ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮೀಪದ ಶಿರೂರು ಗ್ರೀನ್ವ್ಯಾಲಿ ಖಾಸಗಿ ಶಾಲಾ ಬಸ್ಸಿಗೆ ಕಾರು ಡಿಕ್ಕಿಯಾದ ಘಟನೆ ಶಿರೂರು ಸಂಕದಗುಂಡಿ ಎಂಬಲ್ಲಿ ನಡೆದಿದ್ದು, ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ. ಶಾಲೆ ಮುಗಿದ ಬಳಿಗೆ ವಿದ್ಯಾರ್ಥಿಗಳನ್ನು ಮನೆಗೆ ಕರೆದೊಯ್ಯುತ್ತಿದ್ದ ವೇಳೆ ಕುಂದಾಪುರ ಕಡೆಗೆ ತೆರಳುತ್ತಿದ್ದ ಐಟ್ವೆಂಟಿ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನುಜ್ಜುನುಜ್ಜಾಗಿದೆ. ಬಸ್ಸಿನಲ್ಲಿರುವ ವಿದ್ಯಾರ್ಥಿಗಳಿಗೆ ಹಾಗೂ ಕಾರಿನಲ್ಲಿಸದ್ದವರು ಅಪಾಯದಿಂದ ಪಾರಾಗಿದ್ದಾರೆ. ವಿದ್ಯಾರ್ಥಿಗಳನ್ನು ಬದಲಿ ಶಾಲಾ ವಾಹನದಲ್ಲಿ ಸುರಕ್ಷಿತವಾಗಿ ಕಳುಹಿಸಿಕೊಡಲಾಯಿತು. ಕುಂದಾಪ್ರ ಡಾಟ್ ಕಾಂ ಸುದ್ದಿ ತ್ರಾಸಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಎಂಟು ಮಂದಿ ವಿದ್ಯಾರ್ಥಿಳು ದಾರುಣವಾಗಿ ಸಾವನ್ನಪ್ಪಿದ ಘಟನೆ ಹಸಿಯಾಗಿರುವಾಗಲೇ ತಾಲೂಕಿನಲ್ಲಿ ಮತ್ತೊಂದು ಅಫಘಾತ ನಡೆದಿರುವುದು ಪೊಷಕರ ನಿದ್ದೆಗೆಡಿಸಿದೆ./ ಕುಂದಾಪ್ರ ಡಾಟ್ ಕಾಂ ಸುದ್ದಿ/
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಮ್ಮ ಸಂಘವು ವಾರ್ಷಿಕ ಬಂದ ಲಾಭಾಂಶದಲ್ಲಿ ರೂ. 7-8ಲಕ್ಷ ಹಣವನ್ನು ಪ್ರತಿ ಮಗುವು ಶಿಕ್ಷಣ ವಂಚಿತವಾಗದೆ ಪ್ರತಿಭಾವಂತರಾಗಬೇಕು ಎಂಬ ಉದ್ದೇಶದಿಂದ ಶಿಕ್ಷಣಕ್ಕೆ ಸಂಬಂಧಪಟ್ಟ ಚಟುವಟಿಕೆಗಾಗಿ ವ್ಯಯಿಸುತ್ತಿದೆ ಎಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು. ಉಪ್ಪುಂದದ ಶಂಕರ ಕಲಾ ಮಂದಿರದ ಸಮೃದ್ಧ್ ಸಭಾಭವನದಲ್ಲಿ ನಡೆದ ಸಂಘದ ವತಿಯಿಂದ ಸಂಘದ ಕಾರ್ಯವ್ಯಾಪ್ತಿಯಲ್ಲಿ ಬರುವ ಎಲ್ಲಾ 38 ಸರಕಾರಿ ಹಿರಿಯ, ಪ್ರಾಥಮಿಕ ಶಾಲೆಗಳ 8ನೇ ತರಗತಿಯವರೆಗಿನ 3271 ವಿದ್ಯಾರ್ಥಿಗಳಿಗೆ ಸುಮಾರು 4ಲಕ್ಷ ರೂ. ಮೌಲ್ಯದ ಉಚಿತ ನೋಟ್ ಪುಸ್ತಕ ವಿತರಣಾ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದರು ಸಮಾಜದ ಬದ್ದತೆಗೆ ಅನುಕೂಲ ನೀಡಬೇಕಾದ ನೆಲೆಯಲ್ಲಿ ಹಾಗೂ ಸಮಾಜವನ್ನು ಮುನ್ನಡೆಸುವ ಹೊಣೆ ಅರಿತು ಸರಕಾರ ಒಂದರಿಂದ ಏಳನೇ ತರಗತಿಯವರೆಗೆ ಅತೀ ಕಡಿಮೆ ಮಕ್ಕಳಿರುವ ಶಾಲೆಗಳನ್ನು ಮುಚ್ಚುವ ಅಥವಾ ವಿಲೀನಗೊಳಿಸುವ ಚಿಂತನೆ ಮಾಡಬೇಕು. ಮುಂದಿನ ೧೦ ವರ್ಷದ ದೂರದೃಷ್ಠಿತ್ವದಿಂದ ಯೋಚಿಸಿದಾಗ ಸರಕಾರಿ ಶಾಲೆಗಳಿಗೆ ಮಕ್ಕಳೆ ಸಿಗದ…
ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಗ್ರಾಮೀಣ ಭಾಗದ ಸಂಪರ್ಕಕ್ಕೆ ರೂಟ್ ಮ್ಯಾಪ್ ಆಗಿದ್ದರೂ ಬಸ್ಸು ಓಡುತ್ತಿಲ್ಲ, ಶಾಲೆಗಳು ಶಿಥಿಲಗೊಂಡಿದ್ದರೂ ದುರಸ್ಥಿ ನಡೆಯುತ್ತಿಲ್ಲ. ನಾವುಂದದಲ್ಲಿ ವಿದ್ಯಾರ್ಥಿಗಳು ಒಂದೇ ವಿಷಯದಲ್ಲಿ ಫೇಲ್ ಆಗಿದ್ದರೂ ಕ್ರಮ ಕೈಗೊಂಡಿಲ್ಲ. ಶಂಕರನಾರಾಯಣದ ಬಸ್ ನಿಲ್ದಾಣವನ್ನು ತಾಪಂ ಅನುಮತಿ ಪಡೆಯದೇ ಏಕಾಏಕಿ ಕೆಡವಿದ್ದು ಸರಿಯಲ್ಲ. ಪಡಿತರ ಸಮಸ್ಯೆ ನಿವಾರಣೆಯಾಗಿಲ್ಲ. 94-ಸಿ ಗೊಂದಲ ಮುಗಿದಿಲ್ಲ. ಇದು ಮಂಗಳವಾರ ಕುಂದಾಪುರ ತಾಪಂ ಸಭಾಂಗಣದಲ್ಲಿ ಜರುಗಿದ ಪ್ರಥಮ ತಾಪಂ ಸಾಮಾನ್ಯ ಸಭೆಯಲ್ಲಿ ನಡೆದ ಚರ್ಚೆ ಹಾಗೂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರ ಹೈಲೈಟ್ಸ್. ಉತ್ತರ ಕೊಡದ ಮೇಲೆ ಸಭೆಗೆ ಬಂದೇನು ಪ್ರಯೋಜನ? ನಡುವಳಿಯಲ್ಲಿ ಕೇಳವಾಗುವ ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದ ಅಧಿಕಾರಿಗಳು ಬರೋದಿಲ್ಲ. ಅವರ ಪರವಾಗಿ ಬರುವವರಿಗೆ ಸಮಸ್ಯೆ ಅರಿವೇ ಇರೋದಿಲ್ಲ. ಪೂರ್ವ ತಯಾರಿಯಿಲ್ಲದೆ, ಕಾಟಾಚಾರಕ್ಕೆ ಸಭೆಗೆ ಹಾಜರಾಗುವುದಾದರೇ ಅದರ ಅವಶ್ಯಕತೆ ಏನುದೆ ಎನಿದೆ ಎಂದು ಶಂಕರನಾರಾಯಣ ತಾಪಂ ಸದಸ್ಯ ಉಮೇಶ್ ಶೆಟ್ಟಿ ಕಲ್ಗದ್ದೆ ಅಧಿಕಾರಿಗಳ ತರಾಟೆಗೆ ತೆಗೆದುಕೊಂಡರು. ಕುಂದಾಪ್ರ ಡಾಟ್ ಕಾಂ ವರದಿ. ಬಸ್ಸು ಬಿಡದಿದ್ದರೇ ಪ್ರತಿಭಟಿಸುವ…
ಕೈ-ಕೈ ಜೋಡಿಸಿದ ಶಾಸಕ ಗೋಪಾಲ ಪೂಜಾರಿ ಸಚಿವ ಪ್ರಮೋದ್ ಮಧ್ವರಾಜ್ ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ರಾಜ್ಯ ಕಾಂಗ್ರೆಸ್ ಸರಕಾರ ಸಚಿವ ಸಂಪುಟ ಪುನರ್ ರಚನೆಯ ವೇಳೆ ಮಂತ್ರಿ ಮಂಡಲದಲ್ಲಿ ಅವಕಾಶ ನೀಡದಿರುವುದಕ್ಕೆ ಅಸಮಾಧಾನಗೊಂಡಿದ್ದ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲ ಪೂಜಾರಿ ಅವರ ಕೊನೆಗೂ ಭಿನ್ನರ ರೇಸ್ನಿಂದ ಹಿಂದೆ ಸರಿದಿದ್ದು, ಅವರ ನಿವಾಸಕ್ಕೆ ತೆರಳಿದ್ದ ಪ್ರಮೋದ್ ಮಧ್ವರಾಜ್ ಅವರೊಂದಿಗೆ ಪ್ರೀತಿಯಿಂದಲೇ ಆಹ್ವಾನಿಸಿಕೊಂಡು ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಸಿದ್ದಾರೆ. ರಾಜ್ಯದ ಮಂತ್ರಿ ಪದವಿ ವಂಚಿತ ಭಿನ್ನರ ಪಾಳಯದಲ್ಲಿ ಗುರುತಿಸಿಕೊಂಡಿದ್ದ ಗೋಪಾಲ ಪೂಜಾರಿ ಅವರು ತಮ್ಮ ನಿಲುವು ಬದಲಿಸಿದ್ದು ಅಭಿವೃದ್ಧಿಗಾಗಿ ನೂತನ ಸಚಿವರಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ. ಬೈಂದೂರು ಕ್ಷೇತ್ರದಲ್ಲಿ ಅಸಮಾಧಾನ ಸತತ ನಾಲ್ಕನೇ ಭಾರಿ ಶಾಸಕರಾಗಿ ಆಯ್ಕೆಯಾಗಿದ್ದ ಗೋಪಾಲ ಪೂಜಾರಿ ಅವರಿಗೆ ಸಚಿವ ಸ್ಥಾನ ಸಿಗಬಹುದೆಂಬ ಸಹಜ ನಿರೀಕ್ಷೆ ಇದ್ದಿತ್ತು. ಸ್ವತಃ ಅವರೇ ತಾನು ಸಚಿವ ಸ್ಥಾನದ ಆಕಾಂಕ್ಷಿ ಎಂದು ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದರು. ಆದರೆ ಸಂಪುಟ ಪುನರ್ ರಚನೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮರವಂತೆ: ಹಿಂದಿನ ಪ್ರಮುಖ ಯಕ್ಷಗಾನ ಭಾಗವತರ ಶೈಲಿಯ ಅನುಕರಣೆ ನಡೆಯುತ್ತಲೇ ಇದೆ. ಆದರೆ ಮರವಂತೆ ನರಸಿಂಹ ದಾಸ ಮತ್ತು ಅವರ ಸಹೋದರ ಶ್ರೀನಿವಾಸ ದಾಸರ ಶೈಲಿಗಳನ್ನು ಯಾರೂ ಅನುಕರಣೆ ಮಾಡಿಲ್ಲ. ಇದಕ್ಕೆ ಕಾರಣ ಅವರ ಶೈಲಿಯ ಅನುಕರಣೆ ಅಸಾಧ್ಯವೆನ್ನುವಷ್ಟು ಭಿನ್ನ. ಪರಂಪರೆಯ ಚೌಕಟ್ಟಿನಲ್ಲೇ ಹೊಸ ಹಾದಿ ತುಳಿದು ಕ್ರಾಂತಿ ಮಾಡಿದವರು ಅವರು ಎಂದು ಖ್ಯಾತ ಯಕ್ಷಗಾನ ವಿಮರ್ಶಕ, ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ಎಸ್. ವಿ. ಉದಯಕುಮಾರ ಶೆಟ್ಟಿ ಹೇಳಿದರು. ಮರವಂತೆಯ ದಾಸ ಭಾಗವತ ಟ್ರಸ್ಟ್ ಅಲ್ಲಿನ ಸಾಧನಾ ಸಮುದಾಯ ಭವನದ ವಿ. ಕೆ. ಕಾಮತ್ ಸಭಾಗೃಹದಲ್ಲಿ ಶನಿವಾರ ಆಯೋಜಿಸಿದ್ದ ದಾಸ ಭಾಗವತರ ಸಂಸ್ಮರಣಾ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ, ಸಂಸ್ಮರಣ ಭಾಷಣ ಮಾಡಿದರು. ದಾಸ ಸಹೋದರರು ಭಾಗವತ ಶಿರೋಮಣಿಗಳು. ಧ್ವನಿವರ್ಧಕಗಳಿಲ್ಲದ ಕಾಲದಲ್ಲಿ ಅವರು ಇಡೀ ರಾತ್ರಿ ಹಾಡಬಲ್ಲವರಾಗಿದ್ದರು. ಅವರ ಧ್ವನಿ ಸಾಮರ್ಥ್ಯ ಮತ್ತು ಮಾಧುರ್ಯ ಅದ್ವಿತೀಯವೆನಿಸಿತ್ತು. ನರಸಿಂಹ ದಾಸರು ತೆಂಕು ಮತ್ತು ಬಡಗು ತಿಟ್ಟುಗಳೆರಡರಲ್ಲೂ ಮಿಂಚಿದ್ದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ : ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆ ಹಾಗೂ ಕುಂದಾಪುರ ಘಟಕದ ವತಿಯಿಂದ ಸಂಘಟನೆಯ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಕುಂದಾಪುರದ ಕೋಯಾಕುಟ್ಟಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ಮೊಗವೀರ ಯುವ ಸಂಘಟನೆಯ ಅಧ್ಯಕ್ಷ ಗಣೇಶ್ ಕಾಂಚನ್ ಸಂಘಟನೆಯ ಗೀತಾನಂದ ಫೌಂಡೇಶನ್ ಕೋಟ ಇದರ ವತಿಯಿಂದ ಕೊಡಮಾಡಿದ ವಿವಿಧ ಸಸಿಗಳ ವಿತರಿಸಿ ನಂತರ ಮಾತನಾಡಿ, ಪ್ರತೀ ವರ್ಷವೂ ಮೊಗವೀರ ಯುವ ಸಂಘಟನೆಯನ್ನು ಬಲಗೊಳಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಸದಸ್ಯತ್ವ ನೋಂದಣಿ ಪ್ರಕ್ರಿಯೆ ಪ್ರಮುಖವಾಗಿದೆ. ಈ ಬಾರಿಯ ಸದಸ್ಯತ್ವ ನೋಂದಣಿಯನ್ನು ಜಿಲ್ಲೆಯಲ್ಲಿ ಮೊದಲ ಬಾರಿಗೆ ಕುಂದಾಪುರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು. ಅಲ್ಲದೇ ಡಾ. ಜಿ.ಶಂಕರ್ ಮಾರ್ಗದರ್ಶನದಲ್ಲಿ ಮೊಗವೀರ ಯುವ ಸಂಘಟನೆಯು ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಹಮ್ಮಿಕೊಂಡಿದ್ದು, ಸಮುದಾಯದ ಬಹಳಷ್ಟು ಗಣ್ಯ ವ್ಯಕ್ತಿಗಳು ಸಂಘಟೆನೆಗೆ ಬೆಂಬಲ ನೀಡುತ್ತಿರುವುದರಿಂದ ಸಂಘಟನೆ ದೀರ್ಘ ಕಾಲದವರೆಗೆ ತನ್ನ ಕಾರ್ಯಕ್ಷೇತ್ರವನ್ನು ಉಳಿಸಿ ಬೆಳೆಸೆಕೊಳ್ಳುವ ಸಾಮರ್ಥ್ಯ ಹೊಂದಿದೆ ಎಂದರು. ಸಭೆಯ ಅಧ್ಯಕ್ಷತೆಯನ್ನು ಕುಂದಾಪುರ ತಾಲೂಕು ಸಂಘಟನೆಯ ಅಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಯುವ ಜಾಗೃತಿ ವೇದಿಕೆ ಮತ್ತು ರಕ್ಷಾ ರೂರಲ್ ಡೆವೆಲಪ್ಮೆಂಟ್ ಟ್ರೈನಿಂಗ್ ಸೊಸೈಟಿ ಕುಂದಾಪುರದ ವತಿಯಿಂದ ಉಡುಪಿ ಕಾಲೇಜೊಂದರಲ್ಲಿ ಪ್ರಥಮ ಬಿಕಾಂ ಓದುತ್ತಿರುವ ಬೈಂದೂರಿನ ಶ್ಯಾಮಿನಕೊಡ್ಲುವಿನ ವಿದ್ಯಾರ್ಥಿನಿ ಜ್ಯೋತಿ ದೇವಾಡಿಗ ಅವರ ಕಾಲೇಜು ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು ನೀಡಲಾಯಿತು. ಬಡ ಕುಟುಂಬದ ಪ್ರತಿಭಾವಂತ ವಿದ್ಯಾರ್ಥಿನಿಯ ವಸತಿ ನಿಲಯದ ವೆಚ್ಚವನ್ನು ಭರಿಸಲು ನಿರ್ಧರಿಸಿ, ಒಂದು ವರ್ಷಕ್ಕೆ ತಗಲುವ ವೆಚ್ಚವನ್ನು ಅಂದಾಜಿಸಿ ಚೆಕ್ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಯುವ ಜಾಗೃತಿ ವೇದಿಕೆ ಕುಂದಾಪುರ ಅಧ್ಯಕ್ಷ ರಮೇಶ್, ಉದ್ಯಮಿ ಕೆ ಆರ್ ನಾಯಕ್, ಬೈಂದೂರು ದೇವಾಡಿಗರ ಒಕ್ಕೂಟದ ಸಲಹಾ ಸಮಿತಿಯ ಸದಸ್ಯ ಎಸ್.ಡಿ ಹೇನಬೇರು, ಜೊತೆ ಕಾರ್ಯದರ್ಶಿ ಚಂದ್ರ ದೇವಾಡಿಗ, ಸಂಘಟನಾ ಕಾರ್ಯದರ್ಶಿ ರಘುರಾಮ್ ಬೈಂದೂರು ಹಾಗೂ ಮಹಾಲಿಂಗ ದೇವಾಡಿಗ ಉಪಸ್ಥಿತರಿದ್ದರು. /ಕುಂದಾಪ್ರ ಡಾಟ್ ಕಾಂ ಸುದ್ದಿ/
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜೇಸಿಐ ಕಾಪು ಸಾರಥ್ಯದಲ್ಲಿ ನಡೆದ ಜೇಸೀ ವಲಯ 15ರ ಮಧ್ಯಂತರ ಸಮ್ಮೇಳನ ರಜತ ದೀವಿಗೆ-2016ರಲ್ಲಿ ಕುಂದಾಪುರ ಸಿಟಿ ಜೆಸಿಐ ಅತ್ಯುತ್ತಮ ಘಟಕ ಅಧ್ಯಕ್ಷ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ, ಗೌರವಗಳನ್ನು ಮುಡಿಗೇರಿಸಿಕೊಂಡಿದೆ. ಕಾಪು ಕಳತ್ತೂರಿನ ಕುಶಲ ಶೇಖರ ಶೆಟ್ಟಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ, ಅತ್ಯುತ್ತಮ ವಿಶೇಷ ಕಾರ್ಯಕ್ರಮ ಸಂಯೋಜನೆ ಪ್ರಶಸ್ತಿ ಮತ್ತು ವಿವಿಧ ವಿಭಾಗಗಳ ಹಲವು ಗೌರವಗಳಿಗೆ ಪಾತ್ರವಾಗಿದೆ. ಜೆಸಿಐ ವಲಯಾಧ್ಯಕ್ಷ ಸಂದೀಪ್ ಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು. ವಲಯ ಉಪಾಧ್ಯಕ್ಷ ನಿತೀನ್ ಅವಭೃತ್, ಮಾಜಿ ವಲಯಾಧ್ಯಕ್ಷ ಕೃಷ್ಣ ಮೋಹನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ ಸಿಟಿ ಜೆಸಿಐ ಸ್ಥಾಪಕಾಧ್ಯಕ್ಷ ಹುಸೇನ್ ಹೈಕಾಡಿ ಹಾಗೂ ರಾಘು ಕೆ.ಸಿ., ಹರ್ಷ ಶೇಟ್, ಅನಂತ ನಾವಡ, ಕಾರ್ತಿಕ್, ಅನುಷಾ ಗಂಗೊಳ್ಳಿ, ಮೊದಲಾದವರು ಕುಂದಾಪುರ ಸಿಟಿ ಜೆಸಿಐ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು /ಕುಂದಾಪ್ರ ಡಾಟ್ ಕಾಂ ಸುದ್ದಿ/
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಗೋಳಿಹೊಳೆ ಗ್ರಾಪಂ ವ್ಯಾಪ್ತಿಯ ಚಾರ್ಸಾಲಿನಿಂದ ಕೋಣವೊಂದರ ಕಾಲು ಕಟ್ಟಿ ಅಮಾನುಷವಾಗಿ ಇಕೊ ಕಾರಿನಲ್ಲಿ ಕಸಾಯಿಖಾನೆಗೆ ಸಾಗಿಸುತ್ತಿರುವ ಸ್ಥಳೀಯರಿಗೆ ಸಿಕ್ಕಿಬಿದ್ದಿದ್ದಾರೆ. ಸ್ಥಳೀಯರು ಪೋಲಿಸರಿಗೆ ಮಾಹಿತಿ ನೀಡಿದ ಪರಿಣಾಮ ಬೈಂದೂರು ಪೋಲಿಸರು ಕೋಣ ಸಹಿತ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ವಾಹನದಲ್ಲಿದ್ದ ಶೋಯಬ್ ಹಾಗೂ ಫರಾನ್ ಎಂಬಿರನ್ನು ವಶಕ್ಕೆ ಪಡೆದ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಕೋಟ: ಕೋಟದ ಮುಖ್ಯ ಪೇಟೆಯೊಂದರ ಜ್ಯುವೆಲರ್ಗೆ ನುಗ್ಗಿ ಮಾಲೀಕನಿಗೆ ಮಾರಣಾಂತಿಕ ಹಲ್ಲೆ ನಡೆಸಿ ಚಿನ್ನಾಭರಣಗಳನ್ನು ದರೋಡೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಬುಧವಾರ ಕೋಟ ಪೊಲೀಸರು ಗೋವಾದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಕರೆತಂದಿದ್ದಾರೆ. ಗೋವಾ ಮೂಲದ ಚಂದ್ರಕಾಂತ ಬಂಧಿತ ಆರೋಪಿ. ಪ್ರಕರಣದಲ್ಲಿ ಮೂರು ಮಂದಿ ಭಾಗಿಯಾಗಿದ್ದು ಇನ್ನೋರ್ವ ಆರೋಪಿ ಪ್ರಥಮೇಶ್ ಕುರಿತು ಮಾಹಿತಿ ದೊರೆತಿದೆ ಎನ್ನಲಾಗಿದೆ ಹಾಗೂ ಮತ್ತೋರ್ವ ತಲೆ ಮರೆಸಿಕೊಂಡಿದ್ದಾನೆ. ಪ್ರಕರಣದ ವಿವರ: ಕೋಟದ ದುರ್ಗಾ ಜ್ಯುವೆಲರ್ಗೆ ಮೇ21ರಂದು ಗ್ರಾಹಕರ ಸೋಗಿನಲ್ಲಿ ಬಂದ ಮೂರು ಮಂದಿ ಯುವಕರು ಅಂಗಡಿಯ ಬಾಗಿಲನ್ನು ಮುಚ್ಚಿ ಮಾಲೀಕ ರವಿಯವರಿಗೆ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಚಿನ್ನಾಭರಣಗಳನ್ನು ದೋಚಲಾಗಿತ್ತು. ಹಲ್ಲೆ ನಡೆಯುತ್ತಿದ್ದಾಗ ರವಿಯವರು ಸಹಾಯಕ್ಕಾಗಿ ಕೂಗಿಕೊಂಡಿದ್ದು ಪಕ್ಕದ ಅಂಗಡಿಯವರು ಬಾಗಿಲು ತೆರದು ರಕ್ಷಣೆಗೆ ಮುಂದಾಗಿದ್ದರು. ಈ ಸಂದರ್ಭ ಇಬ್ಬರು ಆರೋಪಿಗಳು ಬೈಕ್ನಲ್ಲಿ ಪರಾರಿಯಾಗಿದ್ದು, ಮತ್ತೋರ್ವ ಬೈಕ್ ಬಿಟ್ಟು ಪಕ್ಕದ ಬೀದಿಯಲ್ಲಿ ಓಡಿ ಹೋಗಿದ್ದ. ಅನಂತರ ಗಂಭೀರವಾಗಿ ಗಾಯಗೊಂಡ ಜ್ಯುವೆಲರ್ನ ಮಾಲೀಕನನ್ನು…
