಲಿನವರಾದ ಪುಂಡಲೀಕ ನಾಯಕ್, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಸೇರಿದಂತೆ ವಿವಿಧ ಸಹಕಾರಿ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿ ಪ್ರಸ್ತುತ ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯ ಶಾಖಾ ಸಲಹಾಗಾರರಾಗಿದ್ದಾರೆ. ಬೈಂದೂರು ಹಿರಿಯ ನಾಗರೀಕ ವೇದಿಕೆಯ ಸದಸ್ಯರಾಗಿ, ಈ ಭಾಗದ ಧಾರ್ಮಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಆಧ್ಯಾತ್ಮದತ್ತ ಒಲವು ಹೊಂದಿರುವ ಇವರು ಕವನ, ಲೇಖನ, ನಾಟಕ, ಹಾಡುಗಾರಿಕೆ, ಅಂಚೆಚೀಟಿ ಸಂಗ್ರಹ ಮುಂತಾದ ಹವ್ಯಾಸಗಳ ಮೂಲಕ ಸಾಹಿತ್ಯ, ಸಾಂಸ್ಕೃತಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ/ಕುಂದಾಪ್ರ ಡಾಟ್ ಕಾಂ ಸುದ್ದಿ/

Read More