ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿರೂರು ಕುಂದಾಪುರ ನಡುವಿನ ರಾಷ್ಟ್ರೀಯ ಹೆದ್ದಾರಿಯನ್ನು ಚತುಷ್ಪಥಗೊಳಿಸುವ ಕಾಮಗಾರಿ ನಡೆಸುತ್ತಿರುವ ಸಂದರ್ಭ ಮಳೆಗಾಲದಲ್ಲಿ ಉದ್ಭವವಾಗುವ ಸಮಸ್ಯೆಗಳನ್ನು ಗಮನಕ್ಕೆ ತೆಗೆದುಕೊಳ್ಳದಿರುವುದರಿಂದ ಅವಾಮತರಗಳು ಸೃಷ್ಟಿಯಾಗಿವೆ. ಇದಕ್ಕೆ ತಕ್ಷಣ ಪರಿಹಾರ ಕಂಡುಕೊಳ್ಳಬೇಕು. ಇಲ್ಲವಾದರೆ ಅಪಾಯ ಕಾದಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ಸಂಬಂಧಿಸಿದವರನ್ನು ಎಚ್ಚರಿಸಿದ್ದಾರೆ. ಹೆದ್ದಾರಿಯ ಇಕ್ಕೆಲಗಳಲ್ಲಿ ಗತ್ಯವಿರುವೆಡೆ ಚರಂಡಿ ನಿರ್ಮಿಸದಿರುವುದರಿಂದ ಹೆದ್ದಾರಿಯ ಮೇಲೆಯೇ ಮಳೆನೀರು ಹರಿಯುತ್ತಿದೆ. ಮೋರಿಗಳನ್ನು ಭೂಪ್ರದೇಶದ ಸ್ಥಿತಿಗೆ ಅನುಗುಣವಾಗಿ ನಿರ್ಮಿಸದಿರುವುದರಿಂದ ಅವುಗಳ ಮೂಲಕ ನೀರು ಸರಿಯಾಗಿ ಹರಿದುಹೋಗುತ್ತಿಲ್ಲ. ಇದರಿಂದ ಹಲವು ಕಡೆ ಕೃತಕ ನೆರೆ ಉಂಟಾಗುತ್ತಿದೆ. ಸಂಗ್ರಹವಾದ ನೀರು ಹೆದ್ದಾರಿಯ ಮೇಲೆ ಹರಿಯುವುದಲ್ಲದೆ ಪಕ್ಕದ ಮನೆ, ಅಂಗಡಿ, ರಸ್ತೆಗಳಿಗೆ ನುಗ್ಗುತ್ತಿದೆ. ಇವೆಲ್ಲದರಿಂದ ಹೆದ್ದಾರಿಯಲ್ಲಿ ದೊಡ್ಡ ಗಾತ್ರದ ಗುಂಡಿಗಳು ಕಾಣಿಸಿಕೊಂಡಿವೆ. ಸಂಚಾರ ಅಪಾಯಕಾರಿಯಾಗಿ ಪರಿಣಮಿಸಿದೆ. ಕಾಮಗಾರಿಯ ಮೇಲೆ ನಿಗಾ ಇಡಬೇಕಾದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಲಕ್ಷ್ಯ ವಹಿಸಿದಂತೆ ಕಂಡುಬರುತ್ತಿದೆ. ಜಿಲ್ಲಾಡಳಿತ ಈ ನಿಟ್ಟಿನಲ್ಲಿ ತಕ್ಷಣ ಗಮನ ಹರಿಸಿ, ಸುಗಮ ಸಂಚಾರಕ್ಕೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಗ೦ಗೊಳ್ಳಿ : ಎಲ್ಲರೂ ಪ್ರತಿಭೆಗಳನ್ನು ಹೊಂದಿರುತ್ತಾರೆ. ಆ ಪ್ರತಿಭೆಗಳನ್ನು ಸರಿಯಾಗಿ ಬಳಸಿಕೊಳ್ಳುವುದರಲ್ಲಿ ಜೀವನದ ಶ್ರೀಮಂತಿಕೆಯ ಗುಟ್ಟು ಅಡಗಿದೆ ಎ೦ದು ಗ೦ಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಕಾರ್ಯದರ್ಶಿ ಸದಾಶಿವ ನಾಯಕ್ ಅಭಿಪ್ರಾಯಪಟ್ಟರು. ಅವರು ಇತ್ತೀಚೆಗೆ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ 2015-16ರ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ವಿವಿಧ ವಿಭಾಗಗಳಲ್ಲಿ ಕಾಲೇಜಿಗೆ ಮೊದಲಿಗರಾಗಿ ಅ೦ಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಅಭಿನ೦ದಿಸುವ ನಿಟ್ಟಿನಲ್ಲಿ ಕಾಲೇಜಿನ ವತಿಯಿ೦ದ ಇಲ್ಲಿನ ರೋಟರಿ ಸಭಾ೦ಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾಧಕ ವಿದ್ಯಾರ್ಥಿಗಳ ಅಭಿನ೦ದನಾ ಸಮಾರ೦ಭದಲ್ಲಿ ಮುಖ್ಯ ಅತಿಥಿ ಸ್ಥಾನದಿ೦ದ ಮಾತನಾಡಿದರು. ಕಾಲೇಜಿನ ಪ್ರಾ೦ಶುಪಾಲ ಕವಿತಾ ಎಮ್ ಸಿ ಸಮಾರ೦ಭದ ಅಧ್ಯಕ್ಷತೆ ವಹಿಸಿದ್ದರು. ದ್ವಿತೀಯ ಪಿಯುಸಿಯಲ್ಲಿ ಅತ್ಯಧಿಕ ಅ೦ಕಗಳನ್ನು ಪಡೆದ ಪಿಸಿಎಮ್ಬಿ ವಿಭಾಗದ ಅಖಿಲೇಶ್ ಖಾರ್ವಿ, ಪಿಸಿಎಮ್ಸಿಯ ದೀಕ್ಷಿತ್ ಎಸ್ ಇಬಿಎಸಿಯ ಅಶ್ವಿನಿ ನಾಯಕ್, ಹೆಚ್ಇಬಿಎಯ ಬಬಿತಾಶ್ರೀ,ಗಣೇಶ್ ಶೆಣೈ ಮತ್ತು ಕಲಾ ವಿಭಾಗದ ನಿಖಿಲ್ ಖಾರ್ವಿ ಇವರನ್ನು ಈ ಸ೦ದರ್ಭದಲ್ಲಿ ಅಭಿನ೦ದಿಸಿ ಗೌರವಿಸಲಾಯಿತು. ಈ ಸಂಧರ್ಭದಲ್ಲಿ ಜಿ.ಎಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕುಂದಾಪುರ ಪುರಸಭೆ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆ ಆರೋಪ ಪ್ರತ್ಯಾರೋಪ, ಗೌಜ ಗಲಾಟೆಯಲ್ಲಿ ಕಳೆದು ಹೋಯಿತು. ಮಾತಿನ ಚಕಮಕಿಯಲ್ಲಿ ಯಾರು ಏನು ಹೇಳುತ್ತಿದ್ದಾರೆ ಎನ್ನೋದು ತಿಳಿಯದಾಯ್ತು. ಅಂಡರ್ ಗ್ರೌಂಡ್ ಡ್ರೈನೇಜ್ ಸಿಷ್ಟಮ್ ಬಗ್ಗೆ ಸ್ವಲ್ಪ ಹೊತ್ತು ಅರ್ಥಪೂರ್ಣ ಚರ್ಚೆ ನಡೆದಿದ್ದು, ಬಿಟ್ಟರೆ, ಹತ್ತಾರು ಸಮಸ್ಯೆ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯಬೇಕಿದ್ದ ಸ್ಥಳ ವ್ಯಥಾ ಆರೋಪ ಪ್ರತ್ಯಾರೋಪದಲ್ಲಿ ಕಳದುಹೋಯಿತು. ಕುಂದಾಪುರ ಪುರಸಭೆಯಲ್ಲಿ ಆರಂಭವಾದ ಅಂಡರ್ ಗ್ರೈಂಡ್ ಡ್ರೈನೇಜ್ ಸಿಸ್ಟಮ್ ಬಗ್ಗೆ ಅರ್ಥಪೂರ್ಣ ಚರ್ಚೆ ನಡೆಯಿತು. ಯುಜಿಡಿ ಯೋಜನೆಗೆ ಬೃಹತ್ ಅನುದಾನ ನೀಡಲಾಗಿದ್ದು, ಕಳಪೆ ಕಾಮಗಾರಿ ಕುಂದಾಪುರ ಪುರಸಭೆಗೆ ಕೆಟ್ಟ ಹೆಸರು ತರುತ್ತಿದೆ. ಇದರಿಂದ ಪುರಸಭೆ ಸದಸ್ಯರ ಇಮೇಜ್ ಹಾಳಾಗಲಿದ್ದು, ಕಾಮಗಾರ ಬಿಡಬೇಕಾಗುತ್ತದೆ ಎಂದು ರಾಜೇಶ್ ಕಾವೇರಿ ಅಭಿಪ್ರಾಯಪಟ್ಟರು. ಯುಪಿಬಿ ಯೋಜನೆ ನಿರಾಕರಿಸಿದರೆ ಮತ್ತೆ ಯೋಜನೆ ಸಿಗೋದು ಕಷ್ಟ. ಯುಡಿಜಿ ಕಳಪೆ ಕಾಮಗಾರಿ ಮಾಡದಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡುವ ಜೊತೆ ಸಭೆ ನಡೆಸಿ, ಅವರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳದ ಪ.ಪೂ ಕಾಲೇಜಿನಲ್ಲಿ 2015-16 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿ.ಯು.ಸಿಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು. ದೇವಳದ ಕಾರ್ಯನಿರ್ವಾಹಣಾಧಿಕಾರಿ ಟಿ. ಆರ್. ಉಮ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರ ಸಾಧನೆಯನ್ನು ಮತ್ತು ಉಪನ್ಯಾಸಕರ ಶ್ರಮವನ್ನು ಶ್ಲಾಘಿಸಿದರು. ಇವತ್ತಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಇನ್ನು ಹೆಚ್ಚಿನ ಶ್ರಮ ವಹಿಸಿ ಯಶಸ್ಸನ್ನು ಸಾಧಿಸಬೇಕೆಂದು ಮಕ್ಕಳಲ್ಲಿ ಸ್ಪೂರ್ತಿ ತುಂಬಿದರು. ಮುಖ್ಯ ಅತಿಥಿಗಳಾಗಿ ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಅಧಿಕಾರಿ ಎಂ ಗೋವಿಂದ ನಾಯ್ಕನಕಟ್ಟೆ ಹಾಗೂ ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಎಚ್. ಕೃಷ್ಣಮೂರ್ತಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಕಾಲೇಜಿನ ಪ್ರಾಂಶುಪಾಲ ಎಸ್.ಅರುಣ್ ಪ್ರಕಾಶ್ ಶೆಟ್ಟಿ ಅಧ್ಯಕ್ಷತೆವಹಿಸಿದ್ದರು. ಉಪನ್ಯಾಸಕರು, ಉಪನ್ಯಾಸಕೇತರ ವರ್ಗದವರು ಉಪಸ್ಥಿತರಿದ್ದರು ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿನಿ ಸುಪ್ರೀಯ ಕೆ.ಎಲ್ ಸ್ವಾಗತಿಸಿ, ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ರಾಧಿಕಾ ನಿರೂಪಿಸಿದರು. ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ರಚನಾ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕಾಸರಗೋಡು: ಪತ್ರಕರ್ತರ ವೇದಿಕೆ ರಿ. ಬೆಂಗಳೂರು, ಉಡುಪಿ-ದ.ಕ ಜಿಲ್ಲಾ ಘಟಕ ಕಳೆದ 8 ವರ್ಷಗಳಿಂದ ಪತ್ರಿಕಾ ದಿನದ ಅಂಗವಾಗಿ ಯಾಶಸ್ವಿಯಾಗಿ ಆಯೋಜಿಸುತ್ತಿರುವ ಹಿರಿಯರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದಲ್ಲಿ ಈ ವರ್ಷ ಡೆಕ್ಕನ್ ಹೆರಾಲ್ಡ್, ನವಭಾರತ ಪತ್ರಿಕೆಗಳಲ್ಲಿ ಸುದೀರ್ಘ ಕಾಲ ಅಪೂರ್ವ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತ ಮಲಾರ್ ಜಯರಾಮ ರೈ ಅವರಿಗೆ ಪತ್ರಿಕಾ ದಿನದ ಗೌರವ ಸಲ್ಲಿಸಲಾಯಿತು. ಕಾಸರಗೋಡು ಶಿರಿಯಾದ ಮಲಾರ್ ಜಯರಾಮ ರೈಗಳ ನಿವಾಸದಲ್ಲಿ ನಡೆದ ವಿನೂತನ ಕಾರ್ಯಕ್ರಮದಲ್ಲಿ ಸಂಘಟಕ, ಕಸಪಾ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಟ ಪುನರೂರು ಅವರು ರೈಗಳಿಗೆ ಲೇಖನ ಪರಿಕರಗಳು ಹಾಗೂ ಪ್ರಶಸ್ತಿ ಫಲಕವನ್ನಿತ್ತು ಗೌರವಿಸಿದರು. ಬಳಿಕ ಹರಿಕೃಷ್ಟ ಪುನರೂರು ಮಾತನಾಡಿ, ಮಲಾರು ಜಯರಾಮ ರೈ ಅವರಂತಹ ಹಿರಿಯ ಹಾಗೂ ಕರ್ತವ್ಯ ನಿಷ್ಠ ಪತ್ರಕರ್ತರನ್ನು ಗುರುತಿಸಿ ಗೌರವಿಸಿತ್ತಿರುವುದು ಶ್ಲಾಘನಾರ್ಹ. ಶೇಖರ ಅಜೆಕಾರು ಅವರು ಪತ್ರಕರ್ತರ ವೇದಿಕೆ ಮೂಲಕ ಹಲವಾರು ಹಿರಿಯ ಪತ್ರಕರ್ತರು ಹಾಗೂ ವೃತ್ತಿನಿರತ ಪತ್ರಕರ್ತರ ಮುಖಮುಖಿಯಾಗಿಸುವ ಕಾರ್ಯ ಮಾಡಿ ಕಾರ್ಯಕ್ರಮಕ್ಕೊಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ವಕ್ವಾಡಿಯ ಗುರುಕುಲ ಪಬ್ಲಿಕ್ ಶಾಲೆಯ ಪೂರ್ವ ಪ್ರಾಥಮಿಕ ಮಕ್ಕಳು ಬಣ್ಣಗಳ ದಿನವನ್ನು ವಿಜೃಂಭಣೆಯಿಂದ ಆಚರಿಸಿದರು.ರಂಗಿ ತರಂಗದ ವಿಷಯವನ್ನಾದರಿಸಿ ಕಟ್ಟಡವನ್ನು ರಂಗುರಂಗಾಗಿ ಅಲಂಕರಿಸಲಾಗಿತ್ತು. ಮಕ್ಕಳೆಲ್ಲರೂ ಬಣ್ಣಬಣ್ಣದ ಉಡುಪುಗಳಲ್ಲಿ ರಂಜಿಸುತ್ತಿದ್ದರು.ಶಿಕ್ಷಕಿಯರು ಬಣ್ಣಗಳ ವಿಧಗಳಾದ ಪ್ರಾಥಮಿಕ,ಮಾಧ್ಯಮಿಕ ಮತ್ತು ನೈಸರ್ಗಿಕ ಬಣ್ಣಗಳ ಬಗ್ಗೆ ವಸ್ತುಸಮೇತ ಸಾದೃಶ್ಯವಾಗಿ ವಿವರಿಸಿದರು. ಕಾರ್ಯಕ್ರಮದಲ್ಲಿ ಬಾಂಡ್ಯ ಶಿಕ್ಷಣ ಸಂಸ್ಥೆಯ ಜಂಟಿ ಕಾರ್ಯನಿರ್ವಾಹಕರಾದ ಶ್ರೀಮತಿ ಅನುಪಮ ಎಸ್.ಶೆಟ್ಟಿ ,ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ವಿಶಾಲ ಶೆಟ್ಟಿ ಹಾಗೂ ಎಲ್ಲಾ ಶಿಕ್ಷಕಿಯರೂ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಇಲ್ಲಿನ ಸೈಂಟ್ ಥೋಮಸ್ ರೆಸಿಡೆನ್ಸಿಯಲ್ ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ವಿದ್ಯಾರ್ಥಿಗಳ ಮಂತ್ರಿ ಮಂಡಲ ಹಾಗೂ ಪಠ್ಯ ಪೂರಕ ಚಟುವಟಿಕೆಗಳ ಕಾರ್ಯಕ್ರಮ ಸಿಸಿಎಯನ್ನು ಪತ್ರಕರ್ತ ಜಯಶೇಖರ್ ಮಡಪ್ಪಾಡಿ ಉದ್ಘಾಟಿಸಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಪಂಚದಲ್ಲಿ ಅಗ್ರಸ್ಥಾನದಲಿ ಭಾರತಕ್ಕೆ ಅದೇ ಕಾರಣಕ್ಕೆ ವಿಶೇಷ ಗೌರವ ದೊರಕುತ್ತಿದೆ. ಪ್ರಜೆಗಳೇ ಪ್ರಭುಗಳು ಎನ್ನುವ ಆಶಯದಲ್ಲಿ ಸಂವಿಧಾನ ಮತ್ತು ಶಾಸನಗಳ ಜೊತೆಯಲ್ಲಿ ದೇಶವನ್ನು ಮುನ್ನಡೆಸುವಾಗ ಪ್ರತಿಯೊಬ್ಬ ಪ್ರಜೆಯೂ ನಾಯಕನಾಗುತ್ತಾನೆ. ಅದೇ ಮಾದರಿಯನ್ನು ಪ್ರತಿಯೊಬ್ಬರೂ ವಿದ್ಯಾರ್ಥಿ ಜೀವನದಲ್ಲಿಯೇ ಅಳವಡಿಸಿಕೊಂಡಾಗ ಉತ್ತವ ಸಮಾಜ ನಿರ್ಮಾಣ ಸಾಧ್ಯ ಎಂದರು. ಶಿಕ್ಷಣದ ಜೊತೆಗೆ ನೈತಿಕ ಹಾಗೂ ಮೌಲಿಕ ಶಿಕ್ಷಣವನ್ನು ಅರಿತುಕೊಂಡು ಅನುಸರಿಸಿದಾಗ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗುವುದು ಸಾಧ್ಯ ಎಂದರು. ನಂತರ ಶಾಲೆಯ ಪ್ರಾಂಶುಪಾಲ ರೆವರೆಂಡ್ ಫಾದರ್ ಎಲ್ದೋ ಪುತ್ತನ್ ಕಂಡತ್ತಿಲ್ ನೂತನ ಮಂತ್ರಿ ಮಂಡಲದ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿ ಮಾತನಾಡಿ, ಆಂಗ್ಲ ಭಾಷೆ ಎನ್ನುವುದು ಪ್ರತಿಯೊಬ್ಬನ ಮುಂದಿನ ಬದುಕಿಗೆ ಅಗತ್ಯವಾಗಿದ್ದು, ಭಾಷೆಯನ್ನು ಅರ್ಥ ಮಾಡಿಕೊಳ್ಳುವುದು ಮತ್ತು ಮಾತನಾಡುವುದರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಮ್ಜಾನ್ ಹಬ್ಬ ಸಮೀಪಿಸುತ್ತಿದ್ದು ಧಾರ್ಮಿಕ ಸೂಕ್ಷ್ಮ ಪ್ರದೇಶದಲ್ಲಿ ಕೋಮು ಸೌಹಾರ್ದ ಕಾಪಿಡುವ ನೆಲೆಯಲ್ಲಿ ಕುಂದಾಪುರ ಪೊಲೀಸರು ಅಲ್ಲಲ್ಲಿ ಶಾಂತಿಸಭೆ ನಡೆಸಿ ಸರ್ವಧರ್ವದ ಮುಖಂಡರಿಗೆ ಮಾರ್ಗದರ್ಶವನ್ನಿತ್ತು, ಅಹಿತಕರ ಘಟನೆಗಳು ನಡೆಯದಂತೆ ಎಚ್ಚರವಹಿಸುವಂತೆ ಕೋರಿಕೊಂಡರು. ಕುಂದಾಪುರದ ತಾಪಂ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ ಮಾತನಾಡಿ ಕುಂದಾಪುರ ಮತ್ತು ಬೈಂದೂರಿನಲ್ಲಿ ೫೨ ಮಸೀದಿಗಳಿವೆ. ರಮ್ಜಾನ್ ಹಬ್ಬದಂದು ೫ ಮೆರವಣಿಗೆ ನಡೆಯಲಿದೆ. ಬಾನರ್, ಮೈಕ್ ಪರವಾನಗಿ ಮುಂಚಿತವಾಗಿ ತೆಗೆದುಕೊಳ್ಳಬೇಕು. ಎಲ್ಲಾ ಧರ್ಮದವರು ಸೇರಿ ಆಚರಿಸುವ ಹಬ್ಬವಾಗಿದ್ದು, ಕಳೆದ ಮೂರು ವರ್ಷಗದಿಂದ ರಮಜಾನ್ ಹಬ್ಬದ ಸಂಧರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಈ ವರ್ಷವೂ ಶಾಂತಿಯುತವಾಗಿ ಆಚರಿಸಲು ಎಲ್ಲರೂ ಸಹಕಾರ ನೀಡಬೇಕು ಎಂದು ಹೇಳಿದರು. ಕುಂದಾಪ್ರ ಡಾಟ್ ಕಾಂ ಸುದ್ದಿ. ರಾಷ್ರ್ಟೀಯ ಹೆದ್ದಾರಿಯಲ್ಲಿ ತಾತ್ಕಾಲಿಕ ಚೆಕ್ ಪೋಸ್ಟ್ ನಿರ್ಮಿಸಿ, ಅಪರಿಚಿತ ವ್ಯಕ್ತಿಗಳ ತಪಾಸಣೆ ಹಾಗೂ ಜಾನುವಾರು ಕಳ್ಳಸಾಗಣೆ ತಡೆಯಲಾಗುತ್ತದೆ. ಈಗಾಗಲೇ ಮಾರ್ಗಸೂಚಿಯನ್ನು ಇಲಾಖಾ ಅಧಿಕಾರಿಗಳಿಗೆ ನೀಡಲಾಗಿದೆ ಎಂದರು. ತಾಲೂಕು…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಜನಸಾಮಾನ್ಯರು ನಿತ್ಯ ಒಂದಲ್ಲ ಒಂದು ಕಾರಣದಿಂದ ಸರಕಾರಿ ಕಚೇರಿಗಳಿಗೆ ಭೇಟಿ ನೀಡುತ್ತಿರುತ್ತಾರೆ. ಜನರ ನಿತ್ಯ ಸಂಚಾರ ಹೆಚ್ಚಿರುವ ಕಡೆಗಳಲ್ಲಿ ಅನುಪಯುಕ್ತ ವಸ್ತುಗಳು, ಕಾಗದದ ಚೂರುಗಳು, ಪ್ಲಾಸ್ಟಿಕ್ ಇನ್ನಿತರ ಕಸಗಳನ್ನು ಎಲ್ಲೆಂದರಲ್ಲಿ ಎಸೆದು ಹೋಗುವುದನ್ನು ಕಾಣುತ್ತೇವೆ. ಈ ಕುರಿತು ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ರೋಟರಿ ಕ್ಲಬ್ ಕುಂದಾಪುರ ಸ್ವಚ್ಚ ಭಾರತ ಅಭಿಯಾನದ ಅಂಗವಾಗಿ ಸರಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಕಸವನ್ನು ಸಮರ್ಪಕವಾಗಿ ವಿಲೇವಾರಿ ಮಾಡುವ ಸಲುವಾಗಿ ಡಸ್ಟ್ಬಿನ್ನ್ನು ಕೊಡುಗೆಯಾಗಿ ನೀಡಿದೆ. ಕುಂದಾಪುರ ಸಹಾಯಕ ಉಪ ವಿಭಾಗಾಧಿಕಾರಿಯವರ ಕಚೇರಿ, ತಹಶೀಲ್ದಾರ್ ಅವರ ಕಚೇರಿ, ಕುಂದಾಪುರ ಪೋಲಿಸ್ ಠಾಣೆ, ಕುಂದಾಪುರದ ಸರಕಾರಿ ಆಸ್ಪತ್ರೆ, ಕುಂದಾಪುರ ತಾಲೂಕು ಪಂಚಾಯತ್ ಕಚೇರಿ, ಭಾರತೀಯ ಜೀವವಿಮಾ ನಿಗಮ ಕಚೇರಿಗಳಲ್ಲಿ ಸ್ವಚ್ಚತೆಯ ದೃಷ್ಠಿಯಿಂದ ಡಸ್ಟ್ಬಿನ್ಗಳನ್ನು ಕ್ಲಬ್ನ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಅಧಿಕಾರಿಗಳಿಗೆ ಹಸ್ತಾಂತರಿಸಿ, ಕೊಡುಗೆಯ ಸದ್ಭಳಕೆ ಮಾಡುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ 2016-17ನೇ ಸಾಲಿನ ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಉದಯಕುಮಾರ್ ಶೆಟ್ಟಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್ನಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಬಾಂಡ್ಯ ಎಜುಕೇಶನ್ ಟ್ರಸ್ಟ್ನ ಜಂಟಿ ಕಾರ್ಯನಿರ್ವಹಣಾಧಿಕಾರಿ ಅನುಪಮ ಎಸ್. ಶೆಟ್ಟಿ ಹಾಗೂ ಶಾಲೆಯ ಉಪ ಪ್ರಾಂಶುಪಾಲರಾದ ಸುನಂದಾ ಪಾಟೀಲ್ ಗಿಡಗಳನ್ನು ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ವಿದ್ಯಾರ್ಥಿಗಳು ಪರಿಸರ ಕಾಳಜಿಯನ್ನು ಮೂಡಿಸಿಕೊಳ್ಳಬೇಕು, ಗಿಡಗಳನ್ನು ಬೆಳೆಸುವುದರ ಮೂಲಕ ಪರಿಸರದಲ್ಲಿ ಸಮತೋಲನವನ್ನು ಕಾಪಾಡಿಕೊಳ್ಳಬಹುದು ಎಂದು ತಿಳಿಸಿದರು. ಪ್ರತಿಯೊಬ್ಬರೂ ತಮ್ಮ ಮನೆ ಹಾಗೂ ಪರಿಸರದಲ್ಲಿ ಗಿಡಗಳನ್ನು ನೆಟ್ಟು ಪೋಷಿಸಬೇಕೆಂದು ಕರೆ ನೀಡಿದರು. ವಿವಿಧ ಔಷಧೀಯ ಸಸ್ಯಗಳ ಮಹತ್ವವನ್ನು ತಿಳಿ ಹೇಳಿದರು. ಶಾಲಾ ವಿದ್ಯಾರ್ಥಿಗಳು ವಿವಿಧ ಔಷಧೀಯ ಗಿಡಗಳನ್ನು ನೆಡುವುದರ ಮೂಲಕ ಸಕ್ರಿಯವಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.
