ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಛಾಯಾಗ್ರಾಹಕರ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟು ಒಂದು ದಿನದ ಶಾಂತಿಯುತ ಛಾಯಾಗ್ರಹಣ ಬಂದ್ ರಾಜ್ಯಾದ್ಯಂತ ನಡೆದಿದ್ದು, ಕುಂದಾಪುರದಲ್ಲಿ ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಶನ್ ಕುಂದಾಪುರ ವಲಯದಿಂದ ಪ್ರತಿಭಟನೆ ನಡೆಯಿತು. ಕರ್ನಾಟಕ ರಾಜ್ಯದಲ್ಲಿರುವ ಸುಮಾರು ಮೂರು ಲಕ್ಷಕ್ಕೂ ಹೆಚ್ಚು ಛಾಯಾ ಮತ್ತು ವೀಡಿಯೋ ವೃತ್ತಿ ಬಾಂಧವರು ಅನುಭವಿಸುತ್ತಿರುವ ಸಂಕಷ್ಟಗಳ ಮತ್ತು ಅವುಗಳ ಪರಿಹಾರವನ್ನು ಕೋರಿ ಇಂದು ಕುಂದಾಪುರ ವಲಯ ಛಾಯಾಗ್ರಾಹಕರು ಶಾಂತಿಯುತ ಬಂದ್ ಆಚರಿಸಿ ಮೆರವಣಿಗೆಯ ಮೂಲಕ ಆಗಮಿಸಿ ಕುಂದಾಪುರ ಎಸಿ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು. ಕುಂದಾಪುರ ತಾಲೂಕು ಕಛೇರಿಯ ಎದುರು ಶಾಸಕರಿಗೆ ಮನವಿಯನ್ನು ಕೊಟ್ಟು ನಂತರ ಮೆರವಣಿಗೆಯ ಮೂಲಕ ಏಸಿ ಕಛೇರಿಗೆ ಹೋಗಿ ಅಲ್ಲಿ ಕುಂದಾಪುರ ಏಸಿ ಯವರಿಗೆ ಮನವಿಯನ್ನು ನೀಡಲಾಯಿತು ಏಸಿ ಪರವಾಗಿ ಪ್ರಭಾರ ತಹಶೀಲ್ದಾರ್ ಕಿರಣ್ ಗೋರಯ್ಯ ಇವರು ಮನವಿಯನ್ನು ಸ್ವೀಕರಿಸಿದರು. ಕುಂದಾಪುರ ಛಾಯಾಗ್ರಾಹಾಕರ ಸಂಘದ ಅಧ್ಯಕ್ಷ ಗ್ರೇಷನ್ ಡಿಸೋಜಾ, ಉಪಾದ್ಯಕ್ಷ ರಾಜಾ ಮಠದಬೆಟ್ಟಿ, ಗಿರೀಶ್ ಚಿತ್ತೂರು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಪ್ರತಿಷ್ಠಿತ ಆರ್ಯಭಟ ಇಂಟರ್ನ್ಯಾಶನಲ್ ಅವಾರ್ಡ್ನ್ನು ಪಡೆದ ಗಾಯಕ, ಕುಂದಾಪುರದ ಶ್ರೀ ಮಾತಾ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಸತೀಶ್ ಪೂಜಾರಿ ಅವರನ್ನು ವೈದ್ಯರ ದಿನಾಚರಣೆಯ ಅಂಗವಾಗಿ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್(ಐಎಂಎ) ವತಿಯಿಂದ ಸನ್ಮಾನಿಸಲಾಯಿತು. ಮಣಿಪಾಲ ಕೆಎಂಸಿ ಆಸಪತ್ರೆಯ ಸರ್ಜರಿ ವಿಭಾಗದ ಪ್ರೋಫೆಸರ್ ರಾಜ್ಗೋಪಾಲ ಶೆಣೈ ಅವರು ಸತೀಶ್ ಪೂಜಾರಿಯವರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಐಎಂಎ ಕುಂದಾಪುರ ಅಧ್ಯಕ್ಷೆ ಡಾ. ಭವಾನಿ ರಾವ್, ಖ್ಯಾತ ಮನೋರೋಗ ತಜ್ಞ ಡಾ. ಕೆ. ಎಸ್. ಕಾರಂತ್, ಐಎಂಎ ಕಾರ್ಯದರ್ಶಿ ಶ್ರೀದೇವಿ ಕಟ್ಟೆ, ಡಾ.ರಮೇಶ್ ರಾವ್, ಶ್ರೀಮತಿ ಸುಜಾತ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗಾಣಿಗ ಸಮಾಜದ ಪ್ರಮುಖ ಶಕ್ತಿ ಪೀಠವಾದ ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಇಲ್ಲಿನ ಶ್ರೀ ವ್ಯಾಸರಾಜ ಮಠದ ಜೀರ್ಣೊದ್ಧಾರ ಕಾರ್ಯ ಹಂತಿಮ ಹಂತದಲ್ಲಿದ್ದು ಇದರ ನೂತನ ಮಠದ ದೇವರ ರಜತ ಪೀಠ ಸಮರ್ಪಣೆ ಕಾರ್ಯಕ್ರಮ ಭಾನುವಾರ ಮಠದ ವಠಾರದಲ್ಲಿ ನಡೆಯಿತು. ವೇದಮೂರ್ತಿ ವಿಜಯ ಪೆಜತ್ತಾಯ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ದಾನಿಗಳಾದ ತ್ರಾಸಿ ಅಣ್ಣಪ್ಪಯ್ಯ ಸಭಾ ಭವನದ ಮಾಲಿಕ ಶ್ರೀಧರ ಗಾಣಿಗ, ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘ ಅಧ್ಯಕ್ಷ ಶ್ರೀನಿವಾಸ ಗಾಣಿಗ, ಪ್ರಧಾನ ಕಾರ್ಯದರ್ಶಿ ಶಿವಾನಂದ ರಾವ್, ಕೋಶಾಧಿಕಾರಿ ಶಂಕರ ನಾರಾಯಣ ಗಾಣಿಗ ಬೀಜಾಡಿ, ಕುಂದಾಪುರ ಟಿಂಬರ್ ಡಿಪೊ ಮಾಲೀಕ ಗೋಪಾಲ ಗಾಣಿಗ, ಗ್ರಾಮ ಪಂಚಾಯಿತಿ ಸದಸ್ಯ ರವಿ ಗಾಣಿಗ ಆಜ್ರಿ, ಬಸ್ರೂರು ಗ್ರಾಮ ಪಂಚಾಯಿತಿ ಸದಸ್ಯ ನಾಗರಾಜ ಗಾಣಿಗ, ಹಿರಿಯರಾದ ಕೊಗ್ಗ ಮಾಸ್ಟರ್, ನರಸಿಂಹ ಗಾಣಿಗ ಹಂಗಳೂರು, ಪುಂಡಲೀಕ ಗಾಣಿಗ, ಉದ್ಯಮಿ ನಿತ್ಯಾನಂದ ಗಾಣಿಗ, ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪ್ರತಿಯೊಬ್ಬ ವ್ಯಕ್ತಿಗೂ ಹುಟ್ಟೂರಿನ ಋಣ ದೊಡ್ಡದೆನಿಸಿಕೊಳ್ಳುತ್ತದೆ. ಬದುಕು, ಉದ್ಯೋಗಕ್ಕಾಗಿ ಎಲ್ಲಿಗೇ ತೆರಳಿದರೂ ತನ್ನೂರಿನ ಮಣ್ಣಿನ ಋಣ ತೀರಿಸುವ ಗುಣ ಬೆಳೆಸಿಕೊಳ್ಳಬೇಕು. ಉಪ್ಪುಂದ ಚಂದ್ರಶೇಖರ ಹೊಳ್ಳರಲ್ಲಿ ಈ ಗುಣವಿದ್ದುದರಿಂದಲೇ ಇಂದು ರಾಜ್ಯದ ಭೂಪಟದಲ್ಲಿ ಉಪ್ಪಂದ ಎಂಬ ಊರನ್ನು ಗುರುತಿಸುವಂತಾಗಿದೆ ಎಂದು ಸಿರಿ ಮೊಗೇರಿ ಸಂಸ್ಥಾಪಕ, ಬೆಂಗಳೂರು ಮಾಧ್ಯಮ ಭಾರತಿ ನಿರ್ದೇಶಕ ಜಯರಾಮ ಅಡಿಗ ಹೇಳಿದರು. ಉಪ್ಪುಂದದ ಕುಂದ ಅಧ್ಯಯನ ಕೇಂದ್ರವು ಸ್ಥಳೀಯ ಸಂಘಟನೆಗಳ ಸಹಕಾರದೊಂದಿಗೆ ಆಯೋಜಿಸಲಾಗಿದ್ದ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭದ ಪೂರ್ವದಲ್ಲಿ ‘ಸಹೃದಯ ಸಂವಹನ’ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು. ಹುಟ್ಟೂರಿನ ಮೇಲಿನ ಅಭಿಮಾನದಿಂದ ತಮ್ಮ ವೃತ್ತಿಯನ್ನು ತ್ಯಜಿಸಿ ಉಪ್ಪಂದಕ್ಕೆ ಬಂದ ನೆಲೆಸಿದ್ದ ಹೊಳ್ಳರು, ಸಾಹಿತ್ಯ ರಚನೆ, ಸಂಘಟನೆ, ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ಈ ಪರಿಸರವನ್ನು ಸಾಂಸ್ಕೃತಿಕ, ಸಾಹಿತ್ತಿಕ ಕೇಂದ್ರವಾಗಿ ಬೆಳೆಸಿದವರು. ಜಿಲ್ಲಾ ಕಸಾಪ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಹೊಳ್ಳರ ಸಾಧನೆ ಅನನ್ಯವಾದ್ದು ಎಂದು ಹೇಳಿದರು. ಧರ್ಮದರ್ಶಿ ಅಪ್ಪಣ್ಣ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ…
ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ತನ್ನ ಐದನೆಯ ವಯಸ್ಸಿನಲ್ಲಿಯೇ ನೃತ್ಯ ಅಭ್ಯಾಸದಲ್ಲಿ ತೊಡಗಿಕೊಂಡು ಪರಿಪಕ್ವ ಹೆಜ್ಜೆಗಳನಿಟ್ಟು ಇದೀಗ ಭರತನಾಟ್ಯದಲ್ಲಿಯೂ ಪರಿಪೂರ್ಣತೆಯನ್ನು ಪಡೆದು ರಂಗಪ್ರವೇಶಕ್ಕೆ ಸಿದ್ಧಳಾಗಿದ್ದಾಳೆ ಅರಬ್ ಸಂಯುಕ್ತ ರಾಷ್ಟ್ರದ ಶಾರ್ಜಾ ಡೆಲ್ಲಿ ಪ್ರೈವೇಟ್ ಸ್ಕೂಲ್ ಗ್ರೇಡ್ 9 ವಿದ್ಯಾರ್ಥಿನಿ ಪ್ರೇರಣಾ ಪೈ. ಮಣಿಪಾಲದ ನಿವಾಸಿ ಶಾರದಾ ಮತ್ತು ಬಾಂಡ್ಯ ಸಂಜೀವ ಪೈ ಇವರ ಮೊಮ್ಮಗಳಾಗಿರುವ ಶಾರ್ಜಾ ನಿವಾಸಿ ರಾಗಿಣಿ ಪೈ ಮತ್ತು ಬಾಂಡ್ಯ ಹರೀಶ್ ಪೈ ದಂಪತಿಯ ಪುತ್ರಿಯಾಗಿರುವ ಪ್ರೇರಣಾ ಇವಳು ತನ್ನ ಐದನೆಯ ವಯಸ್ಸಿನಿಂದಲೇ ನೃತ್ಯ ಅಭ್ಯಾಸದಿಂದ ಪರಿಪಕ್ವ ಹೆಜ್ಜೆಗಳನಿಟ್ಟು ಇದೀಗ ಭರತನಾಟ್ಯದಲ್ಲಿ ಪರಿಪೂರ್ಣತೆಯನ್ನು ಪಡೆದಿದ್ದಾಳೆ. ಪ್ರೇರಣಾ ಪೈ ತನ್ನ ಐದನೇಯ ವಯಸ್ಸಿನಲ್ಲಿ 2007ರಲ್ಲಿ ಶಾರ್ಜಾ ಕೈರಳಿ ಕಲಾ ಕೇಂದ್ರಮ್ನಲ್ಲಿ ಗುರು ಮುರಳಿ ಅವರಿಂದ ಪ್ರಾರಂಭವಾದ ಪ್ರಥಮ ಹಂತದ ತರಬೇತಿಯನ್ನು ಪಡೆದು ನಂತರ 2013ರಿಂದ ಶಾರ್ಜಾದ ಪ್ರಸಿದ್ಧ ಕಲಾ ಸಂಸ್ಥೆ ಕ್ಲಾಸಿಕಲ್ ರಿದಂಸ್ ಇದರ ಸ್ಥಾಪಕ ನಿರ್ದೇಶಕಿ ವಿದೂಷಿ ರೋಹಿಣಿ ಅನಂತ ಅವರ ಶಿಷ್ಯೆಯಾಗಿ ಭರತನಾಟ್ಯದಲ್ಲಿ ಐದು ಹಂತಗಳಲ್ಲಿ ಪರೀಕ್ಷೆ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಸನ್ರೈಸ್ ಅಧ್ಯಕ್ಷರಾಗಿ ಕುಂದಾಪುರ ವ್ಯ. ಸೇ. ಸಹಕಾರಿ ಸಂಘ(ನಿ.) ವಡೇರಹೋಬಳಿ ಶಾಖೆಯ ವ್ಯವಸ್ಥಾಪಕ ಕೆ. ನರಸಿಂಹ ಹೊಳ್ಳ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ನಾಗೇಶ ನಾವಡ, ಕ್ಲಬ್ ಸರ್ವಿಸ್ನ ನಿರ್ದೇಶಕರಾಗಿ ಬಿ. ಎಮ್. ಚಂದ್ರಶೇಖರ, ಒಕೇಶನಲ್ ಸರ್ವಿಸ್ ನಿರ್ದೇಶಕರಾಗಿ ಶಿವಾನಂದ, ಕಮ್ಯೂನಿಟಿ ಸರ್ವಿಸ್ ನಿರ್ದೇಶಕರಾಗಿ ದಿನೇಶ್ ಗೋಡೆ, ಇಂಟರ್ನ್ಯಾಶನಲ್ ಸರ್ವಿಸ್ ನಿರ್ದೇಶಕರಾಗಿ ಉಲ್ಲಾಸ್ ಕ್ರಾಸ್ತಾ, ಯೂತ್ ಸರ್ವಿಸ್ ನಿರ್ದೇಶಕರಾಗಿ ರಾಜು ಪೂಜಾರಿ, ಸತೀಶ್ ಎನ್. ಶೇರೆಗಾರ್(ಟಿಆರ್ಎಫ್ ಛೇರ್ಮೆನ್), ಅಬುಶೇಖ್ ಸಾಹೇಬ್(ಪೋಲಿಯೋ ಪ್ಲಸ್ ಛೇರ್ಮೆನ್), ಅಜಯ್ ಹವಲ್ದಾರ್ (ವಾಷಿಂಗ್ ಸ್ಕೂಲ್ ಛೇರ್ಮೆನ್), ದಿನಕರ್ ಆರ್ ಶೆಟ್ಟಿ (ಲಿಟ್ರಸಿ ಛೇರ್ಮೆನ್), ದಂಡಪಾಣಿಯಾಗಿ ಸದಾನಂದ ಉಡುಪ, ಕೋಶಾಧಿಕಾರಿಯಾಗಿ ಸಿ.ಎಚ್. ಗಣೇಶ್, ಬುಲೆಟಿನ್ ಎಡಿಟರ್ ಗಜಾನನ ಭಟ್, ನಿಯೋಜಿತ ಅಧ್ಯಕ್ಷರಾಗಿ ಕಲ್ಪನಾ ಭಾಸ್ಕರ್ ಆಯ್ಕೆಯಾದರು. ಜುಲೈ 3ರಂದು ಸಂಜೆ 7ಗಂಟೆಗೆ ಕೋಟೇಶ್ವರದ ಸಹನಾ ಕನ್ವೆನ್ಶನ್ ಸೆಂಟರ್ನಲ್ಲಿ ಪದಾಪ್ರದಾನ ಸಮಾರಂಭ ನಡೆಯಲಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿರೂರು ಕುಂದಾಪುರ ನಡುವಿನ ರಾಷ್ಟ್ರೀಯ ಹೆದ್ದಾರಿಯನ್ನು ಚತುಷ್ಪಥಗೊಳಿಸುವ ಕಾಮಗಾರಿ ನಡೆಸುತ್ತಿರುವ ಸಂದರ್ಭ ಮಳೆಗಾಲದಲ್ಲಿ ಉದ್ಭವವಾಗುವ ಸಮಸ್ಯೆಗಳನ್ನು ಗಮನಕ್ಕೆ ತೆಗೆದುಕೊಳ್ಳದಿರುವುದರಿಂದ ಅವಾಮತರಗಳು ಸೃಷ್ಟಿಯಾಗಿವೆ. ಇದಕ್ಕೆ ತಕ್ಷಣ ಪರಿಹಾರ ಕಂಡುಕೊಳ್ಳಬೇಕು. ಇಲ್ಲವಾದರೆ ಅಪಾಯ ಕಾದಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ಸಂಬಂಧಿಸಿದವರನ್ನು ಎಚ್ಚರಿಸಿದ್ದಾರೆ. ಹೆದ್ದಾರಿಯ ಇಕ್ಕೆಲಗಳಲ್ಲಿ ಗತ್ಯವಿರುವೆಡೆ ಚರಂಡಿ ನಿರ್ಮಿಸದಿರುವುದರಿಂದ ಹೆದ್ದಾರಿಯ ಮೇಲೆಯೇ ಮಳೆನೀರು ಹರಿಯುತ್ತಿದೆ. ಮೋರಿಗಳನ್ನು ಭೂಪ್ರದೇಶದ ಸ್ಥಿತಿಗೆ ಅನುಗುಣವಾಗಿ ನಿರ್ಮಿಸದಿರುವುದರಿಂದ ಅವುಗಳ ಮೂಲಕ ನೀರು ಸರಿಯಾಗಿ ಹರಿದುಹೋಗುತ್ತಿಲ್ಲ. ಇದರಿಂದ ಹಲವು ಕಡೆ ಕೃತಕ ನೆರೆ ಉಂಟಾಗುತ್ತಿದೆ. ಸಂಗ್ರಹವಾದ ನೀರು ಹೆದ್ದಾರಿಯ ಮೇಲೆ ಹರಿಯುವುದಲ್ಲದೆ ಪಕ್ಕದ ಮನೆ, ಅಂಗಡಿ, ರಸ್ತೆಗಳಿಗೆ ನುಗ್ಗುತ್ತಿದೆ. ಇವೆಲ್ಲದರಿಂದ ಹೆದ್ದಾರಿಯಲ್ಲಿ ದೊಡ್ಡ ಗಾತ್ರದ ಗುಂಡಿಗಳು ಕಾಣಿಸಿಕೊಂಡಿವೆ. ಸಂಚಾರ ಅಪಾಯಕಾರಿಯಾಗಿ ಪರಿಣಮಿಸಿದೆ. ಕಾಮಗಾರಿಯ ಮೇಲೆ ನಿಗಾ ಇಡಬೇಕಾದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಲಕ್ಷ್ಯ ವಹಿಸಿದಂತೆ ಕಂಡುಬರುತ್ತಿದೆ. ಜಿಲ್ಲಾಡಳಿತ ಈ ನಿಟ್ಟಿನಲ್ಲಿ ತಕ್ಷಣ ಗಮನ ಹರಿಸಿ, ಸುಗಮ ಸಂಚಾರಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ ಗ೦ಗೊಳ್ಳಿ : ಎಲ್ಲರೂ ಪ್ರತಿಭೆಗಳನ್ನು ಹೊಂದಿರುತ್ತಾರೆ. ಆ ಪ್ರತಿಭೆಗಳನ್ನು ಸರಿಯಾಗಿ ಬಳಸಿಕೊಳ್ಳುವುದರಲ್ಲಿ ಜೀವನದ ಶ್ರೀಮಂತಿಕೆಯ ಗುಟ್ಟು ಅಡಗಿದೆ ಎ೦ದು ಗ೦ಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಕಾರ್ಯದರ್ಶಿ ಸದಾಶಿವ ನಾಯಕ್ ಅಭಿಪ್ರಾಯಪಟ್ಟರು. ಅವರು ಇತ್ತೀಚೆಗೆ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ 2015-16ರ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ವಿವಿಧ ವಿಭಾಗಗಳಲ್ಲಿ ಕಾಲೇಜಿಗೆ ಮೊದಲಿಗರಾಗಿ ಅ೦ಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಅಭಿನ೦ದಿಸುವ ನಿಟ್ಟಿನಲ್ಲಿ ಕಾಲೇಜಿನ ವತಿಯಿ೦ದ ಇಲ್ಲಿನ ರೋಟರಿ ಸಭಾ೦ಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾಧಕ ವಿದ್ಯಾರ್ಥಿಗಳ ಅಭಿನ೦ದನಾ ಸಮಾರ೦ಭದಲ್ಲಿ ಮುಖ್ಯ ಅತಿಥಿ ಸ್ಥಾನದಿ೦ದ ಮಾತನಾಡಿದರು. ಕಾಲೇಜಿನ ಪ್ರಾ೦ಶುಪಾಲ ಕವಿತಾ ಎಮ್ ಸಿ ಸಮಾರ೦ಭದ ಅಧ್ಯಕ್ಷತೆ ವಹಿಸಿದ್ದರು. ದ್ವಿತೀಯ ಪಿಯುಸಿಯಲ್ಲಿ ಅತ್ಯಧಿಕ ಅ೦ಕಗಳನ್ನು ಪಡೆದ ಪಿಸಿಎಮ್ಬಿ ವಿಭಾಗದ ಅಖಿಲೇಶ್ ಖಾರ್ವಿ, ಪಿಸಿಎಮ್ಸಿಯ ದೀಕ್ಷಿತ್ ಎಸ್ ಇಬಿಎಸಿಯ ಅಶ್ವಿನಿ ನಾಯಕ್, ಹೆಚ್ಇಬಿಎಯ ಬಬಿತಾಶ್ರೀ,ಗಣೇಶ್ ಶೆಣೈ ಮತ್ತು ಕಲಾ ವಿಭಾಗದ ನಿಖಿಲ್ ಖಾರ್ವಿ ಇವರನ್ನು ಈ ಸ೦ದರ್ಭದಲ್ಲಿ ಅಭಿನ೦ದಿಸಿ ಗೌರವಿಸಲಾಯಿತು. ಈ ಸಂಧರ್ಭದಲ್ಲಿ ಜಿ.ಎಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕುಂದಾಪುರ ಪುರಸಭೆ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆ ಆರೋಪ ಪ್ರತ್ಯಾರೋಪ, ಗೌಜ ಗಲಾಟೆಯಲ್ಲಿ ಕಳೆದು ಹೋಯಿತು. ಮಾತಿನ ಚಕಮಕಿಯಲ್ಲಿ ಯಾರು ಏನು ಹೇಳುತ್ತಿದ್ದಾರೆ ಎನ್ನೋದು ತಿಳಿಯದಾಯ್ತು. ಅಂಡರ್ ಗ್ರೌಂಡ್ ಡ್ರೈನೇಜ್ ಸಿಷ್ಟಮ್ ಬಗ್ಗೆ ಸ್ವಲ್ಪ ಹೊತ್ತು ಅರ್ಥಪೂರ್ಣ ಚರ್ಚೆ ನಡೆದಿದ್ದು, ಬಿಟ್ಟರೆ, ಹತ್ತಾರು ಸಮಸ್ಯೆ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯಬೇಕಿದ್ದ ಸ್ಥಳ ವ್ಯಥಾ ಆರೋಪ ಪ್ರತ್ಯಾರೋಪದಲ್ಲಿ ಕಳದುಹೋಯಿತು. ಕುಂದಾಪುರ ಪುರಸಭೆಯಲ್ಲಿ ಆರಂಭವಾದ ಅಂಡರ್ ಗ್ರೈಂಡ್ ಡ್ರೈನೇಜ್ ಸಿಸ್ಟಮ್ ಬಗ್ಗೆ ಅರ್ಥಪೂರ್ಣ ಚರ್ಚೆ ನಡೆಯಿತು. ಯುಜಿಡಿ ಯೋಜನೆಗೆ ಬೃಹತ್ ಅನುದಾನ ನೀಡಲಾಗಿದ್ದು, ಕಳಪೆ ಕಾಮಗಾರಿ ಕುಂದಾಪುರ ಪುರಸಭೆಗೆ ಕೆಟ್ಟ ಹೆಸರು ತರುತ್ತಿದೆ. ಇದರಿಂದ ಪುರಸಭೆ ಸದಸ್ಯರ ಇಮೇಜ್ ಹಾಳಾಗಲಿದ್ದು, ಕಾಮಗಾರ ಬಿಡಬೇಕಾಗುತ್ತದೆ ಎಂದು ರಾಜೇಶ್ ಕಾವೇರಿ ಅಭಿಪ್ರಾಯಪಟ್ಟರು. ಯುಪಿಬಿ ಯೋಜನೆ ನಿರಾಕರಿಸಿದರೆ ಮತ್ತೆ ಯೋಜನೆ ಸಿಗೋದು ಕಷ್ಟ. ಯುಡಿಜಿ ಕಳಪೆ ಕಾಮಗಾರಿ ಮಾಡದಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡುವ ಜೊತೆ ಸಭೆ ನಡೆಸಿ, ಅವರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳದ ಪ.ಪೂ ಕಾಲೇಜಿನಲ್ಲಿ 2015-16 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿ.ಯು.ಸಿಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು. ದೇವಳದ ಕಾರ್ಯನಿರ್ವಾಹಣಾಧಿಕಾರಿ ಟಿ. ಆರ್. ಉಮ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರ ಸಾಧನೆಯನ್ನು ಮತ್ತು ಉಪನ್ಯಾಸಕರ ಶ್ರಮವನ್ನು ಶ್ಲಾಘಿಸಿದರು. ಇವತ್ತಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಇನ್ನು ಹೆಚ್ಚಿನ ಶ್ರಮ ವಹಿಸಿ ಯಶಸ್ಸನ್ನು ಸಾಧಿಸಬೇಕೆಂದು ಮಕ್ಕಳಲ್ಲಿ ಸ್ಪೂರ್ತಿ ತುಂಬಿದರು. ಮುಖ್ಯ ಅತಿಥಿಗಳಾಗಿ ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಅಧಿಕಾರಿ ಎಂ ಗೋವಿಂದ ನಾಯ್ಕನಕಟ್ಟೆ ಹಾಗೂ ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಎಚ್. ಕೃಷ್ಣಮೂರ್ತಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಕಾಲೇಜಿನ ಪ್ರಾಂಶುಪಾಲ ಎಸ್.ಅರುಣ್ ಪ್ರಕಾಶ್ ಶೆಟ್ಟಿ ಅಧ್ಯಕ್ಷತೆವಹಿಸಿದ್ದರು. ಉಪನ್ಯಾಸಕರು, ಉಪನ್ಯಾಸಕೇತರ ವರ್ಗದವರು ಉಪಸ್ಥಿತರಿದ್ದರು ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿನಿ ಸುಪ್ರೀಯ ಕೆ.ಎಲ್ ಸ್ವಾಗತಿಸಿ, ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ರಾಧಿಕಾ ನಿರೂಪಿಸಿದರು. ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ರಚನಾ ವಂದಿಸಿದರು.
