Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಗಂಗೊಳ್ಳಿ, ಮರವಂತೆ ಹಾಗೂ ಕಿರಿಮಂಜೇಶ್ವರದ ಹೊಸಹಕ್ಲು ಸೇರಿದಂತೆ ತೀವ್ರ ಕಡಲ ಕೊರೆತ ಉಂಟಾದ ಪ್ರದೇಶಗಳಿಗೆ ರಾಜ್ಯ ಮೀನುಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಭೇಟಿ ನೀಡಿ ವೀಕ್ಷಿಸಿದರು. ಬಳಿಕ ಮಾತನಾಡಿ ಮಳೆಗಾಲದಲ್ಲಿ ಕಡಲಕೊರೆತದಿಂದ ತೀರ ಪ್ರದೇಶದ ಜನರಿಗುಂಟಾಗುವ ತೊಂದರೆಯ ಬಗ್ಗೆ ಅರಿವಿದ್ದು ಸಮಸ್ಯೆ ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆಯಿತ್ತರು. ಕಳೆದ ನಾಲ್ಕು ದಿನಗಳ ಹಿಂದೆ ಬಿರುಗಾಳಿಯಿಂದಾಗಿ ನೆಲಸಮಗೊಂಡಿದ್ದ ಮನೆಯವರಿಗೆ ಪರಿಹಾರವಾಗಿ 95,000ರೂ. ಚೆಕ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ, ಜಿಲ್ಲಾ ಕೆಡಿಪಿ ಸದಸ್ಯ ರಾಜು ಪೂಜಾರಿ, ತಾಪಂ ಸದಸ್ಯ ರಾಜು ದೇವಾಡಿಗ, ತಹಶೀಲ್ದಾರ್ ಕಿರಣ ಗೌರಯ್ಯ ಹಾಗೂ ಇತರ ಜನಪ್ರತಿನಿಧಿಗಳು, ಅಧಿಕಾರಿಗಳು ಜೊತೆಗಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕೋಟ: ಇಲ್ಲಿನ ಬಸ್ ನಿಲ್ದಾಣದಲ್ಲಿರುವ ಶ್ರೀ ದುರ್ಗಾ ಜುವೆಲ್ಲರ‍್ಸ್‌ಗೆ ಸಂಜೆ ವೇಳೆ ಗ್ರಾಹಕರ ಸೋಗಿನಲ್ಲಿ ಕಳ್ಳರು ನುಗ್ಗಿ ಮಾಲಕನಿಗೆ ಹಲ್ಲೆ ಮಾಡಿ ಚಿನ್ನ ದರೋಡೆ ಮಾಡಿದ ಘಟನೆಗೆ ಸಂಬಂಧಿಸಿದ ಮತ್ತೋರ್ವ ಆರೋಪಿಯನ್ನು ಕೋಟ ಪೊಲೀಸ್‌ರು ವಶಕ್ಕೆ ಪಡೆದಿದ್ದಾರೆ. ಗೋವಾ ಮೂಲದ ಪ್ರಮಥೇಶ್(21) ಎನ್ನುವವನು ಸದ್ಯ ಕೋಟ ಪೊಲೀಸ್‌ರು ವಶಕ್ಕೆ ಪಡೆದು ಹಿರಿಯಡಕ ಜೈಲಿನಲ್ಲಿ ಹೆಚ್ಚಿನ ತನಿಖೆಗಾಗಿ ಇರಿಸಿದ್ದಾರೆ. ಮೇ 21ರ ಸಂಜೆ ವೇಳೆಗೆ ಗ್ರಾಹಕರ ಸೋಗಿನಲ್ಲಿ ಚಿನ್ನದಂಗಡಿಗೆ ಆಗಮಿಸಿದ ಅಪರಿಚಿತರು, ಚಿನ್ನದ ಆಭರಣಗಳನ್ನು ತೋರಿಸುವಂತೆ ಚಿನ್ನದಂಗಡಿಯ ಮಾಲಕ ರವೀಂದ್ರ ಆಚಾರ‍್ಯ ಅವರಿಗೆ ತಿಳಿಸಿ, ಅವರ ತಲೆಗೆ ಹೊಡೆದು ಕೆಳಗೆ ಬೀಳಿಸಿ, ಒಳಗಿನಿಂದಲೇ ಅಂಗಡಿಯ ಶಟರ್ ಹಾಕಿ ಆಭರಣಗಳನ್ನು ಗಂಟುಕಟ್ಟಿದ್ದರು. ಪಕ್ಕದ ಅಂಗಡಿಯ ಪ್ರಭಾಕರ ಕಾಮತ್ ಅವರು ಅಸಮಯ ಪ್ರಜ್ಞೆ ಮೆರೆದು ಅಂಗಡಿಯ ಶಟರ್ ಎಳೆದಾಗ, ಪರಾರಿಯಾಗಲು ಯತ್ನಿಸುತ್ತಿದ್ದ ಓರ್ವರನ್ನು ಪಕ್ಕದ ಅಂಗಡಿಯ ಎಳೆದಾಡಿ, ದರೋಡೆ ಕೋರರು ಪರಾರಿಯಾಗಲು ಯತ್ನಿಸಿದ್ದ ಬೈಕ್‌ನ್ನು ದೂಡಿ ಹಾಕಿದ್ದರು. ಬೈಕ್ ಬಿಟ್ಟು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬುದ್ಧವಂತಿಕೆ, ಕಾರ್ಯಚತುರತೆ ಇದ್ದವರಿಗೆ ಸಾಧನೆ ಮಾಡುವುದು ಕಷ್ಟಕರವಾಗದು. ಹಾಗೆಯೇ ತಮ್ಮ ಹಿರಿಯರು ಹಾಕಿಕೊಟ್ಟ ವಿಚಾರಧಾರೆ ಹಾಗೂ ಸ್ವ-ಪ್ರತಿಭೆಯಿಂದ ಸಪ್ತ ಕೊಂಕಣಿ ಸಮುದಾಯದ ಭವ್ಯ ಪರಂಪರೆ ನಡೆದುಬಂದಿದೆ. ಇದನ್ನು ಹೀಗೆಯೆ ಉಳಿಸಿ ಬೆಳೆಸಬೇಕು ಎಂದು ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀ ವಿದ್ಯಾಧಿರಾಜ ತೀರ್ಥ ಸ್ವಾಮೀಜಿ ಹೇಳಿದರು. ನಾಯ್ಕನಕಟ್ಟೆ ಜಿಎಸ್‌ಬಿ ಸಮಾಜದವರು ನೂತನವಾಗಿ ನಿರ್ಮಿಸಿದ ಶ್ರೀ ವೆಂಕಟರಮಣ ದೇವಸ್ಥಾನದ ಪುನರ್ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿ ಮಾತನಾಡಿದರು. ಸರ್ವಸಿದ್ಧಿಗೆ ಸಾಧನೆಯೇ ಮುಖ್ಯ. ಮನೋಕಲ್ಪತ ವಿಕಲ್ಪಗಳಲ್ಲಿ ಮರೆಯಾಗಿರುವ ಮಾನವನ ನೈಜ ಸ್ವಭಾವ ಅಭಿವ್ಯಕ್ತವಾಗುವಂತೆ ಈ ಶರೀರವನ್ನು ದೇಗುಲವನ್ನಾಗಿ ಮಾಡುವುದೇ ಸಂಸ್ಕಾರ. ನಮ್ಮ ಜೀವನವು ಒಂದು ಯಜ್ಞವಿದ್ದಂತೆ. ಯಜ್ಞ ಮಾಡುವ ಮೊದಲು ಸಲಕರಣೆಗಳನ್ನು ಶುದ್ಧೀಕರಿಸುವಂತೆ ಪ್ರತಿಯೊಬ್ಬರು ತಮ್ಮ ತನು ಮನಗಳನ್ನು ಕೆಲವು ವಿಧಿ ಪೂರ್ವಕ ಕರ್ಮಗಳಿಂದ ಪರಿಶುದ್ಧಗೊಳಿಸಬೇಕು. ಇಂತಹ ಕರ್ಮಗಳಿಗೆ ಅನೇಕ ನಡಾವಳಿಗಳನ್ನು ಋಷಿ ಮುನಿಗಳು, ಯೋಗಿಗಳು ಹಾಕಿಕೊಟ್ಟಿದ್ದಾರೆ ಎಂದರು. ದೇವಳದ ಪುನಃ…

Read More

ಪಿಯುಸಿ ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳಿಗಾಗಿಯೇ ಅಕೌಂಟೆನ್ಸಿ ವಿಷದಲ್ಲಿ ಗುಣಮಟ್ಟದ ತರಬೇತಿಯನ್ನು ನೀಡುತ್ತಿರುವ ಬೈಂದೂರು ಯಡ್ತರೆಯ ಯಸ್ಕೋರ್ಡ್ ಕೋಚಿಂಗ್ ಕ್ಲಾಸಸ್ ಕಳೆದ ಹನ್ನೊಂದು ವರ್ಷಗಳಿಂದ ನೂರಾರು ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡುತ್ತಾ ಸದ್ದಿಲ್ಲದೇ ಹೆಸರು ಮಾಡಿದೆ. ಮೊದಲು ಎಸ್.ಎಸ್.ಎಲ್.ಸಿ ಯಿಂದ ಆರಂಭಗೊಂಡು ಪಿಯುಸಿ ಹಾಗೂ ಡಿಗ್ರಿ ವಿದ್ಯಾರ್ಥಿಗಳಿಗೆ ಗಣಿತ, ಲೆಕ್ಕಶಾಸ್ತ್ರದ ವಿಷಯಗಳಿಗಾಗಿಯೇ ತಗರತಿಗಳನ್ನು ಆರಂಭಿಸಿದ ಸಂಸ್ಥೆ, ಕ್ಲಿಷ್ಟವೆಂಬ ಗಣಿತ, ಲೆಕ್ಕಶಾಸ್ತ್ರದ ವಿಷಯಗಳನ್ನು ಸುಲಭವಾಗಿ ಅರಹುವ ಮೂಲಕ ನೂರಾರು ವಿದ್ಯಾರ್ಥಿಗಳ ಆಶಾಕಿರಣವಾಗಿ ನಿಂತಿದೆ. ದುಡ್ಡು ಮಾಡುವ ದಂದೆಗಿಳಿದು ಶಿಕ್ಷಣವನ್ನು ವ್ಯಾಪಾರಿಕರಣಗೊಳ್ಳುತ್ತಿರುವ ಇಂದಿನ ದಿನಮಾನಗಳಲ್ಲಿ, ಖಾಸಗಿ ತರಬೇತಿಗಳನ್ನು ನಡೆಸುತ್ತಿರುವುದನ್ನು ಎಲ್ಲಿಯೂ ಪ್ರಚುರ ಪಡಿಸದೇ ಕೇವಲ ತನ್ನ ಹವ್ಯಾಸಕ್ಕಾಗಿ ಎಂ.ಕಾಂ ಪದವೀಧರರಾಗಿರುವ ನಾಗರಾಜ ಪಿ. ಯಡ್ತರೆ ಆರಂಭಿಸಿದ ಈ ಸಂಸ್ಥೆ ಇಂದಿಗೂ ವಿದ್ಯಾರ್ಥಿಗಳ ಬಾಳು ಬೆಳಗಿತ್ತಿದೆ. ಅತಿ ಕಡಿಮೆ ಶುಲ್ಕದಲ್ಲಿ, ನಿಯಮಿತವಾದ ವಿದ್ಯಾರ್ಥಿಗಳಿಗಷ್ಟೇ ತರಗತಿಗಳನ್ನು ನಡೆಸುತ್ತಾ ಬರುತ್ತಿದ್ದಾರೆ. ಎಷ್ಟೋ ಬಾರಿ ಬಡ ವಿದ್ಯಾರ್ಥಿಗಳಿಗೆ ಇಲ್ಲಿ ಪ್ರವೇಶಾತಿ ಶುಲ್ಕವೆಂಬುದು ಶೂನ್ಯವಾದದ್ದು ಇದೆ. ತರಗತಿಯೂ ಅಷ್ಟೇ ಶಿಸ್ತಿನಿಂದ, ವಿದ್ಯಾರ್ಥಿಗಳಿಗೂ ಅರ್ಥವಾಗುವಂತೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ಕುಂದಾಪುರ ಬಾರ್ ಅಸೋಸಿಯೇಶನ್ ಆಶ್ರಯದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ದ್ವಿತೀಯ ಪಿಯು ಪರೀಕ್ಷೆಯಲ್ಲಿ ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್ ಪಡೆದ ನ್ಯಾಯವಾದಿ ಗುರುಮೂರ್ತಿ ರಾವ್ ಅವರ ಪುತ್ರ, ಕುಂದಾಪುರ ಆರ್‌ಎನ್‌ಎಸ್ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಅಕ್ಷಯ್ ಜಿ. ರಾವ್ ಅವರನ್ನು ಸನ್ಮಾನಿಸಲಾಯಿತು. ಕುಂದಾಪುರ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ರಾಜಶೇಖರ ವಿ. ಪಾಟೀಲ್ ಸನ್ಮಾನಿಸಿ ಮಾತನಾಡಿದರು. ಕುಂದಾಪುರ ಬಾರ್ ಅಸೋಸಿಯೇಶನ್ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಹಿರಿಯ ಸಿವಿಲ್ ನ್ಯಾಯಾಧೀಶ ಶೀನಿವಾಸ ಸುವರ್ಣ, ನ್ಯಾಯಾಧೀಶರಾದ ಪ್ರೀತ್ ಜೆ, ಲಾವಣ್ಯ ಚಂದ್ರಶೇಖರ್ ಬಣಕಾರ್ ಉಪಸ್ಥಿತರಿದ್ದರು. ಕಾರ್ಯದರ್ಶಿ ರವೀಂದ್ರ ಶೆಟ್ಟಿ ವಂದಿಸಿದರು. ಸಂತೋಷ್ ವಿದ್ಯಾರ್ಥಿಯ ಪರಿಚಯ ಪತ್ರ ವಾಚಿಸಿದರು. ನ್ಯಾಯವಾದಿ ರಾಘವೇಂದ್ರ ಚರಣ ನಾವಡ ಕಾರ್ಯಕ್ರಮ ನಿರ್ವಹಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಬಿಜೂರು ಕಳುಹಿನಬಾಗಿಲು ನಿವಾಸಿ, ನಿವೃತ್ತ ಉಪನ್ಯಾಸಕ ಶಿಕ್ಷಣ ತಜ್ಞ ಬಿ. ಹೊನ್ನ ದೇವಾಡಿಗ (೮೫) ಅಲ್ಪ ಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ಬುಧವಾರ ನಿಧನರಾದರು. ಮದ್ರಾಸಿನ ವೈ.ಎಮ್.ಸಿ.ಎ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ತರಬೇತಿಯನ್ನು ಪಡೆದಿದ್ದ ಅವರು, ಬೈಂದೂರು ಬೋರ್ಡ್ ಹೈಸ್ಕೂಲಿನಲ್ಲಿ ದೈಹಿಕ ಶಿಕ್ಷಕರಾಗಿ, ಬಳಿಕ ಖಾಸಗಿಯಾಗಿ ಸ್ನಾತಕೋತರ ಪದವಿ ಪಡೆದು, ತೆಕ್ಕಟ್ಟೆ, ಶಿರೂರು ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅವರು ಬೈಂದೂರು ಪದವಿಪೂರ್ವ ಕಾಲೇಜಿನಲ್ಲಿ ಸುಧೀರ್ಘ ಕಾಲ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ದಾಖಲೆ ಹೊಂದಿದ್ದಾರೆ. ಅಲ್ಲದೇ ಅದೇ ಕಾಲೇಜಿನಲ್ಲಿ ಪ್ರಭಾರ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಕಾಲೇಜಿನಲ್ಲಿ ಸ್ಕೌಟ್ ಗೈಡ್ ಕಮಾಂಡರ್ ಆಗಿ ವಿದ್ಯಾರ್ಥಿಗಳ ಮೆಚ್ಚಿನ ಹೊನ್ನ ಮಾಸ್ಟ್ ಆಗಿದ್ದರು. ಬೈಂದೂರಿನ ದೇವಾಡಿಗ ಸಂಘದ ಅಧ್ಯಕ್ಷರಾಗಿ ಹಾಗೂ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ದುಡಿದಿದ್ದಾರೆ. ಮೃತರಿಗೆ ಪತ್ನಿ, ಮೂವರು ಪುತ್ರರು ಹಾಗೂ ಪುತ್ರಿ ಇದ್ದಾರೆ. ಗಣ್ಯರಿಂದ ಅಂತಿಮ ನಮನ: ಜಿ.ಪಂ. ಸದಸ್ಯೆ ಗೌರಿ ದೇವಾಡಿಗ, ತಾ.ಪಂ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪ್ರತಿಭೆ ಇದ್ದವರಿಗೆ ಅವಕಾಶಗಳ ಕೊರತೆ ಇಲ್ಲ. ಆದರೆ ಪ್ರತಿ ದಿನವೂ ಎದುರಾಗುವ ಅವಕಾಶಗಳನ್ನು ಜಾಣ್ಮೆಯಿಂದ ಬಳಸಿಕೊಳ್ಳುವ ಚಾಕಚಕ್ಯತೆ, ಸಾಗುವ ಹಾದಿಗೆ ನಿರ್ದಿಷ್ಟ ಗುರಿ ಇದ್ದರೇ ಮಾತ್ರ ನಾವು ಎಲ್ಲರಿಂದಲೂ ಭಿನ್ನರಾಗಿ ಗುರುತಿಸಿಕೊಳ್ಳುತ್ತೇವೆ ಮತ್ತು ಯಶಸ್ಸು ತಾನಾಗಿಯೇ ಹಿಂಬಾಲಿಸುತ್ತದೆ ಎಂದು ಪತ್ರಕರ್ತ ಅರುಣಕುಮಾರ್ ಶಿರೂರು ಹೇಳಿದರು. ಸಂಚಲನ ರಿ. ಹೊಸೂರು ಆಶ್ರಯದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಕಾರದೊಂದಿಗೆ ಬೈಂದೂರು ಗ್ರಾಪಂ ವ್ಯಾಪ್ತಿಯ ಹೊಸೂರಿನ ಹೊಂಗಿರಣ ರಂಗಮಂದಿರದಲ್ಲಿ ಚಾಲನೆಗೊಂಡ ನಾಲ್ಕು ದಿನಗಳ ಕಾನನದೊಳಗೊಂದು ರಂಗಸುಗ್ಗಿ ‘ಶರತ್ ರಂಗ ಸಂಚಲನ -2016’ರ ಜನಪದ-ಮಾಯಾ ವೈಭವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇಂದಿನ ಟಿ.ವಿ ಮಾಧ್ಯಮಗಳು ಹಾಗೂ ಹಣದ ಪ್ರಭಾವ ಒಂದು ದಿನದಲ್ಲಿ ಸಾಧನೆಯ ಉತ್ತುಂಗ ಸ್ಥಾನಕ್ಕೇರುವುದೇ ಯಶಸ್ಸು ಎಂಬ ಸಂಕುಚಿತ ಭಾವನೆಯನ್ನು ಮನಸ್ಸಿನೊಳಕ್ಕೆ ತುರುಕುತ್ತಿದೆ. ಹೀಗೆ ಪಡೆದ ಯಶಸ್ಸು ಬಹುಕಾಲ ಉಳಿಯದು ಎಂದ ಅವರು ಜನಪರವಾದ ವಿಚಾರಗಳನ್ನು ಕೂಡಿಸಿಕೊಂಡು ಸಾಮಾಜಿಕವಾಗಿ ಏನನ್ನಾದರೂ ಕೊಡಬೇಕು ಎಂಬು ತುಡಿತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ವೃತ್ತಿಗೆ ಅನುಗುಣವಾಗಿ ಸಂಘಟನೆಗಳ ಸದಸ್ಯರ ವೃತ್ತಿ ಕೌಶಲ್ಯ ಹೆಚ್ಚಿಸಲು ಅಗತ್ಯ ತರಬೇತಿ ಹಾಗೂ ಮಾರ್ಗದರ್ಶನ ಅತ್ಯಗತ್ಯ. ಧ್ವನಿ-ಬೆಳಕು ವೃತ್ತಿ ನಿರತರು ಅಪಾಯದ ನಡುವೆ ಕೆಲಸ ಮಾಡಬೇಕು. ಅವರಲ್ಲಿ ವೃತ್ತಿ ಕೌಶಲ್ಯಗಳಿದ್ದರೆ ಅದರ ಬಗೆಗೆ ಮುನ್ನೆಚ್ಚರಿಕೆ ವಹಿಸಬಹುದು ಮತ್ತು ಗ್ರಾಹಕರ ನಿರೀಕ್ಷೆಯ ಮಟ್ಟದ ಸೇವೆ ನೀಡಬಹುದು ಎಂದು ಖಂಬದಕೋಣೆ ರೈತರ ಸೇವಾ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು. ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ನಡೆದ ಬೈಂದೂರು ವಲಯ ಧ್ವನಿ-ಬೆಳಕು ಸಂಯೋಜಕರ ಸಂಘದ ಐದನೇಯ ವಾರ್ಷಿಕ ಮಹಾಸಭೆ, ಐದು ಸಾಧಕರಿಗೆ ಸನ್ಮಾನ ಹಾಗೂ ಕುಟುಂಬ ಸಮ್ಮಿಲನ ಉದ್ಘಾಟಿಸಿ ಮಾತನಾಡಿದರು. ಸಂಘದ ಅಧ್ಯಕ್ಷ ಎನ್. ಶಶಿಧರ ಶೆಣೈ ಅಧ್ಯಕ್ಷತೆವಹಿಸಿದ್ದರು. ವಿವಿಧ ಕ್ಷೇತ್ರಗಳ ಸಾಧಕರಾದ ಯಕ್ಷಗಾನ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ, ಪತ್ರಕರ್ತ-ಸಮಾಜ ಸೇವಕ ಎಸ್. ಜನಾರ್ದನ್ ಮರವಂತೆ, ಶಿಕ್ಷಕ ಬಿ. ವಿಶ್ವೇಶ್ವರ ಅಡಿಗ, ರಂಗಭೂಮಿ-ಸಂಗೀತ ಯು. ಶ್ರೀನಿವಾಸ ಪ್ರಭು, ಅಂತರಾಷ್ಟ್ರೀಯ ಕ್ರೀಡಾಪಟು ಶಂಕರ ಪೂಜಾರಿ ಕಾಡಿನ್‌ತಾರು ಇವರನ್ನು ಗೌರವಿಸಲಾಯಿತು.…

Read More

ರೋಟರಿ ತತ್ವಗಳು ಮೌಲ್ಯಯುತವಾದ ಮನುಜ ಧರ್ಮವನ್ನು ಪ್ರತಿಪಾದಿಸುತ್ತದೆ : ರವಿ ಹೆಗ್ಡೆ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿಶ್ವವನ್ನೇ ಒಂದು ಮನೆಯಂತೆ ನೋಡುವ ಅಂತರಾಷ್ಟ್ರೀಯ ರೋಟರಿ ನಮ್ಮ ಸನಾತನ ಸಂಸ್ಕೃತಿಯ ವಸುಧೈವ ಕುಟುಂಬಕಮ್ ನೀತಿಗನುಗುಣವಾಗಿಯೇ ಇದೆ. ರೋಟರಿಯ ಸ್ವಾರ್ಥ ಮೀರಿದ ಸೇವೆ ಧ್ಯೇಯವು ನಮ್ಮ ಸಿರಿ ಸಂಪನ್ನ ಪರಂಪರೆಯ ಪರೋಪಕಾರಕ್ಕಾಗಿಯೇ ಮನುಜ ಶರೀರರವು ಉಕ್ತಿಯೇ ಆಗಿದೆ. ವಿಶ್ವದಾದ್ಯಂತ ಒಂದೇ ಮಾದರಿಯಾಗಿರುವ ರೋಟರಿ ಸಂವಿಧಾನ ಮತ್ತದರ ತತ್ವಗಳು ಮೌಲ್ಯಯುತವಾದ ಮನುಜ ಧರ್ಮವನ್ನೇ ಪ್ರತಿಪಾದಿಸುತ್ತದೆ. ರೋಟರಿಯ ಈ ಎಲ್ಲಾ ಮೌಲ್ಯಗಳನ್ನು ಅಳವಡಿಸಿಕೊಂಡಲ್ಲಿ ಸದಸ್ಯರ ಜನುಮ ಸಾರ್ಥಕವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂಬುವುದಾಗಿ ರೋಟರಿ ಜಿಲ್ಲೆ 3170 ಇದರ ನಿಕಟಪೂರ್ವ ಜಿಲ್ಲಾ ಕಾರ್ಯದರ್ಶಿ ರವಿ ಹೆಗಡೆ ಹೇಳಿದರು. ಅವರು ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್‌ನ ಆಶ್ರಯದಲ್ಲಿ ಕೋಟೇಶ್ವರದ ಸಹನಾ ಕನ್‌ವೆನ್ಶನ್ ಸೆಂಟರ್‌ನ ಕೃಷ್ಣ ಸಭಾಂಗಣದಲ್ಲಿ ನಡೆದ ನೂತನ ಅಧ್ಯಕ್ಷ, ಕಾರ್ಯದರ್ಶಿಗಳ ಪದಪ್ರದಾನ ನೆರವೇರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರಾಗಿ ಕೆ. ನರಸಿಂಹ ಹೊಳ್ಳ, ಕಾರ್ಯದರ್ಶಿಯಾಗಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕರ್ನಾಟಕದ ಇಂದಿನ ಪರಿಸ್ಥಿತಿ ತುಂಬಾ ಗೊಂದಲಮಯವಾದುದು. ನಮ್ಮ ಮುಂದಿನ ಜನಾಂಗ ಆಂಗ್ಲ ಭಾಷೆಯನ್ನೇ ಆಯ್ಕೆ ಮಾಡಿಕೊಂಡಿದ್ದಾರೆ. ದಕ್ಷಿಣ ಭಾರತದ ಇತರೆ ಭಾಷೆಗಳಿಗೆ ಹೋಲಿಸಿದರೆ ಕನ್ನಡದ ಪರಿಸ್ಥಿತಿ ಚಿಂತಾಜನಕವಾಗಿದೆ. ಕನ್ನಡ ನಾಡಿನಲ್ಲೇ ಕನ್ನಡವನ್ನು ಉಳಿಸುವ ಪ್ರಮೇಯ ಬಂದೊದಗಿದೆ ಎಂದು ಅಂಕಣಕಾರ ನರೇಂದ್ರ ರೈ ದೇರ್ಲ ಹೇಳಿದರು. ಕೋಟೇಶ್ವರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ ಕೋಟೇಶ್ವರ ಹೋಬಳಿ ಘಟಕ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು ಇಂದು ಆಹಾರ, ಶಿಕ್ಷಣ, ಯುದ್ದ, ಗಾಳಿ ಎಲ್ಲವೂ ವ್ಯಾಪಾರಿಕರಣವಾಗಿದೆ. ಜಾಗತೀಕರಣದಿಂದ ಭಾಷೆಗೆ ಇಂತಹ ಪರಿಸ್ಥಿತಿ ಬಂದಿದೆ ಎನ್ನುವುದು ಕಲ್ಪನೆಗೆ ಸರಿಯಲ್ಲ ಎಂದರು. ಕೋಟ ಗೀತಾನಂದ ಪೌಂಡೇಶನ್ ಪ್ರವರ್ತಕ ಆನಂದ ಸಿ.ಕುಂದರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಆಂಗ್ಲ ಭಾಷೆ ವೈಭವೀಕರಣದಿಂದ ಕನ್ನಡ ಭಾಷೆ ಅಪಾಯದ ಅಂಚಿನಲ್ಲಿದೆ. ನಮ್ಮ ಭಾಷೆ ಉಳಿಸುವ ನಿಟ್ಟಿನಲ್ಲಿ ಮಕ್ಕಳಿಗೆ ಪ್ರಾಥಮಿಕ ಶಿಕ್ಷಣದಲ್ಲಿ ಇಂಗ್ಲಿಷ್ ಜತೆಗೆ ಕನ್ನಡ ಕಡ್ಡಾಯಗೊಳಿಸುವ ಕೆಲಸವಾಗಬೇಕು ಎಂದರು. ಕನ್ನಡ…

Read More