ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೆಂಗಳೂರಿನಲ್ಲಿ ನಡೆದ ಬೈಕ್-ಕಾರು ಅಪಘಾತವೊಂದರಲ್ಲಿ ಕುಂದಾಪುರ ಮೂಲದ ಯುವತಿ ಸೇರಿದಂತೆ ಬೈಕ್ ಚಲಾಯಿಸುತ್ತಿದ್ದ ಯುವಕ ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ತಾಲೂಕಿನ ಮೊಳಹಳ್ಳಿಯ ಸುರೇಶ್ ಕುಲಾಲ್ ಎಂಬುವವರ ಪುತ್ರಿ ರಶ್ಮಿತಾ ಕುಲಾಲ್ (19) ಹಾಗೂ ಆಕೆಯ ಸಂಬಂಧಿ ಹೆಬ್ರಿ ಮೂಲದ ಯುವಕ ಮೃತ ದುರ್ದೈವಿಗಳು. ದ್ವಿತೀಯ ಪಿಯುಸಿ ಮುಗಿಸಿದ್ದ ರಶ್ಮಿತಾ ಬೆಂಗಳೂರಿನ ಸಂಬಂಧಿ ಮನೆಗೆ ತೆರಳಿದ್ದಳು. ಕೆಲಸ ನಿಮಿತ್ತ ಬೈಕ್ನಲ್ಲಿ ಸಂಬಂಧಿಯೊಂದಿಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ರಶ್ಮಿತಾ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರೇ, ಯವಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆನ್ನಲಾಗಿದೆ. ಬೆಂಗಳೂರು ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಭಾರತೀಯ ಸಂಸ್ಕೃತಿಯಲ್ಲಿ ದೇವಾಲಯಗಳಿಗೆ ಅರ್ಥಪೂರ್ಣ ಸ್ಥಾನವಿದೆ. ದೇವರು ವಾಸಿಸುವ, ದೇವರು ಅಸ್ತಿತ್ವದಲ್ಲಿರುವ ದೇವಾಲಯವು ದೇವರು ಹಾಗೂ ಮನುಷ್ಯರ ನಡುವೆ ನಿಕಟ ಸಂಪರ್ಕ ಕಲ್ಪಿಸುವ ಪವಿತ್ರವಾದ ತಾಣವಾಗಿದೆ. ದೇವರು ನಮ್ಮ ಮಧ್ಯ ಸದಾ ನೆಲೆ ನಿಲ್ಲುತ್ತಾನೆ, ಜನರ ಮಧ್ಯೆ ಸದಾ ವಾಸಿಸುತ್ತಾನೆ. ಕ್ರೈಸ್ತ ಸಮುದಾಯದವರಿಗೆ ದೇವಾಲಯ ಸ್ವರ್ಗದ ದಾರಿ. ಪವಿತ್ರ ಪ್ರೀತಿಯ ತಾಣವಾಗಿರುವ ದೇವಾಲಯಕ್ಕೆ ಬಂದು ದೇವರ ಆಶೀರ್ವಾದ, ಕೃಪಾವರ ಬೇಡಿದರೆ ದೇವರು ಯಾರನ್ನೂ ಬರಿಗೈಯಲ್ಲಿ ಕಳುಹಿಸದೆ ನಮ್ಮ ಬೇಡಿಕೆಗಳನ್ನು ಈಡೇರಿಸುತ್ತಾನೆ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ರೆ.ಫಾ. ಡಾ.ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು. ನವೀಕೃತ ಗಂಗೊಳ್ಳಿ ಕೊಸೆಸಾಂವ್ ಅಮ್ಮನವರ ದೇವಾಲಯವನ್ನು ಲೋಕಾರ್ಪಣೆಗೊಳಿಸಿ ಬಳಿಕ ನಡೆದ ಆಶೀರ್ವಚನ ಹಾಗೂ ಉದ್ಘಾಟನಾ ಕಾರ್ಯಕ್ರಮದ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. 400 ವರ್ಷಗಳ ಅಧ್ಭುತ ಇತಿಹಾಸವಿರುವ ಗಂಗೊಳ್ಳಿಯ ಕೊಸೆಸಾಂವ್ ಅಮ್ಮನವರ ದೇವಾಲಯ ಯಾವುದೇ ಜಾತಿ ಮತಕ್ಕೆ ಸೀಮಿತವಾಗಿಲ್ಲ. ಎಲ್ಲಾ ಸಮಾಜದ ಜನರು ಯಾವುದೇ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಗರದ ನ್ಯೂ ಉಷಾ ಹೋಟೆಲ್ ಮೊದಲನೇ ಮಹಡಿಯಲ್ಲಿ ನಿಯೋ ಬ್ರಾಂಡ್ ಫ್ಯಾಕ್ಟರಿ ಶೂಸ್ & ಫ್ಯಾನ್ಸಿ ಲೋಕಾರ್ಪಣೆಗೊಂಡಿತು. ಕುಂದಾಪುರ ಎಜುಕೇಶನ್ ಸೊಸೈಟಿ ಅಧ್ಯಕ್ಷ ಬಿ.ಎಂ ಸುಕುಮಾರ ಶೆಟ್ಟಿ ಮಳಿಗೆಯನ್ನು ಲೋಕಾರ್ಪಣೆಗೊಳಿಸಿದರು. ಕುಂದಾಪುರ ನ್ಯೂ ಮೆಡಿಕಲ್ ಸೆಂಟರ್ ನಿರ್ದೇಶಕ ಡಾ. ರಂಜನ್ ಶೆಟ್ಟಿ ಫ್ಯಾನ್ಸಿ ವಿಭಾಗವನ್ನು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ನಿಯೋ ಬ್ರಾಂಡ್ ಫ್ಯಾಕ್ಟರಿ ಶೂಸ್ & ಫ್ಯಾನ್ಸಿ ಪಾಲುದಾರರದ ಅವಿನಾಶ್ ರೈ, ಸುಹಾಸ್ ಶೆಟ್ಟಿ, ಉದ್ಯಮಿಗಳಾದ ಶರತ್ಕುಮಾರ್ ಶೆಟ್ಟಿ ಉಪ್ಪುಂದ, ದಿವ್ಯಾಧರ ಶೆಟ್ಟಿ ಕೆರಾಡಿ, ರಾಘವೇಂದ್ರ ನೆಂಪು, ಪ್ರದೀಪ್ ಶೆಟ್ಟಿ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಾವುಂದದ ಶ್ರೀ ರಾಮ ಭಜನಾ ಮಂದಿರದಲ್ಲಿ ಬಿಲ್ಲವ ಸಮಾಜ ಸೇವಾ ಸಂಘ ನಾವುಂದ, ಶುಭದಾ ಎಜ್ಯುಕೇಶನ್ ಟ್ರಸ್ಟ್ (ರಿ) ನಾವುಂದ, ಶ್ರೀ ಬ್ರಹ್ಮ ಬೈದರ್ಕಳ ಗರಡಿ ನಾವುಂದ, ಶ್ರೀ ಗುರು ನಿತ್ಯಾನಂದ ಸೌಹಾರ್ದ ಸಹಕಾರಿ ನಾವುಂದ ಆಶ್ರಯದಲ್ಲಿ ನಾವುಂದ ಗ್ರಾಮದ ಬಿಲ್ಲವ ಸಮಾಜದ ಶಾಲಾ ಮಕ್ಕಳಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಬಿಲ್ಲವ ಸಮಾಜ ಸೇವಾ ಸಂಘ ನಾವುಂದ ಇದರ ಅಧ್ಯಕ್ಷರಾದ ಬಾಬು ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಶುಭದಾ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ಎನ್.ಕೆ.ಬಿಲ್ಲವ ಉಪಾಧ್ಯಕ್ಷರಾದ ಶುಭದಾ ಎನ್. ಬಿಲ್ಲವ, ಶ್ರೀ ಬ್ರಹ್ಮ ಬೈದರ್ಕಳ ಗರಡಿ ನಾವುಂದ ಇದರ ಅಧ್ಯಕ್ಷರಾದ ಮುತ್ತ ಬಿಲ್ಲವ, ಗರಡಿ ಆಡಳಿತ ಮೊಕ್ತೇಶ್ವರ ಶೇಖರ ಪೂಜಾರಿ, ತಾಲೂಕು ಪಂಚಾಯತ್ ಸದಸ್ಯರಾದ ಜಗದೀಶ ಪೂಜಾರಿ ಹಾಗೂ ಮಹೇಂದ್ರ ಪೂಜಾರಿ, ಬಿಲ್ಲವ ಸಮಾಜ ಸೇವಾ ಸಂಘ ಇದರ ಮಹಿಳಾ ಮಂಡಳಿಯ ಅಧ್ಯಕ್ಷೆಯಾದ ಸಿಂಗಾರಿ ಪೂಜಾರಿ ಉಪಸ್ಥಿತರಿದ್ದರು. ಶಂಕರ ಎಸ್. ಪೂಜಾರಿ ಸ್ವಾಗತಿಸಿ…
ಸ್ಪಷ್ಟ ಗುರಿಯಿದ್ದರೆ ಯಶಸ್ವು ಸಾಧ್ಯ: ಎನ್. ಕೆ ಬಿಲ್ಲವ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಿದ್ಯಾರ್ಥಿಗಳು ಉನ್ನತ ಗುರಿಯಿಟ್ಟುಕೊಂಡು ಅಭ್ಯಾಸ ಮಾಡಿದಾಗ ಯಶಸ್ಸು ಸಾಧ್ಯವಿದೆ. ಬಡತನದಲ್ಲಿ ಹುಟ್ಟುವುದು ಸಹಜ ಆದರೆ ಬಡತನದಲ್ಲಿ ಬದುಕು ಅಂತ್ಯವಾಗಬಾರದು. ಪ್ರತಿಭೆಗೆ ಯಾವುದೇ ಬಡತನವಿಲ್ಲ. ಅದನ್ನು ಸದುಪಯೋಗಪಡಿಸಿಕೊಳ್ಳುವ ಚಾಕಚಕ್ಯತೆಯನ್ನು ಕರಗತಗೊಳಿಸಿಕೊಳ್ಳಬೇಕು ಎಂದು ಶಾಲಾ ಕಿರಿಮಂಜೇಶ್ವರ ಶುಭದಾ ಆಂಗ್ಲ ಮಾಧ್ಯಮ ಸಂಸ್ಥಾಪಕ ಎನ್.ಕೆ. ಬಿಲ್ಲವ ಹೇಳಿದರು. ಅವರು ಕಿರಿಮಂಜೇಶ್ವರ ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ೬೧೬ ಅಂಕ ಪಡೆದ ವಿದ್ಯಾರ್ಥಿನಿ ಶ್ವೇತಾ ನಾಗಪ್ಪ ಹೆಬ್ಬಾರ್ ಅವರಿಗೆ ದ್ವಿಚಕ್ರ ವಾಹನವನ್ನು ಕೊಡುಗೆಯಾಗಿ ನೀಡಲಾಯಿತು. ಶಾಲಾ ಸಮಯದಲ್ಲಿ ಆಯಾ ದಿನದ ಪಠ್ಯ ಕ್ರಮವನ್ನು ಅದೇ ದಿನವೇ ಅಭ್ಯಾಸ ನಡೆಸುವುದರಿಂದ ಪರೀಕ್ಷೆಯನ್ನು ಎದುರಿಸಲು ಸುಲಭವಾಗುತ್ತದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಇಂದಿನ ಪೈಪೋಟಿಯುತ ಶೈಕ್ಷಣಿಕ ವ್ಯವಸ್ಥೆಯಲ್ಲಿ ಅತ್ಯವಶ್ಯವಾಗಿದೆ. ನಮ್ಮ ಸಂಸ್ಥೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಇನ್ನಷ್ಟು ಪ್ರೋತ್ಸಾಹಗಳನ್ನು ಮಾಡುವ ವಿನೂತನ ಯೋಜನೆಗಳನ್ನು ರೂಪಿಸಿದೆ ಎಂದರು. ಕಾರ್ಯಕ್ರಮದಲ್ಲಿ ಶುಭದಾ ಸಂಸ್ಥೆಯ ಶುಭದಾ ಎನ್.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತೋಟಗಾರಿಕೆ ಮತ್ತು ಕೈತೋಟ ನಿರ್ವಹಣೆ ಜೀವಿಗಳ ಎಲ್ಲಾ ಅವಶ್ಯಕತೆಗಳನ್ನು ಪೂರೈಸಬಲ್ಲುದು. ಮಣ್ಣು ಗುಣವಿಶೇಷತೆ ಮತ್ತು ಹವಮಾನಕ್ಕನುಸಾರವಾಗಿ ಪ್ರೀತಿಯಿಂದ ಕೃಷಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದರಿಂದ ನಾವು ಜೀವನವನ್ನು ನೋಡುವ ದೃಷ್ಠಿಕೋನವೇ ಬದಲಾಗಬಲ್ಲುದು. ಕ್ರೀಯಾಶೀಲ ಬದುಕಿಗೆ ಕೈತೋಟ ನಿರ್ವಹಣೆ ಉತ್ತಮ ಉಪಾಯ ಎಂದು ನಿವೃತ್ತ ಕೃಷಿ ಅಧಿಕಾರಿ ವಿ. ಹೆಚ್ ನಾಯಕ್ ಹೇಳಿದರು. ಅವರು ಉಪ್ಪುಂದ ಶಂಕರ ಕಲಾ ಮಂದಿರದ ಸಮೃದ್ಧ್ ಸಭಾ ಭವನದಲ್ಲಿ ನಡೆದ ತೋಟಗಾರಿಕೆ ಮತ್ತು ಕೈತೋಟ ನಿರ್ವಹಣೆ ಕುರಿತು ವಿಚಾರಗೋಷ್ಠಿಯಲ್ಲಿ ಉಪನ್ಯಾಸ ನೀಡಿದರು. ಭಾಗವಹಿಸಿದ ಆಸಕ್ತರ ವಿವಿಧ ಪ್ರಶ್ನೆಗಳಿಗೆ ಉತ್ತರಿಸುತ್ತ, ಸಂದೇಹ ನಿವಾರಿಸಿ ಉಪಯುಕ್ತ ಮಾಹಿತಿ ಮತ್ತು ತರಕಾರಿ ಬೀಜಗಳ ಸ್ಯಾಂಪಲ್ ನೀಡಿದರು. ಕಾರ್ಯಕ್ರಮದ ಮುಖ್ಯ ಅತಿಥಿ ಸುದ್ಧಿಮನೆ ವಾರ ಪತ್ರಿಕೆಯ ಸಂಪಾದಕ ಸಂತೋಷ್ ಕೋಣಿ ಮಾತನಾಡಿ ಜೀವನ ಶುದ್ಧಿಯಾಗಬೇಕಾದರೆ ಮನುಷ್ಯನ ಮನಸ್ಸು ಮತ್ತು ವಾತಾವರಣ ಶುದ್ಧಿಯಾಗಬೇಕು. ವನಸ್ಪತಿಗಳು ಕಲುಷಿತ ಗಾಳಿಯನ್ನು ಉಪಯುಕ್ತ ಆಕ್ಸಿಜನ್ ಆಗಿ ಪರಿವರ್ತಿಸುವಲ್ಲಿ ವಹಿಸಿ ಗೋವುಗಳ ಪಾತ್ರ ಮಹತ್ತರವಾದದ್ದು ಎಂದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪ್ರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಕಟ್ಟಡ ಗೊಂಬೆಮನೆಯಲ್ಲಿ ಮೇ ತಿಂಗಳ ಕಾರ್ಯಕ್ರಮ ಇತ್ತೀಚೆಗೆ ಜರುಗಿತು. ಗೊಂಬೆಯಾಟ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ರು ನಾದೋಪಾಸಕ ವಿದ್ವಾನ್ ವಾಗೀಶ್ ಭಟ್ ಹಾಗೂ ಖ್ಯಾತ ತಬಲಾ ವಾದಕರಾದ ರಮೇಶ್ ಶ್ಯಾನುಭಾಗ್ ಅವರನ್ನು ಸನ್ಮಾನಿಸಿದರು. ಸಭೆಯಲ್ಲಿ ಅತಿಥಿಗಳಾಗಿ ಪಿ. ಜಯವಂತ ಪೈ, ಪದ್ಮನಾಭ ಪ್ರಭು ಇವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಅಂತರಾಷ್ಟ್ರೀಯ ಖ್ಯಾತ ಸಂಗೀತ ಕಲಾವಿದೆ ಶ್ರೀಮತಿ ಆಶಾ ಪಿ. ನಾಯಕ್ ರವರನ್ನು ಗೌರವಿಸಲಾಯಿತು. ವಿದ್ವಾನ್ ವಾಗೀಶ್ ಭಟ್ ರವರಿಂದ ಭಜನೆ ಹಾಗೂ ಭಕ್ತಿ ಸಂಗೀತ ಕಾರ್ಯಕ್ರಮ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿತು. ನಾಗೇಶ್ ಶ್ಯಾನುಭಾಗ್ ಕಾರ್ಯಕ್ರಮ ನಿರೂಪಿಸಿದ್ದರು. ಉದಯ ಭಂಡಾರ್ಕಾರ್ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ವಂಡ್ಸೆ ಇಲ್ಲಿನ ಪ್ರೌಢಶಾಲೆಯ ವಿದ್ಯಾರ್ಥಿನಿ ಚಿನ್ಮಯಿ 622 ಅಂಕ ಪಡೆದಿದ್ದಾರೆ. ಕನ್ನಡದಲ್ಲಿ 125, ಇಂಗ್ಲಿಷ್ 100, ಹಿಂದಿ 99, ವಿಜ್ಞಾನ 99, ಸಮಾಜ ವಿಜ್ಞಾನ 99, ಗಣಿತ 100 ಅಂಕ ಪಡೆದಿದ್ದಾರೆ. ಇವರು ಹಟ್ಟಿಯಂಗಡಿ ಅಂಚೆ ಕಛೇರಿಯ ಪೋಸ್ಟ್ ಮಾಸ್ಟರ್ ಗಣೇಶ ಎಸ್. ಮತ್ತು ಶ್ರೀಮತಿ ಜಿ ಹೆಗ್ಡೆ ಇವರ ಪುತ್ರಿ. ಗ್ರಾಮೀಣ ಪ್ರದೇಶದ ವಂಡ್ಸೆ ಸಮೀಪದ ಕಳಿ ನಿವಾಸಿ ಆಗಿರುವ ಚಿನ್ಮಯಿ ಸಾಧನೆ ಶ್ಲಾಘನೆಗೆ ಪಾತ್ರವಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರೀ ಕಾಶೀಮಠ ಸಂಸ್ಥಾನದ ಪ್ರಾಚೀನ ಶಾಖಾ ಮಠದಲ್ಲಿ ಶ್ರೀ ಹರಿಗುರು ಅನುಗ್ರಹದೊಂದಿಗೆ ಗೌಡ ಸಾರಸ್ವತ ಸಮಾಜದ ಹತ್ತು ಮಕ್ಕಳಿಗೆ ಬ್ರಹ್ಮೋಪದೇಶವು ಅವರ ತಂದೆ ತಾಯಿ, ಕುಟುಂಬದ ಬಂಧು ಬಳಗದವರು ಸಂಭ್ರಮ ಉಲ್ಲಾಸದೊಂದಿಗೆ ಬಸ್ರೂರು ಶ್ರೀ ಕಾಶೀಮಠದಲ್ಲಿ ನಡೆಯಿತು. ಚೌಲ, ಉದ್ದಿನ ಮಹೂರ್ತ, ಮಾತೃಭೋಜನ, ವಫನ, ಯಜ್ಞೋಪವೀತಧಾರಣ, ಬ್ರಹ್ಮೋಪದೇಶ, ಶ್ರೀ ವೆಂಕಟರಮಣ ದೇವರಿಗೆ ಹಾಗೂ ಉಭಯ ಬೃಂದಾವನದಲ್ಲಿ ಮಹಾಪೂಜೆ – ಮಹಾಮಂಗಳಾರತಿಯೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು. ಬ್ರಹ್ಮೋಪದೇಶದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಶ್ರೀ ಕಾಶೀಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥರು ಅನುಗ್ರಹರಾಯಸಪತ್ರದಲ್ಲಿ ಈ ಕಾರ್ಯಕ್ರಮದಿಂದ ನೂತನ ಉಪನೀತ ವಟುಗಳು ವಿಧ್ಯಾ ವಿನಯ ಸಂಪನ್ನರಾಗಿ ಬಾಳಲಿ ಎಂದು ಹರಸಿದ್ದರು. ಜ್ಞಾನದ ಹತ್ತಿರ ಕರೆದುಕೊಂಡು ಹೋಗುವ ಈ ಕಾರ್ಯವು ನಮ್ಮ ಸಮಾಜದ ವಟುಗಳಿಗೆ ಅಮೃತತ್ವವನ್ನು, ವಿನಯತೆಯನ್ನು ನೀಡುತ್ತದೆ. ಇದೊಂದು ಸಮಾಜ ಸೇವೆಯ ಸಾರ್ಥಕ ಕಾರ್ಯ ಎಂದು ಸೇವಾದಾರರಾದ ಗೋವಿಂದ್ರಾಯ ಆಚಾರ್ಯ ಉಲ್ಲೇಖಿಸಿದರು. ಶ್ರೀ ದೇವ ಸನ್ನಿಧಿ ಹಾಗೂ ಶ್ರೀ ಕೇಶವೇಂದ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ಗಂಗೊಳ್ಳಿ ಕೊಸೆಸಾಂವ್ ಅಮ್ಮನವರ ಇಗರ್ಜಿಯ ನವೀಕೃತ ಕಟ್ಟಡದ ಆಶೀರ್ವಚನ ಮತ್ತು ಉದ್ಘಾಟನೆಯ ಪೂರ್ವಭಾವಿಯಾಗಿ ಭ್ರಾತೃತ್ವದ ಭಾನುವಾರದ ಆಚರಣೆಯು ಜರುಗಿತು. ಭ್ರಾತೃತ್ವದ ಭಾನುವಾರದ ಪ್ರಯುಕ್ತ ಕನ್ನಡಕುದ್ರು ಸಂತ ಜೊಸೇಫ್ ವಾಜ್ ಪುಣ್ಯಕ್ಷೇತ್ರದಿಂದ ಗಂಗೊಳ್ಳಿ ಚರ್ಚಿಗೆ ವಾಹನಗಳ ಮೂಲಕ ಕೊಸೆಸಾಂವ್ ಅಮ್ಮನವರ ಪ್ರತಿಮೆಯ ಅದ್ದೂರಿ ಮೆರವಣಿಗೆ ನಡೆಯಿತು. ಮೆರವಣಿಗೆಗೆ ಮುನ್ನ ಕನ್ನಡಕುದ್ರು ಸಂತ ಜೊಸೇಫ್ ವಾಜ್ ಪುಣ್ಯಕ್ಷೇತ್ರದಲ್ಲಿ ಕುಂದಾಪುರ ವಲಯ ಪ್ರಧಾನ ಧರ್ಮಗುರು ವಂ|ಅನಿಲ್ ಡಿಸೋಜಾ ಅವರು ಕೊಸೆಸಾಂವ್ ಅಮ್ಮನವರ ಪ್ರತಿಮೆಗೆ ಮಾಲಾರ್ಪಣೆ ಮಾಡುವುದರ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಬಳಿಕ ಸುಮಾರು 50 ಕ್ಕೂ ಅಧಿಕ ವಿವಿಧ ವಾಹನಗಳ ಮೂಲಕ ಮೆರವಣಿಗೆಯ ಕನ್ನಡಕುದ್ರು ಪುಣ್ಯಕ್ಷೇತ್ರದಿಂದ ಹೊರಟು, ಮುವತ್ತಮುಡಿ ಕ್ರಾಸ್ ಮೂಲಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಿ, ಹೆಮ್ಮಾಡಿ, ಮುಳ್ಳಿಕಟ್ಟೆ, ತ್ರಾಸಿಯಿಂದ ಗಂಗೊಳ್ಳಿ ಚರ್ಚಿಗೆ ಸಾಗಿ ಬಂತು. ಸತತ ಒಂದು ವರ್ಷ ಕೊಸೆಸಾಂವ್ ಅಮ್ಮನವರ ಪ್ರತಿಮೆಯು ಚರ್ಚಿನ ಎಲ್ಲಾ ಕುಟುಂಬಗಳಿಗೆ ಸಾಗಿ ಪ್ರಾರ್ಥನೆ ನಡೆಸಿದ ಪುನಃ ಭಾನುವಾರ ಚರ್ಚಿಗೆ…
